Tag: chitrasanthe

  • ಚಿತ್ರಕಲೆ ಮನಸ್ಸಿನ ಭಾವನೆ ವ್ಯಕ್ತಪಡಿಸುವ ಒಂದು ಮಾಧ್ಯಮ: ಬೊಮ್ಮಾಯಿ

    ಚಿತ್ರಕಲೆ ಮನಸ್ಸಿನ ಭಾವನೆ ವ್ಯಕ್ತಪಡಿಸುವ ಒಂದು ಮಾಧ್ಯಮ: ಬೊಮ್ಮಾಯಿ

    ಬೆಂಗಳೂರು: ಮುಂದಿನ ವರ್ಷದಿಂದ 2 ದಿನಗಳ ಕಾಲ ಚಿತ್ರಸಂತೆ (Chitrasanthe) ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಚಿತ್ರಕಲಾ ಪರಿಷತ್‌ಗೆ (Chitrakala Parishath) ಸಲಹೆ ನೀಡಿದ್ದಾರೆ. 20ನೇ ಚಿತ್ರಸಂತೆ ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ, ಆಯೋಜಕರಿಗೆ 2 ದಿನ ಸಂತೆ ಆಯೋಜನೆಗೆ ಸೂಚನೆ ಕೊಟ್ಟಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರಕಲೆ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾಧ್ಯಮ. ಮನದಾಳದ ಮಾತುಗಳು ಮತ್ತು ಭಾವನೆಗಳನ್ನು ಚಿತ್ರಕಲೆ ಮೂಲಕ ವ್ಯಕ್ತಪಡಿಸಲಾಗುತ್ತದೆ. ಚಿತ್ರಕಲೆ ತಿಳಿದುಕೊಳ್ಳುವ ಪ್ರಯತ್ನ ಸಾರ್ವಜನಿಕರು ಮಾಡಬೇಕು. ಚಿತ್ರಕಲಾ ಪರಿಷತ್ತು ಕೆಲಸ ಒಳ್ಳೆಯ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು ಹಾಗೂ ಸಾಮಾನ್ಯ ಜನರಲ್ಲಿ ಚಿತ್ರಕಲೆ ಅಭಿಪ್ರಾಯ ಮೂಡಿಸಬೇಕು ಎಂದು ಸಲಹೆ ನೀಡಿದರು.

    ಇಂತಹ ಚಿತ್ರಕಲಾ ಪರಿಷತ್ತು ವಿಶ್ವದಲ್ಲೇ ಮತ್ತೊಂದು ಇಲ್ಲ. ಚಿತ್ರಕಲಾ ಪರಿಷತ್ತು ಒಳ್ಳೆಯ ಕೆಲಸ ಮಾಡುತ್ತಿದೆ. ಚಿತ್ರಸಂತೆ ಆಗಲೇ ಬೇಕಾಗಿರುವ ಸಂತೆ. ಇದು ಬೆಳೆಯಬೇಕು. ಇಲ್ಲಿ ಡಿಗ್ರಿ ಆದ ತಕ್ಷಣ ನೌಕರಿ ತೆಗೆದುಕೊಳ್ಳೊದಿಲ್ಲ. ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಂಸ್ಥೆ ಇದು ಎಂದು ಹೊಗಳಿದರು. ಇದನ್ನೂ ಓದಿ: ಮೋದಿ, ಅಮಿತ್ ಶಾ ಕಂಡ್ರೆ ನಮಗಲ್ಲ, ಡಿಕೆಶಿಗೆ ಭಯ: ಆರ್. ಅಶೋಕ್

    ಚಿತ್ರಕಲೆ ಎನ್ನುವುದು ಸರಸ್ವತಿ ವಾಹನ ಪರಮಹಂಸ ಇದ್ದ ಹಾಗೆ. ಈ ಸಂಸ್ಥೆ ಹಿಮಾಲಯದ ಎತ್ತರಕ್ಕೆ ಬೆಳೆಯಬೇಕು. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಕರ್ನಾಟಕ ಸೇರಿದಂತೆ ಈ ವರ್ಷ 4-5 ಭಾಗಗಳಲ್ಲಿ ಚಿತ್ರ ಸಂತೆ ಮಾಡಬೇಕು. ಇದಕ್ಕೆ ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ತಿಳಿಸಿದರು.

    ಈ ಚಿತ್ರಸಂತೆಯನ್ನು ರಾಷ್ಟ್ರೀಯ ಮಟ್ಟಕ್ಕೆ ತಗೆದುಕೊಂಡು ಹೋಗಬೇಕು. ಬ್ರ್ಯಾಂಡ್ ಬೆಂಗಳೂರನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುವುದರಲ್ಲಿ ಚಿತ್ರಕಲಾ ಪರಿಷತ್ತ್ಗೆ ತೆಗೆದುಕೊಂಡು ಹೋಗಬೇಕು. ಮುಂದಿನ ವರ್ಷದಿಂದ ಶನಿವಾರ ಮತ್ತು ಭಾನುವಾರ 2 ದಿನ ಚಿತ್ರಸಂತೆ ನಡೆಸುವಂತೆ ಸಿಎಂ ಆಯೋಜಕರಿಗೆ ಸಲಹೆ ನೀಡಿದರು. ಇದನ್ನೂ ಓದಿ: ಮುಂಬೈ ದಾಳಿ ವೇಳೆ ನಾನೂ ಹೋಟೆಲ್‌ನಲ್ಲಿದ್ದೆ: ಪಾರಾದ ಥ್ರಿಲ್ಲಿಂಗ್ ಘಟನೆ ವಿವರಿಸಿದ ಅದಾನಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ‘ಚಿತ್ರಸಂತೆ’

    ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ‘ಚಿತ್ರಸಂತೆ’

    ಬೆಂಗಳೂರು: ಸಿಲಿಕಾನ್ ಸಿಟಿಯ ಕಲಾಸಕ್ತರಿಗಾಗಿ, ಪ್ರತಿ ವರ್ಷದಂತೆ ಈ ವರ್ಷವೂ ನಗರದಲ್ಲಿ ಚಿತ್ರಸಂತೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಾಳೆ ಈ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ `ನೇಗಿಲಯೋಗಿ ರೈತರಿಗೆ’ ಚಿತ್ರಸಂತೆ ಸಮರ್ಪಣೆಗೊಳ್ಳುತ್ತಿದೆ.

    ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೇ ನಿಂತಿದೆ ಧರ್ಮ’ ಸಾಲನ್ನು ಈ ಚಿತ್ರಸಂತೆಯ ಧ್ಯೇಯವಾಕ್ಯವಾಗಿದೆ. ಕುಮಾರಕೃಪಾ ರಸ್ತೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ(ನಾಳೆ) ಬೆಳಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ.

    ಚಿತ್ರಸಂತೆಯಲ್ಲಿ ಪಾಲ್ಗೊಳ್ಳಲು 1,300 ಕಲಾವಿದರನ್ನು ಆಯ್ಕೆ ಮಾಡಿದ್ದು, ಹೊರ ರಾಜ್ಯದ ಕಲಾವಿದರಿಗೆ ಚಿತ್ರಕಲಾ ಪರಿಷತ್ ಊಟ, ವಸತಿ ಸೌಲಭ್ಯ ನೋಡಿಕೊಳ್ಳುತ್ತಿದೆ. ಚಿತ್ರಸಂತೆಯನ್ನು ರೈತರಿಗೆ ಸಮರ್ಪಿಸುತ್ತಿರುವುದರಿಂದ ಈ ಮೇಳದಲ್ಲಿ ರೈತರು ಬಳಸುವ ವಸ್ತು, ಕೃಷಿ ಪರಿಕರಗಳು, ರಾಜ್ಯದ ನಾನಾ ಭಾಗಗಳಲ್ಲಿ ಬಳಸಲಾಗುವ ಎಲ್ಲಾ ರೀತಿಯ ಕೃಷಿ ವಸ್ತುಗಳನ್ನು ಸಂಗ್ರಹಿಸಿ ಅವುಗಳನ್ನು ಪ್ರದರ್ಶಿಸಲಾಗುತ್ತದೆ. ಸುಮಾರು 4 ಲಕ್ಷ ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡುವ ನಿರೀಕ್ಷೆ ಇದೆ.

  • ಬೆಂಗ್ಳೂರಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ 16ನೇ ಚಿತ್ರಸಂತೆ

    ಬೆಂಗ್ಳೂರಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ 16ನೇ ಚಿತ್ರಸಂತೆ

    ಬೆಂಗಳೂರು: ನಗರದ ಕುಮಾರಕೃಪಾ ರಸ್ತೆ ಮತ್ತು ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಇಂದು 16ನೇ ಚಿತ್ರಸಂತೆ ನಡೆಯುತ್ತಿದ್ದು, ಚಿತ್ರ ಪ್ರೇಮಿಗಳನ್ನು ಕೈಬೀಸಿ ಕರೆಯುತ್ತಿದೆ.

    16 ನೇ ಚಿತ್ರಸಂತೆಗೆ ಲೋಕಾಸಭಾ ಸದಸ್ಯ ಪಿ.ಸಿ.ಮೋಹನ್ ಅವರು ಗಾಂಧಿ ಚಿತ್ರವಿರುವ ಕ್ಯಾನ್ವಾಸ್ ಗೆ ಸಹಿ ಹಾಕಿ ಇಂದು ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಇನ್ನಿತರರು ಭಾಗಿಯಾಗಿದ್ದಾರೆ.

    ಮಹಾತ್ಮ ಗಾಂಧೀಜಿಗೆ ಸಮರ್ಪಣೆ:
    ಪ್ರತೀ ವರ್ಷದಂತೆ ಈ ವರ್ಷವೂ ಚಿತ್ರಸಂತೆ ನಡೆಯುತ್ತಿದ್ದು, ಈ ವರ್ಷದ ಚಿತ್ರಸಂತೆಯನ್ನು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಸಮರ್ಪಣೆ ಮಾಡಲಾಗಿದೆ. ಯಾಕಂದ್ರೆ ಪ್ರಸ್ತುತ ವರ್ಷ ಗಾಂಧೀಜಿಯವರ 150ನೇ ಜನ್ಮ ವರ್ಷವಾಗಿದೆ. ಹೀಗಾಗಿ ಇಂದಿನ ಚಿತ್ರಸಂತೆಯ ಸಂಪೂರ್ಣ ಅಲಂಕಾರವನ್ನು ಅವರಿಗೆ ಸಮರ್ಪಿಸಲಾಗಿದೆ.

    ಮಹಾತ್ಮ ಗಾಂಧಿಯವರು ಬೆಂಗಳೂರಿಗೆ ಬಂದಾಗಲೆಲ್ಲ ಕುಮಾರಕೃಪಾದಲ್ಲಿಯೇ ವಾಸ್ತವ್ಯ ಹೂಡುತ್ತಿದ್ದು, ಆಗ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿನ ಗಾಂಧಿ ಕುಟೀರದ ಕಲ್ಲು ಬಂಡೆಯ ಮೇಲೆ ವಿರಮಿಸಿದ್ದರು ಎಂಬುದು ಇಂದು ಐತಿಹಾಸಿಕ ದಾಖಲೆಯಾಗಿದೆ. ಹೀಗಾಗಿ ಚಿತ್ರಕಲಾ ಪರಿಷತ್ತು ಮಹಾತ್ಮ ಗಾಂಧಿಯವರಿಗೆ ತನ್ನದೇ ಆದ ರೀತಿಯಲ್ಲಿ ದೃಶ್ಯ ಕಲೆಯ ಮೂಲಕ ಗೌರವವನ್ನು ಅರ್ಪಿಸುತ್ತಿದೆ.

    ಗಾಂಧೀಜಿ ಛಾಯಾಚಿತ್ರ ಪ್ರದರ್ಶನ:
    ಚಿತ್ರಕಲಾ ಪರಿಷತ್ತಿನ ಚಿತ್ರಕಲಾ ಮಹಾವಿದ್ಯಾಲಯದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಂಪೂರ್ಣ ಆವರಣವನ್ನು ಮಹಾತ್ಮ ಗಾಂಧಿಯವರ ಕನ್ನಡಕ, ಚರಕ ಮೊದಲಾದ ವಸ್ತುಗಳನ್ನು ಬೃಹತ್ ರೂಪದಲ್ಲಿ ನಿರ್ಮಿಸಿದ್ದಾರೆ. ಗಾಂಧೀಜಿಯವರು ವಿರಮಿಸಿದ ಸ್ಥಳದಲ್ಲಿ ಕುಟೀರವನ್ನು ನಿರ್ಮಿಸಿ ಗಾಂಧಿಭವನದಿಂದ ಎರವಲು ಪಡೆದ ಗಾಂಧೀಜಿಯವರ ಕುರಿತಾದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಇಷ್ಟು ಮಾತ್ರವಲ್ಲದೇ ಚಿತ್ರಕಲಾ ಪರಿಷತ್ತಿನ 4 ಗ್ಯಾಲರಿಗಳಲ್ಲೂ ಆಹ್ವಾನಿತ ಕಲಾವಿದರು ರಚಿಸಿರುವ ಗಾಂಧಿಯವರ ಕುರಿತಾದ ಕಲಾಕೃತಿಗಳನ್ನು ಕೂಡ ಪ್ರದರ್ಶಿಸಲಾಗಿದೆ.

    ಉಳಿದಂತೆ ಪ್ರತಿ ವರ್ಷದಂತೆ ಈ ಬಾರಿಯೂ ದೇಶದ ವಿವಿಧ ಭಾಗಗಳಿಂದ ಬರುವ ಸುಮಾರು 1,500 ಕಲಾವಿದರ ಕಲಾಕೃತಿಗಳು ಪ್ರದರ್ಶನವಾಗುತ್ತಿವೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಮೊದಲಾದ ರಾಜ್ಯಗಳಿಂದ ಕಲಾವಿದರು ಭಾಗವಹಿಸಿದ್ದಾರೆ.

    ಒಟ್ಟಿನಲ್ಲಿ ಚಿತ್ರಸಂತೆಯಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದಾರೆ. ಸಾಮಾನ್ಯವಾಗಿ ಚಿತ್ರಸಂತೆಯಲ್ಲಿ ಮೈಸೂರು ಸಾಂಪ್ರದಾಯಿಕ ಶೈಲಿ, ತಂಜಾವೂರು, ರಾಜಸ್ಥಾನಿ, ಮಧುಬನಿಯ, ತೈಲ ಮತ್ತು ಜಲವರ್ಗಗಳ ಕಲಾಕೃತಿಗಳು ಲಭ್ಯವಿರುತ್ತದೆ, ಇವಲ್ಲದೆ ಅಕ್ರಿಲಿಕ್, ಕೊಲಾಜ್, ಲಿಥೋಗ್ರಾಫ್ ಮೊದಲಾದ ಪ್ರಕಾರಗಳ ಕಲಾಕೃತಿಗಳು ಇಲ್ಲಿ ದೊರೆಯುತ್ತವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv