Tag: Chikkamagaluru

  • ‘ಏ ಹುಡ್ಗ ಯಾಕಿಂಗ್ ಕಾಡ್ತಿ’ ಹಾಡಿಗೆ ಸಖತ್ ಸ್ಟೆಪ್ ಹಾಕಿದ ಮಹಿಳಾ ಪೊಲೀಸ್

    ‘ಏ ಹುಡ್ಗ ಯಾಕಿಂಗ್ ಕಾಡ್ತಿ’ ಹಾಡಿಗೆ ಸಖತ್ ಸ್ಟೆಪ್ ಹಾಕಿದ ಮಹಿಳಾ ಪೊಲೀಸ್

    ಚಿಕ್ಕಮಗಳೂರು: ನಗರದ ಡಿ.ಆರ್ ಮೈದಾನದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಡಿ.ಆರ್ ಮೈದಾನದಲ್ಲಿ ಇತ್ತೀಚೆಗೆ ಜಿಲ್ಲಾ ಪೊಲೀಸ್ ಕ್ರೀಡಾ ಕೂಟ ಆಯೋಜಿಸಲಾಗಿತ್ತು. ಈ ವೇಳೆ ಸಂಭ್ರಮದಲ್ಲಿದ್ದ ಮಹಿಳಾ ಪಿ.ಎಸ್.ಐ ಹಾಗೂ ಪೇದೆಗಳು ‘ಹೇ ಹುಡುಗ ಯಾಕಿಂಗ್ ಕಾಡ್ತಿ’ ಎನ್ನುವ ಹಾಡಿಗೆ ಹಜ್ಜೆ ಹಾಕಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿಯೇ ಇದ್ದ ಕೆಲವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಮಹಿಳಾ ಪೊಲೀಸ್ ಪೇದೆಗಳು ಮೈದಾನದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಜಾಗದಲ್ಲಿ ಧೂಳು ಕಾಣಿಸಿಕೊಂಡಿತ್ತು. ಇದ್ದರಿಂದಾಗಿ ಕೆಲವರು ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಹೆಜ್ಜೆ ಹಾಕಿದ್ದಾರೆ. ನೀಲಿ ಜರ್ಸಿ ಹಾಗೂ ಕೆಂಪು ಟಿಶರ್ಟ್ ತೊಟ್ಟ ಚಿಕ್ಕಮಗಳೂರಿನ ಪೊಲೀಸ್ ಸಿಬ್ಬಂದಿಯ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತ್ ಬಂದ್ ಎಫೆಕ್ಟ್ – ಕಾಫಿನಾಡಲ್ಲಿ KSRTC ಗೆ  31 ಲಕ್ಷ ರೂ. ನಷ್ಟ

    ಭಾರತ್ ಬಂದ್ ಎಫೆಕ್ಟ್ – ಕಾಫಿನಾಡಲ್ಲಿ KSRTC ಗೆ 31 ಲಕ್ಷ ರೂ. ನಷ್ಟ

    ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‍ನಿಂದ ಜನಸಾಮಾನ್ಯರಿಗೆ ತೊಂದರೆಯಾಗಿರುವ ಜೊತೆಗೆ ಕೆಎಸ್‌ಆರ್‌ಟಿಸಿಗೆ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗಿದೆ.

    ಕಾರ್ಮಿಕರ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಎರಡು ದಿನ ಬಂದ್‍ನಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಒಟ್ಟು ಆರು ಡಿಪೋಗಳಲ್ಲಿ 327 ಬಸ್‍ಗಳು ಬಂದ್ ನಿಯಮಿತವಾಗಿ ಸಂಚರಿಸಿಲ್ಲ. ಇದರಿಂದ ಒಟ್ಟು ಅಂದಾಜು 31 ಲಕ್ಷ ರೂ. ನಷ್ಟ ಸಂಭವಿಸಿದೆ.

    ಮಂಗಳವಾರ ಹಾಗೂ ಬುಧವಾರ ಚಿಕ್ಕಮಗಳೂರಿನಲ್ಲಿ 70, ಅರಸೀಕೆರೆಯಲ್ಲಿ 64, ಸಖರಾಯಪಟ್ಟಣದಲ್ಲಿ 53, ಕಡೂರಿನಲ್ಲಿ 63, ಮೂಡಿಗೆರೆಯಲ್ಲಿ 56, ಬೇಲೂರಿನಲ್ಲಿ 21 ಒಟ್ಟು 327 ಬಸ್‍ಗಳು ರಸ್ತೆಗಿಳಿದಿಲ್ಲ. ಕಾರ್ಮಿಕರ ಮುಷ್ಕರದ ಬಿಸಿ ಕೇಂದ್ರ ಸರ್ಕಾರಕ್ಕೆ ತಟ್ಟಿತೋ ಇಲ್ಲವೋ ತಿಳಿದಿಲ್ಲ. ಆದರೆ ಕೆಎಸ್‌ಆರ್‌ಟಿಸಿ ಮಾತ್ರ ಜೋರಾಗಿಯೇ ಬಿಸಿ ಮುಟ್ಟಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 20 ಕೆ.ಜಿ. ತೂಕದ ಚಿಪ್ಪು ಹಂದಿ ಪತ್ತೆ – ನಾಲ್ವರ ಬಂಧನ

