Tag: churidar

  • 299 ರೂ. ಚೂಡಿದಾರ್ ಕೊಳ್ಳಲು ಹೋಗಿ 1ಲಕ್ಷ ಕಳೆದುಕೊಂಡ ಮಹಿಳೆ

    299 ರೂ. ಚೂಡಿದಾರ್ ಕೊಳ್ಳಲು ಹೋಗಿ 1ಲಕ್ಷ ಕಳೆದುಕೊಂಡ ಮಹಿಳೆ

    ತಿರುವನಂತಪುರಂ: ಮಹಿಳೆಯೊಬ್ಬಳು ಆನ್‍ಲೈನ್‍ನಲ್ಲಿ ಕೇವಲ 299 ರೂಪಾಯಿ ಬೆಲೆಯ ಚೂಡಿದಾರ್ ಕೊಳ್ಳಲು ಹೋಗಿ ಒಂದು ಲಕ್ಷ ರೂಪಾಯಿ ಹಣವನ್ನು ಕಳೆದುಕೊಳ್ಳುವ ಮೂಲಕವಾಗಿ ಸುದ್ದಿಯಾಗಿದ್ದಾಳೆ.

    BRIBE

    ಮಹಿಳೆಯೊಬ್ಬಳು ಫೇಸ್‍ಬುಕ್  ನಲ್ಲಿ ಚೂಡಿದಾರ್ ಬಗ್ಗೆ ಜಾಹೀರಾತು ನೋಡಿದ್ದಾರೆ. ಡ್ರೆಸ್ ಇಷ್ಟವಾಗಿ ಆ ಲಿಂಕ್ ಓಪೆನ್ ಮಾಡಿದ್ದರು, ಬೆಲೆ ಕೇವಲ 299 ರೂಪಾಯಿ ಇದ್ದಿದ್ದರಿಂದ ಅದನ್ನು ಖರೀದಿ ಮಾಡಲು ಮುಂದಾಗಿದ್ದಳು. ಆರ್ಡರ್ ಮಾಡಿ ಗೂಗಲ್ ಪೇ ಮೂಲಕ ಪೇಮೆಂಟ್ ಕೂಡ ಮಾಡಿದ್ದಾರೆ.

    POLICE JEEP

    ತನಗಿಷ್ಟವಾದ ಬಣ್ಣದ ಚೂಡಿದಾರ್ ಬುಕ್ ಮಾಡಿ ಯಾವಾಗ ಆರ್ಡರ್ ಡೆಲಿವರಿ ಆಗುತ್ತದೆ ಎಂದು ಕಾದು ಕೂತಿದ್ದಳು. ಎರಡು ದಿನ ಕಳೆದ ಬಳಿಕವೂ ಆ ಡೆಲಿವರಿ ಬಗ್ಗೆ ಯಾವುದೇ ಮಾಹಿತಿ ಬಂದಿರಲಿಲ್ಲ. ಬಟ್ಟೆ ಬುಕ್ ಮಾಡಿದ್ದ ಖುಷಿಯಲ್ಲಿ  ಮಹಿಳೆ ತನ್ನ ಮೊಬೈಲ್‍ಗೆ ಬಂದ ಸಂದೇಶವನ್ನು ನೋಡಲು ಮರೆತಿದ್ದಾರೆ. ಮೂರು ದಿನದಲ್ಲಿ ಚೂಡಿದಾರ್ ಡೆಲಿವರಿ ಆಗುತ್ತೆ ಅಂತ ಅಲ್ಲಿ ತೋರಿಸಲಾಗಿತ್ತು. ಮೂರು ದಿನಗಳ ಬಳಿಕ ಜಾಹೀರಾತಿನಲ್ಲಿದ್ದ ನಂಬರ್‍ಗೆ ಮಹಿಳೆ ಮೆಸೇಜ್ ಮಾಡಿದ್ದಾರೆ. ಇದನ್ನೂ ಓದಿ  ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ

    ಯಾರು ಫೋನ್ ತಗಯದ ಕಾರಣ ಸುಮ್ಮನಾಗಿದ್ದಾರೆ. ಬಳಿಕ ಈಕೆಯ ಫೋನ್‍ಗೆ 5 ಮೆಸೇಜ್ ಬಂದಿದೆ. ಅದನ್ನು ಓಪನ್ ಮಾಡಿ ನೋಡಿದಾಗ ಒಟ್ಟು ಒಂದು ಲಕ್ಷ ಹಣ ಬ್ಯಾಂಕ್ ಅಕೌಂಟ್‍ನಿಂದ ಕಾಣೆಯಾಗಿತ್ತು. ಕೂಡಲೇ ಮತ್ತೆ ಜಾಹೀರಾತಿನಲ್ಲಿದ್ದ ನಂಬರ್‍ಗೆ ಕರೆ ಮಾಡಿದರೆ, ಸ್ವಿಚ್ಡ್ ಆಫ್ ಆಗಿರುವುದು ತಿಳಿದಿದೆ. ಅದೇ ನಂಬರ್‍ಗೆ ಈಕೆಯ ಬ್ಯಾಂಕ್ ಅಕೌಂಟ್‍ನಿಂದ ಒಂದು ಲಕ್ಷ ಹಣ ವರ್ಗಾವಣೆಯಾಗಿತ್ತು. ಮಹಿಳೆ ಕೂಡಲೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

  • ಚೂಡಿದಾರಕ್ಕಾಗಿ ಜಗಳವಾಡಿ ಪ್ರಾಣಬಿಟ್ಟ ಅಕ್ಕ- ತಂಗಿ!

    ಚೂಡಿದಾರಕ್ಕಾಗಿ ಜಗಳವಾಡಿ ಪ್ರಾಣಬಿಟ್ಟ ಅಕ್ಕ- ತಂಗಿ!

    ಮೈಸೂರು: ಬಟ್ಟೆಯ ವಿಚಾರಕ್ಕಾಗಿ ಜಗಳವಾಡಿ, ಮನಸ್ತಾಪದಿಂದ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕಾಳಬಸವಹುಂಡಿ ಗ್ರಾಮದಲ್ಲಿ ನಡೆದಿದೆ.

    ಕಾಳಬಸವಹುಂಡಿ ಗ್ರಾಮದ ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾದ ಅನು(16) ಹಾಗೂ ಕವಿತಾ (30) ಮೃತ ಸಹೋದರಿಯರು. ಚೂಡಿದಾರಕ್ಕಾಗಿ ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಅನು ಹಾಗೂ ಮೂಗಿಯಾಗಿದ್ದ ಅಕ್ಕ ಕವಿತಾ ಜಗಳವಾಡಿದ್ದರು. ಇದರಿಂದ ಮನನೊಂದ ಅನು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

    ಅನು ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಮೃತದೇಹದ ಮುಂದೆ ರೋಧಿಸುತ್ತಿದ್ದರು. ಈ ವೇಳೆ ಹಿತ್ತಲಿಗೆ ಹೋದ ಕವಿತಾ ಕೇಬಲ್ ವೈರ್ ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎರಡೂ ಮೃತ ದೇಹವನ್ನು ತಲಕಾಡು ಸಮುದಾಯ ಆಸ್ಪತ್ರೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಕುರಿತು ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv