Tag: Chikmagalur

  • ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

    ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

    ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಭವವಾಗಿದ್ದ ಕೇಸರಿ ಶಲ್ಯ-ಸ್ಕಾರ್ಫ್ ವಿವಾದ ತಣ್ಣಗಾಗುತ್ತಿದ್ದಂತೆ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಅದೇ ಸಮಸ್ಯೆ ಎದುರಾಗಿದೆ.

    ಪದವಿ ಪೂರ್ವ ಕಾಲೇಜಿನಲ್ಲಿ ಕೇಸರಿ ಶಲ್ಯ ಹಾಗೂ ಸ್ಕಾರ್ಫ್ ವಿವಾದಕ್ಕೆ ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದೆ. ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯಲ್ಲಿ ಕೆಲ ವಿದ್ಯಾರ್ಥಿಗಳೂ ಆಸ್ಪತ್ರೆಗೆ ದಾಖಲಾಗಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಪಾಸಿಟಿವ್

    ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅನ್ಯ ಕೋಮಿನ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿಕೊಂಡು ಕಾಲೇಜಿಗೆ ಬರುವುದನ್ನ ವಿರೋಧಿಸಿದ್ದರು. ಈ ಪರಿಣಾಮ ಎಬಿವಿಪಿ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಬಂದು ಪ್ರತಿಭಟನೆ ನಡೆಸಿದ್ದರು. ಸ್ಕಾರ್ಫ್ ಧರಿಸುವುದರಿಂದ ಸಮವಸ್ತ್ರದ ಮೂಲ ಉದ್ದೇಶ ಉಲ್ಲಂಘನೆಯಾಗುತ್ತಿದೆ ಎಂದು ಪಿಯುಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

    ಈಗ ಅದೇ ಸ್ಕಾರ್ಫ್-ಕೇಸರಿ ಶಲ್ಯ ವಿಚಾರಕ್ಕೆ ಎರಡು ಗುಂಪುಗಳ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಕಾಲೇಜಿನ ಆವರಣದಲ್ಲಿಯೇ ಹೊಡೆದಾಡಿಕೊಂಡಿದ್ದು, ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಪದವಿ ಕಾಲೇಜಿನಲ್ಲಿ ಉದ್ಭವವಾಗಿದ್ದ ಸಮಸ್ಯೆ ತಣ್ಣಗಾಗುತ್ತಿದ್ದಂತೆ ಈಗ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ಹಂತ ಮುಂದಕ್ಕೆ ಹೋಗಿ ಹೊಡೆದಾಡುವ ಮಟ್ಟ ತಲುಪಿದೆ.

    ಈ ವಿವಾದದ ಆರಂಭದಲ್ಲಿಯೇ ಇತ್ಯರ್ಥಗೊಳಿಸುವಲ್ಲಿ ಕಾಲೇಜು ಆಡಳಿತ ಮಂಡಳಿ ಮುಂದಾಗಬೇಕಿತ್ತು. ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿ ಬೇಜವಾಬ್ದಾರಿಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ ಎಂದು ಸ್ಥಳಿಯರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ಸ್ಕಾರ್ಫ್, ಕೇಸರಿ ಶಲ್ಯ ವಿವಾದ – ಪೋಷಕರ ಸಭೆಯಲ್ಲಿ ಇತ್ಯರ್ಥ

    ಪದವಿ ಕಾಲೇಜಿನಲ್ಲಿ ಉದ್ಭವವಾಗಿದ್ದ ಇದೇ ಸಮಸ್ಯೆಗೆ ಕಾಲೇಜಿನ ಪ್ರಾಂಶುಪಾಲರು ಪೋಷಕರ ಸಭೆ ಕರೆದು ಸಮಸ್ಯೆಗೆ ತಿಲಾಂಜಲಿ ಇಟ್ಟಿದ್ದರು. ಈಗ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ ಜೋರಾಗಿದೆ.

  • ಸಿಂಗಲ್ ಡಿಜಿಟ್‍ನಲ್ಲಿದ್ದ ಸೋಂಕು 78ಕ್ಕೆ ಏರಿಕೆ – ಆತಂಕದಲ್ಲಿ ಕಾಫಿನಾಡಿಗರು

    ಸಿಂಗಲ್ ಡಿಜಿಟ್‍ನಲ್ಲಿದ್ದ ಸೋಂಕು 78ಕ್ಕೆ ಏರಿಕೆ – ಆತಂಕದಲ್ಲಿ ಕಾಫಿನಾಡಿಗರು

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿತ್ಯ ಸಿಂಗಲ್ ಡಿಜಿಟ್‍ನಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಒಂದೇ ದಿನ 78ಕ್ಕೆ ಏರಿರೋದ್ರಿಂದ ಜಿಲ್ಲೆಯ ಜನ ಆಂತಕಕ್ಕೀಡಾಗಿದ್ದಾರೆ.

    ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಮೂಡಿಗೆರೆಯಲ್ಲಿ 37 ಹಾಗೂ ಚಿಕ್ಕಮಗಳೂರಿನಲ್ಲಿ 17 ಕೇಸ್ ಪತ್ತೆಯಾಗಿವೆ. ಮೂಡಿಗೆರೆಯ ಹಾಸ್ಟೆಲ್ ನಲ್ಲಿ 37 ಮಕ್ಕಳಿಗೆ ಹಾಗೂ ಚಿಕ್ಕಮಗಳೂರಿನ 15 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಭಯದಲ್ಲಿ ಗ್ರಾಮದ ಜನರು!

    ಜಿಲ್ಲೆಯ ಗ್ರಾಮೀಣ ಭಾಗದಲ್ಲೇ ಸೋಂಕು ಹೆಚ್ಚಾಗುತ್ತಿರುವುದು ಗ್ರಾಮೀಣ ಭಾಗದ ಜನರನ್ನ ಮತ್ತಷ್ಟು ಕಂಗೆಡಿಸಿದೆ. ಮೂಡಿಗೆರೆ ತಾಲೂಕಿನ ಬಾಳೂರಿನ ಹಾಸ್ಟೆಲ್ ನಲ್ಲಿ ಮೂವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿತ್ತು. ಹಾಸ್ಟೆಲ್ ನಲ್ಲಿದ್ದ 405 ಮಕ್ಕಳಿಗೂ ಪರೀಕ್ಷೆ ನಡೆಸಿದಾಗ 37 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿರುವ ಹಾಸ್ಟೆಲ್ ನಲ್ಲಿ ಆರೋಗ್ಯ ಇಲಾಖೆ ನಡೆಸಿದ ರ‍್ಯಾಡಮ್ ಟೆಸ್ಟ್ ನಲ್ಲಿ 17 ಮಕ್ಕಳಿಗೆ ಪಾಸಿಟಿವ್ ಪತ್ತೆಯಾಗಿದೆ.

    ಚಿಕ್ಕಮಗಳೂರು ಹಾಗೂ ಮೂಡಿಗೆರೆ ಶಾಲೆ ಹಾಗೂ ಕಾಲೇಜಿನ ಎಲ್ಲ ಮಕ್ಕಳಿಗೂ ಹೋಂ ಐಸೋಲೇಶನ್ ಮೂಲಕ ಚಿಕಿತ್ಸೆ ಮುಂದುವರೆಸುತ್ತಿದ್ದು, ಯಾರಿಗೂ ರೋಗದ ಲಕ್ಷಣಗಳು ಇಲ್ಲವೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ‘ಪುಷ್ಪ-2’ಗೆ ಶೇ.50 ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ!

    ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರೋದು ಜಿಲ್ಲೆಯ ಜನರನ್ನ ಆತಂಕಕ್ಕೀಡು ಮಾಡಿದೆ. ಈ ಮಧ್ಯೆ ಜಿಲ್ಲೆಗೆ ಪ್ರತಿ ದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿರುವುದರಿಂದಲೇ ಜಿಲ್ಲೆಯಲ್ಲಿ ಕ್ರಮೇಣ ಸೋಂಕು ಹೆಚ್ಚಾಗುತ್ತಿದೆ. ಡಿಸೆಂಬರ್ 30, 31 ಹಾಗೂ ಜನವರಿ 1 ಹಾಗೂ 2 ರಂದು ಜಿಲ್ಲೆಗೆ ಅಂದಾಜು 50 ಸಾವಿರಕ್ಕೂ ಪ್ರವಾಸಿಗರು ಭೇಟಿ ನೀಡಿದ್ದಾರೆ. ಹಾಗಾಗಿ, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರ ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ಜಿಲ್ಲೆಯ ಜನ ಆಗ್ರಹಿಸಿದ್ದಾರೆ.

  • ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ

    ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ

    ಚಿಕ್ಕಮಗಳೂರು: ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ. ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ.

    ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮೇಕೆದಾಟು ಪಾದಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಸುಲಭವಾಗಿ ಆಗುವ ಕೆಲಸಕ್ಕೆ ತುಂಬಾ ಕಷ್ಟಪಡುತ್ತಿದ್ದಾರೆ. ಮೇಕೆದಾಟು ಯೋಜನೆಗೆ ಅಡ್ಡಿಯಾಗಿರುವುದು ತಮಿಳುನಾಡು ಸರ್ಕಾರ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡಿಎಂಕೆ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮನವೊಲಿಸಿದರೆ ಕೆಲಸ ಸುಲಭವಾಗುತ್ತೆ. ಅದನ್ನ ಬಿಟ್ಟು ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡುತ್ತಿದ್ದಾರೆ ವ್ಯಂಗ್ಯವಾಡಿದರು. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಅಮಾನವೀಯ, ಇದೊಂದು ಅವೈಜ್ಞಾನಿಕ ಕ್ರಮ: ಎ.ಎಸ್.ಪೊನ್ನಣ್ಣ

    ಇದೇ ವೇಳೆ, ಪಂಚರಾಜ್ಯ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಪಂಜಾಬಿನಲ್ಲಿ ಬಿಜೆಪಿ ಸುಧಾರಿಸುತ್ತದೆ. ಆದರೆ, ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತದೆ. ನನ್ನನ್ನ ಜ್ಯೋತಿಷಿ ಎಂದು ಬೇಕಾದರೂ ಕರೆಯಿರಿ. ರಾಜಕೀಯ ವಿಚಾರದಲ್ಲಿ ಆಳವಾದ ಜ್ಞಾನವಿರುವವನು ಅಂತನಾದ್ರು ಕರೆಯಿರಿ. ಇಲ್ಲಾ ಸಾಮಾನ್ಯ ಮತದಾರ ಎಂದಾದ್ರೂ ಕರೆಯಿರಿ. ಪಂಜಾಜ್ ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

    ಮೇಕೆದಾಟು ಯೋಜನೆಗೆ ರಾಜ್ಯ ಬಿಜೆಪಿ ಸರ್ಕಾರ ಅಡ್ಡಿಪಡಿಸುತ್ತಿಲ್ಲ. ಈಗಾಗಲೇ ಕೇಂದ್ರವೂ ತಾತ್ವಿಕ ಒಪ್ಪಿಗೆ ನೀಡಿದೆ. ಮೇಕೆದಾಟು ಯೋಜನೆಗೆ ಅಡ್ಡಿಯಾಗಿರುವುದು ತಮಿಳುನಾಡು ಸರ್ಕಾರ. ಡಿಎಂಕೆ ನೇತೃತ್ವದ ಸರ್ಕಾರದಲ್ಲಿ ಕಾಂಗ್ರೆಸ್ ಪಾಲು ಕೂಡ ಇದೆ. ಕಾಂಗ್ರೆಸ್ ನಾಯಕರು ತಮಿಳುನಾಡು ಸರ್ಕಾರದ ಮನವೊಲಿಸಿದರೆ ಸಾಕು ಎಂದರು.

    ಒಂದು ಕಾಲದಲ್ಲಿ ಸಿದ್ದರಾಮಯ್ಯ ಅವರ ಹೆಸರು ಪ್ರಧಾನಿ ಹುದ್ದೆಗೆ ಕೇಳಿಬಂದಿತ್ತು. ಡಿ.ಕೆ.ಶಿವಕುಮಾರ್ ಅವರು ಕೇಂದ್ರದ ನಾಯಕರುಗಳಿಗೆ ಸಹಾಯ ಮಾಡಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಮಾತನ್ನ ತಮಿಳುನಾಡಿನವರು ಕೇಳುತ್ತಾರೆ. ತಮಿಳುನಾಡು ಸರ್ಕಾರದ ಮನವೊಲಿಸಿದರೆ ಪಾದಯಾತ್ರೆ ನಡೆಸುವ ಪ್ರಮೇಯವೇ ಇರಲ್ಲ ಎಂದು ಪಾದಯಾತ್ರೆಗೆ ವಿರೋಧ ವ್ಯಕ್ತಪಡಿಸಿದರು.

    ಸುಲಭದ ಕೆಲಸ ಬಿಟ್ಟು ನಿಯಮ ಉಲ್ಲಂಘಿಸೋದು, ಕೊರೊನಾ ಬರಿಸಿಕೊಳ್ಳುವುದು ಎಲ್ಲವೂ ಬೇಕಾ ಎಂದು ಪ್ರಶ್ನಿಸಿದರು. ಹೂ ಎತ್ತಿದ್ದಷ್ಟು ಸುಲಭದಲ್ಲಿ ಆಗುವ ಕೆಲಸಕ್ಕೆ ಕೊಡಲಿ ಏಕೆ ತೆಗೆದುಕೊಳ್ಳುತ್ತಿದ್ದಾರೆ. ಮೈ-ಕೈ ನೋವು ಏಕೆ ಮಾಡಿಕೊಳ್ಳುತ್ತಿದ್ದಾರೆ ಗೊತ್ತಿಲ್ಲ ಎಂದರು.

    ತಮಿಳುನಾಡು ಸರ್ಕಾರ ನ್ಯಾಯಾಲಯದ ಮೊರೆ ಹೋಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಳಿ ಮಾತನಾಡಿ ನಮ್ಮ ವಿರೋಧವಿಲ್ಲ ಎಂದು ನ್ಯಾಯಾಲಯಕ್ಕೆ ಒಂದು ಅಫಿಡವಿಟ್ ಸಲ್ಲಿಸಿದರೆ ಸಾಕು. ಇಬ್ಬರೂ ಬುದ್ಧಿವಂತರಿದ್ದಾರೆ. ಇಬ್ಬರಿಗೂ ತಿಳುವಳಿಕೆ ಇದೆ. ಅವರೂ ಕಷ್ಟಕ್ಕೆ ಸಿಗುವುದಲ್ಲದೆ, ಕಾರ್ಯಕರ್ತರನ್ನೂ ಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೋದಿ, ಯೋಗಿ ಫೋಟೋಗಳೊಂದಿಗೆ ಉಚಿತ ಆಹಾರ ಪ್ಯಾಕೆಟ್‍ಗಳನ್ನು ವಿತರಿಸುವಂತಿಲ್ಲ

    ಪಾದಯಾತ್ರೆಯಿಂದ ತಮಿಳುನಾಡು ಒಪ್ಪಿಕೊಳ್ಳುತ್ತೆ ಅನ್ನೋದಾದರೆ ಅವರು ಚೆನ್ನೈವರೆಗೂ ಪಾದಯಾತ್ರೆ ಮಾಡಲಿ ಎಂದು ಸಲಹೆ ನೀಡಿದರು.

  • ಕಾಫಿನಾಡಲ್ಲಿ ನಿಮಿಷಕ್ಕೆ 1000 ಲೀಟರ್ ಆಕ್ಸಿಜನ್ ಉತ್ಪಾದಿಸುವ PSA ಘಟಕ ನಿರ್ಮಾಣ

    ಕಾಫಿನಾಡಲ್ಲಿ ನಿಮಿಷಕ್ಕೆ 1000 ಲೀಟರ್ ಆಕ್ಸಿಜನ್ ಉತ್ಪಾದಿಸುವ PSA ಘಟಕ ನಿರ್ಮಾಣ

    ಚಿಕ್ಕಮಗಳೂರು: ಕೊರೊನಾ ಒಂದು ಮತ್ತು ಎರಡನೇ ಅಲೆಯಲ್ಲಿ ಆದ ಸಮಸ್ಯೆ ಮೂರನೇ ಅಲೆಯಲ್ಲಿ ಆಗುವುದು ಬೇಡ ಎಂದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿಮಿಷಕ್ಕೆ 1000 ಲೀಟರ್ ಆಕ್ಸಿಜನ್ ಉತ್ಪಾದಿಸುವ ಪಿಎಸ್‍ಎ ಘಟಕವನ್ನ ನಿರ್ಮಿಸಲಾಗಿದೆ.

    ಜಿಲ್ಲೆಯಲ್ಲಿ ಒಂದು ಮತ್ತು ಎರಡನೇ ಅಲೆಯಲ್ಲಿ ಸಾಕಷ್ಟು ಆಕ್ಸಿಜನ್ ಸಮಸ್ಯೆ ಎದುರಾಗಿತ್ತು. ಬಳ್ಳಾರಿಯ ಜಿಂದಾಲ್ ಸೇರಿದಂತೆ ಬೇರೆ-ಬೇರೆ ಕಡೆಯಿಂದ ಆಕ್ಸಿಜನ್ ತರಿಸಿಕೊಳ್ಳಬೇಕಿತ್ತು. ಅದು ಅಲ್ಲದೇ ಈ ವೇಳೆ ಕೊರೊನಾ ಉತ್ತುಂಗದ ಸ್ಥಿತಿಯಲ್ಲಿದ್ದಾಗಲೇ ಹಲವು ಬಾರಿ ಆಕ್ಸಿಜನ್ ಸಮಸ್ಯೆಯೂ ಎದುರಾಗಿತ್ತು. ತುರ್ತು ಸಂದರ್ಭದಲ್ಲಿ ಭದ್ರಾವತಿಯಿಂದಲೂ ಸಿಲಿಂಡರ್ ಮೂಲಕ ಆಕ್ಸಿಜನ್ ತರಿಸಿಕೊಂಡಿದ್ದ ಜಿಲ್ಲಾಡಳಿತ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿತ್ತು. ಇದನ್ನೂ ಓದಿ: ಕಳ್ಳರ ಗ್ಯಾಂಗ್ ಅರೆಸ್ಟ್ – 21 ಲಕ್ಷ ಮೌಲ್ಯದ ಶ್ರೀಗಂಧ ವಶ

    ಈ ಬಾರಿ ಜಿಲ್ಲಾಡಳಿತ ಕೊರೊನಾ ಮೂರನೇ ಅಲೆ ಎದುರಿಸಲು ಸನ್ನದ್ಧವಾಗಿದ್ದು, ಎಲ್ಲ ಸೌಲಭ್ಯಗಳನ್ನ ಸಿದ್ಧತೆ ಮಾಡಿಕೊಂಡಿದೆ. 28 ಹೆಚ್ಚುವರಿ ಆಕ್ಸಿಜನ್ ಬೆಡ್, 250 ಆಕ್ಸಿಜನ್ ಬೆಡ್ ಗಳಿಗೆ ಪೈಪ್ ಲೈನ್ ವ್ಯವಸ್ಥೆ, 30 ಐಸಿಯು ಬೆಡ್, 10 ಮಕ್ಕಳ ಐಸಿಯು ಬೆಡ್ ಸೇರಿದಂತೆ ಕಡೂರು, ತರೀಕೆರೆ, ಮೂಡಿಗೆರೆಯಲ್ಲೂ ನಿಮಿಷಕ್ಕೆ 390 ಲೀಟರ್ ಆಕ್ಸಿಜನ್ ಉತ್ಪಾದನಾ ಘಟಕ, ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪುರದಲ್ಲಿ ನಿಮಿಷಕ್ಕೆ 500 ಲೀಟರ್ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ.

    ಕೊರೊನಾ ಮೂರನೇ ಅಲೆ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಹೊಸ ಬೆಡ್ ಗಳಿಗೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಹೆಚ್ಚಿನ ಬೆಡ್ ಗಳ ಕೊಠಡಿಯನ್ನೇ ನಿರ್ಮಾಣ ಮಾಡುತ್ತಿದೆ. ಜಿಲ್ಲಾಸ್ಪತ್ರೆಯ ಆವರಣದಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕೊರೊನಾ ಪರೀಕ್ಷೆಗೆ ಸರದಿ ಸಾಲಲ್ಲಿ ನಿಂತಿದ್ದಾರೆ. ಕರ್ನಾಟಕ ಹಾಗೂ ಕೇರಳ ಗಡಿಯಲ್ಲಿ ಕೊರೊನಾ ಟೆಸ್ಟ್ ವರದಿ ಕೇಳುತ್ತಿರುವ ಹಿನ್ನೆಲೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಹೋಗುವ ಮಾಲಾಧಾರಿಗಳು ಕೊರೊನಾ ಪರೀಕ್ಷೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: 11 ಬಾರಿ ಕೋವಿಡ್ -19 ಲಸಿಕೆ ಪಡೆದ 84 ವರ್ಷದ ವೃದ್ಧ

    ಜಿಲ್ಲಾಸ್ಪತ್ರೆ ಆವರಣದ ಕೋವಿಡ್ ಪರೀಕ್ಷಾ ಕೇಂದ್ರದ ಮುಂದೆ ನೂರಾರು ಮಾಲಾಧಾರಿಗಳು ಸರಿದಿ ಸಾಲಲ್ಲಿ ನಿಲ್ಲುತ್ತಿದ್ದಾರೆ. ಶನಿವಾರ ಶಬರಿಮಲೆಗೆ ಹೊರಟಿದ್ದ ಮಾಲಾಧಾರಿಗಳು ವೀಕೆಂಡ್ ಕರ್ಫ್ಯೂ ಹಿನ್ನೆಲೆ ಇಂದೇ ಪರೀಕ್ಷೆ ಮಾಡಿಸಿಕೊಂಡು ಶುಕ್ರವಾರವೇ ಶಬರಿಮಲೆಗೆ ಹೊರಡಲು ಸಿದ್ಧತೆ ನಡೆಸಿದ್ದಾರೆ.