    20 ಕೆ.ಜಿ. ತೂಕದ ಚಿಪ್ಪು ಹಂದಿ ಪತ್ತೆ – ನಾಲ್ವರ ಬಂಧನ

    ಚಿಕ್ಕಮಗಳೂರು: ತಾಲೂಕಿನ ಇಳೇಖಾನ್ ಗ್ರಾಮದಲ್ಲಿ ಚಿಪ್ಪು ಹಂದಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಕಾಫಿ ತೋಟದ ಮಾಲೀಕ ಮೋಹನ್, ರಾಜಶೇಖರ್, ಮಲ್ಲೇಶ್ ಮತ್ತು ಗಣೇಶ್ ಬಂಧಿತ ಆರೋಪಿಗಳು. ಚಿಕ್ಕಮಗಳೂರು ವಲಯ ಆರ್.ಎಫ್.ಓ ಶಿಲ್ಪಾ ನೇತೃತ್ವದಲ್ಲಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಂದು ಜೀವಂತ ಚಿಪ್ಪು ಹಂದಿ, ಒಂದು ಬೈಕ್ ಮತ್ತು ಒಂದು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

    20 ಕೆ.ಜಿ. ತೂಕದ ಚಿಪ್ಪು ಹಂದಿ ಇದಾಗಿದ್ದು, ಇಷ್ಟು ತೂಕದ ಚಿಪ್ಪು ಹಂದಿ ತುಂಬಾ ಅಪರೂಪವಾಗಿ ಕಂಡು ಬರುತ್ತವೆ ಎಂದು ಹೇಳಲಾಗುತ್ತಿದೆ. ಬಂಧಿತರು 40 ಲಕ್ಷ ಬೆಲೆ ಬಾಳುವ ಚಿಪ್ಪು ಹಂದಿಯನ್ನ ಬೇಟೆಯಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಬಳಿಕ ಖಚಿತ ಮಾಹಿತಿ ಮೇರೆಗೆ ಆರ್.ಎಫ್.ಓ ಶಿಲ್ಪಾ ದಾಳಿ ಮಾಡಿದ್ದಾರೆ

    ಈ ಚಿಪ್ಪು ಹಂದಿಗೆ ವಿದೇಶದಲ್ಲಿ ಭಾರೀ ಬೇಡಿಕೆ ಇದೆ. ಸದ್ಯಕ್ಕೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 40 ಲಕ್ಷ ಬೆಲೆ ಬಾಳುವ ಜೀವಂತ ಚಿಪ್ಪು ಹಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಫಿನಾಡಿನಲ್ಲಿ ಶ್ರೀಮುರಳಿ – ಮುಗಿಬಿದ್ದ ಅಭಿಮಾನಿಗಳು

    ಕಾಫಿನಾಡಿನಲ್ಲಿ ಶ್ರೀಮುರಳಿ – ಮುಗಿಬಿದ್ದ ಅಭಿಮಾನಿಗಳು

    ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಜ್ಯುವೆಲ್ಲರಿ ಮಳಿಗೆ ಆರಂಭಗೊಂಡಿದೆ. ಅದರ ಉದ್ಘಾಟನೆಗಾಗಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಚಿಕ್ಕಮಗಳೂರಿಗೆ ಆಗಮಿಸಿದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.

    ಶೋರೂಂ ಉದ್ಘಾಟಿಸಿ ಮಾತನಾಡಿದ ಶ್ರೀಮುರುಳಿ, ನಾನು ಓಪನ್ ಮಾಡುತ್ತಿರುವ ಮಲಬಾರ್ ಗೋಲ್ಡ್ ಅಂಡ್ ಜ್ಯುವೆಲ್ಸ್ ನ ಮೂರನೇ ಶೋ ರೂಂ ಇದಾಗಿದ್ದು, ನಮಗೆ ಏನಾದರೂ ಒಡವೆ ಬೇಕೆಂದರೆ ನಾವು ಮಲಬಾರ್ ನಲ್ಲಿ ಖರೀದಿಸುತ್ತೇವೆ. ಸಾಕಷ್ಟು ವೆರೈಟಿ ಹಾಗೂ ವಿಭಿನ್ನವಾದ ಕಲೆಕ್ಷನ್ಸ್ ಇಲ್ಲಿ ಲಭ್ಯ ಎಂದಿದ್ದಾರೆ. ಆದರೆ ಚಿತ್ರನಟರ ಮನೆ ಮೇಲಾಗಿರುವ ಐಟಿ ದಾಳಿ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡದೇ ಎಲ್ಲರಿಗೂ ಒಳ್ಳೆದಾಗಲಿ ಎಂದು ಹೇಳಿದ್ದಾರೆ.

    ಆಭರಣ ಶೋರೂಂ ಓಪನ್ ಮಾಡಲು ಬರುವಾಗ ಅವರು ಕಾರಿನ ಒಳಗೆ ಎದ್ದು ನಿಂತು ಅಭಿಮಾನಿಗಳಿಗೆ ಹಾಯ್ ಮಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಅವರು ಫೋಟೋ ಕ್ಲಿಕ್ಕಿಸಿಲು ಹರಸಾಹಸ ಪಟ್ಟಿದ್ದಾರೆ. ಅಷ್ಟೇ ಅಲ್ಲದೇ ವೇದಿಕೆಯ ಮೇಲೆ ಹೋಗಿದ್ದ ಮುರಳಿ ಅವರು ಹಾಡಿಗೆ ಸ್ಟೆಪ್ ಕೂಡ ಹಾಕಿದ್ದಾರೆ. ಅಭಿಮಾನಿಗಳು ಸಹ ಅವರ ಜೊತೆ ಸೇರಿ ಡ್ಯಾನ್ಸ್ ಮಾಡಿದ್ದಾರೆ.

    ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿಭಿನ್ನ ಡಿಸೈನ್, ವೆರೈಟಿಯ ಆಭರಣಗಳ ಮಾರಾಟಗಾರರಾದ, ವಿಶ್ವದ ಟಾಪ್ ಐದು ಆಭರಣಗಳ ಬ್ರ್ಯಾಂಡ್‍ಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ದೇಶಾದ್ಯಂತ 250ಕ್ಕೂ ಅಧಿಕ ಶೋರೂಂ ಹೊಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಿಢೀರನೇ ಸೊಂಟದೆತ್ತರಕ್ಕೆ ಹಾರಿದ ಕಾಳಿಂಗ ಸರ್ಪ – ವಿಡಿಯೋ ನೋಡಿ

    ದಿಢೀರನೇ ಸೊಂಟದೆತ್ತರಕ್ಕೆ ಹಾರಿದ ಕಾಳಿಂಗ ಸರ್ಪ – ವಿಡಿಯೋ ನೋಡಿ

    ಚಿಕ್ಕಮಗಳೂರು: 13 ಅಡಿಯ ಬೃಹತ್ ಕಾಳಿಂಗ ಸರ್ಪವನ್ನ ಸೆರೆ ಹಿಡಿಯುವಾಗ ಮೂರು-ನಾಲ್ಕು ಬಾರಿ ಉರಗತಜ್ಞರ ಮೇಲೆಯೇ ದಾಳಿ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ದ್ವಾರಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಶ್ರೀಧರಗೌಡ ಎಂಬವರ ಮನೆ ಅಂಗಳಕ್ಕೆ ಕಾಳಿಂಗ ಸರ್ಪ ಆಗಮಿಸಿದೆ. ತಕ್ಷಣ ಅದನ್ನು ಸೆರೆ ಹಿಡಿಯಲು ಉರಗತಜ್ಞ ಹರೀಂದ್ರ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹರೀಂದ್ರ ಸೆರೆಹಿಡಿಯಲು ಎಳೆದಾಡುತ್ತಿದ್ದಾಗ ಆಕ್ರೋಶಗೊಂಡ ಕಾಳಿಂಗ ಹರೀಂದ್ರ ಅವರ ಮೇಲೆಯೇ ದಾಳಿಗೆ ಯತ್ನಿಸಿದೆ.

    ಕಾಳಿಂಗ ಆಕ್ರೋಶ ಕಂಡ ಹರೀಂದ್ರ ಕೂಡ ಒಂದು ಕ್ಷಣ ವಿಚಲಿತಗೊಂಡಿದ್ದಾರೆ. ಕಾಳಿಂಗನ ಅಬ್ಬರ ಕಂಡು ಸ್ಥಳಿಯರು ಕೂಡ ಶಾಕ್ ಆಗಿದ್ದಾರೆ. ಅಂತಿಮವಾಗಿ ಒಂದು ಗಂಟೆಗಳ ಕಾಲ ನಿರಂತರ ಕಾರ್ಯಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹರೀಂದ್ರ ಅವರು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳೀಯ ಅರಣ್ಯಕ್ಕೆ ಬಿಟ್ಟಿದ್ದಾರೆ.

    https://www.youtube.com/watch?v=lUEnsjtbahw

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೊಸ ವರ್ಷ ಆಚರಣೆಗೆ ಚಿಕ್ಕಮಗ್ಳೂರಿಗೆ ಹೋಗುವ ಮುನ್ನ ಈ ಸ್ಟೋರಿ ಓದಿ

    ಹೊಸ ವರ್ಷ ಆಚರಣೆಗೆ ಚಿಕ್ಕಮಗ್ಳೂರಿಗೆ ಹೋಗುವ ಮುನ್ನ ಈ ಸ್ಟೋರಿ ಓದಿ

    ಚಿಕ್ಕಮಗಳೂರು: ಹೊಸ ವರ್ಷವನ್ನ ಕಾಫಿನಾಡು ಚಿಕ್ಕಮಗಳೂರಲ್ಲಿ ಸ್ವಾಗತಿಸೋಣ ಅಂತ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ಹೋಟೆಲ್‍ನ ಬುಕ್ ಮಾಡಿದರೆ ಓಕೆ. ಹೋಗಿ ನೋಡೋಣ, ಮಾಡೋಣ, ಹುಡುಕೋಣ ಅನ್ನೋರಿದ್ದರೆ ಬರಲೇಬೇಡಿ. ಯಾಕೆಂದರೆ ಕಾಫಿನಾಡಿನ ಶೇಕಡ 99ರಷ್ಟು ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳು ಬುಕ್ಕಾಗಿವೆ. ಅದು ಒಂದೂವರೆ ಎರಡು ತಿಂಗಳ ಹಿಂದೆಯೇ ರಾಜ್ಯ, ಹೊರರಾಜ್ಯ, ವಿದೇಶಗಳಿಂದಲೂ ಪ್ರವಾಸಿಗರೂ ಚಿಕ್ಕಮಗಳೂರಲ್ಲಿ ಜಮಾಯಿಸಿದ್ದು, ಕಾಫಿನಾಡಲ್ಲೀಗ ಪ್ರವಾಸಿಗರ ಜಾತ್ರೆ ನಡೆಯುತ್ತಿದೆ.

    ಶನಿವಾರ, ಭಾನುವಾರ ವೀಕೆಂಡ್, ಮಂಗಳವಾರ ಹೊಸ ವರ್ಷ, ಸೋಮವಾರ ಅದಕ್ಕಾಗಿ ಸಿದ್ಧತೆ. ಪ್ರಕೃತಿಯ ಸೂರಿನಡಿ ಕಾಫಿನಾಡ ಸೌಂದರ್ಯ ಸವಿಯುತ್ತ ಹೊಸ ವರ್ಷಕ್ಕೆ ವೆಲ್‍ಕಂ ಹೇಳುವುದಕ್ಕೆ ಲಕ್ಷಾಂತರ ಪ್ರವಾಸಿಗರು ಕಾತರದಿಂದ ಕಾಯುತ್ತಿದ್ದಾರೆ. ಈ ವರ್ಷದ ಮಹಾಮಳೆಗೆ ಕೇರಳ-ಕೊಡಗು ಕೊಚ್ಚಿ ಹೋದ ಪರಿಣಾಮ ಕಾಫಿನಾಡಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ, ಸೀತಾಳಯ್ಯನಗಿರಿ, ಶೃಂಗೇರಿ, ಹೊರನಾಡು, ಕುದುರೆಮುಖ ಸೇರಿದಂತೆ ಪ್ರಮುಖ ಗಿರಿಶಿಖರಗಳಲ್ಲಿ ಪ್ರವಾಸಿಗರು ಸೋಮವಾರ ರಾತ್ರಿಗಾಗಿ ಹಾತೊರೆಯುತ್ತಿದ್ದಾರೆ.

