Tag: Chota Rajan

  • ಛೋಟಾ ರಾಜನ್ ಸಹೋದರನಿಗೆ ಬಿಜೆಪಿ ಮೈತ್ರಿಯಿಂದ ವಿಧಾನಸಭೆ ಟಿಕೆಟ್

    ಛೋಟಾ ರಾಜನ್ ಸಹೋದರನಿಗೆ ಬಿಜೆಪಿ ಮೈತ್ರಿಯಿಂದ ವಿಧಾನಸಭೆ ಟಿಕೆಟ್

    ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಸಹೋದರನಿಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಮಿತ್ರ ಪಕ್ಷವಾದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ವಿಧಾನಸಭೆಗೆ ಟಿಕೆಟ್ ನೀಡಲಾಗಿದೆ.

    ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ಸಹೋದರ ದೀಪಕ್ ನಿಕಾಲ್ಜೆ ಅವರನ್ನು ಬಿಜೆಪಿ, ಶಿವಸೇನಾ ಮತ್ತು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಸೇರಿ ಜಂಟಿ ಅಭ್ಯರ್ಥಿಯನ್ನಾಗಿ ಮಾಡಿ ಕಣಕ್ಕೆ ಇಳಿಸಲಿದ್ದಾರೆ. ದೀಪಕ್‍ಗೆ ಪಶ್ಚಿಮ ಮಹಾರಾಷ್ಟ್ರದ ಫಾಲ್ಟನ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

    ಆಕ್ಟೋಬರ್ 21 ರಂದು ಮಹಾರಾಷ್ಟ್ರದ ವಿಧಾನ ಸಭಾ ಚುನಾವಣೆಗೆ ಬಿಜೆಪಿ, ಶಿವಸೇನಾ ಮತ್ತು ಇತರ ಪ್ರಾದೇಶಿಕ ಪಕ್ಷಗಳು ಸೇರಿ ಸಮ್ಮಿಶ್ರ ಮಾಡಿಕೊಂಡು ಸೀಟನ್ನು ಹಂಚಿಕೆ ಮಾಡಿಕೊಂಡಿವೆ. ಇದರಲ್ಲಿ ಕೇಂದ್ರ ಸಚಿವ ರಾಮದಾಸ್ ಅಠವಾಳೆ ನೇತೃತ್ವದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷಕ್ಕೆ ಆರು ಸೀಟುಗಳನ್ನು ನೀಡಲಾಗಿದೆ.

    ಸಮ್ಮಿಶ್ರ ಪಕ್ಷಗಳಿಂದ ಹಂಚಿಕೆಯಾಗಿರುವ ಸೀಟುಗಳನ್ನು ಇಂದು ರಾಮದಾಸ್ ಅಠವಾಳೆ ತಮ್ಮ ಪಕ್ಷದ ಕೆಲ ಮುಖಂಡರಿಗೆ ಹಂಚಿಕೆ ಮಾಡಿದ್ದು, ಇದರಲ್ಲಿ ಫಾಲ್ಟನ್ ಕ್ಷೇತ್ರದಿಂದ ಛೋಟಾ ರಾಜನ್ ಸಹೋದರ ದೀಪಕ್ ನಿಕಾಲ್ಜೆ ಟಿಕೆಟ್ ನೀಡಿದ್ದಾರೆ. ಹಲವಾರು ವರ್ಷಗಳಿಂದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಲ್ಲಿ ಗುರುತಿಸಿಕೊಂಡಿರುವ ದೀಪಕ್ ಗೆ ಈ ಹಿಂದೆ ಮುಂಬೈನ ಚೆಂಬೂರಿನಿಂದ ಈ ಪಕ್ಷ ಟಿಕೆಟ್ ನೀಡಿತ್ತು. ಆದರೆ ದೀಪಕ್ ಆ ಚುನಾವಣೆಯಲ್ಲಿ ಸೋತಿದ್ದರು.

    ಈ ಕ್ಷೇತ್ರವನ್ನು ಬಿಟ್ಟರೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್, ನಾಂದೇಡ್ ಜಿಲ್ಲೆಯ ಭಂಡಾರ ಮತ್ತು ನೈಗಾಂವ್, ಪರಭಾನಿಯ ಪಾತ್ರಿ ಮತ್ತು ಮುಂಬೈನ ಮನ್ಖುರ್ಡ್-ಶಿವಾಜಿ ನಗರ ಕ್ಷೇತ್ರದಿಂದ ಉಳಿದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

  • ಭೂಗತ ಪಾತಕಿ ಛೋಟಾ ರಾಜನ್ ಸಹಚರ ಉಡುಪಿಯ ವಿನೇಶ್ ಶೆಟ್ಟಿ ಬಂಧನ

    ಭೂಗತ ಪಾತಕಿ ಛೋಟಾ ರಾಜನ್ ಸಹಚರ ಉಡುಪಿಯ ವಿನೇಶ್ ಶೆಟ್ಟಿ ಬಂಧನ

    ಮಂಗಳೂರು: ಭೂಗತ ಪಾತಕಿ ಛೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿ ಎಂಬಾತನನ್ನು ಮಂಗಳೂರಿನ ಕೋಣಾಜೆ ಪೊಲೀಸರು ಮುಂಬೈನ ಥಾಣೆಯಲ್ಲಿ ಬಂಧಿಸಿದ್ದಾರೆ.

    ಮಂಗಳೂರು ಮುಡಿಪು ಬಳಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ವಿನೇಶ್ ಶೆಟ್ಟಿ ಆರೋಪಿಯಾಗಿದ್ದನು. 2003 ರಲ್ಲಿ ವೇಣುಗೋಪಾಲ್ ನಾಯಕ್ ಮತ್ತು ಸಂತೋಷ್ ಶೆಟ್ಟಿ ಎಂಬವರ ಕೊಲೆ ನಡೆದಿತ್ತು. ಪ್ರಕರಣದಲ್ಲಿ ಬಂಧಿತನಾಗಿ ವಿನೇಶ್ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿದ್ದನು. 2005ರಲ್ಲಿ ಜಾಮೀನು ಪಡೆದ ವಿನೇಶ್ ಶೆಟ್ಟಿ ತಲೆಮರೆಸಿಕೊಂಡಿದ್ದನು. ವಿನೇಶ್ ಛೋಟಾ ರಾಜನ್ ಗ್ಯಾಂಗ್ ನಲ್ಲಿ ಸಕ್ರೀಯನಾಗಿದ್ದ ಎಂದು ಹೇಳಲಾಗುತ್ತಿದೆ.

    ಉಡುಪಿ ಜಿಲ್ಲೆಯ ಶಿರ್ವ ಮೂಲದ ನಿವಾಸಿಯಾಗಿರುವ ವಿನೇಶ್ ಶೆಟ್ಟಿಯ ಬಂಧನಕ್ಕಾಗಿ ಪೊಲೀಸರು ಮಂಗಳೂರು ಕೋರ್ಟಿನಿಂದ ವಾರೆಂಟ್ ಪಡೆದು ಅರೆಸ್ಟ್ ಮಾಡಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಥಾಣೆ ನ್ಯಾಯಾಲಯಕ್ಕೆ ಹಾಜರಾಗಿದ್ದ ವೇಳೆ ಪೊಲೀಸರು ಆರೋಪಿ ವಿನೇಶ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.