Tag: Chikkaballapura

  • ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

    ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

    – ತೆಲಂಗಾಣದ ಮೆಕ್ಕೆಜೋಳ ಉದ್ಯಮಿಗಳ ಪರ ನಿಂತ್ರಾ ಜಮೀರ್‌?

    ಚಿಕ್ಕಬಳ್ಳಾಪುರ: ರಾಜ್ಯದ ಮೆಕ್ಕೆಜೋಳದ (Corn) ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಚಿವರ ನಡೆ ಖಂಡಿಸಿ, ವ್ಯಾಪಾರಿ ರಾಮಕೃಷ್ಣ ಆಲಿಯಾಸ್ ಜೊನ್ನಲ ಕಿಟ್ಟಿ ಸಚಿವ ಜಮೀರ್ ವಿರುದ್ಧ ಭಾರೀ ಆಕ್ರೋಶ ಹೊರಹಾಕಿದರು. ನನ್ನ ಸಾವಿಗೆ ಸಚಿವ ಜಮೀರ್ ಅಹಮದ್ (Zameer Ahmed Khan) ಕಾರಣ ಅಂತ ರಕ್ತದಲ್ಲಿ ಡೆತ್‍ನೋಟ್ ಬರೆದು ತಂದು ಹೈಡ್ರಾಮಾ ನಡೆಸಿದರು.

    ಏನಿದು ವಿವಾದ?
    ರೈತ (Farmer) ರಾಮಕೃಷ್ಣ ಅಲಿಯಾಸ್ ಜೊನ್ನಲಕಿಟ್ಟಿ, ರಕ್ತದಲ್ಲಿ ಬರೆದ ಡೆತ್ ನೋಟ್ (Deathnote) ತಂದು ಸಚಿವ ಜಮೀರ್ ಸಮ್ಮುಖದಲ್ಲೇ ನನಗೆ ಹಣ ಕೊಡಿಸಿ, ಇಲ್ಲದಿದ್ರೆ ನಾನು ವಿಷ ಕುಡಿದು ಸಾಯ್ತೀನಿ, ನೇಣು ಹಾಕೋತಿನಿ ಅಂತ ಕಣ್ಣೀರು ಹಾಕಿದ್ದಾರೆ. ರಾಮಕೃಷ್ಣ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಬಳಿಯ ದಿಗೂರು ನಿವಾಸಿ. ದಕ್ಷಿಣ ಭಾರತದಲ್ಲೇ (South India) ಅತಿ ಹೆಚ್ಚು ಮೆಕ್ಕೆಜೋಳದ ಬ್ಯುಸಿನೆಸ್ ಮಾಡುವ ಈ ರಾಮಕೃಷ್ಣ ಕಳೆದ 4-5 ತಿಂಗಳ ಹಿಂದೆ ಹೈದರಾಬಾದ್ ನ ಅಕ್ಬರ್, ಸದ್ದಾಂ, ನಾಸೀರ್ ಅನ್ನೋ ಮೂವರು ಅಣ್ಣ ತಮ್ಮಂದಿರಿಗೆ 1 ಕೋಟಿ 89 ಲಕ್ಷ ರೂಪಾಯಿ ಮೆಕ್ಕೆಜೋಳ ಸೇಲ್ ಮಾಡಿದ್ರು. ಆದ್ರೆ ಮೂವರು ಅಣ್ಣ ತಮ್ಮಂದಿರು ರಾಮಕೃಷ್ಣಗೆ ಹಣ ನೀಡದೇ ಸತಾಯಿಸುತ್ತಿದ್ದರು. ಇದ್ರಿಂದ ನೊಂದ ರಾಮಕೃಷ್ಣ ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಅಕ್ಬರ್, ಸದ್ದಾಂ, ನಾಸೀರ್ ವಿರುದ್ಧ ದೂರು ದಾಖಲಿಸಿದ್ರು. ಹೀಗಾಗಿ ಪೇರೇಸಂದ್ರ ಪಿಎಸ್‍ಐ (PSI) ಜಗದೀಶ್ ರೆಡ್ಡಿ ಅಕ್ಬರ್ ಪಾಷಾ ನನ್ನ ಬಂಧಿಸಿ ಕರೆತಂದಿದ್ರು. ಈ ವೇಳೆ ಪಿಎಸ್‌ಐಗೆ ಕರೆ ಮಾಡಿ ಮಾತನಾಡಿದ್ದ ಸಚಿವ ಜಮೀರ್ ಅಹಮದ್, ಅವರು ನಮ್ಮ ರಿಲೇಶನ್ ಇದ್ದಾರೆ ಸ್ವಲ್ಪ ಟೈಂ ಕೊಡಿ ಸೆಟಲ್ ಮಾಡಿಕೊಡ್ತಾರೆ ಅಂತ ಮಾತನಾಡಿದ್ರು. ಈಗ ಇದೇ ಮಾತು ಸಚಿವ ಜಮೀರ್ ಅಹಮದ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ

    ಸಚಿವ ಜಮೀರ್ ಅಹಮದ್ ಹೇಳಿದ್ದೇನು..?
    ಅಂದಹಾಗೆ ಕಳೆದ 1 ವಾರದ ಹಿಂದೆ ಈ ಆಡಿಯೋ ವೈರಲ್ ಆಗಿ ಸಚಿವ ಜಮೀರ್ ಮಾತುಗಳು ಪಿಎಸ್‍ಐ ಮೇಲೆ ಪ್ರಭಾವ ಬೀರಿರೋದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇಂದು ಚಿಕ್ಕಬಳ್ಳಾಪುರ ನಗರದ ಷಾದಿ ಮಹಲ್‌ಗೆ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವ ಜಮೀರ್ ಅಹಮದ್ ಎದುರೇ ಆಗಮಿಸಿದ ದೂರುದಾರ ರೈತ ಹಾಗೂ ವ್ಯಾಪಾರಿ ರಾಮಕೃಷ್ಣ ರಕ್ತದಲ್ಲಿ ಬರೆದ ಡೆತ್ ನೋಟ್ ಹಿಡಿದು ಬಂದು, ಸರ್ ನನಗೆ ಹಣ ಕೊಡಿಸಿ ಇಲ್ಲ ಅಂದ್ರೆ ಡೆತ್ ನೋಟ್ ತಂದಿದ್ದೀನಿ, ನಾನು ವಿಷ ಕುಡಿದು ನೇಣು ಹಾಕ್ಕೊಂಡು ಸಾಯ್ತೀನಿ ಅಂತ ಸಚಿವ ಜಮೀರ್ ಅಹಮದ್ ಎದುರೇ ಕಣ್ಣೀರು ಹಾಕಿದರು. ಈ ವೇಳೆ ರಾಮಕೃಷ್ಣ ವಿರುದ್ದವೇ ಸಚಿವ ಜಮೀರ್ ಸಿಡಿಮಿಡಿಗೊಂಡರು. ನಂತರ ರೈತ-ವ್ಯಾಪಾರಿ ರಾಮಕೃಷ್ಣನನ್ನ ಸಮಾಧಾನ ಮಾಡಿ ಪೊಲೀಸರು ಕಾರ್ಯಕ್ರಮದಿಂದ ಹೊರೆಗೆ ಕರೆತಂದರು. ಕಾರ್ಯಕ್ರಮ ಮುಗಿದ ನಂತರ ಈ ಬಗ್ಗೆ ಮಾತನಾಡಿದ ಜಮೀರ್ ಅಹಮದ್ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿ ನಾನು ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ, ನಾಳೆಯೇ ತೆಲಂಗಾಣದ ಉದ್ಯಮಿ ಅಕ್ಬರ್ ನನ್ನ ಕರೆಸಿ ಅವರಿಗೆ ಹಣ ಸೆಟ್ಲ್‍ಮೆಂಟ್ ಮಾಡಿಕೊಳ್ಳುವಂತೆ ಹೇಳುತ್ತೇನೆ ಅಂತ ಹೇಳಿ ಚಿಕ್ಕಬಳ್ಳಾಪುರದಿಂದ ಹೊರಟರು.

    ಸಚಿವ ಜಮೀರ್ ಅಹಮದ್ ವಿರುದ್ಧ ರೈತರ ಆಕ್ರೋಶ!
    ಇನ್ನೂ ರೈತ ರಾಮಕೃಷ್ಣಗೆ ಮೆಕ್ಕೆಜೋಳ ಮಾರಾಟ ಮಾಡಿರೋ ರೈತರು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಸಚಿವ ಜಮೀರ್ ಅಹಮದ್ ವಿರುದ್ಧ ಆಕ್ರೋಶ ಹೊರಹಾಕಿದರು. ಸಚಿವರ ಮಧ್ಯ ಪ್ರವೇಶ ಮಾಡಿ ಪಿಎಸ್‍ಐಗೆ ಪೋನ್ ಮಾಡಿದ್ರಿಂದಲೇ ದುಡ್ಡು ಕೊಡ್ತೀವಿ ಅಂತ ಬಂದ ಆರೋಪಿಗಳು ದುಡ್ಡು ಕೊಡದೆ ವಾಪಸ್ ಹೋಗಿದ್ದಾರೆ. ನಮಗೆ ಈಗ ದುಡ್ಡು ಕೋಡೋವರು ಯಾರು? ಜಮೀರ್ ಅಹಮದ್ ಅವರು ಕೊಡ್ತಾರಾ ಅಂತ ಅವರ ವಿರುದ್ದವೇ ಆಕ್ರೋಶ ಹೊರಹಾಕಿದರು. ರಾಜ್ಯದ ಮೆಕ್ಕೆಜೋಳದ ವ್ಯಾಪಾರಿ-ರೈತರ ಪರ ನಿಲ್ಲುವ ಬದಲು ಸಚಿವ ಜಮೀರ್ ಅಹಮದ್ ತೆಲಂಗಾಣ ಮೂಲದ ಮೆಕ್ಕೆಜೋಳದ ಉದ್ಯಮಿಗಳು ವಂಚಕರ ಪರ ನಿಂತು ಈಗ ಇರಲಾರದೆ ಇರುವೆ ಬಿಟ್ಟುಕೊಂಡೇ ಎಂಬಂತಾಗಿದ್ದಾರೆ.

  • ಚಿಕ್ಕಬಳ್ಳಾಪುರ | ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ; ಡಿಸಿ ಕಚೇರಿ ಸಿಬ್ಬಂದಿ ಸುಸ್ತು!

    ಚಿಕ್ಕಬಳ್ಳಾಪುರ | ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ; ಡಿಸಿ ಕಚೇರಿ ಸಿಬ್ಬಂದಿ ಸುಸ್ತು!

    ಚಿಕ್ಕಬಳ್ಳಾಪುರ: ಇಲ್ಲಿನ ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿದಿನ ಕೆಲಸ ಕಾರ್ಯಗಳಿಗೆ ಆ ಜಿಲ್ಲೆಯ ಜನ ಅಲ್ಲಿಗೆ ಭೇಟಿ ನೀಡ್ತಾರೆ. ಮತ್ತೊಂದೆಡೆ ಅಲ್ಲಿಯ ಅಧಿಕಾರಿ ಸಿಬ್ಬಂದಿ, ಅಲ್ಲೆ ಕರ್ತವ್ಯ ಮಾಡ್ತಾರೆ. ಇಂಥದರಲ್ಲಿ ಆ ಭವನಕ್ಕೂ ನಾಯಿಗಳಿಗೂ ಅದೇನ್ ನಂಟೊ ಗೊತ್ತಿಲ್ಲ, ಹಿಂಡು ಹಿಂಡು ನಾಯಿಗಳು ಆ ಜಿಲ್ಲಾಡಳಿತ ಭವನವನ್ನೇ ತಮ್ಮ ಆಶ್ರಯ ತಾಣಗಳನ್ನಾಗಿ ಮಾಡಿಕೊಂಡಿವೆ.

    ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಒಂದಲ್ಲ ಎರಡಲ್ಲ 18ಕ್ಕೂ ಹೆಚ್ಚು ನಾಯಿಗಳು ಇವೆ. ಒಂದೊಂದು ನಾಯಿಗಳು ಒಂದೊಂದು ಕಚೇರಿಯನ್ನು ಹಂಚಿಕೊಂಡಂತೆ ಕಂಡು ಬಂದಿದೆ. ಆ ಕಚೇರಿ ಹತ್ತಿರ ಹೊದ್ರೆ, ಅಲ್ಲೊಂದು ಬೌ ಎನ್ನುತ್ತೆ, ಈ ಕಡೆ ಕಚೇರಿಗೆ ಬಂದ್ರೆ ಇಲ್ಲೊಂದು ಬೌ ಬೌ ಎನ್ನುತ್ತೆ, ಇಲ್ಲಿರುವ ನಾಯಿಗಳು ಕೆಲವು ಸಿಬ್ಬಂದಿಗಳಿಗೆ ಅಭ್ಯಾಸವಾಗಿದ್ರೆ. ಕಚೇರಿಗೆ ಬರೊ ಸಾರ್ವಜನಿಕರನ್ನ ಕಂಡ್ರೆ ಬೌ ಬೌ ಮಾಡ್ತಿವೆ.

    ಸ್ವತಃ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಾಯಿಗಳಿಂದ ಎಚ್ಚರಿಕೆಯಿಂದ ಇರುವಂತೆ ಡಿಸಿ ಪಿ.ಎನ್ ರವೀಂದ್ರ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ದಿನದಿಂದ ದಿನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಾಯಿಗಳ ಸಂತತಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಅಪಾಯ ಆಗುವ ಮುನ್ನ ಎಚ್ಚರ ವಹಿಸಬೇಕಿದೆ.

  • ಸೈಟ್‌ ಕೊಟ್ರೆ ಮಾತ್ರ ಸಂಸಾರ, ಮಗು ಬೇಕಿದ್ರೆ ಮೈದುನನ ಜೊತೆ ಮಲಗು – ಗಂಡ, ಅತ್ತೆಯ ಟಾರ್ಚರ್‌ಗೆ ಉಪನ್ಯಾಸಕಿ ಆತ್ಮಹತ್ಯೆ

    ಸೈಟ್‌ ಕೊಟ್ರೆ ಮಾತ್ರ ಸಂಸಾರ, ಮಗು ಬೇಕಿದ್ರೆ ಮೈದುನನ ಜೊತೆ ಮಲಗು – ಗಂಡ, ಅತ್ತೆಯ ಟಾರ್ಚರ್‌ಗೆ ಉಪನ್ಯಾಸಕಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಉಪನ್ಯಾಸಕಿಯೊಬ್ಬಳು ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಘಾಟಿ ಬಳಿಯಿರುವ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ನಡೆದಿದೆ.

    ದೊಡ್ಡಬಳ್ಳಾಪುರದ ಸೋತೇನಹಳ್ಳಿ ನಿವಾಸಿ ಪುಷ್ಪವತಿ (23) ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರ ತಂದೆ ತಾಯಿಗೆ 4 ಮಂದಿ ಹೆಣ್ಣು ಮಕ್ಕಳಿದ್ದು, ಇವರು ಕೊನೆಯವರಾಗಿದ್ದರು. ದೊಡ್ಡಬಳ್ಳಾಪುರ ತಪಸೀಹಳ್ಳಿ ಗ್ರಾಮದ ವೇಣು ಎಂಬವನ ಜೊತೆ ಕಳೆದ 2024ರ ನವೆಂಬರ್‌ನಲ್ಲಿ ಲಕ್ಷ ಲಕ್ಷ ವರದಕ್ಷಿಣೆ (Dowry) ನೀಡಿ ಅದ್ದೂರಿಯಾಗಿ ಮದುವೆ ಮಾಡಿದ್ದರು. ವೇಣು ಮಾತ್ರ ಮದುವೆಯಾದರೂ ಹೆಂಡತಿ ಜೊತೆ ಸಂಸಾರ ಮಾಡುತ್ತಿರಲಿಲ್ಲವಂತೆ. ಇದನ್ನೂ ಓದಿ: ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

    ಏನೋ ಸಮಸ್ಯೆ ಇರಬೇಕು ಎಂದು ವೈದ್ಯರಿಗೆ ತೋರಿಸೋಣ ಅಂದ್ರೂ ಮಾತು ಕೇಳಿಲ್ಲ. ಸರಿ ಅಂತ ಪುಷ್ಪವತಿ ಅತ್ತೆ ಭಾರತಿ ಮಾವ ಗೋವಿಂದಪ್ಪನ ಬಳಿ ಸಮಸ್ಯೆ ಹೇಳಿಕೊಂಡಿದ್ದರು. ಆದ್ರೆ ಮಗನನ್ನೇ ಬೆಂಬಲಿಸಿದ ಅತ್ತೆ ಮಾವ ದೊಡ್ಡಬಳ್ಳಾಪುರದಲ್ಲಿ ಒಂದು ನಿವೇಶನ ಕೊಟ್ರೆ ಮಾತ್ರ ಮಗ ಸಂಸಾರ ಮಾಡ್ತಾನೆ ಎಂದಿದ್ದರಂತೆ. ಅಷ್ಟಕ್ಕೂ ನಿನಗೆ ಮಗು ಮಾಡಿಕೊಳ್ಳಲು ಅರ್ಜೆಂಟ್ ಇದ್ರೆ ಚಿಕ್ಕ ಮಗ ಮೈದುನನ ಜೊತೆಯಲ್ಲೇ ಮಲಗು ಎಂದಿದ್ದರಂತೆ.

    ತಿಂಗಳ ಹಿಂದೆ ನಡೆದ ಗಲಾಟೆ ವೇಳೆ ಪುಷ್ಪವತಿ ಮೇಲೆ ಎಲ್ಲರೂ ಸೇರಿ ಹಲ್ಲೆ ನಡೆಸಿದ್ದಾರೆ. ಆಗ ಪುಷ್ಪವತಿ ತವರು ಮನೆಗೆ ವಿಚಾರ ತಿಳಿಸಿ ಕೊನೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇನ್ನೂ ದೂರು ದಾಖಲಾದ ನಂತರ ತವರು ಮನೆಯಲ್ಲೇ ಇದ್ದ ಪುಷ್ಪವತಿ ಮನೆಯಲ್ಲಿದ್ರೆ ಮನಸ್ಸು ಸರಿ ಇರಲ್ಲ ಅಂತ ಮತ್ತೆ ಉಪನ್ಯಾಸಕ ವೃತ್ತಿಗೆ ಸೇರಿಕೊಂಡಿದ್ದರು. ಕೆಲಸಕ್ಕೆ ಹೋಗಿ ಬರ್ತಿದ್ದ ಪುಷ್ಪವತಿಯನ್ನ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಸ್ಟಾಂಡ್‌ನಲ್ಲಿ ಅಡ್ಡ ಹಾಕಿ ಗಂಡ ಆಕೆಯ ಮುಖಕ್ಕೆ ಉಗಿದು ಸಾರ್ವಜನಿಕರ ಎದುರೇ ನಮ್ಮ ಮೇಲೆಯೇ ಕಂಪ್ಲೇಂಟ್ ಕೊಡ್ತಿಯಾ‌? ನಿನಗೆ ನೋಡು ನಾನ್ ಒಂದು ಗತಿ ಕಾಣಿಸ್ತೀನಿ? ಮತ್ತೊಂದು ಮದುವೆ ಮಾಡ್ಕೊಂಡು ನಾನ್ ಏನ್ ಅಂತ ತೋರಿಸ್ತೀನಿ ಅಂತ ಧಮ್ಕಿ ಹಾಕಿ ಬೆದರಿಕೆ ಹಾಕಿದ್ದನಂತೆ. ನಡೆದ ವಿಚಾರವನ್ನು ಮನೆಯಲ್ಲಿ ತಿಳಿಸಿದ್ದ ಪುಷ್ಪವತಿ ಮರುದಿನ ಎಂದಿನಂತೆ ಕಾಲೇಜಿಗೆ ಅಂತ ಹೋದವಳು ಮನೆಗೆ ವಾಪಾಸ್ ಬಂದಿರಲಿಲ್ಲ. ಆದ್ರೆ ಎರಡು ದಿನದ ನಂತರ ಆಕೆಯ ಶವ ದೊಡ್ಡಬಳ್ಳಾಪುರ ಘಾಟಿ ಬಳಿಯ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ಪತ್ತೆಯಾಗಿದೆ.

    ಶನಿವಾರ ಕಾಲೇಜಿಗೆ ಪಾಠ ಮಾಡಲು ಹೋದ ಮಗಳು ಮನೆಗೆ ಬರಲಿಲ್ಲ ಅಂತ ಕುಟುಂಬಸ್ಥರು ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರು ಮೊಬೈಲ್ ಲೊಕೇಷನ್ ಪತ್ತೆ ಮಾಡಿದಾಗ ಅವರ ಮೊಬೈಲ್ ಡ್ಯಾಂ ಬಳಿ ಪತ್ತೆಯಾಗಿತ್ತು. ಅಲ್ಲದೇ ಮೃತದೇಹ ಸಿಕ್ಕಿತ್ತು. ಮೊಬೈಲ್‌ನಲ್ಲಿ ವೀಡಿಯೋ ಸಹ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು, ವೇಣು ಹಾಗೂ ಮಾವ ಗೋವಿಂದಪ್ಪನನ್ನ ಬಂಧಿಸಿ, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೊಪ್ಪಳದ ಲಾಡ್ಜ್‌ನಲ್ಲಿ ನೇಣು ಬಿಗಿದು ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ

     

  • ಶಿವಮೊಗ್ಗ | ಕಾರ್ಗಲ್‌ ಬಳಿ ಪ್ರವಾಸಿಗರ ಬಸ್ ಪಲ್ಟಿ – 18 ಮಂದಿಗೆ ಗಾಯ

    ಶಿವಮೊಗ್ಗ | ಕಾರ್ಗಲ್‌ ಬಳಿ ಪ್ರವಾಸಿಗರ ಬಸ್ ಪಲ್ಟಿ – 18 ಮಂದಿಗೆ ಗಾಯ

    ಶಿವಮೊಗ್ಗ: ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ (Accident) ಘಟನೆ ಕಾರ್ಗಲ್‌ ಸಮೀಪದ ಆಡುಕಟ್ಟೆಯ ಜೋಗಿನ ಮಠದ ಬಳಿ ನಡೆದಿದೆ. ಅಪಘಾತದಲ್ಲಿ ಸುಮಾರು 18 ಮಂದಿ ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ರತ್ನಮ್ಮ (50), ಗಮ್ಯಶ್ರೀ (11), ಸುಶೀಲಾ (45), ನಾರಾಯಣಪ್ಪ (72), ಸುಮಿತ್ ಕುಮಾರ್ (38), ಸುಬ್ಬಲಕ್ಷ್ಮಿ(29), ರೋಹಿತ್ ( 20), ನವೀನ್ (12), ಸಾವಿತ್ರಿ (36), ವಿದ್ಯಾ ರಾಣಿ (34), ಜ್ಯೋತಿ (32), ಪುಷ್ಪಾವತಿ (48), ಲಕ್ಷ್ಮಿ (50), ಗಂಗಮ್ಮ (65), ಮದನ್ (14), ಗೌತಮ್ (30), ಶಕುಂತಲಾ (34) ‌ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ಕಾರ್ಗಲ್ ಠಾಣೆ ಪೊಲೀಸರು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ದೇವಸ್ಥಾನಕ್ಕೆ ಬಂದಿದ್ದ ದಂಪತಿ ಭದ್ರಾ ನಾಲೆಯಲ್ಲಿ ಮುಳುಗಿ ಸಾವು, ಆತ್ಮಹತ್ಯೆ ಶಂಕೆ

    ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ 45 ಜನ ಪ್ರವಾಸಿಗರ ತಂಡ, ಖಾಸಗಿ ಬಸ್‌ನಲ್ಲಿ ಪ್ರವಾಸಕ್ಕೆ ಆಗಮಿಸಿತ್ತು. ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ (Sigandur Chowdeshwari Temple) ಭೇಟಿ ನೀಡಿ, ವಡನಬೈಲ್ ಬಳೆ ಪದ್ಮಾವತಿ ಅಮ್ಮನವರ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಇದನ್ನೂ ಓದಿ: ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತುತಂದ ಅಗ್ನಿಶಾಮಕ ಸಿಬ್ಬಂದಿ

  • ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

    ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

    – ಊಟದಲ್ಲಿ ವಿಷ ಹಾಕ್ತಾರೆ ಅಂತ 15 ದಿನದಿಂದ ಊಟ ಮಾಡಿಲ್ಲ ಎಂದ ಮಹಿಳೆ

    ಚಿಕ್ಕಬಳ್ಳಾಪುರ: ಗಂಡ, ಅತ್ತೆ, ಮಾವ, ಮೈದುನ ಸೇರಿದಂತೆ ಸಂಬಂಧಿಕರು ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿ ಗೃಹಿಣಿ ಸಾಯುವ ಮುನ್ನ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಘಾಟಿ ಬಳಿಯಿರುವ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ನಡೆದಿದೆ.

    ಮೃತಳನ್ನು ದೊಡ್ಡಬಳ್ಳಾಪುರ ತಾಲೂಕಿನ ಸೋತೇನಹಳ್ಳಿ ಗ್ರಾಮದ ಉಪನ್ಯಾಸಕಿ ಪುಷ್ಪ (23) ಎಂದು ಗುರುತಿಸಲಾಗಿದೆ. ಸಾಯುವ ಮುನ್ನ ವಿಡಿಯೋ ಮಾಡಿ, ಗಂಡನ ಮನೆಯವರ ವಿರುದ್ಧ ಕಿಡಿಕಾರಿ, ಕ್ರಮಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: 7 ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು – ಹೆಚ್ಚು ಮಾತ್ರೆ ಸೇವಿಸಿದ್ದರಿಂದ ಮೃತಪಟ್ಟಿರೋ ಶಂಕೆ

    ಮೃತ ಪುಪ್ಪಾಳನ್ನು ತಪಸೀಹಳ್ಳಿ ಗ್ರಾಮದ ವೇಣು ಎಂಬುವವರ ಜೊತೆ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಆದ್ರೆ ವಿವಾಹವಾದ ನಂತರ ಹೆಚ್ಚಿನ ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಗಂಡನ ಮನೆಯವರು ಪೀಡಿಸಿ ಕಿರಕುಳ ಕೊಡ್ತಿದ್ದರಂತೆ. ಇನ್ನೂ ಗಂಡನಿಗೆ ಎರಡನೇ ಮದುವೆಯಾಗುವ ಆಸೆಯಿದ್ದು ಮಾನಸಿಕವಾಗಿ ಕಿರುಕುಳ ಕೊಡ್ತಿದ್ದರಂತೆ. ಇಷ್ಟೇ ಅಲ್ಲದೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಲು ಸಹ ಪ್ಲ್ಯಾನ್‌ ಮಾಡಿದ್ದರು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ಇದರ ನಡುವೆ ಮೈದುನನ ಜೊತೆ ಮಲಗುವಂತೆಯೂ ಬಲವಂತ ಮಾಡಿದ್ದಾರೆ ಎಂದು ಆರೋಪ ಮಾಡಿ ಗೃಹಿಣಿ ಪುಷ್ಪ 8 ನಿಮಿಷಗಳ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪುಷ್ಪ ಸೋಮವಾರ (ಅ.20) ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಗಂಡ, ಮಾವನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಡಿಯೋದಲ್ಲಿ ಗಂಡ ವೇಣು, ಅತ್ತೆ ಭಾರತಿ, ಮಾವ ಗೋವಿಂದಪ್ಪ ಹಾಗೂ ಮೈದುನ ನಾರಾಯಣಸ್ವಾಮಿ ಸೇರಿದಂತೆ ಸಂಬಂಧಿಕಾರಾದ ಮುತ್ತೇಗೌಡ ಹಾಗೂ ಪಲ್ಲವಿ ಅವರ ಕಿರುಕುಳವೇ ನನ್ನ ಸಾವಿಗೆ ಕಾರಣ ಅವರಿಗೆ ತಕ್ಕ ಶಿಕ್ಷೆ ಕೊಡಿಸಿ, ನನ್ನ ಮೃತದೇಹವನ್ನ ಗಂಡನ ಮನೆಯೊಳಗೆ ಮಣ್ಣು ಮಾಡುವಂತೆ ಗೃಹಿಣಿ ವಿಡಿಯೋದಲ್ಲಿ ಆಗ್ರಹಿಸಿದ್ದಾಳೆ.ಇದನ್ನೂ ಓದಿ: ಕುಣಿಗಲ್‌ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ

  • ಚಿಕ್ಕಬಳ್ಳಾಪುರ ರೇಪ್‌ ಕೇಸ್‌ | ಅನ್ಯಕೋಮಿನ ವ್ಯಕ್ತಿಯಿಂದ ಕೃತ್ಯ – ಸಂತ್ರಸ್ತೆ ನೆರವಿಗೆ ಧಾವಿಸಿದ ಮಹಿಳೆ ಹೇಳಿದ್ದೇನು?

    ಚಿಕ್ಕಬಳ್ಳಾಪುರ ರೇಪ್‌ ಕೇಸ್‌ | ಅನ್ಯಕೋಮಿನ ವ್ಯಕ್ತಿಯಿಂದ ಕೃತ್ಯ – ಸಂತ್ರಸ್ತೆ ನೆರವಿಗೆ ಧಾವಿಸಿದ ಮಹಿಳೆ ಹೇಳಿದ್ದೇನು?

    – ಡ್ರಾಪ್ ಕೊಡುವ ನೆಪದಲ್ಲಿ ನಡೆದೇಹೋಯ್ತು ಕೃತ್ಯ
    – ಹೊಸ ಬಟ್ಟೆ ತರ್ತೀನಿ ಅಂತ ಸ್ನೇಹಿತನನ್ನ ಕರೆಸಿ ಮತ್ತೆ ರೇಪ್‌

    ಚಿಕ್ಕಬಳ್ಳಾಪುರ: ಆಕೆ ಬಿಕಾಂ ಪದವೀಧರೆ (BCom Graduate) ಕೆಲಸ ಹುಡುಕೋಣ ಅಂತ ಹಳ್ಳಿಯಿಂದ ನಗರಕ್ಕೆ ಬಂದಿದ್ಲು. ಆದ್ರೆ ಕೆಲಸ ಸಿಗಲಿಲ್ಲ ಹೀಗಾಗಿ ಮರಳಿ ಹಳ್ಳಿಯತ್ತ ನಡೆದುಕೊಂಡು ಹೋಗ್ತಿದ್ದ ಯುವತಿಗೆ ದಾರಿ ಮಧ್ಯೆ ಡ್ರಾಪ್ (Bike Drop) ಕೋಡೋದಾಗಿ ಹೇಳಿ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಪಾಪಿ ತಾನು ಮಾತ್ರವಲ್ಲದೇ ಸ್ನೇಹಿತನನ್ನ ಕರೆದುಕೊಂಡು ಹೋಗಿ ಮತ್ತೆ ಮತ್ತೆ ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾನೆ.

    ಇಡೀ ಸಮಾಜವೇ ತಲೆತಗ್ಗಿಸುವಂತಹ ಹೇಯ ಕೃತ್ಯ ನಡೆದಿದ್ದು ಚಿಕ್ಕಬಳ್ಳಾಪುರದಲ್ಲಿ. ಹೌದು. ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದ ಬಡಾವಣೆಯೊಂದರಲ್ಲಿ ಕಾಮುಕನೊಬ್ಬ ಡ್ರಾಪ್ ಕೊಡುವ ನೆಪದಲ್ಲಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅರೆಸ್ಟ್

    ಸಂತ್ರಸ್ತೆ ಚಿಕ್ಕಬಳ್ಳಾಪುರದ (Chikkaballapura) ಹಳ್ಳಿಯೊಂದರ ನಿವಾಸಿ. ಬಿಕಾಂ ಪಧವೀಧರೆಯಾಗಿದ್ದು ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದಳು. ಕೆಲಸ ಹುಡುಕಿಕೊಂಡೇ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾಳೆ. ಕೆಲಸ ಸಿಗದೇ ಇದ್ದಾಗ ತಮ್ಮೂರಿಗೆ ತಮ್ಮೂರಿಗೆ ವಾಪಸ್ ಹೋಗೋಣ ಅಂತ ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗದಲ್ಲಿ ಹೆಜ್ಜೆ ಹಾಕಿದ್ದಳು. ಇದೇ ದಾರಿಯಲ್ಲಿ ಸಾಗುತ್ತಿದ್ದ ಚಿಕ್ಕಬಳ್ಳಾಪುರದ ಟ್ರ‍್ಯಾಕ್ಟರ್ ಮೆಕ್ಯಾನಿಕ್ ಸಿಖಂದರ್ ಎಂಬಾತ ರಸ್ತೆಯಲ್ಲಿ ಒಂಟಿ ಯುವತಿ ಕಂಡು ಡ್ರಾಪ್ ಕೊಡುವ ನೆಪದಲ್ಲಿ ಸ್ಕೂಟಿ ಹತ್ತಿಸಿಕೊಂಡಿದ್ದಾನೆ. ಸೀದಾ ಗೌರಿಬಿದನೂರು ಮಾರ್ಗದ ಕಣಿವೆ ಇಳಿತಿದ್ದಂತೆ ಬಡಾವಣೆಯೊಂದರೊಳಗೆ ಸ್ಕೂಟಿ ತಿರುಗಿಸಿ ಅಲ್ಲೇ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಇದನ್ನೂ ಓದಿ: ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ

    ʻಬಂಗಾರʼ ಬದುಕು ಕಸಿದ ಕಾಮುಕರು
    ಇನ್ನೂ ಅತ್ಯಾಚಾರ ಮಾಡಿದ ಕಾಮುಕರು ಆಕೆಯ ಕಿವಿಯಲ್ಲಿದ್ದ ಬಂಗಾರದ ಒಲೆ ಕಸಿದುಕೊಂಡಿದ್ದಾರೆ. ನಂತರ ಆಕೆಗೆ ಹೊಸ ಬಟ್ಟೆ ತರುವುದಾಗಿ ಹೇಳಿ ಹೋಗಿದ್ದಾನೆ. ನಂತರ ಚಿಕ್ಕಬಳ್ಳಾಪುರಕ್ಕೆ ಹೋಗಿ ತನ್ನ ಸ್ನೇಹಿತ ಜನಾರ್ಧನಾಚಾರಿ ಎಂಬಾತನನ್ನು ಕರೆದುಕೊಂಡು ಬಂದು ಪುನಃ ಆಕೆಯನ್ನ ಅದೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮತ್ತೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ.