    ಪ್ರವಾಸಿಗರು ಅಪರೂಪದ ಪ್ರಕೃತಿ ಸೌಂದರ್ಯ ಕಂಡು ಮಲೆನಾಡ ಮಡಿಲಲ್ಲಿ ಮೈಮರೆಯುತ್ತಿದ್ದಾರೆ. ಬೆಟ್ಟಗುಡ್ಡಗಳ ನಡುವೆ ಹಾದು ಹೋಗುವ ಮೋಡಗಳ ಕಣ್ಣಾಮುಚ್ಚಾಲೆ ಕಂಡು ಪುಳಕಿತರಾಗುತ್ತಿದ್ದು, ಶನಿವಾರ-ಭಾನುವಾರ ಶಾರದಾಂಭೆ ಹಾಗೂ ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಡಿಸೆಂಬರ್ 31ರ ರಾತ್ರಿಯನ್ನ ಎದುರು ನೋಡುತ್ತಿದ್ದಾರೆ. ಆದರೆ ಪ್ರವಾಸಿಗರ ಮೋಜು-ಮಸ್ತಿಯಿಂದ ಪ್ಲಾಸ್ಟಿಕ್, ಬಾಟಲಿಗಳು ಪ್ರಕೃತಿಯಲ್ಲಿ ಸೇರಿ ಇಲ್ಲಿನ ಸೌಂದರ್ಯ ಹಾಳಾಗುತ್ತಿದೆ ಎಂದು ಹೋಂ ಸ್ಟೇ ಮಾಲೀಕ ಗಿರೀಶ್ ಹೇಳಿದ್ದಾರೆ.

    ಕಾಂಕ್ರಿಟ್ ಕಾಡಿನ ಮಧ್ಯೆ ವಾಯು ಹಾಗೂ ಶಬ್ಧ ಮಾಲಿನ್ಯದಿಂದ ಕಳೆದು ಹೋಗಿದ್ದ ಪ್ರವಾಸಿಗರಿಗೆ ಭೂಲೋಕದ ಸ್ವರ್ಗ ಕಾಫಿನಾಡು ವಿಶಿಷ್ಟ ಅನುಭವ ನೀಡುತ್ತಿದೆ. ಪರ್ವತ ಶ್ರೇಣಿಗಳಲ್ಲಿ ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿಯ ವಿಸ್ಮಯ ಕಂಡು ಪ್ರವಾಸಿಗರು ಮೈಮರೆಯುತ್ತಿದ್ದಾರೆ. ಆದರೆ ಪ್ರವಾಸಿಗರ ದಂಡನ್ನ ಕಂಡ ಹೋಂ ಸ್ಟೇ, ರೆಸಾರ್ಟ್ ಹಾಗೂ ಲಾಡ್ಜ್ ಮಾಲೀಕರು ಪ್ರವಾಸಿಗರಿಂದ ದುಬಾರಿ ಹಣ ಕೇಳುತ್ತಿದ್ದಾರೆ. ಈ ಮಟ್ಟದ ಪ್ರವಾಸಿಗರು ಬಂದಿದ್ದರಿಂದ ವಾಹನಗಳನ್ನ ಕಂಟ್ರೋಲ್ ಮಾಡುವುದಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಜಿಲ್ಲೆಯ ಬಹುತೇಕ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳು ಭರ್ತಿಯಾಗಿದ್ದು, ಬುಕ್ಕಿಂಗ್ ಕ್ಯಾನ್ಸಲ್ ಆದರಷ್ಟೆ ರೂಂ ಸಿಗುವದು ಎಂಬಂತಾಗಿದೆ. ಇನ್ನು ಹೋಂ ಸ್ಟೆ, ರೆಸಾರ್ಟ್ ಮಾಲೀಕರು ಕೂಡ ಬಗೆಬಗೆಯ ಭೋಜನ, ಡಿಜೆ ಪಾರ್ಟಿ, ಫೈರ್ ಕ್ಯಾಂಪ್ ಸೇರಿದಂತೆ ಪ್ರವಾಸಿಗರ ಬೇಡಿಕೆಯನ್ನ ಈಡೇರಿಸೋದಕ್ಕೆ ಸನ್ನದ್ಧರಾಗಿದ್ದಾರೆ ಎಂದು ಹೋಂ ಸ್ಟೇ ಮಾಲೀಕ ಗುರುದತ್ ತಿಳಿಸಿದ್ದಾರೆ.

    ಹೊಸ ವರ್ಷ ವಾರದ ಆರಂಭದ ದಿನದಲ್ಲಿ ಬಂದಿರುವುದು ಪ್ರವಾಸಿಗರಿಗೆ ಹಾಗೂ ಯುವಜನತೆಗೆ ಡಬಲ್ ಧಮಾಕ ಬಂದಂತಾಗಿದೆ. ವೀಕೆಂಡ್‍ನಲ್ಲಿ ಪ್ರಕೃತಿ ಹಾಗೂ ದೈವದ ದರ್ಶನ ಪಡೆದು ಡಿಸೆಂಬರ್ 31ರ ರಾತ್ರಿ ಕಾಯುತ್ತಿದ್ದಾರೆ. ಈ ಸುಮಧುರ ಘಳಿಗೆ ಲಕ್ಷಾಂತರ ಜನಕ್ಕೆ ಚಿಕ್ಕಮಗಳೂರಿನ ಪ್ರಕೃತಿ ಸೌಂದರ್ಯ ಸವಿಯುವ ಅವಕಾಶ ಕಲ್ಪಿಸಿದೆ. ಇನ್ನೂ ನಾಲ್ಕು ದಿನ ಕಾಫಿನಾಡು ಪ್ರವಾಸಿಗರ ನಾಡಾಗಿರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ಬೆಂಗಳೂರು: ಕರ್ನಾಟಕದ ರಿಯಲ್ ಸಿಂಗಂ, ಭ್ರಷ್ಟ ರಾಜಕಾರಣಿಗಳನ್ನೇ ಜೈಲಿಗಟ್ಟಿ ಅಬ್ಬರಿಸಿ ಲೋಕಾಯುಕ್ತಕ್ಕೆ ಹೊಸ ಖದರ್ ತಂದು ಕೊಟ್ಟಿದ್ದ ಯುವ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ.

    ಮಧುಕರ್ ಶೆಟ್ಟಿಯವರನ್ನು ನೋಡದವರು ಕೂಡ ಅವರು ಮಾಡಿದ ಕೆಲಸಗಳನ್ನು ಕೇಳಿ ಗೌರವ ನೀಡುತ್ತಾ ಇದ್ದರು. ಅವರ ಹೆಸರಿನ ಮಹತ್ವವೇ ಹಾಗಿತ್ತು. ಆದ್ರೆ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೆಚ್1ಎನ್1 ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ 8.15ಕ್ಕೆ ಹೈದ್ರಾಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಮಧುಕರ್ `ದಕ್ಷತೆ’ಯ ಹಾದಿ:
    1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿರುವ ಇವರು 2003 ರಿಂದ 2004ರವರೆಗೆ ಚಾಮರಾಜನಗರ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. 2011ರಲ್ಲಿ ವಿದ್ಯಾಭ್ಯಾಸದ ರಜೆ ತೆಗೆದುಕೊಂಡ ಬಳಿಕ ತರಬೇತಿ ಮತ್ತು ನೇಮಕಾತಿ ವಿಭಾಗದ ಡಿಐಜಿ ಆಗಿ ಬಡ್ತಿ ಪಡೆದ್ರು. ಹೈದರಾಬಾದ್‍ನ ನ್ಯಾಷನಲ್ ಪೊಲೀಸ್ ಅಕಾಡೆಮಿಯಲ್ಲಿ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಇವರು ದೆಹಲಿಯ ಜೆಎನ್‍ಯುನಿಂದ ಸಮಾಜಶಾಸ್ತ್ರದಲ್ಲಿ ಎಂ.ಎ ಹಾಗೂ ನ್ಯೂಯಾರ್ಕ್ ನ ಯೂನಿವರ್ಸಿಟಿಯಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ.

    ಲೋಕಾಯುಕ್ತದಲ್ಲಿ ಎಸ್ಪಿಯಾಗಿದ್ದಾಗ ಮನೆ ಮಾತಾಗಿದ್ದರು. ಲೋಕಾಯುಕ್ತ ಎಸ್ಪಿಯಾಗಿ ನಿಯೋಜನೆಗೊಂಡ ಎರಡೇ ತಿಂಗಳಿಗೆ ಎರಡು ಜಿಲ್ಲೆಯ ಎಸ್ಪಿಗಳನ್ನು ಟ್ರಾಪ್ ಮಾಡಿ ಲಂಚ ಪಡೆಯುವಾಗ ಜೈಲಿಗೆ ಅಟ್ಟಿದ್ರು. ಆದ್ರೆ ಲೋಕಾಯುಕ್ತದಲ್ಲಿ ಆದ ಕೆಲವು ಬೆಳವಣಿಗೆಗಳಿಂದ ಬೇಸತ್ತ ಮಧುಕರ್ ಶೆಟ್ಟಿ, ಅಮೆರಿಕಕ್ಕೆ ತೆರಳಿ ನಾಲ್ಕು ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡಿ ಕರ್ನಾಟಕಕ್ಕೆ ವಾಪಸ್ಸು ಬಂದಿದ್ದರು.

    ಡಿಐಜಿಯಾದ ಮಧುಕರ್ ಶೆಟ್ಟಿಗೆ ಸರ್ಕಾರ ಸರಿಯಾದ ಸ್ಥಾನ ಮಾನ ನೀಡಿರಲಿಲ್ಲ. ಇದರಿಂದ ಬೇಸತ್ತು ಮತ್ತೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸಕ್ಕೆ ತೆರಳಿದ್ದರು. ಕರ್ನಾಟಕದಿಂದ ಕೇಂದ್ರ ಸೇವೆಗೆ ಮರಳಿದ್ದ ಅವರನ್ನ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ನಿಯೋಜನೆಗೊಂಡಿದ್ದರು.

    ಚಾಮರಾಜನಗರ ಜಿಲ್ಲೆಯಲ್ಲಿ ಎಸ್ಪಿಯಾಗಿದ್ದಾಗ ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರಿಗೆ ಬಿಸಿ ಮುಟ್ಟಿಸುತ್ತಿದ್ದರು.  ಒಟ್ಟಿನಲ್ಲಿ ಲೋಕಾಯುಕ್ತಕ್ಕೆ ಹೊಸ ಖದರ್ ತಂದುಕೊಟ್ಟ ನೇರ ನಡೆ ನುಡಿಯ ನಿಷ್ಠುರ ಅಧಿಕಾರಿಯಾಗಿದ್ದ ಮಧುಕರ್, ಲೋಕಾಯುಕ್ತದಲ್ಲೂ ಭ್ರಷ್ಟಾಚಾರ ಇದೆ ಎಂದು ಹೇಳಿ ಬಿರುಗಾಳಿ ಎಬ್ಬಿಸಿದ್ದ ಸಿಂಗಂ ಆಗಿದ್ದರು. ಇಷ್ಟು ಮಾತ್ರವಲ್ಲದೇ ವೀರಪ್ಪನ್ ಸೆರೆಗಾಗಿ ರಚನೆಗೊಂಡಿದ್ದ ವಿಶೇಷ ಕಾರ್ಯಪಡೆಯಲ್ಲಿಯೂ ಸೇವೆ ಸಲ್ಲಿಸಿದ ಕೀರ್ತಿ ಇವರದ್ದಾಗಿದೆ.

    ಹಳ್ಳಿಗೆ ಹೆಸರು:
    ಉಡುಪಿ ಜಿಲ್ಲೆ ಮೂಲದವರಾದ ಮಧುಕರ್ ಶೆಟ್ಟಿ ಚಿಕ್ಕಮಗಳೂರಿನಿಂದ ವೃತ್ತಿ ಪ್ರಾರಂಭಿಸಿದ್ರು. ಇವರ ಕಾರ್ಯಕ್ಕೆ ಮೂಡಿಗೆರೆಯ ಆಲ್ದೂರಿನ ಜನ ಆ ಊರಿಗೆ ಇಟ್ಟ ಹೆಸರು ಡಿಸಿ ಹಾಗೂ ಎಸ್ಪಿದು. 2006ರಲ್ಲಿ ಆಗಿನ ಜಿಲ್ಲಾಧಿಕಾರಿಯಾಗಿದ್ದ ಹರ್ಷಗುಪ್ತ ಅವರೊಡನೆ ಸೇರಿ ಒತ್ತುವರಿಯಾಗಿದ್ದ ಜಮೀನನ್ನು ಬಿಡಿಸಿ ದಲಿತರಿಗೆ ಕೊಟ್ಟಿದ್ದರು. ಹಾಗಾಗಿ ಜನ ಡಿಸಿ ಹರ್ಷ ಗುಪ್ತಾ, ಎಸ್ಪಿ ಮಧುಕರ್ ಶೆಟ್ಟಿ ಹೆಸರನ್ನ ಸೇರಿಸಿ ಆ ಹಳ್ಳಿಗೆ ಗುಪ್ತಶೆಟ್ಟಿ ಹಳ್ಳಿ ಅಂತಾ ಹೆಸರಿಟ್ಟುಕೊಂಡಿದ್ದಾರೆ.

    ಪತ್ರಕರ್ತರಾಗಿದ್ದ ಉಡುಪಿ ಜಿಲ್ಲೆಯ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಪುತ್ರ ಮಧುಕರ್‍ಗೆ ಕೇವಲ 47 ವರ್ಷ ವಯಸ್ಸಾಗಿತ್ತು. ಇವರು 1998ರ ಕರ್ನಾಟಕ ಕೇಡರ್‍ನ ಐಪಿಎಸ್ ಅಧಿಕಾರಿಯಾಗಿದ್ದರು. ಭಾರತೀಯ ಕಂದಾಯ ಸೇವೆ ಅಧಿಕಾರಿಯಾಗೋ ಅವಕಾಶ ಸಿಕ್ಕರೂ ತಾನು ಪೊಲೀಸ್ ಅಧಿಕಾರಿಯೇ ಆಗಬೇಕೆಂದು ಹಠ ಹಿಡಿದು ಖಾಕಿ ಧರಿಸಿ ಆ ಸೇವೆಗಾಗಿಯೇ ತಮ್ಮ ಜೀವನವನ್ನ ಮುಡಿಪಾಗಿಟ್ಟಿದ್ದರು. ಸದ್ಯ ಮಧುಕರ್ ಶೆಟ್ಟಿಗೆ ಒಬ್ಬಳು ಪುತ್ರಿ ಮತ್ತು ಪತ್ನಿಯನ್ನ ಅಗಲಿದ್ದಾರೆ. ಮಧುಕರ್ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು, ಸಿದ್ದರಾಮಯ್ಯ, ಶೋಭಾ ಕರಂದ್ಲಾಜೆ ಸಂತಾಪ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದ್ಯದ ಅಮಲಿನಲ್ಲಿ ಚಿಕಿತ್ಸೆಗೆ ಮುಂದಾದ ಸರ್ಕಾರಿ ವೈದ್ಯ!

    ಮದ್ಯದ ಅಮಲಿನಲ್ಲಿ ಚಿಕಿತ್ಸೆಗೆ ಮುಂದಾದ ಸರ್ಕಾರಿ ವೈದ್ಯ!

    – ವೈದ್ಯನ ಬೆಂಬಲಕ್ಕೆ ನಿಂತ್ರಾ ಪೊಲೀಸರು?

    ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ಚಿಕಿತ್ಸೆ ನೀಡಲು ಮುಂದಾಗಿದ್ದ ವೈದ್ಯರೊಬ್ಬರಿಗೆ ಸಾರ್ವಜನಿಕರು ಫುಲ್ ಕ್ಲಾಸ್ ತೆಗೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಕೊಪ್ಪ ಸರ್ಕಾರಿ ಆಸ್ಪತ್ರೆಯ ವೈದ್ಯ ನೀಲಕಂಠಪ್ಪ ಅವರು ನಿನ್ನೆ ರಾತ್ರಿ ಪಾಳೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮದ್ಯ ಸೇವಿಸಿದ್ದ ನೀಲಕಂಠಪ್ಪ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾಗ, ವ್ಯಕ್ತಿಯೊಬ್ಬರ ಸಂಬಂಧಿಕರು ಕುಡಿದು ಚಿಕಿತ್ಸೆ ನೀಡುವುದು ಸರಿಯಲ್ಲ. ಒಂದು ವೇಳೆ ರೋಗಿಗೆ ಏನಾದರು ತೊಂದರೆ ಆದರೆ ನೀವೇ ಜವಾಬ್ದಾರರು ಎಂದು ಕಿಡಿಕಾರಿದ್ರು.

    ಮದ್ಯದ ಮತ್ತಿನಲ್ಲಿದ್ದ ನೀಲಕಂಠಪ್ಪ ಕೂಡ ಸಾರ್ವಜನಿಕರ ಜೊತೆಗೆ ಜಗಳಕ್ಕೆ ಇಳಿದಿದ್ದು, ಅವಾಚ್ಯಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ವೈದ್ಯರ ಪರ ನಿಂತು ಸಾರ್ವಜನಿಕರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

    ವೈದ್ಯ ನೀಲಕಂಠಪ್ಪ ಅವರು ಕುಡಿದು ಚಿಕಿತ್ಸೆ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಅಂತ ಪೊಲೀಸರಿಗೆ ಮನವಿ ಮಾಡಿಕೊಂಡೆವು. ಆದರೆ ಪೊಲೀಸರು ವೈದ್ಯನ ಬೆಂಬಲಕ್ಕೆ ನಿಂತು ನಮ್ಮ ಮೇಲೆ ರೇಗಾಡಿದರು. ಅಷ್ಟೇ ಅಲ್ಲದೆ ನಮ್ಮ ವಿರುದ್ಧವೇ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ

    ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರು, ಚಿಂತಾಮಣಿ, ಮೈಸೂರು, ಉಡುಪಿ ಸೇರಿ 17 ಕಡೆ ಆದಾಯಕ್ಕೂ ಹೆಚ್ಚು ಆಸ್ತಿಗಳಿಸಿದ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಬಸವೇಶ್ವರನಗರ ಮತ್ತು ಸಹಕಾರನಗರ ಎರಡು ಕಡೆ ದಾಳಿ ಮಾಡಿ ಪರಿಶೀಲನೆ ನಡೆಸುವ ಮೂಲಕ ಬೆಳ್ಳಂಬೆಳಗ್ಗೆ ಭ್ರಷ್ಟ ಆಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಐವರು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

    ಹಾಸನ ಜಿಲ್ಲೆಯ ಬೇಲೂರಿನ ಸಹಕಾರಿ ಬ್ಯಾಂಕ್ ಅಧಿಕಾರಿ ಆರ್. ಶ್ರೀಧರ್, ಯೋಜನಾ ಆಯೋಗದ ಸಹಾಯಕ ನಿರ್ದೇಶಕ ಬೇಸತ್ತಪ್ಪ, ದಾವಣಗೆರೆಯ ಹೆಚ್ಚುವರಿ ಕೃರ್ಷಿ ನಿದೇರ್ಶಕ ಹಂಸವೇಣಿ, ಮಂಗಳೂರಿನ ಸರ್ಕಾರಿ ಶೈಕ್ಷಣಿಕ ತರಬೇತಿ ಕೇಂದ್ರದ ಡಿ. ಮಂಜುನಾಥ್ ಮತ್ತು ಮೈಸೂರಿನ ಮುಡಾ ಕಿರಿಯ ಅಭಿಯಂತರ ಕೆ. ಮಾಣಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

    ದಾವಣಗೆರೆಯ ಕೃಷಿ ಇಲಾಖೆ ಪ್ರಭಾರಿ ನಿರ್ದೇಶಕಿ ಹಂಸವೇಣಿ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹಂಸವೇಣಿ ಹೆಸರಿನಲ್ಲಿ 75/40 ಅಳತೆಯ 3 ಅಂತಸ್ತಿನ ಒಂದು ಮನೆ, ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮದಲ್ಲಿ 15 ಎಕರೆ ಜಮೀನು, 1 ಜೈಲೋ ಕಾರು, 5 ದ್ವಿಚಕ್ರ ವಾಹನ, 1 ಟ್ರ್ಯಾಕ್ಟರ್ ಹಾಗೂ ಅಪಾರ ಪ್ರಮಾಣದ ಬೆಳ್ಳಿ, ಬಂಗಾರ ಪತ್ತೆಯಾಗಿದೆ. ನಾಗವೇಣಿ ಪತಿ ಕಾರವಾರ ತೋಟಗಾರಿಕೆ ಇಲಾಖೆ ಎಡಿ ಎನ್. ಕುಮಾರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಏಕಾಕಾಲಕ್ಕೆ ಪತಿ ಪತ್ನಿಯರ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಹಂಸವೇಣಿ ತಂದೆ ಮನೆ ಮೇಲೂ ದಾಳಿ ನಡೆಸಿದ್ದಾರೆ. ಇನ್ನು ದಾವಣಗೆರೆ ಎಸಿಬಿ ಡಿವೈಎಸ್ಪಿ ಪರಮೇಶ್ವರಪ್ಪ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ದಾಖಲೆಗಳನ್ನು ಪರಿಶೀಲನೆ ನಡೆಯುತ್ತಿದೆ.

    ಉಡುಪಿಯಲ್ಲೂ ಎಸಿಬಿ ಅಧಿಕಾರಿಗಳು ಭ್ರಷ್ಟರ ಮೇಲೆ ದಾಳಿ ಮಾಡಿದ್ದು, ಮಂಗಳೂರಿನ ಸರ್ಕಾರಿ ಶಿಕ್ಷಕ ತರಬೇತಿ ಕೇಂದ್ರದ ರೀಡರ್ ಮಂಜುನಾಥಯ್ಯ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ. ಈ ಹಿಂದೆ ಉಡುಪಿ ನಗರಸಭೆ ಪೌರಾಯುಕ್ತನಾಗಿ ಕಾರ್ಯನಿರ್ವಹಿಸಿದ್ದ ಮಂಜುನಾಥಯ್ಯ, ಸದ್ಯ ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗಿಯಾಗಿದ್ದಾರೆ. ಅದಕ್ಕೂ ಮೊದಲು ಅವರು ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದರು. ಮಣಿಪಾಲದ ಪ್ರಿಯದರ್ಶಿನಿ ಫ್ಲಾಟ್ ನಲ್ಲಿರುವ ಮಂಜುನಾಥಯ್ಯ ಮನೆ ಮತ್ತು ಏಕಕಾಲದಲ್ಲಿ ಚಿಕ್ಕಮಗಳೂರು ಕಡೂರು ತಾಲೂಕು ಬೀರೂರಿನಲ್ಲೂ ದಾಳಿ ಮಾಡಲಾಗಿದೆ.

