ಶಿವಮೊಗ್ಗ: ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕೆ ಕಾರಣವಾಗಿದ್ದು, ಕೆಲ ಕಿಡಿಗೇಡಿಗಳಿಗೆ ಕಾಂಗ್ರೆಸ್ನವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶಕ್ಕೆ ನಾವು ಬೆಲೆ ಕೊಡುತ್ತೇವೆ. ದತ್ತಪೀಠದಲ್ಲಿ ಗೋರಿ ನಿರ್ಮಾಣ ಮಾಡಿ, ಅದಕ್ಕೆ ಬಾಬಾ ಬುಡನ್ಗಿರಿ ಎಂದು ಹೆಸರು ಹೇಳಿದರೆ ಆಗುತ್ತೇ? ದತ್ತಪೀಠ ಎಂಬ ಹೆಸರಿದ್ದು, ನ್ಯಾಯಾಲಯದ ಆದೇಶದಂತೆ ಅದು ದತ್ತಪೀಠವೇ ಆಗಿದೆ. ಹೀಗಿರುವಾಗ ಕೆಲವು ಕಿಡಿಗೇಡಿಗಳು ಅಲ್ಲಿ ನಮಾಜ್ ಮಾಡಿ, ಮಾಂಸಾಹಾರ ಸೇವಿಸಿದ್ದಾರೆ ಅಂದರೆ ಅವರಿಗೆ ಇನ್ನೆಷ್ಟು ಸೊಕ್ಕು ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದತ್ತಪೀಠ ವಿವಾದಿತ ಸ್ಥಳದಲ್ಲಿ ನಮಾಜ್?
ಏನಿದು ಘಟನೆ?
ಈ ಹಿಂದೆ ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳು ದತ್ತಪೀಠದ ವಿವಾದಿತ ಸ್ಥಳದಲ್ಲಿ ಮಾಂಸದೂಟ ಮಾಡಿ, ಗೋರಿ ಪೂಜೆ ಬಳಿಕ ದತ್ತಪೀಠದ ಆವರಣದಲ್ಲಿ ನಮಾಜ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವಿವಾದ ಸೃಷ್ಟಿಯಾಗಿತ್ತು. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ
ಚಿಕ್ಕಮಗಳೂರು: ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಪೀಠದಲ್ಲಿ ಆವರಣದಲ್ಲಿ ಮಾಂಸಹಾರ ಸೇವನೆ ಮಾಡಿದ್ದು, ಹಿಂದೂ ಸಂಘಟನೆಗಳು ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿವೆ.
ದತ್ತಪೀಠದ ಉಮೇದುವಾರಿಕೆಗಾಗಿ ಎರಡು ಸಮುದಾಯಗಳು ದಶಕಗಳಿಂದ ಹೋರಾಟ ಮಾಡುತ್ತಿವೆ. ಹಾಗಾಗಿ ನ್ಯಾಯಾಲಯ ಕೂಡ ದತ್ತಪೀಠದ ಆವರಣದೊಳಗೆ ಕೆಲವೊಂದು ಆಚರಣೆಗೆ ನಿಬರ್ಂಧ ಹೇರಿದೆ. ಆದರೆ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ, ವಿವಾದಿತ ಜಾಗದಲ್ಲಿ ಪೂಜೆ ಮಾಡಿ ಮಾಂಸ ಸೇವನೆ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಇದನ್ನೂ ಓದಿ: ವಿವಾಹಿತೆಯ ಅನುಮಾನಾಸ್ಪದ ಸಾವು
ದತ್ತಪೀಠದಲ್ಲಿನ ಗೋರಿಗಳಿಗೆ ಪೂಜೆ ಮಾಡಲು ಹೇಗೆ ಅವಕಾಶ ಸಿಕ್ಕಿತು ಎಂದು ಬಜರಂಗದಳ ಕಾರ್ಯಕರ್ತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಿಂದೂಗಳ ಧಾರ್ಮಿಕ ಸಭೆ-ಸಮಾರಂಭದಲ್ಲಿ ಹೋಮ-ಹವನ ನಡೆಯುವ ಜಾಗದಲ್ಲಿ ಬಿರಿಯಾನಿ ಬೇಯಿಸಿ ತಿಂದಿರುವುದು ಇದೀಗ ಮತ್ತೊಂದು ವಿವಾದದ ಕಿಡಿಹೊತ್ತಿಸಿದೆ.
ಸರ್ಕಾರವೇ ನಿರ್ಮಿಸಿರುವ ಶೆಡ್: ನಿನ್ನೆ ದತ್ತಪೀಠದ ಗುಹೆಯ ಪಕ್ಕದಲ್ಲಿನ ತಾತ್ಕಾಲಿಕ ಶೆಡ್ನಲ್ಲಿ ಮುಸ್ಲಿಮರು ಮಾಂಸ ಬೇಯಿಸಿಕೊಂಡು ಸೇವನೆ ಮಾಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಕಾರರ ಪಿತ್ತ ನೆತ್ತಿಗೇರಿತ್ತು. ದತ್ತ ಜಯಂತಿ, ದತ್ತಮಾಲಾ ಅಭಿಯಾನದ ವೇಳೆ ಇಲ್ಲಿ ಹೋಮ-ಹವನ ನಡೆಸಲು ಸರ್ಕಾರವೇ ತಾತ್ಕಾಲಿಕವಾಗಿ ನಿರ್ಮಿಸಿರುವ ಶೆಡ್ ಇದು. ಈ ಶೆಡ್ನಲ್ಲಿ ಅನುಸೂಯ ಜಯಂತಿ, ದತ್ತಜಯಂತಿಯಂತೆ ಲೋಕ ಕಲ್ಯಾಣಾರ್ಥ ವಿವಿಧ ಹೋಮ-ಹವನ ಹಾಗೂ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗುವುದು. ಆದರೆ ಅಂತಹ ಧಾರ್ಮಿಕ ಜಾಗದಲ್ಲೂ ಮಾಂಸ ಬೇಯಿಸಿದ್ದಾರೆ ಎಂದು ಹಿಂದೂ ಸಂಘಟಕರು ಮುಸ್ಲಿಮರ ವಿರುದ್ಧವೂ ಕಿಡಿಕಾರಿದ್ದಾರೆ.
ದತ್ತಪೀಠದಲ್ಲೇ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಬಜರಂಗದಳ ಕಾರ್ಯಕರ್ತರು ಮುಜರಾಯಿ ಇಲಾಖೆ ಮಾಂಸಹಾರಕ್ಕೆ ಅವಕಾಶ ನೀಡಿದ್ದಾರೆ ಎಂದು ಹರಿಹಾಯ್ದರು. ಹೋಮದ ಜಾಗದಲ್ಲಿ ಮಾಂಸ ಬೇಯಿಸಿ ಅಪವಿತ್ರಗೊಳಿಸಿದ್ದಾರೆ. ದತ್ತಜಯಂತಿಯಲ್ಲಿ ಹೋಮದ ಹೊಗೆ, ಬೇರೆ ಸಮಯದಲ್ಲಿ ಮಾಂಸದ ಹೊಗೆ ಎಂದು ಬಜರಂಗದಳ ಮುಖಂಡರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ತಮ್ಮನನ್ನೇ ಚಾಕುವಿನಿಂದ ಇರಿದು ಕೊಂದ ಅಣ್ಣ
ಅಲ್ಲಿ ಪೂಜೆ ಮಾಡಲ್ಲ, ಮತ್ತೆಲ್ಲಿ: ದತ್ತಜಯಂತಿಯಲ್ಲಿ ನಾವು ಲೋಕಕಲ್ಯಾಣಾರ್ಥ ಹೋಮ-ಹವನ ನಡೆಸುವ ಜಾಗವನ್ನು ಮುಸ್ಲಿಮರು ಅಪವಿತ್ರಗೊಳಿಸಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಅಲ್ಲಿ ಹೋಮ-ಹವನ, ಪೂಜೆ ಮಾಡುವುದಿಲ್ಲ. ಈ ಹಿಂದೆ ಗುಹೆ ಸಮೀಪದ ತುಳಸಿಕಟ್ಟೆ ಬಳಿ ಹೋಮ ನಡೆಯುತ್ತಿತ್ತು. ಇನ್ನು ಮುಂದೆ ಅದೇ ತುಳಸಿಕಟ್ಟೆ ಬಳಿ ಹೋಮ-ಹವನ ಮಾಡುತ್ತೇವೆ. ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ನಮಗೆ ಯಾವುದೇ ಪ್ರಶ್ನೆ ಮಾಡುವಂತಿಲ್ಲ. ತುಳಸಿಕಟ್ಟೆ ಬಳಿ ಹೋಮ ಮಾಡಲು ಸರ್ಕಾರ ವಿರೋಧ ತೋರಿದರೆ ನಾವು ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಿವಾದಿತ ಗೋರಿಗಳಿಗೆ ಪೂಜೆ: ದತ್ತಪೀಠದ ಗುಹೆಯೊಳಗಿನ ಗೋರಿಗಳಿಗೆ ಮುಜಾವರ್ ಮಾತ್ರ ಪೂಜೆ ಮಾಡಬೇಕು. ಬೇರೆ ಯಾರಿಗೂ ಪೂಜೆಗೆ ಅವಕಾಶವಿಲ್ಲ. ಆದರೆ ದರ್ಶನಕ್ಕೆ ಗುಹೆಯೊಳಗೆ ಹೋಗಿದ್ದ ಮುಸ್ಲಿಂ ಭಕ್ತರೇ ಪೂಜೆ ಮಾಡಿದ್ದಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಇದು ಕೋರ್ಟ್ ಆದೇಶವನ್ನು ಉಲ್ಲಂಘಿಸಿದಂತೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿರುವ ಹಿಂದೂ ಸಂಘಟನೆಗಳ ಮುಖಂಡರು ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.
