Tag: Chowkidar

  • ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ನಿರ್ದೇಶಕ ಚಂದ್ರಶೇಖರ್ ಸಾರಥ್ಯದ ಚೌಕಿದಾರ್ (Chowkidar) ಸಿನಿಮಾ ಈಗಾಗಲೇ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಹಾಡುಗಳು ಈಗಾಗಲೇ ಹಿಟ್ ಲೀಸ್ಟ್ ಸೇರಿವೆ. ಇತ್ತೀಚಿಗೆ ಬಿಡುಗಡೆಯಾಗಿದ್ದ `ಓ ಮೈ ಬ್ರೋ’ ಸಾಂಗ್‌ಗೆ (OH My Bro Song) ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

    ಎಂಆರ್‌ಟಿ ಮ್ಯೂಸಿಕ್ ಯೂಟ್ಯೂಬ್‌ನಲ್ಲಿ ರಿಲೀಸ್ ಆಗಿದ್ದ ಈ ಹಾಡು ಈಗ ಒಂದು ಮಿಲಿಯನ್ ಜನರನ್ನು ತಲುಪಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಿಡುಗಡೆಯಾಗಿದ್ದ `ಓ ಮೈ ಬ್ರೋ’ ಸಾಂಗ್ ಸಂಗೀತ ಪ್ರಿಯರ ಮೆಚ್ಚುಗೆ ಪಡೆದುಕೊಂಡಿದೆ. ಇದನ್ನೂ ಓದಿ: ಕನ್ನಡದಲ್ಲಿ ಹೊಸ ಮೆಗಾ ಸೀರಿಯಲ್ – ಮಂಗಳವಾರ ʻಮಾಂಗಲ್ಯʼವಾರ

    ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ `ಓ ಮೈ ಬ್ರೋ’ ಗೀತೆಗೆ ಖ್ಯಾತ ಗಾಯಕ ಕೈಲಾಸ್ ಖೇರ್ ಧ್ವನಿಯಾಗಿದ್ದಾರೆ. ಸಚಿನ್ ಬಸ್ರೂರ್ ಮ್ಯೂಸಿಕ್ ಒಳಗೊಂಡಿರುವ ಈ ಹಾಡಿಗೆ ನಾಯಕ ಪೃಥ್ವಿ ಅಂಬರ್ (Pruthvi Ambar) ಹಾಗೂ ಹಿರಿಯ ನಟ ಸಾಯಿಕುಮಾರ್ ಬಿಂದಾಸ್ ಆಗಿ ಕುಣಿದಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ

    ಕಲ್ಲಹಳ್ಳಿ ಚಂದ್ರಶೇಖರ್ `ಚೌಕಿದಾರ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ವಿದ್ಯಾದೇವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಧನ್ಯಾ ರಾಮ್‌ಕುಮಾರ್ (Dhanya Ramkumar) ನಾಯಕ ನಟಿಯಾಗಿ ನಟಿಸಿದ್ದಾರೆ. ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ಚೌಕಿದಾರ್ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

    ಸಚಿನ್ ಬಸ್ರೂರು ಸಂಗೀತ, ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದು, ಮುರುಳಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ, ಜೈ ಸುಬ್ರಹ್ಮಣ್ಯ ಸಾಹಸ ದೃಶ್ಯಗಳು ಚಿತ್ರಕ್ಕಿದೆ. `ಚೌಕಿದಾರ್’ ಬಹು ಭಾಷೆಗಳಲ್ಲಿ ಮೂಡಿ ಬರುತ್ತಿದೆ. ಇದುವರೆಗೆ ಲವರ್ ಬಾಯ್ ಆಗಿದ್ದ ಪೃಥ್ವಿ, ಈ ಚಿತ್ರದಲ್ಲಿ ಬೇರೆಯದ್ದೇ ಅವತಾರ ತಾಳಿದ್ದಾರೆ.

  • ರಗಡ್ ಆದ ಪೃಥ್ವಿ ಅಂಬರ್- ‌’ಚೌಕಿದಾರ್’ ಮಾಸ್ ಟೀಸರ್ ಔಟ್

    ರಗಡ್ ಆದ ಪೃಥ್ವಿ ಅಂಬರ್- ‌’ಚೌಕಿದಾರ್’ ಮಾಸ್ ಟೀಸರ್ ಔಟ್

    ಕ್ಲಾಸ್ ಸಿನಿಮಾಗಳ ಮೂಲಕ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಅಂಬರ್ (Pruthvi Ambaar) ಮೊದಲ ಬಾರಿಗೆ ರಗಡ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರೋಸ್ ಹಿಡಿಯುತ್ತಿದ್ದ ಪೃಥ್ವಿ ಕೈಗೆ ಲಾಂಗ್ ಕೊಟ್ಟು ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ರಕ್ತಹರಿಸಿದ್ದಾರೆ. ಇದೀಗ ‘ಚೌಕಿದಾರ್’ (Chowkidhar) ಸಿನಿಮಾದ ಟೀಸರ್ ಅನಾವರಣಗೊಂಡಿದೆ. ಹಿಂದೆಂದೂ ಕಾಣದ ಲುಕ್ ನಲ್ಲಿ ಪೃಥ್ವಿ ಪ್ರತ್ಯಕ್ಷರಾಗಿದ್ದಾರೆ. ರಕ್ತಸಿಕ್ತ ಅವತಾರವೆತ್ತಿರುವ ಅವರ ಹೊಸ ಲುಕ್ ಸಿನಿರಸಿಕರಿಗೆ ಕಿಕ್ ಕೊಟ್ಟಿದೆ.‌ ಇದನ್ನೂ ಓದಿ:ಇಂದು ಕೋರ್ಟ್‌ಗೆ ಹಾಜರಾಗಲಿದ್ದಾರೆ ರಮ್ಯಾ

    ಟೀಸರ್ ನಲ್ಲಿ ಎಲ್ಲಾ ಪಾತ್ರಗಳನ್ನು ತೋರಿಸಿರುವ ಚಂದ್ರಶೇಖರ್ ಬಂಡಿಯಪ್ಪ ಕಥೆಯ ಗುಟ್ಟನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದ್ದು, ಖಾಕಿ ಲುಕ್ ನಲ್ಲಿ ಸುಧಾರಾಣಿ‌ ಖದರ್ ತೋರಿಸಿದ್ದಾರೆ. ಹಿರಿಯ ನಟ ಸಾಯಿ ಕುಮಾರ್ ಪೃಥ್ವಿ ತಂದೆ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ಧರ್ಮ, ಹಿರಿಯ ನಟಿ ಶ್ವೇತಾ ತಾರಾ ಬಳಗದಲ್ಲಿದ್ದಾರೆ.

    ಪೃಥ್ವಿ ಅಂಬರ್ ಗೆ ಜೋಡಿಯಾಗಿ ಅಭಿನಯಿಸಿರುವ ಧನ್ಯಾ ರಾಮ್‌ಕುಮಾರ್ ಡಿ ಗ್ಲಾಮರ್ ಆಗಿ ಕಾಣಿಸಿಕೊಂಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಟೀಸರ್‌ನಲ್ಲಿ ಗಮನಸೆಳೆಯುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ.

    ವಿ.ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ರವಿ ವರ್ಮಾ ಸಾಹಸ ನಿರ್ದೇಶನ ಸಿನಿಮಾಗಿದೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಪೃಥ್ವಿರಾಜ್ ಧಘಾರಿ ಸಹ ನಿರ್ದೇಶನದಲ್ಲಿ ಚಿತ್ರ ತಯಾರಾಗಿದೆ. ಮೇ ತಿಂಗಳಲ್ಲಿ ‘ಚೌಕಿದಾರ್’ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಟೀಸರ್ ನೋಡುತ್ತಿದ್ದರೇ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಯಾವುದೋ ಹೊಸ ಕಥೆಯನ್ನು ಹರವಿಡಲು ಹೊರಟಿರುವುದು ಗೊತ್ತಾಗುತ್ತಿದೆ.

  • ಪ್ಯಾನ್ ಇಂಡಿಯಾ ಸಿನಿಮಾಗೆ ಧನ್ಯಾ ರಾಮ್‌ಕುಮಾರ್ ನಾಯಕಿ

    ಪ್ಯಾನ್ ಇಂಡಿಯಾ ಸಿನಿಮಾಗೆ ಧನ್ಯಾ ರಾಮ್‌ಕುಮಾರ್ ನಾಯಕಿ

    ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ಚೌಕಿದಾರ್. ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಚೌಕಿದಾರ್‌ಗೆ ನಾಯಕಿ ಸಿಕ್ಕಿದ್ದಾಳೆ. ದೊಡ್ಮನೆ ಕುಡಿ ಧನ್ಯಾ ರಾಮ್ ಕುಮಾರ್ (Dhanya Ramkumar) ಪೃಥ್ವಿ ಅಂಬಾರ್‌ಗೆ (Pruthvi Ambaar) ಜೋಡಿಯಾಗಿ ನಟಿಸುತ್ತಿದ್ದಾರೆ.

    ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ‘ಚೌಕಿದಾರ್’ (Chowkidar) ಸಿನಿಮಾದಲ್ಲಿ ಧನ್ಯಾ ರಾಮ್‌ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಯಿತರಾಗಿದ್ದ ಧನ್ಯಾ ಇತ್ತೀಚೆಗಷ್ಟೇ ‘ದ ಜಡ್ಜಮೆಂಟ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಸದ್ಯ ‘ಕಾಲಪತ್ತರ್’ ರಿಲೀಸ್‌ಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ಈಗ ‘ಚೌಕಿದಾರ್’ ಬಳಗ ಸೇರಿಕೊಂಡಿದ್ದಾರೆ. ಇದನ್ನೂ ಓದಿ:ಕಿರುತೆರೆಯಲ್ಲಿ ಶುರುವಾಗಲಿದೆ ಪಾರ್ವತಿ ಜಗನ್ಮಾತೆಯಾದ ಕಥೆ ‘ಶ್ರೀ ದೇವಿ ಮಹಾತ್ಮೆ’

    ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜೊತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್‌ಟೈನರ್.

    ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್ ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ 3ರಂದು ಬಂಡಿ ಮಹಾಕಾಳಿ ದೇಗುಲದಲ್ಲಿ ‘ಚೌಕಿದಾರ್’ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ.

  • ‘ಚೌಕಿದಾರ್’ ಅಡ್ಡಾಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ

    ‘ಚೌಕಿದಾರ್’ ಅಡ್ಡಾಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ

    ಟೈಟಲ್ ಮೂಲಕ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿರುವ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ನಟಿಸುತ್ತಿರುವ ಚೌಕಿದಾರ್ (Chowkidar) ಸಿನಿಮಾ ತಂಡದಿಂದ ಮತ್ತೊಂದು ಹೊಸ ಅಪ್ ಡೇಟ್ ಸಿಕ್ಕಿದೆ. ಇತ್ತೀಚೆಗಷ್ಟೇ ಟೈಟಲ್ ಬಿಡುಗಡೆ ಮಾಡಿದ್ದ ಚಿತ್ರತಂಡವೀಗ ಡೈಲಾಗ್ ಕಿಂಗ್ ಸಾಯಿಕುಮಾರ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿದೆ. ಚೌಕಿದಾರ್ ಸಿನಿಮಾಕ್ಕೀಗ ಬಹುಭಾಷಾ ನಟ ಸಾಯಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಆದ್ರೆ ಡೈಲಾಗ್ ಕಿಂಗ್ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಕೊಟ್ಟಿಲ್ಲ.

    ಕನ್ನಡದಲ್ಲಿ ‘ಆನೆ ಪಟಾಕಿ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾಗಿ, ‘ರಥಾವರ’, ‘ತಾರಕಾಸುರ’ ಸಿನಿಮಾಗಳನ್ನು ನಿರ್ದೇಶಿಸಿ ಯಶಸ್ವಿಯಾಗಿರುವ ನಿರ್ದೇಶಕ ಚಂದ್ರಶೇಖರ್‌ ಬಂಡಿಯಪ್ಪ ಚೌಕಿದಾರ ಸಿನಿಮಾದ ಸೂತ್ರಧಾರರು. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್.

    ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ ಮೊದಲ ವಾರ ಚೌಕಿದಾರ್ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ.

  • ಚುನಾವಣೆ ಬಳಿಕ ‘ಚೌಕಿದಾರ್’ ಆದ ಗೋಲ್ಡನ್ ಸ್ಟಾರ್ ಗಣೇಶ್

    ಚುನಾವಣೆ ಬಳಿಕ ‘ಚೌಕಿದಾರ್’ ಆದ ಗೋಲ್ಡನ್ ಸ್ಟಾರ್ ಗಣೇಶ್

    ಬೆಂಗಳೂರು: ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು, ಬೆಂಬಲಿಗರು ತಮ್ಮ ಟ್ವಿಟ್ಟರ್ ಖಾತೆಯ ಹೆಸರಿನ ಮುಂದೆ ‘ಚೌಕಿದಾರ್’ ಎಂದು ಬರೆದುಕೊಂಡಿದ್ದರು. ಫಲಿತಾಂಶದ ದಿನದಂದೇ ಪ್ರಧಾನಿಗಳ ನಿರ್ದೇಶನದಂತೆ ಎಲ್ಲರೂ ಚೌಕಿದಾರ್ ಹೆಸರನ್ನು ತೆಗೆದುಕೊಂಡಿದ್ದರು. ಇದೀಗ ಕನ್ನಡದ ಗೋಲ್ಡನ್ ಸ್ಟಾರ್ ಚೌಕಿದಾರ್ ಆಗಿ ಗಾಂಧಿ ನಗರದಲ್ಲಿ ಧೂಳೆಬ್ಬಿಸಲು ಸಜ್ಜಾಗುತ್ತಿದ್ದಾರೆ.

    ರಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ‘ಚೌಕಿದಾರ್’ ಚಿತ್ರದಲ್ಲಿ ಗಣೇಶ್ ನಟಿಸುತ್ತಿದ್ದಾರೆ. ಫಿಲಂ ಚೇಂಬರ್ ನಿಂದ ಈಗಾಗಲೇ ಚಿತ್ರತಂಡ ‘ಚೌಕಿದಾರ್’ ಟೈಟಲ್ ಗೆ ಅನುಮತಿಯನ್ನು ಪಡೆದುಕೊಂಡಿದೆ.

    ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಗಳಲ್ಲಿ ಹೊಸ ಪ್ರಯೋಗಗಳಿಗೆ ಮುಂದಾಗಿದ್ದು, ಭಿನ್ನ ಪಾತ್ರಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಚೌಕಿದಾರ್ ಸಿನಿಮಾದಲ್ಲಿ 55 ವರ್ಷದ ವ್ಯಕ್ತಿಯ ಪಾತ್ರದಲ್ಲಿ ಗಣೇಶ್ ನಟಿಸುತ್ತಿದ್ದು, ರಾಜಕೀಯಕ್ಕೂ ಈ ಕಥೆಗೂ ಏನಾದರೂ ಸಂಬಂಧ ಇದೆಯಾ ಎಂಬ ಸಸ್ಪೆನ್ಸ್ ಚಿತ್ರತಂಡ ಬಿಟ್ಟುಕೊಟ್ಟಿಲ್ಲ.

  • ಚೌಕಿದಾರ್ ಚೋರ್ ಹೈ – ಕೊನೆಗೂ ಸುಪ್ರೀಂನಲ್ಲಿ ರಾಹುಲ್ ಬೇಷರತ್ ಕ್ಷಮೆಯಾಚನೆ

    ಚೌಕಿದಾರ್ ಚೋರ್ ಹೈ – ಕೊನೆಗೂ ಸುಪ್ರೀಂನಲ್ಲಿ ರಾಹುಲ್ ಬೇಷರತ್ ಕ್ಷಮೆಯಾಚನೆ

    ನವದೆಹಲಿ: ರಫೇಲ್ ಡೀಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಳ್ಳತನ ಎಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದಿದ್ದ ರಾಹುಲ್ ಗಾಂಧಿ ಇಂದು ಬೇಷರತ್ ಕ್ಷಮೆ ಕೇಳಿದ್ದಾರೆ.

    ಈ ಸಂಬಂಧ ಅಫಿಡವಿಟ್ ಸಲ್ಲಿಸಿರುವ ರಾಹುಲ್ ಗಾಂಧಿ, ಚೌಕಿದಾರ್ ಚೋರ್ ಹೈ ಎಂದು ಸುಪ್ರೀಂ ಹೇಳಿದೆ ಎನ್ನಲಾದ ಹೇಳಿಕೆ ಉದ್ದೇಶಪೂರ್ವಕವಲ್ಲದ ಅಜಾಗರೂಕತೆಯಿಂದ ಕೂಡಿದ ಹೇಳಿಕೆಯಾಗಿದೆ. ಈ ಹೇಳಿಕೆ ನೀಡಿದ್ದಕ್ಕೆ ನಾನು ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

    ಈ ಹಿಂದಿನ ವಿಚಾರಣೆ ವೇಳೆ ರಾಹುಲ್ ಪರ ಹಾಜರಿದ್ದ ವಕೀಲ ಅಭಿಷೇಕ್ ಸಿಂಘ್ವಿ, ಅಫಿಡವಿಟ್‍ಗಳಲ್ಲಿ `ಕ್ಷಮೆ’ (ಅಪಾಲಜಿ) ಎನ್ನುವ ಪದ ಇಲ್ಲದೇ ಇರುವುದು ದೋಷ. ಡಿಕ್ಷನರಿಯನ್ನು ಚೆಕ್ ಮಾಡಿದ್ದೇನೆ. ವಿಷಾದ (ರಿಗ್ರೆಟ್) ಅಂದರೆ ಕ್ಷಮಾಪಣೆ (ಸಿವಿಲ್ ಅಪಾಲಜಿ) ಎಂದೇ ಅರ್ಥ ಬರುತ್ತದೆ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು ನಿಮ್ಮ ಕಕ್ಷಿದಾರರು ಏನು ಹೇಳಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಲು ಕಷ್ಟ ಪಟ್ಟಿದ್ದೇವೆ ಎಂದಾಗ ರಾಜಕೀಯ ಸನ್ನಿವೇಶದಲ್ಲಿ ಚೌಕಿದಾರ್ ಚೋರ್ ಅನ್ನೋ ಪದ ಬಳಸಿದ್ದಾರೆ ಎಂದು ಉತ್ತರ ನೀಡಿದ್ದರು.

    ಈ ಉತ್ತರಕ್ಕೆ ಗರಂ ಆಗಿದ್ದ ಸಿಜೆಐ, ನಿಮ್ಮ ರಾಜಕೀಯ ನಿಲುವುಗಳ ನಮಗೆ ಬೇಕಿಲ್ಲ. ನಿಮ್ಮ ರಾಜಕೀಯವನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ ಎಂದು ಹೇಳಿ ಚಾಟಿ ಬೀಸಿದ್ದರು. ಈ ವೇಳೆ ಮುಕುಲ್ ರೊಹ್ಟಗಿ ಕೋರ್ಟ್ ಮೋದಿ ಸುಳ್ಳು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಉದ್ದೇಶಪೂರ್ವಕವಾಗಿ ಹೇಳಿದ್ದಾರೆ. ಬ್ರಾಕೆಟ್‍ನಲ್ಲಿ ವಿಷಾದ ಅಂದ್ರೇನು ಅರ್ಥ? ಸುಪ್ರೀಂಕೋರ್ಟ್ ಪ್ರಧಾನಿಯನ್ನು ಕಳ್ಳ ಅಂತ ಹೇಳಿದೆ ಎಂದು ದೇಶದ ಹಾದಿ ತಪ್ಪಿಸೋ ಯತ್ನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿ ಸಿಂಘ್ವಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

    ಈ ಆಕ್ಷೇಪಕ್ಕೆ ಸಿಜೆಐ, ನಿಮ್ಮ ಕಕ್ಷಿದಾರ ಸ್ಪಷ್ಟವಾಗಿ ಕ್ಷಮೆ ಕೋರಬೇಕು. ಇಲ್ಲವಾದಲ್ಲಿ ಕ್ರಿಮಿನಲ್ ನಿಂದನೆ ಎದುರಿಸಬೇಕಾಗುತ್ತದೆ ಎಂದಾಗ ಸಿಂಘ್ವಿ, ತಪ್ಪನ್ನು ತಿದ್ದಿಕೊಂಡು `ಕ್ಷಮೆ ಕೋರಿ’ ಹೊಸ ಅಫಿಡವಿಟ್ ಸಲ್ಲಿಸುತ್ತೇವೆ ಎಂದು ತಿಳಿಸಿದ್ದರು. ಅದರಂತೆ ಇಂದು ರಾಹುಲ್ ಗಾಂಧಿ ಬೇಷರತ್ ಕ್ಷಮೆ ಕೇಳಿದ್ದಾರೆ.

    ಏನಿದು ಪ್ರಕರಣ?
    ರಫೇಲ್ ತೀರ್ಪಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಬಾರದು ಎಂದು ಕೇಂದ್ರದ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಆದೇಶ ಬಂದ ನಂತರ ಚೌಕಿದಾರ್ (ಪ್ರಧಾನಿ ಮೋದಿ) ಕಳ್ಳತನ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಪ್ರಚಾರ ಭಾಷಣದಲ್ಲಿ ಹೇಳಿದ್ದರು.

    ರಾಹುಲ್ ಗಾಂಧಿ ಅವರು, ರಫೇಲ್ ಡೀಲ್ ಪ್ರಕರಣದ ಆದೇಶದಲ್ಲಿ ಇಲ್ಲದೆ ಇರುವ ಅಂಶಗಳನ್ನು ಉಲ್ಲೇಖಿಸಿ ಮೋದಿ ಅವರನ್ನು ಟೀಕೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಸುಪ್ರೀಂ ಕೋರ್ಟಿನಲ್ಲಿ ರಾಹುಲ್ ವಿರುದ್ಧ ನ್ಯಾಯಾಂಗ ನಿಂದನೆ ದೂರು ನೀಡಿದ್ದರು. ಮೀನಾಕ್ಷಿ ಲೇಖಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ನೀಡಬೇಕೆಂದು ಸೂಚಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿತ್ತು.

  • ಕಾರ್ಕಳದಲ್ಲಿ ಚೌಕಿದಾರ್ ಸ್ಟಿಕ್ಕರ್ ಹೈಡ್ರಾಮಾ – ಚುನಾವಣಾಧಿಕಾರಿಗಳ ಜೊತೆ ಲಾಯರ್ ವಾದ

    ಕಾರ್ಕಳದಲ್ಲಿ ಚೌಕಿದಾರ್ ಸ್ಟಿಕ್ಕರ್ ಹೈಡ್ರಾಮಾ – ಚುನಾವಣಾಧಿಕಾರಿಗಳ ಜೊತೆ ಲಾಯರ್ ವಾದ

    ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಚೌಕಿದಾರ್ ಸ್ಟಿಕ್ಕರ್ ವಾರ್ ಜೋರಾಗಿದೆ. ಕಾರಿನ ಹಿಂದೆ ಚೌಕಿದಾರ್ ಶೇರ್ ಹೈ, ಮೈ ಬೀ ಚೌಕಿದಾರ್ ಸ್ಟಿಕ್ಕರ್ ಕಳೆದ ಒಂದು ವಾರದಿಂದ ಗದ್ದಲ ಎಬ್ಬಿಸುತ್ತಿದೆ. ಉಡುಪಿಯ ಕಾರ್ಕಳ ತಾಲೂಕಿನಲ್ಲಿ ತನ್ನ ಕಾರಿಗೆ ಚೌಕಿದಾರ್ ಸ್ಟಿಕ್ಕರ್ ಅಳವಡಿಕೆ ಮಾಡಿದ್ದ ವಿಫುಲ್ ತೇಜ್‍ಗೆ ಸ್ಟಿಕ್ಕರ್ ತೆರವು ಮಾಡುವಂತೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    ವಿಫುಲ್ ಸ್ಟಿಕ್ಕರ್ ತೆಗೆಯಲು ಹಿಂದೇಟು ಹಾಕಿದಾಗ ಪೊಲೀಸರ ಮಧ್ಯಪ್ರವೇಶ ಆಗಿದೆ. ವಾಹನ ಮಾಲೀಕ ಹಾಗೂ ಅಧಿಕಾರಿಗಳು, ಪೊಲೀಸರ ನಡುವೆ ಮಾತಿನ ಚಕಮಕಿಯಾಗಿದೆ. ಚುನಾವಣಾಧಿಕಾರಿಗಳ ಆದೇಶ ತೋರಿಸಿ ಎಂದು ಪಟ್ಟು ಹಿಡಿದ ವಿಫುಲ್‍ಗೆ ಅಧಿಕಾರಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸ್ಟಿಕ್ಕರ್ ತೆಗೆಯಬೇಕು ಎಂದು ಸಮಜಾಯಿಷಿ ನೀಡಿದ್ದಾರೆ.

    ಕಾನೂನು ರೀತಿಯಲ್ಲಿ ನೋಟಿಸ್ ನೀಡಿ ಎಂದು ವಾಹನ ಮಾಲೀಕ ಹೇಳಿದರೂ ಕೇಳದ ಅಧಿಕಾರಿಗಳು ಕಾರನ್ನು ವಶಕ್ಕೆ ಪಡೆದು ಕೊಂಡೊಯ್ದಿದ್ದಾರೆ.

    ವಾರದ ಹಿಂದೆ ಉಡುಪಿಯಲ್ಲಿ ಅಂಟಿಸಿದ್ದ ಎಲ್ಲಾ ಸ್ಟಿಕ್ಕರ್ ತೆರವುಗೊಳಿಸಲಾಗಿತ್ತು. ಕಾಂಗ್ರೆಸ್ ಬೆಂಬಲಿಗರು ಅಂಟಿಸಿದ್ದ ಚೌಕಿದಾರ್ ಚೋರ್ ಹೆ ಸ್ಟಿಕ್ಕರ್ ಕೂಡಾ ಗೊಂದಲ ಸೃಷ್ಟಿಸಿತ್ತು.

  • ದೇಶಕ್ಕೆ ಚೌಕಿದಾರರು ಬೇಕೇ ಹೊರತು ರಾಜ, ಮಹಾರಾಜರಲ್ಲ: ಮೋದಿ

    ದೇಶಕ್ಕೆ ಚೌಕಿದಾರರು ಬೇಕೇ ಹೊರತು ರಾಜ, ಮಹಾರಾಜರಲ್ಲ: ಮೋದಿ

    ನವದೆಹಲಿ: ದೇಶಕ್ಕೆ ಚೌಕಿದಾರರು ಬೇಕೇ ಹೊರತು ರಾಜ ಮಹಾರಾಜರಲ್ಲ. ಚೌಕಿದಾರ ಮಾತ್ರ ದೇಶಕ್ಕೆ ಸೇವೆ ಮಾಡಬಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ದೆಹಲಿಯಲ್ಲಿ ನಡೆದ ‘ಮೇ ಭೀ ಚೌಕಿದಾರ್’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, 2014 ರಲ್ಲಿ ದೇಶದ ಜನತೆ ನನ್ನ ಮೇಲೆ ನಂಬಿಕೆಯನ್ನು ಸೇವೆ ಮಾಡಲು ಅವಕಾಶವನ್ನು ನೀಡಿದರು. ನನಗೆ ಕೊಟ್ಟ ಅವಕಾಶವನ್ನು ನಾನು ಹಾಳು ಮಾಡಲಿಲ್ಲ. ಭ್ರಷ್ಟರಿಂದ ದೇಶದ ಸಂಪತ್ತನ್ನು ರಕ್ಷಿಸಲು ನಾನು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ ಎಂದು ಹೇಳಿದರು.

    ಮೋದಿ ಪ್ರಮುಖ ಹೇಳಿಕೆಗಳು:
    ದೇಶದ ಪ್ರತಿಯೊಬ್ಬ ನಾಗರಿಕನೂ ಚೌಕೀದಾರರು. ಚೌಕೀದಾರ ಎನ್ನುವುದು ಒಂದು ಭಾವನೆ. ಆದರೆ ಕೆಲವರು ಬೌದ್ಧಿಕವಾಗಿ ಬೆಳವಣಿಗೆ ಆಗಿರದ ವ್ಯಕ್ತಿಗಳು ಚೌಕೀದಾರ ಎಂದರೆ ಟೋಪಿ ಹಾಕಿಕೊಂಡು ಕೋಲು ಹಿಡಿದು, ಸಿಳ್ಳೆ ಹಾಕಿಕೊಂಡು ಬರುವವರು ಎಂದು ತಿಳಿದುಕೊಂಡಿದ್ದಾರೆ.

    ಕಾಂಗ್ರೆಸ್ ಒಂದೊಂದು ಸಮಯದಲ್ಲಿ ಸುಳ್ಳು ಹೇಳಿಕೊಂಡು ಚುನಾವಣೆಗೆ ಹೋಗುತ್ತದೆ. ದೆಹಲಿ ಚುನಾವಣೆಯ ಸಮಯದಲ್ಲಿ ಅವರ ವಸ್ತು ‘ಅಸಹಿಷ್ಣುತೆ’ ಆಗಿತ್ತು. ಬಿಹಾರ ಚುನಾವಣೆಯ ಸಮಯದಲ್ಲಿ ‘ಎಲ್ಲ ಮೀಸಲಾತಿಯನ್ನು ಮೋದಿ ಸರ್ಕಾರ ತೆಗೆದು ಹಾಕುತ್ತದೆ’ ಆಗಿತ್ತು. ಇದರ ಜೊತೆ ‘ಅವಾರ್ಡ್ ವಾಪ್ಸಿ’ ಬಂದು ಹೋಯ್ತು.

    ಉಗ್ರರ ಕೇಂದ್ರ ಬಿಂದು ಎಲ್ಲಿದೆ ಎನ್ನುವುದು ಇಡಿ ವಿಶ್ವಕ್ಕೆ ಗೊತ್ತಿದೆ. ಈ ಕಾಣರಕ್ಕಾಗಿಯೇ ನಾವು ಅವರ ನೆಲಕ್ಕೆ ನುಗ್ಗಿ ದಾಳಿ ಮಾಡಿ ನೆಲೆಗಳನ್ನು ಧ್ವಂಸ ಮಾಡಿದ್ದೇವೆ. ಚುನಾವಣೆ ಇದೆ ಎನ್ನುವ ಕಾರಣಕ್ಕೆ ನಾವು ಪಾಕಿಸ್ತಾನದ ಮೇಲೆ ದಾಳಿ ಮಾಡಿಲ್ಲ. ನಮ್ಮ ದೇಶದ ಜನರು ಪಾಕಿಸ್ತಾನ ಹೇಳಿಕೆಯನ್ನು ಬೆಂಬಲಿಸುತ್ತಿರುವುದನ್ನು ನೋಡಿ ನನಗೆ ಬೇಸರವಾಗುತ್ತದೆ.

    ಬಾಲಕೋಟ್ ಮೇಲೆ ಯಶಸ್ವಿಯಾಗಿ ದಾಳಿ ಮಾಡಿದ ನಮ್ಮ ವೀರ ಯೋಧರಿಗೆ ಭಾರತ ಸೆಲ್ಯೂಟ್ ಹೊಡೆಯುತ್ತದೆ. ನನಗೆ ನಮ್ಮ ಸೇನೆಯ ಮೇಲೆ ಸಂಪೂರ್ಣ ವಿಶ್ವಾಸವಿದೆ. ಈ ಕಾರಣಕ್ಕಾಗಿಯೇ ನಾನು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇನೆ.

     

     

    ಕಳೆದ ಐದು ವರ್ಷದಲ್ಲಿ ನಾವು ಏನು ಸಾಧನೆ ಮಾಡಿದ್ದೇವೋ ಅದು ಸಾಧ್ಯವಾಗಿದ್ದು ಜನರ ಭಾಗಿದಾರಿಯಿಂದ. ಜನರಿಂದಾಗಿ ಸಚ್ಛತೆ ಒಂದು ದೊಡ್ಡ ಅಭಿಯಾನವಾಗಿ ರೂಪುಗೊಂಡಿದೆ.

    ನಾನು ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಲ್ಲ. ಭಾರತವನ್ನು ಲೂಟಿ ಹೊಡೆಯಲು ನಾನು ಬಿಡುವುದಿಲ್ಲ. ಮಿಶನ್ ಶಕ್ತಿಯ ಮೂಲಕ ನಾವು ಈಗ ಬಾಹ್ಯಾಕಾಶದಲ್ಲಿ ಎತ್ತರಕ್ಕೆ ತಲುಪಿದ್ದೇವೆ. ಇಲ್ಲಿಯವರೆಗೆ ಕೇವಲ ಮೂರು ದೇಶಗಳು ಮಾತ್ರ ಈ ಸಾಮರ್ಥ್ಯವನ್ನು ಹೊಂದಿದ್ದವು. ವಿಜ್ಞಾನಿಗಳಿಂದಾಗಿ ಈಗ ನಾವು ಬಾಹ್ಯಾಕಾಶ ಶಕ್ತಿ ರಾಷ್ಟ್ರಗಳ ಸಾಲಿಗೆ ಸೇರಿದ್ದೇವೆ.

    ಕಳೆದ 4 ವರ್ಷಗಳಿಂದ ಒಂದು ಕುಟುಂಬ ಅದೇ ಭರವಸೆಯನ್ನು ನೀಡುತ್ತಾ ಬಂದಿದೆ. ಆದರೆ ಇಲ್ಲಿಯವರೆಗೂ ಆ ಭರವಸೆ ಈಡೇರಿಲ್ಲ. ಈಗಲೂ ಆ ಭರವಸೆ ನೀಡುತ್ತಿದ್ದು, ಜನರ ಈ ವಿಚಾರವನ್ನು ಚುನಾವಣಾ ಸಮಯದಲ್ಲಿ ಗಂಭೀರವಾಗಿ ಪರಿಗಣಿಸಬೇಕು.

  • ಚೌಕಿದಾರ್ ಆಗಲ್ಲ, ನಾನು ಬ್ರಾಹ್ಮಣ: ಮೋದಿಗೆ ಸುಬ್ರಮಣಿಯನ್ ಸ್ವಾಮಿ ಟಾಂಗ್

    ಚೌಕಿದಾರ್ ಆಗಲ್ಲ, ನಾನು ಬ್ರಾಹ್ಮಣ: ಮೋದಿಗೆ ಸುಬ್ರಮಣಿಯನ್ ಸ್ವಾಮಿ ಟಾಂಗ್

    ಚೆನ್ನೈ: ನಾನು ಚೌಕಿದಾರ್ ಅಲ್ಲ, ಬ್ರಾಹ್ಮಣ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ತಮಿಳು ವಾಹಿನಿಯೊಂದರ ಸಂದರ್ಶನದಲ್ಲಿ, ನಿಮ್ಮ ಟ್ವೀಟ್ ಖಾತೆಯ ಹೆಸರಿನ ಮುಂದೆ ಚೌಕಿದಾರ್ ಅಂತ ಯಾಕೆ ಸೇರಿಸಿಲ್ಲ ಎಂದು ವರದಿಗಾರ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದರು, ನಾನು ಚೌಕಿದಾರ್ ಆಗುವುದಿಲ್ಲ. ಯಾಕೆಂದರೆ ನಾನು ಬ್ರಾಹ್ಮಣ. ಹೀಗಾಗಿ ಬ್ರಾಹ್ಮಣರು ಚೌಕಿದಾರ್ ಆಗಲು ಸಾಧ್ಯವಿಲ್ಲ. ಇದು ಸತ್ಯ ಕೂಡ ಎಂದರು.

    ಚೌಕಿದಾರ್ ಏನು ಮಾಡಬೇಕು ಎನ್ನುವ ಆದೇಶವನ್ನು ನಾನು ನೀಡುತ್ತೇನೆ. ನಾವು ಹೇಳಿದಂತೆ ಚೌಕಿದಾರ್ ಕೇಳಬೇಕೆಂದು ಎಲ್ಲರೂ ಅಂದುಕೊಳ್ಳುತ್ತಾರೆ. ಹೀಗಾಗಿ ನಾನು ಚೌಕಿದಾರ್ ಆಗಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ. ಸಂಸದರ ಸಂದರ್ಶನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪ್ರಧಾನಿ ಮೋದಿ ಅವರು ಮಾರ್ಚ್ 16ರಂದು `ನಾನೂ ಕೂಡ ಚೌಕಿದಾರ’ #MainBhiChowkidar ಎಂದು ಹೇಳಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿಕೊಂಡಿದ್ದರು. ಜೊತೆಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿರುವ ಹೆಸರಿನ ಮುಂದೆ `ಚೌಕಿದಾರ’ ಎಂದು ಸೇರಿಸಿಕೊಂಡಿದ್ದರು. ಮೋದಿ ಹೆಸರು ಬದಲಾಯಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಮತ್ತು ಮೋದಿ ಅಭಿಮಾನಿಗಳು ತಮ್ಮ ಹೆಸರಿನ ಮುಂದೆ ಚೌಕಿದಾರ ಎಂದು ಸೇರಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದ `ನಾನೂ ಕೂಡ ಚೌಕಿದಾರ’ #MainBhiChowkidar ಆಂದೋಲನ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ವಿಶ್ವದಲ್ಲಿ ಟ್ರೆಂಡ್ ಆಗಿತ್ತು. ಭಾರತದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರತಿಯೊಬ್ಬರು ಚೌಕಿದಾರರೇ ಎಂದು ಮೋದಿ ಹೇಳಿದ್ದರು.

    ಕೋಲ್ಕತ್ತಾದಲ್ಲಿ ಶನಿವಾರ ನಡೆದಿದ್ದ ಸಭೆಯೊಂದರಲ್ಲಿ ಮಾತನಾಡಿದ ಅವರು, ಜಿಡಿಪಿ ಲೆಕ್ಕಾಚಾರದಂತೆ ಅಮೆರಿಕ ಮತ್ತು ಚೀನಾ ಬಳಿಕ ಭಾರತ ಮೂರನೇ ದೊಡ್ಡ ಆರ್ಥಿಕತೆ ಎನಿಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ವಿಶ್ವದ 5ನೇ ದೊಡ್ಡ ಆರ್ಥಿಕತೆ ಎಂದು ಏಕೆ ಕರೆಯುತ್ತಿದ್ದಾರೆ ಎಂದು ನನಗೆ ಅರ್ಥವಾಗುತ್ತಿಲ್ಲ. ಬಹುಶಃ ಪ್ರಧಾನಿ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಅರ್ಥಶಾಸ್ತ್ರದ ಕುರಿತು ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದರು.

  • ಚಾಯ್‍ವಾಲಾ ಮೋದಿ ಚೌಕಿದಾರ್ ಆಗಿದ್ದು ಯಾವಾಗ: ಮಾಯಾವತಿ ಪ್ರಶ್ನೆ

    ಚಾಯ್‍ವಾಲಾ ಮೋದಿ ಚೌಕಿದಾರ್ ಆಗಿದ್ದು ಯಾವಾಗ: ಮಾಯಾವತಿ ಪ್ರಶ್ನೆ

    ನವದೆಹಲಿ: ಚಾಯ್‍ವಾಲಾ ಮೋದಿ ಚೌಕಿದಾರ್ ಆಗಿದ್ದು ಯಾವಾಗ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ವ್ಯಂಗ್ಯವಾಡಿದ್ದಾರೆ.

    ಬಿಜೆಪಿ ಆರಂಭಿಸಿದರುವ `ಚೌಕಿದಾರ್’ ಅಭಿಯಾನದ ಕುರಿತು ಟ್ವಿಟ್ಟರ್ ನಲ್ಲಿ ಮಾಯಾವತಿ ಲೇವಡಿ ಮಾಡಿದ್ದಾರೆ. ಬಿಎಸ್‍ಪಿ ನಾಯಕಿಯ ಹೇಳಿಕೆಗೆ ಅನೇಕ ಬಿಜೆಪಿ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ.

    ಮಾಯಾವತಿ ಟ್ವೀಟ್‍ನಲ್ಲಿ ಏನಿದೆ?:
    ಬಿಜೆಪಿ ಚೌಕಿದಾರ್ ಎಂಬ ಅಭಿಯಾನ ಆರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ತಮ್ಮ ಟ್ವೀಟರ್ ಖಾತೆಯ ಹೆಸರಿನ ಮುಂದೆ ಚೌಕಿದಾರ್ ಎಂದು ಸೇರಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಾಯ್‍ವಾಲಾ ಆಗಿದ್ದರು. ಆದರೆ ಈ ಬಾರಿ ಚೌಕಿದಾರ್ ಆಗಿ ಬದಲಾಗಿದ್ದಾರೆ. ಬಿಜೆಪಿ ಅಧಿಕಾರ ಅವಧಿಯಲ್ಲಿ ಭಾರತವು ಇಂತಹ ಬದಲಾವಣೆಗಳಿಗೆ ಸಾಕ್ಷಿಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

    ಪ್ರಧಾನಿ ಮೋದಿ ಅವರು ಮಾರ್ಚ್ 16ರಂದು `ನಾನೂ ಕೂಡ ಚೌಕಿದಾರ’ #MainBhiChowkidar ಎಂದು ಹೇಳಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿಕೊಂಡಿದ್ದರು. ಜೊತೆಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿರುವ ಹೆಸರಿನ ಮುಂದೆ `ಚೌಕಿದಾರ’ ಎಂದು ಸೇರಿಸಿಕೊಂಡಿದ್ದರು. ಮೋದಿ ಹೆಸರು ಬದಲಾಯಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಮತ್ತು ಮೋದಿ ಅಭಿಮಾನಿಗಳು ತಮ್ಮ ಹೆಸರಿನ ಮುಂದೆ ಚೌಕಿದಾರ ಎಂದು ಸೇರಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದ `ನಾನೂ ಕೂಡ ಚೌಕಿದಾರ’ #MainBhiChowkidar ಆಂದೋಲನ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ವಿಶ್ವದಲ್ಲಿ ಟ್ರೆಂಡ್ ಆಗಿತ್ತು. ಭಾರತದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರತಿಯೊಬ್ಬರು ಚೌಕಿದಾರರೇ ಎಂದು ಮೋದಿ ಹೇಳಿದ್ದರು.