ಚಿಕ್ಕಬಳ್ಳಾಪುರ: ಕ್ವಾರಿ ಹೊಂಡದ ನೀರಿನಲ್ಲಿ ಈಜಲು ಹೋದ ಕಾರ್ಮಿಕನೊರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಕಣಿವೆನಾರಾಯಣಪುರದ ಬಳಿ ನಡೆದಿದೆ.
ಕೈಫ್ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಆಸ್ಪತ್ರೆಯ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಸಹ ಕಾರ್ಮಿಕರೊಂದಿಗೆ ಕೈಫ್ ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ್ದ. ಈಜು ಬಾರದ ಕೈಫ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಓಂ ಪ್ರಕಾಶ್ ಸಾವಿಗೆ ಉತ್ತರ ಕನ್ನಡದಲ್ಲಿದ್ದ ಆಸ್ತಿಯ ಕಲಹ ಕಾರಣವಾಯ್ತೇ?
ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹಕ್ಕಾಗಿ ಸಾಕಷ್ಟು ಹುಡುಕಾಟ ನಡೆಸಿದ್ದು, ಹೊಂಡ ಬಹಳ ಆಳ ಇರುವ ಕಾರಣ ಇನ್ನೂ ಮೃತದೇಹ ಪತ್ತೆಯಾಗಿಲ್ಲ. ನಂದಿಗಿರಿಧಾಮ ಪೊಲೀಸ್ ಠಾಣಾ (Nandhigiridhama Police Station) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda International Airport) ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲ್ಲರ್ (Tempo Traveller) ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಅಂದಹಾಗೆ ಇಂಜಿನ್ ರಿಪೇರಿ ಸಮಸ್ಯೆಯಿಂದ ಏರ್ಪೋರ್ಟ್ ಒಳಭಾಗದ ಅಲ್ಪಾ ಪಾರ್ಕಿಂಗ್ ಬೇ-71 ರಲ್ಲಿ ಹಲವು ದಿನಗಳಿಂದ ವಿಮಾನವನ್ನ ನಿಲ್ಲಿಸಲಾಗಿತ್ತು. ಇದೇ ವಿಮಾನಕ್ಕೆ ಮುಂಭಾಗದ ಮೂತಿ ಬಳಿ ಟೆಂಪೋ ಟ್ರಾವೆಲ್ಲರ್ ಡಿಕ್ಕಿಯಾಗಿದೆ.
ಘಟನೆಯಲ್ಲಿ ಟೆಂಪೋ ಟ್ರಾವೆಲ್ಲರ್ ವಿಮಾನದ ಮೂತಿ ಭಾಗದ ಕೆಳಗೆ ಸಿಲುಕಿಕೊಂಡು ಟಿಟಿಯ ಟಾಪ್ ಜಖಂ ಆಗಿದೆ. ಘಟನೆಯಲ್ಲಿ ಚಾಲಕನ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯಿಂದ ಪಾರಾಗಿದ್ದಾನೆ ಅಂತ ತಿಳಿದುಬಂದಿದೆ. ರನ್ ವೇಗೆ ಸಿಬ್ಬಂದಿಯನ್ನ ಬಿಟ್ಟು ಬರಬೇಕಾದರೆ ಟಿಟಿ ವಾಹನ ಅಪಘಾತಕ್ಕೀಡಾಗಿದೆ.
ಹೈಮಾಸ್ಟ್ ದೀಪದ ಬೃಹತ್ ಕಂಬಕ್ಕೆ ಕಾರು ಡಿಕ್ಕಿ:
ಇನ್ನೂ ಮತ್ತೊಂದು ಪ್ರಕರಣದಲ್ಲಿ ಏರ್ಪೋರ್ಟ್ನ ಒಳಭಾಗದ ರನ್ ವೇ ಬಳಿ ಹೈಮಾಸ್ಟ್ ದೀಪದ ಬೃಹತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಕಾರು ಚಾಲಕ ಗಾಯಗೊಂಡಿದ್ದಾನೆ. ಎರಡು ಪ್ರತ್ಯೇಕ ಪ್ರಕರಣಗಳ ತನಿಖೆಗೆ ಆದೇಶ ಮಾಡಲಾಗಿದೆ.
ಚಿಕ್ಕಬಳ್ಳಾಪುರ: ಪತ್ರವೊಂದರಲ್ಲಿ ಕಾಗುಣಿತ ತಪ್ಪಾಗಿರೋದಕ್ಕೆ ತಹಶೀಲ್ದಾರ್ಗೆ (Tahsildar) ನೋಟಿಸ್ ನೀಡಿರುವ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಪತ್ರದಲ್ಲಿ ಕನ್ನಡ ಪದಗಳು ತಪ್ಪಾಗಿದ್ದರೂ ಸಹಿ ಮಾಡಿರುವ ಚಿಂತಾಮಣಿ ತಹಶೀಲ್ದಾರ್ ಸುದರ್ಶನ್ ಅವರಿಗೆ ಚಿಕ್ಕಬಳ್ಳಾಪುರ ಡಿಸಿ ಪಿ.ಎನ್ ರವೀಂದ್ರ ಅವರು ನೋಟಿಸ್ ನೀಡಿದ್ದಾರೆ. ಅಲ್ಲದೇ ಒಂದು ವಾರದೊಳಗೆ ಉತ್ತರಿಸುವಂತೆ ಸೂಚನೆ ನೀಡಿದ್ದಾರೆ.
ತಾಲೂಕು ಕಚೇರಿ ಎದುರು ಧರಣಿ ಮಾಡಲು ಶಂಬೂಕ ಸಂಘರ್ಷ ಸಮಿತಿ ಅನುಮತಿ ಕೋರಿ ತಹಶೀಲ್ದಾರ್ಗೆ ಮನವಿ ಪತ್ರ ನೀಡಿತ್ತು. ಇದಕ್ಕೆ ತಹಶೀಲ್ದಾರ್ ಅವರು ಅನುಮತಿ ನೀಡಲಾಗುವುದಿಲ್ಲ ಎಂದು ತಿಳಿವಳಿಕೆ ಪತ್ರ ನೀಡಿದ್ದರು. ತಿಳಿವಳಿಕೆ ಪತ್ರದಲ್ಲಿ ಸರಳ ಕನ್ನಡ ಪದಗಳನ್ನ ತಪ್ಪಾಗಿ ನಮೂದು ಮಾಡಲಾಗಿತ್ತು. ಈ ಬಗ್ಗೆ ಶಂಬೂಕ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸೂರ್ಯಕಿರಣ್ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.
ಸೂರ್ಯಕಿರಣ್ ಅವರು ನೀಡಿದ ದೂರಿನ ಮೇರೆಗೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ತಹಶೀಲ್ದಾರ್ಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆಯಾಗಿದೆ. ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಕೊಪ್ಪಳದಲ್ಲಿ ಸಿಡಿಲಿಗೆ 35 ಕುರಿಗಳು ಬಲಿಯಾಗಿವೆ.
ಚಿಕ್ಕಬಳ್ಳಾಪುರ ತಾಲೂಕಿನಾದ್ಯಾಂತ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಮಂಚನಬಲೆಯ ಅಂಡರ್ ಪಾಸ್ನಲ್ಲಿ ವಾಹನ ಸವಾರರು ಪರದಾಡಿದರು. ತುಮಕೂರು ನಗರ ಸೇರಿದಂತೆ ಸುತ್ತಮುತ್ತ ಅರ್ಧ ತಾಸಿಗೂ ಹೆಚ್ಚು ಕಾಲ ಬಿರುಗಾಳಿ ಸಹಿತ ಮಳೆ ಸುರಿದಿದೆ. ರಾಯಚೂರು ಗ್ರಾಮೀಣ ಭಾಗದಲ್ಲೂ ಗುಡುಗು-ಮಿಂಚು-ಬಿರುಗಾಳಿ ಸಹಿತ ಮಳೆಯಾಗಿದೆ. ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ಹಿತವಾದ ವಾತಾವರಣ ಇತ್ತು. ಈ ಮಧ್ಯೆ, ಮತ್ತೊಂದು ಮಳೆಗಾಲ ಬರ್ತಿದ್ದರೂ ಕೂಡ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕಳಸದ ಹೆಬ್ಬಾಳೆ ಸೇತುವೆ ಕಾಮಗಾರಿ 2 ವರ್ಷಗಳಿಂದಲೂ ಪೂರ್ಣಗೊಂಡಿಲ್ಲ. ಹಾಗಾಗಿ, 3 ಕಿ.ಮೀ. ವರೆಗೆ ಟ್ರಾಫಿಕ್ ಜಾಮ್ ಆಗ್ತಿದೆ.
ಬಾಗಲಕೋಟೆ ಜಿಲ್ಲೆಯಾದ್ಯಂತ ಆಲಿಕಲ್ಲು ಸುರಿದಿದೆ. ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರದಿದ್ದಾನೆ. ಬಾಗಲಕೋಟೆ, ಬೀಳಗಿ, ಹುಮಗುಂದ ಹಾಗೂ ಬಾದಾಮಿಯಲ್ಲಿ ಉತ್ತಮ ಮಳೆಯಾಗಿದೆ.
ಸಿಡಿಲಿಗೆ 35 ಕುರಿಗಳು ಸಾವು
ಕೊಪ್ಪಳದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಕಳೆದ ಒಂದು ವಾರದಿಂದ ಮಳೆ ಬಿಡುವು ನೀಡಿತ್ತು. ಇಂದು ಮತ್ತೆ ಮಳೆಯಾಯಿತು. ಇದರಿಂದ ಜನಜೀವನ ಅಸ್ತವ್ಯಸ್ತವಾಯಿತು. ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದಲ್ಲಿ ಸಿಡಿಲು ಬಡಿದು 35 ಕುರಿಗಳು ಸಾವನ್ನಪ್ಪಿವೆ. ಜಮೀನಿನಲ್ಲಿ ಮೇಯಲು ಕುರಿಗಳನ್ನು ಬಿಟ್ಟಿದ್ದಾಗ ಸಿಡಿಲು ಬಡಿದಿದೆ. ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಆಗ್ರಹಿಸಿದ್ದಾರೆ.
ರಾಯಚೂರು ತಾಲೂಕಿನ ಉಡಮಗಲ್ ಖಾನಾಪುರ ಹಾಗೂ ಮರ್ಚಟಾಳ ಗ್ರಾಮದಲ್ಲಿ ಸಿಡಿಲು ಬಡಿದು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ತಾಲೂಕಿನ ಉಡಮಗಲ್ ಖಾನಾಪುರದಲ್ಲಿ ಸಿಡಿಲು ಬಡಿದು ಕುರಿಗಾಯಿ ಮಹಿಳೆ 50 ವರ್ಷದ ಮಲ್ಲಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಹೊಲದಲ್ಲಿ ಕುರಿ ಮೇಯಿಸಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ನೇರವಾಗಿ ತಲೆಗೆ ಸಿಡಿಲು ಹೊಡೆದು ಬೆಂಕಿ ಹೊತ್ತಿಕೊಂಡು ಸ್ಥಳದಲ್ಲೇ ಮಹಿಳೆ ಸಾವಿಗೀಡಾಗಿದ್ದಾಳೆ. ಇನ್ನೊಂದೆಡೆ ರಾಯಚೂರು ತಾಲ್ಲೂಕಿನ ಮರ್ಚಟಾಳ ಗ್ರಾಮದಲ್ಲಿ ಸಿಡಿಲು ಬಡಿದು 46 ವರ್ಷದ ಹನುಮಂತ ಯಾದವ್ ಮೃತಪಟ್ಟಿದ್ದಾನೆ. ಮಧ್ಯಾಹ್ನ ವೇಳೆ ಏಕಾಏಕಿ ಗುಡಗು ಮಿಂಚು ಸಹಿತ ಅಕಾಲಿಕ ಮಳೆ ಸುರಿದಿದ್ದು, ಈ ವೇಳೆ ಸಿಡಿಲು ಬಡಿದು ತಾಲೂಕಿನಲ್ಲಿ ಇಬ್ಬರು ಅಸುನೀಗಿದ್ದಾರೆ. ಎರಡು ಪ್ರತ್ಯೇಕ ಘಟನಾ ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳ್ಳಾರಿಯಲ್ಲಿ ಧಾರಾಕಾರ ಮಳೆಯಾಗಿದೆ. ಭರ್ಜರಿ ಮಳೆಗೆ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ನಗರದ ಹೊಸಪೇಟೆ ಹಾಗೂ ಸಿರಗುಪ್ಪ ರಸ್ತೆಯಲ್ಲಿ ಮರಗಳು ಬಿದ್ದು, ಸಂಚಾರಕ್ಕೆ ತೊಡಕಾಯಿತು. ಬೆಂಗಳೂರು ರಸ್ತೆಯಲ್ಲಿ ಹತ್ತಾರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ತುಮಕೂರಿನಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.
ಬೆಂಗಳೂರು: ರಾಜಭವನದ ಮುಂಭಾಗ ಪೆಟ್ರೋಲ್ ಸುರಿದುಕೊಂಡು ಟೆಕ್ಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಜುಹೈದ್ ಅಹಮದ್ ಆತ್ಮಹತ್ಯೆಗೆ ಯತ್ನಿಸಿದ ಟೆಕ್ಕಿ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವನಾಗಿದ್ದು, ಮಧ್ಯಾಹ್ನ ರಾಜಭವನದ ಮುಂಭಾಗದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ನನ್ನ ಪತ್ನಿ ವರದಕ್ಷಿಣೆ ಕಿರುಕುಳ ಸೇರಿ ಹಲವು ರೀತಿಯ ಸುಳ್ಳು ಕೇಸ್ಗಳನ್ನು ಹಾಕಿ ಕಿರುಕುಳ ನೀಡುತಿದ್ದಾಳೆ ಎಂದು ಆರೋಪಿಸಿ ಟೆಕ್ಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ಠಾಣೆಗೆ ಪತ್ನಿಯ ವಿರುದ್ಧ ದೂರು ನೀಡಲು ಹೋಗಿದ್ದರು. ಆದರೆ, ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. ಆದ್ಧರಿಂದ ನ್ಯಾಯ ಬೇಕು ಎಂದು ರಾಜಭವನದ ಮುಂದೆ ಆತ್ಮಹತ್ಯೆಗೆ ಟೆಕ್ಕಿ ಯತ್ನಿಸಿದ್ದಾರೆ.
ಕೂಡಲೇ ಟೆಕ್ಕಿಯನ್ನು ವಶಕ್ಕೆ ಪಡೆದು ವಿಧಾನಸೌಧ ಪೊಲೀಸರು ಠಾಣೆಗೆ ಕರೆದುಕೊಂಡು ಬಂದು ತನಿಖೆ ಮಾಡಿದಾಗ, ಆತ್ಮಹತ್ಯೆ ಯತ್ನದ ಹಿಂದಿನ ಕಾರಣ ರಿವೀಲ್ ಆಗಿದೆ. ಬಿಎನ್ಎಸ್ನಲ್ಲಿ ಆತ್ಮಹತ್ಯೆ ಯತ್ನದ ಪ್ರಕರಣಗಳಲ್ಲಿ ಕೇಸ್ ದಾಖಲಿಸಿಕೊಳ್ಳುವುದಕ್ಕೆ ಅವಕಾಶ ಇರದ ಕಾರಣ ಟೆಕ್ಕಿಯನ್ನು ಕೌನ್ಸಿಲಿಂಗ್ ಮಾಡಿ ಬಿಟ್ಟು ಕಳಿಸಿಕೊಡಲು ಪೊಲೀಸರು ಮುಂದಾದರು.
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ 1,777 ಎಕೆರೆ ಭೂಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದ್ದು, ಸರ್ಕಾರದ ಕ್ರಮ ಖಂಡಿಸಿ ಈ ಭಾಗದ ರೈತರು (Farmers) ತಮ್ಮ ಜಮೀನು ಕೊಡೋದಿಲ್ಲ ಅಂತ ನಿರಂತರ 4 ವರ್ಷಗಳಿದ ಅನಿರ್ಧಾಷ್ಟವಧಿ ಧರಣಿ ನಡೆಸುತ್ತಿದ್ದಾರೆ.
ಇಂದು ಸಹ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ದೇವನಹಳ್ಳಿ ಶಾಸಕ ಕೆ.ಹೆಚ್ ಮುನಿಯಪ್ಪ (KH Muniyappa) ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನ ಮಾಡಿದ್ರು. ಅಂತೆಯೇ ಎರಡು ಬಸ್ಗಳ ಮೂಲಕ ಬೆಂಗಳೂರಿಗೆ ಹೊರಟಿದ್ದ ರೈತರ ಬಸ್ನ್ನ ಪೊಲೀಸರು ತಡೆಯೊಡ್ಡಿದ್ದರು. ಇದ್ರಿಂದ ರೈತರು ಹಾಗೂ ಪೊಲೀಸರು ನಡುವೆ ವಾಗ್ವಾದ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಬಾಂಬ್ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು
ಬೆಂಗಳೂರು/ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) 2024-25ರ ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಈ ವಿಮಾನ ನಿಲ್ದಾಣದ ಮೂಲಕ, 2024ರಲ್ಲಿ 41 ದಶಲಕ್ಷ ಪ್ರಯಾಣಿಕರು ಸಂಚರಿಸಿದ್ದು, 5,00,000 ಮೆಟ್ರಿಕ್ ಟನ್ ತೂಕದ ಸರಕುಗಳನ್ನು ಸಾಗಿಸಲಾಗಿದೆ.
2023ರಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 37.53 ದಶಲಕ್ಷ ಪ್ರಯಾಣಿಕರು ಸಂಚರಿಸಿದ್ದರು. 2024ರಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.11.6ರಷ್ಟು ಏರಿಕೆಯಾಗಿದ್ದು, 41.88 ದಶಲಕ್ಷ ತಲುಪಿದೆ. ಶೇ.11.6ರಷ್ಟು ಹೆಚ್ಚಳವಾಗಿದೆ. ದೇಶೀಯ ಪ್ರಯಾಣಿಕರ ಸಂಖ್ಯೆಯು ಶೇ.10ರಷ್ಟು ಬೆಳವಣಿಗೆಯಾಗಿ 36.05 ದಶಲಕ್ಷ ತಲುಪಿದ್ದರೆ, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯು ಶೇ.25ರಷ್ಟು ಹೆಚ್ಚಳವಾಗಿ, 5.83 ದಶಲಕ್ಷಕ್ಕೆ ಏರಿಕೆಯಾಗಿದೆ.ಇದನ್ನೂ ಓದಿ: ಕೊನೆಯಲ್ಲಿ ರಿಂಕು, ರಾಣಾ ಹೋರಾಟ ವ್ಯರ್ಥ – ಲಕ್ನೋಗೆ 4 ರನ್ ರೋಚಕ ಜಯ, ಕೆಕೆಆರ್ಗೆ ವಿರೋಚಿತ ಸೋಲು
ಈ ನಿಲ್ದಾಣದ ಮೂಲಕ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಲು, ಇಂಡಿಗೋ ವಿಮಾನಯಾನ ಸಂಸ್ಥೆಯು ತನ್ನ ಜಾಗತಿಕ ಜಾಲವನ್ನು ವಿಸ್ತರಿಸಿರುವುದು ಪ್ರಮುಖ ಕಾರಣವಾಗಿದೆ. ಜೊತೆಗೆ, ಬೆಂಗಳೂರಿನಿಂದ ಲಂಡನ್ ಹೀಥ್ರೂಗೆ ದೈನಂದಿನ ಹೆಚ್ಚುವರಿ ವಿಮಾನ ಹಾರಾಟ, ಕ್ಯಾಥೆ ಪೆಸಿಫಿಕ್, ಕೆಎಲ್ಎಂ, ಜಪಾನ್ ಏರ್ಲೈನ್ಸ್, ಕ್ವಾಂಟಾಸ್ ಸೇರಿದಂತೆ ಹಲವು ವಿದೇಶಿ ವಿಮಾನಯಾನ ಸಂಸ್ಥೆಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಒದಗಿಸುವ ವಿಮಾನ ಸೇವೆಯನ್ನು ಇನ್ನಷ್ಟು ಹೆಚ್ಚಿಸಿರುವುದು ಸಹ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯ ಹೆಚ್ಚಳಕ್ಕೆ ಕಾರಣವಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣ ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಸ್ಥಾನ ಪಡೆದುಕೊಂಡಿದೆ. 76 ದೇಶೀಯ ಮತ್ತು 33 ಅಂತಾರಾಷ್ಟ್ರೀಯ ತಾಣಗಳಿಗೆ ಬೆಂಗಳೂರಿನಿAದ ತಡೆರಹಿತ ವಿಮಾನ ಸೇವೆ ಲಭ್ಯವಿದ್ದು, ಇದೇ ವರ್ಷದ ಮೇ ತಿಂಗಳಿನಿಂದ ವಿಯೆಟ್ನಾಂನ ಹನೋಯಿ ನಗರಕ್ಕೆ ಆರಂಭವಾಗಲಿರುವ ವಿಮಾನ ಸೇವೆಯು 34ನೇ ಅಂತಾರಾಷ್ಟ್ರೀಯ ತಾಣವಾಗಿ ಹೊರಹೊಮ್ಮಲಿದೆ.
5,00,000 ಮೆಟ್ರಿಕ್ ಟನ್ ದಾಟಿದ ಸರಕು ಸಾಗಣೆ:
ಸರಕು ಸಾಗಣೆಯಲ್ಲಿಯೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದಾಖಲೆ ನಿರ್ಮಿಸಿದೆ. ಇದೇ ಮೊದಲ ಬಾರಿಗೆ, 5,00,000 ಮೆಟ್ರಿಕ್ ಟನ್ಗಿಂತ ಹೆಚ್ಚು ಸರಕು ಸಾಗಣೆ ಮಾಡುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. 2024-25ರ ಆರ್ಥಿಕ ವರ್ಷದಲ್ಲಿ ಒಟ್ಟು 502,480 ಮೆಟ್ರಿಕ್ ಟನ್ ಸರಕನ್ನು ಸಾಗಣೆ ಮಾಡಲಾಗಿದ್ದು, ವರ್ಷದಿಂದ ವರ್ಷಕ್ಕೆ ಗಮನಾರ್ಹವಾದ ಶೇ.14ರಷ್ಟು ಬೆಳವಣಿಗೆ ದಾಖಲಾಗುತ್ತಿದೆ.ಇದನ್ನೂ ಓದಿ: ‘ಡೆವಿಲ್’ ಸಿನಿಮಾ ತುಂಬಾ ಡಿಫರೆಂಟ್ ಆಗಿದೆ: ಅಪ್ಡೇಟ್ ಕೊಟ್ಟ ವಿನಯ್
ಈ ಪೈಕಿ, ಅಂತಾರಾಷ್ಟ್ರೀಯ ಸರಕು ಸಾಗಣೆಯಲ್ಲಿ ಶೇ.21ರಷ್ಟು ಏರಿಕೆಯಾಗಿದ್ದು, ಒಟ್ಟು 321,418 ಮೆಟ್ರಿಕ್ ಟನ್ ಸರಕು ಸಾಗಿಸಲಾಗಿದೆ. ದೇಶೀಯ ಸರಕು ಸಾಗಣೆಯಲ್ಲಿ ಶೇ.4%ರಷ್ಟು ಏರಿಕೆಯಾಗಿದ್ದು, 1,81,062 ಮೆಟ್ರಿಕ್ ಟನ್ ತಲುಪಿದೆ. ಸತತ ನಾಲ್ಕನೇ ವರ್ಷ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೊಳೆತುಹೋಗುವ ಪದಾರ್ಥಗಳ ರಫ್ತಿನಲ್ಲಿ ಭಾರತದ ನಂ.1 ವಿಮಾನ ನಿಲ್ದಾಣವಾಗಿ ಹೊರಹೊಮ್ಮುವ ಮೂಲಕ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಇದು ದೇಶದ ಕೃಷಿ ಪೂರೈಕೆ ಸರಪಳಿಯನ್ನು ಬಲಪಡಿಸುವಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಾತ್ರವನ್ನು ಒತ್ತಿ ಹೇಳುತ್ತದೆ. ಜೊತೆಗೆ, ವಿಮಾನ ನಿಲ್ದಾಣವು ಮಾವು ಮತ್ತು ಕೊತ್ತಂಬರಿ ಸೊಪ್ಪಿನ ರಫ್ತಿನಲ್ಲಿ ಮುನ್ನಡೆ ಸಾಧಿಸಿದ್ದು, ಸಿದ್ಧ ಉಡುಪುಗಳು, ಔಷಧಗಳು ಮತ್ತು ಯಂತ್ರೋಪಕರಣಗಳ ಭಾಗಗಳ ಸಾಗಣೆಯಲ್ಲೂ ಹೆಚ್ಚಳವಾಗಿದೆ. ಸರಕು ಸಾಗಣೆಗೆ ಮೀಸಲಾದ 12 ವಿಮಾನಯಾನ ಸಂಸ್ಥೆಗಳ ಮೂಲಕ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬೆಂಗಳೂರಿನಿಂದ ಸಿಂಗಾಪುರ, ಲಂಡನ್, ಫ್ರಾಂಕ್ಫರ್ಟ್, ಚಿಕಾಗೊ ಮತ್ತು ಮಸ್ಕತ್ನಂತಹ ಪ್ರಮುಖ ರಫ್ತು ಕೇಂದ್ರಿತ ನಗರಗಳನ್ನು ಸಂಪರ್ಕಿಸುತ್ತದೆ. ಶೆನ್ಜೆನ್, ಸಿಂಗಾಪುರ್, ಶಾಂಘೈ, ಹಾಂಗ್ ಕಾಂಗ್ ಮತ್ತು ಫ್ರಾಂಕ್ಫರ್ಟ್ ನಗರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಸರಕುಗಳು ಆಮದಾಗುವ ಪ್ರಮುಖ ತಾಣಗಳಾಗಿವೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಅವರು ಮಾತನಾಡಿ, ಬೆಂಗಳೂರು ಮತ್ತು ಭಾರತದಲ್ಲಿ ವಾಯುಯಾನದ ಬೆಳವಣಿಗೆಯ ಬಗ್ಗೆ ನಾವು ಉತ್ಸುಕರಾಗಿದ್ದೇವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು, ದಕ್ಷಿಣ ಮತ್ತು ಮಧ್ಯ ಭಾರತದ ಹೆಬ್ಬಾಗಿಲಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ವಾಯುಯಾನ ಪ್ರದೇಶ, ಲ್ಯಾಂಡ್ಸೈಡ್ ಮತ್ತು ಟರ್ಮಿನಲ್ ಸಾಮರ್ಥ್ಯಗಳ ವಿಸ್ತರಣೆಗೆ ಇನ್ನಷ್ಟು ಹೂಡಿಕೆ ಹೆಚ್ಚಿಸುವತ್ತ ಗಮನಹರಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ 17,000 ಕೋಟಿಗಿಂತಲೂ ಹೆಚ್ಚು ಹೂಡಿಕೆಯೊಂದಿಗೆ, ಈ ಪ್ರದೇಶದಲ್ಲಿ ಪ್ರಯಾಣಿಕರು ಮತ್ತು ಸರಕು ಸಾಗಣೆಯ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ನಾವು ಸಿದ್ಧರಾಗಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ: ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿಯ (Muslim Girl) ಪ್ರೇಮವಿವಾಹ ಕೇವಲ 15 ದಿನಕ್ಕೆ ಮುರಿದುಬಿದ್ದಿದೆ.
ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೈಲಪನಹಳ್ಳಿ ಗ್ರಾಮದ 23 ವರ್ಷದ ಫಸಿಹಾ ಹಾಗೂ ಇದೇ ಗ್ರಾಮದ 25 ವರ್ಷದ ನಾಗಾರ್ಜುನ ಇಬ್ಬರು ಪರಸ್ಪರ 2 ವರ್ಷಗಳಿಂದ ಪ್ರೀತಿ ಮಾಡಿ ಕಳೆದ ತಿಂಗಳು ಮಾರ್ಚ್ 23 ರಂದು ಪ್ರೇಮವಿವಾಹವಾಗಿದ್ರು. ಪ್ರೇಮ ವಿವಾಹಕ್ಕೆ (Love Marriage) ಯುವಕನ ಮನೆಯಲ್ಲಿ ಒಪ್ಪಿಗೆ ಇದ್ರೂ ಯುವತಿ ಮನೆಯಲ್ಲಿ ಒಪ್ಪಿಗೆ ಇರಲಿಲ್ಲ. ಹೀಗಾಗಿ ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರ ಮೊರೆ ಹೋಗಿದ್ರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಪೋಷಕರ ವಿರೋಧದ ನಡ್ವೆ ಹಿಂದೂ ಯುವಕ – ಮುಸ್ಲಿಂ ಯುವತಿ ಪ್ರೇಮ ವಿವಾಹ
ಇದೀಗ ಮದುವೆಯಾಗಿ 15 ದಿನ ಕಳೆಯೋದರೊಳಗೆ ಯುವತಿ ಫಸಿಹಾ ತಾಯಿ ಮನೆ ಸೇರಿಕೊಂಡಿದ್ದಾಳೆ. ತಾಯಿಗೆ ಅನಾರೋಗ್ಯ ಇದೆ ನನ್ನ ನೋವಲ್ಲೇ ಕೊರಗಿ ನೋವು ತಿನ್ನುತ್ತಾರೆ ಅನ್ನೋ ಕಾರಣ ನೀಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟು ತಾಯಿ ಮನೆ ಸೇರಿಕೊಂಡಿದ್ದಾಳೆ.
ಚಿಕ್ಕಬಳ್ಳಾಪುರ: ಸೈಡ್ ಪಿಕಪ್ ಹೆಸರಿನಲ್ಲಿ ನಮ್ಮ ಯಾತ್ರಿ ಹಾಗೂ ರ್ಯಾಪಿಡ್ ಚಾಲಕರಿಗೆ (Airport Taxi Drivers) ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಟ್ಯಾಕ್ಸಿಗಳನ್ನು ಪೊಲೀಸರು (Airport Police) ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಪ್ರಯಾಣಿಕರನ್ನು ಪಿಕಪ್ ಮಾಡಲು ಬಂದಿದ್ದ 20ಕ್ಕೂ ಅಧಿಕ ಟ್ಯಾಕ್ಸಿಗಳನ್ನ ವಶಕ್ಕೆ ಪಡೆದು ಕಿರುಕುಳ ನೀಡುತ್ತಿದ್ದಾರೆ. ನಿನ್ನೆ ಸಂಜೆಯಿಂದ ಟ್ಯಾಕ್ಸಿಗಳನ್ನ ಬಿಡದೇ ಕುರುಕುಳ ಕೊಡು್ತಿದ್ದಾರೆ. ಹಬ್ಬದ ದಿನವೂ ಟ್ಯಾಕ್ಸಿ ಬಿಡದೇ ಸತಾಯಿಸುತ್ತಿದ್ದಾರೆ, ಅಂತ ಠಾಣೆ ಎದುರೇ ಬೀಡುಬಿಟ್ಟಿರುವ ಟ್ಯಾಕ್ಸಿ ಚಾಲಕರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು | ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಮದರಸಾ ತೆರೆಯಲು ಡಿಸಿ ಅನುಮತಿ – ಗ್ರಾಮಸ್ಥರ ಆಕ್ರೋಶ
ನಿನ್ನೆ ಸಂಜೆ ಪಿಕಪ್ಗೆ ಬಂದಿದ್ದ ಟ್ಯಾಕ್ಸಿಗಳ ಕೀ ಕಿತ್ತುಕೊಂಡು ಕರ್ನಾಟಕ ಪ್ರವಾಸೋದ್ಯಮ ಟ್ಯಾಕ್ಸಿ ಚಾಲಕರೇ ಪೊಲೀಸರಿಗೆ ನೀಡಿದ್ದಾರೆ. ಅವರಿಗೆ ಬಾಡಿಗೆ ಸಿಕ್ಕಿಲ್ಲ ಅಂತ ನಮ್ಮ ಮೇಲೆ ಪ್ರಹಾರ ಮಾಡ್ತಿದ್ದಾರೆ. 2 ದಿನಗಳ ಕಾಲ ಟ್ಯಾಕ್ಸಿ ನಿಲ್ಲಿಸಿದ್ರೆ ನಮ್ಮ ಜೀವನ ಹೇಗೆ ನಡೆಯುತ್ತೆ? ನಮಗೆ ನ್ಯಾಯ ಕೊಡಿಸಿ ಅಂತ ಪೊಲೀಸ್ ಠಾಣೆ ಮುಂದೆ ಟ್ಯಾಕ್ಸಿ ಚಾಲಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ: ಪರಮೇಶ್ವರ್