Tag: Chittapura

  • ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ: ಇಂದು ಏನಾಯ್ತು?

    ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ: ಇಂದು ಏನಾಯ್ತು?

    –  ರಾಷ್ಟ್ರಧ್ವಜ ಹಿಡಿದು ಪಥಸಂಚಲನ ಮಾಡುವಂತೆ ದಲಿತ ಸಂಘಟನೆಗಳಿಂದ ಪಟ್ಟು

    ಕಲಬುರಗಿ: ಚಿತ್ತಾಪುರ (Chittapur) ಆರ್‌ಎಸ್‌ಎಸ್ ಪಥಸಂಚಲನ (RSS Flag March) ಪ್ರಕರಣ ಸಂಬಂಧ ಕಲಬುರಗಿ (Kalaburagi) ಜಿಲ್ಲಾಡಳಿತ ನಡೆಸಿದ ಶಾಂತಿ ಸಭೆಯಲ್ಲಿಅಶಾಂತಿ ಮೂಡಿದೆ.

    ಬೆಳಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ನೇತೃತ್ವದಲ್ಲಿ ಆರ್‌ಎಸ್‌ಎಸ್, ಭೀಮ್ ಆರ್ಮಿ (Bhim Army) ಸೇರಿದಂತೆ 10 ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೊದಲಿಗೆ ಡಿಸಿಗೆ ಲಿಖಿತ ಹೇಳಿಕೆ ಸಲ್ಲಿಸಿದ ಸಂಘಟನೆಗಳಿಗೆ ಸಭೆಯಲ್ಲಿ ಅನಿಸಿಕೆ ಹೇಳಲು ಸೂಚಿಸಲಾಯಿತು.

    ಈ ವೇಳೆ ಆರ್‌ಎಸ್‌ಎಸ್ ಲಾಠಿ ಬಿಟ್ಟು ರಾಷ್ಟ್ರಧ್ವಜ ಹಿಡಿದು ಪಥಸಂಚಲನ ಮಾಡುವಂತೆ ದಲಿತ (Dalit) ಸಂಘಟನೆಗಳು ಪಟ್ಟು ಹಿಡಿದವು. ಇದಕ್ಕೆ ಲಾಠಿ ಹಿಡಿದು ಪಥಸಂಚಲನ ಮಾಡುವುದಾಗಿ ಆರ್‌ಎಸ್‌ಎಸ್ ಪರವಾಗಿ ಬಂದ ಬಿಜೆಪಿ ಮುಖಂಡ ಅಂಬಾರಾಯ್ ಅಷ್ಟಗಿ ಹೇಳಿದರು. ಎರಡು ಕಡೆ ವಾಗ್ವಾದ ಜೋರಾದ ಬೆನ್ನಲ್ಲೇ ಪರಿಸ್ಥಿತಿ ಅರಿತ ಜಿಲ್ಲಾಧಿಕಾರಿಗಳು ಶಾಂತಿ ಸಭೆಯನ್ನು ಅರ್ಧಕ್ಕೆ ಅಂತ್ಯಗೊಳಿಸಿದರು.

    ಸಭೆಯ ಬಳಿಕ ಹೊರಬಂದ ಆರ್‌ಎಸ್‌ಎಸ್ ಮುಖಂಡರ ವಿರುದ್ಧ ಸಂಘಟನೆಗಳು ಧಿಕ್ಕಾರ ಕೂಗಿದರು. ಪೊಲೀಸರು ಮಧ್ಯಪ್ರವೇಶಿಸಿ ಆರ್‌ಎಸ್‌ಎಸ್ ಮುಖಂಡರನ್ನು ಕಾರಿನವರೆಗೆ ಕರೆದೊಯ್ದು ಕಳಿಸಿದರು. ಇದನ್ನೂ ಓದಿ:  ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಬಿಹಾರಿಗಳಿಗೆ ಮಹಾಘಟಬಂಧನ್ ‘ಗ್ಯಾರಂಟಿ’

    ಮಾಧ್ಯಮಗಳ ಜೊತೆ ಮಾತಾಡಿದ ದಲಿತ ಸಂಘಟನೆ ಮುಖಂಡರು, ಆರ್‌ಎಸ್‌ಎಸ್ ಪಥಸಂಚನಲದ ದಿನವೇ ನಾವೂ ಪಥಸಂಚಲನ ಮಾಡುತ್ತೇವೆ ಎಂದರು. ಇದಕ್ಕೆ ಕಿಡಿಕಾರಿದ ಆರ್‌ಎಸ್‌ಎಸ್ ಪರ ಬಿಜೆಪಿ ಮುಖಂಡ ಅಂಬಾರಾಯ್ ಅಷ್ಟಗಿ, ಪ್ರಿಯಾಂಕ್ ಖರ್ಗೆ (Priyank Kharge) ಜಿದ್ದಿಗೆ ಬಿದ್ದು ಈ ರೀತಿ ಮಾಡುತ್ತಿದ್ದಾರೆ ದೂರಿದರು.

    ಅ.30 ರಂದು ಕಲಬುರಗಿ ಹೈಕೋರ್ಟ್ (Kalaburagi High Court)  ಆದೇಶದತ್ತ ಎಲ್ಲರ ಚಿತ್ತ ಇದೆ. ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಮಾಡುತ್ತಾ ಎನ್ನುವ ಕುತೂಹಲ ಹೆಚ್ಚಾಗಿದೆ.

     

    ಯಾರು ಏನು ಹೇಳಿದ್ದಾರೆ?
    ನಾವು ಲಾಠಿ ಬಿಟ್ಟು ಪಥಸಂಚಲನ ಮಾಡಿ ಅಂತ ಹೇಳಿದ್ದೆವು. ಆದರೆ ಆರ್‌ಎಸ್‌ಎಸ್‌ ಒಪ್ಪಿಲ್ಲ. ಇಂದು ನಡೆದ ಸಭೆಯಲ್ಲಿ ಒಮ್ಮತ ಬಂದಿಲ್ಲ. ಆರ್‌ಎಸ್‌ಎಸ್‌ ಪಥಸಂಚಲನದ ದಿನವೇ ನಾವು ದಲಿತ ಸಂಘಟನೆಗಳಿಂದ ಪಥಸಂಚಲನ ಮಾಡುತ್ತೇವೆ.
    – ರಾಜು, ದಲಿತ ಮುಖಂಡ

    ಪ್ರಿಯಾಂಕ್ ಖರ್ಗೆ ಜಿದ್ದಿಗೆ ಬಿದ್ದು ಈ ರೀತಿ ಮಾಡುತ್ತಿದ್ದಾರೆ. ನನ್ನ ಮೇಲೆ ಏಕಾಏಕಿ ಹಲ್ಲೆ ಮಾಡಲು ಬಂದಿದ್ದಾರೆ. ನನ್ನ ಮೇಲೆ ಮತ್ತೆ ಏನಾದ್ರು ಆದ್ರೆ ಅದಕ್ಕೆ ಪ್ರಿಯಾಂಕ್ ಖರ್ಗೆ ಅವರೇ ಕಾರಣ.ಲಾಠಿ ಬಿಟ್ಟು ಪಥಸಂಚಲನ ಮಾಡಿ ಎನ್ನುತ್ತಿದ್ದಾರೆ. ನಮಗೆ ಹೇಳಲು ಇವರು ಯಾರು? ಸಭೆಗೆ ಬಂದವರಲ್ಲಿ ರೌಡಿ ಶೀಟರ್ ಗಳಿದ್ದಾರೆ
    – ಅಂಬರಾಯ ಅಷ್ಟಗಿ, ಬಿಜೆಪಿ ಮುಖಂಡ

  • ನ.2 ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ: ವಿಜಯೇಂದ್ರ

    ನ.2 ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ: ವಿಜಯೇಂದ್ರ

    ಬೆಂಗಳೂರು: ನವೆಂಬರ್ 2 ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನ (RSS March Past) ನಡದೇ ನಡೆಯುತ್ತದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ‌ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಿಯಾಂಕ್ ಖರ್ಗೆಗೆ RSS ಟೀಕೆ ಮಾಡೋ ದುರ್ಬುದ್ಧಿ ಯಾಕೆ ಬಂದಿದೆಯೋ ಗೊತ್ತಿಲ್ಲ. RSS ಟೀಕೆ ಮಾಡ್ತಿರೋದು ಪ್ರಚಾರಕ್ಕೋ ಅಥವಾ ಸಿಎಂ ಕುರ್ಚಿಗೆ ಟವಲ್ ಹಾಕೋಕೆ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಹೇಳಿದ ಹಾಗೆ ಪ್ರಿಯಾಂಕ್ ಖರ್ಗೆ ಏಕಾಂಗಿ ಆಗಿದ್ದಾರೆ. ಗಾಂಧಿ ಕುಟುಂಬದಿಂದಲೇ RSS ಮಣಿಸೋಕೆ ಆಗಲಿಲ್ಲ. ಇಂತಹ ಹೇಳಿಕೆ ನಿತ್ಯ ಕೊಡೋ ಮೂಲಕ ವಾಸ್ತವಿಕ ಸತ್ಯ ಮರೆ ಮಾಚೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಆಡಳಿತ ಪಕ್ಷದ ವೈಫಲ್ಯ ಮುಚ್ಚಿಕೊಳ್ಳೋಕೆ RSS ಟೀಕೆ ಮಾಡ್ತಿದ್ದಾರೆ ಅಂತ ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ

    ಚಿತ್ತಾಪುರದಲ್ಲಿ 2ನೇ ತಾರೀಖು RSS ‌ಪಥ ಸಂಚಲನ ನಡೆದೇ ನಡೆಯುತ್ತೆ. ಹೈಕೋರ್ಟ್ ಕೂಡ ಹೇಳಿದೆ. ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪಥ ಸಂಚಲನ ಆಗ್ತಿದೆ. ಹಾಗೇ ಚಿತ್ತಾಪುರದಲ್ಲಿ ನಡೆಯುತ್ತದೆ. ಪ್ರಿಯಾಂಗ್‌ ಖರ್ಗೆ ಹೀಗೆ‌ ಟೀಕೆ ಮಾಡಿ RSS ಅವಹೇಳನ ಮಾಡೋದು ಸರಿಯಲ್ಲ. RSS ಇಂತಹ ಅನೇಕ ಅಗ್ನಿ ಪರೀಕ್ಷೆ ಎದುರಿಸಿದೆ. RSS ಯಾವುದೇ ವಿಷಯಕ್ಕೆ ಪ್ರತಿಕ್ರಿಯೆ ನೀಡದೇ ಸಮಾಜ ಸೇವೆ ಕೆಲಸ ಮುಂದುವರೆಸಿಕೊಂಡು ಹೋಗ್ತಿದೆ ಅಂತ ತಿಳಿಸಿದರು. ಇದನ್ನೂ ಓದಿ: Maharashtra | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ

    ಬಿಜೆಪಿ ಅವರು ಸೀಳು ನಾಯಿಗಳು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಅವರ ಅಪ್ರಬುದ್ಧ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಪ್ರಿಯಾಂಕ್ ಖರ್ಗೆ ಅವರೇ ಕೆಲಸಕ್ಕೆ ಬಾರದ್ದನ್ನ ಮಾತಾಡೋದು ಬಿಡಿ. ನಿಮ್ಮ ಕುಟುಂಬ 40-50 ವರ್ಷಗಳ ಕಾಲ ರಾಜಕೀಯದಲ್ಲಿ ಹಿಡಿತ ಇಟ್ಟುಕೊಂಡು ಬಂದಿದೆ. ನಿಮ್ಮ ಅಧಿಕಾರದಲ್ಲಿ ಕಲಬುರಗಿ ಏನಾಗಿದೆ ಮೊದಲು ಹೇಳಿ? ಶಿಕ್ಷಣದಲ್ಲಿ ಎಷ್ಟನೇ ಸ್ಥಾನದಲ್ಲಿ ‌ಇದೆ ಮೊದಲು ಹೇಳಿ? ಅವರ ಜಿಲ್ಲೆ ಏನ್ ಅಭಿವೃದ್ಧಿ ಆಗಿದೆ ಮೊದಲು ಪ್ರಿಯಾಂಕ್ ಖರ್ಗೆ ನೋಡಲಿ. ಬಿಜೆಪಿ ಅವಧಿಯಲ್ಲಿ ಕಲಬುರ್ಗಿಗೆ ಎಷ್ಟು ಹಣ ಬಿಡುಗಡೆ ಆಗಿತ್ತು. ಕಾಂಗ್ರೆಸ್ ಅವಧಿಯಲ್ಲಿ ಎಷ್ಟು ಹಣ ಕೊಟ್ಟಿದ್ದಾರೆ? ಮೊದಲು ಪ್ರಿಯಾಂಕ್ ಖರ್ಗೆ ಹೇಳಲಿ ಅಂತ ಪ್ರಿಯಾಂಕ್ ವಿರುದ್ಧ ವಿಜಯೇಂದ್ರ ಕಿಡಿಕಾರಿದರು.

  • ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್‌, ಬಂಟಿಂಗ್‌ ತೆರವು

    ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್‌, ಬಂಟಿಂಗ್‌ ತೆರವು

    * ಹಣ ಪಾವತಿಸಿದ್ದರೂ ಬ್ಯಾನರ್‌ ತೆರವು; ಹಿಂದೂ ಕಾರ್ಯಕರ್ತರ ಆಕ್ರೋಶ

    ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಿಗದಿಯಾಗಿದ್ದ ಆರ್‌ಎಸ್‌ಎಸ್‌ (RSS) ಪಥ ಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ತೆರವುಗೊಳಿಸಲಾಗಿದೆ. ಅಧಿಕಾರಿಗಳ ನಡೆಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚಿತ್ತಾಪುರ (Chittapura) ಪುರಸಭೆ ಕಚೇರಿ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಆರ್‌ಎಸ್‌ಎಸ್‌ ಪಥ ಸಂಚಲನ ಹಿನ್ನೆಲೆಯಲ್ಲಿ 6 ಸಾವಿರ ರೂ. ಹಣ ಪಾವತಿಸಿ ಬಂಟಿಂಗ್‌, ಬ್ಯಾನರ್‌ ಅಳವಡಿಸಲಾಗಿತ್ತು. ಹಣ ಪಾವತಿಸಿದರೂ ತೆರವು ಮಾಡಿದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗಿ- ರಾಯಚೂರಿನ PDO ಅಮಾನತು

    ವಿಚಾರಣೆಗೆ ತೆರಳಿದಾಗ ಪುರಸಭೆ ಸಿಬ್ಬಂದಿ ಕಚೇರಿ ಬಿಟ್ಟು ಹೋಗಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಅಮಾನತಿಗೆ ಆಗ್ರಹಿಸಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.

    ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್ಎಸ್ ಕಾರ್ಯಕ್ರಮಕ್ಕೆ ಬ್ಯಾನ್ ಕುರಿತು ಸಚಿವ‌ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆಂಬ ಕಾರಣಕ್ಕೆ ಪಿಡಿಒ ಅಮಾನತು ಕೂಡ ಮಾಡಲಾಗಿದೆ. ಇದನ್ನೂ ಓದಿ: ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ

    ಸರ್ಕಾರದ ನಡೆಗೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಹಿಂದೂ ಕಾರ್ಯಕರ್ತರು ಕೂಡ ಆಕ್ರೋಶ ಹೊರಹಾಕಿದ್ದು, ನಾಳೆ ಪಥ ಸಂಚಲನಕ್ಕೆ ಮುಂದಾಗಿದ್ದಾರೆ.

  • ಕೋರಿಸಿದ್ದೇಶ್ವರ ಮಠಕ್ಕೆ ಮೇಘಾಲಯ ರಾಜ್ಯಪಾಲ ವಿಜಯ್‌ಶಂಕರ್ ಭೇಟಿ

    ಕೋರಿಸಿದ್ದೇಶ್ವರ ಮಠಕ್ಕೆ ಮೇಘಾಲಯ ರಾಜ್ಯಪಾಲ ವಿಜಯ್‌ಶಂಕರ್ ಭೇಟಿ

    ಕಲಬುರಗಿ: ಜಿಲ್ಲೆಯ ಚಿತ್ತಾಪುರ (Chittapura) ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಶ್ರೀ ಸದ್ಗುರು ಕೋರಿಸಿದ್ದೇಶ್ವರ ಮಠಕ್ಕೆ ಮೇಘಾಲಯ (Meghalaya) ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್ (C H Vijayashankar) ಅವರು ಶುಕ್ರವಾರ ಭೇಟಿ ನೀಡಿದರು.

    ತೋಟೆಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಮತ್ತು ಶ್ರೀ ಸಿದ್ಧತೋಟೆಂದ್ರ ಶಿವಾಚಾರ್ಯರ ಜನ್ಮದಿನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಠದ ಆವರಣದಲ್ಲಿ ನಿರ್ಮಾಣವಾಗಿರುವ ಸುವರ್ಣ ಭವನದ ಉದ್ಘಾಟನೆಯನ್ನು ನೆರವೇರಿಸಿದರು. ಇದನ್ನೂ ಓದಿ: ಶಿವಮೊಗ್ಗ ದಸರಾ | ಬೆಳ್ಳಿ ಅಂಬಾರಿ ಜಂಬೂಸವಾರಿಗೆ ಸಕಲ ಸಿದ್ಧತೆ

    ಈ ಸಂದರ್ಭದಲ್ಲಿ ಮಠದ ವತಿಯಿಂದ ರಾಜ್ಯಪಾಲರಿಗೆ ಗೌರವ ಸತ್ಕಾರ ಮಾಡಲಾಯಿತು. ಮೇಘಾಲಯ ರಾಜ್ಯಪಾಲರಿಗೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದರು. ನಾಲವಾರ್ ಶ್ರೀಗಳು, ಶ್ರೀಶೈಲಂ ಸಾರಂಗಮಠದ ಪೀಠಾಧಿಪತಿ ಡಾ, ಸಾರಂಗದೇಶಿಕೆಂದ್ರ ಮಹಾಸ್ವಾಮಿಗಳು, ಮಾಜಿ ಸಂಸದ ಡಾ. ಬಸವರಾಜ್ ಪಾಟೀಲ್ ಸೇಡಂ, ಶಾಸಕರಾದ ಬಿ.ಜಿ. ಪಾಟೀಲ್, ಬಸವರಾಜ್ ಮತ್ತಿಮೂಡ್ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: Bagmati Express Train Accident | ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ರೈಲ್ವೇಯಿಂದ ಕರೆ

    ಈ ಜುಲೈನಲ್ಲಿ ಮೈಸೂರು ಮೂಲದ ವಿಜಯಶಂಕರ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಘಾಲಯ ರಾಜ್ಯಪಾಲರಾಗಿ ನೇಮಿಸಿದ್ದರು. ಇದನ್ನೂ ಓದಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳಿಗೆ ಗುಂಡೇಟು

  • ಕಲಬುರಗಿ| ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ

    ಕಲಬುರಗಿ| ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ

    ಕಲಬುರಗಿ: ಚಿತ್ತಾಪುರ (Chittapur) ಪಟ್ಟಣದ ಹೊರವಲಯದಲ್ಲಿರುವ ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾವನ್ನು ಕೆಲ ಕಿಡಿಗೇಡಿಗಳು ನಿನ್ನೆ ರಾತ್ರಿ (ಗುರುವಾರ) ವೇಳೆ ಧ್ವಂಸಗೊಳಿಸಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.

    ದರ್ಗಾದ ಗೇಟಿನ ಬೀಗ ಮುರಿದು, ಸುತ್ತ ಕಟ್ಟಿದ ಕಟ್ಟೆ ಮತ್ತು ದರ್ಗಾದ ಮೇಲೆ ಸ್ಥಾಪಿಸಿದ ಗೋಪುರವನ್ನು ಧ್ವಂಸಗೊಳಿದ್ದಾರೆ ಎಂದು ತಿಳಿದು ಬಂದಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆ ಹೊಂದಿರುವ ಸೈಯದ್ ಪೀರ್ ದರ್ಗಾವನ್ನು ಧ್ವಂಸಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀರ್ವ ಚರ್ಚೆಗೆ ಗ್ರಾಸವಾಗಿ ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಇದನ್ನೂ ಓದಿ: Jammu Kashmir | ಕಾಂಗ್ರೆಸ್‌ ಬೆಂಬಲ ಇಲ್ಲದೇ ಬಹುಮತ ಸಾಧಿಸಿದ NC

    ಈ ರೀತಿ ದರ್ಗಾವನ್ನೇ ಗುರಿಯಾಗಿಸಿಟ್ಟಿಕೊಂಡು ದರ್ಗಾವನ್ನು ಧ್ವಂಸಗೊಳಿಸಿರುವುದು ಸರಿಯಲ್ಲ. ಈ ಕೃತ್ಯದಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ದರ್ಗಾದ ಉಸ್ತುವಾರಿ ಸೈಯದ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ಹಗರಣ: ತನಿಖೆಗೆ ಎಸ್‌ಐಟಿ ರಚನೆಗೆ ಸಚಿವ ಸಂಪುಟ ಗ್ರೀನ್‌ ಸಿಗ್ನಲ್

    ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ, ಕ್ರೈಂ ಪಿಎಸ್‌ಐ ಚಂದ್ರಾಮಪ್ಪ, ಸಿಬ್ಬಂದಿ ಬಸ್ಸು ರೆಡ್ಡಿ, ದತ್ತು ಸೇರಿದಂತೆ ದರ್ಗಾದ ಉಸ್ತುವಾರಿ ಸೈಯದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದನ್ನೂ ಓದಿ: ನಾವು ರಾಜಕೀಯ ಸಭೆ ಮಾಡಿಲ್ಲ, ನಮ್ಮ ಮೇಲಿನ ಆಪಾದನೆಯಿಂದ ಬೇಜಾರಾಗಿದೆ: ಪರಮೇಶ್ವರ್

  • ತವರು ಮನೆಗೆ ಹೋಗಿದ್ದ ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

    ತವರು ಮನೆಗೆ ಹೋಗಿದ್ದ ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

    ಕಲಬುರಗಿ: ತವರು ಮನೆಗೆ ಹೋಗಿದ್ದ ಪತ್ನಿಯನ್ನು ಪತಿಯೇ ಗುಂಡಿಟ್ಟು ಕೊಂದಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಚಿತ್ತಾಪುರ (Chittapura) ತಾಲೂಕಿನ ಅಲ್ಲೂರ್ ಕೆ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಘಟನೆ ನಡೆದಿದೆ. ಹನಮವ್ವ (36) ಕೊಲೆಯಾದ ಮಹಿಳೆ. ಆಕೆಯ ಗಂಡ ಬಸವರಾಜ್ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

    ಮದುವೆ ಆದಾಗಿಂದ ಗಂಡ-ಹೆಂಡತಿ ನಡುವೆ ನಿರಂತರ ಜಗಳವಾಗುತ್ತಿದ್ದು, ಗಂಡನ ಕಿರುಕುಳಕ್ಕೆ ಬೇಸತ್ತು ಮಹಿಳೆ ತವರು ಮನೆ ಸೇರಿದ್ದಳು. ಆದರೆ ಇಂದು ಬೆಳಗ್ಗೆ ತವರು ಮನೆಯಲ್ಲಿದ್ದ ಪತ್ನಿಯನ್ನು ಬಸವರಾಜ್ ಗುಂಡಿಟ್ಟು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಡೀಲ್‍ನಲ್ಲಿ ‘ವಿಶ್ವನಾಥ್‌ ಜೀʼ ಪಾತ್ರಧಾರಿ ಚನ್ನನಾಯ್ಕ್ ತನ್ನ ಪಾತ್ರದ ಬಗ್ಗೆ ವಿವರಿಸಿದ್ದು ಹೀಗೆ..

    ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಫಾ ವೈರಸ್ ಹರಡುವ ಭೀತಿ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿ, ಸಹೋದರನಿಗಾಗಿ ಒಂದು ದಿನ ಆಸ್ಪತ್ರೆಗೆ ಭೇಟಿ – ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಿಯಾಂಕ್ ಪ್ರಚಾರ

    ಪತ್ನಿ, ಸಹೋದರನಿಗಾಗಿ ಒಂದು ದಿನ ಆಸ್ಪತ್ರೆಗೆ ಭೇಟಿ – ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಿಯಾಂಕ್ ಪ್ರಚಾರ

    ಕಲಬುರಗಿ: ಕಾಂಗ್ರೆಸ್ (Congress) ಶಾಸಕ ಹಾಗೂ ಚಿತ್ತಾಪುರ (Chittapura) ಅಭ್ಯರ್ಥಿಯಾಗಿರುವ ಪ್ರಿಯಾಂಕ್ ಖರ್ಗೆ (Priyank Kharge) ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

    ಒಂದೆಡೆ ಚುನಾವಣೆ (Election) ಹತ್ತಿರ ಬರುತ್ತಿದ್ದು, ಇನ್ನೊಂದೆಡೆ ತಮ್ಮ ಪತ್ನಿ ಶ್ರುತಿ ಖರ್ಗೆ (Shruthi Kharge) ಅನಾರೋಗ್ಯದಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಶ್ರುತಿ ಖರ್ಗೆ ಬ್ರೈನ್ ಟ್ಯೂಮರ್‌ನಿಂದ (Brain Tumor) ಬಳಲುತ್ತಿದ್ದು, ಮುಂಬೈನ (Mumbai) ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಯತ್ನಾಳ್‌, ಪ್ರಿಯಾಂಕ್‌ ಖರ್ಗೆಗೆ ಶೋಕಾಸ್‌ ನೋಟಿಸ್‌ ಜಾರಿ

    ಪತ್ನಿ ಅಲ್ಲದೇ ಒಡಹುಟ್ಟಿದ ಸಹೋದರ ಕೂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ಹಾಗೂ ಆರೋಗ್ಯ ವಿಚಾರಣೆಗಾಗಿ ಪ್ರಿಯಾಂಕ್ ಖರ್ಗೆ ಒಂದು ದಿನ ಆಸ್ಪತ್ರೆಗೆ ತೆರಳಿದರೆ ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ

    ನಾಮಪತ್ರ ಸಲ್ಲಿಕೆಯ ಬಳಿಕ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಕ್ಷೇತ್ರದಲ್ಲೇ ಪ್ರವಾಸ ಮಾಡುತ್ತಿದ್ದಾರೆ. ಈ ಬಾರಿ ಬಿಜೆಪಿ (BJP) ನಾಯಕರು ಪ್ರಿಯಾಂಕ್ ಖರ್ಗೆಯವರನ್ನು ಟಾರ್ಗೆಟ್ ಆಗಿ ಇರಿಸಿಕೊಂಡು ಸೋಲಿಸುವ ಪ್ಲಾನ್ ಮಾಡಿಕೊಂಡಿದ್ದಾರೆ. ಪತ್ನಿಯ ಆರೋಗ್ಯ ದೃಷ್ಟಿಯಿಂದ ಪ್ರಿಯಾಂಕ್ ಖರ್ಗೆ ಯಾವುದೇ ಕಾರ್ಯಕ್ರಮದಲ್ಲಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಕಳೆದ ಎರಡು ಮೂರು ದಿನದಿಂದ ನೋವಿನ ನಡುವೆಯೂ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನ ಬಿಟ್ಟು ಬೇರೆ ಯಾರೂ CM ಆಗಲು ಸಾಧ್ಯವಿಲ್ಲ: ಹೆಚ್‌ಡಿಕೆ ಗುಡುಗು

    ಪುತ್ರ ಪ್ರಿಯಾಂಕ್ ಖರ್ಗೆ ಗೆಲುವಿಗಾಗಿ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಏಪ್ರಿಲ್ 6ರಂದು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ರಾವೂರ್ ಮತ್ತು ದಂಡೋತ್ತಿ ಗ್ರಾಮದಲ್ಲಿ ಬೃಹತ್ ಸಮಾವೇಶವನ್ನು ನಡೆಸಲಿದ್ದಾರೆ. ಇದನ್ನೂ ಓದಿ: ಮೇ 10 ರಂದು ತಪ್ಪದೇ ವೋಟ್‌ ಮಾಡಿದವರಿಗೆ ಸಿಗುತ್ತೆ ಬಂಪರ್‌ ಗಿಫ್ಟ್‌..!

  • ಅಂಗಡಿ ಮುಂಭಾಗ ನಿಂತಿದ್ದ  ಅಭ್ಯರ್ಥಿಯ ಕಾರು ಇದ್ದಕ್ಕಿದ್ದಂತೆ ಹೊತ್ತಿ ಉರಿಯಿತು!

    ಅಂಗಡಿ ಮುಂಭಾಗ ನಿಂತಿದ್ದ ಅಭ್ಯರ್ಥಿಯ ಕಾರು ಇದ್ದಕ್ಕಿದ್ದಂತೆ ಹೊತ್ತಿ ಉರಿಯಿತು!

    ಕಲಬುರಗಿ: ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಟವೇರಾ ಕಾರ್ ಗೆ ಆಕಸ್ಮಿಕ ಬೆಂಕಿ ತಗಲಿ ಹೊತ್ತಿ ಉರಿದ ಘಟನೆ ಟೆಂಗಳಿ ಕ್ರಾಸ್ ಬಳಿ ನಡೆದಿದೆ.

    ಚಿತ್ತಾಪುರ ಮತಕ್ಷೇತ್ರದ ಬಿಎಸ್‍ಪಿ ಅಭ್ಯರ್ಥಿ ದೇವರಾಜ್ ಒಡೆಯರ್ ಅವರಿಗೆ ಸೇರಿದ ಕಾರ್ ಅದಾಗಿದ್ದು, ಉದ್ದೇಶ ಪೂರ್ವಕವಾಗಿ ಈ ಕೃತ್ಯ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ಜಿಲ್ಲೆಯ ಚಿತ್ತಾಪುರ ತಾಲೂಕಿನ ಟೆಂಗಳಿ ಕ್ರಾಸ್ ಬಳಿ ಕೆಎ-35, 9550 ಸಂಖ್ಯೆಯ ಟವೇರಾ ಕಾರ್ ನಿಲ್ಲಿಸಿ ಕಾರಿನಲ್ಲಿದ್ದವರು ಟೀ ಕುಡಿಯಲು ಹೋಗಿದ್ದರು. ಈ ವೇಳೆ ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದಾರೆ ಎಂದು ದೇವರಾಜ್ ಒಡೆಯರ್ ಶಂಕೆ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಮಾಡಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾಟಕದ ನೃತ್ಯಗಾರ್ತಿಗೆ ಹಣ ನೀಡೋ ವಿಚಾರಕ್ಕೆ ಜಗಳ- ವ್ಯಕ್ತಿಯ ಕೊಲೆ

    ನಾಟಕದ ನೃತ್ಯಗಾರ್ತಿಗೆ ಹಣ ನೀಡೋ ವಿಚಾರಕ್ಕೆ ಜಗಳ- ವ್ಯಕ್ತಿಯ ಕೊಲೆ

    ಕಲಬುರಗಿ: ನಾಟಕದಲ್ಲಿ ನೃತ್ಯ ಮಾಡುವ ಯುವತಿಗೆ ಹಣ ನೀಡುವ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಲಿಹಾಳ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

    48 ವರ್ಷದ ಸಿದ್ದಯ್ಯ ಮೃತ ದುರ್ದೈವಿ. ಶುಕ್ರವಾರ ರಾತ್ರಿ ಗ್ರಾಮದಲ್ಲಿ `ತಾಳಿ ಹರೀಲಿಲ್ಲ, ಶೀಲ ಉಳೀಲಿಲ್ಲ’ ಎಂಬ ನಾಟಕ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಸಿದ್ದಯ್ಯ ನಾಟಕದ ಕಲಾವಿದೆಯೊಬ್ಬರಿಗೆ ಪದೇ ಪದೇ ಹಣ ನೀಡುತ್ತಿದ್ದರು. ಇದಕ್ಕೆ ಅದೇ ಗ್ರಾಮದ ಅಯ್ಯಪ್ಪ ಆಕ್ಷೇಪ ವ್ಯಕ್ತಪಡಿಸಿ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ.

    ಇದನ್ನೂ ಓದಿ: ಮಗಳಿಗೆ ನ್ಯಾಯ ಕೊಡಿಸಲಾಗ್ಲಿಲ್ಲ ಎಂಬ ಪಶ್ಚಾತ್ತಾಪದಿಂದ ಆತ್ಮಹತ್ಯೆಗೆ ಶರಣಾದ ತಂದೆ

    ಗಾಯಗೊಂಡ ಸಿದ್ದಯ್ಯ ಮನೆಗೆ ತೆರಳಿದ್ದರು. ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಸಿದ್ದಯ್ಯ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚಿತ್ತಾಪುರ ಠಾಣಾ ಪೊಲೀಸರು ಆಗಮಿಸಿದ್ದು, ಆರೋಪಿ ಅಯ್ಯಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.