200 ಮೀಟರ್ ಸುತ್ತಳತೆಯಲ್ಲಿ ಮಾಂಸ ನಿಷೇಧ: 2010ರಲ್ಲಿ ಸುಪ್ರೀಂಕೋರ್ಟ್ ಕೂಡ 1999ರ ಪೂಜಾ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋಗಲು ಸೂಚಿಸಿದೆ. ಸರ್ಕಾರ, ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ಮುಜಾವರ್ ಮಾತ್ರ ದತ್ತಗುಹೆ-ಗೋರಿಗಳಿಗೆ ಪೂಜೆ ಸಲ್ಲಿಸಲು ಅವಕಾಶವಿದೆ. ಬೇರೆಯವರಿಗೆ ಪೂಜೆ-ಪುನಸ್ಕಾರಕ್ಕೆ ಅವಕಾಶವಿಲ್ಲ. ದತ್ತಜಯಂತಿ-ದತ್ತಮಾಲಾಧಾರಣೆ ಸಮಯದಲ್ಲಿ ಸ್ವಾಮೀಜಿಗಳಿಂದ ದತ್ತಪಾದುಕೆ ಪೂಜೆಗೆ ಅವಕಾಶಕ್ಕೆ ನೀಡುವಂತೆ ಒತ್ತಾಯಿಸಿರುವ ಹಲವು ನಿದರ್ಶನಗಳಿವೆ. ಜೊತೆಗೆ ದತ್ತಪೀಠದ 200 ಮೀಟರ್ ಸುತ್ತಳತೆಯಲ್ಲಿ ಮುಜರಾಯಿ ಇಲಾಖೆಯ ನಿಯಮ-ನಿರ್ದೇಶನದಂತೆ ಯಾವುದೇ ರೀತಿಯ ಮಾಂಸಾಹಾರ ಮಾಡುವುದಕ್ಕೆ ಸಂಪೂರ್ಣ ನಿಷೇಧವಿದೆ. ಮಾಂಸಹಾರ ನಿಷೇಧ ಜಾರಿಯಲ್ಲಿದ್ದರೂ ಕೂಡ ಬಿರಿಯಾನಿ ಮಾಡಿ ತಿಂದಿರೋದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲಾಡಳಿತದಿಂದ ತಾತ್ಕಾಲಿಕ ಶೆಡ್ ಕ್ಲೀನ್: ಹೋಮ-ಹವನದ ಜಾಗದಲ್ಲಿ ಬಿರಿಯಾನಿ ತಿಂದ ವಿಷಯ ಹಾಗೂ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಗೊಂಡ ಜಿಲ್ಲಾಡಳಿತ ಮುಸ್ಲಿಮರು ಬಿರಿಯಾನಿ ತಿಂದಿದ್ದ ಹೋಮದ ಜಾಗವನ್ನು ಕ್ಲೀನ್ ಮಾಡಿದೆ. ತಾತ್ಕಾಲಿಕ ಶೆಡ್ ಹಾಗೂ ಅದರ ಸುತ್ತಲೂ ಬ್ಲೀಚಿಂಗ್ ಪೌಡರ್ ಹಾಕಿ ಕ್ಲೀನ್ ಮಾಡಿದ್ದು, ಈಗ ಅಲ್ಲಿಗೆ ಯಾರಿಗೂ ಅವಕಾಶ ನೀಡುತ್ತಿಲ್ಲ. ಈ ಪ್ರಕರಣವನ್ನು ಖಂಡಿಸಿರುವ ವಿ.ಎಚ್.ಪಿ ಹಾಗೂ ಬಜರಂಗದಳ ಕಾರ್ಯಕರ್ತರು ದತ್ತಪೀಠದಲ್ಲಿ ಪ್ರತಿಭಟನೆ ನಡೆಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸುಂದರ ಪ್ರಕೃತಿ ಹಾಳು, ಪೀಠದಲ್ಲಿ ಕೆಟ್ಟ ವಾಸನೆ: ಇದೆಲ್ಲದರ ಮಧ್ಯೆ ಸಮುದ್ರಮಟ್ಟದಿಂದ ಸುಮಾರು 2,500 ಅಡಿಗೂ ಎತ್ತರದಲ್ಲಿರುವ ಸುಂದರ ಹಾಗೂ ಸ್ವಚ್ಛ ವಾತಾವರಣದಲ್ಲಿ ಬೀರುತ್ತಿರುವ ವಾಸನೆಯನ್ನ ತಡೆಯಲಾಗದಂತಾಗಿದೆ. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಅಡುಗೆ ಮಾಡುತ್ತಿರುವುದು, ಬಹಿರ್ದೆಸೆಗೆ ಹೋಗುತ್ತಿರುವುದು, ತಿಂದ ಪ್ಲೇಟ್ಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದು ಇಲ್ಲಿನ ಸೌಂದರ್ಯ ಹಾಗೂ ಸ್ವಚ್ಛತೆಯನ್ನ ಹಾಳು ಮಾಡುತ್ತಿದ್ದಾರೆ. ಎಷ್ಟರ ಮಟ್ಟಿಗೆ ಅಂದ್ರೆ ಊಹಿಸಲಾಗದಷ್ಟು. ತಣ್ಣನೆಯ ಗಾಳಿ ಬೀಸುವ ದತ್ತಪೀಠದ ಆವರಣದಲ್ಲೇ ಪ್ರವಾಸಿಗರು ಮೂಗು ಮುಚ್ಚಿಕೊಂಡು ಹೋಗುವಷ್ಟು ಹಾಳುಮಾಡಿದ್ದಾರೆ. ಕೂಡಲೇ ಜಿಲ್ಲಾಡಳಿತ ದತ್ತಪೀಠದ ಪರಿಸರ ರಕ್ಷಣೆಗೆ ಸೂಕ್ತ ಕ್ರಮಕೈಗೊಳ್ಳದಿದ್ದರೆ ದತ್ತಪೀಠದ ಸೌಂದರ್ಯ ಹಾಳುಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಪ್ರವಾಸಿಗರೇ ಅಸಮಾಧಾನ ಹೊರಹಾಕಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ ಗುಳಿಗ ದೈವನ ಮೂಲ ವಿಗ್ರಹ ಆ ದೇವ ಹೇಳಿದ ಜಾಗದಲ್ಲೇ ಪತ್ತೆಯಾಗಿದ್ದು, ಸ್ಥಳಿಯರು ಹಾಗೂ ಈ ಭಾಗದ ಪ್ರವಾಸಿಗರಿಗೆ ಗುಳಿಗ ದೈವನ ಮೇಲಿದ್ದ ದೈವದ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ.
ಕಳೆದ ಏಪ್ರಿಲ್ 24ರಂದು ಗುಳಿಗ ದೈವದ ವಾರ್ಷಿಕ ಪೂಜಾ ಮಹೋತ್ಸವ ನಡೆಯಿತು. ಈ ಸಂದರ್ಭದಲ್ಲಿ ದೈವದ ದರ್ಶನದಲ್ಲಿ ಕ್ಷೇತ್ರದ ನಾಲ್ಕು ಕಿ.ಮೀ. ದೂರದ ಮರವೊಂದರ ಕೆಳಗೆ ಗುಳಿಗ ದೈವದ ಮೂಲ ವಿಗ್ರಹ ಇದೆ. ಹುಡುಕಿದರೆ ವಿಗ್ರಹ ಸಿಗಲಿದೆ ಎಂದು ದೈವದ ದರ್ಶನದಲ್ಲಿ ದೇವಿಯೇ ಹೇಳಿದ್ದಳು. ಹಾಗಾಗಿ, ಗುಳಿಗ ದೈವದ ಕ್ಷೇತ್ರ ಅಭಿವೃದ್ಧಿಯ ಪದಾಧಿಕಾರಿಗಳು ಗುಳಿಗ ದೈವದ ದೇವಸ್ಥಾನದಿಂದ ಮೂರು-ನಾಲ್ಕು ಕಿ.ಮೀ. ದೂರದಲ್ಲಿ ಹುಡುಕಾಟ ನಡೆಸಿದ್ದಾರೆ. ಆಗ ಆಲೇಖಾನ್ ಎಸ್ಟೇಟ್ ಒಂದರ ಮರದ ಬುಡದಲ್ಲಿ ದೇವಿಯ ಮೂಲವಿಗ್ರಹ ಪತ್ತೆಯಾಗಿದೆ.
ದೇವಸ್ಥಾನದಿಂದ ನಾಲ್ಕು ಕಿ.ಮೀ. ದೂರದ ಮರವೊಂದರ ಕೆಳಗೆ ನೋಡಿದಾಗ ದೇವಿನ ಕಂಚಿನಮೂರ್ತಿ, ಗಂಟೆ ಹಾಗೂ ಕತ್ತಿ ಪತ್ತೆಯಾಗಿವೆ. ನೂರಾರು ವರ್ಷಗಳ ಹಿಂದೆ ಈ ಜಾಗದಲ್ಲಿ ಚಾಮುಂಡೇಶ್ವರಿ, ಗುಳಿಗಮ್ಮ, ಬಬ್ಬುಸ್ವಾಮಿಗೆ ವಿಜೃಂಭಣೆಯಿಂದ ಪೂಜಾ, ವಿಧಿ-ವಿಧಾನಗಳು ನಡೆಯುತ್ತಿದ್ದವು. ಈಗ ಗುಳಿಗಮ್ಮ ದೇವಿ ಹೇಳಿರೋ ಜಾಗದಲ್ಲೇ ಪುರಾತನ ಮೂರ್ತಿಗಳು ಸಿಕ್ಕಿರೋದು ಕ್ಷೇತ್ರ ಹಾಗೂ ದೇವಿಯ ಮಹಿಮೆಯನ್ನ ಇಮ್ಮಡಿಗೊಳಿಸಿದೆ.
ದೇವಿ ಹೇಳಿದ ಜಾಗದಲ್ಲೇ ಮೂಲ ವಿಗ್ರಹ ಪತ್ತೆಯಾದ ಹಿನ್ನೆಲೆ ಭಕ್ತರು ದೇವಾಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಈಗ ಸಿಕ್ಕಿರೋ ಪುರಾತನ ಮೂರ್ತಿಗಳನ್ನ ಅದೇ ಜಾಗದಲ್ಲಿ ಪುನರ್ ಪ್ರತಿಷ್ಠಾಪಿಸಿ ದೇವಿಯ ಹಿಂದಿನ ಗತಕಾಲದ ವೈಭವನ್ನು ಮತ್ತೆ ಮರುಕಳಿಸಲು ಯೋಚಿಸಿದ್ದಾರೆ. ಆದರೆ, ಈಗ ಗುಳಿಗ ದೈವ ಹೇಳಿರೋ ಜಾಗದಲ್ಲೇ ಮೂಲ ವಿಗ್ರಹ ಸಿಕ್ಕಿರೋದು ಮುಂದಿನ ದಿನಗಳಲ್ಲಿ ದೈವ ದರ್ಶನದ ಹೇಳಿಕೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹೇಳಿದ್ದಾರೆ.
ಗುಳಿಗ ದೈವ ಮಹಿಮೆ : ಈ ಗುಳಿಗಮ್ಮ ದೇವಿ ಅಂದ್ರೆ ಯಾರಿಗೂ ಅಷ್ಟಾಗಿ ಗೊತ್ತಿಲ್ಲ. ಆದರೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಚಾರ್ಮಾಡಿ ಘಾಟ್ನ ಮಾರ್ಗದಲ್ಲಿ ನೆಲೆ ನಿಂತಿರುವವಳೇ ಗುಳಿಗಮ್ಮ ದೇವಿ. ನಿತ್ಯ ಸಾವಿರಾರು ವಾಹನಗಳು ಓಡಾಡುವ ಈ ದಟ್ಟಾರಣ್ಯದ ಹಾವುಬಳುಕಿನ ಮೈಕಟ್ಟಿನ ರಸ್ತೆಯಲ್ಲಿ ಚಲಿಸಲು ಗಟ್ಟಿ ಗುಂಡಿಗೆ ಬೇಕು.
ಈ ಮಾರ್ಗ ಎಷ್ಟು ಸೌಂದರ್ಯ-ಅನಿವಾರ್ಯವೋ ಅಷ್ಟೆ ಅಪಾಯ ಕೂಡ. ಆದರೆ, ಈಕೆ ಬಗ್ಗೆ ಗೊತ್ತಿರುವವರು ಈ ಮಾರ್ಗದಲ್ಲಿ ಸಂಚರಿಸುವಾಗ ಈ ದೇವಿಗೆ ಕೈಮುಗಿಯದೆ ಮುಂದೆ ಹೋಗಲ್ಲ. ಚಾರ್ಮಾಡಿ ರಸ್ತೆಯ ಅಲೇಖಾನ್ ಹೊರಟ್ಟಿ ಗ್ರಾಮದ ಆರಂಭದಲ್ಲೇ ಈ ದೈವ ವಿರಾಜಮಾನವಾಗಿ ನೆಲೆ ನಿಂತಿದ್ದಾಳೆ. ಅಂದು ಈಕೆಗೆ ಮೂರ್ತಿ ಇರಲಿಲ್ಲ. ಇಂದು ಈಕೆಯ ಪುರಾತನ ವಿಗ್ರಹ ಸಿಕ್ಕಿದೆ. ಅಂದು ಕಲ್ಲಿನ ಮೂರ್ತಿಗೆ ಕೈಮುಗಿಯುತ್ತಿದ್ದರು. ಇನ್ಮುಂದೆ ಮೂರ್ತಿ ರೂಪದಲ್ಲಿ ನೆಲೆ ನಿಲ್ಲುತ್ತಾಳೆ. ಈಕೆಯದ್ದು ಅಪಾರ ಶಕ್ತಿ ಅನ್ನೋದು ಭಕ್ತರ ನಂಬಿಕೆ. ವರ್ಷ ಪೂರ್ತಿ ಈ ಮಾರ್ಗದಲ್ಲಿ ಸಂಚರಿಸುವವರನ್ನು ಈಕೆಯೇ ಕಾಯುತ್ತಾಳೆ ಅನ್ನೋದು ಸಾವಿರಾರು ಜನರ ನಂಬಿಕೆ.
ಕಳೆದ ಎರಡ್ಮೂರು ವರ್ಷಗಳಿಂದ ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. ಒಂದೇ ರಾತ್ರಿಗೆ 22 ಇಂಚಿನಷ್ಟು ಮಳೆ ಸುರಿದು ಮಲೆನಾಡೇ ಅಲ್ಲೋಲ-ಕಲ್ಲೋಲವಾಗಿತ್ತು. ಮಳೆಗಾಲದಲ್ಲಿ ಅತಿಹೆಚ್ಚು ಭೂ ಕುಸಿತ, ಗುಡ್ಡ ಕುಸಿತವಾದರೂ ಕೂಡ ಸಾವಿರಾರು ವಾಹನಗಳಲ್ಲಿ ಸಂಚರಿಸುವ ಯಾರೊಬ್ಬರಿಗೂ ಸಣ್ಣ ಅನಾಹುತ-ಅಪಾಯ ಕೂಡ ಆಗಿಲ್ಲ.
ಚಾರ್ಮಾಡಿ ಘಾಟಿಯೇ ಅಲ್ಲೋಲ-ಕಲ್ಲೋಲವಾದರೂ ಈ ಪ್ರದೇಶ ಕಿಂಚಿತ್ತು ಅಲುಗಾಡಿರಲಿಲ್ಲ. ದೈವ ನೆಲೆಸಿರೋ ನೂರು ಮೀಟರ್ ಅಂತರದಲ್ಲಿ ರಸ್ತೆಯ ಎರಡು ಭಾಗ ಕುಸಿದಿದ್ದರೂ ಕೂಡ ಈಕೆ ಸ್ಥಳದ ಒಂದು ಹುಲ್ಲು ಕಡ್ಡಿಯೂ ಅಲುಗಾಡಿರಲಿಲ್ಲ. ಒಂದಿಂಚು ಭೂಮಿಯೂ ಕದಲಿರಲಿಲ್ಲ. ಇದನ್ನೂ ಓದಿ:ಧ್ವನಿವರ್ಧಕಗಳ ವಿಚಾರದಲ್ಲಿ ತಾಳ್ಮೆಯನ್ನು ಪರೀಕ್ಷಿಸಬೇಡಿ: ರಾಜ್ ಠಾಕ್ರೆ
ಚಾರ್ಮಾಡಿ ಘಾಟಿಗೆ ಅಂಟಿಕೊಂಡಂತಿರುವ ಆಲೇಖಾನ್ ಹೊರಟ್ಟಿ ಗ್ರಾಮದ ರಸ್ತೆಯ ಹಲವೆಡೆ ಬೃಹತ್ ಪ್ರಮಾಣದ ಬಂಡೆಗಳು ಬಿದ್ದರೂ ಗ್ರಾಮ, ಗ್ರಾಮದ ಜನರಿಗೆ ಯಾವುದೇ ತೊಂದರೆಯಾಗಿಲ್ಲ. ಹಾಗಾಗಿ, ಚಾರ್ಮಾಡಿ ಘಾಟಿಯನ್ನ ರಕ್ಷಿಸಿ, ಉಳಿಸಿ, ಜನರನ್ನೂ ಕಾಪಾಡ್ತಿರೋದೆ ಈಕೆ ಅನ್ನೋದು ಸ್ಥಳಿಯರು-ಸಾವಿರಾರು ಪ್ರವಾಸಿಗರ ನಂಬಿಕೆ ಆಗಿದೆ. ಇದನ್ನೂ ಓದಿ: ಅಸನಿ ಸೈಕ್ಲೋನ್ ಎಫೆಕ್ಟ್ – 3 ದಿನ ಮಳೆ ಸಂಭವ
ಚಿಕ್ಕಮಗಳೂರು: ಯಾರ್ರೀ ಐಜಿ. ಐಜಿ ದೊಡ್ಡವನು ಎಂದು ನಾನು ಒಪ್ಪುವುದಿಲ್ಲ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ವಿರುದ್ಧ ಆಕ್ರೋಶ ಹೊರಹಾಕಿದರು.
ಶಾಸಕ ಕುಮಾರಸ್ವಾಮಿ, ಪಿಎಸ್ಐಗೆ ಫೋನ್ ಮಾಡಿ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಿಶಾ ಸಭೆ ಬಳಿಕ ಮಾಧ್ಯಮದ ಜೊತೆ ಅವರು ಮಾತನಾಡಿದರು. ಯಾರ್ರೀ ಐಜಿ? ಐಜಿ ಸೀಮೆಗಿಲ್ಲದವರಾ? ಐಜಿ ದೊಡ್ಡ ವ್ಯಕ್ತಿ ಎಂದು ನಾನು ಒಪ್ಪುವುದಿಲ್ಲ. ಐಜಿಗೆ ನನ್ನ ಕ್ಷೇತ್ರಕ್ಕೆ ಬಲವಂತ ಮಾಡುವಂತಹಾ ಹಠ ಏಕೆ ಎಂದು ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜೈಲಿಗೆ ಹೋಗಿಬಂದವ್ರಿಂದ ನೀತಿ ಪಾಠ ಕೇಳುವ ದರ್ದು ಬಿಜೆಪಿಗಿಲ್ಲ: ಕಾರಜೋಳ
ಐಜಿ ದುಡ್ಡು ತಗೊಂಡು ಅವನನ್ನು ಮಲ್ಲಂದೂರು ಠಾಣೆಗೆ ಹಾಕಿರಬಹುದು. ಅದು ಅವನ ಬಾಯಲ್ಲೇ ಬಂದಿದೆ. ಐಜಿಗೆ 50 ಸಾವಿರ ರೂ. ನೀಡಬೇಕು ಎಂದು ಹಲವರ ಬಾಯಿಂದಲೇ ಬಂದಿದೆ. ಯಾವ್ಯಾವ ಪೊಲೀಸರು ಯಾವ್ಯಾವ ಬಾರಲ್ಲಿ ಎಷ್ಟು ಹಣ ವಸೂಲಿ ಮಾಡುತ್ತಾರೆ ಎಂದು ಗೊತ್ತು. ಪೊಲೀಸರ ಬಣ್ಣ ಬಯಲು ಮಾಡ್ತೀನಿ ಎಂದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು.
ನಾನು ಆವಾಜ್ ಹಾಕಿರೋದು ನಿಜ. ಯಾವನಿಗೂ ಕ್ಷಮೆ ಕೇಳಲ್ಲ. ಜಾಗ ಖಾಲಿ ಮಾಡಬೇಕಷ್ಟೆ. ಆತ ನನ್ನ ಅನುಮತಿ ಇಲ್ಲದೆ ನನ್ನ ಕ್ಷೇತ್ರಕ್ಕೆ ಬಂದಿದ್ದಾನೆ. ಇದು ಚುನಾವಣೆ ವರ್ಷ. ರಾಜ್ಯದ ಎಲ್ಲ ಶಾಸಕರು ಅವರಿಗೆ ಬೇಕಾದ ಅಧಿಕಾರಿಗಳನ್ನು ಹಾಕಿಸಿಕೊಳ್ಳುತ್ತಾರೆ. ನೀನು ಬೇಡ, ಬರಬೇಡ ಎಂದಿದ್ದೆ. ಐಜಿ ಹೇಳಿದ್ದಾರೆ ಎಂದು ರಾತ್ರಿ ಕದ್ದು ಚಾರ್ಜ್ ತಗೆದುಕೊಂಡಿದ್ದಾನೆ. ಏಕೆ ಬಂದಿದ್ದೀಯಾ ಹೋಗು ಎಂದಿದ್ದಕ್ಕೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದನು ಎಂದು ವಿವರಿಸಿದರು.
ನಾನು ಕ್ರಿಮಿನಲ್ ಅಲ್ಲ. ಅವನು ಕ್ರಿಮಿನಲ್ ಅಲ್ಲ. ನನ್ನ ಮೊಬೈಲ್ ಟ್ರ್ಯಾಪ್ ಮಾಡಿದ್ದಾನೆ. ಅವನೇ ಕ್ರಿಮಿನಲ್. ಈ ಕುರಿತು ಸದನ ಸಮಿತಿಯಲ್ಲಿ ಪ್ರಕರಣ ದಾಖಲಿಸುತ್ತೇನೆ ತನಿಖೆಯಾಗಲಿ. ಭ್ರಷ್ಟಾಚಾರ ಆಗುತ್ತೆ ಎಂದು ನಾನು ಯಾವುದೇ ಪೊಲೀಸರ ಬಳಿ ಅರ್ಧ ಟೀ ಕುಡಿಯುವುದಿಲ್ಲ. ಏಕವಚನ ಎಲ್ಲರೂ ಬಳಸುತ್ತಾರೆ ಎಂದರು. ಇದನ್ನೂ ಓದಿ: ಕೇಂದ್ರವು ಧ್ವನಿವರ್ಧಕಗಳ ಬಗ್ಗೆ ನೀತಿಯನ್ನು ತರಬೇಕು: ಮಹಾರಾಷ್ಟ್ರ ಗೃಹ ಸಚಿವ
ನೀವು ಶಾಸಕ… ಶಾಸಕ… ಅಂತೀರಾ. ಶಾಸಕರು ಎಂದು ಹೇಳಬೇಕು ಎಂದು ಮಾಧ್ಯಮದವರಿಗೂ ಬಹುವಚನದ ಪಾಠ ಮಾಡಿದ್ದಾರೆ. ನನ್ನಷ್ಟು ನಿಷ್ಟೆ-ಲಾಯಲ್ಟಿ ಯಾರಿಗೂ ಇಲ್ಲ ಎಂದು ತಮ್ಮ ಬೆನ್ನನ್ನ ತಾವೇ ತಟ್ಟಿಕೊಂಡಿದ್ದಾರೆ. ನನಗೆ ಬೇಕಾದವರನ್ನ ಹಾಕಿಸಿಕೊಳ್ಳುವುದು ಎಂದರೆ ಲಂಚ ತೆಗೆದುಕೊಳ್ಳುವುದಕ್ಕಲ್ಲ. ಲಂಚ ತೆಗೆದುಕೊಳ್ಳುವವರು ಯಾರು ಅಂತ ಗೊತ್ತು. ನಾನು ತೆಗೆದುಕೊಳ್ಳುವುದಿಲ್ಲ ಎಂದು ಆರೋಪಿ ಮಾಡಿದರು.
ಚಿಕ್ಕಮಗಳೂರು: ಬೆಳಗಾವಿ ಮೂಲದ ಗುತ್ತಿಗೆದಾರನ ಮೇಲ್ವಿಚಾರಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಲಾಡ್ಜ್ ನಲ್ಲಿ ನಡೆದಿದೆ.
ಬಸವರಾಜ್ ಲಿಂಗಪ್ಪ (47) ಮೃತ ವ್ಯಕ್ತಿ. ಲಿಂಗಪ್ಪ ಅವರು ದೊಡ್ಡ ವಾಟರ್ ಟ್ಯಾಂಕ್ ಕಟ್ಟುವ ಗುತ್ತಿಗೆದಾರನ ಬಳಿ ಕೆಲಸ ಮಾಡುತ್ತಿದ್ದರು. ಅವರು ಕಳೆದ 10 ದಿನಗಳಿಂದ ಬಾಳೆಹೊನ್ನೂರಿನಲ್ಲಿ ಕೆಲಸ ಮಾಡುತ್ತಿದ್ದರು. ಆರು ವರ್ಷದ ಕೆಲಸದ ಸಂಬಳ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಪೊಲೀಸ್ ಠಾಣೆ ಮುಂಭಾಗದಲ್ಲೇ ಏರ್ ಫೈರ್ – ವೆಬ್ ಡಿಸೈನರ್ ಕಿಡ್ನಾಪ್
ಆತ್ಮಹತ್ಯೆಗೂ ಮುನ್ನ ಲಿಂಗಪ್ಪ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಮೃತ ಬಸವರಾಜ್ ಅವರ ಕುಟುಂಬಸ್ಥರಿಗಾಗಿ ಕಾಯುತ್ತಿದ್ದಾರೆ. ಲಾಡ್ಜ್ ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಲಾಲ್ ಮಾಂಸ, ಮಸೀದಿಗಳಲ್ಲಿ ಧ್ವನಿವರ್ಧಕ ಏಕೆ ನಿಷೇಧಿಸಬೇಕು: ಒಮರ್ ಅಬ್ದುಲ್ಲಾ ಪ್ರಶ್ನೆ
ಚಿಕ್ಕಮಗಳೂರು: ಈ ಅರಣ್ಯವನ್ನ ಪುರದಮ್ಮ ಹಾಗೂ ರೇವಣಸಿದ್ದೇಶ್ವರ ದೇವರು ಕಾಯುತ್ತಿದ್ದಾರೆ. ಈ ಅರಣ್ಯಕ್ಕೆ ಯಾರಾದರೂ ಬೆಂಕಿ ಹಾಕಿದರೆ ಅವರ ಜೀವನ ಸರ್ವನಾಶವಾಗಲಿದೆ ಎಂದು ಸ್ಥಳಿಯರೇ ಅರಣ್ಯ ರಕ್ಷಣೆಗೆ ಮುಂದಾಗಿ, ಅರಣ್ಯದಲ್ಲಿ ಬ್ಯಾನರ್ ಹಾಕಿರುವ ಅಪರೂಪದ ಘಟನೆಗೆ ತಾಲೂಕಿನ ಸಿಂದಿಗೆರೆ ಮೀಸಲು ಅರಣ್ಯ ವಿಭಾಗ ಸಾಕ್ಷಿಯಾಗಿದೆ.
ಈಗಾಗಲೇ ಕಾಡನ್ನ ಬೆಂಕಿಯಿಂದ ರಕ್ಷಿಸಲು ಅರಣ್ಯ ಇಲಾಖೆ ಸಾಕಷ್ಟು ಕ್ರಮಗಳನ್ನ ಕೈಗೊಂಡಿದೆ. ಆದರೂ, ನಾನಾ ರೀತಿಯ ಮೂಢನಂಬಿಕೆಗಳಿಂದ ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಾಕುತ್ತಿದ್ದಾರೆ. ಹಾಗಾಗಿ ಸಿಂದಿಗೆರೆ ಮೀಸಲು ಅರಣ್ಯ ವ್ಯಾಪ್ತಿಯ ದೇವಗೊಂಡನಹಳ್ಳಿ, ಕರಡಿಗವಿಮಠ, ಸಿಂದಿಗೆರೆ, ಎಸ್.ಬಿದರೆ, ಭೂಚೇನಹಳ್ಳಿ ಕಾವಲ್ನ ಹಲವು ಕಡೆಗಳಲ್ಲಿ ಈ ರೀತಿಯ ಬ್ಯಾನರ್ ಹಾಕಿ, ಕಿಡಿಗೇಡಿಗಳಿಗೆ ಭಯ ಹುಟ್ಟಿಸಿದ್ದಾರೆ.
ಅರಣ್ಯ ಅಧಿಕಾರಿಗಳು, ಕೇಸ್ಗೆಲ್ಲಾ ಹೆದರದವರು ದೇವರಿಗದರೂ ಹೆದರಿ ಬೆಂಕಿ ಹಾಕುವುದನ್ನ ನಿಲ್ಲಿಸಲಿ ಎಂದು ಈ ರೀತಿಯ ಬ್ಯಾನರ್ ಹಾಕಿದ್ದಾರೆ. ಈಗಾಗಲೇ ಅರಣ್ಯಕ್ಕೆ ಬೆಂಕಿ ಬೀಳುವುದನ್ನ ನಿಯಂತ್ರಿಸಲು ಅರಣ್ಯ ಇಲಾಖೆ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಇಲಾಖಾ ವ್ಯಾಪ್ತಿಯ ಜೊತೆ ಸಾರ್ವಜನಿಕರಿಗೆ ಜಾಗೃತಿಯನ್ನೂ ಮೂಡಿಸಿದ್ದಾರೆ. ಆದರೂ, ಕಿಡಿಗೇಡಿಗಳ ಕೃತ್ಯಕ್ಕೆ ಹಾಗೂ ಮೂಡನಂಬಿಕೆಗೆ ಅರಣ್ಯ ಬಲಿಯಾಗುತ್ತಿದೆ. ಹಾಗಾಗಿ, ಸಿಂದಿಗೆರೆ ಗ್ರಾಮದ ಜನ ಅರಣ್ಯ ರಕ್ಷಣೆ ದೇವರ ಮೊರೆ ಹೋಗಿದ್ದಾರೆ.
ಇತ್ತೀಚೆಗೆ ಅರಣ್ಯ ಇಲಾಖೆ ಬೆಂಕಿ ಅವಘಡಗಳನ್ನ ನಿಯಂತ್ರಿಸಲು ಡ್ರೋಣ್ ಮೊರೆ ಹೋಗಿತ್ತು. ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್ ಹಾರಿಸಿ ಕಾಡಿಗೆ ಬೆಂಕಿ ಹಾಕುವವರ ಮೇಲೆ ನಿಗಾ ವಹಿಸಿತ್ತು. ಆದರೂ ಸಿಂದಿಗೆರೆ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಕಿಡಿಗೇಡಿಗಳ ಕೃತ್ಯಕ್ಕೆ ಕಾಡಿಗೆ ಬೆಂಕಿ ಹಾಕುವ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತಿದ್ದವು. ಹಾಗಾಗಿ ಸ್ಥಳಿಯರು ಈ ಹೊಸ ದಾರಿಯ ಮೂಲಕ ಅರಣ್ಯ ರಕ್ಷಣೆಗೆ ಮುಂದಾಗಿದ್ದಾರೆ.
ಚಿಕ್ಕಮಗಳೂರು: ಪೂಜ್ಯರು ಕೇವಲ ಮಠವನ್ನು ಮಾತ್ರ ಕಟ್ಟದೆ ನಾವೆಲ್ಲರೂ ಒಂದೇ ಎಂಬ ಭಾವನೆಯಲ್ಲಿ ಜನರ ಮನಸ್ಸನ್ನು ಕಟ್ಟುತ್ತಿದ್ದಾರೆ. ನಾನು ಸಿಎಂ ಆಗಿ ಬಂದಿಲ್ಲ. ಭಕ್ತನಾಗಿ ಬಂದಿದ್ದೇನೆ. ಶೃಂಗೇರಿ ಶಾರದಾಂಬೆ ಹಾಗೂ ಹರಿಹರಪುರ ಮಠದ ಶಾರದಾ ಲಕ್ಷ್ಮಿ ನರಸಿಂಹ ಸ್ವಾಮಿ ದೇವರಿಂದ ರಾಜ್ಯವನ್ನು ಮುನ್ನಡೆಸುವ ಹೊಸ ಪ್ರೇರಣೆ ಪಡೆದುಕೊಂಡು ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಮಾಜ ಆದರ್ಶವಾಗಿ ಇರಬೇಕಾದರೆ ದೈವ ಭಕ್ತಿ, ಗುರುಭಕ್ತಿ ಹಾಗೂ ಆತ್ಮವಿಶ್ವಾಸ ಇರಬೇಕು. ಅದು ಬಹಳ ಮುಖ್ಯ. ಉತ್ಕ್ರಷ್ಟವಾದ ಪ್ರೀತಿಯೇ ಭಕ್ತಿ ಹಾಗೂ ಪವಿತ್ರ. ನಾವು ದೇವರ ಬಳಿ ಅಂತಸ್ತು, ಐಶ್ವರ್ಯ ಕೇಳುತ್ತೇವೆ. ಸ್ವಾಮೀಜಿಗಳು ಲೋಕಕ್ಕಾಗಿ ಕೇಳಿ ಕೊಳ್ಳುತ್ತಾರೆ. ನಿಸ್ವಾರ್ಥ ಭಕ್ತಿಯ ಪ್ರಪಂಚದಲ್ಲಿ ನೀವು ಇದ್ದೀರಿ ಎಂದು ತಿಳಿಸಿದರು.
ಭಗವಂತನಿಗೆ ಯಾರಿಗೆ, ಯಾವಾಗ, ಏನು ಕೊಡಬೇಕು ಎಂಬುದು ಗೊತ್ತಿದೆ. ಭಗವಂತ ಜನ್ಮ ನೀಡಿದ್ದಾನೆ. ನಾವು ಏಕೆ ಹುಟ್ಟಿದ್ದೇವೆ ಎಂಬುದಕ್ಕೆ ಉತ್ತರ ನಮ್ಮೊಳಗೆ ಇದೆ. ನಾವು ಅದನ್ನು ತಿಳಿದುಕೊಂಡರೆ ಜೀವನ ಸಾರ್ಥಕ. ಗುರುವಿನ ಬಳಿ ಭಕ್ತಿಯಲ್ಲಿ ಕರಗಿ ಲೀನವಾಗಬೇಕು. ನಾನು ಎಂಬ ಅಸ್ತಿತ್ವವನ್ನು ವಿಸರ್ಜನೆ ಮಾಡಬೇಕು. ನಾನು ಎಂಬುದು ನಿಸರ್ಗದ ಸಣ್ಣ ಕಣ. ಯಾರೂ ಕೂಡ ಸರ್ವ ಸ್ವತಂತ್ರರಾಗಿ ಹುಟ್ಟಲ್ಲ. ಅಪ್ಪ-ಅಮ್ಮ, ಅಕ್ಕ-ತಂಗಿ, ಅಣ್ಣ-ತಮ್ಮ, ಗುರು ಎಲ್ಲರ ಸಹಾಯದಲ್ಲಿ ಬೆಳೆಯುತ್ತಿದ್ದೇವೆ. ಇದು ನಮ್ಮ ಅಕೌಂಟ್ನಲ್ಲಿ ಕ್ರೆಡಿಟ್ ಆಗಿರುತ್ತದೆ ಎಂದರು. ಇದನ್ನೂ ಓದಿ: ರಾಮನವಮಿ ಮೆರವಣಿಗೆಯನ್ನು ಪಾಕಿಸ್ತಾನದಲ್ಲಿ ನಡೆಸಲು ಸಾಧ್ಯವೇ? ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಶಂಕರಾಚಾರ್ಯರ ಪರಂಪರೆ, ಶಾರದೆ, ಲಕ್ಷ್ಮಿನರಸಿಂಹರ ಆಶೀರ್ವಾದ ಇರಬೇಕು. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮೂಡಿಸಲು ಮಠದ ಪಾತ್ರ ಬಹಳ ಮುಖ್ಯ. ಅವರು ಕರ್ತವ್ಯ ಮಾಡುತ್ತಿರುವುದರಿಂದ ನೈತಿಕತೆ ಉಳಿದಿದೆ. ಮಠದಿಂದ ಸಮಾಜದ ಪರಿವರ್ತನೆ, ಬದಲಾವಣೆ ಕಾರ್ಯ ನಡೆಯಲಿ. ಸ್ವರ್ಗ ಎಲ್ಲೂ ಇಲ್ಲ, ಇಲ್ಲೇ ಇದೆ. ನಮ್ಮೊಳಗೆ ಇದೆ. ಅನುಭವಿಸಬೇಕಷ್ಟೆ ಎಂದು ತಿಳಿಸಿದರು.
ಬಸವಣ್ಣ ಕಾಯಕವೇ ಕೈಲಾಸ ಎಂದಿದ್ದಾರೆ. ವರ್ಕ್ ಇಸ್ ವರ್ಶಿಪ್. ನ್ಯಾಯ-ನೀತಿಯ ಸಮಾಜ ಸ್ಥಾಪನೆ ಆಗಬೇಕು. ಶಂಕರಾಚಾರ್ಯರ ವಿಚಾರ, ಆಚಾರ-ತತ್ವಗಳನ್ನು ಅರ್ಥ ಮಾಡಿಕೊಂಡು, ಬದುಕಿನಲ್ಲಿ ಕಿಂಚಿತ್ತು ಅಳವಡಿಸಿಕೊಂಡಲ್ಲಿ ಸಮಾಜ ಸುಧಾರಣೆ ಆಗುತ್ತದೆ. ನಾನು ಸಿಎಂ ಆಗಿ ಬಂದಿಲ್ಲ. ಭಕ್ತನಾಗಿ ಬಂದಿದ್ದೇನೆ. ಶ್ರದ್ಧಾಪೂರ್ವಕವಾಗಿ ತಲೆಬಾಗಿ ಶಾರದೆಗೆ ನಮಸ್ಕಾರ ಮಾಡುತ್ತೇನೆ. ಮಠದ ಮುಂದಿನ ಎಲ್ಲಾ ಕಾರ್ಯಕ್ರಮಕ್ಕೂ ನಮ್ಮ ಸರ್ಕಾರದ ಬೆಂಬಲ ಇರುತ್ತದೆ ಎಂದರು.
ಚಿಕ್ಕಮಗಳೂರು: ಸ್ವಂತ ವಾಹನಕ್ಕೆ ಸರ್ಕಾರದ ಲೋಗೋ ಹಾಕಿಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವಾಸಕ್ಕೆ ಬಂದು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹಳೇಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷರು ತಮ್ಮ ಇನೋವಾ ಕಾರಿಗೆ ಸರ್ಕಾರದ ಲೋಗೋ ಹಾಕಿಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಹಳೇಬೀಡು, ಹುಣಸೂರು ತಾಲೂಕು ಎಂದು ಬರೆಸಿಕೊಂಡಿದ್ದಾರೆ. ಇದನ್ನೂ ಓದಿ: ಸೋನಂ ಕಪೂರ್ ನಿವಾಸದಲ್ಲಿ 1.41 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು
ಜಿ-ಸೀರಿಸ್ ಹೊಂದಿರುವ ಸರ್ಕಾರದ ವಾಹನಗಳಿಗೆ ಮಾತ್ರ ಸರ್ಕಾರದ ಲೋಗೋ ಬಳಸಬಹುದು. ಸರ್ಕಾರದ ವಾಹನಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನಗಳ ನೇಮ್ಬೋರ್ಡ್ ಸರ್ಕಾರದ ಲೋಗೋ ಬಳಸುವಂತಿಲ್ಲ ಎಂದು ಹೈಕೋರ್ಟ್ ಆದೇಶವಿದೆ. ನ್ಯಾಯಾಲಯದ ಸೂಚನೆ ಇದ್ದರೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ತಮ್ಮ ಸ್ವಂತ ವಾಹನಕ್ಕೆ ಸರ್ಕಾರದ ಲೋಗೋ ಬಳಸಿಕೊಂಡಿರುವುದು ಪೊಲೀಸರ ಕಣ್ಣಿಗೆ ಬಿದ್ದಿಲ್ವಾ ಎಂಬ ಪ್ರಶ್ನೆ ಮೂಡಿದೆ.
ಸ್ವಂತ ಗಾಡಿಗೆ ಸರ್ಕಾರದ ಲೋಗೋ ಹಾಕಿಕೊಂಡು ಪ್ರವಾಸಕ್ಕೆ ಬಂದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರು ಕ್ಯಾಮರಾ ಕಣ್ಣಿಗೆ ಬಿದ್ದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನ ಹೊರತುಪಡಿಸಿ ಬೇರೆ ಯಾವುದೇ ವಾಹನಗಳಿಗೂ ಈ ರೀತಿಯ ಸರ್ಕಾರದ ಚಿಹ್ನೆಯನ್ನು ಬಳಸುವಂತಿಲ್ಲ. ಇದನ್ನೂ ಓದಿ: ಯಶ್ನ ನಾನು ಹೀರೋ ಆಗಿ ಟ್ರೀಟ್ ಮಾಡಲ್ಲ: ಹೆಚ್.ಆರ್ ರಂಗನಾಥ್
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನ ಹೊರತುಪಡಿಸಿ ಸರ್ಕಾರದ ಅಧೀನ ಸಂಸ್ಥೆಗಳು ಕೂಡ ಸರ್ಕಾರದ ಲೋಗೋ ಬಳಸುವಂತಿಲ್ಲ. ಆದರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ವಂತ ಗಾಡಿಗೆ ಸರ್ಕಾರದ ಲೋಗೋವನ್ನು ಬಳಸಿಕೊಂಡು ಪ್ರವಾಸಕ್ಕೆ ಬಂದಿರುವುದು ಎಷ್ಟು ಸರಿ ಎಂದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಮೂಡಿದೆ. ಸರ್ಕಾರ ಇಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಲ್ಲಿ 130 ವರ್ಷಗಳಿಂದ ತೀವ್ರ ವಿವಾದ ಹುಟ್ಟಿಸಿದ್ದ ಮೂಡಿಗೆರೆ ಪಟ್ಟಣದ ಹೃದಯ ಭಾಗದಲ್ಲಿದ್ದ ಕ್ರೈಸ್ತ ಸಮುದಾಯದ ಸಮಾಧಿಯನ್ನ ಕ್ರೈಸ್ತರು ಶಾಂತಿಯುತವಾಗಿ ಬಗೆಹರಿಸಿಕೊಂಡಿದ್ದಾರೆ.
ಮೂಡಿಗೆರೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗಲ್ಲಿದ್ದ ಕ್ರೈಸ್ತ ಸಮುದಾಯ ಶಿಲುಬೆಯನ್ನ ಸಮುದಾಯದ ಮುಖಂಡರು ಹಾಗೂ ಪಟ್ಟಣ ಪಂಚಾಯ್ತಿ ಮಾತುಕತೆ ಮೂಲಕ ಶಾಂತಿಯುತವಾಗಿ ಬಗೆಹರಿಸಿಕೊಂಡು ಸ್ಥಳಾಂತರಿಸಿದೆ. ಇದನ್ನೂ ಓದಿ: ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್
1884ರಲ್ಲಿ ಮೂಡಿಗೆರೆ ಪಟ್ಟಣದಲ್ಲಿ ಸ್ಯಾಮುಯಲ್ ಎಂಬ ವ್ಯಕ್ತಿ ಮೃತಪಟ್ಟಿದ್ದರು. ಸ್ಯಾಮುಯಲ್, ಬಡಜನರ ಕಷ್ಟಕ್ಕೆ ಮರುಗುತ್ತಿದ್ದು, ಸದಾ ಸಮಾಜಮುಖಿ ಕೆಲಸ-ಕಾರ್ಯಗಳಲ್ಲಿ ತೊಡಗಿದ್ದರು ಎಂಬ ಕಾರಣಕ್ಕೆ ಸ್ಥಳಿಯ ಕ್ರೈಸ್ತ ಸಮುದಾಯ ಬಸ್ ನಿಲ್ದಾಣದ ಮುಂಭಾಗದ ಜಾಗದಲ್ಲೇ ಅವರ ಅಂತ್ಯ ಸಂಸ್ಕಾರ ಮಾಡಿತ್ತು. ಅಂದಿನಿಂದಲೂ ಈ ಜಾಗ ವಿವಾದದಿಂದ ಕೂಡಿತ್ತು. ಪಟ್ಟಣ ಪಂಚಾಯ್ತಿ ನಾಲ್ಕೈದು ದಶಕಗಳಿಂದ ಮಳಿಗೆ ನಿರ್ಮಿಸಲು ಈ ವಿವಾದಿತ ಶಿಲುಬೆಯನ್ನ ತೆರವುಗೊಳಿಸಲು ಮುಂದಾದರೂ ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಗರ್ಲ್ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್
ಶಿಲುಬೆ ತೆರವುಗೊಳಿಸಲು ಕ್ರೈಸ್ತ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಇಂದು ಪಟ್ಟಣ ಪಂಚಾಯ್ತಿ ಅಭಿವೃದ್ಧಿ ಕಾರ್ಯಕ್ಕೆ ಕೈ ಜೋಡಿಸಿರುವ ಕ್ರೈಸ್ತ ಸಮುದಾಯ ಶಾಂತಿಯುತವಾಗಿ ಶಿಲುಬೆಯನ್ನ ಸ್ಥಳಾಂತರಿಸಿದೆ. ಪಟ್ಟಣ ಪಂಚಾಯ್ತಿ ನೇತೃತ್ವದಲ್ಲಿ ಪೂಜೆ ಮಾಡಿ ಶಿಲುಬೆಯನ್ನ ಸ್ಥಳಾಂತರಿಸಿದ್ದಾರೆ. ಪಟ್ಟಣದ ಹೃದಯ ಭಾಗದಲ್ಲಿದ್ದ ಶಿಲುಬೆಯನ್ನು ಸ್ಥಳಾಂತರಿಸಿ ಕ್ರೈಸ್ತರ ಸ್ಮಶಾನದಲ್ಲಿ ಪೂಜೆ ಮಾಡಿ ಮತ್ತೊಮ್ಮೆ ಸಮಾಧಿ ಮಾಡಿದ್ದಾರೆ.
ಸುಮಾರು ಎರಡು ಗಂಟೆ ಕಾರ್ಯಚರಣೆ ನಡೆಸಿದರೂ ಆ ಜಾಗದಲ್ಲಿ ಯಾವುದೇ ಕಳೆಬರಹ ಸಿಗಲಿಲ್ಲ. 130 ವರ್ಷವಾದ ಕಾರಣ ನೆಲದ ಒಳಭಾಗದಲ್ಲಿ ಏನೂ ಇರಲಿಲ್ಲ. ಜೆಸಿಬಿಯಲ್ಲಿ ಗುಂಡಿ ತೆಗೆಸಿ ಹುಡುಕಿದರೂ ಯಾವುದೇ ಕುರುಹು ಸಿಗಲಿಲ್ಲ. ಹಾಗಾಗಿ, ಕ್ರೈಸ್ತರು ಸಮಾಧಿಯ ಮಣ್ಣನ್ನೇ ತೆಗೆದುಕೊಂಡು ಹೋಗಿ, ಮಣ್ಣಿನ ಜೊತೆ ಸಮಾಧಿ ಅಕ್ಕಪಕ್ಕದಲ್ಲಿದ್ದ ಕಲ್ಲು ಹಾಗೂ ಇತರೆ ವಸ್ತುಗಳನ್ನ ಮತ್ತೇ ಸಂಪ್ರದಾಯಬದ್ಧವಾಗಿ ಮಣ್ಣು ಮಾಡಿ ಅದರ ಮೇಲೆ ಶಿಲುಬೆಯನ್ನ ಮತ್ತೆ ಪುನರ್ ಪ್ರತಿಷ್ಠಾಪಿಸಿದ್ದಾರೆ.
ಈಗ ಆ ಜಾಗದಲ್ಲಿ ಪಟ್ಟಣ ಪಂಚಾಯ್ತಿ ಮಳಿಗೆ ನಿರ್ಮಾಣ ಮಾಡಲು ಮುಂದಾಗಿದೆ. ಹೆಚ್ಚು-ಕಡಿಮೆ ಶತಮಾನಗಳಿಂದ ವಿವಾದದಲ್ಲಿದ್ದ ಸ್ಥಳವನ್ನು ಆರು ತಿಂಗಳ ಹಿಂದೆ ಅಧ್ಯಕ್ಷರಾದ ಧನ್ಪಾಲ್, ಪಟ್ಟಣ ಪಂಚಾಯ್ತಿ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಜೊತೆ ಮಾತುಕತೆ ನಡೆಸಿ ಶತಮಾನದ ಸಮಸ್ಯೆಯನ್ನ ಶಾಂತಿಯುತವಾಗಿ ಬಗೆಹರಿಸಿದ್ದಾರೆ. ಅಧ್ಯಕ್ಷರು ಈ ಕಾರ್ಯಕ್ಕೆ ಮೂಡಿಗೆರೆ ಪಟ್ಟಣದ ಜನ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷನ ಸಹೋದರಿ ಅಶ್ವಿನಿ ಅವರು 2015ರಲ್ಲಿ ಕೊಲೆಯಾಗಿದ್ದ ವಿಶ್ವನಾಥ್ ಶೆಟ್ಟಿ ಮಗನ ಓದಿನ ಜವಾಬ್ದಾರಿ ಹೊತ್ತಿದ್ದಾರೆ.
2015ರಲ್ಲಿ ಪಿಎಫ್ಐ ಸಂಸ್ಥಾಪನಾ ದಿನಾಚರಣೆ, ಸಮಾವೇಶ ಅಂಗವಾಗಿ ಶಿವಮೊಗ್ಗದಲ್ಲಿ ನಡೆದ ಮೆರವಣಿಗೆ ಮತ್ತು ಆನಂತರದಲ್ಲಿ ಉಂಟಾದ ಗಲಭೆಯಲ್ಲಿ ಮೃತಪಟ್ಟ ಹಿಂದೂ ಕಾರ್ಯಕರ್ತ ವಿಶ್ವನಾಥ ಶೆಟ್ಟಿ ಮಗ ಯಶಸ್ ಓದಿನ ಜವಾಬ್ದಾರಿಯನ್ನು ಅಶ್ವಿನಿ ವಹಿಸಿಕೊಂಡಿದ್ದಾರೆ. ಯಶಸ್ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಾಯಿಯ ಜೊತೆ ಇದ್ದು, ಕೊಪ್ಪದಲ್ಲೇ 8ನೇ ತರಗತಿ ಓದುತ್ತಿದ್ದಾನೆ. ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ
2015ರ ಫೆಬ್ರವರಿ 19 ರಂದು ಶಿವಮೊಗ್ಗದಲ್ಲಿ ನಡೆದ ಪಿಎಫ್ಐ ಸಮಾವೇಶ ಮುಗಿಸಿಕೊಂಡು ಹೋಗುವಾಗ ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ ದುಷ್ಕರ್ಮಿಗಳು ವಿಶ್ವನಾಥ್ ಶೆಟ್ಟಿಯನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಸಾವಿನ ಕೆಲ ತಿಂಗಳ ಬಳಿಕ ಪತ್ನಿ ಕೂಡ ಸಾವನ್ನಪ್ಪಿದ್ದರು. ವಿಶ್ವನಾಥ್ ಶೆಟ್ಟಿಯ ಮಗ ಯಶಸ್ ಅಪ್ಪ-ಅಮ್ಮ ಇಬ್ಬರೂ ಇಲ್ಲದೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಅಜ್ಜಿಯ ಜೊತೆ ವಾಸವಿದ್ದನು.
2022ರ ಫೆಬ್ರವರಿ 20ರಂದು ಹರ್ಷ ರಾತ್ರಿ 10 ಗಂಟೆ ವೇಳೆಯಲ್ಲಿ ಊಟಕ್ಕೆ ಹೋಗುವಾಗ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ಏಳೆಂಟು ಜನ ಹರ್ಷ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದರು. ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಯಶಸ್ ಮನೆಗೆ ಭೇಟಿ ನೀಡಿದ ಮೃತ ಹರ್ಷ ಸಹೋದರಿ ಅಶ್ವಿನಿ ಆ ಬಾಲಕನ ಓದಿನ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ.
ಅವನ ಓದಿನ ಜೊತೆ ಬೇರೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ನಾನೇ ನೋಡಿಕೊಳ್ಳುತ್ತೇನೆ. ನನಗೆ ಒಂಬತ್ತನೇ ತರಗತಿ ಓದುತ್ತಿರುವ ಮಗಳು ಇದ್ದಾಳೆ. ಇವನನ್ನು 8ನೇ ತರಗತಿ ಓದುತ್ತಿರುವ ಮಗ ಎಂದು ಭಾವಿಸಿಕೊಳ್ಳುತ್ತೇನೆ. ಅವನಿಗೆ ಏನು ಬೇಕು ಎಲ್ಲಾ ಮಾಡುತ್ತೇನೆ. ನೀವು ಅವನ ಬಗ್ಗೆ ಚಿಂತೆಯನ್ನೇ ಮಾಡಬೇಡಿ ಎಂದು ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ
ಅವನಿಗೆ ಏನೇ ಸಮಸ್ಯೆಯಾದರೂ ನನಗೆ ಕರೆ ಮಾಡಿ, ನಾನು ಬಂದು ಅವನನ್ನ ನೋಡಿಕೊಳ್ಳುತ್ತೇನೆ ಎಂದಿದ್ದಾರೆ. ಅಜ್ಜಿ ಹಾಗೂ ಅವನನ್ನು ನೋಡಿಕೊಂಡು ಅವನ ಓದಿನ ಬಗ್ಗೆ ಮಾತ್ರ ಯೋಚನೆ ಮಾಡಿ, ಉಳಿದದ್ದು ನನಗೆ ಬಿಡಿ. ಅವನ ಓದು ಹಾಗೂ ಹಣದ ಬಗ್ಗೆ ಯೋಚನೆಯನ್ನೇ ಮಾಡಬೇಡಿ. ಅವನು ನನಗೆ ಹರ್ಷನಿದ್ದಂತೆ, ನೀವು ಯೋಚನೆ ಮಾಡಬೇಡಿ ಎಂದು ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿಗೆ ಧೈರ್ಯ ತುಂಬಿದ್ದಾರೆ.
ನಿಮಗೆ ಏನಾದರೂ ಬೇಕಾದರೆ ನನಗೆ ಕರೆ ಮಾಡಿ. ಅಜ್ಜಿ ಹಾಗೂ ಯಶಸ್ ಅವರ ಇಬ್ಬರ ಜವಾಬ್ದಾರಿ ನನ್ನದು ಎಂದು ಮೃತ ಹರ್ಷ ಅಕ್ಕ ಅಶ್ವಿನಿ ಹೇಳಿದ್ದಾರೆ. ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿ ಕೂಲಿ ಕೆಲಸ ಮಾಡಿಕೊಂಡು ಯಶಸ್ ಹಾಗೂ ಅಜ್ಜಿಯನ್ನು ನೋಡಿಕೊಳ್ಳುತ್ತಿದ್ದರು.