Tag: Child Welfare Department

  • ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

    ಹಾವೇರಿ: ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಪುರುಷನಿಗೆ 21 ಮತ್ತು ಮಹಿಳೆಗೆ ಮದುವೆಯಾಗಲು ಹಿಂದೂ ವಿವಾಹ ಕಾಯ್ದೆ ಪ್ರಕಾರ 18 ವರ್ಷ ವಯಸ್ಸಾಗಿರಬೇಕು. ಅದರೆ ಜಿಲ್ಲೆಯ ಸವಣೂರು ತಾಲೂಕಿನ ತೆಗ್ಗಿಹಳ್ಳಿಯ ಗ್ರಾಮದಲ್ಲಿ ಹದಿನಾರು ವರ್ಷದ ಬಾಲಕಿಗೆ ಮದುವೆ ಮಾಡಲು ಬಾಲಕಿಯ ಪೋಷಕರು ಸಿದ್ಧತೆ ನಡೆಸಿದ್ದರು. ಇದನ್ನು ಅರಿತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ್ದಾರೆ.

    ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮದ ಯುವಕ ಮಂಜುನಾಥ ಭಜಂತ್ರಿ ಎಂಬ ಯುವಕನಿಗೆ ಆತನ ಮನೆಯವರು ಹಾವೇರಿ ನಗರದ 16 ವರ್ಷದ ಬಾಲಕಿಯೊಂದಿಗೆ ಮದುವೆ ಫಿಕ್ಸ್ ಮಾಡಿದ್ದರು. ಮಂಜುನಾಥನ ಮನೆಯಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿತ್ತು. ಇಂದು ತೆಗ್ಗಿಹಳ್ಳಿ ಗ್ರಾಮದಲ್ಲಿ ಮದುವೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. 16 ವರ್ಷದ ಬಾಲಕಿಗೆ ಮದುವೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಶಿಶು ಅಭಿವೃದ್ಧಿ ಅಧಿಕಾರಿಗಳು ಮಂಜುನಾಥನ ಮನೆಗೆ ಭೇಟಿ ನೀಡಿ ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಯಾವುದೇ ಕಾರಣಕ್ಕೂ ಹದಿನಾರು ವರ್ಷದ ಬಾಲಕಿಗೆ ಮದುವೆ ಮಾಡಲು ಬಿಡುವುದಿಲ್ಲ ಎಂದು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಕಾನೂನು ಮೀರಿ ಮದುವೆ ಮಾಡಿಕೊಂಡರೆ ಕಾನೂನು ಪ್ರಕಾರ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಮಂಜುನಾಥ್ ಮನೆಯವರಿಗೆ ಎಚ್ಚರಿಕೆ ನೀಡಿ ಅಧಿಕಾರಿಗಳು ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ್ದಾರೆ. ಇದನ್ನೂ ಓದಿ: ಹಾವೇರಿ ನಿರ್ದೇಶಕನಿಗೆ ದಾದಾಸಾಹೇಬ್ ಫಾಲ್ಕೆ ಜ್ಯೂರಿ ಪ್ರಶಸ್ತಿ

    ಮದುವೆ ಹಿನ್ನೆಲೆಯಲ್ಲಿ ನಡೆಯುವ ಕಾರ್ಯಗಳಿಗಾಗಿ ಬಾಲಕಿಯನ್ನು ಅದಾಗಲೇ ಯುವಕನ ಮನೆಗೆ ಕರೆದುಕೊಂಡು ಬರಲಾಗಿತ್ತು. ಇನ್ನೇನು ಒಂದು ದಿನ ಕಳೆದಿದ್ದರೆ ಬಾಲಕಿಗೆ ಆಕೆಯ ಮನೆಯವರು ಮದುವೆ ಮಾಡುತ್ತಿದ್ದರು. ಬಾಲಕಿಗೆ ಮದುವೆ ಮಾಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ವರ ಮಂಜುನಾಥನ ಮನೆಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಬಾಲ್ಯ ವಿವಾಹ ಮಾಡದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಾಲಕಿಗೆ ಮದುವೆ ಮಾಡುವುದಿಲ್ಲವೆಂದು ಬಾಲಕಿ ಮನೆಯವರಿಂದ ಅಧಿಕಾರಿಗಳು ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದಾರೆ. ನಂತರ ಬಾಲಕಿಯನ್ನು ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಸೇರಿಸಲಾಗಿದೆ.

    ಯಾರೂ ಕೂಡ 18 ವರ್ಷ ತುಂಬದ ಹೆಣ್ಣು ಮಕ್ಕಳಿಗೆ ಮದುವೆ ಮಾಡಬಾರದು. ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಯಾರಾದರೂ ಬಾಲ್ಯ ವಿವಾಹ ಮಾಡುತ್ತಿರುವುದು ಕಂಡುಬಂದರೆ ಇಲಾಖೆ ಗಮನಕ್ಕೆ ತರುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

  • ಯುವಕನ ಆರತಕ್ಷತೆ ತಡೆದ ಅಧಿಕಾರಿಗಳು- ವರನ ತಂಗಿಗೂ ವಧುವಿನ ಅಣ್ಣನಿಗೂ ಮದ್ವೆ ಮಾಡಿಸಿದ್ರು!

    ಯುವಕನ ಆರತಕ್ಷತೆ ತಡೆದ ಅಧಿಕಾರಿಗಳು- ವರನ ತಂಗಿಗೂ ವಧುವಿನ ಅಣ್ಣನಿಗೂ ಮದ್ವೆ ಮಾಡಿಸಿದ್ರು!

    ಕೋಲಾರ: ಯುವಕನ ಆರತಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಮಂಗಳವಾರ ರಾತ್ರಿ ಜಿಲ್ಲೆಯ ಬಂಗಾರಪೇಟೆಯ ಬಾಲಮುರುಗನ್ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ನಡೆಯುತ್ತಿತ್ತು. ಆದ್ರೆ ಕೋಲಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿ ರಾಜೇಶ್ ಹಾಗೂ ಬಂಗಾರಪೇಟೆ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರತಕ್ಷತೆ ತಡೆದಿದ್ದಾರೆ.

    ಬಂಗಾರಪೇಟೆಯ ವರ ಅಜಯ್ ಕುಮಾರ್ ಮತ್ತು ವಧು ವೇದವತಿಗೆ ಆರತಕ್ಷತೆ ನಿಶ್ಚಯವಾಗಿತ್ತು. ಆದರೆ ವರ ಅಜಯ್ ಕುಮಾರ್ ಗೆ 21 ವರ್ಷ ತುಂಬದ ಹಿನ್ನೆಲೆಯಲ್ಲಿ ಆರತಕ್ಷತೆಯನ್ನು ತಡೆಯಲಾಗಿದೆ. ಆದ್ರೆ ಹಿರಿಯರು ಮದುವೆ ನಿಲ್ಲಿಸಬಾರದು ಎಂದು ಯೋಚಿಸಿದ್ದು, ಒಪ್ಪಂದದ ಮೇರೆಗೆ ಅಲ್ಲಿಯೇ ಇದ್ದಂತಹ ವೇದವತಿ ಅಣ್ಣ ವೇಣು ಹಾಗೂ ವರ ಅಜಯ್ ಕುಮಾರ್ ತಂಗಿ ಅಶ್ವಿನಿಗೆ ಆರತಕ್ಷತೆಯನ್ನು ನಡೆಸಲಾಗಿದೆ. ಇಂದು ಈ ಜೋಡಿಯ ಮದುವೆ ನಡೆದಿದೆ.

    ವರ ಅಜಯ್ ಕುಮಾರ್ ಗೆ ಮದುವೆ ವಯಸ್ಸು ತುಂಬುವವರೆಗೆ ಮದುವೆ ಮಾಡದಂತೆ ಮುಚ್ಚಳಿಕೆ ಬರೆಸಿಕೊಂಡು ಅಧಿಕಾರಿಗಳು ಪ್ರಕರಣವನ್ನು ಸುಖಾಂತ್ಯ ಮಾಡಿದ್ದಾರೆ.