Tag: Chikballapur

  • ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಿಡಿಲಿನ ಮಳೆಗೆ ಎರಡು ಬಲಿ: ಹೊತ್ತಿ ಉರಿಯಿತು ತೆಂಗಿನ ಮರ

    ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಿಡಿಲಿನ ಮಳೆಗೆ ಎರಡು ಬಲಿ: ಹೊತ್ತಿ ಉರಿಯಿತು ತೆಂಗಿನ ಮರ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಅಕಾಲಿಕ ಮಳೆಗೆ ರೈತರ ತೋಟಗಾರಿಕೆ ಬೆಳೆ ಹನಿಯಾಗಿದೆ.

    ಗುಡಿಬಂಡೆ ತಾಲೂಕಿನ ಕಂಬಾಲಹಳ್ಳಿ ಗ್ರಾಮದಲ್ಲಿ 15 ವರ್ಷದ ಬಾಲಕ ನಾಗರಾಜು ಮತ್ತು ಗೌರಿಬಿದನೂರು ತಾಲೂಕಿನ ಭಾದಮಳ್ಳೂರು ಗ್ರಾಮದಲ್ಲಿ ಕುರಿಗಾಹಿ ಭೀಮಪ್ಪ (55) ಎಂಬವರು ಸಿಡಿಲ ಬಡಿತಕ್ಕೆ ಸಾವನ್ನಪ್ಪಿದ್ದಾರೆ.

    ನಾಗರಾಜು ತೋಟದಿಂದ ಮನೆಗೆ ಬರುವ ವೇಳೆ ರಸ್ತೆಯಲ್ಲಿ ಸಿಡಿಲು ಬಡಿತಕ್ಕೆ ತಗುಲಿ ಸಾವನ್ನಪ್ಪಿದ್ದಾನೆ. ನಿನ್ನೆ ಕುರಿ ಕಾಯಲು ಹೋಗಿದ್ದ ಭೀಮಪ್ಪ ಅವರು ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇಂದು ಬೆಳಗ್ಗೆ ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಜಾಲಮರದ ಕೆಳಗೆ ಭೀಮಪ್ಪರ ಮೃತ ದೇಹ ಪತ್ತೆಯಾಗಿದೆ.

    ಅಕಾಲಿಕ ಮಳೆಯಿಂದಾಗಿ ಗೌರಿಬಿದನೂರು ತಾಲೂಕಿನ ವಿಳಪಿ ಗ್ರಾಮದ ನಾಗರಾಜು ಎಂಬುವವರ ಬಾಳೆತೋಟ ಸಂಪೂರ್ಣ ನೆಲಕಚ್ಚಿದೆ. ಹಲವೆಡೆ ತೋಟಗಾರಿಕಾ ಬೆಳೆಗಳಾದ ಮಾವು, ದ್ರಾಕ್ಷಿ ಬೆಳೆಗಳು ಸಹ ಹಾನಿಯಾಗಿ ಒಳಪಟ್ಟಿವೆ. ಇನ್ನು ಶಿಡ್ಲಘಟ್ಟ ತಾಲೂಕಿನ ಅಂಗತಟ್ಟಿ ಗ್ರಾಮದ ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದ್ದು ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಜಿಲ್ಲೆಯ ಜನತೆಗೆ ಮಳೆರಾಯ ತಂಪು ಎರೆದಿದ್ದು, ಕೆಲವು ಕಡೆ ಬೆಳೆ ಹಾನಿ ಕೂಡ ಸಂಭವಿಸಿದೆ.

    .

