Tag: Childrens

  • 16 ಮಕ್ಕಳನ್ನು ಹೊಂದುವ ಬಗ್ಗೆ ಯೋಚಿಸಿ – ತಮಿಳುನಾಡು ಸಿಎಂ ಸ್ಟಾಲಿನ್‌ ಕರೆ ಕೊಟ್ಟಿದ್ದೇಕೆ?

    16 ಮಕ್ಕಳನ್ನು ಹೊಂದುವ ಬಗ್ಗೆ ಯೋಚಿಸಿ – ತಮಿಳುನಾಡು ಸಿಎಂ ಸ್ಟಾಲಿನ್‌ ಕರೆ ಕೊಟ್ಟಿದ್ದೇಕೆ?

    ಚೆನ್ನೈ: ಹಿಂದಿನ ಕಾಲದಲ್ಲಿ ಹಿರಿಯರು ನವ ದಂಪತಿಗಳಿಗೆ 16 ರೂಪದ ಸಂಪತ್ತನ್ನು ಹೊಂದುವಂತೆ ಆಶೀರ್ವದಿಸುತ್ತಿದ್ದರು. ಬಹುಶಃ ಈಗ 16 ರೂಪದ ಸಂಪತ್ತಿನ ಬದಲು 16 ಮಕ್ಕಳನ್ನು (Childrens) ಹೊಂದುವಂತೆ ಆಶೀರ್ವಾದ ನೀಡುವ ಸಮಯ ಬಂದಿದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ (MK Stalin) ಹೇಳಿದ್ದಾರೆ.

    ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಕರೆ ನೀಡಿದ್ದರು. ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಹ ಜೇಳಿದ್ದರು. ಈ ಬೆನ್ನಲ್ಲೇ ತಮಿಳುನಾಡು (Tamil Nadu) ಸಿಎಂ ದಂಪತಿಗಳು ಹಚ್ಚೆಚ್ಚು ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯ ಆರಂಭ – 5 ಮಹಡಿಯ ಕಟ್ಟಡದಲ್ಲಿ 3 ಮಹಡಿ ಅಕ್ರಮ ನಿರ್ಮಾಣ

    ಚೆನ್ನೈನಲ್ಲಿ ರಾಜ್ಯದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ಆಯೋಜಿಸಿದ್ದ ಕಾರ್ಯಕ್ರಮದಲಿ 31 ಜೋಡಿಗಳ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿಸಿ ಅವರು ಮಾತನಾಡಿದರು. ತಮಿಳುನಾಡಿನಲ್ಲಿ ಹಿಂದಿನ ಕಾಲದಿಂದಲೂ ಚಾಲ್ತಿಯಲ್ಲಿ ಇರುವ ನಾಣ್ಣುಡಿ ಒಂದಿದೆ. ಹಿಂದೆ ನಮ್ಮ ಹಿರಿಯರೆಲ್ಲ 16 ವಿವಿಧ ಬಗೆಯ ಸಂಪತ್ತುಗಳನ್ನು ಹೊಂದಿರಬೇಕು ಎಂದು ಆಶೀರ್ವದಿಸುತ್ತಿದ್ದರು. ಈಗ 16 ಮಕ್ಕಳನ್ನು ಹೊಂದುವಂತೆ ಆಶೀರ್ವಾದ ಮಾಡುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

    ಮುಂದುವರಿದು, ಇವತ್ತಿನ ಪರಿಸ್ಥಿತಿಯಲ್ಲಿ ದಕ್ಷಿಣ ಭಾರತದಲ್ಲಿ ಲೋಕಸಭಾ ಸ್ಥಾನಗಳು ಕುಸಿಯುತ್ತಿದೆ. ಹೀಗಾಗಿ ಇದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ. ನಾವು ಏಕೆ ಕಡಿಮೆ ಮಕ್ಕಳನ್ನು ಹೊಂದಬೇಕು ಎಂದು ನಿರ್ಬಂಧ ಹಾಕಿಕೊಳ್ಳಬೇಕು? ನಾವೇಕೆ 16 ಮಕ್ಕಳನ್ನು ಹೊಂದುವ ಗುರಿ ಹಾಕಿಕೊಳ್ಳಬಾರದು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ರಾಮಜನ್ಮಭೂಮಿ ವಿವಾದ ಪರಿಹಾರಕ್ಕೆ ದೇವರಲ್ಲಿ ಪ್ರಾರ್ಥಿಸಿದ್ದೆ: ಸಿಜೆಐ ಚಂದ್ರಚೂಡ್‌

    ಸ್ಟಾಲಿನ್‌ ಹೇಳಿಕೆಗೆ ಕಾರಣ ಏನು?
    ಜನಸಂಖ್ಯೆ ಹೆಚ್ಚಳ ಮಾಡಿಕೊಳ್ಳಿ ಎಂದು ತಮಿಳುನಾಡು ಸಿಎಂ ಎಂ. ಕೆ. ಸ್ಟಾಲಿನ್ ಕರೆ ನೀಡೋದಕ್ಕೆ ರಾಜಕೀಯ ಕಾರಣಗಳೂ ಇವೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಉಪಕಣ; ದೋಸ್ತಿಗಳಲ್ಲಿ ಮೂಡದ ಒಮ್ಮತ – ಮುಂದಿನ ಆಯ್ಕೆ ಮುಕ್ತವಾಗಿರಿಸಿದ ಮಾಜಿ ಮಂತ್ರಿ

    ಇಂದಿನ ದಿನಗಳಲ್ಲಿ ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ಕಡಿಮೆ ಇದೆ. ಲೋಕಸಭಾ ಸದಸ್ಯ ಸ್ಥಾನಗಳು ಜನಸಂಖ್ಯೆ ಆಧಾರದ ಮೇಲೆ ನಿರ್ಧಾರ ಆಗುವ ಕಾರಣ, ಜನಸಂಖ್ಯೆ ಕಡಿಮೆ ಇರುವ ದಕ್ಷಿಣ ಭಾರತಕ್ಕೆ ಕಡಿಮೆ ಸಂಸದರು ಸಿಗುತ್ತಾರೆ. ಮುಂದಿನ ದಿನಗಳಲ್ಲಿ ಇದು ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗುತ್ತದೆ ಅನ್ನೋದು ತಮಿಳುನಾಡು ಸಿಎಂ ಕಳವಳ ಎಂದು ವಿಶ್ಲೇಷಕರು ಹೇಳಿದ್ದಾರೆ.

    ಕಳವಳ ಏಕೆ?
    ಮುಂದಿನ ದಿನಗಳಲ್ಲಿ ತಮಿಳುನಾಡು ಮತ್ತು ಇತರ ದಕ್ಷಿಣ ಭಾರತದ ರಾಜ್ಯಗಳ ಲೋಕಸಭಾ ಸ್ಥಾನಗಳ ಸಂಖ್ಯೆ ಜನಸಂಖ್ಯೆ ಹೆಚ್ಚಳದಿಂದ 753ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂಬುದು ಕೆಲವರ ಅಂದಾಜು. ಭಾರತದ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಹಾಲಿ ಕ್ಷೇತ್ರಗಳ ಸಂಖ್ಯೆ 80 ರಿಂದ 126ಕ್ಕೆ ಜಿಗಿಯುವ ಸಾಧ್ಯತೆಯಿದೆ. ದಕ್ಷಿಣದ ರಾಜ್ಯಗಳ ಪೈಕಿ, ಕರ್ನಾಟಕದಲ್ಲಿ 28 ರಿಂದ 36ಕ್ಕೆ, ತಮಿಳುನಾಡಿನಲ್ಲಿ 39ರಿಂದ 41ಕ್ಕೆ ಮತ್ತು ಆಂಧ್ರ, ತೆಲಂಗಾಣ ರಾಜ್ಯಗಳಲ್ಲಿ ತಲಾ ಮೂರು ಸ್ಥಾನಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ಉಲ್ಲೇಖಿಸಿವೆ.

  • ಕೊಪ್ಪಳದಲ್ಲಿ ಅಂಗನವಾಡಿ ಸೀಲಿಂಗ್ ಕುಸಿದು ನಾಲ್ಕು ಮಕ್ಕಳಿಗೆ ಗಾಯ

    ಕೊಪ್ಪಳದಲ್ಲಿ ಅಂಗನವಾಡಿ ಸೀಲಿಂಗ್ ಕುಸಿದು ನಾಲ್ಕು ಮಕ್ಕಳಿಗೆ ಗಾಯ

    ಕೊಪ್ಪಳ: ಅಂಗನವಾಡಿ (Anganwadi) ಕೇಂದ್ರದ ಸೀಲಿಂಗ್ (ಛಾವಣಿ) ಕುಸಿದು ಬಿದ್ದು ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ಕೊಪ್ಪಳ (Koppala) ಜಿಲ್ಲೆಯ ಗಂಗಾವತಿಯ ಮಹೆಬೂಬ ನಗರದ 7ನೇ ವಾರ್ಡ್‌ನ  11ನೇ ಅಂಗನವಾಡಿ ಕೇಂದ್ರದಲ್ಲಿ ಇಂದು (ಸೋಮವಾರ) ಬೆಳಗ್ಗೆ ನಡೆದಿದೆ.

    ಘಟನೆಯಲ್ಲಿ ನಾಲ್ಕರಿಂದ ಐದು ವರ್ಷದೊಳಗಿನ ಅಮಾನ್ ಸೈಯದ್, ಮರ್ದಾನ್, ಮಾನ್ವಿತಾ, ಸುರಕ್ಷಾ ಎಂಬ ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳು ಮಕ್ಕಳನ್ನು ಸ್ಥಳೀಯರು ತಕ್ಷಣ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಲ್ಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್‌ – ಮೊದಲ ಜಾಮೀನು ಮಂಜೂರು

    ಕಳೆದ ಮೂರು ದಿನಗಳ ರಜೆಯ ಬಳಿಕ ಇಂದು ಎಂದಿನಂತೆ ಅಂಗನವಾಡಿ ಕೇಂದ್ರ ಆರಂಭವಾಗಿದೆ. ಕೇಂದ್ರದ ಶಿಕ್ಷಕಿ ಹಸೀನಾ ಸುಮಾರು 20ಕ್ಕೂ ಹೆಚ್ಚು ಮಕ್ಕಳನ್ನು ವೃತ್ತಾಕಾರದಲ್ಲಿ ಕೂರಿಸಿ ಪಾಠ ಮಾಡುತ್ತಿದ್ದರು. ಈ ವೇಳೆ ಕಟ್ಟಡದ ಸೀಲಿಂಗ್ ಕುಸಿದು ಬಿದ್ದಿದೆ. ಘಟನೆ ನಡೆದ ಸ್ಥಳಕ್ಕೆ ನಗರಸಭೆಯ ಅಧ್ಯಕ್ಷ ಮೌಲಸಾಬ್, ವಾರ್ಡ್ ಸದಸ್ಯ ಮನೋಹರಸ್ವಾಮಿ, ಸಿಡಿಪಿಒ ಜಯಶ್ರೀ ದೇಸಾಯಿ, ಸೂಪರ್‌ವೈಸರ್ ಚಂದ್ರಮ್ಮ ಸೇರಿದಂತೆ ನಗರಸಭೆ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬಿಜೆಪಿ ಸರ್ಕಾರ ಇದ್ದಾಗ ಯಾಕೆ ಅರ್ಕಾವತಿ ರೀ ಡೂ ವರದಿಯನ್ನು ಮಂಡನೆ ಮಾಡಲಿಲ್ಲ?: ಸಿದ್ದರಾಮಯ್ಯ

  • ಉಪವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥ – ನಾಲ್ವರ ಸ್ಥಿತಿ ಚಿಂತಾಜನಕ

    ಉಪವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥ – ನಾಲ್ವರ ಸ್ಥಿತಿ ಚಿಂತಾಜನಕ

    ದಾವಣಗೆರೆ: ಪಾನಿಪುರಿ (Panipuri) ತಿಂದು 19 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ.

    ಮಲೆಬೆನ್ನೂರಿನ ಜಾಮಿಯಾ ಮಸೀದಿ ಬಳಿ ಘಟನೆ ನಡೆದಿದ್ದು, ಉಪವಾಸ (Fasting) ಅಂತ್ಯ ಮಾಡಿದ ನಂತರ ಮಸೀದಿ (Mosque) ಮುಂಭಾಗ ಮಾರಾಟ ಮಾಡುತ್ತಿದ್ದ ಪಾನಿಪುರಿ ತಿಂದು 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಪಾನಿಪುರಿ ತಿಂದು ಕೆಲವೇ ಹೊತ್ತಿನಲ್ಲಿ ವಾಂತಿಯಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಪೋಷಕರು ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

    19 ಮಕ್ಕಳ ಪೈಕಿ 4 ಮಕ್ಕಳ ಆರೋಗ್ಯ ಚಿಂತಾಜನಕವಾಗಿದೆ. ಇವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹರಿಹರ ತಹಶೀಲ್ದಾರ್ ಗುರುಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಭಾನುವಾರವೂ ತೆರೆಯಲಿದೆ ಉಪನೋಂದಣಿ ಕಚೇರಿ

  • ಮಕ್ಕಳನ್ನು ಬದುಕಿಸಲು ಉಪ್ಪಿನ ರಾಶಿಯೊಳಗೆ ಮೃತದೇಹ ಇಟ್ಟ ಪೋಷಕರು

    ಮಕ್ಕಳನ್ನು ಬದುಕಿಸಲು ಉಪ್ಪಿನ ರಾಶಿಯೊಳಗೆ ಮೃತದೇಹ ಇಟ್ಟ ಪೋಷಕರು

    ಹಾವೇರಿ: ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದ್ದ ವಿಡಿಯೋ ನೋಡಿ ಮೃತ ಮಕ್ಕಳನ್ನು ಬದುಕಿಸಲು ಪೋಷಕರು (Parents) ಹೆಣಗಾಟ ಮಾಡಿದ ಘಟನೆ ಹಾವೇರಿ (Haveri) ಜಿಲ್ಲೆ ಬ್ಯಾಡಗಿ (Byadagi) ತಾಲೂಕಿನ ಗಾಳಪೂಜಿ ಗ್ರಾಮದಲ್ಲಿ ನಡೆದಿದೆ.

    ಕಳೆದ ಎರಡು ದಿನಗಳ ಹಿಂದೆ ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಮೃತ ಮಕ್ಕಳನ್ನು ಹೇಮಂತ್ (12) ಹಾಗೂ ನಾಗರಾಜ್ (11) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ನೆಲಮಂಗಲದಲ್ಲಿ ಧಗಧಗನೇ ಹೊತ್ತಿ ಉರಿದ ಕಾರು – ಓರ್ವ ಸಜೀವ ದಹನ

    ಮೃತ ಮಕ್ಕಳ ಪೋಷಕರು ಉಪ್ಪಿನ ರಾಶಿಯಲ್ಲಿ (Pile of Salt) ಅವರ ಮೃತದೇಹ (Dead Body) ಮುಚ್ಚಿಟ್ಟು ಬದುಕಿಸಲು ಹೋರಾಟ ನಡೆಸಿದ್ದರು. ಸತತ 6 ಗಂಟೆಗಳ ಕಾಲ ಉಪ್ಪಿನ ಗುಡ್ಡೆಯಲ್ಲಿ ಮೃತದೇಹ ಇಟ್ಟು ಬದುಕಿಸುವ ಪ್ರಯತ್ನ ಮಾಡಿದ್ದರು. ಇದನ್ನೂ ಓದಿ: ಊಟದ ಮೆನುವಿನಲ್ಲಿ ಮಟನ್ ಕರ್ರಿ ಇಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ವರ!

    ಮೃತದೇಹ ಪತ್ತೆಯಾಗುತ್ತಿದ್ದಂತೆ ಮನೆಗೆ ತಂದು ಉಪ್ಪುರಾಶಿಯನ್ನು ಹಾಕಿ ಪೋಷಕರು ಬದುಕಿಸಲು ಹೆಣಗಾಟ ಮಾಡಿದ್ದಾರೆ. ಇತ್ತೀಚಿಗಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದ ಸುಳ್ಳು ವೈರಲ್ ವಿಡಿಯೋ ನೋಡಿ ಪೋಷಕರು ಹೀಗೆ ಮಾಡಿದ್ದರು. ಕಾಗಿನೆಲೆಯ ಪೊಲೀಸರು ಪೋಷಕರ ಮನವೊಲಿಸಿದ ನಂತರ ಅಂತ್ಯಕ್ರಿಯೆ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಾಗಿನಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಇದನ್ನೂ ಓದಿ: ಗ್ಯಾಸ್ ಗೀಸರ್‌ಗೆ ಮತ್ತೊಂದು ಬಲಿ – ವಿಷಾನಿಲ ಸೋರಿಕೆಯಾಗಿ ಸ್ನಾನ ಮಾಡಲು ಹೋಗಿದ್ದ ಯುವತಿ ಸಾವು

  • ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಂಡ್ರೆ ಕಠಿಣ ಶಿಕ್ಷೆ – ಖಡಕ್‌ ಸೂಚನೆ

    ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಂಡ್ರೆ ಕಠಿಣ ಶಿಕ್ಷೆ – ಖಡಕ್‌ ಸೂಚನೆ

    ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election) ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಕಾರ್ಯ ಹಾಗೂ ಪ್ರಚಾರ (Election Campaign) ಕಾರ್ಯದಲ್ಲಿ ಮಕ್ಕಳ ಬಳಕೆಯನ್ನು ನಿಷೇಧಿಸಲಾಗಿದೆ.

    ರಾಜಕೀಯ ಪಕ್ಷಗಳ ಮೆರವಣೆಗೆ, ಸಾರ್ವಜನಿಕ ಭಾಷಣ, ಮನೆ ಮನೆಗೆ ಭೇಟಿ ನೀಡುವುದು, ಪಕ್ಷದ ಚಿಹ್ನೆಯಿರುವ ಪುಸ್ತಕ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರ ಹಂಚುವುದು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ (Election Officer) ಹಾಗೂ ಜಿಲ್ಲಾಧಿಕಾರಿ ಕೆ.ಎ ದಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ

    ಕರ್ನಾಟಕ ವಿಧಾನಸಭಾ ಚುನಾವಣೆಗೆ ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಈಗಾಗಲೇ ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ

  • ಕಾಂಗ್ರೆಸ್ ಪಕ್ಷದ ರಾಜಕೀಯ ಸಭೆಯಲ್ಲಿ ಶಾಲಾ ಮಕ್ಕಳ ದುರ್ಬಳಕೆ

    ಕಾಂಗ್ರೆಸ್ ಪಕ್ಷದ ರಾಜಕೀಯ ಸಭೆಯಲ್ಲಿ ಶಾಲಾ ಮಕ್ಕಳ ದುರ್ಬಳಕೆ

    ಚಿಕ್ಕೋಡಿ: ಕಾಂಗ್ರೆಸ್ (Congress) ಪಕ್ಷದ ರಾಜಕೀಯ ಸಭೆಯಲ್ಲಿ ಮಕ್ಕಳ ದುರ್ಬಳಕೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಲ್ಲಿ ನಡೆದಿದೆ.

    ಕಾಂಗ್ರೆಸ್ ಕಾರ್ಯಕರ್ತರಿಂದ ಸಭೆಯಲ್ಲಿ ಮಕ್ಕಳ (Children) ಬಳಕೆ ಮಾಡಿಕೊಳ್ಳಲಾಗಿದೆ. ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಬಳಸಿಕೊಂಡು ಮಕ್ಕಳಿಗೆ ಕಾಂಗ್ರೆಸ್ ಶಾಲು (Shawl) ಹೊದಿಸಲಾಗಿದೆ. ಏನೂ ಅರಿಯದ ಮಕ್ಕಳ ಕೊರಳಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿದ ಪೋಟೋ ಎಲ್ಲೆಡೆ ವೈರಲ್ (Viral) ಆಗಿದೆ. ಇದನ್ನೂ ಓದಿ: ಹೆರಿಟೇಜ್, ಡೂಡ್ಲ, ಆರೋಕ್ಯ ಹಾಲಿನ ಬ್ರಾಂಡ್‍ಗಳು ನಂದಿನಿಯ ಅಕ್ಕತಂಗಿಯರಾ?: ಪ್ರತಾಪ್ ಸಿಂಹ 

    ಉಗಾರ ಖುರ್ದ ಪಟ್ಟಣದಲ್ಲಿ ಹಾಲು ಮತದ ಸಮಾಜದ ವತಿಯಿಂದ ರಾಜು ಕಾಗೆಯವರಿಗೆ (Raju Kage) ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಪೋಟೋ ವೈರಲ್ ಆದರೂ ಸಹ ಕಂಡು ಕಾಣದಂತೆ ಚುಣಾವಣಾ ಆಯೋಗ ಹಾಗೂ ತಾಲೂಕು ಆಡಳಿತ ಕುಳಿತಿದೆ. ಚುನಾವಣೆ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಳ್ಳದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಆದೇಶವಿದ್ದರೂ ಮಕ್ಕಳ ಬಳಕೆ ಮಾಡಲಾಗಿದೆ. ಇದನ್ನೂ ಓದಿ: ಮೂಲಭೂತ ಸೌಕರ್ಯ ಕೊಡದೇ ಪ್ರಚಾರಕ್ಕೆ ಬಂದ್ರೆ ವೋಟ್ ಕೊಡಲ್ಲ: ನಿಖಿಲ್‌ಗೆ ಮಹಿಳೆಯರಿಂದ ತರಾಟೆ

  • Pariksha Pe Charcha 2023: ಪೋಷಕರು ಮಕ್ಕಳಿಗೆ ಒತ್ತಡ ಹಾಕಬೇಡಿ – ವಿದ್ಯಾರ್ಥಿಗಳು ತಾಯಿಯಿಂದ ಸಮಯದ ನಿರ್ವಹಣೆ ಕಲಿಯಿರಿ: ಮೋದಿ

    Pariksha Pe Charcha 2023: ಪೋಷಕರು ಮಕ್ಕಳಿಗೆ ಒತ್ತಡ ಹಾಕಬೇಡಿ – ವಿದ್ಯಾರ್ಥಿಗಳು ತಾಯಿಯಿಂದ ಸಮಯದ ನಿರ್ವಹಣೆ ಕಲಿಯಿರಿ: ಮೋದಿ

    – ಪರೀಕ್ಷೆಯಲ್ಲಿ ನಕಲು ಮಾಡಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ

    ನವದೆಹಲಿ: ಪೋಷಕರು (Parents) ಮಕ್ಕಳಿಗೆ (Childrens) ಹೆಚ್ಚು ಒತ್ತಡ ಹಾಕಬಾರದು. ಪೋಷಕರು ಒತ್ತಡ ಹಾಕದಿದ್ದರೂ ವಿದ್ಯಾರ್ಥಿಗಳು (Students) ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕಲಿಕೆಯಲ್ಲಿ ಮುನ್ನುಗ್ಗಿ ಯಾವತ್ತು ಧೈರ್ಯ ಕಳೆದುಕೊಳ್ಳಬೇಡಿ. ಓದನ್ನು ಕಡೆಗಣಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.

    ಆರನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (Pariksha Pe Charcha 2023) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರ ಜೊತೆಗೆ ಸಂವಾದ ನಡೆಸಿ ಹಲವು ಸಲಹೆಗಳನ್ನು ನೀಡಿದರು. ದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಮೋದಿ, ಒಂದೋ, ಎರಡೋ ಪರೀಕ್ಷೆಯಲ್ಲಿ ನಕಲು (Copy) ಮಾಡಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ನಕಲು ಮಾಡುತ್ತಾ ಮುಂದೆ ಹೋದರೂ ಮುಂದೆ ಜೀವನದಲ್ಲಿ ಸಿಕ್ಕಿಹಾಕಿಕೊಳ್ಳುವಂತಹ ವಾತಾವರಣ ನಿರ್ಮಾಣವಾಗುತ್ತೆ ಯಾರಾದರೂ ಮೋಸ ಮಾಡಿ ನಿಮಗಿಂತ ಸ್ವಲ್ಪ ಹೆಚ್ಚು ಅಂಕ ಪಡೆದರೂ ಅದು ನಿಮಗೆ ಜೀವನದಲ್ಲಿ ಅಡ್ಡಿಯಾಗಲಾರದು ನಿಮ್ಮ ಆಂತರಿಕ ಶಕ್ತಿಯನ್ನು ನಂಬಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಯೋಗ್ಯತೆ ಮೀರಿ ನನಗೆ ಕೇಂದ್ರ ಸರ್ಕಾರ ಗೌರವ ನೀಡಿದೆ: ಎಸ್.ಎಂ.ಕೃಷ್ಣ

    ಪೋಷಕರು ತಮ್ಮ ಮಕ್ಕಳಿಂದ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಒತ್ತಡಗಳಿಗೆ ಮಣಿಯಬೇಕೇ? ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ಕ್ರಿಕೆಟ್‍ನಲ್ಲಿ (Cricket) ಜನರು ಕ್ರೀಡಾಂಗಣದಲ್ಲಿ ಬೌಂಡರಿ, ಸಿಕ್ಸರ್ ಬೇಕು ಅಂತ ಕೂಗುತ್ತಲೇ ಇರುತ್ತಾರೆ, ಪ್ರೇಕ್ಷಕರ ಬೇಡಿಕೆಯ ಮೇರೆಗೆ ಆಟಗಾರನು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸುತ್ತಾನಾ? ಆಟಗಾರನು ಚೆಂಡಿನ ಮೇಲೆ ಮಾತ್ರ ಕೇಂದ್ರೀಕರಿಸುತ್ತಾನೆ ಹಾಗೆಯೇ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ನಿಭಾಯಿಸಬೇಕು ಎಂದರು.

    ನಮ್ಮ ಇಷ್ಟದ ವಿಷಯಗಳಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತೇವೆ ಅಂತಹ ಪರಿಸ್ಥಿತಿಯಲ್ಲಿ ಕಷ್ಟಕರವಾದ ವಿಷಯಕ್ಕೆ ಒತ್ತು ನೀಡಬೇಕು ಅದರ ನಂತರ ಹೆಚ್ಚು ಇಷ್ಟವಾದ ವಿಷಯವನ್ನು ಓದಬೇಕು. ಇಷ್ಟ ಮತ್ತು ಇಷ್ಟಪಡದಿರುವ ವಿಷಯಗಳಿಗೆ ಒಂದರ ನಂತರ ಒಂದರಂತೆ ಸಮಯ ನೀಡಿ. ತಾಯಿಯಿಂದ ಸಮಯ ನಿರ್ವಹಣೆ ಕಲಿಯಿರಿ, ತಾಯಿಯು ದಿನದ ಕೆಲಸವನ್ನು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸುತ್ತಾಳೆ ತಾಯಿಗೆ ಗರಿಷ್ಠ ಕೆಲಸವಿದೆ, ಸಮಯ ನಿರ್ವಹಣೆಯಿಂದ ಕೆಲಸ ನಿರ್ವಹಿಸುತ್ತಾರೆ ಪ್ರತಿ ಕೆಲಸವನ್ನು ತಾಯಿ ಸಮಯಕ್ಕೆ ಸರಿಯಾಗಿ ಮಾಡುತ್ತಾಳೆ ಹಾಗಯೇ ವಿದ್ಯಾರ್ಥಿಗಳು ಸಮಯದ ನಿರ್ವಹಣೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: BBC Modi V/s The Kashmir Filesː ಎಸ್‌ಎಫ್‌ಐ, ಎಬಿವಿಪಿ ವಿದ್ಯಾರ್ಥಿಗಳ ನಡುವೆ ತಾರಕಕ್ಕೇರಿದ ಸಂಘರ್ಷ

    ಇದೇ ವೇಳೆ ಪರೀಕ್ಷೆಯಲ್ಲಿ ನಕಲು ತಪ್ಪಿಸುವ ಕುರಿತಾಗಿ ಮಾತನಾಡಿದ ಅವರು, ಟ್ಯೂಷನ್ ಕಲಿಸುವ ಕೆಲವು ಶಿಕ್ಷಕರಿದ್ದಾರೆ ಅವರು ತಮ್ಮ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಬೇಕೆಂದು ಬಯಸುತ್ತಾರೆ. ಆದ್ದರಿಂದ ಅವರು ಮೋಸವನ್ನು ಪ್ರೋತ್ಸಾಹಿಸುತ್ತಾರೆ. ವಿದ್ಯಾರ್ಥಿಗಳು ನಕಲು ಮಾಡಲು ಸೃಜನಶೀಲತಾಗಿರುತ್ತಾರೆ. ಆ ಸೃಜನಶೀಲತೆಯನ್ನು ಅಧ್ಯಯನಕ್ಕೆ ತೋರಿಸಿದರೆ, ನಕಲು ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

    ಸ್ಮಾರ್ಟ್ ವರ್ಕ್ ಮತ್ತು ಹಾರ್ಡ್ ವರ್ಕ್ ನಡುವೆ ಯಾವುದನ್ನು ಆಯ್ಕೆ ಮಾಡಬೇಕು? ಎನ್ನುವ ಪ್ರಶ್ನೆಗೆ ಉತ್ತರಿಸಿದ ನರೇಂದ್ರ ಮೋದಿ, ಬಾಯಾರಿದ ಕಾಗೆಯ ಕಥೆಯನ್ನು ನೀವೆಲ್ಲರೂ ಕೇಳಿರಬೇಕು, ಅದರಲ್ಲಿ ಕಾಗೆಯು ಕಲ್ಲುಹಾಕಿ ನೀರು ಕುಡಿಯುತ್ತದೆ ಇದು ಕಾಗೆಯ ಹಾರ್ಡ್ ವರ್ಕ್ ಅಥವಾ ಸ್ಮಾರ್ಟ್ ವರ್ಕ್? ಕೆಲವರು ಹಾರ್ಡ್‍ಲಿ ಸ್ಮಾರ್ಟ್ ವರ್ಕ್ ಮಾಡಿದರೆ ಕೆಲವರು ಸ್ಮಾರ್ಟ್‍ಲಿ ಹಾರ್ಡ್ ವರ್ಕ್ ಮಾಡುತ್ತಾರೆ ಕಾಗೆಗಳಿಂದ ನಾವು ಕಲಿಯಬೇಕಾದುದು ಇದನ್ನೇ. ಒಮ್ಮೆ ಕಾರು ಕೆಟ್ಟು ನಿಂತಿತ್ತು ಗಂಟೆಗಟ್ಟಲೆ ತಳ್ಳಿದರೂ ವಾಹನ ಸ್ಟಾರ್ಟ್ ಆಗಲಿಲ್ಲ 2 ನಿಮಿಷದಲ್ಲಿ ಕಾರನ್ನು ಮೆಕಾನಿಕ್ ಸರಿಪಡಿಸಿದ ಕಾರು ಸರಿಪಡಿಸಿ ಮೆಕಾನಿಕ್ 200 ರೂ.ಗೆ ಬೇಡಿಕೆ ಇಟ್ಟ 2 ನಿಮಿಷದ ಕೆಲಸಕ್ಕೆ 200 ರೂಪಾಯಿ ಏಕೆ ಕೊಡಬೇಕು ಎಂದು ಪ್ರಶ್ನಿಸಿದರು ಅದಕ್ಕೆ 200 ರೂ. 2 ನಿಮಿಷಕ್ಕೆ ಅಲ್ಲ 20 ವರ್ಷಗಳ ಅನುಭವಕ್ಕೆ ಎಂದು ಮೆಕ್ಯಾನಿಕ್ ಹೇಳಿದ ಎಂದು ಉದಾಹರಣೆ ನೀಡಿದರು.

    ವಿದ್ಯಾರ್ಥಿಯೊಬ್ಬ ವಿರೋಧ ಪಕ್ಷದವರ ಟೀಕೆ ಬಗ್ಗೆ ಪ್ರಶ್ನಿಸಿದಾಗ ಅದು ಔಟ್ ಆಫ್ ಸಿಲಬಸ್ ಪ್ರಶ್ನೆ ಇದ್ದಂತೆ ಎಂದು ಉತ್ತರಿಸಿದರು. ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ. ನಮ್ಮ ಸಾಮರ್ಥ್ಯದ ಬಗ್ಗೆ ನಮಗೆ ನಂಬಿಕೆ ಇರಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: Australian Open 2023: ಫೈನಲ್‍ನಲ್ಲಿ ಸೋತ ಬೋಪಣ್ಣ, ಸಾನಿಯಾ ಜೋಡಿ – ರನ್ನರ್ ಅಪ್ ಕಿರೀಟದೊಂದಿಗೆ ಗ್ರ್ಯಾಂಡ್‍ ಸ್ಲಾಮ್‍ಗೆ ಗುಡ್‍ಬೈ

    ಈ ಬಾರಿಯ ಪರೀಕ್ಷಾ ಪೇ ಚರ್ಚೆಯಲ್ಲಿ 31.24 ಲಕ್ಷ ವಿದ್ಯಾರ್ಥಿಗಳು, 5.60 ಲಕ್ಷ ಶಿಕ್ಷಕರು ಮತ್ತು 1.95 ಲಕ್ಷ ಪೋಷಕರು ಸೇರಿದಂತೆ ಒಟ್ಟು 38.80 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಕಳೆದ ವರ್ಷ, ಸುಮಾರು 15.7 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

    ಸಮಾರಂಭದಲ್ಲಿ, ಪ್ರಧಾನಿ ಮೋದಿ ಅವರು ಪರೀಕ್ಷೆಯ ಒತ್ತಡವನ್ನು ನಿವಾರಿಸಲು ಮತ್ತು ಶಿಕ್ಷಣ ಮತ್ತು ವೃತ್ತಿಗೆ ಸಂಬಂಧಿಸಿದ ಅವರ ಪ್ರಶ್ನೆಗಳಿಗೆ ಉತ್ತರಿಸಿ ವಿದ್ಯಾರ್ಥಿಗಳೊಂದಿಗೆ ಸಲಹೆಗಳನ್ನು ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಂಗನವಾಡಿ ಮಕ್ಕಳ ಆಹಾರದಲ್ಲಿ ಹಲ್ಲಿಯ ಬಾಲ ಪತ್ತೆ – 12 ಮಕ್ಕಳು ಅಸ್ವಸ್ಥ

    ಅಂಗನವಾಡಿ ಮಕ್ಕಳ ಆಹಾರದಲ್ಲಿ ಹಲ್ಲಿಯ ಬಾಲ ಪತ್ತೆ – 12 ಮಕ್ಕಳು ಅಸ್ವಸ್ಥ

    ಬೀದರ್: ವಿಷಕಾರಿ ಆಹಾರ ಸೇವಿಸಿ ಅಂಗನವಾಡಿಯ (Anganwadi) 12 ಪುಟ್ಟ ಮಕ್ಕಳು (Childrens) ಅಸ್ವಸ್ಥಗೊಂಡ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ತರನಳ್ಳಿ ಗ್ರಾಮದಲ್ಲಿ ನಡೆದಿದೆ.

    ಅಂಗನವಾಡಿಯ 50ಕ್ಕೂ ಹೆಚ್ಚು ಮಕ್ಕಳು ಇಂದು ವಿಷಕಾರಿ ಆಹಾರ ಸೇವಿಸಿದ್ದು, ಈ ಪೈಕಿ 12 ಮಂದಿ ಪುಟ್ಟ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಮಕ್ಕಳಿಗೆ ಭಾಲ್ಕಿ ತಾಲೂಕಿನ ಹಲಬರ್ಗಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಅಂತ್ಯಕ್ರಿಯೆಗೆ ಸಂಬಂಧಿಕರ ಹಿಂದೇಟು- ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ ಮಗಳು

    ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಅಧಿಕಾರಿಗಳಿಗೆ ಮಕ್ಕಳು ಸೇವಿಸಿದ ಆಹಾರದಲ್ಲಿ ಹಲ್ಲಿಯ ಬಾಲ ಪತ್ತೆಯಾಗಿದೆ. ಮಕ್ಕಳು ಅಸ್ವಸ್ಥರಾಗಲು ಅಂಗನವಾಡಿ ಕಾರ್ಯಕರ್ತೆ ಹಾಗೂ ಅಡುಗೆ ಸಹಾಯಕಿಯ ನಿರ್ಲಕ್ಷ್ಯವೇ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೈಕೊಟ್ಟ ಲವರ್‌ಗೆ ಠಕ್ಕರ್ ಕೊಡಲು ಆಕೆಯ ಮೊದಲ ಅಕ್ಷರ ಬಳಸಿ ಚಹಾ ಅಂಗಡಿ ತೆರೆದ ಪ್ರೇಮಿ

    Live Tv
    [brid partner=56869869 player=32851 video=960834 autoplay=true]

  • ಅಮೆರಿಕದಲ್ಲಿ ಇಬ್ಬರು ಮಕ್ಕಳಲ್ಲಿ ಕಾಣಿಸಿಕೊಂಡ ಮಂಕಿಪಾಕ್ಸ್ – ಈವರೆಗೆ 2,500ಕ್ಕೂ ಹೆಚ್ಚು ಕೇಸ್ ದಾಖಲು

    ಅಮೆರಿಕದಲ್ಲಿ ಇಬ್ಬರು ಮಕ್ಕಳಲ್ಲಿ ಕಾಣಿಸಿಕೊಂಡ ಮಂಕಿಪಾಕ್ಸ್ – ಈವರೆಗೆ 2,500ಕ್ಕೂ ಹೆಚ್ಚು ಕೇಸ್ ದಾಖಲು

    ವಾಷಿಂಗ್ಟನ್: ಅಮೆರಿಕದಲ್ಲಿ ಮಂಕಿಪಾಕ್ಸ್ ಆತಂಕ ಇನ್ನಷ್ಟು ಹೆಚ್ಚುತ್ತಿದೆ. ಇಬ್ಬರು ಸಣ್ಣ ಮಕ್ಕಳಲ್ಲಿ ಮಂಕಿಪಾಕ್ಸ್ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿದೆ.

    ಈಗಾಗಲೇ ಹಲವು ದೇಶಗಳಲ್ಲಿ ಮಂಕಿಪಾಕ್ಸ್ ಸೋಂಕು ಉಲ್ಬಣಿಸುತ್ತಿದೆ. ಮಂಕಿಪಾಕ್ಸ್ ಸೋಂಕು ಮಕ್ಕಳಿಗೆ ಕೊರೊನಾ ಸೋಂಕಿಗಿಂತ ಡೇಂಜರ್ ಆಗಬಹುದು ಎಂದು ವರದಿಯೊಂದು ಹೊರಬಿದ್ದ ಬೆನ್ನಲ್ಲೇ ಅಮೆರಿಕದಲ್ಲಿ ಇಬ್ಬರು ಮಕ್ಕಳಿಗೆ ಮಂಕಿಪಾಕ್ಸ್ ಸೋಂಕು ತಗುಲಿರೋದು ದೃಢವಾಗಿದೆ. ಇಬ್ಬರು ಮಕ್ಕಳ ಪೈಕಿ ಸೋಂಕಿಗೆ ತುತ್ತಾಗಿರುವ ಒಂದು ಮಗು ಇನ್ನೂ ಅಂಬೆಗಾಲು ಇಡುತ್ತಿರುವುದಾಗಿದೆ. ಇದನ್ನೂ ಓದಿ: Monkeypox; ಕೇರಳದಲ್ಲಿ 3ನೇ ಪ್ರಕರಣ ಪತ್ತೆ

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅಮೆರಿಕ ಕೇಂದ್ರ ಆರೋಗ್ಯ ಇಲಾಖೆ, ಇಬ್ಬರು ಮಕ್ಕಳಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ. ಈ ಪೈಕಿ ಮೊದಲ ಪ್ರಕರಣ ಕ್ಯಾಲಿಫೋರ್ನಿಯಾದಲ್ಲಿ ಅಂಬೆಗಾಲಿಡುವ ಮಗುವಿನಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನೊಂದು ಮಗು ಯುಎಸ್ ನಿವಾಸಿಯಲ್ಲ ಆದರೆ ಸದ್ಯ ದೇಶದಲ್ಲಿ ಇದ್ದು ಸೋಂಕು ತಗುಲಿದೆ ಎಂದು ಸ್ಪಷ್ಟಪಡಿಸಿದ್ದು, ಸದ್ಯ ಸೋಂಕಿತ ಮಕ್ಕಳು ಆರೋಗ್ಯದಿಂದ ಇರುವುದಾಗಿ ತಿಳಿಸಿದೆ.

    ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ಇಬ್ಬರಿಗೂ ಮನೆಯವರಿಂದಲೇ ಸೋಂಕು ತಗುಲಿರುವ ಶಂಕೆ ಇದ್ದು, ಈ ಬಗ್ಗೆ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಎರಡು ಮಕ್ಕಳ ಪ್ರಕರಣಗಳ ಜೊತೆಗೆ, ಈವರೆಗೆ ಅಮೆರಿಕದಲ್ಲಿ 2,500ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಕನಿಷ್ಠ ಎಂಟು ಮಹಿಳೆಯರು ಸೋಂಕಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಗ್ಯಾಂಗ್ ರೇಪ್ – ನಾಲ್ವರು ಅರೆಸ್ಟ್

    ಮಂಕಿಪಾಕ್ಸ್ ಇದೀಗ ಜಗತ್ತಿನಾದ್ಯಂತ ವೇಗವಾಗಿ ಹಬ್ಬುತ್ತಿದೆ. ಈವರೆಗೆ 60ಕ್ಕೂ ಹೆಚ್ಚು ದೇಶಗಳಲ್ಲಿ 14,000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ಮತ್ತು ಆಫ್ರಿಕಾದಲ್ಲಿ ಐದು ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಇತ್ತ ಭಾರತದಲ್ಲೂ ಮಂಕಿಪಾಕ್ಸ್ ಆತಂಕ ಹೆಚ್ಚಿಸಿದೆ. ಈವರೆಗೆ 3 ಪ್ರಕರಣ ದೃಢಪಟ್ಟಿದೆ. ಈ ಮೂರೂ ಪ್ರಕರಣಗಳೂ ಕೇರಳದಲ್ಲೇ ಪತ್ತೆಯಾಗಿರುವುದು ಕೇರಳದಲ್ಲಿ ಆತಂಕ ಮನೆ ಮಾಡುವಂತಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಕಿಭಾಯ್ ಘರ್ಜನೆಗೆ ಹೆದರಿ ಓಡಿದ ಮಗ

    ರಾಕಿಭಾಯ್ ಘರ್ಜನೆಗೆ ಹೆದರಿ ಓಡಿದ ಮಗ

    ರಾಕಿಂಗ್ ಸ್ಟಾರ್ ಯಶ್ ಈಗಾಗಲೇ ಕೆಜಿಎಫ್ ಚಿತ್ರದ ಯಶಸ್ಸಿನ ಉತ್ತುಂಗದಲ್ಲಿ ತೇಲಾಡುತ್ತಿದ್ದು, ಕೆಲಸದಿಂದ ಕೊಂಚ ಬಿಡುವ ತೆಗೆದುಕೊಂಡು ಫ್ಯಾಮಿಲಿಯೊಂದಿಗೆ ಸಮಯ ಕಳೆಯುತ್ತಿದ್ದಾರೆ. ಈಗಾಗಲೇ ಚಿತ್ರವೂ ಬಾಕ್ಸಾಫೀಸ್‍ನಲ್ಲಿ ಸಖತ್ ಸದ್ದು ಮಾಡುತ್ತಿದ್ದು, ಬಾಲಿವುಡ್, ಟಾಲಿವುಡ್, ಮಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ಚಿತ್ರರಂಗದಲ್ಲಿ ತನ್ನದೆ ಆದ ಛಾಪು ಮೂಡಿಸುತ್ತಾ ಬರುತ್ತಿರುವ ರಾಕಿಭಾಯ್ ಈಗ ಹ್ಯಾಪಿ ಮೂಡ್‍ನಲ್ಲಿ ಇದ್ದಾರೆ.

    ಯಶ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ವೀಡಿಯೋವೊಂದನ್ನು ಹರಿಬಿಟ್ಟಿದ್ದು, ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಅವರು ತಮ್ಮ ಮುದ್ದು ಮಕ್ಕಳಾದ ಐರಾ ಮತ್ತು ಯಥರ್ವ ಜೊತೆ ಸಮಯ ಕಳೆಯುತ್ತಿದ್ದು, ಯಥರ್ವ ತಂದೆಗೆ ಐ ಲವ್ ಯೂ ಹೇಳಿ ನಾನು ದೈತ್ಯ ಡೈನೋಸಾರ್ ಎಂದು ಕ್ಯೂಟ್ ಆಗಿ ಕಿರುಚುತ್ತಾನೆ. ಆಗ ಯಶ್ ನಾನು ಈಗ ಹುಲಿಯಾಗುವುದನ್ನು ನೋಡು ಎಂದು ಘರ್ಜಿಸಿದಾಗ ಯಥರ್ವ ಅಲ್ಲಿಂದ ಹೆದರಿ ಓಡಿ ಹೋಗುತ್ತಾನೆ. ಬಳಿಕ ಯಶ್ ಅಲ್ಲಿಯೇ ಇದ್ದ ಮಗಳನ್ನು ತಬ್ಬಿಕೊಂಡು ಗಣೇಶಾ ಓಡಿ ಹೋದ ಮಗಳೇ ಎಂದು ಮುದ್ದಾಡುತ್ತಾರೆ. ಇದನ್ನೂ ಓದಿ: `ಕೆಜಿಎಫ್ 2′ ಹೊಸ ದಾಖಲೆ: 1200 ಕೋಟಿ ಕಲೆಕ್ಷನ್ ಮಾಡುವತ್ತ ರಾಕಿಭಾಯ್ ಚಿತ್ರ

    ಬಾಲಿವುಡ್ ಬಾಕ್ಸಾಫೀಸ್ ಅಡ್ಡಾದಲ್ಲಿ ಘಟಾನುಘಟಿಗಳ ಸ್ಟಾರ್ ಚಿತ್ರಗಳನ್ನೇ ಹಿಂದಿಕ್ಕಿ ಯಶ್ ಸಿನಿಮಾ, ಯಶಸ್ವಿಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ಮಾಡುತ್ತಿದೆ. ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರಕ್ಕೆ ವಿಶ್ವದ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈಗಾಗಲೇ ಕೆಜಿಎಫ್ ವಲ್ರ್ಡ್ ವೈಡ್ ಕಲೆಕ್ಷನ್ 1160 ಕೋಟಿ ಬಾಚಿ, 1200 ಕೋಟಿ ಕಲೆಕ್ಷನ್ ಮಾಡುವುತ್ತಾ ಮುನ್ನುಗ್ಗುತ್ತಿದೆ. ಇದನ್ನೂ ಓದಿ: ಸೂಪರ್ ಸ್ಟಾರ್ ಕಮಲ್ ಹಾಸನ್ ಚಿತ್ರದಲ್ಲಿ ಸಾಯಿ ಪಲ್ಲವಿ

    `ಕೆಜಿಎಫ್ 2′ ಸಿನಿಮಾ ತಾಯಿಯ ಸೆಂಟಿಮೆಂಟ್ ಕಥೆಯ ಜತೆ ಕಲಾವಿದರ ನಟನೆ, ನಿರ್ದೇಶನ, ಛಾಯಗ್ರಹಣ, ರವಿ ಬಸ್ರೂರು ನಿರ್ದೇಶನ ಇವೆಲ್ಲವೂ ಸೇರಿ `ಕೆಜಿಎಫ್ 2′ ಈ ವರ್ಷದ ಟಾಪ್ ಚಿತ್ರವಾಗಿ ಹೊರಹೊಮ್ಮಿದೆ. ಯಶ್‍ನ ಕೆಜಿಎಫ್ 3 ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.