Tag: Chikkamagaluru

  • ಗ್ರಾಮಕ್ಕೆ ನುಗ್ಗಿದ ಕಾಡುಕೋಣ – ಗ್ರಾಮಸ್ಥರಲ್ಲಿ ಶುರುವಾಯ್ತು ಆತಂಕ

    ಗ್ರಾಮಕ್ಕೆ ನುಗ್ಗಿದ ಕಾಡುಕೋಣ – ಗ್ರಾಮಸ್ಥರಲ್ಲಿ ಶುರುವಾಯ್ತು ಆತಂಕ

    ಚಿಕ್ಕಮಗಳೂರು: ಗ್ರಾಮದೊಳಗೆ ಓಡಾಡುತ್ತಿರುವ ಬೃಹತ್ ಕಾಡುಕೋಣವನ್ನು ಕಂಡು ಗ್ರಾಮಸ್ಥರು ಆತಂಕಕ್ಕೀಡಾಗಿದ್ದು, ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಹಾ ಸ್ಥಿತಿ ನಿರ್ಮಾಣವಾಗಿದೆ.

    ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹಂಗರವಳ್ಳಿಯಲ್ಲಿ ಬೃಹತ್ ಕಾಡುಕೋಣವೊಂದು ಶುಕ್ರವಾರ ಬೆಳಗ್ಗೆಯಿಂದಲೂ ಓಡಾಡುತ್ತಿದೆ. ಇದನ್ನು ಕಂಡ ಸ್ಥಳೀಯರು ಭಯದಿಂದಲೇ ಕಾಲ ಕಳೆಯುತ್ತಿದ್ದಾರೆ. ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.  ಇದನ್ನೂ ಓದಿ: ರಸ್ತೆ ಮಧ್ಯೆ ಹಿಂಡು ಹಿಂಡಾಗಿ ಕಾಡುಕೋಣಗಳು ಪ್ರತ್ಯಕ್ಷ – ವಿಡಿಯೋ ನೋಡಿ

    ಕಾಡುಕೋಣವೊಂದು 15 ದಿನಗಳ ಹಿಂದಷ್ಟೆ ಬಾಳೆಹೊನ್ನೂರು ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನನ್ನು ತಿವಿದು ಸಾಯಿಸಿತ್ತು. ಇದೇ ಕಾಡುವು ಗ್ರಾಮದ ಹೊರ ವಲಯದಲ್ಲಿ ಓಡಾಡುತ್ತಿದೆ ಎಂದು ಹಂಗರವಳ್ಳಿ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

    ಜಯಪುರದ ಶಾಲೆಯಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡುತ್ತಿದ್ದಾಗ ಆವರಣಕ್ಕೆ ಕಾಡುಕೋಣವೊಂದು ನುಗ್ಗಿ, ಆಂತಕ ಸೃಷ್ಟಿಸಿತ್ತು. ಅಷ್ಟೇ ಅಲ್ಲದೆ ಬಸರೀಕಟ್ಟೆ ಗ್ರಾಮದ ಮಧ್ಯೆ ರಸ್ತೆಯಲ್ಲಿ ಕಾಣಿಸಿಕೊಂಡು, ಗ್ರಾಮಸ್ಥರಲ್ಲಿ ಭಯ ಮೂಡಿಸಿತ್ತು.

    ಬಾಳೆಹೊನ್ನೂರಿನ ಬಳಿ ರಸ್ತೆ ಮಧ್ಯೆಯೇ ಕಾಡುಕೋಣವು ಆಟೋಗೆ ಅಡ್ಡ ಹಾಕಿತ್ತು. ಕಳೆದೊಂದು ವರ್ಷದಿಂದ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಮೀತಿಮೀರಿದ್ದು, ಜನ ಆತಂಕದಲ್ಲಿ ಬದುಕುತ್ತಿದ್ದಾರೆ.

  • ಬೆನ್ನಿಗೆ ಸಿಡಿಲು ಬಡಿದ್ರೂ ಸಾವನ್ನೇ ಗೆದ್ದ ವ್ಯಕ್ತಿ

    ಬೆನ್ನಿಗೆ ಸಿಡಿಲು ಬಡಿದ್ರೂ ಸಾವನ್ನೇ ಗೆದ್ದ ವ್ಯಕ್ತಿ

    ಚಿಕ್ಕಮಗಳೂರು: ಊಟ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬರ ಬೆನ್ನಿಗೆ ಸಿಡಿಲು ಬಡಿದರೂ ಬದುಕುಳಿದು, ಸಾವು ಗೆದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಯಡಿಯೂರು ಗ್ರಾಮದಲ್ಲಿ ನಡೆದಿದೆ.

    ಯಡಿಯೂರು ಗ್ರಾಮದ ಮಂಜುನಾಥ್ ಸಾವನ್ನೇ ಗೆದ್ದವರು. ಕಳಸ ಸುತ್ತಮುತ್ತ ಶುಕ್ರವಾರ ಸಂಜೆ ಭಾರೀ ಮಳೆಯಾಗಿತ್ತು. ಈ ವೇಳೆ ಕೆಲಸಕ್ಕೆ ಹೋಗಿದ್ದ ಮಂಜುನಾಥ್ ಮನೆಗೆ ಬಂದು ಊಟ ಮಾಡುತ್ತಿದ್ದರು. ಮನೆಗೆ ಬಡಿದ ಸಿಡಿಲು ಊಟ ಮಾಡುತ್ತಿದ್ದ ಮಂಜುನಾಥ್ ಅವರ ಬೆನ್ನಿಗೆ ಅಪ್ಪಳಿಸಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಚಿಕಿತ್ಸೆ ಫಲಕಾರಿಯಾಗಿದ್ದು, ಮಂಜುನಾಥ್ ಚೇತರಿಸಿಕೊಂಡಿದ್ದಾರೆ. ಮನುಷ್ಯರಿಗೆ ಸಿಡಿಲು ಬಡಿದರೆ ಬದುಕುವುದು ತೀರಾ ವಿರಳ. ಮಂಜುನಾಥ್ ಸಿಡಿಲಿಗೆ ಸಿಕ್ಕು ಬದುಕುಳಿದು, ಸಾವನ್ನೇ ಗೆದ್ದಿದ್ದಾರೆ.

    ಅನ್ನ ತಿನ್ನುವಾಗ ಯಮ ಕೂಡ ಸಾವು ಕೊಡದೇ ಕಾಯುತ್ತಾನೆ. ನಾನು ಕೂಡ ಅಂತಹ ಅದೃಷ್ಟದಿಂದ ಬದುಕುಳಿದಿದ್ದೇನೆ ಎಂದು ಮಂಜುನಾಥ್ ಹೇಳಿದ್ದಾರೆ.

  • ಕಪ್ಪೆ ಕಚ್ಚಿಕೊಂಡು ಮರ ಏರಿದ ಹಾವು – ವಿಡಿಯೋ ನೋಡಿ

    ಕಪ್ಪೆ ಕಚ್ಚಿಕೊಂಡು ಮರ ಏರಿದ ಹಾವು – ವಿಡಿಯೋ ನೋಡಿ

    ಚಿಕ್ಕಮಗಳೂರು: ಹಾವು ಕಪ್ಪೆಗಳನ್ನ ತಿಂದು ಬದುಕುದು ಸಾಮಾನ್ಯ. ಆದರೆ ಕಪ್ಪೆಯನ್ನು ಕಚ್ಚಿಕೊಂಡು ಮರ ಹತ್ತುವ ದೃಶ್ಯ ನೋಡಲು ಸಿಗುವುದು ಪ್ರಕೃತಿಯಲ್ಲಿ ತುಂಬಾ ವಿರಳ. ಅಂತಹ ಅಪರೂಪದ ಘಟನೆಗೆ ಕಾಫಿನಾಡು ಸಾಕ್ಷಿಯಾಗಿದೆ.

    ಶೃಂಗೇರಿ ತಾಲೂಕಿನ ಸಸಿಮನೆ ಗ್ರಾಮದ ಶಿವಶಂಕರ್ ಎಂಬವರು ಅಂತಹ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಹಳ್ಳೀಲಿ ಮನೆ ಅಕ್ಕ-ಪಕ್ಕ, ಹಿಂದೆ-ಮುಂದೆ ಹಾವುಗಳು ಬರುವುದು ಮಾಮೂಲಿ. ಹಳ್ಳಿಗರು ಅವುಗಳನ್ನು ಏನೂ ಮಾಡುವುದಿಲ್ಲ. ಬರುತ್ತವೆ, ಹೋಗುತ್ತವೆ ಎಂದು ಸುಮ್ಮನಾಗುತ್ತಾರೆ. ಮನೆಯೊಳಗೆ ಬಂದರೆ ಅಷ್ಟೇ ಹಿಡಿದು ಬೇರೆ ಕಡೆಗೆ ಬಿಡುತ್ತಾರೆ.

    ಶಿವಶಂಕರ್ ಅವರ ಮನೆ ಸಮೀಪದ ತೋಟದಲ್ಲಿ ಈ ಹಿಂದೆ ಕೆರೆಹಾವು ಕಾಣಸಿಕೊಂಡಿತ್ತು. ಅದು ಯಾರಿಗೂ ಏನನ್ನೂ ಮಾಡಲ್ಲ, ತನ್ನ ಪಾಡಿ ಹೋಗುತ್ತೆ ಎಂದು ಸುಮ್ಮನಾಗಿದ್ದರು. ಆದರೆ ಬಹಳ ಹೊತ್ತು ಅಲ್ಲಿಯೇ ಕುಳಿತ್ತಿದ್ದ ಹಾವು ಕಪ್ಪೆಯನ್ನು ಕಚ್ಚಿದೆ. ಬಳಿಕ ಪಕ್ಕದಲ್ಲಿದ್ದ ಮರವನ್ನು ಹತ್ತಲು ಯತ್ನಿಸಿದೆ. ಇದೇ ವೇಳೆ, ಮನೆಯ ಹಿಂದೆ ಬಂದ ಮಕ್ಕಳು ಇದನ್ನು ನೋಡಿ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಹಾವಿಗಿಂತ ಕಪ್ಪೆಯೇ ದೊಡ್ಡದಾಗಿದ್ದು, ಹಾವು ಅದನ್ನು ನುಂಗಲೂ ಆಗದೇ ಸ್ವಲ್ಪ ಹೊತ್ತು ಪರದಾಡಿತು. ಕಪ್ಪೆಯೂ ತಪ್ಪಿಸಿಕೊಳ್ಳಲು ಎಲ್ಲಾ ವಿಫಲ ಪ್ರಯತ್ನ ನಡೆಸಿ ಕೊನೆಗೆ ಹಾವಿಗೆ ಶರಣಾಗಿದೆ. ಆದರೆ ಹಾವು ಕಪ್ಪೆಯನ್ನು ಕಚ್ಚಿಕೊಂಡು ಮರ ಹತ್ತಲು ಯತ್ನಿಸುತ್ತಿರುವ ದೃಶ್ಯ ಮಾತ್ರ ವೀಕ್ಷಕರಲ್ಲಿ ಆಶ್ಚರ್ಯ ಮೂಡಿಸುತ್ತಿದೆ.

  • ಭಜರಂಗಿ, ಟಗರು ಹಾಡಿಗೆ ಕುಣಿದು ಕುಪ್ಪಳಿಸಿದ ಶೋಭಾ ಕರಂದ್ಲಾಜೆ

    ಭಜರಂಗಿ, ಟಗರು ಹಾಡಿಗೆ ಕುಣಿದು ಕುಪ್ಪಳಿಸಿದ ಶೋಭಾ ಕರಂದ್ಲಾಜೆ

    ಚಿಕ್ಕಮಗಳೂರು: ಭಜರಂಗಿ ಹಾಗೂ ಟಗರು ಸಿನಿಮಾ ಹಾಡಿಗೆ ಸಂಸದೆ ಶೋಭಾ ಕರಂದ್ಲಾಜೆ ಕುಣಿದು ಕುಪ್ಪಳಿಸಿದ್ದಾರೆ.

    ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಜಯ ಸಾಧಿಸಿದ ಶೋಭಾ ಕರಂದ್ಲಾಜೆ ಅವರು ಇಂದು ತರೀಕೆರೆಯ ರೋಡ್ ಶೋ ನಡಸಿದರು. ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರ ಜೊತೆ ರಸ್ತೆ ಮಧ್ಯೆ ಭಜರಂಗಿ ಹಾಗೂ ಟಗರು ಸಿನಿಮಾಗಳ ಹಾಡಿಗೆ ಹೆಜ್ಜೆ ಹಾಕಿದರು.

    ಇದಕ್ಕೂ ಮುನ್ನ ಶೋಭಾ ಕರಂದ್ಲಾಜೆ ಅವರು ಶೃಂಗೇರಿಗೆ ಭೇಟಿ ನೀಡಿ, ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಭಾರತೀ ತೀರ್ಥ ಸ್ವಾಮೀಜಿ ಆರ್ಶೀವಾದ ಪಡೆದರು.

    ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ಧ 2,58,695 ಮತ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ, ಎರಡನೇ ಬಾರಿ ಸಂಸತ್ ಪ್ರವೇಶಿಸಿದ್ದಾರೆ. ಶೋಭಾ ಕರಂದ್ಲಾಜೆ 5,32,504 ಮತಗಳನ್ನು ಪಡೆದರೆ, ಪ್ರಮೋದ್ ಮಧ್ವರಾಜ್ 2,73,809 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

    ಶೋಭಾ ಗೆದ್ದಿದ್ದು ಹೇಗೆ?
    ಸಂಸದೆ, ಹಿಂದುತ್ವದ ಕಮಿಟೆಡ್ ಕಾರ್ಯಕರ್ತೆ ಹಾಗೂ ಹಿಂದುತ್ವಕ್ಕೆ ಕಟಿಬದ್ಧ, ದತ್ತ ಜಯಂತಿಯಲ್ಲಿ ಪ್ರತಿ ವರ್ಷವೂ ಪಾಲ್ಗೊಂಡು ದತ್ತಪೀಠದ ಮುಕ್ತಿಗಾಗಿ ಹೋರಾಡಿದ್ದಾರೆ. ಶೋಭಾ ರಾಜ್ಯಮಟ್ಟದ ನಾಯಕಿ ಆಗಿದ್ದು, ಎಂತಹಾ ಸಂದರ್ಭದಲ್ಲೂ ಪಕ್ಷವನ್ನು ಸಮರ್ಥಿಸಿಕೊಳ್ಳುವ ಫೈರ್ ಬ್ರ್ಯಾಂಡ್ ಲೇಡಿ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ಶೋಭಾ ಅವರು ಯಡಿಯೂರಪ್ಪನವರ ಆಪ್ತೆಯಾಗಿದ್ದು, ಜಿಲ್ಲೆಯ ಐದು ಶಾಸಕರಲ್ಲಿ ನಾಲ್ವರು ಬಿಎಸ್‍ವೈ ಬೆಂಬಲಿಗರಾಗಿದ್ದು, ಅವರೆಲ್ಲಾ ಶೋಭಾ ಬೆನ್ನಿಗೆ ನಿಂತಿದ್ದರು.

    ಶೋಭಾ ಜಾತಿಯಲ್ಲಿ ಒಕ್ಕಲಿಗರಾದದ್ದು ಪ್ಲಸ್ ಪಾಯಿಂಟ್ ಆಗಿದ್ದು, ಕಾಫಿನಾಡಿನ ಮಲೆನಾಡು ಭಾಗದಲ್ಲಿ ಒಕ್ಕಲಿಗರೇ ನಿರ್ಣಾಯಕರಾಗಿದ್ದರು.

  • ಎಕ್ಸಿಟ್ ಪೋಲ್‍ಗಳನ್ನು ಲೆಕ್ಕಕ್ಕೆ ಇಟ್ಕೊಂಡಿಲ್ಲ, ಗೆಲ್ಲುವ ವಿಶ್ವಾಸವಿದೆ- ನಿಖಿಲ್

    ಎಕ್ಸಿಟ್ ಪೋಲ್‍ಗಳನ್ನು ಲೆಕ್ಕಕ್ಕೆ ಇಟ್ಕೊಂಡಿಲ್ಲ, ಗೆಲ್ಲುವ ವಿಶ್ವಾಸವಿದೆ- ನಿಖಿಲ್

    ಚಿಕ್ಕಮಗಳೂರು: ಮಗನ ರಾಜಕೀಯ ಭವಿಷ್ಯಕ್ಕಾಗಿ ರಾಜ್ಯಾದ್ಯಂತ ಟೆಂಪಲ್ ರನ್ ಮಾಡಿ, ಶೃಂಗೇರಿಯಲ್ಲಿ ಪೂಜೆ, ಹೋಮ, ಹವನ ನಡೆಸಿದ್ದ ಸಿ.ಎಂ ಕುಟುಂಬ, ಫಲಿತಾಂಶಕ್ಕೂ ಮುನ್ನ ಮತ್ತೊಂದು ಸುತ್ತು ಟೆಂಪಲ್ ರನ್ ಮುಂದುವರಿಸಿದೆ. ಇಂದು ಬೆಳಗ್ಗೆ ಶೃಂಗೇರಿಯಲ್ಲಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್, ಸಂಜೆ ಹಾಸನದ ಕುಲದೇವರ ಸೇರಿದಂತೆ ವಿವಿಧ ದೇವಸ್ಥಾನಕ್ಕೆ ತೆರಳಿ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ತಾಯಿ- ಮಗ, ಎಕ್ಸಿಟ್ ಪೋಲ್‍ಗಳನ್ನ ಲೆಕ್ಕಕ್ಕೆ ಇಟ್ಕೊಂಡಿಲ್ಲ. ಶಾರದಾಂಬೆ ಹಾಗೂ ಜನರ ಆಶೀರ್ವಾದದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ರು.

    ದೇಶಾದ್ಯಂತ 543 ಕ್ಷೇತ್ರದಲ್ಲಿ ಚುನಾವಣೆ ನಡೆದರೂ ಇಂಡಿಯಾ ಕಣ್ಣು ಮಂಡ್ಯದ ಮೇಲಿರೋದ್ರಲ್ಲಿ ಅನುಮಾನವೇ ಇಲ್ಲ. ಅತ್ತ ಸುಮಲತಾ ಇತ್ತ ನಿಖಿಲ್ ಕುಮಾರಸ್ವಾಮಿಯ ಎದೆಯಲ್ಲೂ ಢವ-ಢವ ಶುರುವಾಗಿದೆ. ಆದರೆ, ಅಪ್ಪನಿಗೆ ಅಧಿಕಾರ ಕೊಟ್ಟ ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಮಗನ ಗೆಲುವಿಗಾಗೂ ವಿಶೇಷ ಪೂಜೆ ಹೋಮ-ಹವನ ನಡೆಸಿದ್ದ ಸಿಎಂ ಕುಟುಂಬ, ಫಲಿತಾಂಶಕ್ಕೂ ಮುನ್ನ ಮಗನ ಗೆಲುವಿಗಾಗಿ ಮತ್ತೆ ಶಾರದಾಂಬೆಯ ಮೊರೆ ಹೋಗಿದ್ದಾರೆ.

    ಇದೇ ವೇಳೆ ಮಾತನಾಡಿದ ನಿಖಿಲ್, ಒಂದೊಂದು ಸರ್ವೆಗಳಲ್ಲಿ ಒಂದೊಂದು ರೀತಿ ಫಲಿತಾಂಶ ಬಂದಿದೆ. ನಾನು ಯಾವುದನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಶಾರದಾಂಬೆ ಹಾಗೂ ಜನರ ಆಶೀರ್ವಾದದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸಿಎಂ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಮಾತನಾಡಿ, ಶಾರದಾಂಬೆಯ ಆಶೀರ್ವಾದಕ್ಕಾಗಿ ನಾವು ಆಗಾಗ ಶೃಂಗೇರಿಗೆ ಬರುತ್ತೇವೆ. ಸರ್ಕಾರ ರಚನೆಯಾದಾಗಿನಿಂದಲೂ ಬಿಜೆಪಿ ಸರ್ಕಾರಕ್ಕೆ ಡೆಡ್‍ಲೈನ್ ಕೊಡ್ತಾನೆ ಇದೆ. ಆದರೆ ಏನೂ ಪ್ರಯೋಜನವಾಗ್ತಿಲ್ಲ. ಸರ್ಕಾರ ಪತನಗೊಳಿಸುವ ಅವರ ಆಸೆ ಈಡೇರೋದಿಲ್ಲ. ರಾಜ್ಯದಲ್ಲಿ ಜೆಡಿಎಸ್‍ಗೆ ಆರು ಸ್ಥಾನ ಬರುವ ನಿರೀಕ್ಷೆ ಇದೆ. ನಿಖಿಲ್ ಮೇಲೆ ಚಾಮುಂಡೇಶ್ವರಿ, ಶಾರದಾಂಬೆ ಹಾಗೂ ಜನರ ಆಶೀರ್ವಾದವಿದೆ ಎಂದು ಹೇಳುವ ಮೂಲಕ ನಿಖಿಲ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

    ಒಟ್ಟಿನಲ್ಲಿ 2018 ಜನವರಿ ತಿಂಗಳಿಂದ ಸಿಎಂ ರಾಜ್ಯ ಸುತ್ತಿದ್ದಕ್ಕಿಂತ ಅಧಿಕಾರ ಉಳಿಸಿಕೊಳ್ಳೋದಕ್ಕೆ ಮಠ-ಮಂದಿರ ಸುತ್ತಿದ್ದೇ ಹೆಚ್ಚು. ಸಿಎಂ ನಡೆ ಬಗ್ಗೆ ರಾಜ್ಯದ ಜನ ಕೂಡ ಆಕ್ರೋಶ ವ್ಯಕ್ತಪಡಿಸಿದರು. ಮಗನ ರಾಜಕೀಯ ಭವಿಷ್ಯಕ್ಕೂ ಅಷ್ಟೇ ಪ್ರಮಾಣದಲ್ಲಿ ದೇವಸ್ಥಾನ, ವಿಶೇಷ ಪೂಜೆ, ಹೋಮ-ಹವನ ನಡೆಸಿದ್ದ ಸಿಎಂ ಕುಟುಂಬ, ಈಗ ಫಲಿತಾಂಶಕ್ಕೂ ಮುನ್ನ ಮತ್ತೊಂದು ರೌಂಡ್ ಶುರುಮಾಡಿದ್ದಾರೆ.

  • ಮಿರಿಂಡಾ ಕುಡಿದು ದಾರಿ ಕಾಣದೆ ರಸ್ತೆಯಲ್ಲೇ ಹೊರಳಾಡಿದ ಹಾವು!

    ಮಿರಿಂಡಾ ಕುಡಿದು ದಾರಿ ಕಾಣದೆ ರಸ್ತೆಯಲ್ಲೇ ಹೊರಳಾಡಿದ ಹಾವು!

    ಚಿಕ್ಕಮಗಳೂರು: ಪ್ರವಾಸಿಗರು ಕುಡಿದು ಬಿಸಾಡಿದ ಬಾಟಲಿಯಲ್ಲಿದ್ದ ಮಿರಿಂಡಾ ಕುಡಿಯಲು ಹೋಗಿ ತಲೆಸಿಕ್ಕಿ ಹಾಕಿಕೊಂಡು ಹಾವು ದಾರಿ ಕಾಣದೆ ಕಂಗಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಗ್ರಾಮದಲ್ಲಿ ನಡೆದಿದೆ.

    ರಸ್ತೆ ಬದಿಯಲ್ಲಿದ್ದ ಬಾಟಲಿಗೆ ತಲೆಹಾಕಿದ ಕೆರೆಹಾವು ತಲೆಯನ್ನ ಹೊರತೆಗೆಯಲಾಗದೆ ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆ ಬದಿಯಲ್ಲೇ ಹೋರಾಟ ನಡೆಸಿದೆ. ಆದರೆ ಹಾವಿಗೆ ತಲೆ ಹೊರತೆಗೆಯಲು ಸಾಧ್ಯವಾಗಿಲ್ಲ. ರಸ್ತೆಯಲ್ಲಿ ಬಿದ್ದು, ಹೊರಳಾಡಿ ಏನೇ ಹರಸಾಹಸ ಪಟ್ಟರೂ, ಹಾವಿಗೆ ತಲೆಯನ್ನ ಬಾಟಲಿನಿಂದ ತೆಗೆಯಲು ಸಾಧ್ಯವಾಗಿಲ್ಲ.

    ಇದೇ ವೇಳೆ ಚಿಕ್ಕಮಗಳೂರಿನಿಂದ ಮಲ್ಲಂದೂರಿಗೆ ಹೋಗುತ್ತಿದ್ದ ವೈಲ್ಡ್ ಕ್ಯಾಟ್ ಸಿ ಮುಖ್ಯಸ್ಥ ಶ್ರೀದೇವ್ ಹಾವನ್ನ ಕಂಡು ಪತ್ನಿಯ ಜೊತೆಗೂಡಿ ಹಾವಿನ ತಲೆಯನ್ನ ಬಾಟಲಿಯಿಂದ ಹೊರತೆಗೆದಿದ್ದಾರೆ. ಶ್ರೀದೇವ್ ಅವರ ಪತ್ನಿ ಉದ್ದವಾದ ಕೋಲಿನಿಂದ ಹಾವಿನ ತಲೆ ಮೇಲಿದ್ದ ಬಾಟಲಿಗೆ ಒತ್ತಿ ಹಿಡಿದಿದ್ದಾರೆ. ಇದೇ ವೇಳೆ ಶ್ರೀದೇವ್ ಹಾವಿನ ಬಾಲ ಹಿಡಿದು ಎಳೆದಿದ್ದು, ಈ ಮೂಲಕ ಬಾಟಲಿಯಿಂದ ಹಾವನ್ನು ರಕ್ಷಿಸಿದ್ದಾರೆ.

  • ಲಾರಿ, ಕಾರು ಮುಖಾಮುಖಿ ಡಿಕ್ಕಿಗೆ ಶಿಕ್ಷಕ ಬಲಿ

    ಲಾರಿ, ಕಾರು ಮುಖಾಮುಖಿ ಡಿಕ್ಕಿಗೆ ಶಿಕ್ಷಕ ಬಲಿ

    ಚಿಕ್ಕಮಗಳೂರು: ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರ ಸಮೀಪದ ಎಲೆಕಲ್ ಘಾಟಿಯ ಬಳಿ ನಡೆದಿದೆ.

    45 ವರ್ಷದ ಈಶ್ವರ ಮೃತಪಟ್ಟ ದುರ್ದೈವಿ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಮಹದೇವ್‍ಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಈಶ್ವರ್ ಎನ್.ಆರ್.ಪುರ ತಾಲೂಕಿನ ಹೊಸಕೆರೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

    ಕಾರು ಚಿಕ್ಕಮಗಳೂರಿನಿಂದ ಬಾಳೆಹೊನ್ನೂರಿಗೆ ಹೋಗುತ್ತಿತ್ತು. ಲಾರಿ ಬಾಳೆಹೊನ್ನೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಎಲೆಕಲ್ ಘಾಟಿಯ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಈಶ್ವರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಈ ಅಪಘಾತಕ್ಕೆ ಕಾರಿನ ಅತಿಯಾದ ವೇಗವೇ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕರಂದ್ಲಾಜೆಗೆ ಸೀರೆ, ಬಳೆ, ಪ್ಯಾಂಟ್, ಶರ್ಟ್ ಗಿಫ್ಟ್

    ಕರಂದ್ಲಾಜೆಗೆ ಸೀರೆ, ಬಳೆ, ಪ್ಯಾಂಟ್, ಶರ್ಟ್ ಗಿಫ್ಟ್

    ಚಿಕ್ಕಮಗಳೂರು: ಕಾಫಿನಾಡಿನ ಯೂತ್ ಹಾಗೂ ಮಹಿಳಾ ಕಾಂಗ್ರೆಸ್ಸಿಗರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸೀರೆ, ಬಳೆ, ಪ್ಯಾಂಟ್ ಮತ್ತು ಶರ್ಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಶೋಭಾ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನೀವು ಹೇಳಿರುವ ಹೇಳಿಕೆಯಿಂದ ಹೆಣ್ಣಿನ ಮೇಲೆ ನಿಮಗೆ ಗೌರವ ಇಲ್ಲ ಎಂದು ತೋರಿಸುತ್ತದೆ. ಇದು ಸಿದ್ದರಾಮಯ್ಯನವರಿಗೆ ಅವರಿಗೆ ಮಾತ್ರ ಮಾಡಿದ ಅವಮಾನವಲ್ಲ. ಇದು ಇಡೀ ಮಹಿಳಾ ಕುಲಕ್ಕೆ ಮಾಡಿದ ಅವಮಾನವಾಗಿದೆ. ಶೋಭಾ ಅವರು ತಾನು ಒಬ್ಬ ಮಹಿಳೆ ಎಂಬುದನ್ನು ಮರೆತಿದ್ದಾರೆ. ಹೀಗಾಗಿ ಬಳೆಯ ಬಗ್ಗೆ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ: ಸಿದ್ದು ವಿರುದ್ಧ ಕರಂದ್ಲಾಜೆ ಕಿಡಿ

    ಶೋಭಾ ಕರಂದ್ಲಾಜೆ ಹೆಣ್ಣೋ-ಗಂಡೋ ಎಂಬುದನ್ನು ಅವರೇ ತೀರ್ಮಾನಿಸಲಿ. ಅದಕ್ಕಾಗಿ ಸೀರೆ, ಬಳೆ, ಪ್ಯಾಂಟ್ ಮತ್ತು ಶರ್ಟ್ ಅನ್ನು ಸಾಂಕೇತಿಕವಾಗಿ ಕೊಡುತ್ತಿದ್ದೇವೆ. ಹೆಣ್ಣಾದರೆ ಸೀರೆ-ಬಳೆ ತೊಡಲಿ, ಗಂಡಾದರೆ ಪ್ಯಾಂಟ್ ಶರ್ಟ್ ಹಾಕಲಿ ಎಂದು ಶೋಭಾ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗುಡುಗಿದರು.

    ಕೂಡಲೇ ಅವರು ಸಿದ್ದರಾಮಯ್ಯ ಬಳಿ ಕ್ಷಮೆ ಕೋರಬೇಕು. ಅಷ್ಟೇ ಅಲ್ಲದೇ ಅವರ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹೇಳಿ ಮಹಿಳಾ ಕಾರ್ಯಕರ್ತರು ಧಿಕ್ಕಾರ ಕೂಗಿದರು.

  • ರಸ್ತೆ ಮಧ್ಯೆ ಹಿಂಡು ಹಿಂಡಾಗಿ ಕಾಡುಕೋಣಗಳು ಪ್ರತ್ಯಕ್ಷ – ವಿಡಿಯೋ ನೋಡಿ

    ರಸ್ತೆ ಮಧ್ಯೆ ಹಿಂಡು ಹಿಂಡಾಗಿ ಕಾಡುಕೋಣಗಳು ಪ್ರತ್ಯಕ್ಷ – ವಿಡಿಯೋ ನೋಡಿ

    ಚಿಕ್ಕಮಗಳೂರು: ಜಿಲ್ಲೆಯ ತಿಪ್ಪೇನಹಳ್ಳಿ ಎಸ್ಟೇಟ್ ಬಳಿ ರಸ್ತೆ ಮಧ್ಯೆ ಹಿಂಡು ಹಿಂಡಾಗಿ ಕಾಡುಕೋಣಗಳು ಪ್ರತ್ಯಕ್ಷವಾಗಿವೆ.

    ಚಿಕ್ಕಮಗಳೂರಿನಿಂದ ಮುಳ್ಳಯ್ಯನಗಿರಿ ಮಾರ್ಗದ ತೋಟಗಳ ಬಳಿ ಕೋಣಗಳು ಹಿಂಡು ಹಿಂಡಾಗಿ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರು ಫುಲ್ ಖುಷಿಯಾಗಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಕೋಣಗಳ ಹಿಂಡು ಕಂಡು ಪ್ರವಾಸಿಗರು ಆಶ್ಚರ್ಯ ಪಟ್ಟಿದ್ದು, ಪ್ರವಾಸಿಗರೊಬ್ಬರು ಕಾಡು ಕೋಣಗಳು ಹೋಗುತ್ತಿದ್ದ ದೃಶ್ಯವನ್ನು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

    ಮುಳ್ಳಯ್ಯನ ಗಿರಿ, ದತ್ತಪೀಠ, ಸೀತಾಳಯ್ಯನಗಿರಿ ಮಾರ್ಗದಲ್ಲಿ ಈ ಕೋಣಗಳು ಕಂಡು ಬಂದಿವೆ. ಕಾಡು ಕೋಣಗಳು ಸಾಲಾಗಿ ಒಂದರಂತೆ ಒಂದು ರಸ್ತೆ ದಾಟಿ ಕಾಫಿ ತೋಟಕ್ಕೆ ಹೋಗಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

    ಅಪರೂಪ ಎಂಬಂತೆ ಕಾಡುಕೋಣಗಳ ಹಿಂಡನ್ನು ನೋಡಿ ಪ್ರವಾಸಿಗರು ಸಂತಸದಿಂದ ಕಣ್ತುಂಬಿಕೊಂಡಿದ್ದಾರೆ. ಆದರೆ ಕೋಣಗಳನ್ನ ಕಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

    https://www.youtube.com/watch?v=pZJj7J9QNiQ

  • ಹಾವು ಸ್ಕೂಟಿಯೊಳಗೆ ಸೇರ್ಕೊಂಡ್ರೆ ಹೀಗೂ ತೆಗೆಯಬಹುದು – ವಿಡಿಯೋ ನೋಡಿ

    ಹಾವು ಸ್ಕೂಟಿಯೊಳಗೆ ಸೇರ್ಕೊಂಡ್ರೆ ಹೀಗೂ ತೆಗೆಯಬಹುದು – ವಿಡಿಯೋ ನೋಡಿ

    ಚಿಕ್ಕಮಗಳೂರು: ಹಾವು ಕಪ್ಪೆ ನುಂಗಿ ಭಯದಿಂದ ಆ್ಯಕ್ಟೀವ್ ಹೊಂಡ ಸ್ಕೂಟಿಯೊಳಗೆ ಸೇರಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮನೆಯವರು ಹಾಗೂ ಉರಗ ತಜ್ಞನನ್ನ ಸತಾಯಿಸಿರುವ ಘಟನೆ ಚಿಕ್ಕಮಗಳೂರಿನ ಕಲ್ಯಾಣ ನಗರದ ಪುಷ್ಪಗಿರಿ ಲೇಔಟ್‍ನಲ್ಲಿ ನಡೆದಿದೆ.

    ಸಬ್ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ಅವರ ಪತ್ನಿ ತಮ್ಮ ಸ್ಕೂಟಿ ಮನೆ ಮುಂದೆ ನಿಲ್ಲಿಸಿದ್ದರು. ಸ್ಕೂಟಿ ನಿಲ್ಲಿಸಿದ ಪಕ್ಕದಲ್ಲಿದ್ದ ಮೂರು ಕಪ್ಪೆಗಳಲ್ಲಿ ಒಂದನ್ನ ಹಾವು ನುಂಗಿದೆ. ಹಾವು ಕಪ್ಪೆಯನ್ನ ನುಂಗುವುದನ್ನು ಮನೆಯವರು ನೋಡಿ ಕೂಗಿಕೊಂಡು ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಹಾವು ಸ್ಕೂಟಿಯ ಹೆಡ್‍ಲೈಟ್ ಸೇರಿದೆ.

    ತಕ್ಷಣ ಮನೆಯವರು ಉರಗ ತಜ್ಞ ನರೇಶ್ ಅವರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ನರೇಶ್ ಹರಸಾಹಸ ಪಟ್ಟರು  ಹಾವನ್ನ ತೆಗೆಯಲು ಸಾಧ್ಯವಾಗಲಿಲ್ಲ. ಸ್ಕೂಟಿಯ ಡೂಮ್ ಬಿಚ್ಚಲು ಮೆಕಾನಿಕ್‍ಗೆ ಕಾಲ್ ಮಾಡಿದ್ರೆ, ಆತ ಭಯ ಆಗುತ್ತೆ ಬಿಚ್ಚಲ್ಲ ಎಂದು ಬರಲಿಲ್ಲ.

    ಕೊನೆಗೆ ಸ್ನೇಕ್ ನರೇಶ್ ಸ್ಕೂಟಿಯನ್ನ ನಿರ್ಜನ ಪ್ರದೇಶಕ್ಕೆ ತಂದು ಮೋಟರ್ ಆನ್ ಮಾಡಿಕೊಂಡು ವೇಗವಾಗಿ ನೀರನ್ನ ಬಿಟ್ಟಿದ್ದಾರೆ. ಆಗ ಒಳಗಿದ್ದ ನಾಗರಹಾವು ಹೊರ ಬಂದಿದೆ. ತದನಂತರ ಹಾವನ್ನ ಸೆರೆ ಹಿಡಿದ ನರೇಶ್ ಹಾವನ್ನು ಸ್ಥಳೀಯ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.