Tag: child labor

  • ಅಂದು ಬಾಲಕಾರ್ಮಿಕ ಇಂದು ಪ್ರಾಧ್ಯಾಪಕ- ಅನಿಷ್ಟ ಪದ್ಧತಿ ಮೆಟ್ಟಿನಿಂತು ಬಡತನಕ್ಕೆ ಸೆಡ್ಡು ಹೊಡೆದವನ ಕಥೆ

    ಅಂದು ಬಾಲಕಾರ್ಮಿಕ ಇಂದು ಪ್ರಾಧ್ಯಾಪಕ- ಅನಿಷ್ಟ ಪದ್ಧತಿ ಮೆಟ್ಟಿನಿಂತು ಬಡತನಕ್ಕೆ ಸೆಡ್ಡು ಹೊಡೆದವನ ಕಥೆ

    – ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

    ಹುಬ್ಬಳ್ಳಿ: ಬಡತನ ಎನ್ನುವುದು ಕೆಲವರಿಗೆ ಬೆಂಬಿಡದೇ ಕಾಡುತ್ತಿರುತ್ತದೆ. ಆದರೆ ಆ ಬಡತನವನ್ನು ಮೆಟ್ಟಿ ನಿಂತವರು ಇದೀಗ ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಿ ನಿಂತಿದ್ದಾರೆ. ಅವತ್ತು ಆ ಹುಡುಗ ಬಾಲ ಕಾರ್ಮಿಕನಾಗಿ (Child Labour) ಅಧಿಕಾರಿಗಳಿಗೆ ಸಿಕ್ಕಿದ್ದ. ಇಂದು ಅದೇ ಹುಡುಗ ಮತ್ತಷ್ಟು ವಿದ್ಯಾರ್ಥಿಗಳ ಪಾಲಿನ ಶಿಕ್ಷಕನಾಗಿ ಕೆಲಸ ಆರಂಭಿಸೋಕೆ ಸಿದ್ಧನಾಗಿದ್ದಾನೆ.

    ಅಂದು ತನ್ನ ತಂದೆ, ತಾಯಿ ಪಡುತ್ತಿದ್ದ ಕಷ್ಟವನ್ನು ನೋಡಲಾಗದೇ ತನ್ನ ಪೋಷಕರೊಂದಿಗೆ ಕಲ್ಲಿನ ಕ್ವಾರಿಗೆ ಕೆಲಸಕ್ಕೆಂದು ಹೋಗಿ ಬಾಲ ಕಾರ್ಮಿಕ ಎನಿಸಿಕೊಂಡಿದ್ದ ಬಾಲಕ ಇದೀಗ ಸಹಾಯಕ ಪ್ರಾಧ್ಯಾಪಕನಾಗಿದ್ದಾನೆ ಕುಮಾರ ಸೋಮಲಿಂಗ ಬಾಳಿಕಾಯಿ (Somalinga Balikai). ಇವರು ಚಿಕ್ಕ ವಯಸ್ಸಿನಲ್ಲಿದ್ದಾಗ ತಮ್ಮ ಪೋಷಕರೊಂದಿಗೆ ಕಲ್ಲಿನ ಕ್ವಾರಿಗೆ ಕೆಲಸಕ್ಕೆಂದು ಹೋಗುತ್ತಿದ್ದರು.

    ಮೂಲತಃ ಧಾರವಾಡ (Dharwad) ತಾಲೂಕಿನ ಮಂಡಿಹಾಳ ಗ್ರಾಮದವರಾದ ಇವರು, ಪ್ರತಿನಿತ್ಯ ಕೆಲಸಕ್ಕೆ ಹೋಗುವುದನ್ನು ನೋಡಿದ ಕಾರ್ಮಿಕ ಇಲಾಖೆ ಅಧಿಕಾರಿಗಳು, ಇತನ್ನು ರಕ್ಷಣೆ ಮಾಡಿ ಆಗ ದಡ್ಡಿಕಮಲಾಪುರದಲ್ಲಿದ್ದ ಬಾಲ ಕಾರ್ಮಿಕರ ಶಾಲೆಯಲ್ಲಿಟ್ಟು ಶಿಕ್ಷಣ ನೀಡಿದ್ರು. ಅಲ್ಲಿಂದ ಆರಂಭವಾದ ಈತನ ಶಿಕ್ಷಣ ಪ್ರೀತಿ ಇಂದು ದೊಡ್ಡ ಮಟ್ಟಿನ ಯಶಸ್ಸಿಗೆ ಕಾರಣವಾಗಿದೆ. ಈ ಉಚಿತ ಶಿಕ್ಷಣ (Free Education) ಪಡೆದ ಕುಮಾರ ಸೋಮಲಿಂಗಯ್ಯ ಇದೀಗ ರಾಜ್ಯಕ್ಕೇ ಎರಡನೇ ರ್ಯಾಂಕ್ ಪಡೆಯುವ ಮೂಲಕ ಸಹಾಯಕ ಪ್ರಾಧ್ಯಾಪಕನಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ – ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ

    ಅಂದು ಕಾರ್ಮಿಕ ಇಲಾಖೆಯಿಂದಲೇ ನಡೆಸಲಾಗುತ್ತಿದ್ದ ಶಾಲೆಗಳ ಮೂಲಕ ಶಿಕ್ಷಣ ಪಡೆದ ಕುಮಾರ ಸೋಮಲಿಂಗಯ್ಯ ಅವರು, ಇಂದು ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಪ್ರತಿಯೊಬ್ಬ ಬಾಲ ಕಾರ್ಮಿಕರು ಕೂಡ ಇವರನ್ನು ಆದರ್ಶವಾಗಿಟ್ಟುಕೊಳ್ಳಬೇಕು. ಪ್ರಯತ್ನಪಟ್ಟರೆ ಎಲ್ಲವೂ ಸಾಧ್ಯ ಎಂಬುದನ್ನು ಇವರು ತೋರಿಸಿಕೊಟ್ಟಿದ್ದಾರೆ ಎಂದು ಹುಬ್ಬಳ್ಳಿ (Hubballi) ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತೆ ಶ್ವೇತಾ ಹರ್ಷ ವ್ಯಕ್ತಪಡಿಸಿದ್ದಾರೆ. ಮಕ್ಕಳು ಯಾವುದೇ ಕಾರಣಕ್ಕೂ ಕೆಲಸಕ್ಕೆ ಹೋಗಬಾರದು, ಮಕ್ಕಳ ಕಲಿಕೆಗೆ ಪೋಷಕರು ಸಹ ಪ್ರೋತ್ಸಾಹ ನೀಡಬೇಕು. ಅದರಂತೆ ಈ ಕುಮಾರ ಎಲ್ಲರಿಗೂ ಸ್ಪೂರ್ತಿ ಎನ್ನುವುದು ಅಧಿಕಾರಗಳ ಮಾತು.

    ಒಟ್ಟಾರೆ ಅಂದು ಬಾಲ ಕಾರ್ಮಿಕನಾಗಿದ್ದ ಕುಮಾರ ಸೋಮಲಿಂಗಯ್ಯ ಇಂದು ಬಡತನವನ್ನೇ ಮೆಟ್ಟಿ ನಿಲ್ಲುವ ಮೂಲಕ ಆದರ್ಶವಾಗಿದ್ದಾರೆ. ಅಲ್ಲದೇ ಮನಸ್ಸಿದ್ದರೆ ಮಾರ್ಗ ಎಂಬುದನ್ನೂ ತೋರಿಸಿಕೊಟ್ಟಿದ್ದಾರೆ. ಎಲ್ಲಾ ಸೌಕರ್ಯವಿದ್ದು ಸಾಧಿಸಿ ನಿಲ್ಲದವರ ಎದುರು ಇಂತಹ ಶಿಕ್ಷಣ ಪ್ರೇಮಿಗಳು ಇರೋದು ಎಲ್ಲರಿಗೂ ಮಾದರಿಯಾಗಿದೆ. ಬಾಲ ಕಾರ್ಮಿಕ ಎಂಬ ಅನಿಷ್ಟ ಪದ್ಧತಿ ಮೆಟ್ಟಿನಿಂತ ಕುಮಾರ್ ಸಾಧನೆ ಎಲ್ಲರಿಗೂ ಸ್ಪೂರ್ತಿ.

     

  • ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸೋಣ: ನ್ಯಾಯಾಧೀಶ

    ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸೋಣ: ನ್ಯಾಯಾಧೀಶ

    ಕೋಲಾರ: ಇತ್ತೀಚಿನ ದಿನಗಳಲ್ಲಿ ಬಾಲಕಾರ್ಮಿಕ ಪದ್ಧತಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸೋಣ ಎಂದು ಪೋಕ್ಸೋ ಪ್ರಕರಣಗಳ ವಿಶೇಷ ಶೀಘ್ರಗತಿ ನ್ಯಾಯಾಲಯದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಪಿ.ದೇವಮಾನೆ ತಿಳಿಸಿದರು.

    ಇಂದು ನಗರದ ಮಹಾತ್ಮಗಾಂಧಿ ಚೌಕದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರದ ಸಂಘ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ದೇಶದ ನಿಜವಾದ ಆಸ್ತಿ ಎಂದರೆ ಆ ದೇಶದ ಆರೋಗ್ಯವಂತ, ಪ್ರಜ್ಞಾವಂತ ನಾಗರಿಕರು ಆಗಿರುತ್ತಾರೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂದು ಮಾತನ್ನು ಪ್ರಾರಂಭ ಮಾಡಿದರು. ಇದನ್ನೂ ಓದಿ:  ಅನುಮತಿ ಪಡೆಯದೇ ಜಾಹೀರಾತು: ಇಬ್ಬರು ಅಭ್ಯರ್ಥಿಗಳ ವಿರುದ್ಧ FIR ದಾಖಲು 

    ಬಾಲ್ಯ ವ್ಯವಸ್ಥೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ, ಉತ್ತಮ ಮಾರ್ಗದರ್ಶನ ನೀಡಿ ಪ್ರಜ್ಞಾವಂತ ಪ್ರಜೆಯನ್ನಾಗಿ ಮಾಡುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಬಾಲ್ಯದಲ್ಲಿಯೇ ಮಕ್ಕಳು ಕಾರ್ಮಿಕರಾಗಿ ದುಡಿಯುವುದು, ದುಶ್ಚಟಗಳಿಗೆ ಗಮನ ಹರಿಸದಂತೆ ನೋಡಿಕೊಂಡು ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿರುತ್ತದೆ ಎಂದು ವಿವರಿಸಿದರು.

    ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಜಾಥಾಗೆ ಚಾಲನೆ ನೀಡಿ ಮಾತನಾಡಿದ್ದು, ಪ್ರತಿಯೊಬ್ಬ ನಾಗರಿಕನು ಸಹ ಬಾಲಕಾರ್ಮಿಕ ವಿರೋಧಿಯಾಗಿ ಕಾರ್ಯನಿರ್ವಹಿಸಬೇಕು. ಬಾಲಕಾರ್ಮಿಕ ವಿರೋಧಿ ಚಟುವಟಿಕೆಗಳನ್ನು ಒಂದು ದಿನಕ್ಕೆ ಸೀಮಿತ ಮಾಡಬಾರದು. ಮುಂದಿನ ತಿಂಗಳಿನಲ್ಲಿ ಕಾರ್ಮಿಕ ಕಾರ್ಖಾನೆಗಳಿಗೆ, ಗ್ಯಾರೇಜ್, ಹೋಟೆಲ್, ಡಾಬಾ, ಬೇಕರಿ ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಮಾಡಿ ಬಾಲಕಾರ್ಮಿಕರು ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.

     

    ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುನಿಲ್.ಎಸ್.ಹೊಸಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀಕಾಂತ್ ಬಿ ಪಾಟೀಲ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶ್ರೀಧರ್.ಜಿ, ವಕೀಲರ ಸಂಘದ ಕಾರ್ಯದರ್ಶಿಗಳಾದ ರಘುಪತಿ ಗೌಡ, ಜಾಗೃತಿ ಸೇವಾ ಸಂಸ್ಥೆಯ ಅಧ್ಯಕ್ಷರು ಹಾಗೂ ವಕೀಲರಾದ ಕೆ.ಆರ್.ಧನರಾಜ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. ಇದನ್ನೂ ಓದಿ: ಜನರನ್ನ ಆಸ್ಪತ್ರೆಗೆ ಸೇರಿಸುವಲ್ಲಿ ದಾಖಲೆ ಬರೆದ ರಾಯಚೂರು – ವಾಂತಿ, ಭೇದಿ ರೋಗಿಗಳಿಂದ ಬೆಡ್ ಪುಲ್

  • ರಾಯಚೂರಿನಲ್ಲಿ ಅಧಿಕಾರಿಗಳಿಂದ ದಾಳಿ – 22 ಬಾಲಕಾರ್ಮಿಕರ ರಕ್ಷಣೆ

    ರಾಯಚೂರಿನಲ್ಲಿ ಅಧಿಕಾರಿಗಳಿಂದ ದಾಳಿ – 22 ಬಾಲಕಾರ್ಮಿಕರ ರಕ್ಷಣೆ

    ರಾಯಚೂರು: ತಾಲೂಕಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ 22 ಬಾಲಕಾರ್ಮಿಕರನ್ನು ಮಕ್ಕಳ ರಕ್ಷಣಾ ಘಟಕ, ಆರ್‌ಟಿಓ ಸೇರಿ ಅಧಿಕಾರಿಗಳ ತಂಡ ರಕ್ಷಿಸಿದ್ದಾರೆ.

    ಇಂದು ಅಧಿಕಾರಿಗಳು ರಾಯಚೂರು ತಾಲೂಕಿನ ವಿವಿಧೆಡೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ 22 ಮಕ್ಕಳನ್ನು ರಕ್ಷಿಸಿದ್ದಾರೆ. ಪ್ರಕರಣ ಸಂಬಂಧಿಸಿ ಕೂಲಿ ಕೆಲಸಕ್ಕೆ ಮಕ್ಕಳನ್ನು ಗೂಡ್ಸ್ ವಾಹನಗಳಲ್ಲಿ ಕರೆದೊಯ್ಯುತ್ತಿದ್ದ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

     

    ಹತ್ತಿ ಬಿಡಿಸುವುದು ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಿಗೆ ಮಕ್ಕಳನ್ನು ಜಮೀನುಗಳಿಗೆ ಕರೆದೊಯ್ಯಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ಕು ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಂಜುನಾಥ ರೆಡ್ಡಿ, ಆರ್ ಟಿ ಓ ಕೃಷ್ಣ ಮೂರ್ತಿ, ಮಕ್ಕಳ ಸಹಾಯವಾಣಿ ಅಧಿಕಾರಿ ತಾಯಿ ರಾಜ್, ರವಿಕುಮಾರ್ ಸೇರಿ 5 ಅಧಿಕಾರಿಗಳು ದಾಳಿ ನಡೆಸಿದ ತಂಡದಲ್ಲಿದ್ದರು. ನಂತರ ರಕ್ಷಿಸಿದ ಬಾಲ ಕಾರ್ಮಿಕರನ್ನು ಶಿಕ್ಷಣ ಇಲಾಖೆಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ಹರಾಜು – ಟಾಟಾ ಡೀಲ್‌ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

  • ಶಾಲೆಗಳಿಗೆ ರಜೆ- ರಾಯಚೂರಲ್ಲಿ ಬಾಲಕಾರ್ಮಿಕರ ಸಂಖ್ಯೆ ಹೆಚ್ಚಳ

    ಶಾಲೆಗಳಿಗೆ ರಜೆ- ರಾಯಚೂರಲ್ಲಿ ಬಾಲಕಾರ್ಮಿಕರ ಸಂಖ್ಯೆ ಹೆಚ್ಚಳ

    – ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಪೋಷಕರು

    ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಶಾಲೆಗಳಿಗೆ ರಜೆ ಇರುವುದರಿಂದ ಪೋಷಕರು ಮಕ್ಕಳನ್ನು ಬೇರೆ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಕೂಲಿ ಕೆಲಸಕ್ಕೂ ಮಕ್ಕಳನ್ನು ಕಳುಹಿಸುತ್ತಿದ್ದಾರೆ.

    ನಗರದ ಎಪಿಎಂಸಿ ಆವರಣದಲ್ಲಿ ಪುಟ್ಟ ಮಕ್ಕಳು ಕೃಷಿ ಸಂಬಂಧಿತ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ. ಸ್ವತಃ ತಂದೆ ತಾಯಿಗಳೇ ಮಕ್ಕಳನ್ನು ಇತರೆ ಕೆಲಸಗಳಿಗೆ ಕರೆದೊಯ್ಯುತ್ತಿದ್ದಾರೆ. ಶಾಲೆ ಇಲ್ಲ ಹೀಗಾಗಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಚಿಕ್ಕ ಮಕ್ಕಳು ಹೇಳುತ್ತಿದ್ದಾರೆ.

    ಮುಂಗಾರು ಮಳೆ ಆರಂಭವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿರುವುದರಿಂದ ನಗರದ ಎಪಿಎಂಸಿ ಆವರಣದಲ್ಲಿ ಕೃಷಿ ಪರಿಕರಗಳ ಮಾರಾಟ ಜೋರಾಗಿದೆ. ಹೀಗಾಗಿ ಪೋಷಕರು ವ್ಯಾಪಾರಕ್ಕೆ ಮಕ್ಕಳನ್ನೂ ಬಳಸಿಕೊಳ್ಳುತ್ತಿದ್ದಾರೆ. ಬಾಲ ಕಾರ್ಮಿಕರ ತಡೆಗೆ ಸರ್ಕಾರ ಒಂದೆಡೆ ನಿರಂತರ ಪ್ರಯತ್ನ ನಡೆಸಿದ್ದರೂ, ಇದೀಗ ಪೋಷಕರು ತಮ್ಮ ಕೆಲಸಗಳಿಗೆ 14 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಕುರಿತು ಪ್ರಶ್ನಿಸಿದರೆ ಶಾಲೆಗಳಿಗೆ ರಜೆ ಇರುವುದರಿಂದ ಮಕ್ಕಳನ್ನು ವ್ಯಾಪಾರಕ್ಕೆ ಕರೆದುಕೊಂಡು ಬಂದಿದ್ದು, ಆರಂಭವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳುಹಿಸುತ್ತೇವೆ ಎಂದು ಪೋಷಕರು ಹೇಳಿದ್ದಾರೆ.

    ಕೆಲಸದಲ್ಲಿ ತೊಡಗಿರುವ ಇಬ್ಬರು ಮಕ್ಕಳು ಸಹ 8 ಹಾಗೂ 9ನೇ ತರಗತಿಯಲ್ಲಿ ಓದುತ್ತಿದ್ದು, ತಂದೆಗೆ ಸಹಾಯ ಮಾಡುತ್ತಿದ್ದೇವೆ. ಶಾಲೆ ಆರಂಭವಾದ ಮೇಲೆ ಹೋಗುವುದಾಗಿ ಹೇಳುತ್ತಿದ್ದಾರೆ. ಹತ್ತಿ ಬಿಡಿಸುವ ಸಂದರ್ಭದಲ್ಲೂ ಬಾಲಕಾರ್ಮಿಕರನ್ನು ಹೆಚ್ಚಾಗಿ ಬಳಸಲಾಗುತ್ತದೆ. ಮೆಕ್ಯಾನಿಕ್, ವೆಲ್ಡಿಂಗ್ ಶಾಪ್, ಹೋಟೆಲ್‍ಗಳಲ್ಲೂ ಬಾಲ ಕಾರ್ಮಿಕರ ಬಳಕೆ ನಡೆದಿದೆ. ಶಾಲೆಗಳಿಗೆ ರಜೆ ಅನ್ನೋ ಕಾರಣಕ್ಕೆ ಮಕ್ಕಳನ್ನ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ.

  • ಅನಿರೀಕ್ಷಿತ ಕಾರ್ಯಾಚರಣೆ- ನಾಲ್ಕು ಬಾಲಕಾರ್ಮಿಕರು ಪತ್ತೆ

    ಅನಿರೀಕ್ಷಿತ ಕಾರ್ಯಾಚರಣೆ- ನಾಲ್ಕು ಬಾಲಕಾರ್ಮಿಕರು ಪತ್ತೆ

    ಹಾವೇರಿ: ಬಾಲಕಾರ್ಮಿಕರ ಪತ್ತೆಗಾಗಿ ಗುರುವಾರ ನಗರದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡು ನಾಲ್ಕು ಜನ ಬಾಲ ಕಾರ್ಮಿಕರನ್ನು ಪತ್ತೆಮಾಡಿ, ರಕ್ಷಿಸಲಾಗಿದೆ.

    ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ ಅವರ ನೇತೃತ್ವದಲ್ಲಿ ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೃಷಿ ಉತ್ಪನ್ನ ಮಾರುಕಟ್ಟೆ ಮಾರ್ಗದಲ್ಲಿ ವಿವಿಧ ಅಂಗಡಿಗಳು, ಬಾರ್, ಹೋಟೆಲ್‍ಗಳ ತಪಾಸಣೆ ನಡೆಸಲಾಗಿದೆ. ಈ ಮಾರ್ಗದಲ್ಲಿ ನ್ಯೂ ಚಿಕನ್ ಕಾರ್ನರ್ ಹೋಟೆಲ್, ಸ್ಪೇಷಲ್ ಧಾರವಾಡ ಪೇಡಾ ಬಿಗ್ ಬೇಕರಿ, ಕಿರಾಣಿ ಅಂಗಡಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಲಕರನ್ನು ಪತ್ತೆಮಾಡಿ ವಶಕ್ಕೆ ಪಡೆಯಲಾಯಿತು.

    ಇದೇ ಮಾರ್ಗದಲ್ಲಿ ಕೇಂದ್ರ ಬಸ್ ನಿಲ್ದಾಣದ ಸಮೀಪ ಕಡಲೆಗಿಡ ಮಾರುತ್ತಿದ್ದ ಬಾಲಕನನ್ನು ವಶಕ್ಕೆ ಪಡೆಯಲಾಯಿತು. ಈ ನಾಲ್ಕು ಬಾಲಕರು 15 ವರ್ಷದ ವಯೋಮಿತಿಯವರಾಗಿದ್ದು, ಜಿಲ್ಲೆಯ ಬೇರೆ ಹಳ್ಳಿಗಳಿಂದ ಬಂದು ನಗರದಲ್ಲಿ ಕೆಲಸಮಾಡುತ್ತಿದ್ದರು.

    ಪತ್ತೆಯಾದ ಬಾಲಕರ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ್ ಅವರು ಬಾಲಕರ ಊರು, ವಿಳಾಸ, ಪಾಲಕರ ಬಗ್ಗೆ ಮಾಹಿತಿ ಪಡೆದರು. ಎಲ್ಲ ಮಕ್ಕಳು ವ್ಯಾಸಂಗಮಾಡುತ್ತಿರುವ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಾಲಕರ ಮಾಹಿತಿ ಆಧರಿಸಿ ಸ್ಥಳದಲ್ಲೇ ಶಾಲಾ ಮುಖ್ಯೋಪಾಧ್ಯಾಯರಿಗೆ ದೂರವಾಣಿ ಕರೆಮಾಡಿ, ಬಾಲಕರ ಮನೆಗೆ ತೆರಳಿ, ಪಾಲಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವಂತೆ ಸೂಚನೆ ನೀಡಿದರು.

    ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಅಗತ್ಯವಿದ್ದರೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಾವಕಾಶ ಕಲ್ಪಿಸುವುದು ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ದೊರಕಿಸಿಕೊಡುವಂತೆ ಸೂಚನೆ ನೀಡಿದರು.

  • 14 ವರ್ಷದೊಳಗಿನ ಮಕ್ಕಳನ್ನು ಕೂಲಿಗೆ ಕರೆದರೆ ಮಾಲೀಕನ ಮೇಲೆ ಕೇಸ್- ಕಾರ್ಮಿಕ ಇಲಾಖೆ ಎಚ್ಚರಿಕೆ

    14 ವರ್ಷದೊಳಗಿನ ಮಕ್ಕಳನ್ನು ಕೂಲಿಗೆ ಕರೆದರೆ ಮಾಲೀಕನ ಮೇಲೆ ಕೇಸ್- ಕಾರ್ಮಿಕ ಇಲಾಖೆ ಎಚ್ಚರಿಕೆ

    – ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಯಾದಗಿರಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ

    ಯಾದಗಿರಿ: 14 ವರ್ಷ ಒಳಗಿನ ಮಕ್ಕಳನ್ನು ಕೂಲಿ ಕೆಲಸಕ್ಕೆಂದು ಹೊಲಕ್ಕೆ ಕರೆದುಕೊಂಡು ಹೋಗುವುದು ಅಪರಾಧ, ನಮ್ಮ ಜಿಲ್ಲೆಯಲ್ಲಿ ಇದು ಕಂಡು ಬಂದರೆ ಹೊಲದ ಮಾಲೀಕರ ವಿರುದ್ಧ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆಯ ಉಪ ನಿರ್ದೇಶಕಿ ಕುಮಾರಿ ಶ್ವೇತಾ ಖಡಕ್ ಎಚ್ಚರಿಕೆ ನೀಡಿದರು. ಅಲ್ಲದೆ ಇದೇ ವೇಳೆ ಪಬ್ಲಿಕ್ ಟಿವಿ ಅಭಿಯಾನಕ್ಕೆ ಅಭಿನಂದನೆ ಸಹ ತಿಳಿಸಿದರು.

     ಕೊರೊನಾ ಲಾಕ್ ಡೌನ್ ಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಬಂದ್ ಆಗಿರುವ ಹಿನ್ನೆಲೆ, ಯಾದಗಿರಿಯಲ್ಲಿ ವಿದ್ಯಾರ್ಥಿಗಳು ಪುಸ್ತಕ ಬಿಟ್ಟು ಕೂಲಿ ಕಾರ್ಮಿಕರಾಗಿ ಬದಲಾಗುತ್ತಿದ್ದಾರೆ. ವಿದ್ಯಾಗಮ ಯೋಜನೆ ಸಹ ನಿಂತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪಾಲಕರು ಜಮೀನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಇದರಿಂದಾಗಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಪಬ್ಲಿಕ್ ಟಿವಿ ಅಭಿಯಾನ ನಡೆಸಿತ್ತು.

    ಇದೀಗ ಯಾದಗಿರಿ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳು ವಿವಿಧ ಕಡೆ ದಾಳಿ ನಡೆಸಿ ಮಕ್ಕಳನ್ನು ರಕ್ಷಿಸುತ್ತಿದ್ದಾರೆ. ಅಲ್ಲದೆ ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬಿಡಿಸುವ ಸಮಯವಿದ್ದು, 150 ರೂ. ಕೂಲಿ ಆಸೆಗೆ ಪಾಲಕರು ತಮ್ಮ ಮಕ್ಕಳನ್ನು ಹೊಲಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಸದ್ಯ ಇದಕ್ಕೆ ಬ್ರೇಕ್ ಹಾಕುತ್ತಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು, ಹೊಲದ ಮಾಲೀಕರ ವಿರುದ್ಧ ಕೇಸ್ ಹಾಕುತ್ತಿದ್ದಾರೆ.

    ಈ ಪ್ರಕರಣಗಳನ್ನು ಯಾದಗಿರಿ ಜಿಲ್ಲಾಡಳಿತ ಗಂಭೀರವಾಗಿ ತೆಗೆದುಕೊಂಡಿದೆ. ಹೀಗಾಗಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ನಿರ್ದೇಶನದಲ್ಲಿ ಕಾರ್ಮಿಕ ಕಲ್ಯಾಣ ಅಧಿಕಾರಿ ಕುಮಾರಿ ಶ್ವೇತಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದೆ. ಕಾರ್ಮಿಕ ನಿರೀಕ್ಷಕ ಗಂಗಾಧರ್, ಮಕ್ಕಳ ರಕ್ಷಣಾಧಿಕಾರಿ ಗೋವಿಂದ ರಾಠೋಡ್ ಮತ್ತು ಅಶೋಕ್ ರಾಜನ್ ಈ ತಂಡದಲ್ಲಿದ್ದು, ಈ ತಂಡ ವಿವಿಧ ಕಡೆ ದಾಳಿ ನಡೆಸಿ ಮಕ್ಕಳ ರಕ್ಷಣೆ ಜೊತೆ ಜಮೀನಿನ ಮಾಲೀಕರ ವಿರುದ್ಧ ಎಫ್‍ಐಆರ್ ದಾಖಲಿಸುತ್ತಿದೆ.

  • ರಾಯಚೂರಿನಲ್ಲಿ ಮಕ್ಕಳು ವಠಾರ ಶಾಲೆಗೆ ಗೈರು- ಕೃಷಿ ಕೂಲಿಗೆ ಹಾಜರು

    ರಾಯಚೂರಿನಲ್ಲಿ ಮಕ್ಕಳು ವಠಾರ ಶಾಲೆಗೆ ಗೈರು- ಕೃಷಿ ಕೂಲಿಗೆ ಹಾಜರು

    ರಾಯಚೂರು: ಕೋವಿಡ್ 19 ಹಿನ್ನೆಲೆ ಶಾಲೆಗಳು ಆರಂಭವಾಗುವುದು ಯಾವಾಗ ಅನ್ನೋದು ಇನ್ನೂ ಸ್ಪಷ್ಟತೆ ಯಾರಿಗೂ ಇಲ್ಲ. ಆದ್ರೆ ಸರ್ಕಾರ ಮಕ್ಕಳ ಅಕ್ಷರ ಅಭ್ಯಾಸ ನಿಲ್ಲಬಾರದು ಅಂತ ವಿದ್ಯಾಗಮ ಯೋಜನೆಯಡಿ ವಠಾರ ಶಾಲೆ ನಡೆಸುತ್ತಿದೆ. ಆದ್ರೆ ರಾಯಚೂರಿನಲ್ಲಿ ಗ್ರಾಮೀಣ ಭಾಗದ ಪೋಷಕರು ಮಾತ್ರ ಮಕ್ಕಳನ್ನ ಪಾಠಕ್ಕೆ ಕಳಿಸುವ ಬದಲು ಕೂಲಿಗೆ ಕಳುಹಿಸುತ್ತಿದ್ದಾರೆ. ಆ ಮಕ್ಕಳನ್ನ ಪುನಃ ಕರೆತಂದು ಪಾಠ ಮಾಡುವುದೇ ಜಿಲ್ಲೆಯ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ.

    ಮಹಾಮಾರಿಯಂತೆ ಎಲ್ಲೆಡೆ ಹಬ್ಬಿರೋ ಕೊರೊನಾ ಭೀತಿ ಮಕ್ಕಳ ಶೈಕ್ಷಣಿಕ ಹಕ್ಕಿನ ಮೇಲೂ ಪರಿಣಾಮ ಬೀರಿದೆ. ಲಾಕ್‍ಡೌನ್‍ನಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟರೂ ಮಕ್ಕಳ ವ್ಯಾಸಂಗಕ್ಕೆ ಅನುಕೂಲವಾಗಲಿ ಅಂತ ವಠಾರ ಶಾಲೆ ಆರಂಭಿಸಿದೆ. ಆದ್ರೆ ರಾಯಚೂರಿನಲ್ಲಿ ಗ್ರಾಮೀಣ ಭಾಗದ ಮಕ್ಕಳು ಮಾತ್ರ ವಠಾರ ಶಾಲೆಗಳಿಗೆ ಹೋಗದೆ ಕೂಲಿಗೆ ಹೋಗುತ್ತಿದ್ದಾರೆ. ಸರ್ಕಾರ ಇನ್ನೂ ಶಾಲೆಗಳಿಗೆ ಮಕ್ಕಳ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಅದರ ಬದಲಿಗೆ ಶಿಕ್ಷಕರೇ ಗ್ರಾಮದ ದೇವಸ್ಥಾನಗಳು, ಸಮುದಾಯ ಭವನಗಳು, ಗುಡಿ ಗುಂಡಾರಗಳಲ್ಲೇ ವಠಾರ ಶಾಲೆ ನಡೆಸಬೇಕಿದೆ. ಹೀಗೆ ಹೋದ ಶಿಕ್ಷಕರಿಗೆ ಅಲ್ಲಿ ಮಕ್ಕಳಿಲ್ಲದ್ದು ಕಂಡು ಬೇಸರವಾಗುತ್ತಿದೆ. ಬಹುತೇಕ ಮಕ್ಕಳನ್ನು ಪಾಲಕರು ಹೊಲಗಳ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇಲ್ಲವೇ ಬೇರೆಯವರ ಹೊಲಗಳಿಗೆ ಕಸ ಆರಿಸಲು ಕೂಲಿಗೆ ಕಳುಹಿಸುತ್ತಿರುವುದು ಹೆಚ್ಚಾಗಿದೆ.

    ಪ್ರತಿ ದಿನ ಮಕ್ಕಳಿಗೆ 150 ರೂಪಾಯಿ ಕೂಲಿ ಸಿಗುತ್ತಿರುವುದರಿಂದ ಕಷ್ಟದ ಸಮಯದಲ್ಲಿ ಹಣ ಬರುತ್ತೆ ಅಂತ ಪೋಷಕರು ಕೃಷಿ ಕೂಲಿ ಕೆಲಸಕ್ಕೆ ಕಳುಹಿಸುತ್ತಿದ್ದಾರೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದು ತಪ್ಪು ಎಂದು ಹೇಳಿದರೆ ಪಾಲಕರು ಶಿಕ್ಷಕರು, ಅಧಿಕಾರಿಗಳೊಂದಿಗೆ ವಾದಕ್ಕಿಳಿಯುತ್ತಾರಂತೆ. ಹೀಗಾಗಿ ಮಕ್ಕಳಿಗೆ ಪಾಠ ಹೇಳುವುದೇ ದೊಡ್ಡ ತಲೆನೋವಾಗಿದೆ. ವಿದ್ಯಾಗಮ ಯಶಸ್ವಿಯಾಗಿ ನಡೆಯುತ್ತಿದೆ ಆದ್ರೆ ಮಕ್ಕಳನ್ನ ಕೂಲಿ ಕೆಲಸಕ್ಕೆ ಕಳುಹಿಸುತ್ತಿರುವ ಪೋಷಕರಿಗೆ ತಿಳಿ ಹೇಳುವುದೇ ಸವಾಲಾಗಿದೆ. ಶಿಕ್ಷಕರು ಮನೆ ಮನೆಗೆ ತೆರಳಿ ಮಕ್ಕಳನ್ನ ಪಾಠಕ್ಕೆ ಕರೆತರುವ ಕೆಲಸ ಮಾಡುತ್ತಿದ್ದಾರೆ ಅಂತ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ.ಗೋನಾಳ ಹೇಳಿದ್ದಾರೆ.

    ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿಗಳು ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಬಾಲಕಾರ್ಮಿಕರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಜಿಲ್ಲೆಯ ಕವಿತಾಳ, ಸಿರವಾರ, ದೇವದುರ್ಗದಲ್ಲಿ ದಾಳಿ ನಡೆಸಿದ್ದು, 28 ವಾಹನಗಳನ್ನು ಜಪ್ತಿ ಮಾಡಿ 130 ಮಕ್ಕಳನ್ನು ರಕ್ಷಿಸಿದ್ದಾರೆ. ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದು, ಪಾಲಕರಿಗೆ ಮನವರಿಕೆ ಮಾಡಿಕೊಡುವ ಯತ್ನ ಮಾಡಲಾಗುತ್ತಿದೆ. ರಕ್ಷಣೆ ಮಾಡಿದ ಬಾಲಕಾರ್ಮಿಕರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗುತ್ತಿದೆ.

    ಟಂಟಂ ಆಟೋ ಚಾಲಕರು, ಪಿಕಪ್ ವಾಹನಗಳ ಚಾಲಕರು ಕೂಲಿ ಕಾರ್ಮಿಕರನ್ನು ಕರೆತರುವ ಕೆಲಸ ನೆಚ್ಚಿಕೊಂಡಿದ್ದಾರೆ. ಒಬ್ಬ ಕಾರ್ಮಿಕರಿಗೆ ಇಂತಿಷ್ಟು ಅಂತ ಕಮಿಶನ್ ಪಡೆಯುತ್ತಾರೆ. ಕಮಿಷನ್‍ಗಾಗಿ ಮಕ್ಕಳನ್ನು ಕೂಡ ಕೂಲಿಗೆ ಕರೆದೊಯ್ಯುತ್ತಿದ್ದಾರೆ. ನಿರಂತರ ದಾಳಿ ಬಳಿಕ ಅಧಿಕಾರಿಗಳು ಶಿಕ್ಷಕರೇ ಮಕ್ಕಳ ಮನೆಗಳಿಗೆ ತೆರಳಿ ವಠಾರ ಶಾಲೆಗೆ ಬರುವಂತೆ ತಿಳಿ ಹೇಳುವ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಶಿಕ್ಷಕರು ಪಾಠ ಮಾಡುವ ಜೊತೆ ಮಕ್ಕಳು ಕೂಲಿ ಕೆಲಸಕ್ಕೆ ಹೋಗದಂತೆ ತಡೆಯುವ ಕೆಲಸವೂ ಮಾಡಬೇಕಾಗಿದೆ.

  • ರಾಯಚೂರಿನಲ್ಲಿ ಅಧಿಕಾರಿಗಳ ದಾಳಿ – 59 ಬಾಲಕಾರ್ಮಿಕರ ರಕ್ಷಣೆ

    ರಾಯಚೂರಿನಲ್ಲಿ ಅಧಿಕಾರಿಗಳ ದಾಳಿ – 59 ಬಾಲಕಾರ್ಮಿಕರ ರಕ್ಷಣೆ

    ರಾಯಚೂರು: ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇಂದು 59 ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.

    ದೇವದುರ್ಗ ತಾಲೂಕಿನಲ್ಲಿ ದಾಳಿ ನಡೆಸಿ ಕೃಷಿ ಕೆಲಸಕ್ಕೆ ವಾಹನಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿ, 59 ಬಾಲ ಕಾರ್ಮಿಕರ ರಕ್ಷಣೆ ಮಾಡಲಾಗಿದೆ.

    ಬಾಲಕಾರ್ಮಿಕ ಘಟಕದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸೇರಿ ದಾಳಿ ಮಾಡಿದ್ದು, ದಾಳಿ ವೇಳೆ 10 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ನಿನ್ನೆ ಸಿರವಾರ ತಾಲೂಕಿನ ಕವಿತಾಳದಲ್ಲಿ ದಾಳಿ ನಡೆಸಿ 32 ಮಕ್ಕಳನ್ನು ರಕ್ಷಿಸಿದ್ದರು. ಇಂದು ಸಹ ಕಾರ್ಯಾಚರಣೆ ಮುಂದುವರಿಸಿದ ಅಧಿಕಾರಿಗಳ ತಂಡ, ಬಾಲಕ ಕಾರ್ಮಿಕರನ್ನು ರಕ್ಷಿಸಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

  • ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳ ನಡುವೆ ಸಮನ್ವಯ ಅಗತ್ಯ: ಡಿಸಿ ಶಿವಕುಮಾರ್

    ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳ ನಡುವೆ ಸಮನ್ವಯ ಅಗತ್ಯ: ಡಿಸಿ ಶಿವಕುಮಾರ್

    ಶಿವಮೊಗ್ಗ: ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಮೇಲ್ವಿಚಾರಣೆ ಮತ್ತು ಜಾಗರೂಕತೆ ಸಮಿತಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಬಾಲಕಾರ್ಮಿಕರ ಪತ್ತೆಗೆ ನಿರಂತರ ಕಾರ್ಯಾಚರಣೆ ಮಾಡಬೇಕು. ಇಂತಹ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಜತೆಗೆ ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ಥಳೀಯಾಡಳಿತದ ಮುಖ್ಯಾಧಿಕಾರಿಗಳ ಸಹಕಾರ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು ಅರೆಕಾಲಿಕವಾಗಿ ಹೊರಗೆ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ವಸತಿ ನಿಲಯಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಬೇಕು. ಬಾಲಕಾರ್ಮಿಕರನ್ನು ನಿಯೋಜಿಸದಂತೆ ವಾಣಿಜ್ಯ ಸಂಸ್ಥೆಗಳು ಹಾಗೂ ಉದ್ದಿಮೆಗಳಿಗೆ ಪರವಾನಿಗೆ ನೀಡುವ ಸಂದರ್ಭದಲ್ಲಿ ಈ ಕುರಿತು ಮುಚ್ಚಳಿಕೆ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.

    ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಾರ್ಚ್ ತಿಂಗಳಿನಿಂದ ಇದುವರೆಗೆ ಒಟ್ಟು 427 ತಪಾಸಣೆಗಳನ್ನು ಕೈಗೊಳ್ಳಲಾಗಿದ್ದು, ಮೂರು ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ. ಎಲ್ಲಾ ಮೂರು ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. 2016-17ನೇ ಸಾಲಿನಲ್ಲಿ 11, 17-18ನೇ ಸಾಲಿನಲ್ಲಿ 5 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗಿದೆ. ಅಪಾಯಕಾರಿಯಲ್ಲದ ಕೆಲಸದಲ್ಲಿ 14 ವರ್ಷಕ್ಕಿಂತ ಕೆಳಗಿನ ಮಕ್ಕಳು ಹಾಗೂ ಅಪಾಯಕಾರಿ ವಲಯದಲ್ಲಿ 18 ವರ್ಷದ ಒಳಗಿನ ಮಕ್ಕಳನ್ನು ನೇಮಕ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ, ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ರಘುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಪಾಂಚಾಳ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.