Tag: children died

  • ಪಾತ್ರೆ ತೊಳೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಮಕ್ಕಳಿಬ್ಬರು ಸಾವು!

    ಪಾತ್ರೆ ತೊಳೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಮಕ್ಕಳಿಬ್ಬರು ಸಾವು!

    ಆನೇಕಲ್: ಪಾತ್ರೆ ತೊಳೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಮಕ್ಕಳಿಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಟಿ.ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

    ಶ್ರಾವಣಿ (12), ಅರ್ಚನಾ (9) ಮೃತ ಮಕ್ಕಳು.

    ಇಬ್ಬರು ಹೆಣ್ಣುಮಕ್ಕಳ ಪೋಷಕರು ಬಡ ಕುಟುಂಬದವರಾಗಿದ್ದು, ಗ್ರಾಮದ ಹೊರಭಾಗದಲ್ಲಿ ಮನೆ ಕಟ್ಟಿಕೊಂಡು ಕೃಷಿಯ ಜತೆಗೆ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಮಂಗಳವಾರ ಮಕ್ಕಳನ್ನು ಮನೆಯಲ್ಲೇ ಬಿಟ್ಟು ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದರು. ಮನೆಗೆ ಹೊಂದಿಕೊಂಡಿರುವ ಕೃಷಿ ಹೊಂಡದ ಬಳಿ ಪಾತ್ರೆಗಳನ್ನು ತೊಳೆಯಲೆಂದು ಹೋಗಿದ್ದಾಗ ಅರ್ಚನಾ ಹೊಂಡದಲ್ಲಿ ಬಿದ್ದಿದ್ದಾಳೆ. ಈಕೆಯನ್ನು ರಕ್ಷಣೆ ಮಾಡಲು ಹೋಗಿ ಅಕ್ಕ ಶ್ರಾವಣಿ ಕೂಡ ಹೊಂಡದಲ್ಲಿ ಬಿದ್ದು ಇಬ್ಬರೂ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನಿಮ್ಮ ಪಾದಕ್ಕೆ ನಮಸ್ಕಾರ ಮಾಡ್ತೀನಿ, ಪುನೀತ್‍ಗೆ ಕೆಟ್ಟ ಹೆಸ್ರು ತರಬೇಡಿ: ರಾಘವೇಂದ್ರ ರಾಜ್ ಕುಮಾರ್

    ಈ ಮಕ್ಕಳ ಚಿಕ್ಕಮ್ಮ ಹೊಲದಲ್ಲಿ ಮೇವಿಗಾಗಿ ಬಂದು ಮನೆಯಲ್ಲಿ ನೋಡಿದಾಗ ಮಕ್ಕಳು ಕಾಣದ ಬಗ್ಗೆ ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ಕೂಲಿಗೆ ಹೋಗಿದ್ದ ತಾಯಿಗೆ ಕರೆ ಮಾಡಿ ಮಕ್ಕಳು ಮನೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಶಾಲೆಗೆ ಹೋಗದೆ ಮನೆಯಲ್ಲಿದ್ದ ಮಕ್ಕಳಿಗಾಗಿ ಹುಡುಕಾಟ ನಡೆಸಿದಾಗ ಕೊನೆಗೆ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರು ವಿವಿಯಲ್ಲಿ ಹೊಸ 30 ಕೋರ್ಸ್ ಆರಂಭ

    ಕೃಷಿ ಹೊಂಡಗಳನ್ನು ನಿರ್ಮಿಸುವಾಗ ಹೊಂಡದ ಸುತ್ತ ರಕ್ಷಣೆ ಬೇಲಿಯನ್ನು ನಿರ್ಮಿಸಬೇಕು ಎಂಬ ಸರ್ಕಾರದ ಆದೇಶವಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದಾರೆ. ಕೃಷಿ ಹೊಂಡವನ್ನು ತುಂಬಾ ಆಳಕ್ಕೆ ತೊಡುವ ಕಾರಣ ಚಿಕ್ಕ ವಯಸ್ಸಿನ ಮಕ್ಕಳು ಬಿದ್ದರೆ ಮೇಲೆ ಬರುವುದು ಕಷ್ಟ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಈ ದುರಂತ ಸಂಭವಿಸಿದೆ. ಕೂಡಲೇ ಹೊಂಡದ ಒಂದು ಬದಿಯಲ್ಲಿ ರಕ್ಷಣೆಗಾಗಿ ಒಂದು ಹಗ್ಗ ಅಥವಾ ಗಾಳಿ ತುಂಬಿದ ರಬ್ಬರ ಟ್ಯೂಬ್ ವ್ಯವಸ್ಥೆ ಕಲ್ಪಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ತುಮಕೂರು ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್ ಪ್ರಕರಣ- ನಾಲ್ವರು ಆರೋಪಿಗಳಿಗೆ ಜಾಮೀನು

    ತುಮಕೂರು ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್ ಪ್ರಕರಣ- ನಾಲ್ವರು ಆರೋಪಿಗಳಿಗೆ ಜಾಮೀನು

    ತುಮಕೂರು: ವಿಷ ಆಹಾರ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಪೈಕಿ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

    ಪ್ರಕರಣದ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಅವರಲ್ಲಿ ನಾಲ್ವರು ಆರೋಪಿಗಳನ್ನು ಶುಕ್ರವಾರ ರಾತ್ರಿ ಚಿಕ್ಕನಾಯಕನಹಳ್ಳಿಯ ಒಂದನೇ ಜೆಎಂಎಪ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪೈಕಿ ಶಾಲಾ ಮಾಲಿಕ, ಮಾಜಿ ಶಾಸಕ ಕಿರಣ್ ಕುಮಾರ್ (01) ಮತ್ತು ಪತ್ನಿ ಕವಿತಾ ಕಿರಣ್ (02) ಇನ್ನೂ ನಾಪತ್ತೆಯಾಗಿದ್ದಾರೆ.

    ಉಳಿದಂತೆ ವಾರ್ಡ್‍ನ್ ಸುಹಾಸ್ (03), ಅಡುಗೆ ಸಹಾಯಕ ಜಗದೀಶ್(04), ಅಡುಗೆ ಭಟ್ಟ ಶಿವಣ್ಣ (05), ಅಡುಗೆ ಸಹಾಯಕಿ ರಂಗಲಕ್ಷ್ಮಿಮ್ಮ(06) ಇವರಿಗೆ ಜಾಮೀನು ಮುಂಜೂರಾಗಿದೆ. ಈ ನಡುವೆ ನಿನ್ನೆ ಜಿಲ್ಲಾಸ್ಪತ್ರೆಗೆ ಆಗಮಿಸಿದ್ದ ಕಿರಣ್ ಕುಮಾರ್ ಅವರನ್ನು ಪೊಲೀಸರೇ ರಕ್ಷಣೆ ನೀಡಿ ಬಚಾವ್ ಮಾಡಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಆಗಮಿಸಿದ್ದ ಸಚಿವ ಜಯಚಂದ್ರ ಕಣ್ಣೀರಿಟ್ಟು ಭಾವೋದ್ವೇಗಕ್ಕೊಳಗಾಗಿದ್ದರು. ಆಕಾಂಕ್ಷ್ ಮತ್ತು ಶ್ರೇಯಸ್ಸ ಜಯಚಂದ್ರ ಸಂಬಂಧಿಗಳು.

    ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದ ಅಂತಾ ತಿಳಿದುಬಂದಿತ್ತು. ಘಟನೆ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಇದರಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಕೋರ್ಟ್ ಇವರಿಗೆ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.