    ರಾತ್ರಿವರೆಗೆ ಶಾಕ್‌ನಲ್ಲೇ ಇದ್ದ ಯುವತಿ
    ಎರಡು ಬಾರಿ ಅತ್ಯಾಚಾರ ಮಾಡಿದ ಆರೋಪಿಗಳು ಸೀದಾ ಅಕೆಯನ್ನ ಕರೆತಂದು ಕೊನೆಗೆ ಪೆಟ್ರೋಲ್ ಬಂಕ್‌ವೊಂದರ ಬಳಿ ಬಿಟ್ಟು ಎಸ್ಕೇಪ್ ಅಗಿದ್ದಾರೆ. ಘಟನೆಯಿಂದ ಶಾಕ್‌ಗೆ ಗುರಿಯಾಗಿ ರಾತ್ರಿ ಆದ್ರೂ ಅಲ್ಲೇ ಇದ್ದ ಯುವತಿ ಕಂಡು ಶಿಲ್ಪಗೌಡ ಎಂಬ ಮಹಿಳೆ ಈಕೆಯನ್ನು ವಿಚಾರಿಸಿ ಉಪಚರಿಸಿದಾಗ ಯುವತಿ ನಡೆದ ಘಟನೆ ವಿವರಿಸಿದ್ದಾಳೆ. ಈ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಸಂತ್ರಸ್ತ ಯುವತಿಗೆ ಚಿಕಿತ್ಸೆ ನೀಡಿ ಮಹಿಳಾ ಸ್ವಾಧಾರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

    ಘಟನೆ ಕುರಿತು ʻಪಬ್ಲಿಕ್‌ ಟಿವಿʼಜೊತೆಗೆ ಮಾತನಾಡಿರುವ ಮಹಿಳೆ ಶಿಲ್ಪಗೌಡ, ಮುಸ್ಲಿಂ ವ್ಯಕ್ತಿಯೊಬ್ಬ ನಮ್ಮ ಮನೆಯಲ್ಲೂ ಹೆಣ್ಣುಮಕ್ಕಳಿದ್ದಾರೆ, ಡ್ರಾಪ್‌ ಕೊಡ್ತೀನಿ ಅಂತ ಆಕೆಯನ್ನ ಕರೆದುಕೊಂಡು ಹೋಗಿದ್ದಾನೆ. ಅಲ್ಲೊಂದು ಅಜ್ಜಿ ಮನೆ ಬಳಿ ಕೂರಿಸಿದ್ದಾನೆ. ನಮ್ಮ ತೋಟದಲ್ಲೇ ಅವರ ತಂದೆ-ತಾಯಿ ಕೆಲಸ ಮಾಡ್ತಿದ್ದಾರೆ, ಈಕೆಗೆ ಮೆಂಟಲ್‌ ಕಂಡೀಷನ್‌ ಸರಿಯಿಲ್ಲ ಅಂತ ಕೂರಿಸಿರುತ್ತಾನೆ. ಬಳಿಕ ಸ್ನೇಹಿತನನ್ನ ಕರೆದುಕೊಂಡು ಬಂದು ಕಣಿವೆ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡ್ತಾರೆ. ಆಕೆ ಕಿರುಚಿದಾಗ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ. ಚಿನ್ನ ಕಸಿದು ಪೆಟ್ರೋಲ್‌ ಬಂಕ್‌ ಬಳಿ ಆಕೆಯನ್ನ ಬಿಟ್ಟು ಹೋಗಿದ್ದಾರೆ. ಶಾಕ್‌ನಲ್ಲಿದ್ದ ಯುವತಿ ಇಡೀ ರಾತ್ರಿ ಅಲ್ಲೇ ಮಲಗಿದ್ದಾಳೆ. ಅಸಹಾಯಕತೆಯಿಂದ ಏನೂ ಮಾಡೋದಕ್ಕೆ ಆಗಿಲ್ಲ. ಮರುದಿನ ಉಪಚರಿಸಿದ ನಂತರ ಆಕೆ ಘಟನೆ ವಿವರಿಸಿದ್ದಾಳೆ ಎಂದು ತಿಳಿಸಿದ್ದಾರೆ. ಬಳಿಕ ಪೊಲೀಸರು 24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸಿದ್ದಾರೆ.

  • ಚಿಕ್ಕಬಳ್ಳಾಪುರ | ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅರೆಸ್ಟ್

    ಚಿಕ್ಕಬಳ್ಳಾಪುರ | ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅರೆಸ್ಟ್

    – ತಾನು ರೇಪ್ ಮಾಡಿ, ಬಳಿಕ ಸ್ನೇಹಿತನ ಕರೆತಂದು ಕೃತ್ಯ ಎಸಗಿದ್ದ ಆರೋಪಿಗಳು

    ಚಿಕ್ಕಬಳ್ಳಾಪುರ: ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿಗೆ (Manchenahalli) ಹೋಗುವ ಮಾರ್ಗದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಮೂಲದ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸದ್ಯ ಸಂತ್ರಸ್ತ ಯುವತಿಗೆ ಮಹಿಳಾ ಸ್ವಾಧಾರ ಕೇಂದ್ರದಲ್ಲಿ ಆರೈಕೆ ನೀಡಲಾಗುತ್ತಿದೆ.ಇದನ್ನೂ ಓದಿ: ಚಿಕ್ಕಮಗಳೂರು | 5 ತಿಂಗಳ ಹಿಂದಷ್ಟೇ ಮದುವೆ – ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ

    ಘಟನೆ ನಡೆದ ದಿನ ಸಂತ್ರಸ್ತ ಯುವತಿ ಕೆಲಸ ಹುಡುಕಿಕೊಂಡು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ್ದರು. ಬಳಿಕ ವಾಪಸ್ ನಡೆದುಕೊಂಡು ಮಂಚೇನಹಳ್ಳಿಗೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಆರೋಪಿ ಸಿಕಂದರ್ ಬಂದು, ಡ್ರಾಪ್ ಕೊಡುವ ನೆಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ ಹತ್ತಿಸಿಕೊಂಡಿದ್ದ. ಬಳಿಕ ಅಲ್ಲಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಆನಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ತನ್ನ ಸ್ನೇಹಿತ ಜನಾರ್ಧನ್‌ ಅನ್ನು ಅದೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇಬ್ಬರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

    ಕೃತ್ಯದ ಬಳಿಕ ಆಕೆಯ ಕಿವಿಯಲ್ಲಿದ್ದ ಬಂಗಾರದ ಓಲೆ ಕಸಿದುಕೊಂಡು ಮಾರಾಟ ಮಾಡಿದ್ದಾರೆ. ಸಂತ್ರಸ್ತ ಯುವತಿಯನ್ನು ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ಬಳಿ ಬಿಟ್ಟು ಹೋಗಿದ್ದಾರೆ. ಬಳಿಕ ಗಾಬರಿಯಿಂದ ಕೂತಿದ್ದ ಯುವತಿಯನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

    ಸದ್ಯ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನನ್ವಯ ತನಿಖೆಗಿಳಿದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಬೆಂಗ್ಳೂರಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್‌ ಸ್ಫೋಟ

  • ಚಿಕ್ಕಬಳ್ಳಾಪುರ | ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

    ಚಿಕ್ಕಬಳ್ಳಾಪುರ | ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

    – ಬೆಂಗಳೂರಲ್ಲಿ ಎಂಎಸ್ಸಿ ಓದುತ್ತಿದ್ದ ಸ್ವರ್ಣ

    ಚಿಕ್ಕಬಳ್ಳಾಪುರ: ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.

    ಗೌರಿಬಿದನೂರು ನಗರೆದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತ ಮಗಳು. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡ್ತಿದ್ದ ಸ್ವರ್ಣ ಕಾಲೇಜಿನ ಹಾಸ್ಟೆಲ್‌ನಲ್ಲಿ (College Hostel) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದನ್ನೂ ಓದಿ: ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

    ಮನೆಗೆ ಬಂದಿದ್ದ ಮಗಳನ್ನ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಳು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮಗಳು ಸ್ವರ್ಣ ಸಾವನ್ನಪ್ಪಿದ್ದಾಳೆ. ಈಕೆ ತಂದೆ ಕಳೆದ 3 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅಂದಿನಿಂದಲೂ ಮಾನಸಿಕವಾಗಿ ಕುಗ್ಗಿ ಹೋಗಿ ಕಿನ್ನೆತೆಗೆ ಓಳಗಾಗಿದ್ದ ಸ್ವರ್ಣ ಸೂಸೈಡ್ ಮಾಡಿಕೊಂಡು ಈಗ ತಂದೆಯ ಹಾದಿ ಹಿಡಿದಿದ್ದಾಳೆ. ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಐವರು ಅಧಿಕಾರಿಗಳ ಮುಂದೆ ಹಾಜರ್‌!

    ಇನ್ನೂ ಒಂದ್ಕಡೆ ಗಂಡ ಮತ್ತೊಂದ್ಕಡೆ ಮಗಳು ಆತ್ಮಹತ್ಯೆ ಹಾದಿ ಹಿಡಿದಿದ್ದು ಇರೋ ಮಗನೊಂದಿಗೆ ತಾಯಿ ದಿಕ್ಕು ತೋಚದಂತಾಗಿದ್ದಾರೆ. ಅಕ್ಕನ ಸಾವಿನಿಂದ ತಮ್ಮ ಸಹ ಕುಗ್ಗಿ ಹೋಗಿದ್ದು ತಾಯಿಗೆ ಆತಂಕ ಭಯ ಮೂಡಿಸಿದೆ. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸರು ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಮೃತ ಸ್ವರ್ಣ ತಾಯಿ ಬಳಿ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ – ಕುಟುಂಬಸ್ಥರನ್ನ ರಕ್ಷಿಸಿದ ʻಪಬ್ಲಿಕ್ ಟಿವಿʼ ತಂಡ

  • ಅಪ್ರಾಪ್ತೆಯೊಂದಿಗೆ ಪ್ರೇಮ ವೈಫಲ್ಯ ಶಂಕೆ – ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಯುವಕ ನೇಣಿಗೆ ಶರಣು

    ಅಪ್ರಾಪ್ತೆಯೊಂದಿಗೆ ಪ್ರೇಮ ವೈಫಲ್ಯ ಶಂಕೆ – ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಯುವಕ ನೇಣಿಗೆ ಶರಣು

    – ಹುಡುಗಿ ವೇಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
    – ಬೇರೊಬ್ಬನನ್ನ ಲವ್‌ ಮಾಡುತ್ತಾ, ಚಿರುತ್‌ನನ್ನ ಅವಾಯ್ಡ್‌ ಮಾಡ್ತಿದ್ದಳಂತೆ ಹುಡುಗಿ

    ಚಿಕ್ಕಬಳ್ಳಾಪುರ: ಆತನಿಗೆ ಇನ್ನೂ 18 ವರ್ಷ ವಯಸ್ಸು. ಆದ್ರೆ ಹದಿಹರೆಯದ ವಯಸ್ಸಲ್ಲೇ ಪ್ರೀತಿ ಪ್ರೇಮ ಅಂತ ಅಪ್ರಾಪ್ತೆ ಜೊತೆ ಪ್ರಣಯದಾಟವೂ ಆಡಿದ್ದ. ಇದ್ದಕ್ಕಿದ್ದಂತೆ ಅದೇನಾಯ್ತೋ ಏನೋ ಕೊನೆಗೆ ಆಕೆಯ ವೇಲ್‌ನಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಬಾಲಕುಂಟಹಳ್ಳಿ ಗ್ರಾಮದ ಬಳಿ ನಡೆದಿದೆ.

    ಬಾಲಕುಂಟಹಳ್ಳಿ ಗ್ರಾಮದ 18 ವರ್ಷದ ಯುವಕ ಚಿರುತ್ ಕುಮಾರ್ ಆತ್ಮಹತ್ಯೆ (Suicide) ಮಾಡಿಕೊಂಡವ. ಅಂದಹಾಗೆ ಸಾಯುವ ಮುನ್ನ ʻಮಿಸ್ ಯು ಚಿನ್ನʼ ಅಂತ ಆಕೆಯೊಂದಿಗಿನ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕೆಯ ವೇಲ್‌ನಿಂದಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    SSLCನಲ್ಲಿ ಒಂದಲ್ಲ ಎರಡಲ್ಲ ಅಂತ ಮೂರು ಬಾರಿ ಫೇಲ್ ಆಗಿದ್ದ ಚಿರುತ್ ಊರಲ್ಲೇ ಕೃಷಿ ಕೆಲಸ ಮಾಡಿಕೊಂಡಿದ್ದ. ಆದ್ರೆ ಚಿರುತ್ ಕುಮಾರ್ ಇದ್ದಕ್ಕಿದ್ದಂತೆ ಜಕ್ಕಲಮಡುಗು ಜಲಾಶಯದ ಬಳಿ ಜಮೀನು ಪಕ್ಕದಲ್ಲೇ ಇದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂದಹಾಗೆ ತಂದೆ ತಾಯಿಗೆ ಒಬ್ಬನೇ ಮಗನಾಗಿದ್ದ ಚಿರುತ್ ಕುಮಾರ್ ಅದ್ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಅನ್ನೋದು ಆರಂಭದಲ್ಲಿ ಸಂಬಂಧಿಕರಿಗೂ ಗೊತ್ತಾಗಿರಲಿಲ್ಲ. ಕೊನಗೆ ಆತನ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನ ಜಾಲಾಡಿದಾಗ ಆತ ಸಾಯುವ ಮುನ್ನ ಅಪ್ರಾಪ್ತ ಬಾಲಕಿಯೊಂದಿಗೆ ಇರುವ ಫೋಟೋಗಳನ್ನ ಹಾಕಿಕೊಂಡಿದ್ದಾನೆ. ಇದ್ರಿಂದ ಪ್ರೇಮ ವೈಫಲ್ಯದಿಂದಲೇ ಚಿರುತ್ ಕುಮಾರ್ ಸೂಸೈಡ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಈ ಹಿಂದೆಯೂ ಎರಡು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸಾಯುವುದಾಗಿ ಚಿರುತ್ ಕುಮಾರ್ ಪೋಸ್ಟ್ ಮಾಡಿದ್ದನಂತೆ. ಆಗ ಸ್ನೇಹಿತರೇ ಹೋಗಿ ಅವನಿಗೆ ಬುದ್ದಿ ಮಾತು ಹೇಳಿ ಮನೆಗೆ ಕರೆದುಕೊಂಡು ಬಂದಿದ್ರಂತೆ. ಆದ್ರೆ ಮೂರನೇ ಬಾರಿ ಸೂಸೈಡ್ ಮಾಡಿಕೊಂಡು ಸಾವಿನ ಮನೆ ಸೇರಿಕೊಂಡಿದ್ದಾನೆ.

    ಇನ್ನೂ ಅಪ್ರಾಪ್ತ ಬಾಲಕಿ, ಚಿರುತ್‌ನನ್ನ ಬಿಟ್ಟು ಬೇರೆ ಯಾರೋ ಹುಡುಗನನ್ನ ಪ್ರೀತಿ ಮಾಡುತ್ತಿದ್ದಳಂತೆ, ಚಿರುತ್ ಫೋನ್‌ ರಿಸೀವ್ ಮಾಡದೇ ಅವಾಯ್ಡ್‌ ಮಾಡಿದ್ಲಂತೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಆಪ್ತ ಸ್ನೇಹಿತರು ಬಳಗದಿಂದ ಮಾಹಿತಿ ಲಭ್ಯವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಯುಪಿ ಮಾದರಿಯ ಆಡಳಿತ ತರಬೇಕು: ಬಸನಗೌಡ ಪಾಟೀಲ್ ಯತ್ನಾಳ್

    ರಾಜ್ಯದಲ್ಲಿ ಯುಪಿ ಮಾದರಿಯ ಆಡಳಿತ ತರಬೇಕು: ಬಸನಗೌಡ ಪಾಟೀಲ್ ಯತ್ನಾಳ್

    – ದೇಶದಲ್ಲಿ ಮೂರು ಪಾಕಿಸ್ತಾನಗಳಷ್ಟು ವಕ್ಫ್ ಆಸ್ತಿ ಇದೆ ಎಂದ ಶಾಸಕ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ (Uttar Pradesh Model) ಆಡಳಿತ ಬರಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ರು.

    ಖಾಸಗಿ ಕಾರ್ಯಕ್ರಮ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ರು. ಇದೆ ವೇಳೆ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬದ ವೇಳೆ ದೇಶದ ಯಾವುದೇ ಭಾಗದಲ್ಲೂ ಹಿಂದೂಗಳು ಅಶಾಂತಿ ಉಂಟುಮಾಡಿಲ್ಲ. ಆದ್ರೆ ರಾಜ್ಯದ ಮದ್ದೂರು, ನಾಗಮಂಗಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ದೂರಿದರು. ಇದನ್ನೂ ಓದಿ: 4 ವರ್ಷದಿಂದ ಗೋಕರ್ಣ ಮಹಾಬಲೇಶ್ವರ ದೇವರಿಗಿಲ್ಲ ಭಕ್ತರಿಂದ ವಿಶೇಷ ಪೂಜೆ

    ಇಸ್ಲಾಂ ಧರ್ಮದಲ್ಲಿ ನಿಜವಾದ ಸೋದರತ್ವದ ಮೌಲ್ಯಗಳು ಕಾಣಿಸುತ್ತಿಲ್ಲ. ಈಗ ಕರ್ನಾಟಕದಲ್ಲಿ ಸಾಬ್ರ ಸರ್ಕಾರವೇ ಆಡಳಿತ ನಡೆಸುತ್ತಿದೆ. ನಮ್ಮ ಮುಖ್ಯಮಂತ್ರಿ ದಸರಾ ವೇಳೆ ಚಾಮುಂಡೇಶ್ವರಿಯ ಕುಂಕುಮ ಹಚ್ಚಿಕೊಳ್ಳುವುದಿಲ್ಲ, ಆದರೆ ಮುಸ್ಲಿಂ ಕಾರ್ಯಕ್ರಮಗಳಲ್ಲಿ ಟೋಪಿ ಧರಿಸಿ ಸಂತೋಷ ವ್ಯಕ್ತಪಡಿಸುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ – ಬಾಲಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

    ಇನ್ನೂ ವಕ್ಫ್ ಆಸ್ತಿಗಳ ವಿಷಯ ಪ್ರಸ್ತಾಪಿಸಿ ದೇಶದಲ್ಲಿ ಮೂರು ಪಾಕಿಸ್ತಾನಗಳಷ್ಟು ವಕ್ಫ್ ಆಸ್ತಿಗಳು ಇವೆ. ಮೋದಿ ಸರ್ಕಾರ ವಕ್ಫ್ ಕಾನೂನು ತರದಿದ್ದರೆ ಹಿಂದೂಗಳ ದೇವಾಲಯಗಳ ಜಮೀನುಗಳು ಉಳಿಯುತ್ತಿರಲಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೆಟ್ರೋ ನಿಲ್ದಾಣಕ್ಕೆ ʻಬಸವಣ್ಣʼ ಹೆಸರು – ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಭರವಸೆ

    2028ರಲ್ಲಿ ಸನಾತನ ಧರ್ಮ ರಕ್ಷಣೆ ಮಾಡುವ ಶಕ್ತಿಯೇ ಅಧಿಕಾರಕ್ಕೆ ಬರಬೇಕು, ಹಿಂದೂಗಳ ದೇವಾಲಯಗಳು, ಕುಂಕುಮ ಮತ್ತು ಸಂಸ್ಕೃತಿಯ ರಕ್ಷಣೆ ಅಗತ್ಯವಾಗಿದೆ. ಉತ್ತರ ಪ್ರದೇಶದ ಯೋಗಿ ಸರ್ಕಾರದಂತೆ ಕರ್ನಾಟಕದಲ್ಲೂ ಜಾರಿಗೆ ಬರಬೇಕು, ಇನ್ನೂ ನನಗೂ ಒಂದು ಅವಕಾಶ ಕೊಡಿ ಮಾದರಿ ಆಡಳಿತ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ರು.