Tag: chincholli

  • ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

    ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

    – ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾರತ ರತ್ನ ನೀಡುವಂತೆ ಎಂಎಲ್‌ಸಿ ತಿಮ್ಮಣ್ಣಪ್ಪ ಕಮಕನೂರ ಆಗ್ರಹ

    ಕಲಬುರಗಿ: ಮನೆಗೊಂದು ಮರ, ಊರಿಗೊಂದು ವನ ಎಂಬಂತೆ ರಾಜ್ಯದಲ್ಲಿ ಅರಣ್ಯ ಪ್ರದೇಶ ವಿಸ್ತರಣೆಗೆ ಆದ್ಯತೆ ನೀಡಲಾಗುತ್ತಿದ್ದು, ಈ ವರ್ಷ ವಿವಿಧ ಕಾರ್ಯಕ್ರಮಗಳಡಿ ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುತ್ತಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwar Khandre) ಹೇಳಿದ್ದಾರೆ.

    ಅರಣ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಇವುಗಳ ಸಹಯೋಗದೊಂದಿಗೆ ಶನಿವಾರ ಪಿ.ಡಿಎ ಕಾಲೇಜು ಹಿಂಭಾಗದ ಹೆಚ್.ಕೆ.ಇ. ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಆಯೋಜಿಸಿದ ʻವನಮಹೋತ್ಸವ-2025ʼ, ಹಸಿರು ಪಥ ಮತ್ತು ಕಲಬುರಗಿಯ ಹಸಿರು ಹೆಜ್ಜೆ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ: ನೀಟ್ ರೋಲ್ ನಂಬರ್ ದಾಖಲಿಸಲು ಜುಲೈ 8ರವರೆಗೆ ಅವಕಾಶ: ಕೆಇಎ

    ರಾಜ್ಯದಲ್ಲಿ ಅರಣ್ಯ ಪ್ರದೇಶ ಇರುವುದು 21% ಇನ್ನು ಕಲ್ಯಾಣ ಕರ್ನಾಟಕದ ಭಾಗದ ಕಲಬುರಗಿ, ಬೀದರ್‌, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಇದರ ಪ್ರಮಾಣ 5%ಗಿಂತ ಕಡಿಮೆಯಿದೆ. ವನ ಮಹೋತ್ಸವದ ಕಾರ್ಯಕ್ರಮದಡಿ ಈ ಭಾಗದಲ್ಲಿ ಹೆಚ್ಚು ಹಸಿರು ಹೊದಿಕೆ ಮಾಡುವ ಗುರಿಯೊಂದಿಗೆ 7 ಲಕ್ಷ ಸೇರಿದಂತೆ ರಾಜ್ಯದಾದ್ಯಂತ 28 ಲಕ್ಷ ಸಸಿ ನೆಡಲಾಗುತ್ತಿದೆ. ಇವುಗಳೆಲ್ಲವು ಎತ್ತರದ ಸಸಿಗಳಾಗಿರಲಿವೆ. ಮರ ನೆಡುವುದು ಅತ್ಯಂತ ಪವಿತ್ರವಾದ ಕೆಲಸವಾಗಿದೆ. ಹಾಗಾಗಿ, ನೀವೆಲ್ಲ ಸಸಿಗಳನ್ನು ನೆಟ್ಟು ಪೋಷಿಸಿ ಪರಿಸರ ರಕ್ಷಣೆ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂದಿನ ಎರಡು ವರ್ಷದಲ್ಲಿ ಕನಿಷ್ಠ 1 ಕೋಟಿ ಸಸಿ ನೆಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: 101.4 ಕೋಟಿ ಸಾಲ ಪಡೆದು ವಂಚನೆ ಕೇಸ್‌ – ಅಲ್ಲು ಅರ್ಜುನ್‌ ತಂದೆಗೆ 3 ಗಂಟೆ ಇಡಿ ಡ್ರಿಲ್‌

