Tag: Childrens

  • ಕ್ರಿಕೆಟ್ ನಂತ್ರ ಮಕ್ಕಳ ಜೊತೆ ವಾಲಿಬಾಲ್ ಆಡಿದ ಸಿದ್ದಲಿಂಗ ಶ್ರೀ

    ಕ್ರಿಕೆಟ್ ನಂತ್ರ ಮಕ್ಕಳ ಜೊತೆ ವಾಲಿಬಾಲ್ ಆಡಿದ ಸಿದ್ದಲಿಂಗ ಶ್ರೀ

    ತುಮಕೂರು: ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮತ್ತೊಮ್ಮೆ ಮಕ್ಕಳ ಜೊತೆ ಆಟವಾಡಿ ಎಲ್ಲರ ಗಮನ ಸೆಳೆದಿದ್ದಾರೆ.

    ಸಿದ್ದಲಿಂಗ ಶ್ರೀಗಳು ಮಕ್ಕಳ ಜೊತೆ ವಾಲಿಬಾಲ್ ಆಡುವ ಮೂಲಕ ಅವರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಪ್ರತಿ ದಿನ ಮಕ್ಕಳು ಶಾಲೆ ಮುಗಿಸಿ ಮೈದಾನದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಅಲ್ಲಿಗೆ ವಾಕ್‍ಗೆ ಹೋಗಿದ್ದ ಸಿದ್ದಲಿಂಗ ಶ್ರೀಗಳು, ಮಕ್ಕಳ ಜೊತೆ ಆಟದಲ್ಲಿ ಸೇರಿಕೊಂಡಿದ್ದಾರೆ. ಸಿದ್ದಲಿಂಗ ಶ್ರೀಗಳು ಅರ್ಧ ಗಂಟೆಗೂ ಹೆಚ್ಚು ಕಾಲ ವಾಲಿಬಾಲ್ ಆಡಿದ್ದಾರೆ. ಇದರಿಂದ ಮಕ್ಕಳು ಫುಲ್ ಖುಷಿಯಾಗಿದ್ದಾರೆ.

    ಬುಧವಾರ ಸಂಜೆ ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದು ಶ್ರೀಗಳು ಮಕ್ಕಳೊಟ್ಟಿಗೆ ತಾವೂ ಕೂಡ ಕ್ರಿಕೆಟ್ ಆಡಿ ಖುಷಿ ಪಟ್ಟಿದ್ದರು. ಸಿಕ್ಸರ್ ಮೇಲೆ ಸಿಕ್ಸರ್ ಭಾರಿಸಿ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಶ್ರೀಗಳು ಬ್ಯಾಟ್ ಹಿಡಿದು ಸಿಕ್ಸರ್ ಬಾರಿಸುತ್ತಿದ್ದಂತೆ ಮಕ್ಕಳು ಸಿಕ್ಕಾಪಟ್ಟೆ ಖುಷಿಪಟ್ಟಿದ್ದರು.

    ಇಷ್ಟು ದಿನ ಶ್ರೀಗಳಾಗಿ ಮಾತ್ರ ವಿದ್ಯಾರ್ಥಿಗಳು ಸಿದ್ದಲಿಂಗ ಸ್ವಾಮೀಜಿ ಅವರನ್ನು ನೋಡಿದ್ದರು. ಆದರೆ ಸ್ವಾಮೀಜಿ ಕೂಡ ಇಷ್ಟೊಂದು ಚೆನ್ನಾಗಿ ಕ್ರಿಕೆಟ್ ಹಾಗೂ ವಾಲಿಬಾಲ್ ಆಡುತ್ತಾರೆ ಎಂಬ ಸಂಗತಿ ಬಹುತೇಕ ಮಂದಿಗೆ ಗೊತ್ತಿರಲಿಲ್ಲ.

  • ಶಾಲಾ ಆವರಣವಾಯ್ತು ಕೆರೆ – ಭಾರೀ ಮಳೆಗೆ 3 ಅಂತಸ್ತಿನ ಕಟ್ಟಡ ನೆಲಸಮ

    ಶಾಲಾ ಆವರಣವಾಯ್ತು ಕೆರೆ – ಭಾರೀ ಮಳೆಗೆ 3 ಅಂತಸ್ತಿನ ಕಟ್ಟಡ ನೆಲಸಮ

    ಹುಬ್ಬಳ್ಳಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆ ನಗರದ ಹಲವೆಡೆ ಅವಾಂತರ ಸೃಷ್ಟಿಸಿದೆ. ಮಳೆಯಿಂದಾಗಿ ಶಾಲಾ ಅವರಣದಲ್ಲಿ ನೀರು ತುಂಬಿ ಕೆರೆಯಂತಾಗಿ ಮಕ್ಕಳು ಪರದಾಡುವಂತಾಗಿದೆ.

    ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣಕ್ಕೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಸಿದೆ. ನೀರು ನಿಂತ ಪರಿಣಾಮ ಮಕ್ಕಳು ಆವರಣದಿಂದ ತರಗತಿಗಳಿಗೆ ಹೋಗಲು ಪರಡಾಡುತ್ತಿದ್ದಾರೆ. ಮಳೆಯ ನೀರಿನಲ್ಲಿಯೇ ಕೆಸರು ಮಯವಾಗಿ ಮಕ್ಕಳು ತರಗತಿಗೆ ಹೋಗುತ್ತಿದ್ದಾರೆ.

    ಅಷ್ಟೇ ಅಲ್ಲದೆ ಸತತ ಎರಡು ದಿನಗಳ ಮಳೆ ಹಿನ್ನೆಲೆ ಮೂರು ಅಂತಸ್ತಿನ ಕಟ್ಟಡವೊಂದು ನೆಲಸಮವಾಗಿದೆ. ಹುಬ್ಬಳ್ಳಿಯ ಬಾರ್ದನ್‍ಗಲ್ಲಿಯಲ್ಲಿದ್ದ ಕಟ್ಟದ ಕುಸಿದಿದೆ. ನಗರದ ನಿವಾಸಿ ಸಂತೋಷ ಉಗರಗೋಳ ಅವರಿಗೆ ಸೇರಿದ ವಾಣಿಜ್ಯ ಕಟ್ಟಡ ಸತತ ಮಳೆಗೆ ನೆಲಕ್ಕೆ ಉರುಳಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

  • ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್

    ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್

    ಮುಂಬೈ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

    ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಇದನ್ನೂ ಓದಿ: ಕೇರಳ ಸಂತ್ರಸ್ತರಿಗೆ ಆಸರೆಯಾದ ಸನ್ನಿ ಲಿಯೋನ್!

    ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ. ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಆಸರೆಯಾದ ಸನ್ನಿ ಲಿಯೋನ್

    ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.

    ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.

  • ಮೆದುಳಿನ ಉರಿಯೂತ ಕಾಯಿಲೆಗೆ 128 ಮಕ್ಕಳು ಬಲಿ – ಚಿಕಿತ್ಸೆಗಾಗಿ ಶೂ ಪಾಲಿಶ್ ಮಾಡಿ ಹಣ ಸಂಗ್ರಹ

    ಮೆದುಳಿನ ಉರಿಯೂತ ಕಾಯಿಲೆಗೆ 128 ಮಕ್ಕಳು ಬಲಿ – ಚಿಕಿತ್ಸೆಗಾಗಿ ಶೂ ಪಾಲಿಶ್ ಮಾಡಿ ಹಣ ಸಂಗ್ರಹ

    ಪಾಟ್ನಾ: ಮೆದುಳಿನ ತೀವ್ರ ಉರಿಯೂತ ಕಾಯಿಲೆ ಅಥವಾ ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್‍ಗೆ(ಎಇಎಸ್) ಬಿಹಾರ ತತ್ತರಿಸಿ ಹೋಗಿದ್ದು, ಇದುವರೆಗೆ ಸುಮಾರು 128 ಮಕ್ಕಳು ಈ ಮಾರಣಾಂತಿಕ ಕಾಯಿಲೆಗೆ ಬಲಿಯಾಗಿದ್ದಾರೆ. ಹೀಗಾಗಿ ಎಇಎಸ್ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗಾಗಿ ಪಾಟ್ನಾದಲ್ಲಿ ಜನ ಅಧಿಕಾರ ಛತ್ರ ಪರಿಷತ್ ಸದಸ್ಯರು ಶುಕ್ರವಾರದಂದು ಶೂ ಪಾಲಿಶ್ ಮಾಡಿ ಹಣ ಸಂಗ್ರಹಿಸಿದ್ದಾರೆ.

    ಎಇಎಸ್‍ಯಿಂದ ಮೃತಪಡುವ ಮಕ್ಕಳ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಈ ಮಧ್ಯೆ ದೇಶಾದ್ಯಂತ ಯೋಗ ದಿನಾಚರಣೆಗೆ ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಲಾಗುತ್ತದೆ. ಆದರೆ ನಾವು ಈ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗಾಗಿ ಶೂ ಪಾಲೀಶ್ ಮಾಡಿ ಹಣ ಸಂಗ್ರಹಿಸುತ್ತಿದ್ದೇವೆ ಎಂದು ಜನ ಅಧಿಕಾರ ಛತ್ರ ಪರಿಷತ್ ಸದಸ್ಯರು ಹೇಳಿದರು.

    ಒಂದೆಡೆ ದೇಶಾದ್ಯಂತ ಯೋಗ ದಿನಾಚರಣೆಗೆ ಕೋಟಿಗಟ್ಟಲೆ ಖರ್ಚು ಮಾಡಲಾಗುತ್ತಿದೆ. ಮತ್ತೊಂದೆಡೆ ಮುಜಾಫರ್‌ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸಾಕಷ್ಟು ಸಂಖ್ಯೆಯ ಹಾಸಿಗೆಗಳು, ಔಷಧಿ, ವಿದ್ಯುತ್ ಅಥವಾ ಸರಿಯಾದ ಮೂಲಭೂ ಸೌಕರ್ಯ ಸೌಲಭ್ಯಗಳಿಲ್ಲ. ಬಿಹಾರದಲ್ಲಿ ಎಇಎಸ್‍ಗೆ ಬಲಿಯಾದ ಮಕ್ಕಳ ಕುಟುಂಬಗಳಿಗೆ ಇದು ಕಪ್ಪು ದಿನವಾಗಿ ಪರಿಣಮಿಸಿದೆ. ಜನರ ಬಗ್ಗೆ ಯೋಚಿಸದೆ ರಾಜಕಾರಣಿಗಳು ತಮ್ಮನ್ನು ತಾವು ಬ್ರ್ಯಾಂಡಿಂಗ್ ಮಾಡುವಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ನಾವು ಶೂಗಳನ್ನು ಪಾಲಿಶ್ ಮಾಡಿ, ಅದರಿಂದ ಬಂದ ಹಣವನ್ನು ಮಕ್ಕಳ ಚಿಕಿತ್ಸೆಗಾಗಿ ನೀಡುತ್ತಿದ್ದೇವೆ ಎಂದು ಜನ ಅಧಿಕಾರ ಛತ್ರ ಪರಿಷತ್ ಉಪಾಧ್ಯಕ್ಷ ಮನೀಶ್ ಯಾದವ್ ತಿಳಿಸಿದರು.

    ಅಧಿಕೃತ ಮಾಹಿತಿಯ ಪ್ರಕಾರ ಈವರೆಗೆ ಮುಜಾಫರ್‌ಪುರ ಜಿಲ್ಲೆಯಲ್ಲಿ ಎಇಎಸ್ 128 ಮಕ್ಕಳು ಸಾವನ್ನಪ್ಪಿದ್ದಾರೆ. ಸರ್ಕಾರಿ ಶ್ರೀ ಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿಯೇ (ಎಸ್‍ಕೆಎಂಸಿಎಚ್) 108 ಮಕ್ಕಳು ಅಸುನೀಗಿದ್ದಾರೆ. ಕಾಯಿಲೆಯಿಂದ ಜಿಲ್ಲೆಯ ಕೇಜ್ರಿವಾಲ್ ಆಸ್ಪತ್ರೆಯಲ್ಲಿ 20 ಮಕ್ಕಳು ಕೊನೆಯುಸಿರೆಳೆದಿದ್ದಾರೆ .

    ಎಇಎಸ್ ಒಂದು ವೈರಸ್ ಕಾಯಿಲೆ. ವಿಪರೀತ ಜ್ವರ, ವಾಂತಿ, ಮೆದುಳು, ಹೃದಯ ಮತ್ತು ಮೂತ್ರಪಿಂಡದಲ್ಲಿ ಉರಿಯೂತದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವುದು ಈ ರೋಗದ ಲಕ್ಷಣಗಳಾಗಿವೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮಳೆಗಾಗಿ ಮನೆ ಮನೆಗೆ ತೆರೆಳಿ ಹಾಡಿ ಪುಟಾಣಿಗಳ ಪ್ರಾರ್ಥನೆ

    ಮಳೆಗಾಗಿ ಮನೆ ಮನೆಗೆ ತೆರೆಳಿ ಹಾಡಿ ಪುಟಾಣಿಗಳ ಪ್ರಾರ್ಥನೆ

    ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಸತತ ಮೂರು ವರ್ಷಗಳಿಂದ ಮಳೆ ಇಲ್ಲದೆ ಭೀಕರ ಬರಗಾಲ ಆವರಿಸಿದೆ. ಈ ವರ್ಷವೂ ಮುಂಗಾರು ಕೈಕೊಡುವ ಸಾಧ್ಯತೆಗಳು ಕಾಣುತ್ತಿದ್ದು, ಜಿಲ್ಲೆಯಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಈ ಮಧ್ಯೆ ಮಳೆರಾಯ ಊರಿಗೆ ಬರಲೆಂದು ಪುಟಾಣಿ ಮಕ್ಕಳು ಕೂಡ ಪ್ರಾರ್ಥನೆ ಸಲ್ಲಿಸಿದ್ದಾರೆ.

    ದೇವದುರ್ಗದ ಜಾಲಹಳ್ಳಿಯಲ್ಲಿ ಪುಟ್ಟ ಮಕ್ಕಳು ಮಳೆಗಾಗಿ ನೂತನ ರೀತಿಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಮಿಂಚಿನಂತೆ ಮಳೆರಾಯ ಭೂಮಿಗೆ ಅಪ್ಪಳಿಸಲಿ ಅಂತ ಮನೆ ಮನೆಗೆ ತೆರಳಿ ಹಾಡು ಹೇಳುತ್ತ ಬೇಸಿಗೆಯ ಬೇಗೆಯಲ್ಲಿ ಮೈಮೇಲೆ ನೀರು ಹಾಕಿಕೊಂಡು ಮಕ್ಕಳು ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಹಾಗೆಯೇ ಸ್ಥಳೀಯರು ಮಕ್ಕಳಿಗೆ ಸಾಥ್ ನೀಡಿ ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನಿಗೆ ಮನವಿ ಮಾಡಿದ್ದಾರೆ.

    ಈ ವರ್ಷ ಉತ್ತಮ ಮಳೆ ಆಗಲೆಂದು ನಗರದ ಗ್ಲೋಬಲ್ ವಿಜನ್ ಪಬ್ಲಿಕ್ ಶಾಲೆಯ ಪುಟ್ಟ ಮಕ್ಕಳು ದೇವರಿಗೆ ಪ್ರಾರ್ಥನೆ ಸಲ್ಲಿದ್ದಾರೆ. ಸ್ಕೂಲ್‍ನಲ್ಲಿ ಶಿವನ ಫೋಟೊಗೆ ವಿಶೇಷ ಪೂಜೆ ಸಲ್ಲಿಸಿ, ಓಂ ನಮಃ ಶಿವಾಯ ಶಿವನಾಮ ಜಪಿಸುತ್ತ ಪುಟ್ಟ ಪುಟ್ಟ ಮಕ್ಕಳು ಮಳೆರಾಯನಲ್ಲಿ ತಮ್ಮ ಊರಿಗೆ ಮಳೆ ಸುರಿಸುವಂತೆ ಮನವಿ ಮಾಡಿದ್ದಾರೆ.

    ಮಳೆ ಬೆಳೆ ಇಲ್ಲದೆ ಜಿಲ್ಲೆಯ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದ್ದಾರೆ. ಈ ವರ್ಷವಾದರೂ ಉತ್ತಮ ಮಳೆ ಆಗುತ್ತೆ ಅನ್ನೋ ಭರವಸೆಯಲ್ಲಿ ರೈತರು ಇದ್ದರು. ಆದರೆ ಪ್ರಸಕ್ತ ವರ್ಷವೂ ಕೂಡ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿ 15 ದಿನಗಳು ಕಳೆದರೂ ಜಿಲ್ಲೆಯಲ್ಲಿ ಮಾತ್ರ ಮಳೆಯಾಗಿಲ್ಲ. ಇನ್ನೂ ಮಳೆ ಆಗದಿರುವುದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಹೀಗಾಗಿ ಚಿಕ್ಕಮಕ್ಕಳು ಸಹ ಮಳೆಗಾಗಿ ಪೂಜೆ ಮಾಡುತ್ತಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಶಾಲಾ ಶೌಚಾಲಯದಲ್ಲಿ ಸ್ಫೋಟ- ಇಬ್ಬರು ಮಕ್ಕಳು ಸಾವು

    ಶಾಲಾ ಶೌಚಾಲಯದಲ್ಲಿ ಸ್ಫೋಟ- ಇಬ್ಬರು ಮಕ್ಕಳು ಸಾವು

    ಪ್ರಯಾಗರಾಜ್: ಬಳಸದೆ ಇದ್ದ ಶಾಲಾ ಶೌಚಾಲಯದಲ್ಲಿ ಇದ್ದಕ್ಕಿಂದಂತೆ ಸ್ಫೋಟ ಸಂಭವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಓರ್ವ ಬಾಲಕ ಗಂಭೀರ ಗಾಯಗೊಂಡ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್‍ನಲ್ಲಿ ನಡೆದಿದೆ.

    ಜಿಲ್ಲೆಯ ದುಬಾವಲ್ ಗ್ರಾಮದಲ್ಲಿರುವ ಶಾಲೆಯ ಶೌಚಾಲಯವನ್ನು ಬಳಸುತ್ತಿರಲಿಲ್ಲ. ಆದ್ದರಿಂದ ಆ ಸ್ಥಳವನ್ನು ವಸ್ತುಗಳನ್ನು ಇಡಲು ಉಪಯೋಗಿಸಲಾಗುತ್ತಿತ್ತು. ಹೀಗೆ ಸಾಸಿವೆ ಎಣ್ಣೆಯ ಡಬ್ಬಗಳಲ್ಲಿ ಸ್ಫೋಟಕ ಇರಿಸಿ ಶಾಲೆಯ ಶೌಚಾಲಯದಲ್ಲಿ ಸಂಗ್ರಹಿಸಲಾಗಿತ್ತು. ಆದರ ಮಂಗಳವಾರ ಮೂವರು ಮಕ್ಕಳು ಆಟವಾಡುತ್ತ ಶಾಲೆಯ ಶೌಚಾಲಯದ ಬಳಿ ತೆರೆಳಿದ್ದಾಗ ಸಂಗ್ರಹಿಸಿಟ್ಟಿದ್ದ ಸ್ಫೋಟಕಗಳು ಬ್ಲಾಸ್ಟ್ ಆಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಓರ್ವ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್‍ಪಿ ನರೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

    ಮೃತ ಮಕ್ಕಳನ್ನು ದುಬಾವಲ್ ಗ್ರಾಮದ ನಿವಾಸಿ ಶಿವ ಪೂಜನ್ ಬಿಂದ್ ಅವರ ಮಗ ವಿಜಯ್ ಶಂಕರ್(4) ಮತ್ತು ಮಗಳು ಸೋನಮ್(6) ಎಂದು ಗುರುತಿಸಲಾಗಿದೆ. ಹಾಗೆಯೇ ಗಾಯಗೊಂಡ ಬಾಲಕನನ್ನು ರಾಣಿ ನೆಹರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಈ ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಶೌಚಾಲಯದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿ ಇಡಲು ಕಾರಣವೇನು ಎನ್ನುವುದನ್ನ ಪತ್ತೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮೆದುಳು ಜ್ವರಕ್ಕೆ ಮೃತಪಟ್ಟ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು

    ಮೆದುಳು ಜ್ವರಕ್ಕೆ ಮೃತಪಟ್ಟ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು

    ಪಾಟ್ನಾ: ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

    ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.

    ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.

  • ಹಂಡೆ, ಬಕೆಟ್, ಟ್ಯಾಂಕಿನಲ್ಲಿ ಮುಳುಗಿಸಿ ಮೂವರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ

    ಹಂಡೆ, ಬಕೆಟ್, ಟ್ಯಾಂಕಿನಲ್ಲಿ ಮುಳುಗಿಸಿ ಮೂವರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ

    ಕೊಪ್ಪಳ: ತನ್ನ ಮೂವರು ಮಕ್ಕಳನ್ನು ಸಾಯಿಸಿದ ಬಳಿಕ ತಾಯಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾಹಕ ಘಟನೆಯೊಂದು ಕೊಪ್ಪಳದಲ್ಲಿ ನೆಡದಿದೆ.

    ಕೂಕುನೂರು ತಾಲೂಕಿನ ಯರೇ ಹಂಚಿನಾಳ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ತಾಯಿ ಯಲ್ಲಮ್ಮ ಕೂಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾಳೆ.

    ಹಿರಿಯ ಮಗಳದಾ ಅಕ್ಷತಾಳನ್ನು ನೀರು ತುಂಬಿಸುವ ಹಂಡೆಯಲ್ಲಿ ಮುಳುಗಿಸಿ ಮತ್ತು ಎರಡು ವರ್ಷದ ಮಗ ನಾಗರಾಜನನ್ನು ನೀರಿರುವ ಬಕೆಟ್ ನಲ್ಲಿ ಮುಳುಗಿಸಿ, ನಾಲ್ಕು ವರ್ಷದ ಮಗಳು ಕಾವ್ಯಳನ್ನು ನೀರಿನ ಟ್ಯಾಂಕಿಯಲ್ಲಿ ಮುಳುಗಿಸಿ ಸಾಯಿಸಿದ್ದಾಳೆ. ನಂತರ ತಾನೂ ಮನೆಯಲ್ಲೇ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಸ್ಥಳಕ್ಕೆ ಕೂಕುನೂರು ಪೊಲೀಸರು ಆಗಮಿಸಿ ಪರಿಶೀಲನೆ ನೆಡಸಿದ್ದಾರೆ. ಯಲ್ಲಮ್ಮಾ ಆತ್ಮಹತ್ಯೆಗೆ ಪತಿಯ ಕಿರುಕುಳವೇ ಕಾರಣ ಎನ್ನಲಾಗಿದೆ. ಯಲ್ಲಮ್ಮಾ ಪತಿ ಉಮೇಶ್ ದಿನನಿತ್ಯ ಕುಡಿದು ಬಂದು ಪತ್ನಿ ಮೇಲೆ ಹಲ್ಲೆ ಮಾಡುತ್ತಿದ್ದನು. ಅಷ್ಟೇ ಅಲ್ಲದೆ ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿ ಬಂದಿದೆ.

    ಪತಿಯ ಕಿರುಕುಳದಿಂದ ಯಲ್ಲಮ್ಮ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತದೆ. ಆದರೆ ಪೊಲೀಸರ ತನಿಖೆ ನಂತರ ಘಟನೆಗೆ ನಿಜವಾದ ಕಾರಣ ಏನು ಎಂಬುದು ತಿಳಿಯಬೇಕಿದೆ.

  • ಬಿಸ್ಕೆಟ್ ಕಾರ್ಖಾನೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ- 26 ಬಾಲ ಕಾರ್ಮಿಕರ ರಕ್ಷಣೆ

    ಬಿಸ್ಕೆಟ್ ಕಾರ್ಖಾನೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ- 26 ಬಾಲ ಕಾರ್ಮಿಕರ ರಕ್ಷಣೆ

    ರಾಯ್ಪುರ: ಪ್ರತಿಷ್ಠಿತ ಪಾರ್ಲೆ-ಜಿ ಬಿಸ್ಕೆಟ್ ಅಂದರೆ ಮಕ್ಕಳಿಗೆ ತುಂಬಾ ಇಷ್ಟವಾಗುತ್ತದೆ. ಅಲ್ಲದೆ ಮಕ್ಕಳಿಗೆಂದೇ ಇದು ತಯಾರಾಗುತ್ತದೆ. ಆದರೆ ಇದೇ ಬಿಸ್ಕೆಟ್ ಕಾರ್ಖಾನೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ. ಛತ್ತೀಸ್‍ಗಡದ ಪಾರ್ಲೆ-ಜಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 26 ಬಾಲ ಕಾರ್ಮಿಕರನ್ನು ಜಿಲ್ಲಾ ಕಾರ್ಯಪಡೆ ಅಧಿಕಾರಿಗಳು ರಕ್ಷಿಸಿದ್ದಾರೆ.

    ರಾಯ್ಪುರದ ಅಮಾಸಿವ್ನಿ ಪ್ರದೇಶದಲ್ಲಿ ಇರುವ ಪಾರ್ಲೆ-ಜಿ ಫ್ಯಾಕ್ಟರಿಯಿಂದ 26 ಮಕ್ಕಳನ್ನು ರಕ್ಷಿಸಲಾಗಿದೆ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಫ್ಯಾಕ್ಟರಿಯಲ್ಲಿ ನಾವು ಕಾರ್ಯಾಚರಣೆ ನಡೆಸಿ 26 ಮಕ್ಕಳನ್ನು ರಕ್ಷಿಸಿದೆವು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನವನೀತ್ ಸ್ವರ್ಣಾಂಕರ್ ತಿಳಿಸಿದ್ದಾರೆ.


    ಈ ಫ್ಯಾಕ್ಟರಿಯಲ್ಲಿ 12ರಿಂದ 16 ವರ್ಷದೊಳಗಿನ ಮಕ್ಕಳು ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿತ್ತು. ಈ ಆಧಾರದ ಮೇಲೆ ಫ್ಯಾಕ್ಟರಿಗೆ ಹೋಗಿ ಕಾರ್ಯಾಚರಣೆ ನಡೆಸಿದಾಗ ಈ ದೌರ್ಜನ್ಯ ಬೆಳಕಿಗೆ ಬಂದಿದೆ. ಮಧ್ಯ ಪ್ರದೇಶ, ಜಾರ್ಖಂಡ್, ಒಡಿಶಾ ಮತ್ತು ಬಿಹಾರ ಮೂಲದ ಮಕ್ಕಳು ಇಲ್ಲಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತಿಂಗಳಿಗೆ 5ರಿಂದ 7 ಸಾವಿರ ರೂಪಾಯಿ ವೇತನಕ್ಕೆ ಇಲ್ಲಿ ದುಡಿಯುತ್ತಿದ್ದೆವು ಎಂದು ರಕ್ಷಣೆಯಾದ ಮಕ್ಕಳು ಹೇಳಿದ್ದಾರೆ.

    ದೇಶದಲ್ಲಿ ಬ್ರಾಂಡ್ ಕಂಪೆನಿಯಾಗಿ ಗುರುತಿಸಿಕೊಂಡಿರುವ ಪಾರ್ಲೆ-ಜಿ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಜಿಲ್ಲಾ ಕಾರ್ಯ ನಿರ್ವಹಣಾಧಿಕಾರಿ ಸಮೀರ್ ಮಾಥುರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ಮಕ್ಕಳನ್ನು ರಕ್ಷಿಸಿದ ನಂತರ ಅವರನ್ನು ಸರ್ಕಾರದ ಆಶ್ರಯ ಮನೆಗೆ ಕಳುಹಿಸಲಾಗಿದ್ದು, ಫ್ಯಾಕ್ಟರಿ ಮಾಲಿಕರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಜೂನ್ 12ರಂದು ಬಾಲ ಕಾರ್ಮಿಕರ ವಿರುದ್ಧ ವಿಶ್ವ ದಿನದ ಪ್ರಯುಕ್ತ ನಾವು ಜಿಲ್ಲೆಯಲ್ಲಿ ಇರುವ ಬಾಲ ಕಾರ್ಮಿಕರ ರಕ್ಷಣೆ ಮಾಡುವ ಕಾರ್ಯಕ್ಕೆ ಕೈಹಾಕಿದ್ದೇವೆ. ಈವರೆಗೆ ಕಳೆದ 6 ದಿನಗಳಿಂದ ಜಿಲ್ಲೆಯಲ್ಲಿ 51 ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳನ್ನು ನಾವು ರಕ್ಷಿಸಿದ್ದೇವೆ ಎಂದು ನವನೀತ್ ಸ್ವರ್ಣಾಂಕರ್ ಹೇಳಿದ್ದಾರೆ.

  • ಬಟ್ಟೆ ಗೋಡೌನ್‍ನಲ್ಲಿ ಅಗ್ನಿ ಅವಘಡ- ತಾಯಿ, ಇಬ್ಬರು ಮಕ್ಕಳು ಸಾವು

    ಬಟ್ಟೆ ಗೋಡೌನ್‍ನಲ್ಲಿ ಅಗ್ನಿ ಅವಘಡ- ತಾಯಿ, ಇಬ್ಬರು ಮಕ್ಕಳು ಸಾವು

    ಚಂಢಿಗಡ್: ಬಟ್ಟೆ ಗೋಡೌನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಮಹಿಳೆ ಮೃತಪಟ್ಟ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ.

    ನೀತಾ, ಯಶಿಕಾ ಹಾಗೂ ಲಕ್ಕಿ ಮೃತ ದುರ್ದೈವಿಗಳು. ಅಗ್ನಿ ಅವಘಡದಿಂದ ಉಸಿರುಗಟ್ಟಿ ಒಂದೇ ಕುಟುಂಬದ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

    ಕೆಳಮಹಡಿಯಲ್ಲಿ ಇದ್ದ ಬಟ್ಟೆಯ ಗೋಡೌನ್‍ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಈ ಕಟ್ಟಡದ ಮೊದಲ ಹಾಗೂ ಎರಡನೇಯ ಮಹಡಿಯಲ್ಲಿ ಶಾಲೆ ನಡೆಸಲಾಗುತಿತ್ತು. ಅಲ್ಲದೆ ಶಾಲೆಯ ನಿರ್ವಾಹಕ ಎರಡನೇ ಮಹಡಿಯಲ್ಲಿರುವ ಕೋಣೆಯಲ್ಲಿ ವಾಸಿಸುತ್ತಿದ್ದರು.

    ಗ್ರೌಂಡ್ ಫ್ಲೋರ್ ನಲ್ಲಿ ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿದ ಶಾಲೆಯ ನಿರ್ವಾಹಕ ಅದನ್ನು ನಂದಿಸಲು ಕೆಳಗೆ ಬಂದಿದ್ದಾನೆ. ಮೊದಲು ಗೋಡೌನ್‍ನ ಬೀಗ ತೆಗೆದು ಬಳಿಕ ಕೆಳಗಡೆ ನಿಂತಿದ್ದ ತಮ್ಮ ಕಾರನ್ನು ಹೊರಗೆ ನಿಲ್ಲಿಸಿ ಮತ್ತೆ ಮೇಲೆ ಹೋಗಲು ಯತ್ನಿಸಿದ್ದಾನೆ.

    ನೋಡುವಷ್ಟರಲ್ಲಿ ಬೆಂಕಿ ಮೊದಲನೇ ಹಾಗೂ ಎರಡನೇ ಮಹಡಿ ತಲುಪಿದೆ. ಎರಡನೇ ಮಹಡಿಯಲ್ಲಿ ನೀತಾ ಹಾಗೂ ಅವರ ಇಬ್ಬರ ಮಕ್ಕಳು ಯಶಿಕಾ ಹಾಗೂ ಲಕ್ಕಿ ಇದ್ದರು. ಹೊಗೆ ಹರಡಿಕೊಂಡಿದ್ದ ಕಾರಣ ಮೂವರು ಕೆಳಗೆ ಬರಲು ಸಾಧ್ಯವಾಗಲಿಲ್ಲ.

    ಹೊಗೆಯಿಂದ ಮೂವರು ಪ್ರಜ್ಞೆ ಕಳೆದುಕೊಂಡಿದ್ದಾರೆ. ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದ್ದಾರೆ. ನಂತರ ಮನೆಯಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆಸ್ಪತ್ರೆ ತಲುಪುವಷ್ಟರಲ್ಲಿ ಮೂವರು ಮೃತಪಟ್ಟಿದ್ದಾರೆ.