ಚಾಮರಾಜನಗರ: ಭಿಕ್ಷೆ ಬೇಡುವವಳಿಗೆ ಮಗು ಕೊಟ್ಟು ತಾಯಿ ಕಣ್ಣೀರಿಟ್ಟಿದ್ದಾರೆ. ಅಪರಿಚಿತ ಮಹಿಳೆ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಬಸ್ ನಿಲ್ದಾಣದಲ್ಲಿ ಎರಡೂವರೆ ವರ್ಷದ ಮಗುವನ್ನು ಅಪರಿಚಿತ ಮಹಿಳೆ ಎತ್ತಿಕೊಂಡು ಪರಾರಿಯಾಗಿದ್ದಾಳೆ. ರಾಮನಗರ ಜಿಲ್ಲೆಯ ಅನಿತಾ (26) ಎಂಬಾಕೆಯ ಮಗು ಕಾಣೆಯಾಗಿದೆ.
ಮನೆಯರಿಗೆ ಹೇಳದೆ ಅನಿತಾ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಅಪರಿಚಿತ ಮಹಿಳೆಯ ಪರಿಚಯವಾಗಿದೆ. ಆಕೆಯ ಜೊತೆಗೆ ಚಾಮರಾಜನಗರಕ್ಕೆ ಅನಿತಾ ಬಂದಿದ್ದರು. ಮಗುವನ್ನು ಕೊಡು ಭಿಕ್ಷೆ ಬೇಡಿಕೊಂಡು ಬರುತ್ತೇನೆಂದು ಅಪರಿಚಿತ ಮಹಿಳೆ ಕೇಳಿದ್ದಾಳೆ. ಅದಕ್ಕೆ ತಾಯಿ ಅನಿತಾ ಮಗುವನ್ನು ಕೊಟ್ಟಿದ್ದಾರೆ.
ಮಗುವನ್ನು ಕರೆದೊಯ್ದಿದ್ದ ಅಪರಿಚಿತ ಮಹಿಳೆ ವಾಪಸ್ ಬಾರದೆ ಪರಾರಿಯಾಗಿದ್ದಾಳೆ. ಈ ಸಂಬಂಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಎತ್ತಿಕೊಂಡು ಮಹಿಳೆ ಭಿಕ್ಷೆ ಬೇಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗುವಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬೆಳಗಾವಿ: ಮಕ್ಕಳ ಕಳ್ಳರ (Child Theft) ಮೇಲೆ ಅಥಣಿ ಪೋಲಿಸರು (Athani Police) ಫೈರಿಂಗ್ (Firing) ಮಾಡಿ ಇಬ್ಬರು ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ.
ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದ ಮಹಾರಾಷ್ಟ್ರ ಗಡಿಯಲ್ಲಿ (Maharashtra Border) ಮಕ್ಕಳ ಕಳ್ಳರನ್ನು ತಡೆಗಟ್ಟಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಓರ್ವ ಆರೋಪಿಯ ಎಡಗಾಲಿಗೆ ಗುಂಡೇಟು ಹೊಡೆದು ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ಗಾಯಾಳುವನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಕೂಡಲೇ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು ಮೂರು ತಂಡಗಳನ್ನು ಮಾಡಿಕೊಂಡು ಹುಡುಕಾಟ ನಡೆಸಿದರು. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಮಕ್ಕಳ ಕಳ್ಳರನ್ನು ಪೊಲೀಸರು ತಡೆಗಟ್ಟಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ..
ಪೊಲೀಸರು ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಆರೋಪಿ ಸಂಬಾಜಿ ರಾವಸಾಬ ಕಾಂಬಳೆಯ ಎಡಗಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬೆಳಗಾವಿ ಎಸ್ ಪಿ ಭೀಮಶಂಕರ್ ಗುಳೆದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಯಾದ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ ಗಾಯಗೊಂಡಿದ್ದು ಅವರನ್ನು ಅಥಣಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಯಚೂರಿನಿಂದ ಬೆಂಗಳೂರಿಗೆ ಉದ್ಯಾನ ಎಕ್ಪ್ರೆಸ್ (Udyan Express) ರೈಲಿನಲ್ಲಿ ದಂಪತಿ ತಮ್ಮ ಎರಡು ಮಕ್ಕಳೊಂದಿಗೆ ಗುಳೆ ಹೊರಟಿದ್ದರು. ಅದೇ ರೈಲಿನಲ್ಲಿ ಕಲಬುರಗಿ (Kalaburagi) ಮೂಲದ ರೂಪೇಶ್ ಹಾಗೂ ಕುಸುಮ ದಂಪತಿ ಪ್ರಯಾಣಿಸುತ್ತಿದ್ದರು. ರೂಪೇಶ್ ಮತ್ತು ಕುಸುಮ ಪಕ್ಕದ ಸೀಟಿನಲ್ಲಿ ಕುಳಿತು ಮಗುವಿನೊಂದಿಗೆ ಆತ್ಮೀಯತೆ ಬೆಳೆಸಿಕೊಂಡು ಬಿಸ್ಕೆಟ್ ಕೊಟ್ಟಿದ್ದರು. ರಾತ್ರಿ ಮಗುವಿನ ತಂದೆ, ತಾಯಿ ಮಲಗಿದಾಗ ಆಂಧ್ರಪ್ರದೇಶದ ಅನಂತಪುರ ರೈಲು ನಿಲ್ದಾಣದಲ್ಲಿ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದರು. ಅಲ್ಲಿಂದ ಮಗುವನ್ನು ಬಸ್ಸಿನಲ್ಲಿ ಮಂತ್ರಾಲಯಕ್ಕೆ (Mantralaya) ಕರೆದೊಯ್ದು ಕೂದಲು ಕತ್ತರಿಸಿದ್ದರು. ಬಳಿಕ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಗುವಿನೊಂದಿಗೆ ಓಡಾಡುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ.
ವಿಚಾರಣೆ ನಡೆಸಿದಾಗ 22 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮಕ್ಕಳಾಗದ ಹಿನ್ನೆಲೆ ಮಗು ಕದ್ದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಆದ್ದರಿಂದ ಸಹ ಪ್ರಯಾಣಿಕನಿಗೆ ದತ್ತು ತೆಗೆದುಕೊಳ್ಳಲು ಮಗು ಸಿಕ್ಕರೆ ತಿಳಿಸಿ ಎಂದು ಮೊಬೈಲ್ ನಂಬರ್ ಕೂಡ ಕೊಟ್ಟಿದ್ದರು. ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ ದಂಪತಿಯಿರುವ ಜಾಗ ತಿಳಿದು ಬಂದಿದೆ. ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಗುವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.ಇದನ್ನೂ ಓದಿ: ದರೋಡೆಗೆ ಹೋಗಿ ನೇಪಾಳಿ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಭಾರತೀಯ ಮೂಲದ ವ್ಯಕ್ತಿ
ಮಗುವಿಗೆ ಮತ್ತು ಬರುವ ಔಷಧಿ ನೀಡಿ ಕರೆದೊಯ್ದಿರುವ ಶಂಕೆಯಿದ್ದು, ಈ ಸಂಬಂಧ ಆಂಧ್ರಪ್ರದೇಶದ ಅನಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ: ನರ್ಸ್ ವೇಷ ಧರಿಸಿ ಬಂದು ಒಂದು ದಿನದ ನವಜಾತ ಶಿಶುವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ (Haveri) ಮಹಿಳಾ ಠಾಣಾ ಪೊಲೀಸರು ಮಗುವನ್ನು ಪತ್ತೆ ಹಚ್ಚಿದ್ದಾರೆ. ಶನಿವಾರ ಸಂಜೆ ಐದು ಗಂಟೆಯಿಂದ ಆರೂವರೆ ಗಂಟೆಯ ಸಮಯದಲ್ಲಿ, ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಅಜ್ಜಿಯನ್ನು ಯಾಮಾರಿಸಿ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿದ್ದಳು.
ಒಂದು ದಿನದ ಹೆಣ್ಣು ಮಗು ನಾಪತ್ತೆ ಆಗಿದ್ದ ಹಿನ್ನೆಲೆ ಮಗುವಿನ ಅಜ್ಜ ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮಗುವನ್ನು ತೆಗೆದುಕೊಂಡು ಹೋದ ಮಹಿಳೆ ಮತ್ತು ಮಗುವಿನ ಚಹರೆ ಪಟ್ಟಿಯ ಆಧಾರದ ಮೇಲೆ ಮತ್ತು ಜಿಲ್ಲಾಸ್ಪತ್ರೆಯಲ್ಲಿನ (District Hospital) ಸಿಸಿಟಿವಿ (CCTV) ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆಗೆ ಇಳಿದ ಹಾವೇರಿ ಮಹಿಳಾ ಠಾಣಾ ಪೊಲೀಸರು ನಾಪತ್ತೆಯಾಗಿದ್ದ ಹಸುಗೂಸನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ಹೆತ್ತವರ ಮಡಿಲು ಸೇರುವಂತೆ ಮಾಡಿದ್ದಾರೆ. ಇದನ್ನೂ ಓದಿ: ಹುಟ್ಟೂರಿನ ಮಣ್ಣಲ್ಲಿ ಧ್ರುವನಾರಾಯಣ್ ಲೀನ – ರಾಜಕೀಯದ ಅಜಾತಶತ್ರು ಇನ್ನು ನೆನಪು ಮಾತ್ರ
ಮಗುವಿನೊಂದಿಗೆ ಪರಾರಿಯಾಗಿದ್ದ ಮಹಿಳೆ ತಾನು ಈ ಹಿಂದೆ ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡುತ್ತಿದ್ದೆ ಎಂದು ಹೇಳಿದ್ದಾಳೆ. ಅಲ್ಲದೇ ನರ್ಸ್ ಡ್ರೆಸ್ ಹಾಕಿಕೊಂಡು ಮಗುವನ್ನು ತೆಗೆದುಕೊಂಡು ಹೋಗಿರುವುದಾಗಿಯೂ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ
ತಾನು ಹಾವೇರಿ ನಗರದ ನಾಗೇನಮಟ್ಟಿ (Nagenammati) ನಿವಾಸಿಯಾಗಿದ್ದು, ಐದು ವರ್ಷಗಳಿಂದ ಮಕ್ಕಳಾಗದ ಕಾರಣ ಮಗುವನ್ನು ತೆಗೆದುಕೊಂಡು ಹೋಗಿದ್ದೆ. ಮಗು ನೋಡಿ ಆಸೆಯಾಯಿತು. ಮಗುವನ್ನು ಕಳ್ಳತನ ಮಾಡಿ ಮಣ್ಣು ತಿನ್ನುವ ಕೆಲಸ ಮಾಡಿಬಿಟ್ಟೆ. ಮಗು ಅಳುವುದನ್ನು ನೋಡಿ ರಾತ್ರಿಯೇ ಹೆತ್ತವರಿಗೆ ವಾಪಸ್ ಕೊಡಬೇಕು ಎಂದು ಬಂದೆ. ಆದರೆ ಧೈರ್ಯ ಸಾಕಾಗದ ಕಾರಣ ವಾಪಸ್ ಹೋದೆ ಎಂದು ಪೊಲೀಸರ ಬಳಿ ಬಾಯಿ ಬಿಟ್ಟಿದ್ದಾಳೆ. ಈ ಕುರಿತು ಪೊಲೀಸರು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಬೇಗ ತಲುಪಿ!
ಒಟ್ಟಿನಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ನಾಪತ್ತೆಯಾಗಿದ್ದ ಮಗು ಕೆಲವೇ ಗಂಟೆಗಳಲ್ಲಿ ಮರಳಿ ತಾಯಿಯ ಮಡಿಲು ಸೇರಿದೆ. ಅಲ್ಪ ಸಮಯದಲ್ಲಿ ಮಗುವನ್ನು ಪತ್ತೆ ಮಾಡಿದ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಲಿಂಗಭೈರವಿ ದೇವಿಯ ಮೋರೆ ಹೋದ ಸಮಂತಾ
ಹಾವೇರಿ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಯಾಮಾರಿಸಿ ನವಜಾತ ಶಿಶುವನ್ನು (Newborn Baby) ಕಳ್ಳತನ ಮಾಡಿದ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.
ಬ್ಯಾಡಗಿ ತಾಲೂಕಿನ (Byadagi Taluk) ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬುವವರು ಶುಕ್ರವಾರ ಸಂಜೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ (District Hospital) ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಶನಿವಾರ ಸಂಜೆ ಮಹಿಳೆಯೊಬ್ಬಳು ನರ್ಸ್ ವೇಷದಲ್ಲಿ ಬಂದು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಶಿಶುವಿನ ಅಜ್ಜಿಯನ್ನು ಯಾಮಾರಿಸಿ ಮಗುವನ್ನು ಕಳ್ಳತನ ಮಾಡಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ
ಶಿಶುವಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ ನರ್ಸ್ ವೇಷಧಾರಿ, ಅಜ್ಜಿ ಹಾಗೂ ಶಿಶುವನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಳು. ಮರಳಿ ಜಿಲ್ಲಾಸ್ಪತ್ರೆಗೆ ಬರುವ ಸಂದರ್ಭ ಮಾರ್ಗಮಧ್ಯದಲ್ಲಿ ಹಣ್ಣು ತೆಗೆದುಕೊಂಡು ಬರುವುದಾಗಿ ಅಜ್ಜಿಯನ್ನು ನಂಬಿಸಿ ಶಿಶುವನ್ನು ಕಳ್ಳತನ ಮಾಡಿದ್ದಾಳೆ. ಕಳ್ಳತನದ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವಜಾತ ಶಿಶುವನ್ನು ಕಳೆದುಕೊಂಡ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ
ಬೆಂಗಳೂರು: ಮಕ್ಕಳ ಕಳ್ಳ ಅಂತ ಭಾವಿಸಿ ವ್ಯಕ್ತಿಯೋರ್ವನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ, ದೊಣ್ಣೆಯಿಂದ ಹೊಡೆದು ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿ ನಡುರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತ ಕಾಲುರಾಮ್ ಅಲಿಯಾಸ್ ಬಚ್ಚನ್ರಾಮ್ ರಾಜಸ್ಥಾನ ಮೂಲದವನು ಅಂತ ತಿಳಿದುಬಂದಿದೆ.
ಕಾಟನ್ ಪೇಟೆ ಬಳಿಯ ಬಕ್ಷಿಗಾರ್ಡನ್ಗೆ ಈತ ಹೋಗಿದ್ದಾನೆ. ಈ ವೇಳೆ ಮಕ್ಕಳ ಕಳ್ಳ ಎಂದು ಶಂಕಿಸಿ ಈತನನ್ನು ಹಿಡಿದ ಸಾರ್ವಜನಿಕರು ಹೊಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪೆಟ್ಟು ತಿಂದ ಕಾಲುರಾಮ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ರು. ಆದ್ರೆ ಅದಾಗಲೇ ಆತ ಮೃತಪಟ್ಟಿದ್ದಾನೆ.
ಇದಕ್ಕೆಲ್ಲಾ ಕಾರಣ ವಾಟ್ಸಾಪ್ಗಳಲ್ಲಿ ಹರಿದಾಡ್ತಿರುವ ಒಂದು ಆಡಿಯೋ ಕ್ಲಿಪ್ ಎನ್ನಲಾಗಿದೆ. ಮಕ್ಕಳ ಕಳ್ಳರ ಬಗ್ಗೆ ಎಚ್ಚರಿಕೆ ನೀಡುವ ಈ ಆಡಿಯೋ ಕ್ಲಿಪ್ ಸುಳ್ಳು ವದಂತಿಯಷ್ಟೇ ಅಂತ ಚಿಕ್ಕಬಳ್ಳಬಳ್ಳಾಪುರ ಎಸ್ಪಿ ಸ್ಪಷ್ಟನೆ ಕೂಡಾ ಕೊಟ್ಟಿದ್ರು.