    ಪ್ರಕೃತಿ ವಿಕೋಪದಿಂದ ಬೆಟ್ಟಗಳು ಕುಸಿಯತ್ತಿವೆ ಹಾಗೂ ಜಾಗತಿಕ ತಾಪಮಾನ ಏರುವಿಕೆಯಿಂದ ಅಪಾಯ ಎದುರಾಗುತ್ತಿದೆ. ಮಳೆ ಸರಿಯಾದ ಸಮಯದಲ್ಲಿ ಬಾರದ ಕಾರಣ ಬೆಳೆಗಳು ನಾಶವಾಗುತ್ತಿವೆ. ನಗರೀಕರಣ ಹಾಗೂ ಅಭಿವೃದ್ದಿ ಹೆಸರಿನಲ್ಲಿ ಜನರು ಮರಗಳನ್ನು ಕಡಿಯುತ್ತಿದ್ದಾರೆ. ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಅನೇಕರು ತಮ್ಮ ಪ್ರಾಣ ಕಳೆದುಕೊಂಡರು. ಕಾರ್ಬನ್ ಡೈ ಆಕ್ಸೈಡ್‌ ಪಡೆದು ಶುದ್ಧ ಗಾಳಿ ನೀಡುವ ಗಿಡ-ಮರಗಳನ್ನು ಪ್ರತಿಯೊಬ್ಬರು ಬೆಳೆಸಿ ಪೋಷಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

    ಈಗಾಗಲೇ ನೆಟ್ಟಿರುವ ಸಸಿಗಳು ಅಸ್ಥಿತ್ವದಲ್ಲಿಲ್ಲ ಎನ್ನುವ ಮಾತುಗಳಿವೆ. ಹಾಗಾಗಿ, ಮೂರನೆಯ ವ್ಯಕ್ತಿಯಿಂದ ಇದನ್ನು ತನಿಖೆ ನಡೆಸಲಾಗುತ್ತದೆ. ಜಿಯೋ ಟ್ಯಾಗ್ ಮೂಲಕ ಗಿಡದ ಪ್ರಗತಿ ವೀಕ್ಷಿಸಲಾಗುವುದು. ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿದ್ದು, ಸಾರ್ವಜನಿಕರು ಮಾರುಕಟ್ಟೆಗೆ ಹೋಗಬೇಕಾದರೆ ಕೈಚೀಲ ತೆಗೆದುಕೊಂಡು ಹೋಗುವುದನ್ನು ರೂಢಿಸಿಕೊಳ್ಳಬೇಕು. ರಾಜ್ಯದಾದ್ಯಂತ 6,500 ಹೆಕ್ಟೇರ್ ಅರಣ್ಯ ಪ್ರದೇಶ ಒತ್ತುವರಿ ತೆರವುಗೊಳಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ವನ್ಯ ಜೀವಿ ಸಂರಕ್ಷಣೆ, ಉದ್ಯಾನವನ, ಮೃಗಾಲಯ ಹಾಗೂ ಟ್ರೀ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ – ಸರ್ಕಾರಕ್ಕೆ ಸಲ್ಲಿಸಲು ತಜ್ಞರ ವರದಿ ಸಿದ್ಧ

    ಚಿಂಚೋಳಿಯಲ್ಲಿ ಎಕೋ ಟೂರಿಸ್ಮ್ ಅಭಿವೃದ್ಧಿ
    ಬಿಸಿಲಿನ ತಾಪಮಾನ ಹೆಚ್ಚಿರುವ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಿನ ಅರಣ್ಯ ಪ್ರದೇಶ ಹೆಚ್ಚಿಸಲು ʻಕಲಬುರಗಿ ಹಸಿರು ಹೆಜ್ಜೆʼ ಕಾರ್ಯಕ್ರಮವು ಪೂರಕವಾಗಿದೆ. ಮುಂದಿನ ದಿನದಲ್ಲಿ ವನ್ಯಜೀವಿ ಧಾಮ ಹೊಂದಿರುವ ಚಿಂಚೋಳಿಯ ಚಂದ್ರಂಪಳ್ಳಿ ವ್ಯಾಪ್ತಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್-ಬಿಜೆಪಿ ಮಧ್ಯೆ ‌ʻRSS ಬ್ಯಾನ್ʼ ವಾರ್ – ಸಂಘ ಪರಿವಾರ ಮುಟ್ಟಿದ್ರೆ ಭಸ್ಮ ಆಗ್ತೀರಾ; ಕೇಸರಿ ಕಲಿಗಳ ಎಚ್ಚರಿಕೆ