    ಶಿವಮೊಗ್ಗ ಚೆನ್ನಗಿರಿಯಲ್ಲಿರುವ ಮಂಜುನಾಥನ ಬಾವನ ಮನೆಗೂ ದಾಳಿಯಾಗಿದೆ. ಎಸಿಬಿಯ ಪಶ್ಚಿಮ ವಲಯ ಎಸ್‍ಪಿ ಶೃತಿಯವರ ನೇತೃತ್ವದಲ್ಲಿ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ, ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಮೇಲಿಂದ ಮೇಲೆ ದೂರು ಬಂದ ಕಾರಣ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

    ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಜಿಲ್ಲೆಯ ಸಹಕಾರ ಸಂಘಗಳ ಇಲಾಖೆಯ ನಿಬಂಧಕ ಶ್ರೀಧರ್ ಗೆ ಸ್ವಗ್ರಾಮ ಚಿಂತಾಮಣಿ ಆಗಿದ್ದು, ಅವರ ಸ್ವಂತ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮನೆಯಲ್ಲಿ ಯಾರೂ ವಾಸವಿಲ್ಲವಾದರೂ ಖಾಲಿ ಮನೆಯ ಬೀಗ ತೆಗೆಸಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಶ್ರೀಧರ್ ಬಾವ ನಿವೃತ್ತ ಪ್ರಾಂಶುಪಾಲ ರಾಮಚಂದ್ರಪ್ಪ ಮನೆ ಮೇಲೂ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇರಳದ ಎಂಜಿನಿಯರ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಲಾಡ್ಜ್ ನಲ್ಲಿ ಪ್ರೇಯಸಿ ಜೊತೆ ಪ್ರತ್ಯಕ್ಷ

    ಕೇರಳದ ಎಂಜಿನಿಯರ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಲಾಡ್ಜ್ ನಲ್ಲಿ ಪ್ರೇಯಸಿ ಜೊತೆ ಪ್ರತ್ಯಕ್ಷ

    ಚಿಕ್ಕಮಗಳೂರು: ಕೇರಳದ ಎಂಜಿನಿಯರ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಪತ್ತೆಯಾಗಿ ತಿಂಗಳ ಬಳಿಕ ಎಂಜಿನಿಯರ್ ಪ್ರತ್ಯಕ್ಷವಾಗಿದ್ದಾರೆ.

    ಎಂಜಿನಿಯರ್ ಸಂದೀಪ್ ಮುಂಬೈನ ಲಾಡ್ಜ್ ನಲ್ಲಿ ಪ್ರೇಯಸಿ ಜೊತೆ ಪ್ರತ್ಯಕ್ಷನಾಗಿದ್ದಾರೆ. ನಾಗಲಾಪುರ ಗ್ರಾಮದ ಬಳಿ ತುಂಗಾ ಸೇತುವೆ ಮೇಲೆ ಸಂದೀಪ್ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದರು. ಈಗ ಕೇರಳ ಪೊಲೀಸರಿಗೆ ಮುಂಬೈನಲ್ಲಿ ಪತ್ತೆಯಾಗಿದ್ದಾರೆ. ಸಂದೀಪ್ ಪ್ರೇಯಸಿಯೂ ನಾಪತ್ತೆಯಾಗಿರುವ ಬಗ್ಗೆ ಕೇರಳದಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ ಕೇರಳದ ಎಂಜಿನಿಯರ್ ನಾಪತ್ತೆ

    ಏನಿದು ಪ್ರಕರಣ?
    ಕೇರಳದ ಕ್ಯಾಲಿಕಟ್‍ನ ಖಾಸಗಿ ಜಾಹೀರಾತು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದರು. ಆದರೆ ನವೆಂಬರ್ 28 ರಂದು ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ತುಂಗಾ ಸೇತುವೆ ಮೇಲೆ ಸಂದೀಪ್ ಬೈಕ್ ಪತ್ತೆಯಾಗಿತ್ತು. ನದಿ ದಡದ ದಂಡೆಯ ಮೇಲೆ ವಾಚ್, ಟವೆಲ್ ಕೂಡ ಪತ್ತೆಯಾಗಿದೆ. ಟ್ರಕ್ಕಿಂಗ್ ಸಲುವಾಗಿ ಬಂದಿದ್ದ ಅವರು ಮೂರು ದಿನಗಳ ಕಾಲ ಸ್ನೇಹಿತರ ಸಂಪರ್ಕದಲ್ಲಿದ್ದರು. ಕೊನೆ ದಿನದ ಸಂದೀಪ್ ನಾಪತ್ತೆಯಾಗಿದ್ದರು. ಸೇತುವೆ ಬಳಿ ವಾಚ್, ಟವೆಲ್ ಪತ್ತೆಯಾಗಿದ್ದರಿಂದ ಈಜಲು ಹೋಗಿ ನದಿಯಲ್ಲಿ ಮುಳುಗಿ ಸಾವನಪ್ಪಿರಬಹುದು ಎಂದು ಶಂಕಿಸಲಾಗಿತ್ತು.

    ಈ ಬಗ್ಗೆ ಕೇರಳದ ನಲ್ಲಳಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯ ದೂರು ದಾಖಲಾಗಿದ್ದು, ಕೇರಳ ಪೊಲೀಸರು ಸಂದೀಪ್‍ಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಈಗ ಮುಂಬೈನಲ್ಲಿ ಪತ್ತೆಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv