Tag: cigarettes

  • ಪೊಲೀಸರ ಕಣ್ತಪ್ಪಿಸಲು ಸಿಗರೇಟ್‌ಗೆ ಸೀಕ್ರೆಟ್ ರೂಮ್‌ – ಬ್ರ‍್ಯಾಂಡೆಡ್ ಹೆಸರಿನ ನಕಲಿ ಸಿಗರೇಟ್ ಸೀಜ್..!

    ಪೊಲೀಸರ ಕಣ್ತಪ್ಪಿಸಲು ಸಿಗರೇಟ್‌ಗೆ ಸೀಕ್ರೆಟ್ ರೂಮ್‌ – ಬ್ರ‍್ಯಾಂಡೆಡ್ ಹೆಸರಿನ ನಕಲಿ ಸಿಗರೇಟ್ ಸೀಜ್..!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಗರೇಟಿಗೊಂದು ಸೀಕ್ರೇಟ್ ರೂಮ್ (Cigarettes Secret Room) ಮಾಡಿ, ನಕಲಿ ವಿದೇಶಿ ಬ್ರ‍್ಯಾಂಡೆಡ್ ಸಿಗರೇಟ್‌ಗಳನ್ನ ಮಾರಾಟ ಮಾಡ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ.

    ವಿದೇಶಿ ಸಿಗರೇಟ್‌ಗಳನ್ನ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಹಿಂಭಾಗದ ರಸ್ತೆಯ ಗೊಡೌನ್‌ನಲ್ಲಿದ್ದ ಬರೋಬ್ಬರಿ 20 ಲಕ್ಷ ರೂ. ಮೌಲ್ಯದ ವಿದೇಶಿ ಸಿಗರೇಟ್‌ಗಳನ್ನ ಸಿಸಿಬಿ ಆರ್ಥಿಕ ಅಪರಾಧ ದಳದ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಅಂಡ್ ಟೀಂ ಪತ್ತೆ ಮಾಡಿದೆ. ಬಳಿಕ ಗೊಡೌನ್ ಸೀಜ್ ಮಾಡಿದೆ. ಇದನ್ನೂ ಓದಿ: ಬಿಟ್ಟೋದ ಗಂಡನನ್ನ ಜೊತೆಯಾಗಿರುವಂತೆ ಮಾಡ್ತೀನಿ ಎಂದು 7 ಲಕ್ಷ ಪಡೆದು ಎಸ್ಕೇಪ್!

    ಲೈಟರ್ ಗೊಡೌನ್‌ನಲ್ಲಿ ಮಾಡಿಸಿದ್ದ ವುಡ್ ಶೆಲ್ಫ್ ನಲ್ಲೇ ಸೀಕ್ರೇಟ್ ರೂಮ್‌ಗೆ ದಾರಿ ಮಾಡಿಡಲಾಗಿತ್ತು. ಕಿಚನ್ ಕಬೋರ್ಡ್‌ನಂತೆ ಸಣ್ಣ ಕಿಂಡಿಯಷ್ಟು ಡೋರ್ ಇಡಲಾಗಿತ್ತು. ಒಂದು ವೇಳೆ ಪೊಲೀಸರು ಬಂದರೂ ಗೊತ್ತಾಗದ ರೀತಿ ಡೋರ್ ಮಾಡಿಸಿದ್ದ ಗೋಡೋನ್ ಮಾಲೀಕ ಲಲಿತ್, ವಿದೇಶಿ ಬ್ರಾಂಡೆಡ್‌ಗಳ ಹೆಸರಲ್ಲಿ ನಕಲಿ ಸಿಗರೇಟ್ ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಗೆ ಆರಂಭದಲ್ಲೇ ವಿಘ್ನ- ನೀರು ಹರಿಸಿದ್ದರಿಂದ ಪೈಪ್‍ನಿಂದ ಸೋರಿಕೆ

    ಈ ಸೀಕ್ರೆಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ನಕಲಿ ಸಿಗರೇಟ್‌ಗಳನ್ನ ಜಪ್ತಿ ಮಾಡಿದ್ದಾರೆ. ನಗರದ ಹಲವು ಕಡೆಗಳಿಗೆ ಇಲ್ಲಿಂದಲೇ ಸಿಗರೇಟ್ ಸರಬರಾಜು ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಕೆ.ಆರ್ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

  • ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿದ ಯುವತಿಯರು – ಕೇಸ್‌ ದಾಖಲು

    ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿದ ಯುವತಿಯರು – ಕೇಸ್‌ ದಾಖಲು

    ಕೋಲ್ಕತಾ: ʻರಾಷ್ಟ್ರಗೀತೆʼ (National Anthem) ಎಂದರೆ ದೇಶಭಕ್ತಿ. ದೂರದಲ್ಲಿ ನಿಂತಾಗ ʻಜನ ಗಣ ಮನʼ ಶಬ್ಧ ಸಣ್ಣ ದನಿಯಲ್ಲಿ ಕೇಳಿದರೂ ಸಾಕು ನಿಂತು ಗೌರವ ಸೂಚಿಸುತ್ತೇವೆ. ಇದು ದೇಶದ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವೂ ಹೌದು. ರಾಷ್ಟ್ರಗೀತೆಗೆ ಯಾರೇ ಅಪಮಾನ ಮಾಡಿದರೂ ಅದು ಶಿಕ್ಷಾರ್ಹ ಅಪರಾಧ.

    ಆದರೀಗ ಇಲ್ಲಿ ಇಬ್ಬರು ಯುವತಿಯರು ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿ, ಹುಚ್ಚಾಟ ನಡೆಸಿದ್ದಾರೆ. ಅಲ್ಲದೇ ಈ ಸನ್ನಿವೇಶವನ್ನ ವೀಡಿಯೋ ಮಾಡಿ ಜಾಲತಾಣದಲ್ಲೂ (Social Media) ಹಂಚಿಕೊಂಡಿದ್ದಾರೆ. ಈ ವೀಡಿಯೋ ಆಧರಿಸಿ ವಕೀಲ ಅತ್ರಯೀ ಹಾಲ್ದರ್ ಅವರು ಲಾಲ್‌ಬಜಾರ್ ಸೈಬರ್ ಘಟಕ ಹಾಗೂ ಬಾರಕ್‌ಪುರದಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಠಾಣೆಗೆ ನುಗ್ಗಿದ 60 ಮಂದಿ ಗುಂಪು – ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಡಕಾಯಿತನ ರಿಲೀಸ್

    ಈ ಪೋಸ್ಟ್ ಮಾಡಲಾಗಿದ್ದ ಫೇಸ್‌ಬುಕ್ ಖಾತೆಯನ್ನು ಡಿಲೀಟ್ ಮಾಡಿರುವುದರಿಂದ ಈಗ ವಿಡಿಯೋ ಅದರಲ್ಲಿ ಲಭ್ಯವಿಲ್ಲ. ಆದರೆ ಕೆಲವರು ವೀಡಿಯೋವನ್ನ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಸಿಗರೇಟ್ ಸೇದುತ್ತಾ ಕುಳಿತಿರುವ ಯುವತಿಯರು ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆಯ ಸಾಲುಗಳನ್ನ ವ್ಯಂಗ್ಯವಾಗಿ ಹಾಡಿ, ಅಪಮಾನ ಮಾಡಿದ್ದಾರೆ ಎನ್ನಲಾಗಿದೆ.

    ಕೈಯಲ್ಲಿ ಸಿಗರೇಟ್ ಹಿಡಿದು ವಿಚಿತ್ರವಾಗಿ ನಗುವ ಯುವತಿಯೊಬ್ಬಳು ರಾಷ್ಟ್ರಗೀತೆಯನ್ನು ಮನಬಂದಂತೆ ಹಾಡಿದ್ದಾಳೆ. ಪಕ್ಕದಲ್ಲಿ ಕುಳಿತಿದ್ದ ಯುವತಿ ಸಹ ಆಕೆಯಂತೆಯೇ ವರ್ತಿಸಿದ್ದು, ಆ ಸಿಗರೇಟ್ ಅನ್ನು ಕಿತ್ತುಕೊಂಡು, ಇದು ಧ್ವಜ, ಧ್ವಜ ಎಂದು ಇಂಗ್ಲಿಷ್‌ನಲ್ಲಿ ಹೇಳಿದ್ದಾಳೆ. ಕೊನೆಯಲ್ಲಿ ರಾಷ್ಟ್ರಗೀತೆ ಹಾಡಿದ ಮೊದಲ ಯುವತಿ ಕ್ಷಮೆ ಕೇಳುತ್ತೇನೆ ಹಾಸ್ಯವಾಗಿ ಹೇಳಿದ್ದಾಳೆ. ಇದನ್ನೂ ಓದಿ: 2 ತಿಂಗಳಿಂದ ನನ್ನ ಮಕ್ಕಳು ಕಾಣ್ತಿಲ್ಲ: ಸಿಎಂ, ಗೃಹ ಸಚಿವರಿಗೆ ಪತ್ರ ಬರೆದ ಅವಳಿ ಸಹೋದರಿಯರ ತಂದೆ

    ಯುವತಿಯರ ಹುಚ್ಚಾಟಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವತಿಯರು ವೀಡಿಯೋ ಹಂಚಿಕೊಂಡಿರುವ ಖಾತೆ ಬಗ್ಗೆ ಹೆಚ್ಚುವರಿ ಮಾಹಿತಿ ನೀಡುವಂತೆ ಲಾಲ್‌ಬಜಾರ್ ಪೊಲೀಸರು ಫೇಸ್‌ಬುಕ್‌ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಫೇಸ್‌ಬುಕ್ ಖಾತೆ ಡಿಲೀಟ್ ಮಾಡಿದ ನಂತರ ಇಬ್ಬರು ಹೆಣ್ಣುಮಕ್ಕಳು ಮತ್ತೊಂದು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಲೈವ್ ಬಂದಿದ್ದು, ತಮ್ಮ ಗೆಳೆಯರ ಬಳಗದಲ್ಲಿ ಪಂದ್ಯಕಟ್ಟಿ ತಮಾಷೆಗಾಗಿ ಈ ರೀತಿ ವಿಡಿಯೋ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.

    ಈ ಸಂಬಂಧ ಕೇಸ್‌ ದಾಖಲಿಸಿಕೊಂಡಿರುವ ಪಶ್ಚಿಮ ಬಂಗಾಳ ಪೊಲೀಸರು (Westbengal Police) ತನಿಖೆ ನಡೆಸುತ್ತಿದ್ದಾರೆ.

  • ದುಶ್ಚಟಗಳಿಗೆ ದಾಸನಾಗಿದ್ದ ನನ್ನನ್ನು ಸರಿದಾರಿಗೆ ತಂದಿದ್ದು ನನ್ನ ಪತ್ನಿ: ರಜನಿಕಾಂತ್

    ದುಶ್ಚಟಗಳಿಗೆ ದಾಸನಾಗಿದ್ದ ನನ್ನನ್ನು ಸರಿದಾರಿಗೆ ತಂದಿದ್ದು ನನ್ನ ಪತ್ನಿ: ರಜನಿಕಾಂತ್

    ಕೋಟ್ಯಂತರ ಅಭಿಮಾನಿಗಳ ಆರಾಧ್ಯದೈವ ರಜನಿಕಾಂತ್ (Rajinikanth) ತಮ್ಮ ಖಾಸಗಿ ಜೀವನದ ಹಲವು ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ತಾವು ಅತಿಯಾಗಿ ಮದ್ಯ (alcohol), ಮಾಂಸ ಮತ್ತು ಸಿಗರೇಟ್ (cigarettes) ಸೇದುತ್ತಿರುವ ಕುರಿತು ಅವರು ಮಾತನಾಡಿದ್ದು, ಒಂದು ರೀತಿಯಲ್ಲಿ ಅವರು ದುಶ್ಚಟಗಳಿಗೆ ದಾಸರೇ ಆಗಿದ್ದರಂತೆ. ಅಲ್ಲಿಂದ ಆಚೆ ತಂದದ್ದು ತಮ್ಮ ಪತ್ನಿ ಎಂದು ಅವರು ಹೇಳಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಜನಿ, ತಮ್ಮ ಬದುಕಿನಲ್ಲಿ ಪತ್ನಿಯು ಹೇಗೆ ದಾರಿ ದೀವಿಗೆ ಆದಳು ಎನ್ನುವುದನ್ನು ಹಂಚಿಕೊಂಡಿದ್ದಾರೆ.

    ‘ನಾನು ವಿಪರೀತ ಮಾಂಸ ತಿನ್ನುತ್ತಿದೆ. ದಿನಕ್ಕೆ ಎರಡು ಹೊತ್ತಾದರೂ ಮಾಂಸ ಬೇಕಿತ್ತು. ಮದ್ಯ ಸೇವಿಸುತ್ತಿದ್ದೆ. ಸಿಗರೇಟು ಸೇದುತ್ತಿದ್ದೆ. ಯಾವುದೂ ನನ್ನ ಕಂಟ್ರೋಲ್ ನಲ್ಲಿ ಇರಲಿಲ್ಲ. ಮದುವೆ ನಂತರದ ದಿನಗಳಲ್ಲಿ ಅವುಗಳನ್ನು ಕಡಿಮೆ ಮಾಡಿಸಿದ್ದು ಮತ್ತು ಸಂಪೂರ್ಣ ಬಿಡುವಂತೆ ಮಾಡಿದ್ದು ನನ್ನ ಪತ್ನಿ. ಅವರಿಂದಾಗಿಯೇ ನಾನು ಆ ಚಟಗಳಿಂದ ದೂರವಾದೆ. ಸದ್ಯ ನಾನು ಆರೋಗ್ಯವಾಗಿದ್ದೀನಿ ಎಂದರೆ ಅದಕ್ಕೆ ಕಾರಣ ಅವರೆ’ ಎಂದು ಮೆಚ್ಚಿ ಮಾತನಾಡಿದ್ದಾರೆ ರಜನಿ. ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ರಶ್ಮಿಕಾ ಮಂದಣ್ಣ ಪಾರ್ಟಿ

    ಪತ್ನಿ ಲತಾ ರಂಗಚಾರ್ಯ (Lata Rajinikanth) ಅವರನ್ನು ತಮಗೆ ಪರಿಚಯಿಸಿದ ವೈ.ಜಿ ಮಹೇಂದ್ರನ್ ಅವರಿಗೆ ಕೃತಜ್ಞತೆ ಸಲ್ಲಿಸಿದ ರಜನಿ, ‘ಇಂತಹ ಹುಡುಗಿಯನ್ನು ಅವರು ಪರಿಚಯಿಸದೇ ಇದ್ದರೆ ನನ್ನ ಬದುಕು ಯಾವ ರೀತಿಯಲ್ಲಿ ಇರುತ್ತಿತ್ತೋ ಗೊತ್ತಿಲ್ಲ. ಇವತ್ತು ನಾನು ನೆಮ್ಮದಿಯಾಗಿ ಇದ್ದೇನೆ ಎನ್ನುವುದಕ್ಕೆ ಲತಾ ಕಾರಣ. ನನ್ನ ಬದುಕನ್ನು ಬಲು ಶಿಸ್ತಿನಿಂದ ರೂಪಿಸಿದಳು. ಈ ಕಾರಣಕ್ಕಾಗಿ ನಾನು ಅವರನ್ನು ಯಾವತ್ತೂ ನೆನಪಿಸಿಕೊಳ್ಳುವೆ’ ಎಂದು ಭಾವನಾತ್ಮಕವಾಗಿ ಸಮಾರಂಭದಲ್ಲಿ ಮಾತನಾಡಿದ್ದಾರೆ ರಜನಿಕಾಂತ್.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಗರೇಟ್‌ ಸೇದುತ್ತಲೇ 42 ಕಿ.ಮೀ. ಮ್ಯಾರಥಾನ್‌ ಓಡಿದ 50ರ ವ್ಯಕ್ತಿ

    ಸಿಗರೇಟ್‌ ಸೇದುತ್ತಲೇ 42 ಕಿ.ಮೀ. ಮ್ಯಾರಥಾನ್‌ ಓಡಿದ 50ರ ವ್ಯಕ್ತಿ

    ಬೀಜಿಂಗ್: ಚೀನಾದ (China) 50 ವಯಸ್ಸಿನ ವ್ಯಕ್ತಿಯೊಬ್ಬರು ಸಿಗರೇಟ್‌ (Cigarette) ಸೇದುತ್ತಾ 42 ಕಿ.ಮೀ. ಮ್ಯಾರಥಾನ್‌ (Marathon) ಓಡಿರುವ ಅಚ್ಚರಿದಾಯಕ ಘಟನೆ ನಡೆದಿದೆ.

    ಮ್ಯಾರಥಾನ್ ಓಟದ ಪ್ರಮುಖ ಉದ್ದೇಶವೆಂದರೆ ಫಿಟ್‌ನೆಸ್ ಉತ್ತೇಜಿಸುವುದು ಮತ್ತು ಆರೋಗ್ಯ ಸುಧಾರಿಸುವುದು. ಮ್ಯಾರಥಾನ್ ಓಡುವುದು ಸುಲಭವಲ್ಲ. ಅದಕ್ಕೆ ತರಬೇತಿ ಮತ್ತು ಆರೋಗ್ಯಕರ ಜೀವನಶೈಲಿ ಮುಖ್ಯ. ಆದರೆ ಅಂಕಲ್‌ ಚೆನ್‌ ಎಂದೇ ಹೆಸರಾಗಿರುವ ಚೀನಾದ ವ್ಯಕ್ತಿ ಸಿಗರೇಟ್‌ ಸೇದುತ್ತಲೇ 42 ಕಿ.ಮೀ. ಮ್ಯಾರಥಾನ್‌ ಓಡಿದ್ದಾರೆ. ಇದನ್ನೂ ಓದಿ: ಆರ್ಥಿಕವಾಗಿ ಕಂಗೆಟ್ಟಿರುವ ವಿಶ್ವಕ್ಕೆ ಜಿ20 ಶೃಂಗಸಭೆಯಲ್ಲಿ ಸಿಗುತ್ತಾ ಬೂಸ್ಟರ್‌ ಡೋಸ್‌?

    ಸಿಗರೇಟ್ ಸೇದುವುದು ದೈಹಿಕ ಕಾರ್ಯಕ್ಷಮತೆಗೆ ಅಡ್ಡಿಯಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಧೂಮಪಾನ ಮಾಡುತ್ತಿದ್ದರೆ ಹೃದಯ, ಶ್ವಾಸಕೋಶಗಳು ಮತ್ತು ಸ್ನಾಯುಗಳಿಗೆ ಕಡಿಮೆ ಆಮ್ಲಜನಕ ಸಿಗುತ್ತದೆ. ಇದರಿಂದ ಓಡಲು ತುಂಬಾ ಕಷ್ಟವಾಗುತ್ತದೆ. ಅದರ ಹೊರತಾಗಿಯೂ 50 ವರ್ಷ ವಯಸ್ಸಿನ ಚೆನ್ ಚೀನಾದ ಜಿಯಾಂಡೆಯಲ್ಲಿ ಮ್ಯಾರಥಾನ್ ಓಡಿದ್ದಾರೆ. ಅವರು 3 ಗಂಟೆ 28 ನಿಮಿಷಗಳಲ್ಲಿ ಮ್ಯಾರಥಾನ್ ಅನ್ನು ಪೂರ್ಣಗೊಳಿಸಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಮಾರು 1,500 ಓಟಗಾರರಲ್ಲಿ ಈ ವ್ಯಕ್ತಿ 574 ನೇ ಸ್ಥಾನ ಪಡೆದಿದ್ದಾರೆ. ಮ್ಯಾರಥಾನ್‌ ಪೂರ್ಣಗೊಳಿಸುವಷ್ಟರಲ್ಲಿ ಒಂದು ಪ್ಯಾಕ್‌ ಸಿಗರೇಟ್‌ ಸೇದಿದ್ದಾರೆ.

    ಅಂಕಲ್ ಚೆನ್ ಇಂತಹ ವಿಚಿತ್ರ ಸಾಹಸವನ್ನು ಮಾಡುತ್ತಿರುವುದು ಇದೇ ಮೊದಲಲ್ಲ. ರನ್ನಿಂಗ್ ಮ್ಯಾಗಜೀನ್ ಪ್ರಕಾರ, ಅವರು ಸಿಗರೇಟ್‌ ಸೇದಿಯೇ 2018ರ ಗುವಾಂಗ್‌ಝೌ ಮ್ಯಾರಥಾನ್ ಮತ್ತು 2019 ರ ಕ್ಸಿಯಾಮೆನ್ ಮ್ಯಾರಥಾನ್ ಓಡಿದ್ದಾರೆ. ಇದನ್ನೂ ಓದಿ: ವಿಶ್ವದಲ್ಲಿಯೇ ಅತೀ ಉದ್ದದ ಮೂಗಿನ ವ್ಯಕ್ತಿ – ಫೋಟೋ ವೈರಲ್

    ಅಂಕಲ್ ಚೆನ್ ಅವರ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಅನೇಕರು ಇದನ್ನು ಹಾಸ್ಯ ಮಾಡಿದ್ದಾರೆ. ʼಇಂತಹ ಕೃತ್ಯಗಳು ಕೆಟ್ಟ ನಿದರ್ಶನʼ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಗರೇಟ್ ಹೊಗೆ ವಿಚಾರಕ್ಕೆ ಮಾರಾಮಾರಿ – ಸಂಧಾನ ಮಾಡೋದಾಗಿ ಹೇಳಿ ಬಿಜೆಪಿ ಮುಖಂಡನಿಂದ ಥಳಿತ?

    ಸಿಗರೇಟ್ ಹೊಗೆ ವಿಚಾರಕ್ಕೆ ಮಾರಾಮಾರಿ – ಸಂಧಾನ ಮಾಡೋದಾಗಿ ಹೇಳಿ ಬಿಜೆಪಿ ಮುಖಂಡನಿಂದ ಥಳಿತ?

    – ಪೈಪ್, ಕೋಲು ಬಳಸಿ ಹಲ್ಲೆ

    ವಿಜಯಪುರ: ಸಿಗರೇಟ್ ಹೊಗೆ ವಿಚಾರದಲ್ಲಿ ನಾಲ್ವರ ಮಧ್ಯೆ ಗಲಾಟೆ ನಡೆದ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪಗಿ ಪಟ್ಟಣದ ಹೊರ ಭಾಗದ ದಾಬಾದಲ್ಲಿ ನಡೆದಿದೆ. ಫೆಬ್ರುವರಿ 22ರ ರಾತ್ರಿ ಗಲಾಟೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಸತೀಶ್ ಬೂದಿಹಾಳ ಮತ್ತು ಈಶ್ವರ್ ಸವದಿ ಸಿಗರೇಟ್ ಸೇದಿ ದಿಲೀಪ್ ಚವ್ಹಾಣ್, ಮಹಾಂತೇಶ್ ಚವ್ಹಾಣ್ ಮುಂದೆ ಹೊಗೆ ಬಿಟ್ಟಿದ್ದಾರೆ. ಇದೇ ವಿಚಾರಕ್ಕೆ ನಾಲ್ವರ ಮಧ್ಯೆ ದಾಬಾದಲ್ಲಿ ಗಲಾಟೆ ನಡೆದಿದೆ. ಈ ಸಂಬಂಧ ದೇವರ ಹಿಪ್ಪರಗಿ ಠಾಣೆಗೆ ದೂರು ಸಲ್ಲಿಸಲು ದಿಲೀಪ್, ಮಹಾಂತೇಶ್ ಮುಂದಾಗಿದ್ದರು. ಈ ವೇಳೆ ಠಾಣೆಗೆ ಬಂದ ಬಿಜೆಪಿ ಮುಖಂಡ ರಮೇಶ್ ಮಸಬಿನಾಳ ಸಂಧಾನ ಮಾಡಿಸೋದಾಗಿ ಹೊರ ಕರೆತಂದ ಹಲ್ಲೆ ನಡೆಸಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.

    ಹಲ್ಲೆಗೊಳಗಾದ ದಿಲೀಪ್ ಮತ್ತು ಮಹಾಂತೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾರೆ. ಅಲ್ಲಿಗೆ ಬಂದ ಆರು ಜನರ ಗುಂಪು ಪೈಪ್, ಕೋಲು, ಕ್ಯಾನ್ ಬಳಸಿ ಇಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಎಲ್ಲ ದೃಶ್ಯಗಳು ಆಸ್ಪತ್ರೆಗೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಇಬ್ಬರು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

    ಫೆಬ್ರವರಿ 22ರಂದು ದೂರು ನೀಡಿದ್ರೂ ಪೊಲೀಸರು ಆರೋಪಿಗಳನ್ನ ಬಂಧಿಸಿಲ್ಲ. ರಮೇಶ್ ಮಸಬಿನಾಳ ಒತ್ತಡದಿಂದಾಗಿ ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗುತ್ತಿಲ್ಲ ಎಂದು ಹಲ್ಲೆಗೊಳಗಾದ ಮಹಾಂತೇಶ್, ದಿಲೀಪ್ ಪೋಷಕರು ಆರೋಪಿಸುತ್ತಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಇಲ್ಲದಿದ್ದg ಪೊಲೀಸ್ ಠಾಣೆ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

  • 1.03 ಕೋಟಿ ಮೌಲ್ಯದ ವಿದೇಶಿ ಸಿಗರೇಟ್ ವಶ- ಐವರು ಅರೆಸ್ಟ್

    1.03 ಕೋಟಿ ಮೌಲ್ಯದ ವಿದೇಶಿ ಸಿಗರೇಟ್ ವಶ- ಐವರು ಅರೆಸ್ಟ್

    – ಆಟೋದಲ್ಲಿ ಸಾಗಿಸ್ತಿದ್ದಾಗ ಸಿಕ್ಕಿಬಿದ್ರು

    ಹೈದರಾಬಾದ್: ಅಕ್ರಮವಾಗಿ ಸಂಗ್ರಹಿಸಿ ಸಾಗಿಸಲಾಗುತ್ತಿದ್ದ ವಿದೇಶಿ ಸಿಗರೇಟನ್ನು ಟಾಸ್ಕ್ ಫೋರ್ಸ್ ಪೊಲೀಸರು ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಆರೋಪಿಗಳ ಬಳಿಯಿಂದ ಸುಮಾರು 1.03 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಸಿದ್ದಿಯಂಬಾರ್ ಬಜಾರ್‌ನ ಸಮೀಪದಲ್ಲಿ ಆಟೋವೊಂದನ್ನು ಪೊಲೀಸರು ತಡೆದು ತಪಾಸಣೆ ಮಾಡಿದ್ದಾರೆ. ಆಗ ಆಟೋದಲ್ಲಿ ವಿವಿಧ ಬ್ರಾಂಡ್‍ಗಳ ಅಕ್ರಮವಾಗಿ ಆಮದು ಮಾಡಿಕೊಂಡ ವಿದೇಶಿ ಸಿಗರೇಟ್‍ಗಳ 503 ಪೆಟ್ಟಿಗೆ ಪತ್ತೆಯಾಗಿವೆ. ತಕ್ಷಣ ಆಟೋ ಚಾಲಕನನ್ನು ಬಂಧಿಸಿ ಸಿಗರೇಟ್‍ ಬಾಕ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

    ಆಟೋ ಚಾಲಕನಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಗೋಶಮಹಲ್‍ನ ಸರ್ನಾ ಟ್ರಾನ್ಸ್ ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‍ಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಪುಲ್ ರಾಂಕಾ (42), ಜಗದೀಶ್ ಕುಮಾರ್ (19), ದೂಂಗಾರ್ಚಂದ್ ಶ್ರೀ ಶ್ರೀಮಲ್ (65), ಪವನ್ ಕುಮಾರ್ ಪೆರ್ತಾನಿ (42) ಮತ್ತು ಸರ್ನಾ ಟ್ರಾನ್ಸ್ ಪೋರ್ಟ್ ನ ಡೆಲಿವರಿ ಏಜೆಂಟ್ ಎಂ.ಎ.ಹನೀಫ್ ಎಂದು ಗುರುತಿಸಲಾಗಿದೆ.

    “ಆರೋಪಿಗಳು ದೆಹಲಿಯಿಂದ ಅಕ್ರಮವಾಗಿ ವಿದೇಶಿ ಸಿಗರೇಟುಗಳನ್ನು ಆಮದು ಮಾಡಿಕೊಳ್ಳುತ್ತಿದ್ದರು. ಬಳಿಕ ಅದನ್ನು ಸ್ಥಳೀಯ ಪಾನ್ ಅಂಗಡಿಗಳು ಮತ್ತು ಕಿರಾನಾ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರು. ಈ ಮೂಲಕ ಅವರು ಸರ್ಕಾರಕ್ಕೆ ತೆರಿಗೆ ಕಟ್ಟುವುದನ್ನು ತಪ್ಪಿಸಿಕೊಂಡಿದ್ದಾರೆ. ಇದರಿಂದ ಸರ್ಕಾರಕ್ಕೆ ತುಂಬಾ ನಷ್ಟವನ್ನುಂಟುಮಾಡುತ್ತಿದ್ದಾರೆ” ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಅಂಜನಿ ಕುಮಾರ್ ಹೇಳಿದ್ದಾರೆ.

    ಪರಾರಿಯಾಗಿದ್ದ ಸರ್ನಾ ಸಾರಿಗೆ ಮಾಲೀಕ ರವೀಂದರ್ ಸಿಂಗ್ ಸರ್ನಾನಿಂದ ವಿದೇಶಿ ಸಿಗರೇಟನ್ನು ಸಂಗ್ರಹಿಸುತ್ತಿರುವುದಾಗಿ ಆರೋಪಿ ವಿಪುಲ್ ಪೊಲೀಸರಿಗೆ ಹೇಳಿದ್ದಾನೆ. ಸದ್ಯಕ್ಕೆ ಬೇಗಂ ಬಜಾರ್ ಪೊಲೀಸರು ಐವರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

  • ಕುಡುಕರ ಎಡವಟ್ಟಿನಿಂದ ಮೂರ್ನಾಲ್ಕು ಬಣವೆಗಳಿಗೆ ಬೆಂಕಿ

    ಕುಡುಕರ ಎಡವಟ್ಟಿನಿಂದ ಮೂರ್ನಾಲ್ಕು ಬಣವೆಗಳಿಗೆ ಬೆಂಕಿ

    – ಎಮ್ಮೆಗಳಿಗೂ ಹೊತ್ತಿದ ಜ್ವಾಲಾಮುಖಿ

    ಬಳ್ಳಾರಿ: ಲಾಕ್‍ಡೌನ್ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದೆ ತಡ ಮದ್ಯಪ್ರಿಯರು ಮದ್ಯದಂಗಡಿ ಮುಂದೆ ಕ್ಯೂ ನಿಂತು ಖರೀದಿಸುತ್ತಿದ್ದಾರೆ. ಅಲ್ಲದೆ ಸಿಕ್ಕಿಸಿಕ್ಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದಾರೆ. ಇದೀಗ ಕುಡುಕರು ಮಾಡಿದ ಎಡವಟ್ಟಿನಿಂದಾಗಿ ಮೂರು ಬಣವೆಗಳು ಹೊತ್ತಿ ಉರಿದಿರುವ ಘಟನೆ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯಲ್ಲಿ ನಡೆದಿದೆ.

    ಕಪ್ಪಗಲ್ಲು ರಸ್ತೆಯ ಡ್ರೀಮ್ ವರ್ಲ್ಡ್ ಶಾಲೆಯ ಹಿಂಭಾಗದ ಹೊಲದಲ್ಲಿರುವ ಮೂರು ಬಣವೆಗಳಿಗೆ ಬೆಂಕಿ ಬಿದ್ದಿದೆ. ಅಲ್ಲದೇ ಪಕ್ಕದಲ್ಲಿದ್ದ ಎಮ್ಮೆಗಳ ಮೈಗೂ ಬೆಂಕಿ ಹೊತ್ತಿಕೊಂಡಿದೆ. ಸುರೇಶ್ ಎಂಬವರ ಮೂರು ಬಣವೆಗಳಿಗೆ ಬೆಂಕಿಬಿದ್ದಿದೆ. ಜೊತೆಗೆ ದನದ ಕೊಟ್ಟಿಗೆಯಲ್ಲಿದ್ದ 12 ಎಮ್ಮೆಗಳ ಪೈಕಿ ಎರಡು ಎಮ್ಮೆಗಳ ಮೈಗೆ ಬೆಂಕಿ ಹೊತ್ತಿಕೊಂಡಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

    ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಲು ಹರಸಾಹಸಪಟ್ಟರು. ಮದ್ಯ ಅಮಲಿನಲ್ಲಿದ್ದವರು ಸಿಗರೇಟ್ ತುಂಡು ಬೀಸಾಡಿದ್ದರಿಂದ ಈ ಬೆಂಕಿ ತಗುಲಿದೆ. ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜನರು ಹೊಲ, ಗದ್ದೆ ಎಲ್ಲೆಂದರಲ್ಲಿ ಕುಳಿತು ಎಣ್ಣೆ ಹೊಡೆಯುವುದು ಹೆಚ್ಚಾಗಿದೆ. ಹೀಗಾಗಿ ವಿಪರೀತ ಮದ್ಯ ಸೇವನೆ ಮಾಡಿ ಸಿಗರೇಟ್‍ನಿಂದ ಬಣವೆಗಳಿಗೆ ಬೆಂಕಿ ಹೊತ್ತಿದೆ ಎನ್ನಲಾಗಿದೆ.

  • ಲಾಕ್‍ಡೌನ್ ಎಫೆಕ್ಟ್- ಸಿಗರೇಟ್ ಕೊಡದಿದ್ದಕ್ಕೆ ಬರ್ಬರವಾಗಿ ಕೊಲೆಗೈದ್ರು

    ಲಾಕ್‍ಡೌನ್ ಎಫೆಕ್ಟ್- ಸಿಗರೇಟ್ ಕೊಡದಿದ್ದಕ್ಕೆ ಬರ್ಬರವಾಗಿ ಕೊಲೆಗೈದ್ರು

    – ಹೊಟ್ಟೆ, ಎದೆಗೆ ಸ್ಕ್ರೂಡ್ರೈವರ್‌ನಿಂದ ಇರಿದ ಪಾಪಿಗಳು
    – ಸಿಗರೇಟ್ ಕೊರತೆಯೇ ಕೊಲೆಗೆ ಕಾರಣವಾಯಿತಾ?

    ಮುಂಬೈ: ಸಿಗರೇಟ್ ನೀಡಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯನ್ನು ಇಬ್ಬರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‍ನಲ್ಲಿ ನಡೆದಿದೆ.

    ಉತ್ತರ ಪ್ರದೇಶ ಮೂಲದ ಅರವಿಂದ್ ಶಂಕರ್ ಕುಮಾರ್ (38) ಕೊಲೆಯಾದ ವ್ಯಕ್ತಿ. ಕಲ್ಯಾಣ್‍ನ ಎಪಿಎಂಸಿ ಮಾರುಕಟ್ಟೆ ಬಳಿ ಬುಧವಾರ ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧಕಾರ್ಯ ಅಪ್ರಾರಂಭಿಸಿದ್ದಾರೆ.

    ಆಗಿದ್ದೇನು?:
    ಮೃತ ತರಕಾರಿ ವ್ಯಾಪಾರಿ ಅರವಿಂದ್ ತನ್ನ ಸೋದರಸಂಬಂಧಿ ಆನಂದ್ ಗುಪ್ತಾ ಜೊತೆಗೆ ಕಲ್ಯಾಣ್‍ನ ಗೋವಿಂದ್ ವಾಡಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಅರವಿಂದ್ ಎಂದಿನಂತೆ ಬುಧವಾರ ತರಕಾರಿ ಮಾರಾಟಕ್ಕೆ ಹೋಗಿದ್ದರು. ಬಳಿಕ ಎಪಿಎಂಸಿ ಮಾರುಕಟ್ಟೆಯಲ್ಲಿನ ಶೌಚಾಲಯದ ಬಳಿ ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಅಲ್ಲಿಗೆ ಬಂದು ಸಿಗರೇಟ್ ಕೊಡುವಂತೆ ವಿನಂತಿಸಿಕೊಂಡಿದ್ದರು. ಆದರೆ ಅರವಿಂದ್ ಸಿಗರೇಟ್ ಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ಕೋಪಗೊಂಡ ದುಷ್ಕರ್ಮಿಗಳು ಜಗಳ ಆರಂಭಿಸಿದ್ದರು. ಅಷ್ಟಕ್ಕೆ ಬಿಡದೇ ಸ್ಕ್ರೂಡ್ರೈವರ್‌ನಿಂದ ಅರವಿಂದ್ ಹೊಟ್ಟೆ ಮತ್ತು ಎದೆಗೆ ಅನೇಕ ಬಾರಿ ಇರಿದು ಪರಾರಿಯಾಗಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಆನಂದ್ ಗುಪ್ತಾ, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅರವಿಂದ್ ಅವರನ್ನು ಕಲ್ವಾದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಕಿಂಗ್ ಎಡ್ವರ್ಡ್ ಸ್ಮಾರಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರವಿಂಗ್ ಸಾವನ್ನಪಿದ್ದಾರೆ ಎಂದು ತಿಳಿಸಿದ್ದಾರೆ.

    ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಲ್ಯಾಣ್‍ದ ಬಜಾರ್‍ಪೇಟೆ ಪೊಲೀಸರು, ಆರೋಪಿಗಳು ಅರವಿಂದ್ ಅವರ ಮೇಲೆ ಹಲ್ಲೆ ನಡೆಸಲು ಸ್ಕ್ರೂಡ್ರೈವರ್ ಬಳಸಿದ್ದಾರೆ. ಇಬ್ಬರು ದುಷ್ಕರ್ಮಿಗಳ ವಿರುದ್ಧ ಐಪಿಸಿ ಸೆಕ್ಷನ್ 34 (ಸಾಮಾನ್ಯ ಉದ್ದೇಶ) ಮತ್ತು 326 (ಸ್ವಯಂಪ್ರೇರಣೆಯಿಂದ ಅಪಾಯಕಾರಿ ಶಸ್ತ್ರಾಸ್ತ್ರಗಳಿಂದ ತೀವ್ರ ನೋವನ್ನುಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗೆ ಶೋಧಕಾರ್ಯ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ದೇಶದಲ್ಲಿ ಲಾಕ್‍ಡೌನ್ ಘೋಷಣೆಯಾಗಿದೆ. ಈ ಹಿನ್ನೆಲೆ ಪಾನ್ ಅಂಗಡಿಗಳು ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ಮುಚ್ಚಲಾಗಿದೆ. ಇದರಿಂದಾಗಿ ಸಿಗರೇಟ್ ಕೊರತೆ ಉಂಟಾಗಿ ಸಿಗರೇಟ್ ಸಿಗದೆ ಇರುವುದಕ್ಕೆ ಆರೋಪಿಗಳು ಕೃತ್ಯ ಎಸೆಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಕೊರೊನಾ ವೈರಸ್ ಮುಕ್ತಿಗಾಗಿ ದೇವರಿಗೆ ಮದ್ಯ, ಸಿಗರೇಟು ಅರ್ಪಣೆ

    ಕೊರೊನಾ ವೈರಸ್ ಮುಕ್ತಿಗಾಗಿ ದೇವರಿಗೆ ಮದ್ಯ, ಸಿಗರೇಟು ಅರ್ಪಣೆ

    – ಕಾರವಾರದಲ್ಲಿ ಖಾಫ್ರಿ ದೇವನಿಗೆ ವಿಶಿಷ್ಟ ಸೇವೆ

    ಕಾರವಾರ: ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆವರಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ವ್ಯಕ್ತಿಯೋರ್ವನನ್ನು ಬಲಿ ತೆಗೆದುಕೊಂಡ ನಂತರ ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಸಂಕಷ್ಟ ಬಂದಾಗ ವೆಂಕಟರಮಣ ಎನ್ನುವಂತೆ ಜನರು ದೇವರ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಕಾರವಾರದಲ್ಲಿ ಭಕ್ತರು ತಮ್ಮೂರಿಗೆ ಕೊರೊನಾ ವೈರಸ್ ಹಾಗೂ ಯಾವುದೇ ರೋಗ ರುಜನಗಳು ಭಾದಿಸದಿರಲಿ ಎಂದು ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಭಾಗ್ ಬಳಿ ಇರುವ ಸರ್ವ ರೋಗ ಕಷ್ಟ ನಿವಾರಕ ಖಾಫ್ರಿ ದೇವರ ಮೊರೆ ಹೋಗಿದ್ದಾರೆ. ದೇವರಿಗೆ ಮದ್ಯ, ಸಿಗರೇಟು, ಕುರಿ, ಕೋಳಿ ನೀಡುವ ಮೂಲಕ ವಿಶಿಷ್ಟವಾಗಿ ದೇವರಲ್ಲಿ ಬೇಡಿಕೊಂಡಿದ್ದಾರೆ.

    ಯಾವುದೇ ದೇವರಿಗೆ ಹಾಲು, ನೈವೇದ್ಯ, ಅಭಿಷೇಕ ಮಾಡುವುದು ಸಾಮಾನ್ಯ. ಅದರಲ್ಲೂ ಉಗ್ರ ಸ್ವರೂಪದ ದೇವರಾದರೆ ಕುರಿ, ಕೋಳಿ ಬಲಿ ನೀಡುತ್ತಾರೆ. ಆದರೆ ಇಲ್ಲಿಯ ದೇವರಿಗೆ ಸಾರಾಯಿ ಅಭಿಷೇಕ, ಸಿಗರೇಟಿನಿಂದ ಪೂಜಿಸುವ ಅಪರೂಪದ ಪದ್ಧತಿಯಿದ್ದು, ರೋಗ ರುಜನ ತೊಂದರೆ ಬಂದರೆ ಈ ರೀತಿಯ ಹರಕೆ ಸಲ್ಲಿಸುವುದು ಶತಮಾನಗಳಿಂದ ನಡೆದುಕೊಂಡು ಬಂದಿದೆ. ತಮಗೆ ಹಾಗೂ ತಮ್ಮೂರಿಗೆ ಯಾವುದೇ ರೋಗ ರುಜನಗಳು ಬರಬಾರದು ಎಂದು ದೇವನಿಗೆ ಸಾರಾಯಿ, ಸಿಗರೇಟುಗಳನ್ನು ನೂರಾರು ಭಕ್ತರು ಭಕ್ತಿಯಿಂದ ತಂದು ಇಂದು ಅರ್ಪಿಸಿದರು.

    ಶತಮಾನದ ಇತಿಹಾಸ ಹೊಂದಿದ ವಿಶಿಷ್ಟ ದೇವರು:
    ಸುಮಾರು 1 ಶತಮಾನಗಳ ಹಿಂದೆ ದಕ್ಷಿಣ ಆಫ್ರಿಕಾ ದೇಶದ ಖಾಫ್ರಿ ಹೆಸರಿನ ಪ್ರಜೆ ಇಲ್ಲಿ ಗುಡಿಸಲೊಂದರಲ್ಲಿ ವಾಸವಾಗಿದ್ದನಂತೆ. ಆತ ಪರೋಪಕಾರಿ ವ್ಯಕ್ತಿಯಾಗಿದ್ದ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದನಂತೆ. ಹೀಗಾಗಿ ಅವನಿಗೆ ಬಡವರ ರಕ್ಷಕ ಎಂದು ಕರೆಯಲಾಗುತ್ತಿತ್ತು. ಕೆಲವರ ಪಾಲಿಗೆ ಆತ ದೇವಮಾನವನಾಗಿದ್ದನು. ಹೀಗಿರುವಾಗ ಆತ ಇದ್ದಕ್ಕಿದ್ದಂತೆ ಕಣ್ಮರೆಯಾದ. ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿಲ್ಲ. ಆದರೂ ಜನರು ಆತನ ಮೇಲೆ ಅಪಾರವಾದ ಭಯ-ಭಕ್ತಿ ಹೊಂದಿದ್ದರು. ಒಂದು ದಿನ ಗ್ರಾಮದ ಪರಸಪ್ಪ ಎಂಬಾತನಿಗೆ ಕಣ್ಮರೆಯಾದ ಖಾಫ್ರಿ ಕನಸಿನಲ್ಲಿ ಬಂದು ತನಗೊಂದು ಗುಡಿಯನ್ನು ಕಟ್ಟುವಂತೆ ಹಾಗೂ ತನಗೆ ಇಷ್ಟವಾದ ಸಾರಾಯಿ, ಸಿಗರೇಟು ಮಾಂಸದ ಭಕ್ಷಾದಿಗಳನ್ನು ನೀಡುವಂತೆ ಸೂಚಿಸಿದನೆಂದು ಹೇಳಲಾಗುತ್ತದೆ. ಇದರಿಂದ ಪರಸಪ್ಪ ಖಾಫ್ರಿಯ ಒಂದು ಕಲ್ಲಿನ ಮೂರ್ತಿಯನ್ನು ತಂದು ಪ್ರತಿಷ್ಟಾಪಿಸಿ ಪೂಜಿಸಲು ಪ್ರಾರಂಭಿಸಿದನು.

    ಖಾಫ್ರಿಯ ಮೇಲೆ ಭಯ-ಭಕ್ತಿಯಿದ್ದವರು ರೋಗ ರುಜನ ಹರಡದಂತೆ ಹಾಗೂ ಯಾವುದೇ ಕಷ್ಟಗಳಿದ್ದರೂ ಬಂದು ಆತನ ಕಲ್ಲಿನ ಮೂರ್ತಿಗೆ ಸೇವೆಯನ್ನು ಸಲ್ಲಿಸಲು ಪ್ರಾರಂಭಿಸಿದರು. ಅಂದಿನಿಂದ ಇಂದಿನವರೆಗೂ ಖಾಫ್ರಿ ಭಕ್ತರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗೆ ಬರುವಾಗ ಎಲ್ಲರನ್ನೂ ಕಾಪಾಡುವಂತೆ ಕೋರಿ ಕಡ್ಡಾಯವಾಗಿ ಸಾರಾಯಿ, ಸಿಗರೇಟು ತಂದು ದೇವರಿಗೆ ಸಲ್ಲಿಸುತ್ತಾರೆ.

    ಸ್ಥಳೀಯರ ಪ್ರಕಾರ ಖಾಪ್ರಿ ಎನ್ನುವ ಸಂತ ಇಂದು ನಮಗೆ ನಮ್ಮ ಕಷ್ಟ-ಕಾರ್ಪಣ್ಯಗಳನ್ನು, ರೋಗ ರುಜನಗಳನ್ನು ನಿವಾರಿಸುವ, ಬೇಡಿಕೆಗಳನ್ನು ಈಡೇರಿಸುವ ಸಾಕ್ಷಾತ್ ದೇವನಾಗಿ ಇಲ್ಲಿ ನೆಲೆ ನಿಂತಿದ್ದಾನೆ. ಭಕ್ತಾದಿಗಳು ಅವನ ಮೇಲೆ ಭಕ್ತಿಯಿಟ್ಟು ಬಂದು ತಮ್ಮ ಸೇವೆಯನ್ನು ಸಲ್ಲಿಸುತ್ತಾರೆ ಎನ್ನುತ್ತಾರೆ.

    ಖಾಫ್ರಿ ದೇವರಿ ಆಚರಣೆಯ ವಿಶಿಷ್ಟತೆ:
    ಹೂ-ಹಣ್ಣು ಕಾಯಿಯನ್ನು ಸಲ್ಲಿಸುವುದು. ಕೋಳಿಯನ್ನು ಬಲಿಕೊಡುವುದು, ಖಾಯಿಪಲ್ಲೆ ತರಕಾರಿಯ ತುಲಾಭಾರ ನಡೆಸುವುದು ಖಾಫ್ರಿ ದೇವರಿಗೆ ಪೂಜೆ ಸಲ್ಲಿಸುವ ಸಂಪ್ರದಾಯದ ಭಾಗವಾಗಿದೆ. ಜೊತೆಗೆ ಭಕ್ತಾದಿಗಳು ವೈವಿಧ್ಯಮಯವಾದ ಮದ್ಯಗಳನ್ನು ತಂದು ದೇವನಿಗೆ ಸಲ್ಲಿಸುವುದು ವಿಶೇಷವಾಗಿದೆ.

    ಅಲ್ಲದೇ ಅದನ್ನೆ ದೇವರ ಪ್ರಸಾದ ಎಂದು ಸ್ವೀಕರಿಸುವವರು ಇದ್ದಾರೆ. ಸಿಗರೇಟನ್ನು ತಂದು, ಅಗರಬತ್ತಿಯ ರೂಪದಲ್ಲಿ ಆರತಿಯನ್ನು ಮಾಡುತ್ತಾರೆ. ಜಾತ್ರೆಯ ಸಂದರ್ಭದಲ್ಲಿ ಕಾರವಾರವಷ್ಟೇ ಅಲ್ಲದೇ ಗೋವಾ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಭಕ್ತರು ಬಂದು ತಮ್ಮ ಸೇವೆಯನ್ನು ಸಲ್ಲಿಸುತ್ತಾರೆ. ಹಲವರು ಕಟ್ಟಿಕೊಂಡ ಹರಕೆ ಈಡೇರಿದ ನಂತರದಲ್ಲಿ ತಮ್ಮ ಮನಸ್ಸಿಗೆ ತೋಚಿದಂತೆ ಹಣದ ರೂಪದಲ್ಲಿ, ವಸ್ತುರೂಪದಲ್ಲಿ ಸೇವೆಯನ್ನು ಕೂಡ ಸಲ್ಲಿಸುತ್ತಾರೆ.

  • ಹುಬ್ಬಳ್ಳಿಯಲ್ಲಿ 24 ಲಕ್ಷ ಮೌಲ್ಯದ ಸಿಗರೇಟ್ ಕಳ್ಳತನ

    ಹುಬ್ಬಳ್ಳಿಯಲ್ಲಿ 24 ಲಕ್ಷ ಮೌಲ್ಯದ ಸಿಗರೇಟ್ ಕಳ್ಳತನ

    ಹುಬ್ಬಳ್ಳಿ: ಸಿಗರೇಟ್ ಬಾಕ್ಸ್ ತುಂಬಿದ ವಾಹನದಿಂದ 24,41,450 ರೂ. ಮೌಲ್ಯದ ಸರಕು ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಈ ಕುರಿತು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳ್ಳಾರಿಯ ಬೈಲವದ್ದಿಗೇರಿ ಗ್ರಾಮದ ಹೊರವಲಯದಲ್ಲಿ ಚಾಲಕ ಮಿನಿ ಲಾರಿ ನಿಲ್ಲಿಸಿ ನೋಡಿದಾಗ ಕಳುವಾಗಿರುವುದು ತಿಳಿದಿದೆ.

    ನಗರದ ಗದಗ ರಸ್ತೆಯಲ್ಲಿರುವ ಐಟಿಸಿ ಸಿಗರೇಟ್ ಕಂಪನಿ ಗೋದಾಮಿನಲ್ಲಿ ಒಟ್ಟು 67,25 ಲಕ್ಷ ರೂ. ಬೆಲೆ ಬಾಳುವ 74 ಸಿಗರೇಟ್ ಬಾಕ್ಸ್ ಮತ್ತು ಇತರೆ ಆಹಾರ ದಿನಸಿಗಳ ಒಟ್ಟು 291 ಬ್ಯಾಗ್ ಗಳನ್ನು ಮಿನಿ ಲಾರಿಗೆ ಲೋಡ್ ಮಾಡಲಾಗಿತ್ತು. ಹುಬ್ಬಳ್ಳಿಯಿಂದ ಹೊಸಪೇಟೆ ಮಾರ್ಗವಾಗಿ ಬಳ್ಳಾರಿಗೆ ಹೊರಟ ಚಾಲಕ ಮಧ್ಯದಲ್ಲಿ ಒಮ್ಮೆ ಚಹಾ ಕುಡಿಯಲು ವಾಹನ ನಿಲ್ಲಿಸಿದ್ದ. ಮತ್ತೆ ಪ್ರಯಾಣ ಬೆಳೆಸಿ ಬಳ್ಳಾರಿಯ ಬೈಲವದ್ದಿಗೇರಿ ಗ್ರಾಮದ ಹೊರವಲಯದಲ್ಲಿ ನಿಲ್ಲಿಸಿ ವಾಹನ ಪರಿಶೀಲನೆ ನಡೆಸಿದಾಗ 74 ಬಾಕ್ಸ್‍ಗಳ ಪೈಕಿ 24 ಸಿಗರೇಟ್ ಬಾಕ್ಸ್ ಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

    ಸಿಗರೇಟ್ ಬಾಕ್ಸ್ ಕಳ್ಳತನವಾದ ದೂರಿನ ಮೇರೆಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.