  • ಹೆಂಡ್ತಿ ಇಲ್ಲ ಅಂತ ಎರಡನೇ ಮದುವೆ- ಈಕೆಗೆ ಇವನು ನಾಲ್ಕನೆಯವನು!

    ಹೆಂಡ್ತಿ ಇಲ್ಲ ಅಂತ ಎರಡನೇ ಮದುವೆ- ಈಕೆಗೆ ಇವನು ನಾಲ್ಕನೆಯವನು!

    – ಪ್ರಶ್ನೆ ಮಾಡಿದ್ದಕ್ಕೆ ಹಣ, ಚಿನ್ನದೊಂದಿಗೆ ಎಸ್ಕೇಪ್

    ಚಿಕ್ಕಮಗಳೂರು: ಹೆಂಡತಿ ಇಲ್ಲ ಎಂದು ಎರಡನೇ ಮದುವೆಯಾದ ವರನಿಗೆ ನಾಲ್ಕು ಮದುವೆಯಾದ ವಧು ಸಿಕ್ಕಿರುವ ಘಟನೆ ನೆಟ್ಟಕೇರನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ವಧು ಎಂದು ತಿಳಿದು ನಾಲ್ಕನೇ ಬಾರಿ ಹಸೆಮಣೆ ಏರಿದೆ ಮಹಿಳೆಯನ್ನು ಷಡಕ್ಷರಿ ವರಿಸಿದ್ದಾನೆ. ಈತ ಮೂಲತಃ ತಾಲೂಕಿನ ಬೀಕನಹಳ್ಳಿಯವನು. ಇವನಿಗೆ ಒಂದು ಮದುವೆಯಾಗಿದ್ದು, ಆಕೆ ಇವನೊಂದಿಗಿಲ್ಲ. ಹಾಗಾಗಿ ಅಣ್ಣನ ಒತ್ತಾಯದ ಮೇರೆಗೆ ಅವನೇ ನೋಡಿದ ವಧುವನ್ನು ಮದುವೆಯಾಗಲು ಒಪ್ಪಿಕೊಂಡಿದ್ದಾನೆ. ಆದರೆ ಇಲ್ಲಿರುವ ಟ್ವಿಸ್ಟ್ ಎಂದರೆ ಆಕೆಗೆ ಅಗಲೇ 3 ಬಾರಿ ಮದುವೆಯಾಗಿದ್ದು, ಈತ ನಾಲ್ಕನೆಯಾವನಾಗಿದ್ದಾನೆ. ಇದನ್ನೂ ಓದಿ: ಕಳ್ಳತನ ಮಾಡಲು ಬಂದರೆಂದು ನಾಲ್ವರು ಮಹಿಳೆಯರ ಬೆತ್ತಲೆ ಮೆರವಣಿಗೆ – ಐವರು ಅರೆಸ್ಟ್

    ಹೆಂಡತಿ ಬಿಟ್ಟು ಹೋದಾಗಲೇ ಸಾಯಬೇಕು ಅಂದುಕೊಂಡಿದ್ದ ಷಡಕ್ಷರಿಗೆ ಅಣ್ಣ ಹಾಸನ ಜಿಲ್ಲೆ ಬೇಲೂರು ತಾಲೂಕಿನ ರಾಮಚಂದ್ರಾಪುರದ ಉಷಾ ಎಂಬವಳೊಂದಿಗೆ ಮದುವೆ ಮಾಡಿಸಿದ್ದನು. ಷಡಕ್ಷರಿ ಲಿಂಗಾಯಿತಿ ಜಾತಿಗೆ ಸೇರಿದವನು. ಆದರೆ ಉಷಾ ಮೂಲತಃ ಒಕ್ಕಲಿಗಳಾದಳೂ ಜಾತಿ-ಕುಲ-ಗೋತ್ರವನ್ನ ಮುಚ್ಚಿಟ್ಟು ಮದುವೆಯಾಗಿದ್ದಾಳೆ. ನಾನು ನಾಲ್ಕನೇ ಬಾರಿ ಹಸೆಮಣೆ ಏರುತ್ತಿದ್ದೇನೆ ಎಂದೂ ಸಹ ಹೇಳಿಲ್ಲ.

    ಒಂದನೇಯವ ಹಗರೆ ರುದ್ರೇಶ್, ಎರಡನೇಯವ ದುದ್ದ ರವಿ, ಮೂರನೇಯವ ಹಾಸನದ ಜಯರಾಮ್, ನಾಲ್ಕನೆಯವನು ಕಾಫಿನಾಡಿನ ಷಡಕ್ಷರಿ. ಅಂದು ಅಣ್ಣ ಹೇಳಿದ ಅಂತ ಕಣ್ಮುಚ್ಚಿಕಂಡು ತಾಳಿ ಕಟ್ಟಿದ ಷಡಕ್ಷರಿ ಇಂದು ಕಣ್ಣು-ಬಾಯಿ ಬಿಡುವಂತಾಗಿದೆ. ಕಳೆದೊಂದು ವಾರದ ಉಷಾಳ ಹಳೇ ಹೆಜ್ಜೆ ಗುರುತುಗಳು ತಿಳಿದ ಬಳಿಕ ಪ್ರಶ್ನೆ ಮಾಡಿದ್ದಕ್ಕೆ ಮನೆ ಬಿಟ್ಟು ಹೋಗಿದ್ದಾಳೆ. ಆದರೆ ಆಕೆ ಹೋಗುವಾಗ ಸುಮ್ಮನೇ ಹೋಗಿಲ್ಲ, ಮನೆಯಲ್ಲಿದ್ದ ಎರಡೂವರೆ ಲಕ್ಷ ಹಣ, ತಾಳಿ ಸೇರಿದಂತೆ ಒಡವೆ ಸಮೇತ ಎಸ್ಕೇಪ್ ಆಗಿದ್ದಾಳೆ. ಫೋನ್ ಮಾಡಿದರೆ ನಾಟ್ ರೀಚಬಲ್. ಇದೀಗ ಷಡಕ್ಷರಿ ಮತ್ತೆ ನನ್ನ ಹೆಂಡತಿ ಬೇಕು ಎಂದು ಹುಡುಕಾಡ್ತಿದ್ದಾನೆ.

    ಮದುವೆಗೆ ಆಹ್ವಾನ ಪತ್ರಿಕೆ ಮಾಡಿಸಿದ್ದ, ಹೆಂಡತಿ ಹೆಸರಲ್ಲಿ ಎಲ್.ಐ.ಸಿ ಮಾಡಿಸಿದ್ದು, ಇಂದು ಅವುಗಳ ಜೊತೆ ಅವಳ ಹಳೇ ಗಂಡದಿರ ದಾಖಲೆಯನ್ನ ಕಲೆ ಹಾಕಿದ್ದಾನೆ. ಇದು ಎರಡನೇ ಗಂಡನದ್ದು, ಇದು ಮೂರನೇ ಗಂಡನದ್ದು ಎಂದು ದಾಖಲೆಗಳನ್ನ ತೋರಿಸಿ ಅವಲತ್ತು ತೋಡಿಕೊಂಡಿದ್ದಾನೆ. ಇದನ್ನೂ ಓದಿ: ಟ್ರೈನ್ ಟಿಕೆಟ್ ರದ್ದು ಮಾಡಿದ್ದಕ್ಕೆ ದಂಡ ವಿಧಿಸಿದವನನ್ನೇ ಕೊಂದ ಸಹೋದರರು!

    ಪತ್ನಿ ಉಷಾಗಾಗಿ ಷಡಕ್ಷರಿ ಎಲ್ಲ ಕಡೆ ಹುಡುಕಾಡುತ್ತಿದ್ದು, ಆಕೆಯ ತವರು ಮನೆ, ಅಕ್ಕನ ಮನೆ, ಎಲ್ಲ ಕಡೆ ಹುಡುಕಿದ್ದಾನೆ. ಎಲ್ಲೂ ಆಕೆಯ ಸುಳಿವಿಲ್ಲ. ತನ್ನ ಸ್ವಂತ ಊರು ಬೀಕನಹಳ್ಳಿಯಲ್ಲಿ ಈಕೆಯ ವಿಚಾರ ಗೊತ್ತಾದ ಕೂಡಲೇ ಊರಲ್ಲಿ ಇದ್ರೆ ಸರಿಯಾಗಲ್ಲ ಅಂತ ಊರನ್ನು ಬಿಟ್ಟು ಬಂದು ನೆಟ್ಟೇಕೆರೆಹಳ್ಳಿಯಲ್ಲಿ ಜೀವನ ಕಟ್ಕೊಂಡಿದ್ದಾನೆ. ಇದೀಗ ಇಲ್ಲೂ ಕೂಡ ನನ್ನ ಒಂಟಿ ಮಾಡಿ ಆಕೆ ಎಸ್ಕೇಪ್ ಆಗಿದ್ದಾಳೆ ಎಂದು ನೊಂದ ನಾಲ್ಕನೇ ಪತಿ ಷಡಕ್ಷರಿ ನೊಂದುಕೊಂಡಿದ್ದಾನೆ.

    ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಿ ಅಂತಾರೆ. ಆದರೆ ಈಕೆ ನನಗೆ ಮದುವೆಯೇ ಆಗಿಲ್ಲ. ನಾನಿನ್ನು ಕನ್ಯೆ ಎಂಬ ಒಂದೇ ಒಂದು ಸುಳ್ಳು ಹೇಳಿ ನಾಲ್ಕು ಮದುವೆಯಾಗಿದ್ದಾಳೆ.

  • ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ

    ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ

    – ನ್ಯಾಯ ಕೇಳಲು ಹೋದವನ ವಿರುದ್ಧವೇ FIR

    ಚಿಕ್ಕಮಗಳೂರು: ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷನನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

    ಸಿ.ಎನ್.ಅಕ್ಮಲ್ ಜಾಮಿಯಾ, ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು. ಅಕ್ಮಲ್ ಅವರು ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಕೂಡ. ಇತ್ತೀಚೆಗೆ ನಗರದ ರಾಮನಹಳ್ಳಿಯಲ್ಲಿ ನೂತನವಾಗಿ ಆರಂಭಗೊಂಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರ ಮನವಿ ಮೇರೆಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಅಕ್ಮಲ್ ಅವರು ದೇವಸ್ಥಾನಕ್ಕೂ ಹೋಗಿದ್ದರು. ಅಲ್ಲಿ ಪೂಜೆ ಬಳಿಕ ಮಂಗಳಾರತಿ ಪಡೆದಿದ್ದರು. ಈ ಕಾರಣಕ್ಕೆ ಅವರನ್ನು ಜಾಮೀಯ ಮಸೀದಿ ಅಧ್ಯಕ್ಷ ಸ್ಥಾನದಿಂದ ತೆಗೆಯಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ – ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಸೋಂಕು

    ಈ ಕುರಿತು ಮಾತನಾಡಿದ ಅಕ್ಮಲ್, ನನ್ನ ವಿರುದ್ಧ ಅವರು ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಮೊದಲು ನನ್ನನ್ನು ಸಭೆಗೆ ಕರೆಯಬೇಕು. ಚರ್ಚೆ ನಡೆಸಬೇಕು, ನೋಟಿಸ್ ನೀಡಬೇಕು. ಯಾವುದೂ ಇಲ್ಲದೆ ಆಂಜನೇಯನ ಆಶೀರ್ವಾದ ಪಡೆದಿದ್ದಕ್ಕೆ ಪದಚ್ಯುತಿ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

    ಸಂಘದಲ್ಲಿ ಒಳಗೊಳಗೆ ಮಾತನಾಡಿಕೊಂಡು ನನ್ನ ಗಮನಕ್ಕೂ ತಾರದೇ ಏಕಾಏಕಿ ಪದಚ್ಯುತಿಗೊಳಿಸಿದ್ದಾರೆ ಎಂದು ಆರೋಪಿಸಿದರು.

    ಬೈಲಾದಲ್ಲೇ ಸರ್ವಧರ್ಮ ಒಂದೇ ಎಂದು ಇದೆ. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದು, ಏನು ತಪ್ಪು ಎಂದು ಅಕ್ಮಲ್ ಮತ್ತು ಬೆಂಬಲಿಗರು ಜಾಮೀಯ ಮಸೀದಿಗೆ ನ್ಯಾಯ ಕೇಳಲು ಹೋಗಿದ್ದಾರೆ. ಆಗ ಮಸೀದಿಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ಅಕ್ಮಲ್ ಹಾಗೂ ಆತನ ಬೆಂಬಲಿಗರು ಮಸೀದಿಯ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಅಕ್ಮಲ್ ಸೇರಿ ನಾಲ್ವರ ವಿರುದ್ಧ ಧರ್ಮಗುರು ದೂರು ನೀಡಿದ್ದಾರೆ. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ನಮ್ಮ ಪಕ್ಷ 300 ಸೀಟ್ ಗಳನ್ನು ಗೆಲ್ಲುವುದಿಲ್ಲ: ಗುಲಾಮ್ ನಬಿ ಆಜಾದ್

    ಧರ್ಮಗುರುಗಳ ದೂರಿನ ಅನ್ವಯ ನಗರದ ಬಸವನಹಳ್ಳಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ನ್ಯಾಯ ಕೇಳಲು ಹೋದ ಅಕ್ಮಲ್ ವಿರುದ್ಧವೇ 307 ಕಲಂನಡಿ ಕೇಸ್ ದಾಖಲಾಗಿದೆ.

    ಅಕ್ಮಲ್ ಅವರು ಸಮಾಜ ಸೇವಕ. ಕಷ್ಟ ಎಂದು ಮನೆಬಾಗಿಲಿಗೆ ಯಾರೇ ಹೋದ್ರು ಕರಗುವ ಮನುಷ್ಯ. ಕೈಲಾದ ಸಹಾಯವನ್ನು ಮಾಡ್ತಾರೆ. ಅವರು ಧರ್ಮಗುರುಗಳ ಮೇಲೆ ಹಲ್ಲೆ ಮಾಡಿದ್ರಾ, ಇಲ್ವಾ ಗೊತ್ತಿಲ್ಲ. ಎಲ್ಲರದ್ದೂ ಆರೋಪ-ಪ್ರತ್ಯಾರೋಪವಷ್ಟೆ. ಆದರೆ ಆಂಜನೇಯ ದೇವಸ್ಥಾನಕ್ಕೆ ಹೋದರು ಎಂಬ ಕಾರಣಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರೋದು ಎಷ್ಟು ಸರಿ ಅನ್ನೋ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

  • 30% ಆಫರ್, ಮೇಲೆ 100 ರೂ.ನೋಟ್, ಒಳಗೆ ವೈಟ್ ಪೇಪರ್ – ಐವರು ವಂಚಕರ ಬಂಧನ

    30% ಆಫರ್, ಮೇಲೆ 100 ರೂ.ನೋಟ್, ಒಳಗೆ ವೈಟ್ ಪೇಪರ್ – ಐವರು ವಂಚಕರ ಬಂಧನ

    ಚಿಕ್ಕಮಗಳೂರು: ದೇವಸ್ಥಾನದ ಹುಂಡಿಯ 100 ಮುಖ ಬೆಲೆಯ ಲಕ್ಷಗಟ್ಟಲೆ ನೋಟುಗಳ ಬದಲಾಗಿ 500 ಹಾಗೂ 2000 ಮುಖ ಬೆಲೆಯ ನೋಟುಗಳನ್ನು ಕೊಟ್ಟು ಒಂದು ಲಕ್ಷಕ್ಕೆ 30% ಹೆಚ್ಚು ಕೊಡುವುದಾಗಿ ನಂಬಿಸಿ ವಂಚಿಸಿದ ಗ್ಯಾಂಗ್ ನನ್ನು ಜಿಲ್ಲೆಯ ಕಡೂರು ಪೆÇಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಂಗಳೂರು ಮೂಲದ ಕೃಪಾ 30% ಆಸೆಗೆ ಬಿದ್ದು ಮೋಸ ಹೋದವರು. 100 ರೂ. ಮುಖಬೆಲೆ ದೇವಸ್ಥಾನದ ಹುಂಡಿಯಲ್ಲಿ ಲಕ್ಷಗಟ್ಟಲೆ ಇದೆ. 500-2000 ಮುಖಬೆಲೆಯ ನೋಟು ಕೊಟ್ಟರೆ ಒಂದು ಲಕ್ಷಕ್ಕೆ 1,30,000 ರೂ. ಹಣ ಕೊಡುತ್ತಾರೆ ಎಂದು ಕೃಪಾ ಎಂಬವರಿಗೆ ಸ್ನೇಹಿತ ನಾರಾಯಣ ರೈ ಎಂಬುವರು ಹೇಳಿದ್ದರು. ಅದಕ್ಕೆ ಕೃಪಾ ಅಡ್ರೆಸ್ ಹಾಗೂ ಫೋನ್ ನಂಬರ್ ಪಡೆದು ಒಮ್ಮೆ ಜಿಲ್ಲೆಯ ಕಡೂರಿಗೆ ಬಂದು ಮಾತನಾಡಿಕೊಂಡು ಹೋಗಿದ್ದರು.

    ಬಳಿಕ 500-2000 ಮುಖಬೆಲೆಯ 10 ಲಕ್ಷ ಹಣದೊಂದಿಗೆ ಕಡೂರು ಪಟ್ಟಣದ ಚಂದ್ರಮೌಳೇಶ್ವರ ಸ್ವಾಮಿ ದೇವಸ್ಥಾನದ ಬಳಿ ಬಂದಿದ್ದರು. ಆಗ ಅಲ್ಲಿಗೆ ಬಂದ ಖಾವಿ ತೊಟ್ಟಿದ್ದ ಕಪಟ ಸನ್ಯಾಸಿ ಮಹೇಶ್ ಎಂಬುವರು 10 ಲಕ್ಷ ಹಣ ಪಡೆದುಕೊಂಡು, 13 ಲಕ್ಷ ಇದೆ ಎಂದು ಹೇಳಿ ಕೃಪಾ ಅವರಿಗೆ ಹಣದ ಬ್ಯಾಗ್ ನೀಡಿದ್ದರು. ಕಡೂರು ಪಟ್ಟಣವಾದ್ದರಿಂದ ಇಲ್ಲಿ ಎಣಿಸಬೇಡಿ. ಪಬ್ಲಿಕ್ ಪ್ಲೇಸ್, ಜನ ಓಡಾಡುತ್ತಿರುತ್ತಾರೆ. ಕಾರಿನಲ್ಲಿ ಹೋಗುತ್ತ ಎಣಿಸಿಕೊಳ್ಳಿ ಎಂದು ಹೇಳಿ ಅಲ್ಲಿಂದ ಹೊರಟು ಹೋಗಿದ್ದಾರೆ. ಇದನ್ನೂ ಓದಿ:  ಇನ್ನು ಮುಂದೆ ಪತಿ ಪತ್ನಿಯ ಹುಟ್ಟುಹಬ್ಬ ಮರೆತರೆ ಜೈಲೇ ಗತಿ!

    ಕೃಪಾ ಕಾರಿನಲ್ಲಿ ಕೂತು ಹಣದ ಬ್ಯಾಗ್ ಓಪನ್ ಮಾಡಿದ್ದಾರೆ. ಅದರಲ್ಲಿ ಪ್ರತಿಯೊಂದು ಕಂತೆಯ ಮೇಲೆ ಮಾತ್ರ 100 ರೂಪಾಯಿ ನೋಟು ಇದ್ದು, ಉಳಿದದ್ದೆಲ್ಲಾ ವೈಟ್ ಪೇಪರ್ ಇತ್ತು. ಕೃಪಾ ಅವರು ಫೋನ್ ಮಾಡಿದರೆ ಸ್ವಾಮೀಜಿ ನಂಬರ್ ಸ್ವಿಚ್ ಆಫ್. ಇಡೀ ಕಡೂರು ಪಟ್ಟಣ ಹುಡುಕಿದರು ಸ್ವಾಮೀಜಿಯ ಸುಳಿವು ಸಿಗಲಿಲ್ಲ. ಮನನೊಂದು ಊರಿಗೆ ವಾಪಸ್ಸ್ ಹೋಗಿದ್ದರು. ಬಳಿಕ ಕಡೂರಿಗೆ ಬಂದು ಕಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಪ್ರಕರಣ ದಾಖಲಿಸಿಕೊಂಡು ಕಡೂರು ಪೊಲೀಸರು 48 ಗಂಟೆಯೊಳಗೆ ಕಳ್ಳ ಖಾವಿ ಸ್ವಾಮೀಜಿ ಮಹೇಶ್ ಸೇರಿದಂತೆ ಆರು ಜನರಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 5.10 ಲಕ್ಷ ನಗದು, ಒಂದು ಓಮಿನಿ ಕಾರು, 1 ಸ್ಕೂಟಿ ಹಾಗೂ 4 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ:  ಜನವರಿಯಿಂದ ಮಕ್ಕಳಿಗೂ ಸಿಗಲಿದೆ ಲಸಿಕೆ?

    ಈ ನಕಲಿ ಸ್ವಾಮೀಜಿಯ ಗುಂಪನ್ನು ಪತ್ತೆ ಹಚ್ಚುವಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್, ಪಿಎಸೈ ಎನ್.ಕೆ.ರಮ್ಯ, ಪ್ರೊಬೇಷನ್ ಪಿಎಸೈ ಆದರ್ಶ್, ನವೀನ್, ಎ.ಎಸ್.ಐ. ವೇದಮೂರ್ತಿ ಸೇರಿದಂತೆ ಪೇದೆಗಳಾದ ಕೃಷ್ಣಮೂರ್ತಿ, ಉಮೇಶ್, ರಾಜಪ್ಪ, ಮಧುಕುಮಾರ್, ಓಂಕಾರ, ಶಿವರಾಜ್ ಅವರನ್ನು ಎಸ್‍ ಪಿ ಅಕ್ಷಯ್ ಶ್ಲಾಘಿಸಿದ್ದಾರೆ. ಇನ್ನೂ ಹಣ ಕಳೆದುಕೊಂಡಿದ್ದ ಕೃಪಾ ಹಣ ಸಿಗುವ ನಿರೀಕ್ಷೆಯಲ್ಲಿದ್ದಾರೆ.

  • ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಕುರಿಗಳು – ಕುರಿಗಾಹಿಗಳ ಕಣ್ಣೀರು

    ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಕುರಿಗಳು – ಕುರಿಗಾಹಿಗಳ ಕಣ್ಣೀರು

    ಚಿತ್ರದುರ್ಗ: ಭಾರೀ ಮಳೆಯಿಂದಾಗಿ ರಭಸವಾಗಿ ಹರಿಯುತ್ತಿರುವ ಹಳ್ಳವೊಂದರಲ್ಲಿ 14 ಕುರಿಗಳು ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ದೊಡ್ಡ ತೇಕಲವಟ್ಟಿ ಗ್ರಾಮದ ಹಳ್ಳದಲ್ಲಿ ನಡೆದಿದೆ.

    ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ದೊಡ್ಡ ತೇಕಲವಟ್ಟಿಯ ಹಳ್ಳ ಭರ್ತಿಯಾಗಿ ರಭಸವಾಗಿ ಹರಿಯುತ್ತಿದೆ. ಈ ವೇಳೆ ಕುರಿಗಳನ್ನು ಮೇಯಿಸಲು ತೆರಳಿದ್ದ ಈಶ್ವರಪ್ಪ ಎಂಬವರ 4 ಕುರಿಗಳು, ರೇವಣ್ಣನ 4 ಕುರಿಗಳು ಹಾಗೂ ರಂಗಪ್ಪ ಎಂಬವರಿಗೆ ಸೇರಿದ 2 ಕುರಿಗಳು ಹಳ್ಳ ದಾಟುವ ಸಂದರ್ಭದಲ್ಲಿ ಹಳ್ಳದ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿವೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕ ಅರೆಸ್ಟ್

    ಈ ವೇಳೆ ಸಾವನ್ನಪ್ಪಿದ್ದ 10 ಕುರಿಗಳು ಕುರಿಗಾಹಿಗಳ ಸಾಹಸದಿಂದ ಕೈಗೆ ಸಿಕ್ಕಿವೆ. ಆದರೆ ಇನ್ನೂ 4 ಕುರಿಗಳು ನೀರಲ್ಲೇ ಕೊಚ್ಚಿ ಹೋಗಿವೆ. ಹೀಗಾಗಿ ಸಾವನ್ನಪ್ಪಿರುವ ಕುರಿಗಳನ್ನು ವಾಪಸ್ ತಂದು ತಮ್ಮ ಮನೆಯ ಮುಂದೆ ರಾಶಿ ಹಾಕಿರುವ ಕುರಿಗಾಹಿಗಳು ಕಣ್ಣೀರಿಡುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿದೆ.

    ಕಳೆದ ವರ್ಷದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸಂಕಷ್ಟಕ್ಕೆ ಸಿಲುಕುತ್ತಿರುವ ಕುರಿಗಾಹಿಗಳು ಕಷ್ಟಪಟ್ಟು ಸಾಕಿರೋ ಕುರಿಗಳು ಕಣ್ಮುಂದೆಯೇ ಕೊಚ್ಚಿ ಹೋದ ದೃಶ್ಯ ನೆನೆದು ಕಣ್ಣೀರಿಡ್ತಾ, ಕಂಗಾಲಾಗಿದ್ದಾರೆ. ಕುರಿಗಾಹಿಗಳ ಬದುಕಿಗೆ ಆಸರೆಯಾಗಿದ್ದ ಕುರಿಗಳನ್ನು ಕಳೆದುಕೊಂಡಿರೋ ಹಿನ್ನೆಲೆ ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಹೀಗಾಗಿ ಇದೊಂದು ಅತಿವೃಷ್ಟಿ ಎಂದು ಪರಿಗಣಿಸಿ ಈ ಕೂಡಲೇ ತಾಲೂಕು ಆಡಳಿತ ಹಾಗೂ ಸರ್ಕಾರ ಕುರಿಗಾಹಿಗಳ ನೆರವಿಗೆ ಧಾವಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಯುವರತ್ನನಿಗೆ ಪದ್ಮಶ್ರೀ ನೀಡಲು ಶಿಫಾರಸ್ಸಿಗೆ ತೀರ್ಮಾನ

  • ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಚಿಕ್ಕಮಗಳೂರು: ಸತ್ತ ಮೇಲೆ ಈ ದೇಹವನ್ನು ಮಣ್ಣು ತಿನ್ನುತ್ತೆ ಅದರ ಬದಲು ಪುನೀತ್ ಸರ್ ಅವರಂತೆ ದಾನ ಮಾಡಿದರೆ ಈ ನಮ್ಮ ದೇಹದ ಅಂಗಾಂಗಳಿಂದ ಮತ್ತೊಬ್ಬರ ಬದುಕು ಬೆಳಕಾಗುತ್ತೆ ಎಂದು ತಾಲೂಕಿನ ಅರೆನೂರು ಗ್ರಾಮದ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿ ದಂಪತಿ ತಮ್ಮ ದೇಹವನ್ನೇ ದಾನ ಮಾಡಲು ಮುಂದಾಗಿದ್ದಾರೆ.

    ತಾಲೂಕಿನ ಅರೆನೂರು ಗ್ರಾಮದ ಸುಪ್ರಿತ್ ಹಾಗೂ ಲಕ್ಷ್ಮಿ ದಂಪತಿ ತಮ್ಮ ದೇಹವನ್ನು ಉಡುಪಿಯ KMC ಆಸ್ಪತ್ರೆಗೆ ನೀಡಲು ಮುಂದಾಗಿದ್ದಾರೆ. ನಮ್ಮ ಈ ನಡೆಗೆ ಪುನೀತ್ ರಾಜ್ ಕುಮಾರ್ ಅವರ ಪ್ರೇರೇಪಣೆಯೇ ಕಾರಣ ಎಂದು ಪಬ್ಲಿಕ್ ಟಿವಿ ಜೊತೆ ತಮ್ಮ ನಿರ್ಧಾರದ ಕುರಿತು ಮಾಹಿತಿ ನೀಡಿದ ದಂಪತಿ, ಮನುಷ್ಯನಾಗಿ ಹುಟ್ಟಿ, ಸತ್ತ ಬಳಿಕ ಈ ದೇಹವನ್ನು ಮಣ್ಣಲ್ಲಿ ಕೊಳೆಸುವುದಕ್ಕಿಂತ ನಮ್ಮ ದೇಹದ ಅಂಗಾಂಗಳು ಮತ್ತೊಬ್ಬರಿಗೆ ಉಪಯೋಗಕ್ಕೆ ಬರಬೇಕು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ. ನಾವು ಚಿಕ್ಕಂದಿನಿಂದಲೂ ಪುನೀತ್ ಸರ್ ಸಿನಿಮಾ ನೋಡಿಕೊಂಡು ಬಂದಿದ್ದೇವೆ. ಒಂದೊಂದು ಸಿನಿಮಾಗಳು ಒಂದಕ್ಕಿಂತ ಒಂದು ಚೆನ್ನಾಗಿವೆ. ನಮ್ಮ ಈ ನಡೆಗೆ ಅವರೇ ಪ್ರೇರೇಪಣೆ ಎಂದು ತಮ್ಮ ಮನದ ಮಾತು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

    ಪುನೀತ್ ಅವರು ಅಷ್ಟು ದೊಡ್ಡ ವ್ಯಕ್ತಿಯಾದರೂ ಅವರ ಸಮಾಜಮುಖಿ ಕಾರ್ಯಗಳು ಬಹುತೇಕರಿಗೆ ಗೊತ್ತಿರಲಿಲ್ಲ. ನಮಗೂ ಗೊತ್ತಿರಲಿಲ್ಲ. ಅವರು ಸತ್ತ ಬಳಿಕವಷ್ಟೆ ಗೊತ್ತಾಗಿದ್ದು. ಅವರೇ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ನಮ್ಮ ದೇಹವನ್ನು ಮಣ್ಣು ತಿನ್ನೋದಕ್ಕಿಂತ ನಾಲ್ಕು ಜನಕ್ಕೆ ಬೆಳಕಾಗಿಸಬಹುದು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇದನ್ನೂ ಓದಿ: ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

    ದೇಹದಾನಕ್ಕೆ ಮುಂದಾಗಿರುವ ಲಕ್ಷ್ಮಿ ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೂಡ. ಗಂಡ ಹೆಂಡತಿ ಮಾತನಾಡಿಕೊಂಡು, ಮನೆಯವರ ಒಪ್ಪಿಗೆ ಪಡೆದು ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿಯವರ ಊರಾದ ತಾಲೂಕಿನ ಮಲ್ಲಂದೂರು ಸಮೀಪದ ಭಾಗ್‍ಮನೆ ಬಳಿ ಇರುವ ಆವುತಿ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್‍ ಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ, ಸುಮಾರು 40ಕ್ಕೂ ಹೆಚ್ಚು ಜನ ನೇತ್ರದಾನಕ್ಕೆ ಮುಂದಾಗಿದ್ದಾರೆ. ಹೆಸರು ನೋಂದಾಯಿಸಿಕೊಂಡವರು ನಮ್ಮ ಬಳಿಕ ನಮ್ಮ ಕಣ್ಣುಗಳು ಮತ್ತೊಂದು ಜೀವ ಜಗತ್ತನ್ನು ನೋಡಲು ಸಹಕಾರಿಯಾಗಲಿದೆ. ಇದಕ್ಕೆ ನಮಗೆ ಪುನೀತ್ ರಾಜ್ ಕುಮಾರ್ ಅವರೇ ಪ್ರೇರಣೆ ಎಂದು ನೇತ್ರದಾನಕ್ಕೆ ಮುಂದಾಗಿದ್ದಾರೆ. ಬದುಕಿದ್ದಷ್ಟು ದಿನ ಭಾವನಾತ್ಮಕ ಜೀವಿಯಾಗಿದ್ದ ಪವರ್ ಸ್ಟಾರ್ ಪುನೀತ್ ಸಾವಿನ ಬಳಿಕ ಸಮಾಜಮುಖಿ ಸೇವೆಯಿಂದ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ.

  • ಕೇರಳ ಪೊಲೀಸರಿಂದ ಶೃಂಗೇರಿ ಮೂಲದ ನಕ್ಸಲರ ಬಂಧನ

    ಕೇರಳ ಪೊಲೀಸರಿಂದ ಶೃಂಗೇರಿ ಮೂಲದ ನಕ್ಸಲರ ಬಂಧನ

    ಚಿಕ್ಕಮಗಳೂರು: ಶೃಂಗೇರಿ ಮೂಲದ ನಕ್ಸಲರನ್ನು ಕೇರಳದ ಸುಲ್ತಾನ್ ಬತ್ತೇರಿ ಪೊಲೀಸರು ಬಂಧಿಸಿದ್ದಾರೆ.

    ನಕ್ಸಲ್ ನಾಯಕ ಬಿ.ಜಿ.ಕೃಷ್ಣ ಮೂರ್ತಿ, ಸಾವಿತ್ರಿ ಬಂಧಿತ ನಕ್ಸಲರು. ಕೇರಳದ ಸುಲ್ತಾನ್ ಬತ್ತೇರಿನಲ್ಲಿ ಮಲೆನಾಡ ನಕ್ಸಲಿಸಂನಲ್ಲಿ ಮುಂಚೂಣಿಯಲ್ಲಿದ್ದ ಕೃಷ್ಣಮೂರ್ತಿ, ಸಾವಿತ್ರಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. 2003ರಿಂದ ಕೃಷ್ಣಮೂರ್ತಿ ಭೂಗತನಾಗಿದ್ದು, ತನ್ನ ತಂದೆ ಗೋಪಾಲ್ ರಾವ್ ತೀರಿಕೊಂಡಾಗಲೂ ಬಂದಿರಲಿಲ್ಲ. ಇದನ್ನೂ ಓದಿ: ಈಡೇರಿತು ಕನ್ನಡಿಗರ ಕಣ್ಮಣಿಯ ಮಹದಾಸೆ – 40 ಸಾವಿರ ಅಭಿಮಾನಿಗಳಿಗೆ ಒಟ್ಟಿಗೇ ಊಟ!

    ಕೃಷ್ಣಮೂರ್ತಿ ಹೆಚ್ಚು ಶೃಂಗೇರಿ ತಾಲೂಕಿನ ಬುಕ್ಕಡಿ ಬೈಲಿನಲ್ಲಿ ವಾಸವಾಗಿದ್ದು, ಶೃಂಗೇರಿಯಲ್ಲಿ ಪದವಿ, ಶಿವಮೊಗ್ಗದಲ್ಲಿ ಎಲ್.ಎಲ್.ಬಿ. ಶಿಕ್ಷಣ ಪಡೆದಿದ್ದರು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದ ವೇಳೆ ನಕ್ಸಲ್ ಗೆ ಸೇರಿಕೊಂಡಿದ್ದರು. ಈ ಹಿನ್ನೆಲೆ ಇವರು 2003 ರಿಂದಲೂ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

    ಪ್ರಸ್ತುತ 48 ವರ್ಷದ ಕೃಷ್ಣಮೂರ್ತಿ ಮೇಲೆ ರಾಜ್ಯಾದ್ಯಂತ ಸುಮಾರು 53 ಪ್ರಕರಣಗಳಿವೆ. ಇನ್ನೂ 36 ವರ್ಷದ ಸಾವಿತ್ರಿ ಮೇಲೆ 22 ಕೇಸ್ ಗಳಿವೆ. ಸಾವಿತ್ರಿ ಕಳಸ ತಾಲೂಕಿನ ಮಾವಿನಕೆರೆ ಗ್ರಾಮದವರಾಗಿದ್ದಾರೆ.