Tag: chowkidar film

  • ‘ಚೌಕಿದಾರ್’ ಚಿತ್ರದ ಟೀಸರ್ ರಿಲೀಸ್- ರಕ್ತಸಿಕ್ತ ಅವತಾರದಲ್ಲಿ ಪೃಥ್ವಿ ಅಂಬರ್ ಅಬ್ಬರ

    ‘ಚೌಕಿದಾರ್’ ಚಿತ್ರದ ಟೀಸರ್ ರಿಲೀಸ್- ರಕ್ತಸಿಕ್ತ ಅವತಾರದಲ್ಲಿ ಪೃಥ್ವಿ ಅಂಬರ್ ಅಬ್ಬರ

    ಪೃಥ್ವಿ ಅಂಬರ್ (Pruthvi Ambaar) ಹಾಗೂ ಧನ್ಯಾ ರಾಮ್‌ಕುಮಾರ್ (Dhanya Ramkumar) ನಟನೆಯ ‘ಚೌಕಿದಾರ್’ ಸಿನಿಮಾದ (Chowkidar) ಟೀಸರ್ ಬಿಡುಗಡೆಯಾಗಿದೆ. ರಕ್ತಸಿಕ್ತ ಅವತಾರವೆತ್ತಿರುವ ಪೃಥ್ವಿ ಹೊಸ ಲುಕ್ ಸಿನಿರಸಿಕರಿಗೆ ಕಿಕ್ ಕೊಟ್ಟಿದೆ. ನಾಯಕಿ ಧನ್ಯಾ ಡಿ ಗ್ಲಾಮ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ವಿಜಯಲಕ್ಷ್ಮಿ ಎತ್ತಿನಗಾಡಿ ಸವಾರಿ – ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷ್

    ಟೀಸರ್‌ನಲ್ಲಿ ಎಲ್ಲಾ ಪಾತ್ರಗಳನ್ನು ತೋರಿಸಿರುವ ಚಂದ್ರಶೇಖರ್ ಬಂಡಿಯಪ್ಪ ಕಥೆಯ ಗುಟ್ಟನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದ್ದು, ಖಾಕಿ ಲುಕ್‌ನಲ್ಲಿ ಸುಧಾರಾಣಿ ಖದರ್ ತೋರಿಸಿದ್ದಾರೆ. ಹಿರಿಯ ನಟ ಸಾಯಿ ಕುಮಾರ್ ಪೃಥ್ವಿ ತಂದೆ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ಧರ್ಮ, ಹಿರಿಯ ನಟಿ ಶ್ವೇತಾ ತಾರಾಬಳಗದಲ್ಲಿದ್ದಾರೆ.

    ಸಚಿನ್ ಬಸ್ರೂರ್ ಸಂಗೀತ ಟೀಸರ್‌ನಲ್ಲಿ ಗಮನ ಸೆಳೆಯುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ಪೃಥ್ವಿರಾಜ್ ಧಘಾರಿ ಸಹನಿರ್ದೇಶನ ಸಿನಿಮಾಗಿದೆ.

    ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಟೀಸರ್ ನೋಡುತ್ತಿದ್ದರೇ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಯಾವುದೋ ಹೊಸ ಕಥೆಯನ್ನು ಹರವಿಡಲು ಹೊರಟಿರುವುದು ಗೊತ್ತಾಗುತ್ತಿದೆ. ಇದನ್ನೂ ಓದಿ:ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

    ಅಂದಹಾಗೆ, ಜೂನ್ 1ರಂದು ‘ಚೌಕಿದಾರ್’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲಿದೆ. ಶೀಘ್ರದಲ್ಲೇ ರಿಲೀಸ್ ಡೇಟ್ ಅನ್ನು ಚಿತ್ರತಂಡ ರಿವೀಲ್ ಮಾಡಲಿದೆ.

  • ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ

    ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ

    ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ (Pruthvi Ambaar) ಹಾಗೂ ಧನ್ಯಾ ರಾಮ್‌ಕುಮಾರ್ (Dhanya Ramkumar) ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಚೌಕಿದಾರ್’ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ (ಡಿ.23) ಚಿತ್ರಕ್ಕೆ ಕುಂಬಳಕಾಯಿ ಒಡೆಯಲಾಯಿತು. ಈ ವೇಳೆ, ಇಡೀ ಚಿತ್ರತಂಡ ಭಾಗಿಯಾಗಿತ್ತು. ಬಳಿಕ ಸುದ್ದಿಗೋಷ್ಠಿಯಲ್ಲಿ ‘ಚೌಕಿದಾರ್’ (Chowkidar) ಕಲಾವಿದರು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು.

    ಪೃಥ್ವಿ ಅಂಬಾರ್ ಮಾತನಾಡಿ, ಈ ಚಿತ್ರದಿಂದ ಬಹಳಷ್ಟು ಕಲಿಯಲು ಸಿಕ್ಕಿದೆ. ನುರಿತ ನಿರ್ದೇಶಕರು ಇದ್ದಾಗ ಹೇಗೆ ಬೇಕು ಯಾವ ರೀತಿ ಬೇಕು ಅನ್ನೋದನ್ನು ಅವರು ಹೇಳಿ ಕೊಟ್ಟಿದ್ದಾರೆ. ಮನುಷ್ಯನ ಭಾವನೆಗಳನ್ನು ತುಂಬಾ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಫ್ಯಾಮಿಲಿ ಎಮೋಷನ್ ತುಂಬಾ ಚೆನ್ನಾಗಿ ಅಳವಡಿಸಿದ್ದಾರೆ. ಸಾಯಿ ಸರ್ ಸೆಟ್‌ನಲ್ಲಿ ಇದ್ದ ರೀತಿ. ನಮ್ಮಂತಹ ಕಲಾವಿದರಿಗೆ ಪುಸ್ತಕ ಇದ್ದಂತೆ. ನಿರ್ಮಾಪಕ ಜರ್ನಿ ನನಗೆ ಸ್ಫೂರ್ತಿ ಎಂದು ತಿಳಿಸಿದರು.

    ನಿರ್ದೇಶಕ‌ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ನಾವು ನಿರ್ದೇಶಕರಾಗಿ ನಿರ್ಮಾಪಕರ ನಂಬಿಕೆ ಉಳಿಸಿಕೊಳ್ಳಬೇಕು. ನಿರ್ಮಾಪಕರಿಗೆ ಪ್ರೊಫೆಷನಲಿಸಂ ಇದೆ. ಇಡೀ ಕಲಾವಿದರು ಅತ್ಯದ್ಭುತವಾಗಿ ಅಭಿನಯಿಸಿದ್ದಾರೆ. 2025ರ ಸಂಕ್ರಾಂತಿಗೆ ಟೀಸರ್ ರಿಲೀಸ್ ಮಾಡುತ್ತೇವೆ. 4 ಹಾಡುಗಳಿವೆ. ಪ್ರತಿಯೊಬ್ಬ ಮನೆಯಲ್ಲಿಯೂ ಚೌಕಿದಾರ್ ಇರುತ್ತಾರೆ ಅವರ ಕಥೆಯನ್ನು ನಾವು ಹೇಳಿದ್ದೇವೆ. ಗ್ರಾಮಾಂತರ ಪ್ರದೇಶದಿಂದಲೇ ಚಿತ್ರ ಶುರುವಾಗುತ್ತದೆ. ಸಾಯಿ ಕುಮಾರ್ ಸರ್ ಹಾಗೂ ಪೃಥ್ವಿ ತಂದೆ- ಮಗನಾಗಿ ನಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

    ಧನ್ಯಾ ರಾಮ್ ಕುಮಾರ್ ಮಾತನಾಡಿ, ‘ಚೌಕಿದಾರ್’ ಶೂಟಿಂಗ್ ಮುಗಿದಿದೆ. ಈ ಚಿತ್ರದಲ್ಲಿ ಪಾತ್ರ ಸಿಕ್ಕಿರುವುದು ಖುಷಿ ಜೊತೆಗೆ ಹೆಮ್ಮೆ ಇದೆ. ಈ ಸಿನಿಮಾದಿಂದ ನನಗೆ ಕಲಿಯುವುದು ತುಂಬಾನೇ ಸಿಕ್ತು. ಜರ್ನಿ ಚಾಲೆಂಜಿಂಗ್ ಆಗಿತ್ತು. ಈ ಚಿತ್ರದ ಮೂಲಕ ಒಳ್ಳೆಯ ನಟಿಯಾಗಿ ಬಂದಿದ್ದೇನೆ ಎನಿಸಿತು. ಸಾಯಿಕುಮಾರ್ ಸರ್, ಧರ್ಮ ಸರ್, ಸುಧಾ ರಾಣಿ ಮೇಡಂ, ಶ್ವೇತಾ ಮೇಡಂ, ಪೃಥ್ವಿ ಇವರ ಜೊತೆ ಕೆಲಸ ಮಾಡಿರುವುದು ಖುಷಿಯಾಗಿದೆ. ನಿರ್ಮಾಪಕರು ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದರು.

    ಸಾಯಿ ಕುಮಾರ್ ಮಾತನಾಡಿ, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಇದೇ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು , ಕುಂಬಳಕಾಯಿ ಕೂಡ ಇಲ್ಲೇ ಒಡೆಯಲಾಗಿದೆ. ಯಾವ ಸಿನಿಮಾಗೂ ಇದು ಆಗಿಲ್ಲ. ಮಹಾನ್ ಕಾಳಿ ಆಶೀರ್ವಾದ ನಮ್ಮ‌ ಚಿತ್ರಕ್ಕಿದೆ ಅನ್ನುವುದು ಗೊತ್ತಾಗುತ್ತಿದೆ. ಚೌಕಿದಾರ್ ಸಿನಿಮಾದಲ್ಲಿ ಒಂದೊಳ್ಳೆ ಕಲಾವಿದರು ಹಾಗೂ ತಂತ್ರಜ್ಞಾನರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ಇದೊಂದು ಫ್ಯಾಮಿಲಿ ಡ್ರಾಮಾ, ಎಮೋಷನಲ್ ಡ್ರಾಮಾ. ತೆಲುಗಿನಲ್ಲಿ ಹ್ಯಾಟ್ರಿಕ್ ಕೊಟ್ಟೆ. ಸರಿಪೋದ ಶನಿವಾರ, ಲಕ್ಕಿ ಭಾಸ್ಕರ್ 100 ಕೋಟಿ ಕೊಟ್ಟಿವೆ. ಮುಂದಿನ ವರ್ಷ ಕನ್ನಡದಲ್ಲಿ ಹ್ಯಾಟ್ರಿಕ್ ಆಗಲಿ ಎಂದು ಶುಭಕೋರಿದರು.

    ‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ‘ಚೌಕಿದಾರ್’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ‘ಡೈಲಾಗ್ ಕಿಂಗ್’ ಸಾಯಿ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪೃಥ್ವಿ ಅಂಬಾರ್, ಧನ್ಯಾ ರಾಮ್‌ಕುಮಾರ್ ಹಾಗೂ ಸಾಯಿಕುಮಾರ್ ಕಾಂಬಿನೇಷನ್ ಸಿನಿಪ್ರಿಯರಿಗೆ ಗಮನವನ್ನಂತೂ ಸೆಳೆದಿದೆ. ಶ್ವೇತಾ, ಸುಧಾರಾಣಿ, ಧರ್ಮ ಸೇರಿದಂತೆ ಮತ್ತಿತರ ತಾರಾಬಳಗ ಚಿತ್ರದಲ್ಲಿದೆ.

    ‘ಚೌಕಿದಾರ್’ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ಸಚಿನ್‌ ಬಸ್ರೂರು ಸಂಗೀತವಿದ್ರೆ, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ರವಿ ವರ್ಮಾ ಸಾಹಸ ನಿರ್ದೇಶನ ಸಿನಿಮಾಗಿದೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಲವರ್‌ ಬಾಯ್‌ ಆಗಿದ್ದ ಪೃಥ್ವಿ ಅಂಬಾರ್ ಮಾಸ್ ಲುಕ್ ಕೊಡಲಿದ್ದಾರೆ. ಪೃಥ್ವಿರಾಜ್ ಧಘಾರಿ ಸಹ ನಿರ್ದೇಶನದಲ್ಲಿ ‘ಚೌಕಿದಾರ್’ ಚಿತ್ರ ಮೂಡಿ ಬಂದಿದೆ.

  • ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಮೊದಲ ಹಂತದ ಶೂಟಿಂಗ್‌ ಮುಗಿಸಿದ ‘ಚೌಕಿದಾರ್‌’ ಚಿತ್ರತಂಡ

    ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಮೊದಲ ಹಂತದ ಶೂಟಿಂಗ್‌ ಮುಗಿಸಿದ ‘ಚೌಕಿದಾರ್‌’ ಚಿತ್ರತಂಡ

    ‘ಚೌಕಿದಾರ್’ (Chowkidar) ಸಿನಿಮಾ ತನ್ನ ಕ್ಯಾಚಿ ಟೈಟಲ್‌ನಿಂದಲೇ ಗಾಂಧಿನಗರದ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಸಾರಥ್ಯದ ಈ ಚಿತ್ರದ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಇಳಿದಿದ್ದ ಚಿತ್ರತಂಡವೀಗ 53 ದಿನಗಳ ಕಾಲ ಚಿತ್ರೀಕರಣ ಮುಗಿಸಿದೆ. ನೈಸರ್ಗಿಕ ಸೌಂದರ್ಯಕ್ಕೆ ಖ್ಯಾತಿ ಪಡೆದಿರುವ ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ‘ಚೌಕಿದಾರ್’ ಸಿನಿಮಾವನ್ನು 10 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ `ಚೌಕಿದಾರ್’ ಸಿನಿಮಾವನ್ನು ಅಷ್ಟೇ ಅದ್ಧೂರಿಯಾಗಿ ಹಾಗೂ ಸೊಗಸಾಗಿ ನಿರ್ಮಿಸಲಾಗುತ್ತಿದೆ. ಅದರಂತೆ ಚಿತ್ರತಂಡ ಅಂಡಮಾನ್-ನಿಕೋಬರ್ ದ್ವೀಪದಲ್ಲಿ ಚಿತ್ರೀಕರಣ ನಡೆಸಿದೆ. ಶಿವಣ್ಣ ನಟನೆಯ ‘ಅಂಡಮಾನ್’ ಸಿನಿಮಾದ ಶೂಟಿಂಗ್ ಈ ಜಾಗದಲ್ಲಿ ಆಗಿತ್ತು. ಈ ಚಿತ್ರ ಹೊರತುಪಡಿಸಿ ಮತ್ಯಾವುದೆ ಕನ್ನಡ ಸಿನಿಮಾಗಳ ಶೂಟಿಂಗ್ ನಡೆದಿಲ್ಲ. ಈಗ ಚೌಕಿದಾರ್ ಅಂಡಮಾನ್-ನಿಕೋಬರ್ ದ್ವೀಪದಲ್ಲಿ ಬರೋಬ್ಬರಿ 10 ದಿನಗಳ ಕಾಲ ಹಾಡು ಹಾಗೂ ಚಿತ್ರದ ಕೆಲ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿದಿರುವುದು ವಿಶೇಷ. ಒಟ್ಟಾರೆ 53 ದಿನಗಳ ಕಾಲ ಚೌಕಿದಾರ್ ಸಿನಿಮಾದ ಮೊದಲ ಹಂತದ ಚಿತ್ರೀಕರಣ ನಡೆದಿದೆ.

    ಅಂಡಮಾನ್-ನಿಕೋಬರ್ ದ್ವೀಪದಲ್ಲಿ ನಡೆದ ಚಿತ್ರೀಕರಣದಲ್ಲಿ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ, ನಾಯಕ ಪೃಥ್ವಿ ಅಂಬಾರ್ ನಾಯಕ ಧನ್ಯ ರಾಮ್ ಕುಮಾರ್ (Dhanya Ramkumar), ಹಿರಿಯ ಕಲಾವಿದರಾದ ಸಾಯಿಕುಮಾರ್, ನೃತ್ಯ ಸಂಯೋಜಕ ಮುರುಳಿ ಮಾಸ್ಟರ್ ಹಾಗೂ ಸೌತ್ ಇಂಡಿಯಾದ ಕೆಲ ಟೆಕ್ನಿಷಿಯನ್ ಭಾಗಿಯಾಗಿದ್ದರು.

    ಪೃಥ್ವಿ ಅಂಬಾರ್ (Pruthvi Ambaar) ಇಲ್ಲಿವರೆಗೂ ಲವ್‌ ಸ್ಟೋರಿ ಕುರಿತ ಅಭಿನಯಿಸಿದ್ದಾರೆ. ಲವರ್ ಬಾಯ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಆದರೆ, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಅದನ್ನ ಬದಲಿಸಬೇಕು ಅನ್ನೋ ಯೋಚನೆ ಮಾಡಿದ್ದಾರೆ. ಹಾಗಾಗಿಯೇ ‘ಚೌಕಿದಾರ್’ ಚಿತ್ರದಲ್ಲಿ ಪೃಥ್ವಿ ಅಂಬಾರ್ ರಗಡ್ ಲುಕ್ ಅಲ್ಲಿಯೇ ಕಾಣಿಸಿಕೊಂಡಿದ್ದಾರೆ. ವಿಭಿನ್ನ ಕಥಾಹಂದರದಲ್ಲಿ ಅವರು ಆಯ್ಕೆ ಮಾಡಿಕೊಂಡಿದ್ದು, ಹೊಸ ರೂಪದಲ್ಲಿ ಪೃಥ್ವಿ ನಿಮ್ಮ ಮುಂದೆ ಬರಲಿದ್ದಾರೆ.

    ‘ಚೌಕಿದಾರ್’ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಸಂಗೀತವಿದ್ರೆ, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆಯುತ್ತಿದ್ದಾರೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಲವರ್ ಬಾಯ್ ಆಗಿದ್ದ ಪೃಥ್ವಿ ಅಂಬಾರ್ ಮಾಸ್ ಲುಕ್ ಕೊಡಲಿದ್ದಾರೆ.

  • ‘ಚೌಕಿದಾರ್’ಗೆ ಮುಹೂರ್ತದ ಸಂಭ್ರಮ- ಪೃಥ್ವಿ ಅಂಬಾರ್‌, ಧನ್ಯಾ ಹೊಸ ಸಿನಿಮಾ

    ‘ಚೌಕಿದಾರ್’ಗೆ ಮುಹೂರ್ತದ ಸಂಭ್ರಮ- ಪೃಥ್ವಿ ಅಂಬಾರ್‌, ಧನ್ಯಾ ಹೊಸ ಸಿನಿಮಾ

    ‘ದಿಯಾ’ ಖ್ಯಾತಿಯ ನಟ ಪೃಥ್ವಿ ಅಂಬಾರ್ (Pruthvi Ambaar) ನಟಿಸುತ್ತಿರುವ ‘ಚೌಕಿದಾರ್’ (Chowkidaar) ಸಿನಿಮಾಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಮುಹೂರ್ತ ನೆರವೇರಿದೆ. ಚಿತ್ರದ ನಿರ್ಮಾಪಕರಾದ ಕಲ್ಲಹಳ್ಳಿ ಚಂದ್ರಶೇಖರ್ ಕ್ಲ್ಯಾಪ್ ಮಾಡಿದರೆ, ಸಾಯಿಕುಮಾರ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು.

    ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ‘ಡೈಲಾಗ್ ಕಿಂಗ್’ ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ದೊಡ್ಮನೆ ಕುಡಿ ಧನ್ಯಾ ರಾಮ್ ಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾ ಹಂಚಿಕೊಂಡಿತು. ಇದನ್ನೂ ಓದಿ:ಪವಿತ್ರಾಗೌಡ ದರ್ಶನ್‌ ಪತ್ನಿ ಅಲ್ಲ: ಪೊಲೀಸ್‌ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ

    ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ಇದು ನನ್ನ ಆರನೇ ಸಿನಿಮಾ. ಬಹುಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾದ ನಿರ್ಮಾಪಕರು. ರಥಾವರ ಹಿಟ್ ಆದಮೇಲೆ ನನಗೆ ಒಂದು ಸಿನಿಮಾ ಮಾಡಿ ಎಂದು ಕೇಳುತ್ತಿದ್ದರು. ಪೃಥ್ವಿ ಅವರನ್ನು ಲವರ್ ಬಾಯ್ ರೀತಿ ತೋರಿಸಿದ್ದಾರೆ. ಬೇರೆ ರೀತಿ ಟ್ರೈ ಮಾಡಬೇಕು ಎಂಬ ಆಸೆಯಿಂದ ಕಥೆ ಹೇಳಿದೆ. ಅವರು ಒಕೆ ಎಂದರು. ಅವರು ಪಾತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಅವರ ಜೋಶ್ ನೋಡಿ ಖುಷಿಯಾಯ್ತು. ಧನ್ಯ ಮೇಡಂ, ಸಾಯಿಕುಮಾರ್ ಸರ್, ಧರ್ಮ ಸರ್ ಎಲ್ಲರೂ ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

    ನಟ ಪೃಥ್ವಿ ಅಂಬಾರ್ ಮಾತನಾಡಿ, ತಾಯಿ ಆಶೀರ್ವಾದದಿಂದ ಚೌಕಿದಾರ್ ಸಿನಿಮಾಗೆ ಚಾಲನೆ ಸಿಕ್ಕಿದೆ. ಖುಷಿ ದಿನ ಇವತ್ತು. ಕಥೆ ಕೇಳಿದಾಗ ನನಗೆ ಅನಿಸಿದ್ದು, ನಾನು ಈ ಪಾತ್ರ ಮಾಡಲು ಸಾಕಷ್ಟು ಎಫರ್ಟ್ ಹಾಕಬೇಕು ಎಂದು ನನಗೆ ಗೊತ್ತಾಯ್ತು, ಪ್ರಿಪೇರ್ ಆಗಲು ಟೈಮ್ ಬೇಕು ಎಂದೆ. ಅದರಂತೆ ಅವರು ನನಗೆ ಟೈಮ್ ಕೊಟ್ಟರು, ಅಲ್ಲಿಂದ ನನ್ನ ಜರ್ನಿ ಶುರುವಾಯ್ತು. ಒಂದು ದಿನ ಟೀಸರ್ ಶೂಟ್ ಮಾಡಿದ್ದೇವೆ. ಬಹಳ ಖುಷಿ. ಲಕ್ಕಿ ಫೀಲ್ ಮಾಡುತ್ತೇನೆ. ಜೀವನದ ಬಗ್ಗೆ ಬಹಳ ಅನುಭವವಿದೆ. ಕಂಪ್ಲೀಟ್ ಫ್ಯಾಮಿಲಿ ಜೊತೆಗೆ ಬೇರೆ ಎಲಿಮೆಂಟ್ ಮಿಕ್ಸ್ ಮಾಡಲಾಗಿದೆ. ಚೌಕಿದಾರ್ ಟೈಟಲ್ ಕೊಡುವ ವೈಬ್ಸ್ ಕಥೆಯಲ್ಲಿರುತ್ತದೆ ಎಂದರು.

    ಸಾಯಿಕುಮಾರ್ ಮಾತನಾಡಿ, ಬಹಳ ಸಂತೋಷವಾಗುತ್ತಿದೆ. ಮುಂದಿನ ವರ್ಷ ನಟನಾಗಿ 50 ವರ್ಷ ಕಂಪ್ಲೀಟ್ ಆಗುತ್ತಿದೆ. ಕಾರಣ ಇದಕ್ಕೆಲ್ಲಾ ಅಪ್ಪ ಅಮ್ಮ. ನೀವು ಕನ್ನಡ ಸಿನಿಮಾ ಮಾಡಬೇಕು ಎಂದು ಅಮ್ಮ ಹೇಳುವವರು. ಕನ್ನಡ ಜರ್ನಿಗೂ 30 ವರ್ಷವಾಯ್ತು. ಪ್ರತಿ ದಿನ, ಪ್ರತಿ ಸಿನಿಮಾದ ಪಾತ್ರ ಚಾಲೆಂಜ್. ಈಗ ಹದಿನೈದು ಸಿನಿಮಾ ನಡೆಯುತ್ತಿದೆ. ಚಂದ್ರಶೇಖರ್ ಸಿನಿಮಾ ಗ್ಲಿಂಪ್ಸ್ ಚೆನ್ನಾಗಿದೆ. ನನ್ನ ತಮ್ಮ ಕೂಡ ಅದ್ಭುತ ಡೈರೆಕ್ಟರ್ ಎಂದರು. ಚೌಕಿದಾರ್ ಕಥೆ ಕೇಳಿದೆ ಎಮೋಷನ್ ಡ್ರಾಮಾ. ನಾನು ತುಳು ಸಿನಿಮಾ ಮಾಡಿದ್ದೇನೆ. ಅದರಲ್ಲಿ ಪೃಥ್ವಿ ಹೀರೋ. ನಾನು ಅದರಲ್ಲಿ ಪೊಲೀಸ್. ಕಥೆ ಚೆನ್ನಾಗಿದೆ. ಪೃಥ್ವಿಗೆ ನಾನು ಚೌಕಿದಾರ್, ನನಗೆ ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ್. ಇದು ಒಂದೊಳ್ಳೆ ಪ್ರಯತ್ನ ಎಂದರು.

    ನಟಿ ಧನ್ಯಾ ರಾಮ್ ಕುಮಾರ್ (Dhanya Ramkumar) ಮಾತನಾಡಿ, ಚಂದ್ರಸರ್ ಇಬ್ಬರಿಗೂ ಧನ್ಯವಾದ. ಚೌಕಿದಾರ್ ಸಿನಿಮಾದಲ್ಲಿ ನನಗೆ ನಟಿಸಲು ಅವಕಾಶ ನೀಡಿದಕ್ಕೆ. ಪೃಥ್ವಿ ಅವರು, ಧರ್ಮ ಸರ್, ಸಾಯಿಕುಮಾರ್ ಸರ್ ನಟರ ಜೊತೆ ನಾನು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ ಎಂದರು.


    ವಿದ್ಯಾಶೇಖರ್ ಎಂಟರ್‌ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಸಂಗೀತ ನಿರ್ದೇಶನ, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕಿದೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಈವರೆಗೆ ಸಿನಿಮಾದಲ್ಲಿ ಲವರ್ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಪಕ್ಕಾ ಫ್ಯಾಮಿಲಿ ಎಂಟರ್ಟೈನರ್. ಕಥಾಹಂದರ ಹೊಂದಿರುವ ಚೌಕಿದಾರ್ ಶೀಘ್ರದಲ್ಲೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.