Tag: Chikkanayakana Halli

  • ದಲಿತ ಮಹಿಳೆ ಹತ್ಯೆ ಪ್ರಕರಣ – 21 ಮಂದಿ ದೋಷಿಗಳಿಗೆ ಜೀವಾವಧಿ ಶಿಕ್ಷೆ

    ದಲಿತ ಮಹಿಳೆ ಹತ್ಯೆ ಪ್ರಕರಣ – 21 ಮಂದಿ ದೋಷಿಗಳಿಗೆ ಜೀವಾವಧಿ ಶಿಕ್ಷೆ

    ತುಮಕೂರು: 2019ರಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ ಜಿಲ್ಲಾ ಸತ್ರ ನ್ಯಾಯಾಲಯವು 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ (Life Imprisonment) ವಿಧಿಸಿ ತೀರ್ಪು ನೀಡಿದೆ.

    ತುಮಕೂರಿನ (Tumakuru) 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ದೋಷಿ ಎಂದು ಕೋರ್ಟ್ ಆದೇಶಿಸಿತ್ತು. ಇದೀಗ ಕೋರ್ಟ್ 21 ಮಂದಿಗೂ ಜೀವಾವಧಿ ಶಿಕ್ಷೆ ವಿಧಿಸಿದ್ದು, ಒಟ್ಟು 2,83,200 ರೂ. ದಂಡ ವಿಧಿಸಿದೆ. ಅಂದರೆ ತಲಾ ಒಬ್ಬರಿಗೆ 13,500 ದಂಡ ವಿಧಿಸಿದೆ.ಇದನ್ನೂ ಓದಿ: ಕೊಪ್ಪಳ | 6 ತಿಂಗಳಿಂದ ಪಡಿತರ ಪಡೆಯದ 5,779 ಬಿಪಿಎಲ್ ಕಾರ್ಡ್‌ ರದ್ದು

    ಒಟ್ಟು 21 ದೋಷಿಗಳ ಪೈಕಿ ಇಬ್ಬರು ಮಹಿಳೆಯರು, 19 ಜನ ಪುರುಷರಿದ್ದಾರೆ. ಆಗಿನ ಡಿವೈಎಸ್‌ಪಿ ಶಿವರುದ್ರಸ್ವಾಮಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ನಾಗಿರೆಡ್ಡಿ ಆದೇಶ ಹೊರಡಿಸಿದ್ದಾರೆ.

    ಘಟನೆ ಏನು?
    ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರ ಜೂನ್ 20ರಂದು ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.ಇದನ್ನೂ ಓದಿ: ಆಮೀರ್ ಖಾನ್ ಜೊತೆಗಿನ ಸುದೀಪ್ ಫೋಟೋ ವೈರಲ್- ಸಿನಿಮಾ ಬಗ್ಗೆ ಸಿಗಲಿದ್ಯಾ ಗುಡ್‌ ನ್ಯೂಸ್?

  • Tumakuru| ದಲಿತ ಮಹಿಳೆ ಹತ್ಯೆ ಪ್ರಕರಣ – 21 ಮಂದಿ ದೋಷಿಗಳಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟ

    Tumakuru| ದಲಿತ ಮಹಿಳೆ ಹತ್ಯೆ ಪ್ರಕರಣ – 21 ಮಂದಿ ದೋಷಿಗಳಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟ

    ತುಮಕೂರು: 2019ರಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಲಿತ ಮಹಿಳೆ (Dalit Woman) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ 21 ಆರೋಪಿಗಳಿಗೆ ಇಂದು ನ್ಯಾಯಾಲಯ (Court) ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

    ತುಮಕೂರಿನ (Tumakuru) 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಇದನ್ನೂ ಓದಿ: ರೇಷನ್ ಕಾರ್ಡ್ ಗೊಂದಲಕ್ಕೆ ನಾನೇ ಹೊಣೆ, 7 ವಾರದೊಳಗೆ ಅದೇ ಐಡಿಯಲ್ಲಿ ಬಿಪಿಎಲ್‌ ಕಾರ್ಡ್‌ : ಮುನಿಯಪ್ಪ

    ಚಿಕ್ಕನಾಯಕನಹಳ್ಳಿ (Chikkanayakana Halli) ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರಲ್ಲಿ ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಗುತ್ತಿಗೆ ಪಡೆಯಲು ಭಾರತದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್‌

  • ಹಂದನಕೆರೆಯಲ್ಲಿ ಅಗ್ನಿ ಅವಘಡ 100 ಕುರಿ, 200 ಕೋಳಿಗಳ ಮಾರಣಹೋಮ

    ಹಂದನಕೆರೆಯಲ್ಲಿ ಅಗ್ನಿ ಅವಘಡ 100 ಕುರಿ, 200 ಕೋಳಿಗಳ ಮಾರಣಹೋಮ

    ತುಮಕೂರು: ಅಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ (Fire Accident) ತಗುಲಿ 100 ಕುರಿ, 200 ಕೋಳಿ ಹಾಗೂ 6 ಹಸುಗಳು ಸಾವಿಗೀಡಾದ ದುರ್ಘಟನೆ ಚಿಕ್ಕನಾಯಕನಹಳ್ಳಿಯ (Chikkanayakana Halli) ಹಂದನಕೆರೆಯಲ್ಲಿ ನಡೆದಿದೆ.

    ಸೋಮವಾರ ರಾತ್ರಿ 7:30ರ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವ್ಯಾಪಿಸಿದ ಬೆಂಕಿಯಿಂದ ಸಾಕು ಪ್ರಾಣಿಗಳು ಸಾವಿಗೀಡಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಸುಟ್ಟು ಕರಕಲಾದ ಹಸು, ಕುರಿ ಹಾಗೂ ಕೋಳಿಗಳ ಕಳೆಬರಹಗಳು ಮನಕಲುಕುವಂತಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ತನಿಖೆಗೆ ಹಾಜರಾಗದೇ ಶ್ರೀಕಿ ಕಳ್ಳಾಟ

    ಘಟನೆಯಿಂದ ಆಘಾತಗೊಂಡ ರೈತ ಚೇತನ್ ಕುಮಾರ್ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸುಮಾರು 30 ಲಕ್ಷ ರೂ.ಗಳಿಗೂ ಹೆಚ್ಚಿನ ನಷ್ಟ ಸಂಭವಿಸಿದೆ. ಘಟನೆ ನಡೆದು 12 ಗಂಟೆಗಳು ಕಳೆದರೂ ರೈತನ ನೆರವಿಗೆ ಬರದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಕೆರೆಯ ಮಣ್ಣು ಅಕ್ರಮ ಸಾಗಾಟ – ಗ್ರಾಮಸ್ಥರಿಂದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ

  • ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

    ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

    ತುಮಕೂರು: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ (Student) ಶವವಾಗಿ ಪತ್ತೆಯಾದ ಘಟನೆ ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿ (Chikkanayakana Halli) ತಾಲೂಕಿನ ಹುಳಿಯಾರಿನಲ್ಲಿ (Huliyaru) ನಡೆದಿದೆ.

    ಹೇಮಂತ್ ಕುಮಾರ್ (16) ಮೃತ ದುರ್ದೈವಿ. ಈತ ಹಂದನಕೆರೆ ಹೋಬಳಿಯ ಗೋಪಾಲಪುರದ ನಿವಾಸಿಯಾಗಿದ್ದು, ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಕ್ರೀಡಾಕೂಟವಿದೆ (Sports Event) ಎಂದು ಮೂರು ದಿನದ ಹಿಂದೆ ಮನೆಯಿಂದ ಹೋಗಿದ್ದ ಹೇಮಂತ್ ಕುಮಾರ್ ಬಳಿಕ ಮನೆಗೆ ವಾಪಸ್ ಬಂದಿರಲಿಲ್ಲ. ಪೋಷಕರು ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಇದನ್ನೂ ಓದಿ: ಗೃಹಪ್ರವೇಶದಲ್ಲಿ ಊಟ ಮಾಡಿದ 30 ಜನ ಅಸ್ವಸ್ಥ

    ಶನಿವಾರ ಹೇಮಂತ್ ಕುಮಾರ್ ಶವವಾಗಿ ಪತ್ತೆಯಾಗಿದ್ದು, ಹುಳಿಯಾರು ಕೆರೆ ಅಂಗಳದಲ್ಲಿ ಆತನ ಶವ ಪತ್ತೆಯಾಗಿದೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ತಾಯಿಯ ಸಮಾಧಿ ಪಕ್ಕದಲ್ಲೇ ಯುವಕ ನೇಣಿಗೆ ಶರಣು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರೇಯಸಿಯ ಕತ್ತು ಕುಯ್ದು ಆತ್ಮಹತ್ಯೆಗೆ ಶರಣಾದ ಪ್ರೇಮಿ

    ಪ್ರೇಯಸಿಯ ಕತ್ತು ಕುಯ್ದು ಆತ್ಮಹತ್ಯೆಗೆ ಶರಣಾದ ಪ್ರೇಮಿ

    ತುಮಕೂರು: ಪ್ರೀತಿಯಲ್ಲಿ (Love) ಬಿರುಕು ಉಂಟಾದ ಹಿನ್ನೆಲೆ ಪ್ರೇಯಸಿಯ ಕತ್ತು ಕುಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತುಮಕೂರಿನ (Tumakuru) ಚಿಕ್ಕನಾಯಕನಹಳ್ಳಿಯ (Chikkanayakana Halli) ಹುಳಿಯಾರು ಹೋಬಳಿಯ ಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

    ಭಟ್ಟರಹಳ್ಳಿಯ ಸಿದ್ದರಾಮಯ್ಯ ಅವರ ಪುತ್ರ ಬಿ.ಎಸ್.ವಿನಯಕುಮಾರ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಅದೇ ಗ್ರಾಮದ ದಿ.ಕಲ್ಲೆಗೌಡರ ಪುತ್ರಿ ಕೆ.ಜೀವಿತಾ (17) ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಜೀವಿತಾ ದೊಡ್ಡಬಿದರೆ ಗ್ರಾಮದವಳಾಗಿದ್ದು, ತಾಯಿಯ ಜೊತೆ ಭಟ್ಟರಹಳ್ಳಿಯ ಅಜ್ಜಿ ಮನೆಯಲ್ಲಿ ವಾಸವಿದ್ದಳು. ಈಕೆ ತುಮಕೂರಿನ ಕಾಲೇಜು ಒಂದರಲ್ಲಿ ಓದುತ್ತಿದ್ದು, ಈ ವರ್ಷ ದ್ವಿತೀಯ ಪಿಯುಸಿ ಉತ್ತೀರ್ಣಳಾಗಿದ್ದಳು. ಇದನ್ನೂ ಓದಿ: ಕಾರು, ಟಿಟಿ ಮುಖಾಮುಖಿ ಡಿಕ್ಕಿ – ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು

    ವಿನಯಕುಮಾರ್ ಗ್ರಾಮದ ಸಿದ್ದರಾಮೇಶ್ವರ ದೇಗುಲದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಕೆಲ ದಿನಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಇತ್ತೀಚಿಗೆ ಇಬ್ಬರ ನಡುವೆ ಬಿರುಕು ಉಂಟಾಗಿತ್ತು. ಇದರಿಂದ ಕೋಪಗೊಂಡಿದ್ದ ವಿನಯಕುಮಾರ್ ಗುರುವಾರ ಮಂಜಾನೆ 5:30ರ ವೇಳೆಗೆ ಯುವತಿಯ ಮನೆಗೆ ತೆರಳಿ ಮಚ್ಚಿನಿಂದ ಆಕೆಯ ಕುತ್ತಿಗೆಗೆ ಬಲವಾಗಿ ಬೀಸಿದ್ದಾನೆ. ಮಾರಣಾಂತಿಕವಾಗಿ ಗಾಯಗೊಂಡಿರುವ ಆಕೆ ಹಾಸನ (Hassan) ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದನ್ನೂ ಓದಿ: ಬಲೂನ್‌ನೊಂದಿಗೆ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 3ರ ಬಾಲಕಿ ಸಾವು

    ಹಲ್ಲೆ ನಡೆಸಿದ ಬಳಿಕ ವಿನಯಕುಮಾರ್ ಕಣ್ಮರೆಯಾಗಿದ್ದ. ನಾಪತ್ತೆಯಾದ ಆತನಿಗಾಗಿ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಗ್ರಾಮದ ಕಲ್ಯಾಣಿ ಬಳಿ ಆತನ ಟೀ ಶರ್ಟ್ ಪತ್ತೆಯಾಗಿದೆ. ಇದರಿಂದ ಅನುಮಾನಗೊಂಡು ಅಗ್ನಿಶಾಮಕ ದಳದ ಸಿಬ್ಬಂದಿ ಕಲ್ಯಾಣಿಯಲ್ಲಿ ಹುಡುಕಾಟ ನಡೆಸಿದಾಗ ಆತನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಚಾಲಕನ ಬರ್ಬರ ಹತ್ಯೆ