     

    https://youtu.be/Edfpkczu9zs

  • ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣಾ ಪ್ರಚಾರಕ್ಕಾಗಿ ದೂರದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಾರ್ಯಕರ್ತರು

    ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣಾ ಪ್ರಚಾರಕ್ಕಾಗಿ ದೂರದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಾರ್ಯಕರ್ತರು

    ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆ ಪ್ರಚಾರಕ್ಕಾಗಿ ಕರೆಸುತ್ತಿದ್ದಾರೆ.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ 500 ಕ್ಕೂ ಹೆಚ್ಚು ಕಾರ್ಯಕರ್ತರು ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯ ಪ್ರಚಾರಕ್ಕೆ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಕ್ಷೇತ್ರದ ಶಾಸಕ ಡಾ ಕೆ.ಸುಧಾಕರ್ ಕಾಂಗ್ರೆಸ್ ಕಾರ್ಯಕರ್ತರಿಗೆ 10 ವೋಲ್ವೋ ಬಸ್ ವ್ಯವಸ್ಥೆ ಮಾಡಿದ್ದಾರೆ. ಶಾಸಕರ ತಂದೆ ಹಾಗು ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೇಶವರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.

    ಕಾಂಗ್ರೆಸ್ ಪಕ್ಷ ಬೆಂಬಲಿತ ನಗರಸಭಾ ಸದಸ್ಯರು, ತಾ.ಪಂ.ಸದಸ್ಯರು, ಜಿ.ಪಂ.ಸದಸ್ಯರು ಚುನವಣಾ ಪ್ರಚಾರಕ್ಕೆ ತೆರಳಿದ್ದಾರೆ. ಬರದ ನಡುವೆ ಜಿಲ್ಲೆಯ ಜನಪ್ರತಿನಿಧಿಗಳೆಲ್ಲರೂ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

     

  • ಚಿಕ್ಕಬಳ್ಳಾಪುರದ ಈ ಗ್ರಾಮದ ದಲಿತರಿಗಿಲ್ಲ ಕ್ಷೌರ ಭಾಗ್ಯ

    ಚಿಕ್ಕಬಳ್ಳಾಪುರದ ಈ ಗ್ರಾಮದ ದಲಿತರಿಗಿಲ್ಲ ಕ್ಷೌರ ಭಾಗ್ಯ

    ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ಮಂಚನಬೆಲೆ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ. ಈ ಗ್ರಾಮದ ದಲಿತರಿಗೆ ಕ್ಷೌರ ಮಾಡುವುದಿಲ್ಲ ಹಾಗೂ ಇವರಿಗೆ ದೇವಸ್ಥಾನದ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ.

    ಒಂದು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಗ್ರಾಮಸ್ಥರ ಜೊತೆ ಶಾಂತಿ ಸಭೆ ನಡೆಸಿ, ದಲಿತರನ್ನ ದೇವಾಲಯಕ್ಕೆ ಪ್ರವೇಶ ಮಾಡಿಸುವುದರ ಮೂಲಕ ಅಸ್ಪೃಶ್ಯತೆಗೆ ಬ್ರೇಕ್ ಹಾಕಿಸುವ ಕೆಲಸ ಮಾಡಿಸಿದ್ದರು. ಆದ್ರೆ ಇದೀಗ ಅಸ್ಪೃಶ್ಯತೆಯ ಕರಿ ನೆರಳು ಮತ್ತೆ ಮರುಕಳುಸಿದ್ದು ಗ್ರಾಮದಲ್ಲಿನ ದಲಿತರಿಗೆ ಕ್ಷೌರ ಮಾಡಲಾಗುತ್ತಿಲ್ಲ.

    ಗ್ರಾಮದಲ್ಲಿ ಮೂರು ಕ್ಷೌರದ ಅಂಗಡಿಗಳಿದ್ದು, ದಲಿತರಿಗೆ ಕ್ಷೌರ ಮಾಡಬೇಕಾಗುತ್ತದೆ ಎಂದು ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಸವರ್ಣಿಯರಿಗೆ ಮಾತ್ರ ಕದ್ದು ಮುಚ್ಚಿ ಕ್ಷೌರ ಮಾಡಲಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಗ್ರಾಮದ ದಲಿತರು ಚಿಕ್ಕಬಳ್ಳಾಪುರ ನಗರಕ್ಕೆ ಬಂದು ಕ್ಷೌರ ಮಾಡಿಸಿಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.