Tag: Chikmagalur

  • ಚಾರ್ಮಾಡಿ ಘಾಟ್ ತಿರುವಿನಲ್ಲಿ ಲಾರಿ ಪಲ್ಟಿ- ಟ್ರಾಫಿಕ್ ಜಾಮ್ ನಿಂದ ಪ್ರಯಾಣಿಕರು ಪರದಾಟ

    ಚಾರ್ಮಾಡಿ ಘಾಟ್ ತಿರುವಿನಲ್ಲಿ ಲಾರಿ ಪಲ್ಟಿ- ಟ್ರಾಫಿಕ್ ಜಾಮ್ ನಿಂದ ಪ್ರಯಾಣಿಕರು ಪರದಾಟ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಈ ಘಟನೆ ಶನಿವಾರ ರಾತ್ರಿ ಸಂಭವಿಸಿದ್ದು, ಇಂದು ಬೆಳಗ್ಗೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಪರಿಣಾಮ ಎಲ್ಲಾ ವಾಹನಗಳು ನಿಂತಲ್ಲೆ ನಿಂತಿವೆ. ಲಾರಿ ಶಿರಾಡಿ ಘಾಟ್ ಬಂದ್ ಹಿನ್ನೆಲೆ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು, ಧರ್ಮಸ್ಥಳಕ್ಕೆ ಸಂಚಾರ ಮಾಡುತ್ತಿತ್ತು. ರಾತ್ರಿ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

    ಈ ಅಪಘಾತದಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಮಾರ್ಗದಲ್ಲಿ ಅತಿಯಾದ ಮಂಜಿನಿಂದ ವಾಹನ ಸವಾರರ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗ ಲಾರಿ ಪಲ್ಟಿಯಾದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹೀಗಾಗಿ ಕೆಲ ಕಾಲ ಪ್ರಯಾಣಿಕರು ಮತ್ತು ಪ್ರವಾಸಿಗರು ಪರದಾಡಿದ್ದಾರೆ.

    ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಹುಣಸೆಹಳ್ಳಿ ಕಾಫಿ ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ- ಗ್ರಾಮಸ್ಥರಲ್ಲಿ ಆತಂಕ

    ಹುಣಸೆಹಳ್ಳಿ ಕಾಫಿ ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ- ಗ್ರಾಮಸ್ಥರಲ್ಲಿ ಆತಂಕ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಣಸೆಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕಾಡು ಕೋಣ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕವುಂಟು ಮಾಡಿದೆ.

    ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡುಕೋಣ ಓಡಾಡುತ್ತಿದ್ದು, ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಅಲ್ಲದೇ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ.

    ಆಹಾರ ಅರಸಿಕೊಂಡು ಕಾಡುಕೋಣಗಳು ಗ್ರಾಮಕ್ಕೆ ಬರುತ್ತಿವೆ. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಆದರೆ ಅವರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ದತ್ತಾಗೆ ಸೋಲು, ನಾಲ್ಕರಲ್ಲಿ ಬಿಜೆಪಿ ಕೈ ಹಿಡಿದ ಚಿಕ್ಕಮಗಳೂರು ಜನ!

    ದತ್ತಾಗೆ ಸೋಲು, ನಾಲ್ಕರಲ್ಲಿ ಬಿಜೆಪಿ ಕೈ ಹಿಡಿದ ಚಿಕ್ಕಮಗಳೂರು ಜನ!

    ಚಿಕ್ಕಮಗಳೂರು: ಜಿಲ್ಲೆಯಲ್ಲಿ 5 ಮತಕ್ಷೇತ್ರಗಳಿದ್ದು, 2013ರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ತಲಾ ಎರಡು ಕ್ಷೇತ್ರದಲ್ಲಿ ಜಯಗಳಿಸಿತ್ತು. ಆದರೆ ಈ ಚುನಾವಣೆಯಲ್ಲಿ ಜೆಡಿಎಸ್ ಮರೆಯಾಗಿದ್ದು, ಬಿಜೆಪಿ 4 ಕ್ಷೇತ್ರದಲ್ಲಿ ಜಯಗಳಿಸಿದೆ.

    2013ರಲ್ಲಿ ಶೃಂಗೇರಿ ಕ್ಷೇತ್ರದಿಂದ ಬಿಜೆಪಿಯ ಡಿ.ಎನ್.ಜೀವರಾಜ್ ಜಯಗಳಿಸಿದ್ದರು. ಆದರೆ, ಈ ಬಾರಿ ಅವರು ಕೇವಲ 2,013 ಮತಗಳ ಅಂತರದಲ್ಲಿ ಸೋತಿದ್ದಾರೆ. ಕಾಂಗ್ರೆಸ್‍ನ ಟಿ.ಡಿ.ರಾಜೇಗೌಡ ಅವರು 62,469 ಮತ ಪಡೆದು ಜಯಗಳಿಸಿದ್ದಾರೆ.

    ಮೂಡಿಗೆರೆ ಮತಕ್ಷೇತ್ರದಿಂದ ಬಿಜೆಪಿಯ ಎಂ.ಪಿ.ಕುಮಾರಸ್ವಾಮಿ ಅವರು 58,783 ಮತ ಪಡೆದು ಜಯಗಳಿಸಿದ್ದಾರೆ. ಎದುರಾಳಿ ಕಾಂಗ್ರೆಸ್‍ನ ಮೋಟಮ್ಮ ಅವರು 46,271 ಮತ ಪಡೆದು ಸೋತಿದ್ದಾರೆ. 2013ರಲ್ಲಿ ಜಯಗಳಿಸಿದ್ದ ಬಿ.ಬಿ.ನಿಂಗಯ್ಯ ಅವರಿಗೆ ಮೂರನೇ ಸ್ಥಾನ ಸಿಕ್ಕಿದೆ.

    2013ರಲ್ಲಿ ಚಿಕ್ಕಮಗಳೂರು ಮತಕ್ಷೇತ್ರದಿಂದ ಬಿಜೆಪಿಯ ಸಿ.ಟಿ.ರವಿ ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿಯೂ ಅವರು 69,863 ಮತ ಪಡೆದು ಜಯಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ಶಂಕರ್ ಅವರು 25,716 ಮತಗಳ ಅಂತರದಿಂದ ಸೋತಿದ್ದಾರೆ.

    ತರೀಕರೆ ಮತಕ್ಷೇತ್ರದಲ್ಲಿ ಕಾಂಗ್ರೆಸ್‍ನ್ನು ಹಿಂದಿಕ್ಕಿ ಬಿಜೆಪಿಯ ಡಿ.ಎಸ್.ಸುರೇಶ್ ಅವರು 11,687 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಎದುರಾಳಿ ಪಕ್ಷೇತರ ಅಭ್ಯರ್ಥಿ ಜಿ.ಎಚ್.ಶ್ರೀನಿವಾಸ್ ಅವರು 33,253 ಮತಪಡೆದು ಸೋತಿದ್ದರು. 2013ರಲ್ಲಿ ಅವರು ಈ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

    2013ರಲ್ಲಿ ಕಡೂರು ಮತಕ್ಷೇತ್ರದಿಂದ ಜೆಡಿಎಸ್‍ನ ವೈ.ಎಸ್.ವಿ.ದತ್ತ ಜಯಗಳಿಸಿದ್ದರು. ಆದರೆ, ಈ ಚುನಾವಣೆಯಲ್ಲಿ ಅವರಿಗೆ ಭಾರಿ ಪೈಪೋಟಿ ನೀಡಿದ ಬಿಜೆಪಿಯ ಬೆಳ್ಳಿ ಪ್ರಕಾಶ್ ಅವರು 15,372 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ವೈ.ಎಸ್.ವಿ.ದತ್ತ ಅವರು 46,860 ಮತ ಪಡೆದು ಸೋತಿದ್ದಾರೆ.

  • ಚಿಕ್ಕಮಗಳೂರು ಕ್ಷೇತ್ರ ಪರಿಚಯ – ಅಖಾಡ ಹೇಗಿದೆ?

    ಚಿಕ್ಕಮಗಳೂರು ಕ್ಷೇತ್ರ ಪರಿಚಯ – ಅಖಾಡ ಹೇಗಿದೆ?

    ಒಂದು ಕಡೆ ದತ್ತಮಾಲೆ ವಿವಾದ, ಮತ್ತೊಂದ್ಕಡೆ ಕೆಂಪು ಉಗ್ರರ ಹೆಜ್ಜೆಯ ಸಪ್ಪಳ, ಬಗರ್ ಹುಕುಂ ಒತ್ತುವರಿಯ ಗುಟುರು. ಕಾಫಿ ಕಹಿಯಾಗೋಕೆ ಇದಕ್ಕಿಂತ ಏನು ಬೇಕು..? ಅಂದ ಹಾಗೆ, ಇವತ್ತಿನ ಕ್ಷೇತ್ರ ಪರಿಚಯದಲ್ಲಿ ಕಾಫಿ ನಾಡು ಚಿಕ್ಕಮಗಳೂರಿನ ಸ್ವಾರಸ್ಯಕರ ಸಂಗತಿಯ ಜೊತೆಗೆ ರಾಜಕೀಯ ಚಿತ್ರಣವನ್ನೂ ನಿಮ್ಮ ಮುಂದೆ ಇಡ್ತಾ ಇದ್ದೇವೆ.

    ಚಿಕ್ಕಮಗಳೂರು ಹೆಸರ ಹಿಂದಿದೆ ಸುಂದರ ಕಹಾನಿ
    ಚಿಕ್ಕಮಗಳೂರು ಹೆಸರಲ್ಲೇ ಇದೆ ಇದು ಚಿಕ್ಕಮಗಳ ಊರು ಅನ್ನೋದು. ಆದ್ರೆ, ಇದು ಯಾರ ಚಿಕ್ಕ ಮಗಳ ಊರು ಅಂತಾ ಕೇಳಿದ್ರೆ ಅದ್ರ ಹಿಂದೆಯೂ ಸುಂದರ ಕಹಾನಿ ಇದೆ. ಸಖರಾಯ ಪಟ್ಟಣದ ಮುಖ್ಯಸ್ಥ ರುಕ್ಮಾಂಗದ ಈ ಊರನ್ನ ತನ್ನ ಚಿಕ್ಕಮಗಳಿಗೆ ಉಡುಗೊರೆ ರೂಪದಲ್ಲಿ ಕೊಟ್ಟ ಅನ್ನೋದಾಗಿ ಇತಿಹಾಸ ಹೇಳುತ್ತೆ. ಇಲ್ಲಿಂದ ಐದು ಕಿಲೋ ಮೀಟರ್ ದೂರಕ್ಕೆ ಹೋದ್ರೆ, ಹಿರಿಯ ಮಗಳ ಊರು ಕೂಡಾ ಇದೆ. ಹಳೆಯ ಶಾಸನಗಳು ಹೇಳುವಂತೆ ಮೊದಲು ಈ ಎರಡು ಊರುಗಳನ್ನ ಕಿರಿಯ ಮುಗುಲಿ ಹಾಗೂ ಹಿರಿಯ ಮುಗುಲಿ ಅಂತಾ ಕರೆಯಲಾಗ್ತಿತ್ತಂತೆ. ಇದು ಕಾಫಿ ನಾಡಿಗೂ ಮಗಳಿಗೂ ಇರುವ ಭಾವನಾತ್ಮಕ ನಂಟು..!

    ಕಾಫಿನಾಡಲ್ಲಿ ಮೊದಲ ಕಾಫಿ ಬೀಜ ಬಿತ್ತಿದ್ದು ಯಾರ್ ಗೊತ್ತಾ..?
    ಚಿಕ್ಕಮಗಳೂರಿನ ಗಿರಿ ಶ್ರೇಣಿಗಳು ಪಶ್ಚಿಮ ಘಟ್ಟದ ಒಂದು ಭಾಗ. ತುಂಗೆ ಮತ್ತು ಭದ್ರೆಯರ ತವರೂರು. ಇಲ್ಲಿರೋ ಬಾಬಾ ಬುಡನ್ ಬೆಟ್ಟದಲ್ಲಿ ಅರೇಬಿಕಾ ಕಾಫಿಯನ್ನ ಉತ್ಪಾದಿಸ್ತಾರೆ. ಅಂಧ ಹಾಗೆ, ಚಿಕ್ಕ ಮಗಳೂರಿಗೆ ಕಾಫಿ ಹೇಗೆ ಬಂತು? ಅದ್ರ ಇತಿಹಾಸ ಏನು ಅನ್ನೋದನ್ನ ಕೆದಕ್ತಾ ಹೋದ್ರೆ, 17ನೇ ಶತಮಾನದ ಇತಿಹಾಸದ ಪುಟಗಳಿಂದ ಕಾಫಿ ವಾಸನೆ ಬರುತ್ತದೆ. 17ನೇ ಶತಮಾನದಲ್ಲಿ ಬಹೌದ್ ದಿನ್ ಅಥವಾ ಬಾಬಾ ಬುಡನ್ ಅನ್ನೋ ಸೂಫಿ ಸಂತ ಇದ್ರು. ಅವ್ರು ಇಲ್ಲಿರೋ ಬೆಟ್ಟಗಳ ಗುಹೆಗಳಲ್ಲಿ ನೆಲೆ ಕಂಡುಕೊಳ್ತಿದ್ರು. ಸುಮಾರು ಕ್ರಿಸ್ತ ಶಕ 1670ರಲ್ಲಿ ಬಾಬಾ ಬುಡನ್ ಮೆಕ್ಕಾ ಯಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿಂದ 7 ಕಾಫಿ ಬೀಜಗಳನ್ನ ತಂದು ಚಿಕ್ಕಮಗಳೂರಲ್ಲಿ ಬಿತ್ತಿದ್ರು ಅನ್ನೋ ಸ್ವಾರಸ್ಯಕರ ಮಾಹಿತಿ ಸಿಗುತ್ತೆ.

    ಹಸಿರ ತೇರಿನ ಮೇಲೆ ಅಕ್ಷರ ಸಂತರ ಸಾಹಿತ್ಯದ ಗರಿ.
    ಒಂದು ಕಡೆ ಹಸಿರನ್ನೇ ಹೊದ್ದು ಮಲಗಿದಂತಿರೋ ಊರು. ಕವಿಗಳಿಗೆ, ಸಾಹಿತ್ಯ ದಿಗ್ಗಜರಿಗೆ ಇದಕ್ಕಿಂತ ಸ್ವರ್ಗ ಇನ್ನೆಲ್ಲಿ ಸಿಕ್ಕೀತು? ಲಕ್ಷ್ಮೀಶ ದೇವನೂರು, ಡಾ. ಎ.ಆರ್ ಕೃಷ್ಣಶಾಸ್ತ್ರಿ ಅಂಬಳೆಯಂಥಾ ಕವಿ ಮಹೋದಯರು ಕೊಟ್ಟ ಹೆಮ್ಮೆಯ ತಾಣ ಚಿಕ್ಕಮಗಳೂರು. ಹಾಗೆಯೇ ಜ್ಞಾನಪೀಠ ಪ್ರಶಸ್ತಿ ಪಡೆದ ರಾಷ್ಟ್ರಕವಿ ಕುವೆಂಪು, ಕೂದವಳ್ಳಿಯ ಅದ್ಭುತ ಕಥೆಗಾರ ಅಶ್ವತ್ಥ, ಸಾಹಿತ್ಯ ಸಿಂಚನದ ಜೊತೆಗೆ ಪ್ರಕೃತಿಯ ಜೊತೆ ಬೆರೆಯುವಂತೆ ಮಾಡಿದ ಪೂರ್ಣಚಂದ್ರ ತೇಜಸ್ವಿಯಂಥಾ ಸಾಹಿತಿಗಳನ್ನು ಕೊಟ್ಟ ತಾಣ ಇದು.

    ಗಿರಿಕನ್ಯೆಯ ಸೆರಗಿನ ನಡುವೆ ಅಡಗಿವೆ ಈ ಸುಂದರ ತಾಣಗಳು
    ಚುಮುಚುಮು ಚಳಿಯೇ ಇರಲಿ, ಬಿರು ಬೇಸಿಗೆಯೇ ಇರಲಿ, ಒಂದೇ ಸಮನೆ ಸುರಿಯೋ ಮಳೆಯೇ ಇರಲಿ ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ ಮಾತ್ರ ನಿಮ್ಮನ್ನ ಯಾವ ಕಾಲಕ್ಕೂ ಕೈ ಬೀಸಿ ಕರೆಯುತ್ತೆ. ಮುಳ್ಳಯ್ಯನಗಿರಿ ಕರ್ನಾಟಕ ರಾಜ್ಯದಲ್ಲೇ ಅತೀ ಎತ್ತರದ ಗಿರಿ ಶಿಖರ. ಅಲ್ಲಿಂದ ಅನತಿ ದೂರದಲ್ಲಿದೆ ಬಾಬಾ ಬುಡನ್ ಗಿರಿ. ಚಂದ್ರ ದ್ರೋಣ ಪರ್ವತ ಶ್ರೇಣಿಯಲ್ಲಿ ನೆಲೆಸಿರುವ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾವು ಹಿಂದು ಹಾಗೂ ಮುಸ್ಲಿಮ್ ಧರ್ಮದವರಿಬ್ಬರಿಗೂ ಪವಿತ್ರ. ಇಲ್ಲಿರುವ ಲ್ಯಾಟರೈಟ್ ಗುಹೆಯಲ್ಲಿ ದತ್ತಾತ್ರೇಯ ಸ್ವಾಮಿ ಹಾಗು ಹಜರತ್ ದಾದಾ ಹಯತ್ ಮೀರ್ ಕಲಂದರ್ ನೆಲೆಸಿದ್ರು ಅನ್ನೋ ಉಲ್ಲೇಖಗಳು ಸಿಗುತ್ವೆ. ಈ ಜಾಗ ಎಷ್ಟು ಪವಿತ್ರವೋ ಅಷ್ಟೇ ವಿವಾದದ ಕೇಂದ್ರ ಬಿಂದು ಕೂಡಾ ಹೌದು. ಇನ್ನು, ವರ್ಷಕ್ಕೊಮ್ಮೆ ಪೂಜೆ ನಡೆದರೂ ಪ್ರವಾಸಿಗರನ್ನ ಸೆಳೆಯೋ ದೇವೀರಮ್ಮ ಬೆಟ್ಟ, ಕೆಮ್ಮಣ್ಣುಗುಂಡಿ, ರತ್ನಗಿರಿ ಬೋರ್, ಕುದುರೆ ಮುಖ, ಶೃಂಗೇರಿ, ಹೊರನಾಡು, ಭದ್ರಾ ವನ್ಯಜೀವಿಧಾಮ, ಕಲ್ಲತ್ತಗಿರಿ ಜಲಪಾತ, ಹೆಬ್ಬೆ ಜಲಪಾತ, ಕಳಸ ಹೀಗೆ ಒಂದಾ ಎರಡಾ ಚಿಕ್ಕಮಗಳೂರು ಅನ್ನೋ ಗಿರಿಕನ್ಯೆ ಸದಾ ಯೌವ್ವನವನ್ನ ತುಂಬಿಕೊಂಡಿರಲು ಇಷ್ಟು ಸಾಕು.

    ಚಿಕ್ಕಮಗಳೂರಲ್ಲಿ ಹಳೇ ಹುಲಿಗಳ ಹೊಸ ರಾಜಕೀಯ ಪಟ್ಟು..!
    ಚಿಕ್ಕಮಗಳೂರ ತುಂಬಾ ಈಗ ಕಾಫಿ ಹೀರೋ ಜನಕ್ಕೆ ರಾಜಕೀಯವೇ ಮಿರ್ಚಿ ಮಂಡಕ್ಕಿ ಎಲ್ಲಾನೂ. ಇಲ್ಲಿ ಕ್ಯಾಂಪೇನ್ ಮಾಡೋಕೆ ಬರೋರ್ಗೆ ಸಮಸ್ಯೆಗಳೇ ಕೇಂದ್ರಬಿಂದುವಾದ್ರೂ ರಾಜಕೀಯ ಲೆಕ್ಕಾಚಾರ ಮಾತ್ರ ಬೇರೆಯದ್ದೇ ಆಗಿರುತ್ತೆ. ಲಿಂಗಾಯತ, ಒಕ್ಕಲಿಗ, ಹಿಂದುಳಿದ ಸಮುದಾಯಗಳ ವೋಟುಗಳು ಇಲ್ಲಿ ಅಭ್ಯರ್ಥಿಯ ಹಣೆಬರಹವನ್ನು ಬರೀತಾವೆ. ಹಾಗಾದ್ರೆ, ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಚಿತ್ರಣವನ್ನ ನೋಡೋಣ ಬನ್ನಿ.

    ಮತ್ತೆ ಗೆದ್ದು ಸೀಟಿ ಹೊಡೆಯೋ ತವಕದಲ್ಲಿದ್ದಾರೆ ಸಿಟಿ ರವಿ..!

     

    ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಸಿಟಿ ರವಿ ತಮ್ಮ ಪ್ರಭಾವ, ವೈಯಕ್ತಿಕ ವರ್ಚಸ್ಸಿಂದ ಕ್ಷೇತ್ರದಲ್ಲಿ ಸೋಲಿಲ್ಲದ ನಾಯಕನಾಗಿ ಬೆಳೆದಿದ್ದಾರೆ. ಹ್ಯಾಟ್ರಿಕ್ ಸಾಧನೆ ಮಾಡಿರೋ ಸಿಟಿ ರವಿ ಈ ಬಾರಿಯೂ ಬಿಜೆಪಿಯಿಂದ ಕಂಟೆಸ್ಟ್ ಮಾಡ್ತಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ನ ಭದ್ರ ಕೋಟೆಯಾಗಿದ್ದ ಚಿಕ್ಕಮಗಳೂರನ್ನ ನಂತ್ರ ಬಿಜೆಪಿ ಹಾಗೂ ಪಕ್ಷೇತರರು ತಮ್ಮ ತೆಕ್ಕೆಗೆ ಎಳೆದುಕೊಂಡಿದ್ದು ಈಗ ಇತಿಹಾಸ. ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ರೂ ಕೊನೆಯದಾಗಿ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಕ್ತಾರ ಬಿಎಲ್ ಶಂಕರ್ ಕಣದಲ್ಲಿದ್ದಾರೆ. ಆದ್ರೆ ಈ ಬಾರಿ ಸಿಟಿ ರವಿಯವ್ರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕೋಕೆ ಜೆಡಿಎಸ್ ಚಿಂತಿಸಿದೆ. ಹೀಗಾಗಿ, ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಬಿಎಸ್ ಹರೀಶ್ ಕಣಕ್ಕೆ ಇಳಿದಿದ್ದಾರೆ. ಇನ್ನು, 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸಿ.ಟಿ ರವಿ 58,683 ವೋಟ್ ಗಳಿಸಿದ್ರು. ಕಾಂಗ್ರೆಸ್ಸಿನ ಕೆ.ಎಸ್ ಶಾಂತೇಗೌಡ 47,695 ಮತಗಳನ್ನು ಗಳಿಸಿ ಸಖತ್ ಫೈಟ್ ಕೊಟ್ಟಿದ್ರು. ಈ ಬಾರಿ ಚುನಾವಣೆಯ ರೋಚಕ ಕ್ಷಣಗಳನ್ನ ಕಣ್ತುಂಬಿಕೊಳ್ಳೋಕೆ ನೀವ್ ರೆಡಿಯಾಗಿ.

    ಬಂಡಾಯದ ಬಿಸಿಗೆ ತರೀಕೆರೆ ತಬ್ಬಿಬ್ಬು..!

     


    ತರೀಕೆರೆ ಕಾಂಗ್ರೆಸ್ ನ ಹಾಲಿ ಶಾಸಕ ಶ್ರೀನಿವಾಸ್ ಮತ್ತೆ ತಮಗೇ ಟಿಕೆಟ್ ಸಿಗುತ್ತೆ ಅನ್ನೋ ಭರವಸೆಯಲ್ಲೇ ಇದ್ರು. ಆದ್ರೆ, ಕೊನೇ ಕ್ಷಣದ ಬದಲಾವಣೆ ಹೊರತಾಗಿ ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು ಅನ್ನೋದಕ್ಕೆ ಈ ಕ್ಷೇತ್ರ ಸಾಕ್ಷಿ. ಯಾಕಂದ್ರೆ, ಇಲ್ಲಿ ಹಾಲಿ ಶಾಸಕರಿಗೆ ಬಿಟ್ಟು ಮಾಜಿ ಶಾಸಕ ಎಸ್ ಎಂ ನಾಗರಾಜು ಅವ್ರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಹೀಗಾಗಿ ಶಾಸಕ ಶ್ರೀನಿವಾಸ್ ಬಂಡಾಯ ಎದ್ದು ಜೆಡಿಎಸ್ ಕದ ತಟ್ಟಿದ್ರು. ದುರಾದೃಷ್ಟವಶಾತ್ ಅಲ್ಲೂ ಅವ್ರ ಆಸೆಗೆ ಯಾವ ಸೊಪ್ಪೂ ಬೀಳಲಿಲ್ಲ. ಇನ್ನು, ಇತ್ತ ಜೆಡಿಎಸ್ ನ ಟಿಕೆಟ್ ಆಕಾಂಕ್ಷಿಯಾಗಿದ್ದ ಟಿ. ಎಚ್ ಶಿವಶಂಕರಪ್ಪ ಪಕ್ಷಕ್ಕೆ ಟಾ ಟಾ ಬೈ ಬೈ ಹೇಳಿ ಒಂದು ಕಾಲು ಹೊರಗಿಟ್ಟಿದ್ರು. ಆದ್ರೆ, ಕೊನೇ ಕ್ಷಣದಲ್ಲಿ ತೆನೆಹೊತ್ತ ಮಹಿಳೆ ಶಿವಶಂಕರಪ್ಪ ಅವ್ರಿಗೇ ಜೈ ಅಂದಿದ್ದಾಳೆ. ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಜಿ.ಎಚ್. ಶ್ರೀನಿವಾಸ ಪ್ರಯಾಸದ ಗೆಲುವು ಅಂದ್ರೆ, ಕೇವಲ 899 ಮತಗಳ ಅಂತರದಲ್ಲಿ ಗೆದ್ದು ಗಾದಿ ಹಿಡಿದಿದ್ರು.

    ಮೂಡಿಗೆರೆ ಮತದಾರನ ಮೂಡು ಹೇಗಿದ್ಯೋ..!


    ಮೂಡಿಗೆರೆಯ ಹಾಲಿ ಶಾಸಕ ಬಿ.ಬಿ ನಿಂಗಯ್ಯ ಬಾರಿಯೂ ಜೆಡಿಎಸ್ ನಿಂದ ರಣರಂಗಕ್ಕೆ ಧುಮುಕಿದ್ದಾರೆ. ವಿರೋಧ ಪಕ್ಷದ ಸಮರ್ಥ ನಾಯಕಿಯಾಗಿ ಕೆಲಸ ಮಾಡಿ ಹಾಲಿ ಎಂಎಲ್ ಸಿ ಯಾಗಿದ್ದ ಮೋಟಮ್ಮಗೆ ಕಾಂಗ್ರೆಸ್ ತನ್ನ ಟಿಕೆಟ್ ಕೊಟ್ಟಿದೆ. ಮೊದಲಿನಿಂದಲೂ ಟಿಕೆಟ್ ತನಗೇ ಸಿಗುತ್ತೆ ಅನ್ನೋ ಅಚಲ ವಿಶ್ವಾಸದಲ್ಲಿದ್ದ ಮೋಟಮ್ಮ ಆ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ರು. ಇನ್ನು, ಬಿಜೆಪಿ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್ ಕೊಟ್ಟಿದೆ. ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಓಡಾಡಿ ಪಕ್ಷ ಸಂಘಟನೆ ಮಾಡಿರೋ ಕುಮಾರಸ್ವಾಮಿಯವರಿಗೇ ಟಿಕೆಟ್ ಕೊಡಬೇಕು ಅನ್ನೋದು ಕಾರ್ಯಕರ್ತರ ಒಕ್ಕೊರೊಲ ಆಗ್ರಹವೂ ಆಗಿತ್ತು. ಹಾಗಾಗಿ, ಈ ಬಾರಿ ಮೂಡಿಗೆರೆ ಭಾರೀ ಸ್ಪರ್ಧೆಗೆ ಅಖಾಡವಾಗಿರೋದಂತೂ ಹೌದು.

    ಶೃಂಗೇರಿಯ ಮತಾಧೀಶ ಯಾರನ್ನ ಪೀಠಕ್ಕೆ ಏರಿಸ್ತಾನೆ..?

     


    ಶೃಂಗೇರಿಯ ಹಾಲಿ ಶಾಸಕ ಬಿಜೆಪಿಯ ಡಿ ಎನ್ ಜೀವರಾಜ್ ಈ ಬಾರಿಯೂ ಕಣದಲ್ಲಿರೋದು ಬಹುತೇಕ ಅವ್ರಿಗೆ ಪೈಪೋಟಿ ನೀಡೋ ಅಭ್ಯರ್ಥಿಯೇ ಇಲ್ಲ ಅನ್ನೋ ಮಾತುಗಳೂ ಕೇಳಿ ಬರ್ತಿವೆ. ಆಡಳಿತ ವಿರೋಧಿ ಅಲೆ, ಮೋದಿ ಅಲೆಯ ಜೊತೆಗೆ ಹಿಂದೂ ಮತಗಳು, ವೈಯಕ್ತಿಕ ವರ್ಚಸ್ಸು ಜೀವರಾಜ್ ಅವ್ರ ಸ್ಟ್ರೆಂಥ್. 2013ರ ಚುನಾವಣೆಯಲ್ಲಿ ಜೀವರಾಜ್ 58,402 ಮತ ಪಡೆದು ವಿಜಯ ಪತಾಕೆ ಹಾರಿಸಿದ್ರು. ಇನ್ನು, ಕಾಂಗ್ರೆಸ್ ಗೆ ಕೈ ಕೊಟ್ಟು ಬಂದು ತೆನೆ ಹೊತ್ತ ಮಾಜಿ ಸಚಿವ ಎಚ್ ಜಿ ಗೋವಿಂದೇಗೌಡ್ರ ಮಗ ವೆಂಕಟೇಶ್ ಈ ಬಾರಿ ಜೆಡಿಎಸ್ ಕಲಿ. ಕಾಂಗ್ರೆಸ್ ನಿಂದ ಕಣಕ್ಕೆ ಧುಮುಕಿರೋ ಟಿ.ಡಿ ರಾಜೇಗೌಡ ಶೃಂಗೇರಿಯ ಜನರ ಮನದಾಳವನ್ನ ಅರಿಯೋ ಪ್ರಯತ್ನ ಮಾಡಿದ್ದಾರೆ. ಹೇಳಿಕೊಂಡಷ್ಟು ಅಭಿವೃದ್ಧಿಯಾಗಿಲ್ಲ. ಜನ ಬದಲಾವಣೆ ಬಯಸಿದ್ದಾರೆ ಅನ್ನೋ ವನ್ ಲೈನ್ ಅಜೆಂಡಾ ಇವ್ರದ್ದು.

    ದತ್ತಾ ಮೇಲಿಲ್ಲ ಕಡೂರು ಜನರಿಗೆ ಯಾವುದೇ ತಕರಾರು..!


    ಕಡೂರಿನ ಹಾಲಿ ಎಂಎಲ್ ಎ, ಜೆಡಿಎಸ್ ನ ವೈ ಎಸ್ ವಿ ದತ್ತಾ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 2010ರ ತನಕ ಕಾಂಗ್ರೆಸ್ ಕಪಿಮುಷ್ಟಿಯಲ್ಲಿದ್ದ ಕಡೂರು ಕ್ಷೇತ್ರವನ್ನ 2013ರಲ್ಲಿ ದತ್ತಾ ತಮ್ಮದಾಗಿಸಿಕೊಂಡ್ರು. ಇನ್ನು ಟಿಕೆಟ್ ಘೋಷಣೆಗೂ ಮುನ್ನವೇ ಜಿಪಂ ಮಾಜಿ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಪ್ರಚಾರಕ್ಕಾಗಿ ಹೈಟೆಕ್ ವಾಹನವೊಂದನ್ನು ಸಿದ್ಧಗೊಳಿಸಿದ್ರು. ಕೊನೆಗೂ ಬಿಜೆಪಿ ಅವ್ರಿಗೇ ಟಿಕೆಟ್ ಕನ್ಫರ್ಮ್ ಮಾಡಿದೆ. ಕಾಂಗ್ರೆಸ್ ಕೆ. ಎಸ್ ಆನಂದ್ ನ್ನ ಕಣಕ್ಕಿಳಿಸಿದೆ. ಆದ್ರೆ, ಇಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೇ ಇವ್ರಿಗೆ ಟಿಕೆಟ್ ಕೊಟ್ಟಿರೋದು ಸುತಾರಾಂ ಇಷ್ಟವಿರಲಿಲ್ಲ. ಹೀಗಾಗಿ, ಕಡೂರು ಕ್ಷೇತ್ರದಲ್ಲಿ ಯಾವ ರೀತಿಯ ಫಲಿತಾಂಶ ಸಿಗ್ಬೋದು ಅನ್ನೋದೇ ಸಾಕಷ್ಟು ಕುತೂಹಲ ಕೆರಳಿಸಿದೆ.

  • SSLC ಡುಮ್ಕಿ ಹೊಡೆದವ್ರು ಅಮೆಜಾನ್ ಗೆ 1 ಕೋಟಿ ರೂ.ಗೂ ಅಧಿಕ ಹಣ ಮೋಸ ಮಾಡಿದ್ರು

    SSLC ಡುಮ್ಕಿ ಹೊಡೆದವ್ರು ಅಮೆಜಾನ್ ಗೆ 1 ಕೋಟಿ ರೂ.ಗೂ ಅಧಿಕ ಹಣ ಮೋಸ ಮಾಡಿದ್ರು

    ಚಿಕ್ಕಮಗಳೂರು: ನಕಲಿ ಖಾತೆ ಕ್ರಿಯೆಟ್ ಮಾಡಿ ಒಂದು ವರ್ಷದಿಂದ ಅಮೆಜಾನ್ ಕಂಪನಿಗೆ ಒಂದು ಕೋಟಿ, ಮೂವತ್ತು ಲಕ್ಷ ರೂ. ಹಣವನ್ನು ವಂಚಿಸಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

    ದರ್ಶನ್, ಪುನೀತ್, ಸಚಿನ್ ಶೆಟ್ಟಿ ಹಾಗೂ ಅನಿಲ್ ಬಂಧಿತ ಆರೋಪಿಗಳು. ಸಾರ್ವಜನಿಕರು ಅಮೆಜಾನ್‍ನಲ್ಲಿ ಬುಕ್ ಮಾಡಿದ ವಸ್ತು ಏಕದಂತ ಕೊರಿಯರ್ ಸರ್ವೀಸ್ ಸೆಂಟರ್ ಗೆ ಬರುತ್ತಿತ್ತು. ಸರ್ವಿಸ್ ಸೆಂಟರ್ ನಿಂದ ಬಂದ ವಸ್ತುಗಳನ್ನು ಆರೋಪಿಗಳು ಡೆಲವರಿ ಮಾಡುತ್ತಿದ್ದರು.

    ಹೇಗೆ ಮೋಸ ಮಾಡ್ತಿದ್ದರು?: ಗ್ರಾಹಕರ ಮೊಬೈಲ್‍ಗೆ ಡೆಲವರಿ ಸೆಕ್ಸಸ್ ಫುಲ್ ಅಂತ ಮೆಸೇಜ್ ಬರುತ್ತೆ. ಆದ್ರೆ, ಗ್ರಾಹಕರು ಪಾವತಿಸೋ ಹಣ ಮಾತ್ರ ಹೋಗೋದು ಇವರ ಅಕೌಂಟ್‍ಗೆ. ಈ ರೀತಿಯ ಮಾಸ್ಟರ್ ಮೈಂಡ್ ನಿಂದ ಒಂದು ವರ್ಷದಿಂದ ಅಮೇಜಾನ್ ಕಂಪನಿಗೆ ಒಂದು ಕೋಟಿ, ಮೂವತ್ತು ಲಕ್ಷ ರೂ. ಹಣವನ್ನು ಮೋಸ ಮಾಡಿದ್ದಾರೆ. ಹಣಕ್ಕೆ ಗ್ರಾಹಕರು ಡೆಬಿಟ್ ಕಾರ್ಡ್ ಬಳಸ್ತಾರೆ ಅಂತ ಗೊತ್ತಾದ್ರೆ ಸಾಕು ತಮ್ಮ ಟ್ಯಾಬ್ ನಲ್ಲಿ ಸ್ವೈಪ್ ಮಾಡಿ ಹಣವನ್ನ ಅಕೌಂಟ್‍ಗೆ ಜಮಾ ಮಾಡಿಕೊಳ್ಳುತ್ತಿದ್ದರು. ಇತ್ತ ಗ್ರಾಹಕರಿಗೂ ಡೆಲವರಿ ಮೆಸೇಜ್ ಬರುತ್ತೆ. ಅತ್ತ ಕಂಪನಿಗೂ ಮೆಸೇಜ್ ತಲುಪುತ್ತಿತ್ತು. ಇವರೇ ಅಮೆಜಾನ್‍ನಲ್ಲಿ ನಕಲಿ ಖಾತೆ ಕ್ರಿಯೇಟ್ ಮಾಡಿ ತಾವೇ ಆರ್ಡರ್ ಮಾಡಿ ಬಳಿಕ ಕ್ಯಾನ್ಸಲ್ ಮಾಡಿ ವಸ್ತುವನ್ನ ಬೇರೆಯವರಿಗೆ ಮಾಡುವ ಮೂಲಕ ಕಂಪನಿಗೆ ಟೋಪಿ ಹಾಕುತ್ತಿದ್ದರು.

    ಸದ್ಯ ಬುಲೆಟ್, ಎರಡು ಪಲ್ಸರ್, ಒಂದು ಜಿಕ್ಸರ್ ಬೈಕ್ಗಳು ಸೇರಿದಂತೆ 6 ಲಕ್ಷದ 44 ಸಾವಿರ ನಗದು, 21 ಮೊಬೈಲ್ ಫೋನ್, ಲ್ಯಾಪ್ಟಾಪ್, 2 ಟ್ಯಾಬ್ಗಳು ಸೇರಿದಂತ್ತೆ ಲಕ್ಷಾಂತರ ರೂಪಾಯಿ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಆರೋಪಿಗಳು ಸೆರೆ ಸಿಕ್ಕಿದ್ದು, ಇಬ್ಬರು ತಲೆ ಮರೆಸಿಕೊಂಡಿದ್ದಾರೆ.

    ಬೆಂಗಳೂರಿನ ಅಮೆಜಾನ್ ಕಂಪೆನಿಯ ಮ್ಯಾನೇಜರ್ ನವೀನ್ ಕುಮಾರ್ ಅವರಿಗೆ ಆಡಿಟಿಂಗ್ ವೇಳೆ ಈ ಮೋಸ ಗೊತ್ತಾಗಿದೆ. ಕೂಡಲೇ ಎಸ್ಪಿ ಅಣ್ಣಾಮಲೈಗೆ ತಿಳಿಸಿದ್ದಾರೆ. ಪ್ರಕರಣವನ್ನು ಕೈಗೆತ್ತಿಕೊಂಡು ಅಣ್ಣಾಮಲೈ ಆ್ಯಂಡ್ ಟೀಂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಪೊಲೀಸರು ಆರೋಪಿಗಳ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಗ್ಯಾರಂಟಿ-ವಾರ್ನಿಂಗ್ ಮೆಸೇಜ್ ವೈರಲ್

    ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಗ್ಯಾರಂಟಿ-ವಾರ್ನಿಂಗ್ ಮೆಸೇಜ್ ವೈರಲ್

    ಚಿಕ್ಕಮಗಳೂರು: ಧನ್ಯಶ್ರೀ ಆತ್ಮಹತ್ಯೆಯ ಬೆನ್ನಲ್ಲೆ ಸಾಮಾಜಿಕ ಜಾಲತಾಣಗಳಲ್ಲಿ ಬಜರಂಗದಳದ ಕಾರ್ಯಕರ್ತರು ಹರಿಬಿಟ್ಟಿರುವ ಎಚ್ಚರಿಕೆ ಮೆಸೇಜ್‍ಗಳು ಮೂಡಿಗೆರೆ ನಗರದಲ್ಲಿ ವೈರಲ್ ಆಗುತ್ತಿವೆ.

    ಅನ್ಯ ಧರ್ಮದ ಯುವಕರೊಂದಿಗೆ ಸಾರ್ವಜನಿಕರ ಜೊತೆ ಕಾಣಿಸಿಕೊಂಡರ ಧರ್ಮದೇಟು ಬೀಳೋದು ಗ್ಯಾರಂಟಿ ಎಂಬ ಎಚ್ಚರಿಕೆಯ ಸಂದೇಶಗಳು ವಾಟ್ಸಪ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

    ಮೆಸೇಜ್‍ನಲ್ಲಿ ಏನಿದೆ?: ಮೂಡಿಗೆರೆ ನಗರದ ಆಸುಪಾಸಿನ ಎಲ್ಲಾ ಹುಡುಗಿಯರಿಗೆ ಕೊನೆಯ ಎಚ್ಚರಿಕೆ ಸಂದೇಶ ನೀಡುತ್ತಿದ್ದೇವೆ. ಕಾಲೆಜಿನಲ್ಲಿ ತನ್ನ ಸಹಪಾಠಿ ಎಂಬ ಸಲುಗೆಯಿಂದ ಅನ್ಯಧರ್ಮದ ಯುವಕರೊಂದಿಗೆ ಚಕ್ಕಂದವಾಡುತ್ತಿರುವುದು ಎಲ್ಲೇ ಕಂಡರು ಅಲ್ಲಿ ನಿಮ್ಮ ಮಾತಿಗೆ ಅವಕಾಶ ಕೊಡದೇ ಧರ್ಮದೇಟು ಗ್ಯಾರಂಟಿ. ನಮಗೆ ಹಿಂದೂ ಧರ್ಮ ಮುಖ್ಯ ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ.
    #ಧರ್ಮೋ ರಕ್ಷತಿ ರಕ್ಷಿತಃ#
    * ಮೂಡಿಗೆರೆ ಬಜರಂಗದಳ

    ಬೇರೆಯವರಿಗೆ ಹೇಳಲು ಇವರು ಯಾರು?
    ಬೇರೆ ಮನೆಯ ಯುವತಿಯರಿಗೆ ಬೆದರಿಕೆ ಹಾಕುವುದು ತಪ್ಪಾಗುತ್ತದೆ. ಧನ್ಯಶ್ರೀ ಮನೆಗೆ ಬಂದ ಹಿಂದೂ ಯುವಕರ ಪೋಷಕರಿಗೆ ಬೆದರಿಕೆ ಹಾಕಿದ್ದಾರೆ. ಇದ್ರಿಂದ ಮನನೊಂದ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿಂದೂ ಸಂಘಟನೆ ಪರೋಕ್ಷವಾಗಿ ಧನ್ಯಶ್ರೀ ಸಾವಿಗೆ ಕಾರಣವಾಗುತ್ತದೆ. ಧನ್ಯಶ್ರೀಗೆ ಐವರು ಬೆದರಿಕೆ ಹಾಕಿದೆ ಎಂದು ಗೊತ್ತಿದ್ದರೂ, ಮೂಡಿಗೆರೆ ಪೊಲೀಸರು ಒಬ್ಬನ ಹೆಸರನ್ನು ಮಾತ್ರ ಎಫ್‍ಐಆರ್ ನಲ್ಲಿ ದಾಖಲಿಸಿದ್ದಾರೆ. ಪೊಲೀಸರು ಉಳಿದ ಪ್ರಭಾವಿ ವ್ಯಕ್ತಿಗಳ ಹೆಸರನ್ನು ಮರೆಮಾಚುವ ಪ್ರಯತ್ನ ಮಾಡುತ್ತಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಗೆ ಈ ಬಗ್ಗೆ ನಗರದ ಆಜಾದ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ನಡೆಸಲಾಗುವುದು. ಬೆದರಿಕೆ ಹಾಕುತ್ತಿರುವ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ನೋಡಿಕೊಳ್ಳಲಿ. ಬೇರೆಯವರ ಮನೆಯ ಹೆಣ್ಣು ಮಕ್ಕಳಿಗೆ ಹೇಳೋರು ಇವರ್ಯಾರು? ಮುಸ್ಲಿಂ ಸಮುದಾಯದ ಹಲವು ಯುವತಿಯರು ಹಿಂದೂ ಧರ್ಮದ ಯುವಕರನ್ನು ಮದ್ವೆಯಾಗಿ ಚೆನ್ನಾಗಿದ್ದಾರೆ. ನಾವುಗಳು ಅವರಿಗೆ ಯಾವುದೇ ಬೆದರಿಕೆಯನ್ನು ಹಾಕಿಲ್ಲ ಅಂತಾ ಕೋಮು ಸೌಹಾರ್ದ ವೇದಿಕೆಯ ನಾಯಕ ಗೌಸ್ ಮೊಹಿದ್ದೀನ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಈ ರೀತಿ ಮೆಸೇಜ್‍ಗಳು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವೈರಲ್ ಆಗುತ್ತಿವೆ. ಈ ಸಂದೇಶದ ಬಗ್ಗೆ ಎಸ್‍ಪಿ ಅಣ್ಣಾಮಲೈ ಗಮನಕ್ಕೂ ಬಂದಿದ್ದೂ, ಮೆಸೇಜ್‍ಗಳು ಎಲ್ಲಿಂದ ಮತ್ತು ಯಾರಿಂದ ಬರುತ್ತಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಈ ಬಗ್ಗೆ ಯಾರು ವೈಯಕ್ತಿಕವಾಗಿ ದೂರು ದಾಖಲಿಸಿಲ್ಲ.

    https://youtu.be/bFv6ywT51-Y

  • ತಾಯಿಯಂತೆ ಇನ್ನೂ 20 ವರ್ಷ ರಾಹುಲ್‍ಗಾಂಧಿ ಅಧ್ಯಕ್ಷ ಸ್ಥಾನ ಬಿಡಲ್ಲ, ಮದ್ವೆಯಾಗೋದೆ ಡೌಟ್- ಆಯನೂರು ಮಂಜುನಾಥ್ ಲೇವಡಿ

    ತಾಯಿಯಂತೆ ಇನ್ನೂ 20 ವರ್ಷ ರಾಹುಲ್‍ಗಾಂಧಿ ಅಧ್ಯಕ್ಷ ಸ್ಥಾನ ಬಿಡಲ್ಲ, ಮದ್ವೆಯಾಗೋದೆ ಡೌಟ್- ಆಯನೂರು ಮಂಜುನಾಥ್ ಲೇವಡಿ

    ಚಿಕ್ಕಮಗಳೂರು: ಆ ರಾಹುಲ್ ಗಾಂಧಿ ಮದುವೆಯಾಗ್ತಾನೆ ಅನ್ನೋದೇ ನಂಗೆ ಡೌಟ್ ಎಂದು ಆಯನೂರು ಮಂಜುನಾಥ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ಅಧ್ಯಕ್ಷರ ವಿರುದ್ಧ ಲೇವಡಿ ಮಾಡಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ತನ್ನ ತಾಯಿಯಂತೆ ಇನ್ನೂ 20 ವರ್ಷ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನವನ್ನ ಬಿಡೋದಿಲ್ಲ. ಅವನು ಮದುವೆಯಾಗಿ, ಅವನಿಗೆ ಮಕ್ಕಳಾಗಿ, ಅದು ದೊಡ್ಡದಾದ ಮೇಲೆ ಅದು ಮುಂದಿನ ಅಧ್ಯಕ್ಷ. ಆ ರಾಹುಲ್ ಗಾಂಧಿ ಮದುವೆಯಾಗ್ತಾನೆ ಅನ್ನೋದೇ ಡೌಟ್ ನಂಗೆ. ಕಾಂಗ್ರೆಸ್‍ನಲ್ಲಿ ಅಧ್ಯಕ್ಷರಾಗುವಂತಹಾ ಯೋಗ್ಯತೆ ಯಾರಿಗೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಇದೇ ವೇಳೆ ಕೇಂದ್ರ ಸಚಿವ ಸದಾನಂದಗೌಡ ಮಾತನಾಡಿ, ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ನಿಮ್ಮ ದುಡ್ಡು ತಿನ್ನೋದೇ ನಮ್ಮ ಜವಾಬ್ದಾರಿ ಅಂತ ಅವರು ತಿಳಿದುಕೊಂಡಿದ್ದಾರೆ. ನಿಮ್ಮ ಖರ್ಚಿನಲ್ಲಿ ನಮ್ಮ ಯಾತ್ರೆ ಮಾಡೋದು ಅಂತ ನಿಶ್ಚಯ ಮಾಡ್ಕೊಂಡು ಇವತ್ತು ಯಾತ್ರೆ ಮಾಡ್ತಿರೋ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗ್ಬೇಕು ಎಂದು ಕಿಡಿಕಾರಿದ್ರು.

     

  • ಯುವತಿಯನ್ನ ಗರ್ಭಿಣಿ ಮಾಡಿ ಕೈಕೊಡಲು ಮುಂದಾದ, ಎಸ್‍ಪಿ ಅಣ್ಣಾಮಲೈ ಮದ್ವೆ ಮಾಡಿಸಿದ ನಂತರವೂ ಕೈಕೊಟ್ಟ

    ಯುವತಿಯನ್ನ ಗರ್ಭಿಣಿ ಮಾಡಿ ಕೈಕೊಡಲು ಮುಂದಾದ, ಎಸ್‍ಪಿ ಅಣ್ಣಾಮಲೈ ಮದ್ವೆ ಮಾಡಿಸಿದ ನಂತರವೂ ಕೈಕೊಟ್ಟ

    ಚಿಕ್ಕಮಗಳೂರು: ಪ್ರೀತಿ ಹೆಸರಲ್ಲಿ ಯುವತಿಯನ್ನ ಗರ್ಭಿಣಿ ಮಾಡಿ ಕೈಕೊಡಲು ಮುಂದಾಗಿದ್ದ ಯುವಕನನ್ನ ಮನವೊಲಿಸಿ ಎಸ್‍ಪಿ ಅಣ್ಣಾಮಲೈ ಮದುವೆ ಮಾಡಿಸಿದ್ದು, ಯುವಕ ಮತ್ತೆ ಕೈ ಕೊಟ್ಟು ಓಡಿ ಹೋಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರಗಡ ಗ್ರಾಮದಲ್ಲಿ ನಡೆದಿದೆ.

    ಕರಗಡ ಗ್ರಾಮದ ನಿವಾಸಿ ಅನಿಲ್, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್‍ನಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಅದೇ ಗ್ರಾಮದ ಲಕ್ಷ್ಮಿಯನ್ನು ಪ್ರೀತಿಸಿ, ಆಕೆ ಗರ್ಭಿಣಿಯಾದ ಮೇಲೆ ಕೈಕೊಡಲು ಮುಂದಾಗಿದ್ದ. ಈ ಬಗ್ಗೆ ಹುಡುಗಿ ಎಸ್‍ಪಿ ಗೆ ದೂರು ನೀಡಿದ್ದರು. ನಂತರ ಅಣ್ಣಾಮಲೈ ಮುಂದೆ ನಿಂತು ಎರಡು ಕುಟುಂಬದವರ ಜೊತೆ ಮಾತನಾಡಿ ಆಗಸ್ಟ್ 18 ರಂದು ನಗರದ ಮಾರ್ಕೆಟ್ ರಸ್ತೆಯ ದೇವಾಲಯದಲ್ಲಿ ಮದುವೆ ಮಾಡಿಸಿ ರಿಜಿಸ್ಟ್ರರ್ ಕೂಡ ಮಾಡಿಸಿದ್ದರು. ಆದರೆ ಕಳೆದ ಒಂದೂವರೆ ತಿಂಗಳಿಂದ ಮತ್ತೆ ಅನಿಲ್ ನಾಪತ್ತೆಯಾಗಿದ್ದಾನೆ.

     

    ಇತ್ತ ಲಕ್ಷ್ಮಿ ಏಳು ತಿಂಗಳ ಗರ್ಭಿಣಿಯಾಗಿದ್ದು, ತನ್ನ ಗಂಡ ಹಾಗೂ ಹುಟ್ಟೋ ಮಗುವಿಗಾಗಿ ಕಣ್ಣೀರಿಡುತ್ತಿದ್ದಾರೆ. ಒಂದೂವರೆ ತಿಂಗಳ ಹಿಂದೆಯೇ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ನೊಂದ ಯುವತಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪತಿಯನ್ನು ಅತ್ತೆ-ಮಾವ ಹಾಗೂ ಮಾವಂದಿರೇ ಎಲ್ಲೋ ಕಳಿಸಿದ್ದಾರೆ ಎಂದು ಲಕ್ಷ್ಮಿ ಆರೋಪಿಸುತ್ತಿದ್ದಾರೆ.

  • ವಿಜಯಪುರ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೆಚ್ಚಿದ ಆಕ್ರೋಶ- ಚಿಕ್ಕಮಗಳೂರಲ್ಲಿ ಬಂದ್‍ಗೆ ಕರೆ

    ವಿಜಯಪುರ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೆಚ್ಚಿದ ಆಕ್ರೋಶ- ಚಿಕ್ಕಮಗಳೂರಲ್ಲಿ ಬಂದ್‍ಗೆ ಕರೆ

    – 6 ಜನರ ವಿರುದ್ಧ ಎಫ್‍ಐಆರ್

    ಚಿಕ್ಕಮಗಳೂರು: ವಿಜಯಪುರದಲ್ಲಿ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂರು ನಗರ ಬಂದ್‍ಗೆ ಕರೆ ನೀಡಲಾಗಿದೆ.

    ವಿವಿಧ ಕನ್ನಡ ಪರ ಸಂಘಟನೆ, ದಲಿತ ಸಂಘಟನೆ ಹಾಗೂ ಮಹಿಳಾ ಸಂಘಟನೆಗಳು ಬಂದ್‍ಗೆ ಕರೆ ನೀಡಿದ್ದು, ಕಾಮುಕರನ್ನ ಶೀಘ್ರವೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಕೆಲ ವರ್ತಕರು ಮತ್ತು ಅಂಗಡಿಗಳು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನ ಬಂದ್ ಮಾಡಿದ್ದಾರೆ. ಇನ್ನೂ ಕೆಲವು ಅಂಗಡಿಗಳನ್ನ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬಾಗಿಲು ಹಾಕಿಸಿದ್ದಾರೆ. ಸರ್ಕಾರಿ ಬಸ್‍ಗಳನ್ನ ಡಿಪೋಗೆ ವಾಪಸ್ ಕಳುಹಿಸಿದ್ದು, ನಗರದಲ್ಲಿ ಆಟೋ ಸಂಚಾರ ಕೂಡ ತಾತ್ಕಾಲಿಕವಾಗಿ ಬಂದ್ ಆಗಿದೆ. ವಿವಿಧ ಸಂಘಟನೆಗಳು ಇಂದು ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಿವೆ.

    ವಿಜಯಪುರದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರ ಮೇಲೆ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯ್ದೆ ಅಡಿ ಎಫ್‍ಐಆರ್ ದಾಖಲಾಗಿದೆ ಎಂದು ವಿಜಯಪುರ ಎಸ್‍ಪಿ ಕುಲದೀಪ್ ಜೈನ್ ಹೇಳಿದ್ದಾರೆ.

    ಸದ್ಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಪ್ರಮುಖ ಆರೋಪಿ ದೀಪಕ್‍ಗಾಗಿ ಎರಡು ತಂಡ ರಚನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ತಿಳಿದಿದ್ದಾರೆ.

    ಇದನ್ನು ಓದಿ: ಶಾಲೆಗೆ ಹೋಗುವಾಗ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್, ಕೊಲೆ!

    ಇದನ್ನು ಓದಿ: ವಿಜಯಪುರದಲ್ಲಿ ದಲಿತ ಬಾಲಕಿಯ ರೇಪ್, ಕೊಲೆಗೆ ಸಿಎಂ ಖಂಡನೆ

     

  • ಉಚಿತವಾಗಿ ಟೈಲರಿಂಗ್ ಕಲಿಸ್ತೀನಿ ಎಂದು ಹೇಳಿ ಹುಡುಗಿಯರ ಮೈ, ಕೈ ಮುಟ್ಟುತ್ತಿದ್ದವನಿಗೆ ಬಿತ್ತು ಗೂಸಾ

    ಉಚಿತವಾಗಿ ಟೈಲರಿಂಗ್ ಕಲಿಸ್ತೀನಿ ಎಂದು ಹೇಳಿ ಹುಡುಗಿಯರ ಮೈ, ಕೈ ಮುಟ್ಟುತ್ತಿದ್ದವನಿಗೆ ಬಿತ್ತು ಗೂಸಾ

    ಚಿಕ್ಕಮಗಳೂರು: ಟೈಲರಿಂಗ್ ಕಲಿಸುವ ನೆಪದಲ್ಲಿ ಯುವತಿರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ ವ್ಯಕ್ತಿಗೆ ಜನರು ಧರ್ಮದೇಟು ಕೊಟ್ಟಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾರ್ವೆ ಗ್ರಾಮದಲ್ಲಿ ನಡೆದಿದೆ.

    ಹಸನಬ್ಬ ಸಾರ್ವಜನಿಕರಿಂದ ನಡು ಬೀದಿಯಲ್ಲಿ ಸಖತ್ತಾಗಿ ಗೂಸಾ ತಿಂದ ವ್ಯಕ್ತಿ. ಮುತ್ತಿನಕೊಪ್ಪದಲ್ಲಿ ಟೈಲರಿಂಗ್ ಶಾಪ್ ಇಟ್ಟಿದ್ದ ಈತ ಕಲಿಸುವ ನೆಪದಲ್ಲಿ ದಲಿತ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ನಾನು ನಿಮ್ಮೆಲ್ಲರಿಗೂ ಉಚಿತವಾಗಿ ಟೈಲರಿಂಗ್ ಕಲಿಸಿಕೊಡಿಸುತ್ತೇನೆ ಅಂತಾ ಸುತ್ತಮುತ್ತಲಿನ ದಲಿತ ಕಾಲೋನಿ ಯುವತಿಯರನ್ನು ಮರಳು ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ.

    ಆದರೆ ಇವತ್ತು ಅವನ ನಸೀಬು ಕೈ ಕೊಟ್ಟಿತ್ತು ಅನ್ನಿಸುತ್ತದೆ. ಈತನ ಅಸಭ್ಯವ ವರ್ತನೆ ಬಗ್ಗೆ ತಿಳಿದ ಸ್ಥಳೀಯರು ಟೈಲರಪ್ಪನ ಮುಖಮೂತಿ ನೋಡದೆ ಧರ್ಮದೇಟು ನೀಡಿ ಬುದ್ಧಿ ಕಲಿಸಿದ್ದಾರೆ. ಇನ್ನು ಹಸನಬ್ಬನಿಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿ ಜೊತೆ ಸಂಸಾರ ಮಾಡೋದ ಬಿಟ್ಟು ಒಬ್ಬಂಟಿಯಾಗಿದನಂತೆ. ಇದನ್ನೇ ಬಂಡವಾಳ ಮಾಡಿಕೊಂಡಿರೋ ಹಸನಬ್ಬ ಟೈಲರಿಂಗ್ ಕಲಿಸುವ ನೆಪದಲ್ಲಿ ಯುವತಿಯರನ್ನು ಮಾರಾಟ ಮಾಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.