Tag: Chittoor

  • ಚಿತ್ತೂರು ಬಸ್ ದುರಂತಕ್ಕೆ ಮೋದಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    ಚಿತ್ತೂರು ಬಸ್ ದುರಂತಕ್ಕೆ ಮೋದಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    – ಗಾಯಾಳುಗಳಿಗೆ 50 ಸಾವಿರ ಪರಿಹಾರ

    ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದ ಬಸ್ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ ದುರಂತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

    ಘಟನೆಯಲ್ಲಿ 45 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವುದಾಗಿ ಮೋದಿ ತಿಳಿಸಿದ್ದಾರೆ.

    ಆಗಿದ್ದೇನು..?
    ಶನಿವಾರ ರಾತ್ರಿ 11.30ರ ಸುಮಾರಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‍ನಲ್ಲಿ ಬಸ್ಸೊಂದು ಕಂದಕ್ಕೆ ಬಿದ್ದಿತ್ತು. ಘಟನೆಯಲ್ಲಿ 7 ಮಂದಿ ಮೃತಪಟ್ಟರೆ 45 ಮಂದಿ ಗಾಯಗೊಂಡಿದ್ದಾರೆ.

    ಮದುವೆ ಸಮಾರಂಭಕ್ಕೆಂದು ಖಾಸಗಿ ಬಸ್ ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ 52 ಮಂದಿಯನ್ನು ಕರೆದುಕೊಂಡು ಹೋಗುತ್ತಿತ್ತು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಸ್ 50 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

    ಈ ಸಂಬಂಧ ಪ್ರತಿಕ್ರಿಯಿಸಿದ್ದ ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ, ಚಾಲಕನ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದರು.

  • ತಿರುಪತಿಯಲ್ಲಿ ಆಣೆಕಟ್ಟು ಬಿರುಕು – ಜನರಲ್ಲಿ ಹೆಚ್ಚಿದ ಆತಂಕ

    ತಿರುಪತಿಯಲ್ಲಿ ಆಣೆಕಟ್ಟು ಬಿರುಕು – ಜನರಲ್ಲಿ ಹೆಚ್ಚಿದ ಆತಂಕ

    ತಿರುಪತಿ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಜಿಲ್ಲೆಯ ಅತಿದೊಡ್ಡ ಆಣೆಕಟ್ಟು ರಾಯಲ ಚೇವೂರು ಬಿರುಕು ಬಿಟ್ಟಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

    ಭಾರೀ ಮಳೆಯಿಂದಾಗಿ ಆಣೆಕಟ್ಟಿಗೆ ನೀರಿನ ಹರಿವು ಹೆಚ್ಚಾಗಿದೆ. ಈಗ ಮಳೆ ನಿಂತಿದ್ದರೂ ಬಿರುಕುಗಳಿಂದ ನೀರು ಸೋರಿಕೆಯಾಗುತ್ತಿರುವುದು ಈಗ ಭಯಕ್ಕೆ ಕಾರಣವಾಗಿದೆ.

    ಜಿಲ್ಲಾಧಿಕಾರಿ ಹರಿ ನಾರಾಯಣನ್, ಜಿಲ್ಲಾ ಪೊಲೀಸ್, ಕಂದಾಯ ಅಧಿಕಾರಿಗಳು ಹಾಗೂ ನೀರಾವರಿ ತಂಡದ ಅಧಿಕಾರಿಗಳು ತಂಡವನ್ನು ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳ ಜನರನ್ನು ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.

    ಆಣೆಕಟ್ಟಿನಲ್ಲಿ ಬಿರುಕು ಮೂಡಿದ್ದರಿಂದ ಎಲ್ಲ ಅಮೂಲ್ಯ ಕಾಗದ ಪತ್ರಗಳು ಹಾಗೂ ಅಗತ್ಯ ವಸ್ತುಗಳೊಂದಿಗೆ ಎತ್ತರದ ಪ್ರದೇಶಕ್ಕೆ ತೆರಳಲು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸೂಚಿಸಲಾಗಿದೆ.

    ಜಿಲ್ಲೆಯಲ್ಲಿ ಅತಿ ದೊಡ್ಡದಾದ ಹಾಗೂ ಪುರಾತನ ಆಣೆಕಟ್ಟು ಇದಾಗಿದೆ. ಇದರಿಂದಾಗಿ ಯಾವುದೇ ಅವಕಾಶವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ಆದ್ದರಿಂದ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರಿನಾರಾಯಣ್ ಹೇಳಿದರು. ಇದನ್ನೂ ಓದಿ: ರಾಜ್ಯಕ್ಕೆ ತಪ್ಪದ ಮಳೆ ಕಾಟ – ರಾಜ್ಯಕ್ಕೆ ವಕ್ಕರಿಸಲಿದೆ ಮತ್ತೊಂದು ಸೈಕ್ಲೋನ್

    ಜಲಾಶಯದಲ್ಲಿ 0.9 ಟಿಎಂಸಿ ನೀರು ಸಂಗ್ರಹವಾಗಿದೆ. ಆದರೆ ಆಣೆಕಟ್ಟು ನೀರನ್ನು ಸಂಗ್ರಹಿಸುವಷ್ಟು ಶಕ್ತಿಯನ್ನು ಹೊಂದಿಲ್ಲ. ಹೀಗಾಗಿ ಕೆಳಭಾಗದ ಗ್ರಾಮಗಳನ್ನು ಸ್ಥಳಾಂತರಿಸುವಂತೆ ತಿಳಿಸಲಾಗಿದೆ. ಜೊತೆಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಬಿರುಕು ತಡೆಗೆ ಕ್ರಮ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ.

    ಚಿತ್ತೂರು ಜಿಲ್ಲೆಯ ಮೇಲ್ದಂಡೆಗಳಿಂದ ಹಾಗೂ ತಿರುಮಲ ಬೆಟ್ಟಗಳಿಂದ ಅಧಿಕ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಸ್ವರ್ಣಮುಖಿ ನದಿಯು ಉಕ್ಕಿ ಹರಿಯುತ್ತಿದೆ. ಈ ನದಿಯಿಂದಲೇ ರಾಯಲ ಚೇವೂರು ಆಣೆಕಟ್ಟಿಗೆ ನೀರು ಸಂಗ್ರಹವಾಗುತ್ತದೆ.

    ಪ್ರವಾಹದಿಂದಾಗಿ ಹಲವಾರು ಹಳ್ಳಿಗಳ ಸಂಪರ್ಕ ಕಡಿತವಾಗಿದ್ದು, ಹೆದ್ದಾರಿ ಹಾಗೂ ಇತರ ರಸ್ತೆಗಳು ಜಲಾವೃತಗೊಂಡಿದೆ. ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಜನರ ರಕ್ಷಣೆಗೆ ಎನ್‍ಡಿಆರ್‍ಆಫ್ ಪಡೆ ಹಾಗೂ ವಾಯುಪಡೆಯ ಮೂರು ಹೆಲಿಕಾಪ್ಟರ್‍ಗಳು ಬಂದಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅನಾಹುತ – ರಾಜಕಾಲುವೆ ಒಡೆದು ರಸ್ತೆ, ಮನೆಗಳಿಗೆ ನುಗ್ಗಿದ ನೀರು

    ಭಾರೀ ಮಳೆ ಹಿನ್ನೆಲೆಯಲ್ಲಿ 2 ದಿನದ ಹಿಂದಷ್ಟೇ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಶಬರಿಮಲೆಯನ್ನು ಮುಚ್ಚುವುದಾಗಿ ಅಲ್ಲಿನ ಜಿಲ್ಲಾಡಳಿತ ಹೇಳಿತ್ತು.

  • ಆಂಧ್ರಪ್ರದೇಶದಲ್ಲಿ ವರುಣನ ಆರ್ಭಟ – 14 ಮಂದಿ ಸಾವು, 18ಕ್ಕೂ ಹೆಚ್ಚು ಮಂದಿ ನಾಪತ್ತೆ

    ಆಂಧ್ರಪ್ರದೇಶದಲ್ಲಿ ವರುಣನ ಆರ್ಭಟ – 14 ಮಂದಿ ಸಾವು, 18ಕ್ಕೂ ಹೆಚ್ಚು ಮಂದಿ ನಾಪತ್ತೆ

    ಹೈದರಾಬಾದ್: ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಗೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ ಮತ್ತು 18ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

    ಕಡಪ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಚಿತ್ತೂರು ಜಿಲ್ಲೆಯಲ್ಲಿಯೂ ಕೂಡ ಮಳೆಯಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಕಟ್ಟಡ ಕುಸಿತ – ಇಬ್ಬರು ಮಕ್ಕಳ ಸಾವು

    ಮಳೆಯಿಂದಾಗಿ ಹಲವಾರು ನದಿಗಳು ಉಕ್ಕಿ ಹರಿಯುತ್ತಿದ್ದು, ರಾಯಲಸೀಮಾ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಕೆಲವು ಸ್ಥಳಗಳಲ್ಲಿ ರಸ್ತೆ ಸಂಚಾರ ವ್ಯವಸ್ಥೆಯನ್ನು ಸಹ ಕಡಿತಗೊಳಿಸಲಾಗಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಗಳು ರಾಜಕಾಲುವೆಗಳಾಗಿ ಮಾರ್ಪಡುಗೊಂಡು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

    ಭಾರೀ ಮಳೆಗೆ 1,544 ಮನೆಗಳಿಗೆ ಹಾನಿಯಾಗಿದ್ದು, 3.4 ಹೆಕ್ಟರ್ ಕೃಷಿ ಕ್ಷೇತ್ರಗಳು ಮುಳುಗಡೆಯಾಗಿವೆ ಮತ್ತು ನೂರಾರು ಜಾನುವಾರುಗಳು ಸಾವನ್ನಪ್ಪಿವೆ. ಕಡಪ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುಮಾರು 8,206.57 ಲಕ್ಷ ಸಾರ್ವಜನಿಕ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

    ಕಡಪಾ ಜಿಲ್ಲೆಯ ರಾಜಂಪೇಟಯ ಚೆಯ್ಯೆರು ಹಳ್ಳದ ಪ್ರವಾಹದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು, 12 ಮಂದಿ ಪತ್ತೆಯಾಗಿಲ್ಲ. ಎಸ್‍ಡಿಆರ್‍ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಡಪ ಮತ್ತು ಚಿತ್ತೂರಿನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹತ್ತಾರು ಮಂದಿಯನ್ನು ರಕ್ಷಿಸಿದ್ದಾರೆ. ಪ್ರವಾಹದಿಂದಾಗಿ ಕಡಿತಗೊಂಡಿದ್ದ ಆರು ಗ್ರಾಮಗಳಿಗೆ ಎನ್‍ಡಿಆರ್‍ಎಫ್ ತಂಡ ಸಂಪರ್ಕವನ್ನು ಮರುಸ್ಥಾಪಿಸಿದೆ. ಕೊನೆಯದಾಗಿ ಉಳಿದಿರುವ ಒಂದು ಹಳ್ಳಿಯೊಂದಿಗೆ ಸಂಪರ್ಕವನ್ನು ಸ್ಥಾಪಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಕುಸಿದು ಬಿದ್ದ ಮನೆ ಗೋಡೆ- ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

    ರಾಜ್ಯದ ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ್ದು, ರಾಜ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಜಗನ್ ಮೋಹನ್ ರೆಡ್ಡಿ ಅವರು ಶನಿವಾರ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ ಎಂದು  ಹೇಳಲಾಗುತ್ತಿದೆ.

  • ಶಿವ ಇವರನ್ನ ಕರೆಯುತ್ತಿದ್ದಾನೆ- ತನ್ನ ಮಕ್ಕಳನ್ನೇ ಕೊಂದ ಹೆತ್ತ ತಾಯಿ

    ಶಿವ ಇವರನ್ನ ಕರೆಯುತ್ತಿದ್ದಾನೆ- ತನ್ನ ಮಕ್ಕಳನ್ನೇ ಕೊಂದ ಹೆತ್ತ ತಾಯಿ

    – ಮತ್ತೆ ಬದುಕಿ ಬರ್ತಾರೆ ನಂಬಿ ಕೊಲೆ

    ಕೋಲಾರ: ವಿದ್ಯಾವಂತ ಪೋಷಕರು ಮೂಢನಂಬಿಕೆಗೆ ಬಲಿಯಾಗಿ ತಮ್ಮ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಘಟನೆ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ನಡೆದಿದೆ.

    ಮಧ್ಯಪ್ರದೇಶದ ಭೋಪಾಲ್ ನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದ ಅಲೈಕ್ಯ(27) ಮತ್ತು ಬಿಬಿಎ ಕಲಿಯುತ್ತಿದ್ದ ಸಾಯಿದಿವ್ಯ (22) ಹೆತ್ತವರಿಂದಲೇ ಹತ್ಯೆಯಾದವರು. ಸಾಯಿದಿವ್ಯ ಎ.ಆರ್‍ರೆಹಮಾನ್ ಮ್ಯೂಸಿಕ್ ಅಕಾಡೆಮಿ ವಿದ್ಯಾರ್ಥಿ ಕೂಡಾ ಆಗಿದ್ದಾರೆ.

    ತಂದೆ ಪುರುಷೋತ್ತಮ್ ನಾಯ್ಡು ಸರ್ಕಾರಿ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ತಾಯಿ ಪದ್ಮಜಾ ಅವರು ಖಾಸಗಿ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷವಷ್ಟೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದರು. ವಿದ್ಯೆ ಇದ್ದರೂ ಮನೆಯಲ್ಲಿ ನಿತ್ಯ ಮಾಟ-ಮಂತ್ರದಂತಹ ಪೂಜೆಗಳು ನಡೆಯುತ್ತಿದ್ದವಂತೆ. ಇದೀಗ ಎಂದಿನಂತೆ ಪೂಜೆ ಮಾಡುತ್ತಿದ್ದ ಪೋಷಕರು, ಶಿವ ತಮ್ಮ ಮಕ್ಕಳು ಕರೆಯುತ್ತಿದ್ದಾನೆ. ಮಕ್ಕಳು ಮತ್ತೆ ಹುಟ್ಟಿ ಬರುತ್ತಾರೆ ಎಂಬ ನಂಬಿಕೆಯಿಂದ ಅವರನ್ನು ಕಳೆದ ರಾತ್ರಿ ಹತ್ಯೆ ಮಾಡಿದ್ದಾರೆ.

    ಪೋಷಕರಿಬ್ಬರೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ ಮದನಪಲ್ಲಿ ಡಿವೈಎಸ್ಪಿ ರವಿ ಮನೋಹರಾಚಾರಿ, ಚಿತ್ತೂರು ಎಸ್ಪಿ ಸುನಿಲ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಪುರುಷೋತ್ತಮ್ ಹಾಗೂ ಪದ್ಮಜಾ ಅವರನ್ನು ಬಂಧಿಸಿಲ್ಲ. ಮಾನಸಿಕ ತಜ್ಞರ ಕೌನ್ಸಿಲಿಂಗ್ ನಂತರ ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

  • ಫಸ್ಟ್ ನೈಟಲ್ಲಿ ‘ನರಕ ದರ್ಶನ’ ಮಾಡಿಸಿದವನಿಗೆ ಇಂದು ಪುರುಷತ್ವ ಪರೀಕ್ಷೆ!

    ಫಸ್ಟ್ ನೈಟಲ್ಲಿ ‘ನರಕ ದರ್ಶನ’ ಮಾಡಿಸಿದವನಿಗೆ ಇಂದು ಪುರುಷತ್ವ ಪರೀಕ್ಷೆ!

    ಹೈದರಾಬಾದ್: ಮದುವೆಯ ಈ ಬಂಧಾ, ಅನುರಾಗದ ಅನುಬಂಧಾ, ಏಳೇಳು ಜನುಮದಲೂ ತೀರದ ಸಂಬಂಧ ಎಂಬಂತೆ ಮದುವೆಯ ಬಗ್ಗೆ ಅಪಾರ ಕನಸು ಕಟ್ಟಿಕೊಂಡು ತಾಳಿ ಕಟ್ಟಿಸಿಕೊಂಡು ಪತಿಯ ಕಿರಾತಕ ಕೃತ್ಯಗಳಿಂದ ಫಸ್ಟ್ ನೈಟಲ್ಲೇ ಚಿತ್ರ ಹಿಂಸೆ ಅನುಭವಿಸಿದ ಯುವತಿಯ ಪತಿಯ ಪುರುಷತ್ವ ಪರೀಕ್ಷೆ ಮಾಡುವಂತೆ ಚಿತ್ತೂರ್ ಕೋರ್ಟ್ ಆದೇಶ ನೀಡಿದೆ. ಹೈದರಾಬಾದ್ ನಲ್ಲಿರುವ ಮೆಡಿಕಲ್ ಬೋರ್ಡ್ ನಲ್ಲಿ ಪುರುಷತ್ವ ಪರೀಕ್ಷೆ ಮಾಡುವಂತೆ ನ್ಯಾಯಾಲಯ ಸೂಚಿಸಿದ್ದು, ಪೊಲೀಸರು ಆರೋಪಿಯನ್ನು ಇಂದು ಪುರುಷತ್ವ ಪರೀಕ್ಷೆಗೆ ಹಾಜರುಪಡಿಸಲಿದ್ದಾರೆ.

    ಫಸ್ಟ್ ನೈಟಲ್ಲಿ ಏನಾಗಿತ್ತು?: ಚಿತ್ತೂರು ಜಿಲ್ಲೆಯ ಗಂಗಾಧರ ನೆಲ್ಲೂರು ಮಂಡಲದ ಮೋತರಂಗನಪಲ್ಲಿಯ ರಾಜೇಶ್ ಎಂಬಾತನಿಗೆ ಚಿನ್ನದಮರಗುಂಟ ಎಂಬಲ್ಲಿನ ಶೈಲಜಾ ಎಂಬಾಕೆಯ ಜೊತೆಯ ಡಿಸೆಂಬರ್ 1ರಂದು ಶುಕ್ರವಾರ ಮದುವೆ ನಡೆದಿತ್ತು. ರಾಜೇಶ್ ವೃತ್ತಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕನಾಗಿದ್ದರೆ, ಶೈಲಜಾ ಎಂಬಿಎ ವ್ಯಾಸಂಗ ಮಾಡುತ್ತಿದ್ದಳು. ಮದುವೆ ಆದ ತಕ್ಷಣ ದಂಪತಿ ಕನಿಪಾಕಂನಲ್ಲಿ ಪೂಜೆ ಸಲ್ಲಿಸಲು ತೆರಳಿದ್ದರು. ಅಲ್ಲಿಯವರೆಗೆ ಎಲ್ಲವೂ ಸರಿಯಾಗಿತ್ತು. ಆದರೆ ರಾಜೇಶನ ಕರಾಳ ಮುಖದ ಪರಿಚಯ ಶೈಲಜಾಗೆ ರಾತ್ರಿಯಾಗುತ್ತಿದ್ದಂತೆಯೇ ಅರಿವಾಯಿತು. ಫಸ್ಟ್ ನೈಟ್‍ನಲ್ಲೇ ರಾಕ್ಷಸನಾದ ಪತಿ- ಚೂರಿಯಿಂದ ಇರಿದು, ಅಂಗಾಂಗ ಕಚ್ಚಿ ಹಲ್ಲೆ

    ಫಸ್ಟ್ ನೈಟ್ ಗೆಂದು ಸಿದ್ಧಳಾಗಿ ಬಂದ ಶೈಲಜಾ ಮುಂದೆ ರಾಜೇಶ್ ತನ್ನ ವೈಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದಾನೆ. ನಾನು ನಪುಂಸಕ, ನನಗೆ ಪುರುಷತ್ವ ಇಲ್ಲ. ಆದರೆ ಇದನ್ನು ನೀನು ಯಾರಿಗೂ ಹೇಳಬೇಡ ಎಂದು ಬೆದರಿಕೆ ಹಾಕಿದ್ದಾನೆ. ಆದರೆ ಶೈಲಜಾ ಫೋನ್ ಮಾಡಿ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸುತ್ತಾಳೆ. ಇದನ್ನೂ ಓದಿ: ಯುವಕರೊಂದಿಗೆ ಸೆಕ್ಸ್ ಮಾಡುವಾಗ ಪತ್ನಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪತಿರಾಯ!

    ಇದರಿಂದ ತನ್ನ ಮರ್ಯಾದೆ ಹರಾಜಾಯಿತು ಎಂದು ಸಿಟ್ಟಿಗೆದ್ದ ಪತಿರಾಯ ಪತ್ನಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಆಕೆಯ ಮುಖಕ್ಕೆ ಹೊಡೆದಿದ್ದಾನೆ. ಕಣ್ಣು, ಕೆನ್ನೆ, ತಲೆ ಹಾಗೂ ದೇಹ ಪೂರ್ತಿ ಹಲ್ಲೆ ಮಾಡಿದ್ದಾನೆ. ಇಷ್ಟು ಸಾಲದೆಂಬಂತೆ ಆಕೆಯ ದೇಹ ಪೂರ್ತಿ ಕಚ್ಚಿ ತನ್ನ ವಿಕೃತಿ ಮೆರೆದಿದ್ದಾನೆ. ಆತನ ಹೊಡೆತದ ತೀವ್ರತೆ ಎಷ್ಟಿತ್ತೆಂದರೆ ಹಲ್ಲೆ ನಡೆದ ಕೆಲವೇ ಗಂಟೆಗಳಲ್ಲಿ ಸುಂದರವಾಗಿದ್ದ ಮುಖ ಹಾಗೂ ಕಣ್ಣು ಊದಿಕೊಂಡಿತ್ತು. ಕಣ್ಣಿನ ಕೆಳಭಾಗ ಕಪ್ಪು ಬಣ್ಣಕ್ಕೆ ತಿರುಗಿತ್ತು. ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಾದಾಗ ಶೈಲಜಾ ತನ್ನ ಪೋಷಕರಿಗೆ ಫೋನ್ ಮಾಡಿ ವಿವರಿಸುತ್ತಾಳೆ. ಇದನ್ನೂ ಓದಿ: ಪತಿಯನ್ನು ಕೊಂದು, ಪ್ರೇಮಿಯನ್ನೇ ತನ್ನ ಗಂಡ ಎಂದು ನಂಬಿಸಲು ಆತನ ಮುಖಕ್ಕೆ ಆ್ಯಸಿಡ್ ಸುರಿದ ಪತ್ನಿ

    ತಕ್ಷಣ ಆಕೆಯ ಮನೆಯವರು ರಾಜೇಶ್ ಮನೆಗೆ ಆಗಮಿಸುತ್ತಾರೆ. ಅದರೆ ಬೆಡ್ ರೂಂ ಬಾಗಿಲು ತೆಗೆಯಲು ನಿರಾಕರಿಸಿದಾಗ ಬಾಗಿಲು ಒಡೆದು ಒಳ ಹೋಗುವ ವೇಳೆ ರಾಜೇಶ್ ಪರಾರಿಯಾಗಿದ್ದ. ಇದನ್ನೂ ಓದಿ: ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!

    ಇದೇ ವೇಳೆ ನೋವಿನಿಂದ ನರಳಾಡುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿದ್ದಾರೆ. ಆದರೆ ತುಟಿಯನ್ನು ಕಚ್ಚಿ, ಹಲ್ಲೆ ಮಾಡಿದ್ದರಿಂದ ಆಕೆಯ ತುಟಿ ಊದಿಕೊಂಡಿದ್ದರಿಂದ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಸದ್ಯ ಶೈಲಜಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಪತ್ನಿಗೆ ಬ್ಲೂಫಿಲ್ಮ್ ತೋರಿಸಿ, ಮದ್ಯ ಕುಡಿಸಿ ಸೆಕ್ಸ್ ಗೆ ಬರುವಂತೆ ಟೆಕ್ಕಿ ಗಂಡನ ಕಿರಿಕ್

    ಬೆಡ್ ರೂಂನಿಂದ ಪರಾರಿಯಾಗಿದ್ದ ರಾಜೇಶನನ್ನು ಬಳಿಕ ಪೊಲೀಸರು ಬಂಧಿಸಿದ್ದರು. ಆದರೆ ಪುರುಷತ್ವ ಪರೀಕ್ಷೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಪುರುಷತ್ವ ಪರೀಕ್ಷೆ ನಡೆಸಲು ಸೂಚಿಸಿದೆ. ಇದನ್ನೂ ಓದಿ: ಕಾಲ್ ಮಾಡಿ ಸೆಕ್ಸ್ ಗೆ ಕರೀತಿದ್ದ ವ್ಯಕ್ತಿ ಅರೆಸ್ಟ್-ಆರೋಪಿಯನ್ನ ನೋಡಿದ ಮಹಿಳೆ ಶಾಕ್!

  • ಚಿತ್ತೂರಿನಲ್ಲಿ ದುರಂತ: ಅಂಗಡಿಗೆ ನುಗ್ಗಿದ್ದ ಲಾರಿಗೆ 20 ಬಲಿ

    ಚಿತ್ತೂರಿನಲ್ಲಿ ದುರಂತ: ಅಂಗಡಿಗೆ ನುಗ್ಗಿದ್ದ ಲಾರಿಗೆ 20 ಬಲಿ

    ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ  ನಡೆದ ಭೀಕರ ರಸ್ತೆ ಅಪಘಾತಕ್ಕೆ 20 ಮಂದಿ ಬಲಿಯಾಗಿದ್ದಾರೆ.

    ಏಡುಪೇಡು ರೇಣುಕುಂಟ ಬಳಿ ಅಪಘಾತ ಸಂಭವಿಸಿದ್ದು 20 ಮಂದಿ ಸಾವನ್ನಪ್ಪಿದ್ದರೆ, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಬ್ರೇಕ್ ಫೇಲ್ ಆಗಿದ್ದ ಲಾರಿ ರಸ್ತೆ ಬದಿ ಅಂಗಡಿಗಳಿಗೆ ನುಗ್ಗಿದ ಪರಿಣಾಮ ಪೂತಲಪಟ್ಟು ನಾಯುಡು ಪೇಟ ಹೆದ್ದಾರಿಯಲ್ಲಿ ರಕ್ತಪಾತ ಸಂಭವಿಸಿದೆ.

    ಗಾಯಾಳುಗಳು ತಿರುಪತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಬೀದಿಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳು ಎಂದು ವರದಿಯಾಗಿದೆ.