Tag: Chikkamagalur

  • 4 ಮೊಟ್ಟೆ ನುಂಗಿ ಓಡಾಡಲು ಸಾಧ್ಯವಾಗದೇ ಬಿದ್ದ ನಾಗರಹಾವು – ವಿಡಿಯೋ ನೋಡಿ

    4 ಮೊಟ್ಟೆ ನುಂಗಿ ಓಡಾಡಲು ಸಾಧ್ಯವಾಗದೇ ಬಿದ್ದ ನಾಗರಹಾವು – ವಿಡಿಯೋ ನೋಡಿ

    ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದಲ್ಲಿ ಮರಿ ನಾಗರಹಾವೊಂದು ನಾಲ್ಕು ಮೊಟ್ಟೆಗಳನ್ನು ನುಂಗಿ ಅಸ್ವಸ್ಥಗೊಂಡಿದೆ.

    ನಾಗರಹಾವಿನ ಮರಿಯೊಂದು ನಾಲ್ಕು ಮೊಟ್ಟೆ ನುಂಗಿ ಅಸ್ವಸ್ಥಗೊಂಡು ಓಡಾಡಲು ಸಾಧ್ಯವಾಗದೇ ಮನೆಯ ಪಕ್ಕದಲ್ಲಿ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಉರಗ ತಜ್ಞರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಉರಗ ತಜ್ಞ ಆರೀಫ್ ಬಂದು ಹಾವಿನ ಮರಿಗೆ ಚಿಕಿತ್ಸೆ ನೀಡಿದ್ದು, ನಾಗರಹಾವನ್ನ ರಕ್ಷಣೆ ಮಾಡಿದ್ದಾರೆ. ಚಿಕಿತ್ಸೆ ನೀಡುತ್ತಿದ್ದಂತೆ ನಾಗರ ಹಾವು ನುಂಗಿದ್ದ ನಾಲ್ಕು ಮೊಟ್ಟೆಗಳನ್ನು ಒಂದೊಂದಾಗಿ ಹೊರ ಹಾಕಿದೆ. ಹಾವಿನ ಮರಿ ಮೊಟ್ಟೆಗಳನ್ನು ಹೊರಹಾಕುತ್ತಿದ್ದುದ್ದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾರೆ.

    https://www.youtube.com/watch?v=pzbiBqotuWY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕದಂಕಕ್ಕೆ ಬಿತ್ತು ಪಿಕಪ್ ವಾಹನ – 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    ಕದಂಕಕ್ಕೆ ಬಿತ್ತು ಪಿಕಪ್ ವಾಹನ – 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    ಚಿಕ್ಕಮಗಳೂರು: ಕಂದಕಕ್ಕೆ ಪಿಕಪ್ ವಾಹನ ಬಿದ್ದು ಎಂಟು ಮಂದಿಗೆ ಗಾಯಗಳಾಗಿ, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಮಗಳೂರು ಮೂಡಿಗೆರೆಯ ಮಲಯ ಮಾರುತ ತಿರುವಿನಲ್ಲಿ ನಡೆದಿದೆ.

    ಭಾನುವಾರ ರಾತ್ರಿ ಸುಮಾರು 8.30ಕ್ಕೆ ಪಿಕಪ್ ವಾಹನ ಕಂದಕ್ಕೆ ಬಿದ್ದಿದೆ. ಬೆಳ್ತಂಗಡಿ ಮೂಲದ ಬಿಳ್ಳದಾಳ ಗ್ರಾಮದ ಪಿಕಪ್ ವಾಹನ ಎಂದು ಹೇಳಲಾಗುತ್ತಿದೆ. ಹಾಸನದ ಪುರದಮ್ಮ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೋಗುವಾಗ ಈ ಅಪಘಾತ ಸಂಭವಿಸಿದೆ.

    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸಣ್ಣಪುಟ್ಟ ಗಾಯಾಳುಗಳಿಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಿಕಪ್ ವಾಹನದ ಸ್ಟೇರಿಂಗ್ ಕಟ್ಟಾಗಿ ವಾಹನ ಕಂದಕ್ಕೆ ಉರುಳಿದ್ದು, ಸದ್ಯ ಭಾರೀ ದುರಂತ ತಪ್ಪಿದೆ.

    ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲುಷಿತಗೊಂಡಿದೆ ಮಾಣಿಕ್ಯಧಾರ ನೀರು- ಪವಿತ್ರ ನೀರಿನಲ್ಲಿ ಸೇರುತ್ತಿದೆ ಪ್ರವಾಸಿಗರ ಮಲ, ಮೂತ್ರ

    ಕಲುಷಿತಗೊಂಡಿದೆ ಮಾಣಿಕ್ಯಧಾರ ನೀರು- ಪವಿತ್ರ ನೀರಿನಲ್ಲಿ ಸೇರುತ್ತಿದೆ ಪ್ರವಾಸಿಗರ ಮಲ, ಮೂತ್ರ

    ಚಿಕ್ಕಮಗಳೂರು: ಪ್ರವಾಸಿಗರ ಸ್ವರ್ಗವೆನಿಸಿಕೊಂಡಿರುವ ಚಿಕ್ಕಮಗಳೂರಲ್ಲಿ ಹತ್ತಾರು ಪ್ರವಾಸಿ ತಾಣಗಳಿದ್ದು, ಅದರಲ್ಲೂ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತ ಪ್ರವಾಸಿಗರ ಫೆವರೇಟ್ ಸ್ಪಾಟ್ ಆಗಿದೆ. ನಿತ್ಯವೂ ಆಗಮಿಸುವ ನೂರಾರು ಪ್ರವಾಸಿಗರು ಇಲ್ಲಿನ ಜಲಧಾರೆಯಲ್ಲಿ ಮಿಂದೆದ್ದು, ಈ ನೀರನ್ನು ಕುಡಿದು ಪಾವನರಾಗುತ್ತೀವಿ ಎಂದುಕೊಂಡಿದ್ದಾರೆ. ಆದರೆ ಈ ನೀರು ಕುಡಿಯೋಕಲ್ಲ, ಸ್ನಾನಕ್ಕೂ ಯೋಗ್ಯವಲ್ಲದಷ್ಟು ಮಲೀನವಾಗಿದೆ.

    ಕಾಫಿನಾಡು ಚಿಕ್ಕಮಗಳೂರಿನ ಬಾಬಬುಡನ್‍ಗಿರಿಯ ಸೊಬಗನ್ನು ನೋಡುವುದಕ್ಕೆ ಪ್ರತಿದಿನ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇಲ್ಲಿ ಇರುವ ಚಿಕ್ಕ ತೊರೆಯೇ ಮಾಣಿಕ್ಯಧಾರ. ಈ ನೀರನ್ನು ಕುಡಿದು ಅದರಲ್ಲಿ ಸ್ನಾನ ಮಾಡಿದರೆ, ಜೀವನ ಪಾವನವಾಗುತ್ತೆ ಎಂದು ಅದರಲ್ಲಿ ಸ್ನಾನ ಮಾಡುತ್ತಾರೆ. ಆದರೆ ಆ ನೀರು ಈಗ ಪವಿತ್ರವಾಗಿಲ್ಲ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಈ ಜಲಪಾತದ ನೀರನ್ನು ಸಂಶೋಧನೆಗೆ ಒಳಪಡಿಸಿದಾಗ, ನೀರಿನಲ್ಲಿ ಮನುಷ್ಯರ ಮಲ, ಮೂತ್ರದಂಶದ ಎಫ್-ಕೊಲಿಫಾರಂ ಪತ್ತೆಯಾಗಿದ್ದು, ಕುಡಿಯಲು ಯೋಗ್ಯವಲ್ಲ ಅಂತಾ ಹೇಳಿದೆ.

    ಈ ಮಾಣಿಕ್ಯಧಾರಕ್ಕೆ ಬರುವ ಪ್ರವಾಸಿಗರು, ಜಲಪಾತ ಹುಟ್ಟೋ ಜಾಗದಲ್ಲಿಯೇ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದು, ಹಾಗಾಗಿ ನೀರಿನಲ್ಲಿ ಎಫ್-ಕೊಲಿಫಾರಂ ಬ್ಯಾಕ್ಟೀರಿಯಾ ಇರುವುದು ಪತ್ತೆಯಾಗಿದೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಶ್ಯಾಂಪು, ಸೋಪು ಇತ್ಯಾದಿ ರಾಸಾಯನಿಕಗಳನ್ನು ಬಳಸಿ ಸ್ನಾನ ಮಾಡೋದರ ಜೊತೆಗೆ ಬಟ್ಟೆಯನ್ನು ಬಿಸಾಡಿ ಹೋಗುವುದರಿಂದ, ನೀರು ಕಲುಷಿತಗೊಳ್ಳೋದರ ಜೊತೆ ಪರಿಸರವೂ ಹಾಳಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನವಾಗಿಲ್ಲ ಅಂತ ಸ್ಥಳೀಯರು ಹೇಳಿದ್ದಾರೆ.

    ಪ್ರವಾಸಿಗರ ನೆಚ್ಚಿನ ತಾಣವಾಗಿದ್ದ ಮಾಣಿಕ್ಯಧಾರ ಇದೀಗ ಮಾಲಿನ್ಯ ಭರಿತವಾಗಿರೋದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನಾದರೂ ಜಿಲ್ಲಾಡಳಿತ ಇತ್ತ ಗಮನ ಹರಿಸಿ ಮಾಣಿಕ್ಯಧಾರದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಜೊತೆಗೆ ಪಾವಿತ್ರ್ಯತೆಯನ್ನು ಉಳಿಸಲು ಕ್ರಮಕೈಗೊಳ್ಳಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ ಕೇರಳದ ಎಂಜಿನಿಯರ್ ನಾಪತ್ತೆ

    ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ ಕೇರಳದ ಎಂಜಿನಿಯರ್ ನಾಪತ್ತೆ

    ಚಿಕ್ಕಮಗಳೂರು: ಕೇರಳದಿಂದ ಪ್ರವಾಸಕ್ಕೆ ಬಂದಿದ್ದ ಎಂಜಿನಿಯರ್ ನಾಪತ್ತೆಯಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರದಲ್ಲಿ ನಡೆದಿದೆ.

    ಕೇರಳದ ಕ್ಯಾಲಿಕಟ್‍ನ ಖಾಸಗಿ ಜಾಹೀರಾತು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದರು. ಸದ್ಯ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ತುಂಗಾ ಸೇತುವೆ ಮೇಲೆ ಸಂದೀಪ್ ಬೈಕ್ ಪತ್ತೆಯಾಗಿದೆ.

    ಬೈಕಿನಲ್ಲಿದ್ದ ಬ್ಯಾಗ್‍ಗಳನ್ನ ಚೆಕ್ ಮಾಡಿದಾಗ ಅದರಲ್ಲಿದ್ದ ಐಡಿ ಕಾರ್ಡ್‍ನಿಂದ ಸಂದೀಪ್ ಬಗ್ಗೆ ಮಾಹಿತಿ ದೊರೆತಿದೆ. ನದಿ ದಡದ ದಂಡೆಯ ಮೇಲೆ ವಾಚ್, ಟವೆಲ್ ಕೂಡ ಪತ್ತೆಯಾಗಿದೆ. ಟ್ರಕ್ಕಿಂಗ್ ಸಲುವಾಗಿ ಬಂದಿದ್ದ ಅವರು ಭಾನುವಾರದವರೆಗೂ ಸ್ನೇಹಿತರ ಸಂಪರ್ಕದಲ್ಲಿದ್ದರು. ಆದರೆ ಈಗ ಅವರ ಸುಳಿವಿಲ್ಲ.

    ಈ ಬಗ್ಗೆ ಕೇರಳದ ನಲ್ಲಳಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯ ದೂರು ದಾಖಲಾಗಿದ್ದು, ಇಂದು ಕೇರಳ ಪೊಲೀಸರು ತನಿಖೆಯ ಸಲುವಾಗಿ ಕೊಪ್ಪಾಗೆ ಬರುವ ಸಾಧ್ಯತೆ ಇದೆ. ಸದ್ಯ ಈಗಾಗಲೇ ಕೊಪ್ಪ ಪೊಲೀಸರು ನಾಪತ್ತೆಯಾಗಿರುವ ಸಂದೀಪ್‍ಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಚಿಕ್ಕಮಗ್ಳೂರಿನಲ್ಲಿ ಮಗುವಿನಂತೆ ವರ್ತಿಸುತ್ತಿದೆ ಕಾಡಾನೆ

    ಚಿಕ್ಕಮಗ್ಳೂರಿನಲ್ಲಿ ಮಗುವಿನಂತೆ ವರ್ತಿಸುತ್ತಿದೆ ಕಾಡಾನೆ

    ಚಿಕ್ಕಮಗಳೂರು: ಕಳೆದೊಂದು ವಾರದಿಂದ ರಾಜ್ಯಾದ್ಯಂತ ಅಲ್ಲಲ್ಲೇ ಕಾಡಾನೆಗಳ ಹಿಂಡು ನಿರಂತರ ದಾಳಿ ಮಾಡ್ತಿವೆ. ಆದರೆ ಕಾಫಿನಾಡಿನಲ್ಲಿರುವ ಇಂತಹ ಗಜರಾಜ ಇದ್ದರೆ ಅಧಿಕಾರಿಗಳಿಗೆ ತಲೆನೋವಿಲ್ಲ, ಸ್ಥಳಿಯರಿಗೆ ಆತಂಕವಿಲ್ಲ, ಬೆಳೆಗಳು ಹಾಳಾಗೋದಿಲ್ಲ. ನೋಡೋಕೆ ದೈತ್ಯಾಕಾರದ ಈ ಕಾಡಾನೆ ಮಗುವಿನಂತೆ ವರ್ತಿಸುತ್ತಿದ್ದು ಅಧಿಕಾರಿಗಳ ದೃಷ್ಠಿಯಲ್ಲಿ ಗುಡ್ ಎಲಿಫೆಂಟ್ ಆಗಿದೆ.

    ಚಿಕ್ಕಮಗಳೂರಿನ ಮುತ್ತೋಡಿ ದಟ್ಟಾರಣ್ಯದಲ್ಲಿ ವಾಸ ಮಾಡುತ್ತಿರುವ ಈ ಕಾಡಾಣೆ ತಾನಾಯ್ತ, ತನ್ನ ಆಹಾರವಾಯ್ತೆಂದು ಬದುಕುತ್ತಿದೆ. ಈ ಆನೆಯ ಪಕ್ಕದಲ್ಲೇ ಜನ ಹಾಗೂ ವಾಹನಗಳು ಓಡಾಡಿದರು ಇದು ಏನೂ ಮಾಡುವುದಿಲ್ಲವಂತೆ.

    ಮುತ್ತೋಡಿಯ ಅರಣ್ಯದ ಮಧ್ಯ ಭಾಗದಲ್ಲಿರೋ ಕಳ್ಳ ಭೇಟಿ ನಿಗ್ರಹ ದಳದ ವಸತಿ ಹಾಗೂ 1924ರಲ್ಲಿ ಬ್ರಿಟಿಷರು ನಿರ್ಮಿಸಿದ ಅತಿಥಿ ಗೃಹದ ಪಕ್ಕದಲ್ಲೇ ನಿಂತು ಗಂಟೆಗಟ್ಟಲೇ ಪೋಸ್ ನೀಡಿ ಶಾಂತಿಯಿಂದ ವರ್ತಿಸುತ್ತಿರೋದು ಆಶ್ಚರ್ಯ ತಂದಿದೆ.

    ಕಾಡಾನೆಗಳು ಅಪಾಯಕಾರಿ ಎಂಬ ಮಾತಿಗೆ ವಿರುದ್ಧವಾಗಿರುವ ಈ ಗಜರಾಜ ಮಗುವಿನಂತೆ ಬಂದು ಹೊಟ್ಟೆ ತುಂಬಿದ ಮೇಲೆ ಸೈಲೆಂಟಾಗಿ ವಾಪಸ್ಸಾಗುತ್ತಿದ್ದು, ಅಧಿಕಾರಿಗಳಲ್ಲೇ ಆಶ್ಚರ್ಯ ತಂದಿದೆ.

    https://www.youtube.com/watch?v=7BLPaWBAVlE&feature=youtu.be

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಗರಹಾವನ್ನು ಅಟ್ಟಿಸಿಕೊಂಡು ಬಂದ 13 ಅಡಿ ಉದ್ದದ ಕಾಳಿಂಗ- 1 ವಾರ ಅಡಿಕೆ ಮರದೊಳಗೆ ವಾಸ

    ನಾಗರಹಾವನ್ನು ಅಟ್ಟಿಸಿಕೊಂಡು ಬಂದ 13 ಅಡಿ ಉದ್ದದ ಕಾಳಿಂಗ- 1 ವಾರ ಅಡಿಕೆ ಮರದೊಳಗೆ ವಾಸ

    ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಸೋಮ್ಲಾಪುರದ ಗ್ರಾಮದಲ್ಲಿ ನಾಗರಹಾವನ್ನು ಅಟ್ಟಿಸಿಕೊಂಡು ಬಂದು ಅದು ಕೈತಪ್ಪಿದರಿಂದ 13 ಅಡಿ ಉದ್ದದ ಕಾಳಿಂಗ ಸರ್ಪ ಕಳೆದೊಂದು ವಾರದಿಂದ ಅಡಿಕೆ ಮರದ ಲಾಟಿನಲ್ಲೇ ವಾಸವಾಗಿದೆ.

    ಚೈತ್ರಕುಮಾರ್ ಅವರ ಮನೆ ಮುಂದೆ ಅಡಿಕೆ ಮರಗಳನ್ನು ಕಡಿದು ಲಾಟು ಹಾಕಿದ್ದಾರೆ. ಕಳೆದೊಂದು ವಾರದ ಹಿಂದೆ ಕಾಳಿಂಗ ಸರ್ಪವೊಂದು ನಾಗರಹಾವನ್ನು ಅಟ್ಟಿಸಿಕೊಂಡು ಬಂದಿತ್ತು. ಈ ವೇಳೆ ನಾಗರಹಾವು ಅಡಿಕೆ ಮರಗಳ ಮಧ್ಯೆ ಸೇರಿತ್ತು. ಆಗ ಅಡಿಕೆ ಮರಗಳೊಳಗೆ ಹೋದ ಕಾಳಿಂಗ ಒಂದು ವಾರದಿಂದ ಅಲ್ಲೇ ವಾಸವಿದೆ.

    ಇದನ್ನು ನೋಡಿದ ಮನೆಯವರು ಹಾಗೂ ಸ್ಥಳೀಯರು ನಾಗರಹಾವು ಹಾಗೂ ಕಾಳಿಂಗ ಎರಡೂ ಒಂದೇ ಜಾಗದಲ್ಲಿ ಬಹಳ ದಿನ ಇರೋದಿಲ್ಲ, ಹೋಗಿವೆ ಎಂದು ಸುಮ್ಮನಾಗಿದರು. ಆದರೆ ಸೋಮವಾರ ಹೊರಬಂದ ಕಾಳಿಂಗನನ್ನು ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

    ಗ್ರಾಮಸ್ಥರು ಕೂಡಲೇ ಸ್ನೇಕ್ ಹರೀಂದ್ರಾರನ್ನು ಕರೆಸಿ ಕಾಳಿಂಗನನ್ನು ಸೆರೆಹಿಡಿದಿದ್ದಾರೆ. ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಒಂದು ಗಂಟೆಯ ಕಾರ್ಯಚರಣೆ ನಡೆಸಿ ಸೆರೆ ಹಿಡಿದ ಕಾಳಿಂಗನನ್ನು ಸ್ಥಳೀಯ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸ್ನಾನ ಮಾಡುವಾಗ ಫೋಟೋ ಕ್ಲಿಕ್ಕಿಸಿ ಸೆಕ್ಸ್ ಗೆ ಒತ್ತಾಯ- ವ್ಯಕ್ತಿ ರುಂಡ, ಮುಂಡ ಕತ್ತರಿಸಿದ ಪೋಷಕರು

    ಸ್ನಾನ ಮಾಡುವಾಗ ಫೋಟೋ ಕ್ಲಿಕ್ಕಿಸಿ ಸೆಕ್ಸ್ ಗೆ ಒತ್ತಾಯ- ವ್ಯಕ್ತಿ ರುಂಡ, ಮುಂಡ ಕತ್ತರಿಸಿದ ಪೋಷಕರು

    ಚಿಕ್ಕಮಗಳೂರು: ಪಕ್ಕದ ಮನೆಯವರ ಸ್ನೇಹ ಮಾಡಿಕೊಂಡು ಆಕೆ ಸ್ನಾನ ಮಾಡುವಾಗ ಫೋಟೋ ಕ್ಲಿಕ್ಕಿಸಿ ದೈಹಿಕ ಸಂಪರ್ಕ ಬೆಳೆಸು ಎಂದು ಪೀಡಿಸುತ್ತಿದ್ದವ ಕೊಲೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

    ರುದ್ರಸ್ವಾಮಿ(32) ಕೊಲೆಯಾದ ದುರ್ದೈವಿ. ರುದ್ರಸ್ವಾಮಿ ಮೂಲತಃ ದಾವಣಗೆರೆಯವನಾಗಿದ್ದು, ಬೆಂಗಳೂರಲ್ಲಿ ಐಶ್ವರ್ಯ ಕನ್ಸಲ್ಟೆನ್ಸ್ ಇಟ್ಟುಕೊಂಡು ಖಾಸಗಿ ಕೆಲಸ ಕೊಡಿಸುತ್ತಿದ್ದ. ನೆರೆಯ ಆಶಾ ಎಂಬವಳ ಸ್ನೇಹ ಮಾಡಿಕೊಂಡು, ಆಕೆ ಸ್ನಾನ ಮಾಡುವಾಗ ಫೋಟೋ ತೆಗೆದುಕೊಂಡು ಹಣ ಹಾಗೂ ದೈಹಿಕ ಸುಖಕ್ಕೆ ಪೀಡಿಸುತ್ತಿದ್ದ.

    ಊರಿಗೆ ಬಂದ ಆಶಾ ಈ ವಿಷಯವನ್ನು ಹೆತ್ತವರಿಗೆ ಮುಟ್ಟಿಸಿದ್ದಳು. ಅಪ್ಪನ ಮಾತು ಕೇಳಿ ಆಶಾ ರುದ್ರಸ್ವಾಮಿಯನ್ನು ಊರಿಗೆ ಬಾ ಅಂತ ಕರೆದಳು. ಆಗ ರುದ್ರಸ್ವಾಮಿ ಶಾಂತನಾಗಿ ದಾವಣಗೆರೆಯತ್ತ ಕಾರಿನಲ್ಲಿ ಹೊರಟ್ಟನು. ರುದ್ರನ ದಾರಿ ಕಾದಿದ್ದ ಆಶಾ ಕುಟುಂಬ ಬಂದವನನ್ನು ಎಳನೀರು ಕುಡಿಯೋಕೆಂದು ತೋಟಕ್ಕೆ ಕರೆತಂದಿದ್ದಾರೆ. ಆತ ಗಳದಿಂದ ಎಳನೀರು ಕೀಳುವಾಗ ಆಶಾ, ಅಪ್ಪ-ಅಮ್ಮ ಹಾಗೂ ಸಹೋದರ ಸೇರಿ ಆತನನ್ನು ಕೊಲೆ ಮಾಡಿದ್ದಾರೆ.

    ಈ ಕೊಲೆಯನ್ನು ಮುಚ್ಚಿ ಹಾಕೋಕೆ ಮತ್ತೊಂದು ಧೈರ್ಯ ಮಾಡಿದ್ದರು. ಸತ್ತ ಕುರಿ ಕತ್ತು ಸೀಳುವಂತೆ ಸತ್ತು ಬಿದ್ದವನ ರುಂಡ ಕತ್ತರಿಸಿದ್ದರು. ರುಂಡ ಹಾಗೂ ಮುಂಡವನ್ನು ಬೇರೆ-ಬೇರೆ ಚೀಲಕ್ಕೆ ಹಾಕಿ ಎರಡೂ ಚೀಲಕ್ಕೂ ಕಲ್ಲು ತುಂಬಿದ್ದರು. ರುದ್ರಸ್ವಾಮಿ ಬಂದಿದ್ದ ಕಾರಿನ ಡಿಕ್ಕಿಗೆ ರುಂಡ-ಮುಂಡ ಹಾಕಿಕೊಂಡು ಬಂದು, ಚನ್ನಗಿರಿಯಿಂದ 80 ಕಿ.ಮೀ. ದೂರದ ಅಜ್ಜಂಪುರದ ಸಮೀಪದ ಬುಕ್ಕರಾಯನಕೆರೆಗೆ ತಂದು ರುಂಡವನ್ನು ಒಂದೆಡೆ, ಮುಂಡವನ್ನು ಒಂದೆಡೆ ಎಸೆದಿದ್ದಾರೆ. ಕಾರನ್ನು ನೀಲಗಿರಿ ಪ್ಲಾಂಟೇಷನ್‍ನಲ್ಲಿ ಬಿಟ್ಟು ಹೋಗಿದ್ದಾರೆ.

    ಮೃತನ ತೋಳಿನ ಮೇಲಿದ್ದ ವಾಣಿ ಮತ್ತು ಐಶ್ವರ್ಯ ಎಂಬ ಹೆಸರು ಕಾರಿನೊಳಗಿದ್ದ ರಕ್ತದಮಯ ಹಾಗೂ ನಂಬರ್ ಪ್ಲೇಟ್‍ನಿಂದ ಮೃತನ ಗುರುತು ಸಿಕ್ಕಿದ್ದು, ಆಶಾ ಸೇರಿದಂತೆ ತಂದೆ-ತಮ್ಮ ಅಂದರ್ ಆಗಿದರೆ, ಅಮ್ಮ ಮಾತ್ರ ನಾಪತ್ತೆಯಾಗಿದ್ದಾಳೆ. ಮೃತ ರುದ್ರಸ್ವಾಮಿ ಹಾಗು ಆಶಾಳಿಗೂ ಸಂಬಂಧವಿತ್ತು. ಆಶಾ ಕುಟುಂಬ ಆರ್ಥಿಕವಾಗಿ ಸಬಲರಾಗಿದ್ದೇ ರುದ್ರಸ್ವಾಮಿಯಿಂದ ಅಂತೆಲ್ಲಾ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಯಾವುದಕ್ಕೂ ಸಾಕ್ಷಿ ಇಲ್ಲ. ಆಶಾ ಪೊಲೀಸರ ಬಳಿ ಹೇಳಿರೋ ಹೇಳಿಕೆಗಳು ಸತ್ಯವೋ ಅಥವಾ ಪೊಲೀಸರಿಗೂ ದಾರಿ ತಪ್ಪಿಸಿದ್ದಾಳೋ ಗೊತ್ತಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಶಾಲಾ ಬಸ್ ಪಲ್ಟಿ- ಹೈಸ್ಕೂಲ್ ವಿದ್ಯಾರ್ಥಿನಿ ದುರ್ಮರಣ

    ಶಾಲಾ ಬಸ್ ಪಲ್ಟಿ- ಹೈಸ್ಕೂಲ್ ವಿದ್ಯಾರ್ಥಿನಿ ದುರ್ಮರಣ

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಬಳಿ ನಡೆದಿದೆ.

    ದಿಯಾ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ. ದಿಯಾ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಪಲ್ಟಿಯಾದ ಬಸ್ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಗೆ ಸೇರಿದ್ದು ಎಂದು ತಿಳಿದುಬಂದಿದೆ.

    ವಿದ್ಯಾರ್ಥಿಗಳು ಪ್ರವಾಸದ ಹಿನ್ನೆಲೆ ಶೃಂಗೇರಿಗೆ ಆಗಮಿಸಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳು ವಿದ್ಯಾರ್ಥಿಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸದ್ಯ ಈ ಬಗ್ಗೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಾವು-ಬದುಕಿನ ಹೋರಾಟ ನಡೆಸ್ತಿದ್ದ ಹಸುವಿಗೆ ಯುವಕರಿಂದ ಸಹಾಯ

    ಸಾವು-ಬದುಕಿನ ಹೋರಾಟ ನಡೆಸ್ತಿದ್ದ ಹಸುವಿಗೆ ಯುವಕರಿಂದ ಸಹಾಯ

    ಚಿಕ್ಕಮಗಳೂರು: ಅಪಘಾತಕ್ಕೀಡಾಗಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಹಸುವೊಂದಕ್ಕೆ ಯುವಕರು ತಾತ್ಕಾಲಿಕ ಶೆಡ್ ನಿರ್ಮಿಸಿ ಚಿಕಿತ್ಸೆ ನೀಡಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನ ರೇಣುಕಾ ನಗರದಲ್ಲಿ ಅಪಘಾತಕ್ಕೀಡಾದ ಹಸುವೊಂದು ಮೇಲೇಳಲಾಗದೆ ನರಳುತ್ತಿತ್ತು. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂರು ದಿನಗಳಿಂದ ಹಸುವಿನ ಸ್ಥಿತಿ ಹೀಗೆ ಇದ್ದರೂ ಯಾರೋಬ್ಬರು ಕೂಡ ಹಸುವಿನ ನೆರವಿಗೆ ಮುಂದಾಗಿರಲಿಲ್ಲ.

    ಹಸುವಿನ ಮಾಲೀಕರು ಕೂಡ ಬಂದಿರಲಿಲ್ಲ. ಇದನ್ನು ಗಮನಿಸಿದ ಸ್ಥಳೀಯರು ನಾಗರಾಜ್ ಭಟ್, ಅನ್ವರ್, ಜಾರ್ಜ್ ಹಾಗೂ ಸ್ಥಳೀಯ ಯುವಕರು ತಾತ್ಕಾಲಿಕ ಶೆಡ್ ನಿರ್ಮಿಸಿ ಹಸುವಿನ ಚಿಕಿತ್ಸೆ ನೀಡಿ, ಪಶು ವೈದ್ಯರಿಗೆ ವಿಷಯ ಮುಟ್ಟಿಸಿದ್ದಾರೆ.

    ಸದ್ಯ ಸ್ಥಳಕ್ಕೆ ಬಂದ ಪಶು ವೈದ್ಯರು ಹಸುವಿಗೆ ಚುಚ್ಚು ಮದ್ದು ನೀಡಿ, ಹಸುವನ್ನು ರಕ್ಷಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬಿಂಡಿಗ ದೇವಿರಮ್ಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು

    ಬಿಂಡಿಗ ದೇವಿರಮ್ಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು

    ಚಿಕ್ಕಮಗಳೂರು: ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಜಿಲ್ಲೆಯ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗ ದೇವಿರಮ್ಮ ದೇಗುಲಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ.

    ಚಂದ್ರದ್ರೋಣ ಪರ್ವತ ಶ್ರೇಣಿಗೆ ಹೊಂದಿಕೊಂಡಿರುವ ಬಿಂಡಿಗ ದೇವಿರಮ್ಮ ಬೆಟ್ಟವು 3 ಸಾವಿರ ಅಡಿ ಎತ್ತರವಿದ್ದು, ಜಿಲ್ಲೆ, ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಚಿಕ್ಕಮಗಳೂರು ನಗರ ಸೇರಿದಂತೆ ಮಲ್ಲೇನಹಳ್ಳಿಯಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಒದಗಿಸಲಾಗಿದೆ.

    ವಿಶೇಷತೆ ಏನು?:
    ಮಲ್ಲೇನಹಳ್ಳಿ ಸಮೀಪದ ಬಿಂಡಿಗ ದೇವಿರಮ್ಮ ದೀಪೋತ್ಸವ ದೀಪಾವಳಿಯಂದು ನಡೆಯುತ್ತದೆ. ಅಂದು ದೀಪ ಹಚ್ಚುವುದು, ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ವರ್ಷಪೂರ್ತಿ ತಣ್ಣಗೆ ಇರುವ ಈ ಬೆಟ್ಟವನ್ನು ಏರಲು ಮಧ್ಯರಾತ್ರಿಯಿಂದಲೇ ಭಕ್ತರು ಸಕಲ ಸಿದ್ಧತೆ ಮಾಡಿಕೊಂಡಿರುತ್ತಾರೆ. ಬೆಟ್ಟದಲ್ಲಿ ಕಡಿದಾದ ಅಂಕು ಡೊಂಕಿನ ಹಾದಿಯಿದ್ದು, ಸಾಲು-ಸಾಲಾಗಿ ಜನರು ಬೆಟ್ಟ ಹತ್ತುತ್ತಾರೆ.

    ಮಳೆ, ಚಳಿ, ಗಾಳಿಯನ್ನು ಲೆಕ್ಕಿಸದೇ ಬೆಟ್ಟವೇರಿ, ದೇವಿಯ ದರ್ಶನ ಪಡೆದು ಧನ್ಯರಾಗುತ್ತಾರೆ. ಬೆಟ್ಟದ ಕೆಳಭಾಗದಲ್ಲಿ ದೇವಿರಮ್ಮ ದೇವಾಲಯವಿದ್ದು, ಪ್ರತಿ ದೀಪಾವಳಿ ದಿನದಂದು ಉತ್ಸವ ಮೂರ್ತಿಯನ್ನು ಬೆಟ್ಟಕ್ಕೆ ತಂದು ಇಡಲಾಗುತ್ತದೆ. ಇಲ್ಲಿಗೆ ಆಗಮಿಸುವ ಭಕ್ತರು ದೇವಿ ಪೂಜೆಯಲ್ಲಿ ಭಾಗವಹಿಸಿ, ವಿಶ್ರಾಂತಿ ಪಡೆದು ಮತ್ತೆ ಕೆಳಗೆ ಇಳಿಯುತ್ತಾರೆ. ಬೆಟ್ಟ ಏರುವುದು ಎಷ್ಟು ಕಷ್ಟವೋ ಅಷ್ಟೇ ಪ್ರಮಾಣದಲ್ಲಿ ಇಳಿಯುವುದೂ ಸಾಹಸವೇ ಆಗಿದೆ.

    ರಾಜ್ಯ ಸೇರಿದಂತೆ, ನೆರೆಯ ರಾಜ್ಯಗಳಿಂದ ಅನೇಕ ಭಕ್ತರು ಇಲ್ಲಿಗೆ ಬರುತ್ತಾರೆ. ದಣಿವು, ಆಯಾಸವನ್ನು ಲೆಕ್ಕಿಸದೇ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯುತ್ತಾರೆ. ಬೆಟ್ಟದ ಮೇಲೆ ಅಥವಾ ಅಡಿಯಲ್ಲಿ ನಿಂತು ನೋಡಿದರೆ, ಬೆಟ್ಟ ಏರುವ ದೃಶ್ಯವು ಇರುವೆಗಳು ಸಾಲಾಗಿ ಹರಿದು ಹೋಗುತ್ತಿರುವಂತೆ ಕಾಣುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಭಕ್ತರು ಬರುವುದರಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗುತ್ತದೆ.

    ಬಿಂಡಿಗ ದೇವಿರಮ್ಮ ದೇಗುಲದಲ್ಲಿ ಇಂದು ಬೆಳಗ್ಗೆ ವಿಶೇಷ ಪೂಜೆ ನಡೆಯುತ್ತದೆ. ಮತ್ತೆ ರಾತ್ರಿ ದೀಪವನ್ನು ಹಚ್ಚಲಾಗುತ್ತದೆ. ದೇಗುಲದಲ್ಲಿ ದೀಪ ಹಚ್ಚಿದ ಬಳಿಕ, ಸುತ್ತಮುತ್ತಲಿನ ಗ್ರಾಮಗಳ ಮನೆಗಳಲ್ಲಿ ದೀಪ ಬೆಳಗಿಸುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv