Tag: church

  • ಸತತ ನಾಲ್ಕನೇ ಪ್ರಯತ್ನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

    ಸತತ ನಾಲ್ಕನೇ ಪ್ರಯತ್ನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

    ಬೆಂಗಳೂರು: ವಿವಿ ಪುರಂ ಚರ್ಚ್ ವೊಂದರ ಮೇಲೆ ಯುವಕನೊಬ್ಬ ವಿಚಿತ್ರವಾಗಿ ಸಾವನ್ನಪ್ಪಿದ್ದಾನೆ. ಸಾಯಲು ಸತತ 4 ಗಂಟೆ ಕಾಲ 3 ಬಾರಿ ಭಿನ್ನ ವಿಭಿನ್ನ ರೀತಿಯಲ್ಲಿ ಯತ್ನಿಸಿ, 4ನೇ ಬಾರಿಗೆ ಯಮನ ಪಾದ ಸೇರಿದ್ದಾನೆ.

    ಮೊದಲು ನೇಣು ಬಿಗಿದುಕೊಳ್ಳಲು ಹೋಗಿ ನೆಲದ ಮೇಲೆ ಬಿದ್ದು ಅಲ್ಲೇ ಇದ್ದು ಗಾಜಿನ ಪೀಸುಗಳಿಂದ ಗಾಯಗೊಂಡಿದ್ದಾನೆ. ನಂತರ ಗಾಜಿನ ಪೀಸಿನಿಂದ ಹೊಟ್ಟೆಗೆ ಇರಿದುಕೊಂಡಿದ್ದಾನೆ. ಬಳಿಕ ರಕ್ತಸ್ರಾವದ ನಡುವೆ 2 ಗಂಟೆ ಕಾಲ ಚರ್ಚ್ ಮೇಲೆ ಓಡಾಡಿದ ಯುವಕ 3ನೇ ಬಾರಿಗೆ ಮೊನಚಾದ ಟೈಲ್ಸ್ ನಿಂದ ಇರಿದುಕೊಂಡು ಅದೇ ರಕ್ತದಲ್ಲಿ ಮಲೆಯಾಳಂ ಭಾಷೆಯಲ್ಲಿ ಹುಡುಗಿಯೊಬ್ಬಳ ಹೆಸರು ಬರೆದಿದ್ದಾನೆ.

    ಆಗಲೂ ಸಾವನ್ನಪ್ಪದಿದ್ದಾಗ ತನ್ನ ಶರ್ಟ್ ನಿಂದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಯೋದಕ್ಕೆ ಚರ್ಚ್ ಮೇಲೇಕೆ ಬಂದ..? ಯಾರಾದರೂ ಕೊಲೆ ಮಾಡಿ ಮಾಡಿದ್ರಾ..? ಹುಡುಗಿ ವಿಚಾರಕ್ಕೋಸ್ಕರ ಹೀಗೆ ಮಾಡಿಕೊಂಡನಾ..? ಕೊಲೆಯೋ ಆತ್ಮಹತ್ಯೆಯೋ..? ಅನ್ನೋ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಣ್ಣೀರು ಸುರಿಸಿದ ಆರೋಗ್ಯಮಾತೆ: ನೋಡಲು ಮುಗಿಬಿದ್ದ ಸಾರ್ವಜನಿಕರು

    ಕಣ್ಣೀರು ಸುರಿಸಿದ ಆರೋಗ್ಯಮಾತೆ: ನೋಡಲು ಮುಗಿಬಿದ್ದ ಸಾರ್ವಜನಿಕರು

    ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ಆರೋಗ್ಯಮಾತೆ ಚರ್ಚ್ ನಲ್ಲಿರುವ ಆರೋಗ್ಯಮಾತೆಯು ಕಣ್ಣೀರು ಸುರಿಸಿದ್ದು, ಈ ವಿಸ್ಮಯವನ್ನು ನೋಡಲು ನೂರಾರು ಸಾರ್ವಜನಿಕರು ಚರ್ಚ್ ಗೆ ಆಗಮಿಸಿದ್ದರು.

    ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ವಿಸ್ಮಯಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ದೇವರ ವಿಗ್ರಹದಲ್ಲಿ ಕಣ್ಣಿರು ಬರುತ್ತಿದ್ದು. ಹಲವು ಕುತೂಹಲಕ್ಕೆ ಕಾರಣವಾಗಿದೆ. ಹರಿಹರ ಪಟ್ಟಣದ ಆರೋಗ್ಯಮಾತೆ ಚರ್ಚಿನ ಆರೋಗ್ಯಮಾತೆ ವಿಗ್ರಹದಿಂದ ಕಣ್ಣೀರು ಬರುತ್ತಿರುವ ಸುದ್ದಿ ಹರಡುತ್ತಲೇ, ನೂರಾರು ಭಕ್ತರು ಬಂದು ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೇ ಮಾತೆಗೆ ಕಣ್ಣೀರ ಬರಲು ಕಾರಣವೇನು ಎನ್ನುವ ಕುತೂಹಲ ಭಕ್ತರಲ್ಲಿ ಸೃಷ್ಟಿಯಾಗಿದೆ.

    ಹರಿಹರದ ಆರೋಗ್ಯ ಮಾತಾ ಚರ್ಚ್ ಪ್ರಸಿದ್ಧ ಸ್ಥಳವಾಗಿದ್ದು, ಇಲ್ಲಿಗೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಬಂದು ಮರೀಯಾ ದೇವಿಯ ದರ್ಶನ ಪಡೆದು ಹೋಗುತ್ತಾರೆ. ಆದರೆ ಬುಧವಾರ ಏಕಾಏಕಿ ಮರೀಯಾ ವಿಗ್ರಹದಲ್ಲಿ ಕಣ್ಣಿನಲ್ಲಿ ನೀರು ಬರುತ್ತಿದ್ದು, ಭಕ್ತರ ಮನದಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

    ಬುಧವಾರ ಬೆಳಗ್ಗೆ 11.30ಕ್ಕೆ ಸೇಲೀನ್  ಎಂಬವರು  ಪ್ರಾರ್ಥನೆ ಸಲ್ಲಿಸಲು ಚರ್ಚಿಗೆ ಬಂದಿದ್ದಾರೆ. ಈ ವೇಳೆ ಮರೀಯಾ ವಿಗ್ರಹದಿಂದ ಕಣ್ಣೀರು ಬರುತ್ತಿರುವುದನ್ನು ಕಂಡು, ಚರ್ಚಿನ ಫಾದರ್ ಆಂತೋನಿ ಪೀಟರ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಫಾದರ್ ಅದನ್ನು ಪರೀಕ್ಷಿಸಿ ನೋಡಿದಾಗ ವಿಗ್ರಹದ ಎಡ ಭಾಗದ ಕಣ್ಣಿನಿಂದ ಕಣ್ಣೀರಿನ ಹಾಗೆ ನೀರು ತೊಟ್ಟಿಕ್ಕುತ್ತಿದೆ. ಏನಾದರೂ ಬಿದ್ದರಬಹುದೆಂದು ಫಾದರ್ ಅದನ್ನು ಒಂದು ಬಟ್ಟೆಯಿಂದ ಒರೆಸಿದ್ದಾರೆ. ಬಳಿಕ ಕೆಲ ಸಮಯದಲ್ಲಿ ಮತ್ತೆ ಅದೇ ಭಾಗದಲ್ಲಿ ನೀರು ಹರಿಯಲಾರಂಭಿಸಿದೆ ಎಂದು ಚರ್ಚ್ ಫಾದರ್ ತಿಳಿಸಿದ್ದಾರೆ.

    ಮರೀಯಾ ಮಾತೆಯ ಕಣ್ಣಿನಲ್ಲಿ ನೀರು ಬರುತ್ತಿರುದನ್ನು ತಿಳಿದ ಭಕ್ತರು ಮಾತೆಯ ದರ್ಶನ ಪಡೆಯಲು ಮುಗಿದಿದ್ದಾರೆ. ಅಲ್ಲದೇ ಏನಾದರೂ ತಪ್ಪಾಗಿದೆಯೋ, ಇಲ್ಲಾ ತಾಯಿಗೆ ನೋವಾಗುವ ಹಾಗೆ ಯಾರಾದರೂ ನಡೆದುಕೊಂಡಿದ್ದಾರೆಯೋ, ಒಂದು ವೇಳೇ ಆಗೇನಾದರೂ ನಡೆದುಕೊಂಡಿದ್ದರೆ, ಅವರನ್ನು ಕ್ಷಮಿಸು ಎಂದು ಭಕ್ತರು ಪ್ರತಿಮೆಯ ಮುಂಭಾಗ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ಎಂದು ಚರ್ಚಿನ ಆಡಳಿತ ಮಂಡಳಿಯವರಾದ ಫ್ರಾನ್ಸಿಸ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿ ವಿರುದ್ಧ ಲೋಕಸಭಾ ಚುನಾವಣೆ ಮುಗಿಯೋವರೆಗೆ ಪ್ರಾರ್ಥನೆ ಮಾಡಲಿದ್ದಾರೆ ದೆಹಲಿ ಕ್ರೈಸ್ತರು!

    ಮೋದಿ ವಿರುದ್ಧ ಲೋಕಸಭಾ ಚುನಾವಣೆ ಮುಗಿಯೋವರೆಗೆ ಪ್ರಾರ್ಥನೆ ಮಾಡಲಿದ್ದಾರೆ ದೆಹಲಿ ಕ್ರೈಸ್ತರು!

    ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ವಿರೋಧ ಪಕ್ಷಗಳು ಮೋದಿ ಸೋಲಿಸಲು ಮೈತ್ರಿ ಮಾತುಕತೆಗೆ ಒಲವು ತೋರಿಸುತ್ತಿದ್ದರೆ ದೆಹಲಿಯ ಕ್ರೈಸ್ತರು ಎನ್‍ಡಿಎ ಸರ್ಕಾರದ ವಿರುದ್ಧ ಪರೋಕ್ಷವಾಗಿ ಪ್ರಚಾರ ಆರಂಭಿಸಿದ್ದಾರೆ.

    ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತತೆಗೆ ಸವಾಲು ಹಾಕುವ ಅಸ್ಥಿರ ರಾಜಕೀಯವನ್ನು ದೇಶ ಎದುರಿಸುತ್ತಿದೆ. ದೇಶದ ಉಳಿವಿಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ದೆಹಲಿಯ ಆರ್ಚ್ ಬಿಷಪ್ ಒಬ್ಬರು ಬರೆದ ಪತ್ರವೊಂದು ಈಗ ವಿವಾದಕ್ಕೆ ಕಾರಣವಾಗಿದೆ.

    ಆರ್ಚ್ ಬಿಷಪ್ ಅನಿಲ್ ಕೌಟೋ ಅವರು, ಮೇ 8ರಂದು ಈ ಪತ್ರವನ್ನು ಬರೆದಿದ್ದು ರಾಜಧಾನಿಯ ವಿವಿಧ ಚರ್ಚ್ ಗಳಿಗೆ ಕಳುಹಿಸಲಾಗಿದೆ. ಮೇ 13 ರಿಂದ 2019ರ ಲೋಕಸಭೆ ಚುನಾವಣೆವರೆಗೆ ಪ್ರಾರ್ಥನೆ ಮಾಡಬೇಕು ಹಾಗೂ ಶುಕ್ರವಾರ ಉಪವಾಸ ಆರಂಭಿಸಬೇಕು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ದೇಶವು ಪ್ರಜಾಪ್ರಭುತ್ವ ಹಾಗೂ ಜಾತ್ಯತೀತಗೆ ಸವಾಲು ಹಾಕುವ ಅಸ್ಥಿರ ರಾಜಕೀಯವನ್ನು ಎದುರಿಸುತ್ತಿದೆ. 2019ರಲ್ಲಿ ನಾವು ಹೊಸ ಸರ್ಕಾರ ಹೊಂದಲು ಹಾಗೂ ದೇಶದ ಉಳಿವಿಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು. 2019ರ ಲೋಕಸಭೆ ಚುನಾವಣೆವರೆಗೆ ಚರ್ಚ್ ಗಳಲ್ಲಿ ಪ್ರಾರ್ಥನೆ ಕೈಗೊಳ್ಳಬೇಕು ಹಾಗೂ ಶುಕ್ರವಾರ ಉಪವಾಸ ಆರಂಭಿಸಬೇಕು ಎನ್ನುವ ಅಂಶ ಪತ್ರದಲ್ಲಿದೆ.

    ದೇಶದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಅನೇಕ ಕಡೆಗಳಲ್ಲಿ ಕ್ರೈಸ್ತರ ಮೇಲಿನ ದಾಳಿಯಾಗಿದೆ. 2017ರಲ್ಲಿಯೇ 736 ದಾಳಿಯಾಗಿವೆ. ಹೀಗಾಗಿ, ಸರ್ಕಾರದ ವಿರುದ್ಧ ಪ್ರಾರ್ಥನಾ ಸಭೆಗೆ ಹಾಗೂ ಉಪವಾಸಕ್ಕೆ ಕರೆ ನೀಡಿರುವುದು ಮಹತ್ವ ಪಡೆದುಕೊಂಡಿದೆ. ದೇಶಾದ್ಯಂತ ಈ ಪ್ರಾರ್ಥನೆಯನ್ನು ಕೈಗೊಳ್ಳಬೇಕು ಎನ್ನುವ ಬೇಡಿಕೆ ಎಲ್ಲಡೆ ವ್ಯಕ್ತವಾಗಿದೆ.

    ನರೇಂದ್ರ ಮೋದಿ ಅವರು ಧಾರ್ಮಿಕ ಹಾಗೂ ಜನಾಂಗೀಯ ಅಲ್ಪಸಂಖ್ಯಾತರ ಹಿತವನ್ನು ಕಡೆಗಣಿಸಿದ್ದಾರೆ. ಹಿಂದು ರಾಷ್ಟ್ರ ಸ್ಥಾಪಿಸುವ ಉದ್ದೇಶದಿಂದ ಹಿಂದು ಸಂಘಟನೆಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಕ್ರೈಸ್ತ ಮುಖಂಡರು ಆರೋಪಿಸಿದ್ದಾರೆ.

    ಈ ಪತ್ರದ ಮೂಲಕ ಜಾತಿ ಹಾಗೂ ಸಮುದಾಯಗಳಿಗೆ ಪ್ರೇರೇಪಣೆ ನೀಡಲಾಗುತ್ತಿದೆ. ಒಂದು ಪಕ್ಷ ಇಲ್ಲವೇ, ಅಭ್ಯರ್ಥಿಗೆ ಮತದಾನ ಮಾಡಲು ಸಲಹೆ ನೀಡಬಹುದು. ಆದರೆ ಬಿಜೆಪಿಗೆ ಮಾತ್ರ ಮತದಾನ ಮಾಡಬೇಡಿ ಎನ್ನುತ್ತಿರುವ ನಡೆ ಸರಿಯಲ್ಲ ಎಂದು ಬಿಜೆಪಿಯ ವಕ್ತಾರೆ ಎನ್.ಸಿ.ಶೈನಾ ಹೇಳಿದ್ದಾರೆ.

  • ಚರ್ಚ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ – 13 ಸಾವು, 41ಕ್ಕೂ ಹೆಚ್ಚು ಜನರಿಗೆ ಗಾಯ

    ಚರ್ಚ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ – 13 ಸಾವು, 41ಕ್ಕೂ ಹೆಚ್ಚು ಜನರಿಗೆ ಗಾಯ

    ಜಕಾರ್ತ: ಇಂಡೊನೇಷ್ಯಾದ ಮೂರು ಚರ್ಚ್‍ಗಳ ಮೇಲೆ ಆತ್ಮಹತ್ಯಾ ಬಾಂಬರ್ ಗಳು ನಡೆಸಿದ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 41ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ದೇಶದ ಎರಡನೇ ದೊಡ್ಡ ನಗರವಾದ ಸುರಭಯದಲ್ಲಿರುವ ಸಂತ ಮೇರಿಯಾ ರೋಮ್ ಕ್ಯಾಥೋಲಿಕ್ ಚರ್ಚ್, ಡಿಪೊನಿಗೊರೊದ ಚರ್ಚ್ ಹಾಗೂ ಪಂಟಕೊಸ್ತಾ ಚರ್ಚ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.

    ಕ್ಯಾಥೋಲಿಕ್ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆಯ ವೇಳೆ ಮೊದಲ ದಾಳಿ ನಡೆದಿದೆ. ಈ ವೇಳೆ ಶಂಕಿತ ಬಾಂಬರ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಇದಾದ ಕೆಲವೇ ನಿಮಿಷದಲ್ಲಿ ಡಿಪೊನಿಗೊರೊದ ಚರ್ಚ್ ನಲ್ಲಿ ಎರಡನೇ ಬಾಂಬ್ ಸ್ಪೋಟವಾಗಿದೆ. ಮೂರನೇ ಬಾಂಬ್ ದಾಳಿ ಪಂಟಕೊಸ್ತಾ ಚರ್ಚ್ ಮೇಲಾಗಿದೆ ಎಂದು ಪೊಲೀಸ್ ವಕ್ತಾರ ಪ್ರಾನ್ಸ್ ಬರುಂಗ್ ಮಾಂಗೇರಾ ಸುದ್ದಿಗಾರಿರಗೆ ಮಾಹಿತಿ ನೀಡಿದ್ದಾರೆ.

    ಘಟನೆ 13 ಮಂದಿ ಸಾವನ್ನಪ್ಪಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸೇರಿದಂತೆ 40 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಮುಸ್ಲಿಮರನ್ನು ಹೊಂದಿರುವ ಇಂಡೋನೇಷ್ಯಾದಲ್ಲಿ ಅಲ್ಪಸಂಖ್ಯಾತರಾಗಿರುವ ಕ್ರಿಶ್ಚಿಯನ್ ಸಮುದಾಯದ ಮೇಲೆ ಮೊದಲಿನಿಂದಲೂ ಇಲ್ಲಿ ದಾಳಿ ನಡೆಯುತ್ತಿದೆ. 2000ರಲ್ಲಿ ಕ್ರಿಸ್‍ಮಸ್ ದಿನ ಚರ್ಚ್ ಮೇಲೆ ದಾಳಿ ಮಾಡಲಾಗಿತ್ತು. ಈ ವೇಳೆ 15 ಮಂದಿ ಮೃತಪಟ್ಟಿದ್ದರು ಮತ್ತು ಸುಮಾರು 100 ಜನ ಗಾಯಗೊಂಡಿದ್ದರು.

  • ಬಿಜೆಪಿಯ ಟೆಂಪಲ್ ರನ್ ಟೀಕೆಗೆ ಖಡಕ್ ಪ್ರತಿಕ್ರಿಯೆ ಕೊಟ್ಟ ರಾಹುಲ್ ಗಾಂಧಿ!

    ಬಿಜೆಪಿಯ ಟೆಂಪಲ್ ರನ್ ಟೀಕೆಗೆ ಖಡಕ್ ಪ್ರತಿಕ್ರಿಯೆ ಕೊಟ್ಟ ರಾಹುಲ್ ಗಾಂಧಿ!

    ಬೆಂಗಳೂರು: ಈ ಚುನಾವಣೆ ನನ್ನ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನಡುವಿನ ಚುನಾವಣೆಯಲ್ಲ. ರಾಜ್ಯದ ಜನರ ಸ್ಫೂರ್ತಿಯ ಚುನಾವಣೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕಡೆಯ ದಿನವಾದ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ನಂಬಿಕೆಗಳ ಮೇಲೆ ನಾವು ಜೀವನ ಮಾಡುತ್ತಿದ್ದೇವೆ. ಕಳೆದ 15 ವರ್ಷದಿಂದ ನಾನು ಹಲವು ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದೇನೆ. ಮಂದಿರ, ಮಸೀದಿ, ಚರ್ಚ್ ಗಳಿಗೆ ಭೇಟಿ ನೀಡಿದ್ದೇನೆ. ನಮಗೆ ಎಲ್ಲ ಸಮುದಾಯಗಳೂ ಮುಖ್ಯ. ಅವರು ಬೇಡ, ಇವರು ಬೇಡ ಅನ್ನುವ ಪಕ್ಷ ನಮ್ಮದಲ್ಲ. ಆದರೆ ಹೀಗೆ ಭೇಟಿ ಕೊಟ್ಟಾಗ ಬಿಜೆಪಿಯವರಿಗೆ ಅದನ್ನ ಸಹಿಸಿಕೊಳ್ಳಲು ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಠ ಮಾನ್ಯಗಳು ನೆನಪಾಗುತ್ತದೆ ಎಂದು ಟೀಕಿಸುತ್ತಾರೆ. ಹಿಂದಿನ ಅನೇಕ ಚುನಾವಣೆಗಳಲ್ಲಿ ಇದೇ ರೀತಿಯ ಟೀಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯದ ಜನರ ಮೇಲೆ ನಂಬಿಕೆಯಿಟ್ಟಿದ್ದೇವೆ. ಯುವಜನತೆಗೆ ಉದ್ಯೋಗ ಸೃಷ್ಠಿ ನಮ್ಮ ಗುರಿ. ಐಟಿ ಸಿಟಿ, ಗಾರ್ಡನ್ ಸಿಟಿ ಹೆಸರು ನಾವು ಉಳಿಸುತ್ತೇವೆ. ಮಹದಾಯಿ ನದಿ ನೀರು ಹಂಚಿಕೆ ಕುರಿತು ಕಾಂಗ್ರೆಸ್ ನಿಲುವೇನು ಎಂಬುದನ್ನು ಶೀಘ್ರದಲ್ಲಿಯೇ ಸ್ಪಷ್ಟಪಡಿಸುತ್ತೇವೆ ಎಂದು ಹೇಳಿದರು.

    ಮಾತನಾಡಿದ ಅವರು ಈ ಚುನಾವಣೆ ನನ್ನ ಭವಿಷ್ಯಕ್ಕಾಗಿ ಅಲ್ಲ. ಮುಂದೆ ಪ್ರಧಾನಿ ಆಗಲು ಸಹಕಾರಿಯೂ ಅಲ್ಲ. ಬೆಂಗಳೂರು ರಾಷ್ಟ್ರದ ಹೆಮ್ಮೆ. ದೇಶಕ್ಕೆ ಕರ್ನಾಟಕದ ಕೊಡುಗೆ ಅಪಾರ. ಈ ಚುನಾವಣೆಯಿಂದ ಕರ್ನಾಟಕ ಇನ್ನೂ ಹೆಚ್ಚಿನ ಅಭಿವೃದ್ಧಿಯ ಕಡೆಗೆ ನಡೆಯಬೇಕಿದೆ ಎಂದು ಹೇಳಿದರು.

    ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಓಡಾಡಿದ್ದೇನೆ. ನಾವು ಯಾರ ವಿರುದ್ಧವೂ ಟೀಕೆ ಮಾಡಿಲ್ಲ. ಸಂವಿಧಾನದ ಆಶಯಗಳನ್ನಿಟ್ಟುಕೊಂಡು ಚುನಾವಣೆಗೆ ಹೊರಟಿದ್ದೇವೆ. ರಾಜ್ಯದ ಜನರನ್ನ ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ರಚಿಸಿದ್ದೇವೆ. ಜನರ ಆಶಯಗಳಿಗೆ ಅನುಗುಣವಾಗಿ ಪ್ರಣಾಳಿಕೆ ತಯಾರಾಗಿದೆ. ವೀರಪ್ಪ ಮೊಯ್ಲಿ ಉತ್ತಮ ಪ್ರಣಾಳಿಕೆ ರಚಿಸಿದ್ದಾರೆ. ಕರ್ನಾಟಕದ ಜನರ ಧ್ವನಿಯಾಗಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಕೊಟ್ಟ ಭರವಸೆ ಈಡೇರಿಸುವ ಗುರಿ ನಮ್ಮದು. ರಾಜ್ಯದ ಜನ ಚುನಾವಣೆಯಲ್ಲಿ ನಮ್ಮ ಪರ ನಿಲ್ಲಲಿದ್ದಾರೆ, ಆ ಭರವಸೆ ನಮಗಿದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಗೆ ಬಹುಮತ ಬರುತ್ತದೆ. ಅತಂತ್ರ ವಿಧಾನಸಭೆಗೆ ಆಸ್ಪದವೇ ಇಲ್ಲ. ಈ ಚುನಾವಣೆ ಕನ್ನಡದ ಅಸ್ಮಿತೆ ಮೇಲೆ ನಡೆಯುತ್ತಿದೆ. ಕರ್ನಾಟಕದ ಜನ ಕಾಂಗ್ರೆಸ್ಸನ್ನು ಆರಿಸುತ್ತಾರೆ. ಬಸವ ತತ್ವವೇ ನಮ್ಮ ತತ್ವ. ಅದೇ ನಮಗೆ ಸ್ಪೂರ್ತಿ. ಆರ್‍ಎಸ್‍ಎಸ್ ಕರ್ನಾಟಕವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಜಾಗ್ರತೆಯಿಂದ ಇರಿ ಎಂದು ಎಚ್ಚರಿಕೆ ನೀಡಿದರು.

    ಭಾಷೆ, ಸಂಸ್ಕ್ರತಿ ಮತ್ತು ಬಸವ ತತ್ವದ ಮೇಲೆ ಸವಾರಿ ಮಾಡಲು ಆರ್‍ಎಸ್‍ಎಸ್ ಹೊರಟಿದೆ. ಆರ್‍ಎಸ್‍ಎಸ್ ಸಿದ್ಧಾಂತ ಮತ್ತು ಕರ್ನಾಟಕದ ಅಸ್ಮಿತೆಯ ಮಧ್ಯೆ ನಡೆಯುವ ಹೋರಾಟ ಈ ಚುನಾವಣೆ. ಕರ್ನಾಟಕದ ಅಸ್ಮಿತೆಯನ್ನ ಉಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

    ಈ ಬಾರಿ ಬಿಜೆಪಿಯವರು ನನ್ನ ಹಾಗೂ ನಮ್ಮ ನಾಯಕರುಗಳ ಮೇಲೆ ವೈಯುಕ್ತಿಕವಾಗಿ ವಾಗ್ದಾಳಿ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ. ಆದರೆ ಮಹಿಳೆ, ಯುವತಿಯರ ಮೇಲಿನ ಅತ್ಯಾಚಾರ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿಲ್ಲ. ಇದು ದೇಶದಲ್ಲೇ ಚರ್ಚೆಯಾಗಬೇಕಾದ ವಿಚಾರ. ದೇಶದ ಜನರ ಹಕ್ಕು, ರಕ್ಷಣೆಯ ವಿಚಾರ. ಕಚ್ಛಾ ತೈಲ ಬ್ಯಾರಲ್ ಬೆಲೆ 140 ಡಾಲರ್ ನಿಂದ 70 ಡಾಲರ್ ಗೆ ಇಳಿದಿದೆ. ಆದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಿಲ್ಲ ಇದರಿಂದ ದೇಶದ ಜನರಿಗೆ ಮತ್ತಷ್ಟು ಹೊರೆಯಾಗಿದೆ ಎಂದು ಕಿಡಿಕಾರಿದರು.

    ರೆಡ್ಡಿ ಬ್ರದರ್ಸ್ ರಾಜ್ಯವನ್ನೇ ಲೂಟಿ ಹೊಡೆದಿದ್ದಾರೆ. 35 ಸಾವಿರ ಕೋಟಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಮಾಡಿದ್ದಾರೆ. ಇದರ ಬಗ್ಗೆ ಯಾಕೆ ಯಾರು ಮಾತನಾಡುವುದಿಲ್ಲ ಎಂದು ಪ್ರಶ್ನೆ ಮಾಡಿದರು.

    ದಲಿತರಿಗೆ ದೇಶದಲ್ಲಿ ರಕ್ಷಣೆಯಿಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ದಲಿತರ ಮೇಲಿನ ಹಲ್ಲೆ ನಿಂತಿಲ್ಲ. ತಡೆಯುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ. ರೋಹಿತ್ ವೇಮುಲ ಸಾವು ಏನಾಯ್ತು?. ಉನ್ನಾವ್, ಕತುವಾ ಅತ್ಯಾಚಾರದಲ್ಲಿ ಹೇಗೆ ನಡೆದುಕೊಂಡರು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ನಮ್ಮ ನಂಬಿಕೆಗಳ ಮೇಲೆ ನಾವು ಜೀವನ ಮಾಡುತ್ತಿದ್ದೇವೆ. ಕಳೆದ 15 ವರ್ಷದಿಂದ ನಾನು ಹಲವು ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದೇನೆ. ಮಂದಿರ, ಮಸೀದಿ, ಚರ್ಚ್ ಗಳಿಗೆ ಭೇಟಿ ನೀಡಿದ್ದೇನೆ. ನಮಗೆ ಎಲ್ಲ ಸಮುದಾಯಗಳೂ ಮುಖ್ಯ. ಅವರು ಬೇಡ, ಇವರು ಬೇಡ ಅನ್ನುವ ಪಕ್ಷ ನಮ್ಮದಲ್ಲ. ಆದರೆ ಹೀಗೆ ಭೇಟಿ ಕೊಟ್ಟಾಗ ಬಿಜೆಪಿಯವರಿಗೆ ಅದನ್ನ ಸಹಿಸಿಕೊಳ್ಳಲು ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಠ ಮಾನ್ಯಗಳು ನೆನಪಾಗುತ್ತದೆ ಎಂದು ಟೀಕಿಸುತ್ತಾರೆ. ಹಿಂದಿನ ಅನೇಕ ಚುನಾವಣೆಗಳಲ್ಲಿ ಇದೇ ರೀತಿಯ ಟೀಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

     

     

  • ಕ್ರಿಶ್ಚಿಯನ್ ಸಂಪ್ರದಾಯದಂತೆ ಮದ್ವೆಯಾದ ಮೇಘನಾ ರಾಜ್, ಚಿರಂಜೀವಿ ಸರ್ಜಾ!

    ಕ್ರಿಶ್ಚಿಯನ್ ಸಂಪ್ರದಾಯದಂತೆ ಮದ್ವೆಯಾದ ಮೇಘನಾ ರಾಜ್, ಚಿರಂಜೀವಿ ಸರ್ಜಾ!

    ಬೆಂಗಳೂರು: ಸ್ಯಾಂಡಲ್‍ವುಡ್ ನ ಮೊತ್ತೊಂದು ತಾರಾ ಜೋಡಿ ಮೇಘನಾ ರಾಜ್ ಚಿರಂಜೀವಿ ಸರ್ಜಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಬೆಂಗಳೂರಿನ ಕೋರಮಂಗಲದ ಹೊಸೂರು ರಸ್ತೆಯ ಸೇಂಟ್ ಆ್ಯಂಥೋನೀಸ್ ಫೈರಿ ಚರ್ಚ್ ನಲ್ಲಿ ಇಂದು ಮಧ್ಯಾಹ್ನ ಮೇಘನಾ ಚಿರಂಜೀವಿ ಸರ್ಜಾ ಪರಸ್ಪರ ಉಂಗುರ ಬದಲಾಯಿಸಿಕೊಂಡು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದಾರೆ.

    ಕಪ್ಪು ಬಿಎಂಡಬ್ಲ್ಯೂ ಕಾರಿನಲ್ಲಿ ಮೇಘನಾ ಹಾಗೂ ಬಿಳಿ ಕಾರಿನಲ್ಲಿ ಚಿರಂಜೀವಿ ಸರ್ಜಾ ಚರ್ಚ್ ಗೆ ಆಗಮಿಸಿದ್ದರು. ಮೇಘನಾ ಪ್ಯೂರ್ ವೈಟ್ ಗೌನ್ ತೊಟ್ಟಿದ್ದು, ಚಿರಂಜೀವಿ ಸರ್ಜಾ ಅವರು ಬ್ಲ್ಯಾಕ್ ಸೂಟ್ ತೊಟ್ಟಿದ್ದರು.

    ಚರ್ಚ್ ಫಾದರ್ ಸಮ್ಮುಖದಲ್ಲಿ ಪ್ರೇಯರ್ ಮಾಡಿ ಎರಡು ಕುಟುಂಬಸ್ಥರು ಪ್ರೇಯರ್ ನಲ್ಲಿ ಭಾಗಿಯಾಗಿದ್ದರು. ನಂತರ ಇಬ್ಬರು ಪ್ರಮಾಣ ವಚನ ನೀಡಿ ಬೈಬಲ್ ಮುಟ್ಟಿ ವಧು ವರರು ಮದ್ವೆಗೆ ಸಂಪೂರ್ಣ ಒಪ್ಪಿಗೆ ನೀಡಿದ್ದರು. ಬಳಿಕ ಮೇಘನಾ ಚಿರುಗೆ ರಿಂಗ್ ತೊಡಿಸಿದ್ದಾರೆ. ಚಿರು ಮೇಘನಾಗೆ ಚೈನ್ ಹಾಕಿದ್ದಾರೆ. ಮೇಘನಾ ಗೌನ್ ಧರಿಸಿ ಮಿಂಚಿದ್ರೆ ಚಿರು ಸೂಟ್ ಧರಿಸಿ ಕಂಗೊಳಿಸಿದ್ದಾರೆ.

    ಎರಡೂ ಕುಟುಂಬಗಳಿಗೆ ಸಿನಿಮಾ ನಂಟಿರುವುದರಿಂದ ಅನೇಕ ತಾರೆಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಹತ್ತಿರದ ಸಂಬಂಧಿಕರನ್ನ ಮಾತ್ರ ಆಹ್ವಾನಿಸಲಾಗಿತ್ತು.

    ವಧು ವರರ ಜೊತೆ ಚಿತ್ರರಂಗದ ತಾರೆಯರಾದ ಹಿರಿಯ ನಟಿ ತಾರಾ, ಅರ್ಜುನ್ ಸರ್ಜಾ, ಧ್ರುವ ಸರ್ಜಾ, ಐಶ್ವರ್ಯ ಸರ್ಜಾ, ಪ್ರಜ್ವಲ್ ದೇವರಾಜ್ ಬಂದಿದ್ದರು. ಮೇಘನಾ ತಾಯಿ ಪ್ರಮೀಳಾ ಜೋಷಾಯ್ ಕ್ಯಾಥೋಲಿಕ್ ಪಂಗಡಕ್ಕೆ ಸೇರಿದವರಾದ್ದರಿಂದ ತಾಯಿ ಕಡೆಯ ಸಂಪ್ರದಾಯದಂತೆ ಇಂದು ಮದುವೆ ನಡೆದಿದೆ. ಮೇ 2 ರಂದು ಅರಮನೆ ಮೈದಾನದಲ್ಲಿ ಮತ್ತೊಮ್ಮೆ ಹಿಂದೂ ಸಂಪ್ರದಾಯದ ಇಬ್ಬರ ಪ್ರಕಾರ ವಿವಾಹ ನಡೆಯಲಿದೆ.

  • ಪ್ರಸಾದ ವಿನಿಯೋಗಕ್ಕೆ ಲೈಸೆನ್ಸ್, ದೇವರ ಪ್ರಸಾದ ಲ್ಯಾಬ್ ಪರೀಕ್ಷೆಗೆ ಒಳಪಡ್ಬೇಕು- ಆಹಾರ ಸುರಕ್ಷತೆ ಇಲಾಖೆ ನೋಟಿಸ್

    ಪ್ರಸಾದ ವಿನಿಯೋಗಕ್ಕೆ ಲೈಸೆನ್ಸ್, ದೇವರ ಪ್ರಸಾದ ಲ್ಯಾಬ್ ಪರೀಕ್ಷೆಗೆ ಒಳಪಡ್ಬೇಕು- ಆಹಾರ ಸುರಕ್ಷತೆ ಇಲಾಖೆ ನೋಟಿಸ್

    ಬೆಂಗಳೂರು: ಇನ್ಮುಂದೆ ಸಿಕ್ಕ ಸಿಕ್ಕಿದ್ದನ್ನೆಲ್ಲಾ ಪ್ರಸಾದ ಅಂತ ಹಂಚೋ ಹಾಗಿಲ್ಲ. ಯಾಕಂದ್ರೆ ಆಹಾರ ಸುರಕ್ಷತಾ ಇಲಾಖೆ ಹೊಸದೊಂದು ನಿಯಮ ಜಾರಿ ಮಾಡಿದೆ.

    ಮುಜುರಾಯಿ ಇಲಾಖೆ ದೇಗುಲ ಸೇರಿದಂತೆ ರಾಜ್ಯದ ಎಲ್ಲಾ ದೇಗುಲಗಳಿಗೆ, ಚರ್ಚ್ ಹಾಗೂ ಮಸೀದಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಪ್ರಸಾದ ವಿನಿಯೋಗಕ್ಕೆ ಲೈಸನ್ಸ್ ಪಡೆಯುವಂತೆ ಸೂಚಿಸಿದೆ.

    ಭಕ್ತರಿಗೆ ಪ್ರಸಾದ ರೂಪದಲ್ಲಿ ಯಾವುದೇ ಆಹಾರ ಪದಾರ್ಥ ನೀಡಿದ್ರೂ ಅದನ್ನು ಆಹಾರ ಸುರಕ್ಷತೆ ಇಲಾಖೆಯ ಲ್ಯಾಬ್‍ನಲ್ಲಿ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಿದೆ. ದೇಗುಲದಲ್ಲಿ ವಿತರಣೆ ಮಾಡುವ ಪ್ರಸಾದದಲ್ಲಿ ಗುಣಮಟ್ಟ ಕಾಪಾಡುವುದಿಲ್ಲ ಅಂತಾ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರೋದಾಗಿ ಅಧಿಕಾರಿಗಳು ಹೇಳಿದ್ದಾರೆ.

    ಮೂರು ಬಾರಿ ನೋಟಿಸ್ ನೀಡಿದ ನಂತರವೂ ಲೈಸೆನ್ಸ್ ಪಡೆಯದೇ, ಪ್ರಸಾದ ಪರೀಕ್ಷೆಗೆ ಒಳಪಡಿಸದೇ ವಿತರಣೆ ಮಾಡಿದ್ರೆ ದಂಡ ವಿಧಿಸಲು ಆಹಾರ ಇಲಾಖೆ ನಿರ್ಧರಿಸಿದೆ.

  • ವಿಶ್ವದಾದ್ಯಂತ ಕ್ರಿಸ್‍ಮಸ್ ಸಂಭ್ರಮ – ಕಣ್ಮನ ಸೆಳೀತಿದೆ ಶಿವಾಜಿನಗರದ ಸೆಂಟ್ ಬೆಸಿಲಿಕಾ ಚರ್ಚ್

    ವಿಶ್ವದಾದ್ಯಂತ ಕ್ರಿಸ್‍ಮಸ್ ಸಂಭ್ರಮ – ಕಣ್ಮನ ಸೆಳೀತಿದೆ ಶಿವಾಜಿನಗರದ ಸೆಂಟ್ ಬೆಸಿಲಿಕಾ ಚರ್ಚ್

    ಬೆಂಗಳೂರು: ದೇಶಾದ್ಯಂತ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಎಲ್ಲಾ ಚರ್ಚ್‍ಗಳಲ್ಲಿ ಕ್ರಿಶ್ಚಿಯನ್ನರು ಯೇಸುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಕೆಜಿಎಫ್ ಸೇರಿದಂತೆ ರಾಜ್ಯದ ಎಲ್ಲಾ ಚರ್ಚ್‍ಗಳು ವರ್ಣರಂಜಿತವಾಗಿದ್ದು, ಕಣ್ಮನ ಸೆಳೀತಿದೆ.

    ಬೆಂಗಳೂರಿನಲ್ಲಿ ಕ್ರಿಸ್‍ಮಸ್ ಆಚರಣೆ ಜೋರಾಗಿದೆ. ಕ್ಯಾಥೋಲಿಕರ ಅತ್ಯಂತ ಪ್ರಾಚೀನ ಚರ್ಚ್‍ಗಳಲ್ಲಿ ಒಂದಾದ ಶಿವಾಜಿನಗರದ ಸಂತ ಮರಿಯ ಬೆಸಲಿಕ್ ಚರ್ಚಿನಲ್ಲಿ ತಡರಾತ್ರಿಯಿಂದಲೇ ಕ್ರಿಸ್‍ಮಸ್ ಆಚರಣೆ ಜೋರಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನ ಚರ್ಚಿನ ಪ್ರಾರ್ಥನೆಯಲ್ಲಿ ಭಾಗವಹಿಸಿದ್ರು. ವಿದ್ಯುತ್ ದೀಪಾಲಂಕಾರದೊಂದಿಗೆ ಚರ್ಚ್ ಝಗಮಗಿಸುತ್ತಿತ್ತು. ಯುವ ಜನತೆ ಸಾಂತಾ ಕ್ಲಾಸ್ ಟೋಪಿಗಳನ್ನ ಧರಿಸಿ ಸೆಲ್ಫೀ ಮೂಡ್ ನಲ್ಲಿದ್ರು.

    ಬೆಸಿಲಿಕ ಚರ್ಚಿಗೆ ಕೇವಲ ಕ್ರೈಸ್ತರು ಮಾತ್ರವಲ್ಲದೇ ಎಲ್ಲಾ ಧರ್ಮಿಯರು ಆಗಮಿಸಿ ಕ್ರಿಸ್ ಮಸ್ ಆಚರಣೆ ಮಾಡಿದ್ರು. ಅತ್ತ ಬೇಥ್ಲೆಹೇಮ್, ಜೆರುಸಲೇಂ, ರೋಮ್, ವ್ಯಾಟಿಕನ್ ಸಿಟಿಗಳಲ್ಲಿ ಕ್ರಿಸ್‍ಮಸ್ ಸಂಭ್ರಮ ಉಕ್ಕಿ ಹರೀತಿದೆ. ಈ ಮಧ್ಯೆ ಒಡಿಶಾದ ಪುಚಿ ಸಮುದ್ರ ತೀರದಲ್ಲಿ ವಿಶ್ವದ ಅತಿದೊಡ್ಡ ಸಾಂತಾ ಕ್ಲಾಸ್ ಚಿತ್ರವನ್ನ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಬಿಡಿಸಿದ್ದಾರೆ.

    ಮಂಗಳೂರಿನ ಬಹುತೇಕ ಎಲ್ಲ ಚರ್ಚ್‍ಗಳಲ್ಲಿಯೂ ರಾತ್ರಿಯೇ ವಿಶೇಷ ಪ್ರಾರ್ಥನೆ ನಡೆದ್ವು. ಕುಲಶೇಖರ, ಆಗ್ನೆಸ್, ಮಿಲಾಗ್ರಿಸ್ ಸೇರಿದಂತೆ ಮಂಗಳೂರಿನ ಹೆಸರಾಂತ ಚರ್ಚ್ ಗಳಲ್ಲಿ ಭಾರೀ ಸಂಖ್ಯೆಯಲ್ಲಿ ಕ್ರೈಸ್ತರು ಸೇರಿದ್ದರು.

    ಉತ್ತರ ಕನ್ನಡ ಜಿಲ್ಲೆಯಲ್ಲೂ ಕ್ರಿಸ್‍ಮಸ್ ಸಂಭ್ರಮ ಮನೆ ಮಾಡಿದೆ. ಕಾರವಾರ ನಗರದ ಕ್ಯಾಥಡ್ರಲ್ ಚರ್ಚನಲ್ಲಿ ಕ್ರೈಸ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ರು.

    ಶಿವಮೊಗ್ಗದಲ್ಲಿ ಕ್ರೈಸ್ತರು ಕ್ರಿಸ್‍ಮಸ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದರು. ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಮಧ್ಯರಾತ್ರಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಿವಮೊಗ್ಗ ಪ್ರಾಂತ್ಯ ಧರ್ಮಾಧ್ಯಕ್ಷ ಪ್ರಾಸಿಸ್ ಮೊರಾಸ್ ವಿಶೇಷ ಪೂಜೆ ಸಲ್ಲಿಸಿ, ಎಲ್ಲರ ಒಳಿತಿಗಾಗಿ ಪ್ರಾರ್ಥಿಸಿದರು.

     

  • ಸ್ಟೇಜ್ ನಿಂದ ಜಿಗಿದು, ಮದುವೆಗೆ ಬಂದಿದ್ದ ಪ್ರಿಯಕರನೊಂದಿಗೆ ಓಡಿ ಹೋದ ವಧು!

    ಸ್ಟೇಜ್ ನಿಂದ ಜಿಗಿದು, ಮದುವೆಗೆ ಬಂದಿದ್ದ ಪ್ರಿಯಕರನೊಂದಿಗೆ ಓಡಿ ಹೋದ ವಧು!

    ಗುಂಟೂರು: ವರನ ಜೊತೆ ಮದುವೆಯಾಗುವುದ್ದಕ್ಕೆ ನಿರಾಕರಿಸಿ ಅತಿಥಿಗಳ ಮುಂದೆಯೇ ವಧು ತನ್ನ ಪ್ರಿಯತಮನ ಜೊತೆ ಓಡಿ ಹೋಗಿರುವ ಸಿನಿಮೀಯ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

    ಗುಂಟೂರಿನ ಚರ್ಚ್‍ವೊಂದರಲ್ಲಿ ಮದುವೆಯ ಕಾರ್ಯಕ್ರಮ ನಡೆಯುತ್ತಿತ್ತು. ಮುಂಜಾನೆಯಿಂದ ಮದುವೆಯ ಎಲ್ಲಾ ಶಾಸ್ತ್ರ- ಸಂಪ್ರದಾಯಗಳು ನಡೆದಿದ್ದವು. ಆದ್ರೆ ವಧು ಮಾತ್ರ ಪ್ರಿಯತಮನ ಜೊತೆ ಓಡಿ ಹೋಗಲು ಮಾನಸಿಕವಾಗಿ ತಯಾರಾಗಿದ್ದಳು.

    ಕಾರ್ಯಕ್ರಮ ಶುರುವಾದ ಮೇಲೆ ಕ್ರೈಸ್ತ ಪುರೋಹಿತರು ಬೈಬಲ್ ಓದಲು ಆರಂಭಿಸಿದ್ದರು. ನಂತರ ಆಕೆಯನ್ನು ಮೆದುವೆಯಾಗಲು ನೀವು ತಯಾರಿದ್ದೀರಾ? ಎಂದು ಕೇಳಿದಾಗ ವರ, ನಾನು ತಯಾರಿದ್ದೇನೆ ಎಂದು ಹೇಳಿದ್ದಾರೆ. ಆದ್ರೆ ವಧುವನ್ನು ನೀವು ಮದುವೆಯಾಗಲು ತಯಾರಿದ್ದೀರಾ? ಎಂದು ಕೇಳಿದ್ದಕ್ಕೆ ಆಕೆ ಮದುವೆ ನಿರಾಕರಿಸಿದ್ದಾಳೆ.

    ಇದಾದ ಬಳಿಕ ವಧು ಸ್ಟೇಜ್ ನಿಂದ ಜಿಗಿದು ನಾನು ನನ್ನ ಪ್ರಿಯತಮನ ಜೊತೆ ಓಡಿ ಹೋಗುತ್ತಿದ್ದೀನಿ ಎಂದು ಎಲ್ಲರ ಮುಂದೆ ಹೇಳಿದ್ದಾಳೆ.

  • ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾದ್ರಿ

    ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾದ್ರಿ

    ತಿರುವನಂತಪುರ: ಚರ್ಚ್ ಗೆ ಬೈಬಲ್ ಓದಲು ಬಂದಿದ್ದ ಅಪ್ರಾಪ್ತೆಯ ಮೇಲೆ ಪಾದ್ರಿ (ಫಾದರ್) ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೇರಳದ ಕಂದನಥಿಟ್ಟ ಪಟ್ಟಣದಲ್ಲಿರೋ ಸಿಎಸ್‍ಐ ಚರ್ಚ್ ನಲ್ಲಿ ನಡೆದಿದೆ.

    65 ವರ್ಷದ ಫಾದರ್ ದೇವರಾಜ್ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ವ್ಯಕ್ತಿ. 16 ವರ್ಷದ ಬಾಲಕಿ ಚರ್ಚ್ ಗೆ ಬೈಬಲ್ ಓದಲು ಆಗಮಿಸಿದ್ದಳು. ಈ ವೇಳೆ ಚರ್ಚ್ ನಲ್ಲಿದ್ದ ಫಾದರ್ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಬಾಲಕಿಯ ಮೇಲಾಗುವ ದೌರ್ಜನ್ಯವನ್ನು ಆಕೆಯ ತಂದೆ ನೋಡಿದ್ದು, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

    ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದ್ದು, ಆರೋಪಿ ಫಾದರ್ ದೇವರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಇಂದು ಸಂಜೆ ವೇಳೆಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಫಾದರ್ ದೇವರಾಜ್ ಕಳೆದ ಒಂದು ವರ್ಷದಿಂದ ಕಂದನಥಿಟ್ಟ ಚರ್ಚ್ ನಲ್ಲಿ ಧರ್ಮಗುರುವಾಗಿ ಕೆಲಸ ಮಾಡಿಕೊಂಡಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.