    ಖರ್ಗೆ ಅವರಿಗೆ ಭಾರತ ರತ್ನ ನೀಡಿ
    ವಿಧಾನ ಪರಿಷತ್ ಶಾಸಕ ತಿಮ್ಮಣ್ಣಪ್ಪ ಕಮಕನೂರ ಮಾತನಾಡಿ, ದೀನ-ದಲಿತರ ಬಗ್ಗೆ ಮತ್ತು ವಿಶೇಷವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಅಪಾರ ಕಾಳಜಿ ಹೊಂದಿರುವ ಡಾ.ಮಲ್ಲಿಕಾರ್ಜುನ್‌ ಖರ್ಗೆ ಅವರು, ಆರ್ಟಿಕಲ್ 371(ಜೆ) ಜಾರಿಗೆ ತಂದು ಈ ಭಾಗದ ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಇಂತಹ ಮುತ್ಸದಿ ನಾಯಕನಿಗೆ ಭಾರತ ಸರ್ಕಾರ ದೇಶದ ಅತ್ಯುನ್ನತ ಗೌರವ ʻಭಾರತ ರತ್ನʼ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

  • ಎಂಡಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದರೂ ಅದೃಷ್ಟ ಪರೀಕ್ಷೆಯಲ್ಲಿ ಜಾಧವ್ ಪುತ್ರ ಪಾಸ್

    ಎಂಡಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದರೂ ಅದೃಷ್ಟ ಪರೀಕ್ಷೆಯಲ್ಲಿ ಜಾಧವ್ ಪುತ್ರ ಪಾಸ್

    ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಎಂಡಿ ಕೊನೆಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಗೈರಾಗಿದ್ದ ಅವಿನಾಶ್ ಜಾಧವ್ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಅದೃಷ್ಟ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.

    ಚಿಂಚೋಳಿ ಉಪಚುನಾವಣೆ ಹಿನ್ನೆಲೆ ತಂದೆ ಉಮೇಶ್ ಜಾಧವ್ ರಾಜೀನಾಮೆ ನೀಡಿದ ಬಳಿಕ ಖಾಲಿಯಿದ್ದ ಸ್ಥಾನವನ್ನು ಮಗ ಗೆದ್ದಿದ್ದಾರೆ. ಉಮೇಶ್ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್‍ನಿಂದ ಬಿಜೆಪಿಗೆ ಸೇರ್ಪಡೆಯಾದರು. ಆ ಬಳಿಕ ಖಾಲಿ ಉಳಿದಿದ್ದ ಶಾಸಕ ಸ್ಥಾನವನ್ನು ತುಂಬಿಸಲು ಕ್ಷೇತ್ರದಲ್ಲಿ ಉಪಚುನಾವಣೆ ನಡೆಸಲಾಗಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವಿನಾಶ್ ಜಾಧವ್ ತಮ್ಮ ಎಂಡಿ ಕೊನೆ ಸೆಮಿಸ್ಟರ್ ಪರೀಕ್ಷೆಗೆ ಗೈರಾಗಿದ್ದರು. ಪರಿಕ್ಷೆಗೆ ಗೈರಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಅವರು ಓದನ್ನು ತ್ಯಾಗ ಮಾಡಿ ರಾಜಕೀಯಕ್ಕೆ ಬಂದಿದಕ್ಕೆ ಇಂದು ಚಿಂಚೋಳಿ ಕ್ಷೇತ್ರಕ್ಕೆ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರವಾದ ಚಿಂಚೋಳಿಯಲ್ಲಿ ಅವಿನಾಶ್ ಜಾಧವ್ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ವಿರುದ್ಧ ಭಾರಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಅವಿನಾಶ್ ಅವರು ತಮ್ಮ 27ನೇ ವಯಸ್ಸಿನಲ್ಲಿಯೇ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಅಲ್ಲದೆ ಈ ವಿಧಾನಸಭೆಯಲ್ಲಿ ಅತ್ಯಂತ ಕಿರಿಯ ಶಾಸಕನ ಪಟ್ಟವನ್ನು ಅವಿನಾಶ್ ಜಾಧವ್ ಅಲಂಕರಿಸಿದ್ದಾರೆ.

    ಚಿಂಚೋಳಿ ಜೊತೆಗೆ ಕುಂದಗೋಳ ವಿಧಾನಸಭೆ ಉಪಚುನಾವಣೆ ಕೂಡ ನಡೆದಿದೆ. ಕ್ಷೇತ್ರದ ಶಾಸಕರಾಗಿದ್ದ ಸಿ.ಎಸ್ ಶಿವಳ್ಳಿ ಅವರ ನಿಧನದಿಂದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದಿತ್ತು. ಇಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕಣವರ ವಿರುದ್ಧ ಸ್ಪರ್ಧಿಸಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಜಯ ಸಾಧಿಸಿದ್ದಾರೆ.

  • ಯಮ ಕರೆದ್ರೂ ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಿ ಹೋಗ್ತೀನಿ: ಚಿಂಚನಸೂರ್

    ಯಮ ಕರೆದ್ರೂ ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಿ ಹೋಗ್ತೀನಿ: ಚಿಂಚನಸೂರ್

    ಕಲಬುರಗಿ: ಯಮ ಬಂದು ಹಗ್ಗ ಹಾಕಿ ಜಗ್ಗಿದರೂ ನಾನು ಹೋಗಲ್ಲ, ಕೋಲಿ ಸಮಾಜವನ್ನು ಎಸ್‍ಟಿ ವರ್ಗಕ್ಕೆ ಸೇರಿಸಿ ಮತ್ತೆ ಬರುತ್ತೇನೆ ಎನ್ನುತ್ತೇನೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ.

    ಚಿಂಚೋಳಿ ಪಟ್ಟಣದಲ್ಲಿ ಬಿಜೆಪಿ ಆಯೋಜನೆಯ ಕೋಲಿ ಸಮಾಜದ ಸಮಾವೇಶದಲ್ಲಿ ಬಾಬುರಾವ್ ಚಿಂಚನಸೂರ್ ಭಾಗಿಯಾಗಿದ್ದರು. ಈ ವೇಳೆ ನಾನು ಸುಮ್ಮನೆ ಸಾಯುವುದಿಲ್ಲ. ಯಮ ಕರೆದರೂ ನಾನು ಕೋಲಿ ಸಮಾಜವನ್ನು ಎಸ್‍ಟಿ ವರ್ಗಕ್ಕೆ ಸೇರಿಸಿಯೇ ಹೋಗುತ್ತೇನೆ ಎಂದರು. ಕೋಲಿ ಸಮಾಜವನ್ನು ಎಸ್‍ಟಿ ಮಾಡಿದರೆ ತಮ್ಮ ಸಮಾನಾಂತರ ಆಗುತ್ತಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೋಲಿ ಸಮಾಜದ ತಲೆ ಮೇಲೆ ಕಾಲಿಟ್ಟರು. ಹಾಗೆಯೇ ಇವನು ದಿನ ದಿನಾ ಸ್ಟ್ರಾಂಗ್ ಆಗುತ್ತಾನೆ. ನಾನು ಪ್ರತಿದಿನ ಶೈನ್ ಆಗುತ್ತೇನೆ ಎಂದು ನನ್ನ ಮಂತ್ರಿ ಪದವಿಯಿಂದ ತೆಗೆದರು ಎಂದು ಆರೋಪಿಸಿದರು.

    ಕಲಬುರಗಿಯಲ್ಲಿ ಸಮಾವೇಶಕ್ಕೆ ಪ್ರಧಾನಿಯವರು ಬಂದಿದ್ದಾಗ ನಾನು ಅವರ ಕಾಲಿಗೆ ಬಿದ್ದಾಗ ‘ಕೋಲಿ ಸಮಾಜ್ ಕೋ ಮಹಾನ್ ನಾಯಕ್ ಮಿಲಾ’ ನನ್ನ ಕಿವಿಯಲ್ಲಿ ಹೇಳಿದ್ದರು ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಕೋಲಿ ಸಮಾಜದವರು ಸ್ವಾಭಿಮಾನಿಗಳು, ಮಾರಾಟವಾಗುವವರಲ್ಲ. ನನಗಂತೂ ಮಕ್ಕಳಿಲ್ಲ, ಅವಿನಾಶ್ ಜಾಧವ್‍ನನ್ನು ನನ್ನ ದತ್ತು ಪುತ್ರ ಎಂದು ತಿಳಿದು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

  • ವಿಶ್ವನಾಥ್‍ಗೆ ಹೊಟ್ಟೆ ಕಿಚ್ಚು, ಆತನಿಗೆ ಏನು ಗೊತ್ತಿಲ್ಲ: ಏಕವಚನದಲ್ಲೇ ಸಿದ್ದರಾಮಯ್ಯ ತಿರುಗೇಟು

    ವಿಶ್ವನಾಥ್‍ಗೆ ಹೊಟ್ಟೆ ಕಿಚ್ಚು, ಆತನಿಗೆ ಏನು ಗೊತ್ತಿಲ್ಲ: ಏಕವಚನದಲ್ಲೇ ಸಿದ್ದರಾಮಯ್ಯ ತಿರುಗೇಟು

    ಕಲಬುರಗಿ: ವಿಶ್ವನಾಥ್‍ಗೆ ಹೊಟ್ಟೆಕಿಚ್ಚು ಇದ್ದು, ಆತನಿಗೆ ಏನು ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಏಕ ವಚನದಲ್ಲೇ ತಿರುಗೇಟು ನೀಡಿದ್ದಾರೆ.

    ಚಿಂಚೋಳಿಯ ಕೊಡದುರ ಗ್ರಾಮದಲ್ಲಿ ಕೈ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮಗಳು ನೀವು ಜನಪ್ರಿಯ ಸಿಎಂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿದ್ದಾರೆ ಎಂದಾಗ, ಜನಪ್ರಿಯ ಸಿಎಂ ಎಂದು ನಾನು ಹೇಳಿಲ್ಲ. ಜನ ಈ ಹೇಳಿಕೆ ನೀಡಿದ್ದಾರೆ. ವಿಶ್ವನಾಥ್‍ಗೆ ಹೊಟ್ಟೆ ಕಿಚ್ಚು. ಆತನಿಗೆ ಏನು ಗೊತ್ತಿಲ್ಲ. ಆ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದರು.ಇದನ್ನೂ ಓದಿ:ಒಳ್ಳೆಯ ಆಡಳಿತ ನೀಡಿದ್ರೆ ಯಾಕೆ 78ಕ್ಕೆ ಇಳಿಯಿತು – ಸಿದ್ದು ವಿರುದ್ಧ ಮತ್ತೆ ವಿಶ್ವನಾಥ್ ಗರಂ

    ಉತ್ತಮ ಆಡಳಿತ ನೀಡಿದ್ರೆ 78 ಸ್ಥಾನ ಯಾಕೆ ಬಂತು ಎಂದು ವಿಶ್ವನಾಥ್ ಹೇಳಿಕೆಗೆ, ಬಿಜೆಪಿಯವರ ಅಪ ಪ್ರಚಾರದಿಂದ ನಮಗೆ ಕಡಿಮೆ ಸ್ಥಾನ ಬಂದಿದೆ. ಎಸ್‍ಎಂ ಕೃಷ್ಣ ಅವಧಿಯಲ್ಲಿ ವಿಶ್ವನಾಥ್ ಮಂತ್ರಿ ಆಗಿದ್ದರು. ನಂತರದ ಚುನಾವಣೆಯಲ್ಲಿ 65 ಸ್ಥಾನ ಯಾಕೆ ಬಂತು ಎಂದು ಪ್ರಶ್ನಿಸಿ ತಿರುಗೇಟು ನೀಡಿದರು.

    ಆರಂಭದಲ್ಲಿ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುತ್ತೇನೆ ಎಂದು ಹೇಳಿದ ಸಿದ್ದರಾಮಯ್ಯ ನಂತರ ಮಾಧ್ಯಮಗಳು ವಿಶ್ವನಾಥ್ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದಾಗ ಏಕವಚನದಲ್ಲೇ ಆತನಿಗೆ ಹೊಟ್ಟೆ ಕಿಚ್ಚು ಎಂದು ಹೇಳಿ ತಿರುಗೇಟು ಕೊಟ್ಟರು.

  • ಕೇವಲ 9 ರೂ. ಇಟ್ಟುಕೊಂಡು ಚುನಾವಣಾ ಕಣಕ್ಕಿಳಿದ ಸ್ವಾಮೀಜಿ!

    ಕೇವಲ 9 ರೂ. ಇಟ್ಟುಕೊಂಡು ಚುನಾವಣಾ ಕಣಕ್ಕಿಳಿದ ಸ್ವಾಮೀಜಿ!

    ಕಲಬುರಗಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ ಶ್ರೀ ವೆಂಕಟೇಶ ಸ್ವಾಮೀಜಿ ಎಂಬವರು, ಚಿಂಚೋಳಿ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಧಾನಸಭೆಯ ಉಪಚುನಾವಣೆಯಲ್ಲಿ ಸಹ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ.

    ಈ ಸ್ವಾಮೀಜಿ ಕೈಯಲ್ಲಿ ಕೇವಲ 9(ಒಂಬತ್ತು) ರೂಪಾಯಿ ಮಾತ್ರ ನಗದು ಹಣವಿದೆಯಂತೆ, ಹೀಗಿದ್ದರೂ ಕೂಡ ಭಕ್ತರಿಂದ ಸಂಗ್ರಹಿಸಿದ ಹಣದಿಂದ ನಾಮಪತ್ರಕ್ಕೆ ಬೇಕಾಗಿರುವ ಹಣ ಸಂದಾಯ ಮಾಡಿದ್ದಾರೆ. ಹಾಗೆಯೇ ವಾರಣಾಸಿ-ಚಿಂಚೋಳಿ ಬಿಟ್ಟು ಮಹಾರಾಷ್ಟ್ರದ ಸೋಲಾಪುರ ಲೋಕಸಭೆಯಲ್ಲಿ ಸಹ ಈ ಸ್ವಾಮೀಜಿ ಸ್ಪರ್ಧಿಸುತ್ತಿದ್ದಾರೆ.

    ಹೀಗೆ ಯಾಕೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೀರಾ ಅಂತ ಸ್ವಾಮೀಜಿಗೆ ಪ್ರಶ್ನೆ ಕೇಳಿದರೆ, ನಾನು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಕೋಟ್ಯಾಧಿಪತಿ ಅಭ್ಯರ್ಥಿಗಳೇ ಕಣಕ್ಕಿಳಿದಿದ್ದಾರೆ. ಬರೀ ಶ್ರೀಮಂತರಿಗೆ ಮಾತ್ರ ಚುನಾವಣೆಯಲ್ಲ ಬಡವರು ಸಹ ಸ್ಪರ್ಧಿಸಬಹುದು ಎಂದು ಜನರಲ್ಲಿ ಜಾಗೃತಿ ಮೂಡಿಸಲು ಈ ರೀತಿ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿರುವುದ್ದಾಗಿ ಸ್ವಾಮೀಜಿ ಉತ್ತರಿಸಿದ್ದಾರೆ.

    ಈ ಅಪರೂಪದ ಸ್ವಾಮೀಜಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನವರಾಗಿದ್ದು, ಎಂ.ಕಾಂ ವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ವಾರಣಾಸಿಯಲ್ಲಿ ಮೋದಿ ನಾಮಪತ್ರ ಸಲ್ಲಿಸೋ ಮೊದಲೇ ವೆಂಕಟೇಶ ಸ್ವಾಮೀಜಿ ತಮ್ಮ ನಾಮಪತ್ರ ಸಲ್ಲಿಸಿದ್ದರು. ಆದ್ರೆ ನಾಮಪತ್ರವನ್ನು ತಿರಸ್ಕೃತವಾಗಿದೆ. ಅಲ್ಲದೆ ಹಿಂದುಸ್ತಾನ್ ಜನತಾ ಪಾರ್ಟಿಯಿಂದ ಸೊಲ್ಲಾಪುರದಲ್ಲಿ ಸ್ಪರ್ಧೆ ಮಾಡಿದ್ದರು. ಇದೀಗ ಚಿಂಚೋಳಿಯ ವಿಧಾನಸಭೆ ಉಪಚುನಾವಣೆಗೆ ಈ ಸ್ವಾಮೀಜಿ ಸ್ಪರ್ಧೆ ಮಾಡುತ್ತಿದ್ದಾರೆ.

  • ಸಚಿವ ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು

    ಸಚಿವ ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು

    ಕಲಬುರಗಿ: ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್‍ಗೆ ಪ್ರಿಯಾಂಕ್ ನಿಲ್ಲಲಿ. ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ. ಒಂದು ಕೈ ನೋಡಿಯೇ ಬಿಡೋಣ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಂಬರುವ ಬೈ ಎಲೆಕ್ಷನ್‍ನಲ್ಲಿ ಚಿಂಚೊಳ್ಳಿ ಕ್ಷೇತ್ರದಿಂದ ಪ್ರಿಯಾಂಕ್ ನಿಂತು ಗೆಲ್ಲಲಿ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ. ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದಿದ್ದಾರೆ.

    ಹಾಗೆಯೇ ಪದೇ ಪದೇ ಆಪರೇಷನ್ ಕಮಲದ ಕುರಿತು ಪ್ರಿಯಾಂಕ್ ಅವರು ಮಾತನಾಡುವುದು ಸರಿಯಲ್ಲ. ನಾನು 50 ಲಕ್ಷ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಅವರ ಮಕ್ಕಳ ಮೇಲೆ ಆಣೆ ಮಾಡಿ ಹೇಳಲಿ. ನಾನು ತಪ್ಪು ಮಾಡಿಲ್ಲ. ಸಿಬಿಐ ಸೇರಿದಂತೆ ಯಾವುದೇ ಉನ್ನತ ತನಿಖೆಗೂ ನಾನು ಸಿದ್ಧ. ಸುಮ್ಮನೆ ಸುಳ್ಳು ಆರೋಪ ಮಾಡೋದು ಪ್ರಿಯಾಂಕ್ ಅವರಿಗೆ ಶೋಭೆತರಲ್ಲ. ಸುಳ್ಳು ಹೇಳಿ ಸಣ್ಣತನ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲಬುರಗಿ: ಚುನಾವಣೆ ಬಹಿಷ್ಕರಿಸಿದ ಗ್ರಾಮಕ್ಕೆ ಸರ್ಕಾರಿ ಯೋಜನೆಗಳೇ ಕಟ್- ಹೊಲಕ್ಕೆ ಗೊಬ್ಬರ ಸಾಗಿಸಲು ಕತ್ತೆಗಳೇ ಆಧಾರ

    ಕಲಬುರಗಿ: ಚುನಾವಣೆ ಬಹಿಷ್ಕರಿಸಿದ ಗ್ರಾಮಕ್ಕೆ ಸರ್ಕಾರಿ ಯೋಜನೆಗಳೇ ಕಟ್- ಹೊಲಕ್ಕೆ ಗೊಬ್ಬರ ಸಾಗಿಸಲು ಕತ್ತೆಗಳೇ ಆಧಾರ

    ಕಲಬುರಗಿ: ತಮ್ಮ ಅಮೂಲ್ಯವಾದ ಮತ ನೀಡಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜನರ ಕಷ್ಟಗಳಿಗೆ ಜನಪ್ರತಿನಿಧಿಗಳು ಸ್ಪಂದಿಸಬೇಕು. ಆದ್ರೆ ಕಲಬುರಗಿಯ ಚಿಂಚೋಳಿ ತಾಲೂಕಿನ ಸುಂಠಾಣ ಗ್ರಾಮದ ಜನರು ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆಂಬ ಒಂದೇ ಕಾರಣಕ್ಕೆ ಆ ಗ್ರಾಮಕ್ಕೆ ಸರ್ಕಾರಿ ಸೌಲಭ್ಯವನ್ನೇ ಕಡಿತಗೊಳಿಸಲಾಗಿದೆ.

    ಅಧಿಕಾರಿಗಳು ತಪ್ಪು ಮತ ಲೆಕ್ಕ ನೀಡಿದ ಕಾರಣ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿದ ಕಾರಣಕ್ಕೆ ಸುಂಠಾಣಾ ಗ್ರಾಮಕ್ಕೆ ಈ ಸ್ಥಿತಿ ಬಂದೊದೊಗಿದೆ. ಮತ ಬಹಿಷ್ಕಾರ ಹಾಕಿದ್ದಕ್ಕೆ ಇಲ್ಲಿನ ರಾಜಕಾರಣಿಗಳು ಈ ಗ್ರಾಮದ ಮೇಲೆ ಸೇಡು ತೀರಿಸಿಕೊಳ್ಳಲು ನಿಂತಂತಿದೆ. ಪರಿಣಾಮ ಆ ಊರಿಗೆ ಸರ್ಕಾರಿ ಯೋಜನೆಗಳೇ ತಲುಪುತ್ತಿಲ್ಲ.

    ರೈತರ ಜಮೀನುಗಳಿಗೆ ತಲಪಲು ನರೇಗಾ ಯೋಜನೆಯಡಿ ರಾಜ್ಯ ಸರ್ಕಾರ “ನಮ್ಮ ಹೊಲ ನಮ್ಮ ರಸ್ತೆ” ಯೋಜನೆ ಜಾರಿಗೆ ತಂದಿದೆ. ಗುಡ್ಡಗಾಡು ಪ್ರದೇಶದಲ್ಲಿರುವ ಸುಂಠಾಣ ಗ್ರಾಮದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಎಕರೆ ಜಮೀನಿನಲ್ಲಿ ರೈತರು ವ್ಯವಸಾಯ ಮಾಡುತ್ತಾರೆ. ಆದ್ರೆ ಯೋಜನೆ ಜಾರಿಯಾಗದ ಕಾರಣ ತಮ್ಮ ಜಮೀನುಗಳಿಗೆ ಗೊಬ್ಬರ ಒಯ್ಯಲು ಮತ್ತು ರಾಶಿ ಮಾಡಿದ ಬೆಳೆ ತರಲು ಸುಂಠಾಣ ಗ್ರಾಮದ ರೈತರು ಇಂದಿಗೂ ಕತ್ತೆಗಳನ್ನು ಅವಲಂಬಿಸಿದ್ದಾರೆ.

    ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ ಕಾರಣ ಈ ಗ್ರಾಮಕ್ಕೆ ಜನಪ್ರತಿನಿಧಿಗಳೂ ಇಲ್ಲ. ಗ್ರಾಮದ ಸಮಸ್ಯೆ ಹೇಳಲು ಕೋಡ್ಲಿ ಗ್ರಾಮ ಪಂಚಾಯತ್‍ನಲ್ಲಿ ಸದಸ್ಯರೂ ಇಲ್ಲದಂತಾಗಿದೆ. ಹೀಗಾಗಿ ಇತರೆ ಗ್ರಾಮಗಳ ಪಂಚಾಯ್ತಿ ಸದಸ್ಯರ ರಾಜಕೀಯದಿಂದ ಸುಂಠಾಣ ಗ್ರಾಮಕ್ಕೆ ಯಾವುದೇ ಸೌಕರ್ಯ ಸಿಗುತ್ತಿಲ್ಲ. ಈ ಬಗ್ಗೆ ಪಿಡಿಓ ಕೂಡ ತಲೆಕೆಡಿಸಿಕೊಂಡಂತೆ ಕಾಣ್ತಿಲ್ಲ.

    ಪಬ್ಲಿಕ್ ಟಿವಿ ವರದಿ ನೋಡಿಯಾದ್ರೂ ಜಿಲ್ಲಾಧಿಕಾರಿಗಳು, ಸಿಎಂ ಸಂಸದೀಯ ಕಾರ್ಯದರ್ಶಿಯೂ ಆಗಿರೋ ಸ್ಥಳೀಯ ಶಾಸಕ ಉಮೇಶ್ ಜಾಧವ್, ಪಿಡಿಓ ಸೇರಿದಂತೆ ಇತರೆ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕಿದೆ.