Tag: cinema

  • ಅಭಿನಯಕ್ಕೆ ತಲೈವಾ ರಜನಿಕಾಂತ್ ಗುಡ್‌ಬೈ?

    ಅಭಿನಯಕ್ಕೆ ತಲೈವಾ ರಜನಿಕಾಂತ್ ಗುಡ್‌ಬೈ?

    ಜನಿಕಾಂತ್ (Rajanikanth) ಅಂದರೆ ಕ್ರೇಜ್ ಕಾ ಬಾಪ್. ಅವರ ಚಿತ್ರಗಳು ಮಾಸ್. ಟ್ರೆಂಡ್‌ಗೆ ತಕ್ಕಂತೆ ಸಿನಿಮಾ (Cinema) ಮಾಡಿ ಸೈ ಅನ್ನಿಸಿಕೊಂಡು ಅದನ್ನ ಗೆಲ್ಲಿಸುವ ತಾಕತ್ತು ಹೊಂದಿರೋ ವಿಶ್ವ ಮೆಚ್ಚಿದ ಸೂಪರ್ ಸ್ಟಾರ್. ಇದೀಗ ರಜನಿಕಾಂತ್ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

    ಸದ್ಯಕ್ಕೆ ಇವರ ಕೈಯಲ್ಲಿ ನೂರಾರು ಕೋಟಿಯ ನಾಲ್ಕು ಪ್ರಾಜೆಕ್ಟ್‌ಗಳಿವೆ. `ಜೈಲರ್ 2′ ಸಿನಿಮಾವನ್ನೂ ಪೂರ್ಣಗೊಳಿಸಿದ್ದಾರೆ. ಕಮಲ್ ಹಾಸನ್ ಜೊತೆಗಿನ ಕಾಂಬೋ ಚಿತ್ರ ಘೋಷಣೆಯಾಗಿದೆ. ಡೈರೆಕ್ಟರ್ ನೆಲ್ಸನ್ ಜೊತೆ ಇನ್ನೊಂದು ಚಿತ್ರವೂ ಫಿಕ್ಸ್ ಆಗಿದೆ. ಇಷ್ಟೇ ಅಲ್ಲ ನಿರ್ಮಾಪಕ ಸಿ ಸುಂದರ್ ಜೊತೆಯೂ ರಜನಿಕಾಂತ್ ಡೇಟ್ ಇದೆ. ಹೀಗೆ ಸದ್ಯಕ್ಕೆ ರಜನಿಕಾಂತ್ ಇನ್ನೂ 2027ರವರೆಗೆ ಶೂಟಿಂಗ್ ಮಾಡಿದರೂ ಮುಗಿಯದಷ್ಟು ಪ್ರಾಜೆಕ್ಟ್‌ಗಳನ್ನ ಇಟ್ಟುಕೊಂಡಿದ್ದಾರೆ. ಆದರೆ ಈ ಹೊತ್ತಲ್ಲೇ ರಜನಿಕಾಂತ್ ನಿವೃತ್ತಿ ತೆಗೆದುಕೊಳ್ಳಲು ನಿರ್ಧರಿಸಿರುವುದರ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ ಈಗ ʻಮಹಾಕಾಳಿʼ!

    ಸೂಪರ್‌ಸ್ಟಾರ್ ಕುರಿತು ನಿವೃತ್ತಿ ಮಾತು ಕೇಳಿಬರ್ತಿರೋದು ಇದೇ ಮೊದಲಲ್ಲ. ರಜನಿಕಾಂತ್ ರಾಜಕೀಯ ಪ್ರವೇಶ ಮಾಡ್ತಾರೆ ಎಂಬ ವಿಚಾರ ಬಂದಾಗ ಚಿತ್ರರಂಗಕ್ಕೆ ಗುಡ್‌ಬೈ ಹೇಳುವ ನಿರ್ಧಾರ ಮಾಡಿದ್ದರು. ಆದರೆ ಅನಾರೋಗ್ಯ ಕಾರಣಕ್ಕೆ ರಾಜಕೀಯ ಪ್ರವೇಶಿಸದಿರಲು ನಿರ್ಧರಿಸಿ ಮತ್ತೆ ನಟನೆಯನ್ನು ಕಂಟಿನ್ಯೂ ಮಾಡಿದ್ರು. ಹಾಗಂತ ಈ ಬಾರಿ ವಿದಾಯಕ್ಕೆ ತೀರ್ಮಾನಿಸೋಕೆ ಕಾರಣ ರಾಜಕೀಯ ಪ್ರವೇಶವಂತೂ ಅಲ್ಲ. ಅದಕ್ಕೊಂದು ವಿಶೇಷ ಕಾರಣವಿದೆ.

    ರಜನಿಕಾಂತ್ ತಮ್ಮ ಮನೆಗೆ ಕಥೆ ಪಟ್ಟಿ ಹಿಡ್ಕೊಂಡು ಬರುವ ನಿರ್ದೇಶಕ ಹಾಗೂ ಚೆಕ್‌ಬುಕ್ ಹಿಡ್ಕೊಂಡು ಬರುವ ನಿರ್ಮಾಪಕರನ್ನ ವಾಪಸ್ ಕಳುಹಿಸುತ್ತಿದ್ದಾರಂತೆ. ಇದೇ ವಿಚಾರಕ್ಕೆ ರಜನಿಕಾಂತ್ ವಿದಾಯ ಹೇಳುವ ಸುದ್ದಿ ಗುಲ್ಲಾಗಿದೆ. ಆದರೆ ರಜನಿಕಾಂತ್ ಸಿನಿಮಾ ನಿರಾಕರಿಸುತ್ತಿರುದಕ್ಕೆ ಕಾರಣ ಮಾತ್ರ ಬೇರೆಯೇ ಇದೆ. ರಜನಿಕಾಂತ್ ವಯಸ್ಸು ಏರುತ್ತಿದೆ. 70 ವರ್ಷ ವಯಸ್ಸು ದಾಟಿದ ಬಳಿಕ ಸಹಜವಾಗೇ ದೇಹ ಕ್ವೀಣಿಸುತ್ತದೆ, ಸುಸ್ತೂ ಜಾಸ್ತಿ ಆಗುತ್ತದೆ. ಹಾಗಂತ ಇದುವೇ ವಿದಾಯಕ್ಕೆ ರೀಸನ್ ಅಲ್ವೇ ಅಲ್ಲ.

    ರಜನಿಕಾಂತ್ ಮನಸ್ಸು ಆಧ್ಯಾತ್ಮದತ್ತ ಹೆಚ್ಚಾಗಿ ವಾಲುತ್ತಿದೆ. ಸರಳವಾಗಿ ಬದುಕೋದನ್ನ ಜೀವನದಲ್ಲಿ ರೂಢಿಸಿಕೊಂಡು ಬಂದವರು ರಜನಿ. ಹೀಗಾಗಿ ವರ್ಷಕ್ಕೊಮ್ಮೆಯಾದ್ರೂ ಆಧ್ಯಾತ್ಮಿಕ ಪ್ರವಾಸ ಮಾಡ್ತಾರೆ. ಮನಸ್ಸಾದಾಗೆಲ್ಲ ಕಾರು ಹತ್ತಿ, ಹುಟ್ಟೂರು ಬೆಂಗಳೂರಿಗೆ ಬಂದು ಯಾರಿಗೂ ಗೊತ್ತಾಗದಂತೆ ಇದ್ದುಬಿಡ್ತಾರೆ. ಇಂಥಹ ರಜನಿಕಾಂತ್ ಎಲ್ಲಾ ಮೋಹಗಳನ್ನೂ ತ್ಯಜಿಸಿ ಜೀವಿಸುತ್ತಿರುವ ವ್ಯಕ್ತಿ. ವಯಸ್ಸು ಮಾಗಿದಂತೆ ಮನಸ್ಸೂ ಮಾಗುತ್ತಿದೆ. ಹೀಗಾಗಿ ಕೈಯಲ್ಲಿದ್ದ ಪ್ರಾಜೆಕ್ಟ್‌ಗಳನ್ನ ಮುಗಿಸಿಕೊಟ್ಟು, ಬಳಿಕ ನೋಡಿದ್ರಾಯ್ತು ಎಂದು ಯಾವುದೇ ಪ್ರಾಜೆಕ್ಟ್‌ಗಳನ್ನ ರಜನಿ ಒಪ್ಪಿಕೊಳ್ತಿಲ್ಲ. ಹೀಗಾಗಿ ರಜನಿಕಾಂತ್ ಚಿತ್ರರಂಗಕ್ಕೆ ವಿದಾಯದ ಸುದ್ದಿ ಚರ್ಚೆಯಾಗುತ್ತಿದೆ.

  • `I Am ಗಾಡ್‌’ ಟ್ರೈಲರ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮೆಚ್ಚುಗೆ

    `I Am ಗಾಡ್‌’ ಟ್ರೈಲರ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮೆಚ್ಚುಗೆ

    `I Am ಗಾಡ್‌’ ರವಿ ಗೌಡ ನಿರ್ದೇಶನ ಮಾಡಿ, ಹೀರೋ ಆಗಿ ಮಿಂಚಿ ಜೊತೆಗೆ ನಿರ್ಮಾಣ ಮಾಡಿರುವ ಸಿನಿಮಾ. ಈಗಾಗಲೇ ಎರಡು ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರೋ ಈ ಸಿನಿಮಾ ಸದ್ಯ ತೆರೆಗೆ ಬರಲು ಸಿದ್ದವಾಗಿದೆ. ರವಿ ಗೌಡ ಅಭಿನಯದ ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ.

    ಐ ಯ್ಯಾಮ್ ಗಾಡ್ ಅಂದ ತಕ್ಷಣ ನೆನಪಿಗೆ ಬರುವುದು ರಿಯಲ್ ಸ್ಟಾರ್ ಉಪೇಂದ್ರ (Actor Upendra) . ನಟ ರವಿ ಗೌಡ ಕೂಡ ಉಪೇಂದ್ರ ಅವರ ಗರಡಿಯಲ್ಲಿ ಪಳಗಿರುವ ಪ್ರತಿಭೆ. ಉಪ್ಪಿ ಅವರ ಜೊತೆ ಉಪ್ಪಿ 2 ಸಿನಿಮಾದಲ್ಲಿ ಕೆಲಸ ಮಾಡಿ ನಂತರ ತಾವೇ ನಿರ್ದೇಶನ ಮಾಡಬೇಕು ಎನ್ನುವ ಕನಸು ಕಂಡಿದ್ದರು. ಇದೀಗ ಈ ಸಿನಿಮಾ ನಿರ್ದೇಶನದ ಜೊತೆಗೆ ನಟನೆಯನ್ನು ಮಾಡುವ ಮೂಲಕ ಕನಸು ನನಸು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕುತೂಹಲ ಕೆರಳಿಸುವ ಪೀಟರ್ ಸಿನಿಮಾ : ರಾಜೇಶ್ ಧ್ರುವ ಹೀರೋ

    ಈಗ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ ರವಿ ಗೌಡ. ತಮ್ಮ ಗುರುಗಳು ಹಾಗೂ ನೆಚ್ಚಿನ ನಟ ಉಪೇಂದ್ರ ಕೈಯಲ್ಲೇ ಟ್ರೈಲರ್ ರಿಲೀಸ್ ಮಾಡಿಸಿದ್ದಾರೆ. ಶಿಷ್ಯನ ಟ್ರೇಲರ್ ನೋಡಿ ರಿಯಲ್ ಸ್ಟಾರ್ ಸಿಕ್ಕಾಪಟ್ಟೆ ಮೆಚ್ಚುಗೆ ಪಡಿಸಿದರು. ಮೈಸೂರಿನಲ್ಲಿ ನಡೆದ ಟ್ರೈಲರ್ ರಿಲೀಸ್ ಇವೆಂಟ್ ನಲ್ಲಿ ರಿಯಲ್ ಸ್ಟಾರ್, ನಟ ರವಿ ಗೌಡ ಉಪ್ಪಿ-2 ಸಿನಿಮಾ ಸಂದರ್ಭದಲ್ಲಿ ಎಷ್ಟು ಇಂಟ್ರೆಸ್ಟ್ ಕೊಟ್ಟು ಸಿನಿಮಾ ಬಗ್ಗೆ ಕಲಿತಿಕೊಳ್ತಿದ್ರು ಅನ್ನೋದನ್ನ ನೆನಪಿಸಿಕೊಂಡರು.

    ಇದೇ ಸಮಯದಲ್ಲಿ ಮಾತನಾಡಿದ ನಾಯಕ ರವಿ ಗೌಡ, ಉಪ್ಪಿ ಸರ್ ಅವರನ್ನು ಮೊದಲು ಭೇಟಿ ಮಾಡಿದ ಸಂದರ್ಭ ವಿವರಿಸಿದರು. ‘ಸಿನಿಮಾ ಮಾಡಬೇಕು ಅಂತ ನಿರ್ಧಾರ ಮಾಡಿದಾಗ ಯಾವುದೇ ಸಿನಿಮಾ ಯೂನಿವರ್ಸಿಟಿ ಬೇಡ ಉಪ್ಪಿ ಸರ್ ಹತ್ತಿರ ಹೋಗೋದು ಬೆಸ್ಟ್ ಅಂತ ಹೋಗಿ ರಿಕ್ವೆಸ್ಟ್ ಮಾಡಿ ಸೇರಿಕೊಂಡೆ’ ಎಂದರು. ಇದರ ಜೊತೆಗೆ ಐ ಯ್ಯಾಮ್ ಗಾಡ್ ಸಿನಿಮಾ ಕಷ್ಟ ಪಟ್ಟು ಮಾಡಿದ್ದೇವೆ ಬಂದು ನೋಡಿ ಅಂತ ನಾವು ಹೇಳಲ್ಲ. ಆದರೆ ನಿಮ್ಮ ಗುಂಪಲ್ಲಿ ಪ್ರತಿ ಶುಕ್ರವಾರ ಕನ್ನಡ ಸಿನಿಮಾ ನೋಡುವ ಒಬ್ಬ ವ್ಯಕ್ತಿ ಅಂತು ಇದ್ದೇ ಇರ್ತಾರೆ ಅವರಿಗೆ ಕಾಲ್ ಮಾಡಿ ಕೇಳಿ ಈ ಸಿನಿಮಾ ಹೇಗಿದೆ ಅಂತ ಅಷ್ಟೇ ಸಾಕು ನಮಗೆ’ ಅಂದರು.

    ಸದ್ಯ ಬಿಡುಗಡೆ ಆಗಿರೋ ಈ ಸಿನಿಮಾ ಟ್ರೇಲರ್ ನೋಡಿದ್ರೆ ಇದೊಂದು ಪಕ್ಕ ಸಸ್ಪೆನ್ಸ್ ಥ್ರಿಲ್ಲರ್ ಲವ್ ಸ್ಟೋರಿ ಎನ್ನುವ ಹಿಂಟ್ ಕೊಡ್ತಿದೆ.. ಉಪೇಂದ್ರ ಅವರ ಶಿಷ್ಯ ಆಗಿರೋದ್ರಿಂದ ಉಪ್ಪಿ ಸ್ಟೈಲ್ ಆಫ್ ಮೇಕಿಂಗ್ ಸಿನಿಮಾದಲ್ಲೂ ನೋಡಬಹುದು ಅನ್ನೋದು ಟ್ರೇಲರ್ ನೋಡ್ತಿದ್ರೆ ಗೊತ್ತಾಗುತ್ತೆ. ಇನ್ನು ಸಿನಿಮಾದಲ್ಲಿ ರವಿಗೌಡಗೆ ನಾಯಕಿಯಾಗಿ ವಿಜೇತಾ ಕಾಣಿಸಿಕೂಂಡಿದ್ದಾರೆ. ಜೂತೆಗೆ ರವಿಶಂಕರ್, ಅವಿನಾಶ್, ಅರುಣ ಬಾಲರಾಜ್ ಹಾಗೂ ನಿರಂಜನ್ ಕುಮಾರ್ ಅಭಿನಯ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ , ಜಿತಿನ್ ದಾಸ್ ಕ್ಯಾಮೆರಾವರ್ಕ್ ಮಾಡಿದ್ದಾರೆ. ಇದೇ ನವೆಂಬರ್ 7 ರಂದು ರಾಜ್ಯಾದ್ಯಂತ `I Am God’ ಸಿನಿಮಾ ತೆರೆಗೆ ಬರ್ತಿದೆ. ಇದನ್ನೂ ಓದಿ: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು

  • ಸುನಿ-ಶಿವಣ್ಣ ಕಾಂಬಿನೇಷನ್‌ನ `ಮನಮೋಹಕ’ ಸಿನಿಮಾ ನಿಲ್ಲೋಕೆ ಕಾರಣವೇನು?

    ಸುನಿ-ಶಿವಣ್ಣ ಕಾಂಬಿನೇಷನ್‌ನ `ಮನಮೋಹಕ’ ಸಿನಿಮಾ ನಿಲ್ಲೋಕೆ ಕಾರಣವೇನು?

    ಟ ಶಿವರಾಜ್‌ಕುಮಾರ್ (Shivarajkumar) ಹಾಗೂ ಸಿಂಪಲ್ ಸುನಿ (Simple Suni) ನಿರ್ದೇಶನದ `ಮನಮೋಹಕ’ ಸಿನಿಮಾ (Manamohaka Cinema) ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದ್ರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯ್ತು.

    ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನ ಕರೆತರಲು ಕೂಡಾ ಪ್ಲ್ಯಾನ್ ಮಾಡಲಾಗಿತ್ತಂತೆ. ಸುಮಾರು 10 ವರ್ಷಗಳಾದರೂ ಆ ಸಿನಿಮಾದ ಇಂಚಿಂಚೂ ಘಟನೆಗಳನ್ನ, ನೆನಪುಗಳನ್ನ ಇತ್ತೀಚೆಗೆ ನಿರ್ದೇಶಕ ಸಿಂಪಲ್ ಸುನಿ ಶಿವರಾಜ್‌ಕುಮಾರ್ ಮುಂದೆ ಹಂಚಿಕೊಂಡಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ `ಗತವೈಭವ’ ಸಿನಿಮಾದ ಹಾಡೊಂದರ ರಿಲೀಸ್ ಇವೆಂಟ್‌ನಲ್ಲಿ ಈ ಬಗ್ಗೆ ನಿರ್ದೇಶಕ ಸುನಿ ಮಾತ್ನಾಡಿದ್ದಾರೆ.

    ಮನಮೋಹಕ ಸಿನಿಮಾದ ಬಗ್ಗೆ ನಿರ್ದೇಶಕ ಸುನಿ ಮಾತಾಡೋಕು ಕಾರಣ ಇದೆ. ಸುನಿ ನಿರ್ದೇಶನದ `ಗತವೈಭವ’ ಚಿತ್ರದ ಹಾಡು ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ಶಿವಣ್ಣನ ಮುಂದೆ ಹಳೆ ನೆನಪು ಬಿಚ್ಚಿಟ್ಟಿದ್ದಾರೆ. ಬಳಿಕ ಮಾತಾಡಿದ ಶಿವಣ್ಣ `ಮನಮೋಹಕ’ ಸಿನಿಮಾ ಖಂಡಿತಾ ಆಗುತ್ತೆ. ಟೈಂ ಕೂಡಿ ಬರಬೇಕು. ಸುನಿ ಜೊತೆ ಸಿನಿಮಾ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿಂಪಲ್ ಸುನಿಗೆ ಶಿವಣ್ಣ ಅವಕಾಶ ಮಾಡಿಕೊಟ್ಟರೆ ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಬರೋ ನಿರೀಕ್ಷೆಗಳು ಹೆಚ್ಚಾಗಿವೆ.

  • SVR @ 50 – ಕನ್ನಡ ಚಿತ್ರರಂಗದ ಗಣ್ಯರು ಭಾಗಿ

    SVR @ 50 – ಕನ್ನಡ ಚಿತ್ರರಂಗದ ಗಣ್ಯರು ಭಾಗಿ

    ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ಕನ್ನಡ ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 5 ದಿನಗಳ ಕಾಲ ಚಾಮರಾಜ ಪೇಟೆಯ ಕಲಾವಿದರ ಭವನದಲ್ಲಿ ಸಾಧನೆ..ಸಂಭ್ರಮ..ಚಿತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಕ್ಟೋಬರ್ 23 ರಿಂದ 27ರ ವರೆಗೆ ರಾಜೇಂದ್ರಸಿಂಗ್ ಬಾಬು ಅವರ ಸಿನಿಮಾಗಳ ಪ್ರದರ್ಶನ, ಸಂವಾದ ಸಂಕೀರ್ಣ ಕಾರ್ಯಕ್ರಮಕ್ಕೆ ಇಂದು (ಅ.27) ತೆರೆ ಎಳೆಯಲಾಗಿದೆ.

    ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜೇಂದ್ರ ಸಿಙಗ್ ಬಾಬು ಅವರ ಆಪ್ತರು, ಕುಟುಂಬಸ್ಥರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.

    ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಾದಬ್ರಹ್ಮ ಹಂಸಲೇಖ, ನಟಿ ಸುಹಾಸಿನಿ, ನಿರ್ದೇಶಕ ನಾಗತ್ತಿಹಳ್ಳಿ ಚಂದ್ರಶೇಖರ್, ನಟ ಡಾ.ವಿ.ರವಿಚಂದ್ರನ್, ನಿರ್ದೇಶಕ ಟಿಎನ್ ಸೀತಾರಾಮ್, ಅರ್ಜುನ್ ಸರ್ಜಾ, ಧ್ರುವ ಸರ್ಜಾ ಸೇರಿ ಇಡೀ ಚಿತ್ರರಂಗದ ಗಣ್ಯರು ಸಾಕ್ಷಿಯಾದರು. ಈ ವೇಳೆ ರಾಜೇಂದ್ರ ಸಿಂಗ್ ಬಾಬು ಅವರಿಗೆ ಸನ್ಮಾನಿಸಿ ಗೌರವ ನೀಡಿದ್ದಾರೆ ಗಣ್ಯರು.

  • ನಾವೇ ಒಂದು ಬ್ರ್ಯಾಂಡ್‌, ನಾವ್ಯಾಕೆ ಬ್ರ್ಯಾಂಡ್‌ ಹಿಂದೆ ಹೋಗ್ಬೇಕು – ಶಿವಣ್ಣ ಖಡಕ್ ನುಡಿ

    ನಾವೇ ಒಂದು ಬ್ರ್ಯಾಂಡ್‌, ನಾವ್ಯಾಕೆ ಬ್ರ್ಯಾಂಡ್‌ ಹಿಂದೆ ಹೋಗ್ಬೇಕು – ಶಿವಣ್ಣ ಖಡಕ್ ನುಡಿ

    ನಾವು ಯಾವಾಗಲೂ ಬ್ರ್ಯಾಂಡ್‌ ಹಿಂದೆ ಹೋಗಬಾರದು. ನಾವೇ ಒಂದು ಬ್ರ್ಯಾಂಡ್‌ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಖಡಕ್ ಆಗಿ ನುಡಿದಿದ್ದಾರೆ.

    ಶಿವರಾಜ್‌ಕುಮಾರ್ ಇತ್ತೀಚೆಗೆ `ಗತವೈಭವ’ (Gatha Vaibhava) ಸಿನಿಮಾದ ಹಾಡು ರಿಲೀಸ್ ಇವೆಂಟ್‌ಗೆ ಆಗಮಿಸಿದ್ದರು. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಮಾತಾಡಿದ್ದಾರೆ. ಸಿಂಪಲ್ ಸುನಿ ಹಾಗೂ ಅವರ ಕಾಂಬಿನೇಷನ್‌ನ ಸಿನಿಮಾ ನಿಲ್ಲಲು ಕಾರಣವೇನು ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನಾವು ಯಾವಾಗಲೂ ಬ್ರ್ಯಾಂಡ್‌ ಹಿಂದೆ ಹೋಗ್ಬಾರ್ದು, ನಾವೇ ಒಂದು ಬ್ರ್ಯಾಂಡ್‌ ಎಂದಿದ್ದಾರೆ. ಇದನ್ನೂ ಓದಿ: ಉರಿಯುತ್ತಿದ್ದ ಬಸ್‌ನೊಳಗೆ ಪ್ರಯಾಣಿಕರು ಅದೆಷ್ಟು ನೋವು ಅನುಭವಿಸಿರಬೇಕು: ಕರ್ನೂಲ್‌ ದುರಂತಕ್ಕೆ ರಶ್ಮಿಕಾ ಕಂಬನಿ

    ನನಗೆ ಬಂದಿರೋ ಭಾಗ್ಯ ಅಂದ್ರೆ ಹೊಸ ಹೊಸ ಡೈರೆಕ್ಟರ್ ಬರ್ತಾರೆ. ಹೊಸ ಹೊಸ ಕಥೆಗಳನ್ನ ಹೇಳ್ತಾರೆ. ಹೊಸಬರು ಬಂದು ಸಿನಿಮಾ ಮಾಡ್ಬೇಕು ಅಂತಾರೆ ಅದೇನು ಆಗುತ್ತೋ, ಬಿಡುತ್ತೋ ಗೊತ್ತಿಲ್ಲ. ಹೊಸಬರ ಮೇಲೆ ನಂಬಿಕೆ ಇಡ್ಬೇಕು. ನಾವು ಬ್ರ್ಯಾಂಡ್‌ ಹಿಂದೆ ಹೋಗೋದು ಬಿಡ್ಬೇಕು. ನಾವೇ ಒಂದು ಬ್ರ್ಯಾಂಡ್‌. ನಾವ್ಯಾಕೆ ಬ್ರ್ಯಾಂಡ್‌ ಹಿಂದೆ ಹೋಗ್ಬೇಕು? ಬ್ರ್ಯಾಂಡ್‌ ಅದಾಗೇ ಆಗುತ್ತೆ. ನಂಬಿಕೆ ಇಡಬೇಕು ಎಂದಿದ್ದಾರೆ ಶಿವಣ್ಣ.

    ಸಿಂಪಲ್ ಸುನಿ (Simple Suni) ನಿರ್ದೇಶನದ `ಗತವೈಭವ’ ಸಿನಿಮಾದ ಸಾಂಗ್ ಲಾಂಚ್ ಇವೆಂಟ್‌ಗೆ ಅತಿಥಿಯಾಗಿ ಶಿವಣ್ಣ ಬಂದಿದ್ದರು. ಸಿಂಪಲ್ ಸುನಿ ಹಾಗೂ ಶಿವರಾಜ್‌ಕುಮಾರ್ ಕಾಂಬಿನೇಷನ್‌ನ ಮನಮೋಹಕ ಸಿನಿಮಾ ಸೆಟ್ಟೇರದಿರಲು ಕಾರಣವನ್ನ ಬಿಚ್ಚಿಟ್ಟಿದ್ದಾರೆ.

  • ಉತ್ತರ ಭಾರತದಲ್ಲಿ ಕಾಂತಾರ ಸಿನಿಮಾ ಹವಾ: ಬಾಕ್ಸಾಫೀಸ್‌ನಲ್ಲಿ 200 ಕೋಟಿ ಕ್ಲಬ್!

    ಉತ್ತರ ಭಾರತದಲ್ಲಿ ಕಾಂತಾರ ಸಿನಿಮಾ ಹವಾ: ಬಾಕ್ಸಾಫೀಸ್‌ನಲ್ಲಿ 200 ಕೋಟಿ ಕ್ಲಬ್!

    ಕಾಂತಾರ ಚಾಪ್ಟರ್-1 (Kantara Chapter 1) ಸಿನಿಮಾ ಬಿಡುಗಡೆ ಆಗಿ 25 ದಿನಗಳಾಗಿವೆ. ಸಿನಿಮಾ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ ನೀಡಿರುವ ಲೆಕ್ಕಾಚಾರದ ಪ್ರಕಾರ `ಕಾಂತಾರ: ಚಾಪ್ಟರ್ 1′ ಸಿನಿಮಾ ವಿಶ್ವದಾದ್ಯಂತ ಬಾಕ್ಸಾಫೀಸ್‌ನಲ್ಲಿ 818 ಕೋಟಿಗೂ ಹೆಚ್ಚು ಮೊತ್ತವನ್ನು ಈಗಾಗಲೇ ಗಳಿಕೆ ಮಾಡಿದೆ. ಇದೀಗ ವಿಶ್ವ ಬಾಕ್ಸಾಫೀಸ್‌ನಲ್ಲಿ ಮಾತ್ರವಲ್ಲದೆ ಭಾರತೀಯ ಬಾಕ್ಸಾಫೀಸ್‌ನಲ್ಲಿಯೂ ಸಿನಿಮಾದ ಕಲೆಕ್ಷನ್ ಬಲು ಜೋರಾಗಿದೆ. ಅದರಲ್ಲೂ ಸಿನಿಮಾದ ಹಿಂದಿ ಆವೃತ್ತಿ ಗಳಿಕೆಯಲ್ಲಿ ದಾಖಲೆಯನ್ನೇ ಬರೆಯುತ್ತಿದೆ.

    `ಕಾಂತಾರ ಚಾಪ್ಟರ್ 1′ ಸಿನಿಮಾ ಈ ವರ್ಷ ಈವರೆಗೆ ಬಿಡುಗಡೆ ಆದ ಯಾವುದೇ ಸಿನಿಮಾಕ್ಕಿಂತಲೂ ಹೆಚ್ಚಿನ ಗಳಿಕೆಯನ್ನು ಬಾಕ್ಸಾಫೀಸ್‌ನಲ್ಲಿ ಈಗಾಗಲೇ ಮಾಡಿದೆ. ಈ ವರ್ಷ ಬಿಡುಗಡೆ ಆಗಿ ಅತಿ ಹೆಚ್ಚು ಮೊತ್ತ ಗಳಿಸಿದ ಸಿನಿಮಾ ಎನಿಸಿಕೊಂಡಿದೆ `ಕಾಂತಾರ: ಚಾಪ್ಟರ್ 1′. ಸಿನಿಮಾ ಅತಿ ಶೀಘ್ರದಲ್ಲಿಯೇ ವಿಶ್ವ ಬಾಕ್ಸಾಫೀಸ್‌ನಲ್ಲಿ 1,000 ಕೋಟಿ ಕಲೆಕ್ಷನ್ ಮಾಡಲಿರುವುದು ಪಕ್ಕಾ ಆಗಿದೆ.

    ಇನ್ನು ಸಿನಿಮಾದ ಹಿಂದಿ ಆವೃತ್ತಿಯ ಕಲೆಕ್ಷನ್ ಸಹ ಬಲು ಜೋರಾಗಿದೆ. ಸಿನಿಮಾದ ಹಿಂದಿ ಆವೃತ್ತಿ ಮಾತ್ರವೇ 200 ಕೋಟಿಗೂ ಹೆಚ್ಚು ಮೊತ್ತವನ್ನು ಬಾಕ್ಸಾಫೀಸ್‌ನಲ್ಲಿ ಈಗಾಗಲೇ ದೋಚಿದೆ. ಪರಭಾಷಾ ಸಿನಿಮಾ ಒಂದು ಹಿಂದಿ ಪ್ರದೇಶದಲ್ಲಿ 200 ಕೋಟಿ ಗಳಿಸುವುದು ಅದೂ ಒಂದು ತಿಂಗಳ ಮುಂಚೆಯೇ ಸಾಮಾನ್ಯ ಸಾಧನೆಯಲ್ಲ. `ಪುಷ್ಪ 2′ ಹೊರತುಪಡಿಸಿದರೆ ಇತ್ತೀಚೆಗಿನ ಇನ್ಯಾವ ಸಿನಿಮಾ ಸಹ ಈ ಸಾಧನೆ ಮಾಡಿಲ್ಲ. ಇದೀಗ ಕಾಂತಾರ ಸಿನಿಮಾ ಆ ಸಾಧನೆಯನ್ನ ಮಾಡಿರೋದು ಇಡೀ ಸ್ಯಾಂಡಲ್‌ವುಡ್ ಹೆಮ್ಮೆಪಡುವ ವಿಚಾರ. ಇನ್ನು ಇದೇ ಅಕ್ಟೋಬರ್ 31ರಂದು ಕಾಂತಾರ ಚಾಪ್ಟರ್-1 ಇಂಗ್ಲೀಷ್ ವರ್ಷನ್ ರಿಲೀಸ್ ಆಗಲಿದೆ.

  • ಪ್ರೇಮ್@49 – ಕೇಕ್ ಕತ್ತರಿಸಿ ಸಂಭ್ರಮಿಸಿದ ಕೆಡಿ ಡೈರೆಕ್ಟರ್

    ಪ್ರೇಮ್@49 – ಕೇಕ್ ಕತ್ತರಿಸಿ ಸಂಭ್ರಮಿಸಿದ ಕೆಡಿ ಡೈರೆಕ್ಟರ್

    ಹ್ಯಾಟ್ರಿಕ್ ಡೈರೆಕ್ಟರ್ ಎಂದೇ ಖ್ಯಾತಿ ಪಡೆದಿರುವ ನಿರ್ದೇಶಕ ಪ್ರೇಮ್ 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ 49ನೇ ವರ್ಷದ ಹುಟ್ಟುಹಬ್ಬವನ್ನ ತಮ್ಮ ಕುಟುಂಬ ಹಾಗೂ ಆಪ್ತ ಬಳಗದ ಜೊತೆ ಆಚರಿಸಿಕೊಂಡಿದ್ದಾರೆ. ಕೇಕ್ ಕತ್ತರಿಸಿ, ದೀಪಾವಳಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಒಂದು ಕಡೆ ಹುಟ್ಟುಹಬ್ಬ ಹಾಗೂ ದೀಪಾವಳಿ ಸಂಭ್ರಮವನ್ನ ಒಟ್ಟೊಟ್ಟಿಗೆ ಮಾಡಿದ್ದಾರೆ.

    ಮಂಗಳವಾರ ರಾತ್ರಿ ಆಪ್ತರೊಡನೆ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸದ್ಯ ಕೆಡಿ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿರುವ ಪ್ರೇಮ್ ತಮ್ಮ ಅಭಿಮಾನಿಗಳಿಗೆ ಹಾಗೂ ಆಪ್ತ ವಲಯಕ್ಕೆ ಮನೆ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು.

    ಧ್ರುವ ಸರ್ಜಾ ಜೊತೆಗಿನ ಪ್ಯಾನ್ ಇಂಡಿಯಾ ಕೆಡಿ ಸಿನಿಮಾ ಟೀಸರ್ ಹಾಗೂ ಸಾಂಗ್ ಮೂಲಕ ಸದ್ದು ಮಾಡುತ್ತಿದೆ. ಈ ಸಿನಿಮಾವನ್ನ ಸದ್ಯದಲ್ಲಿಯೇ ತೆರೆಗೆ ತರುವ ನಿಟ್ಟಿನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇದರ ಮಧ್ಯೆ ಆಪ್ತರು ಹಾಗೂ ಕುಟುಂಬದ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

  • ಕಾಂತಾರ ಚಾಪ್ಟರ್ 18 ದಿನಕ್ಕೆ 765 ಕೋಟಿ ಕಲೆಕ್ಷನ್

    ಕಾಂತಾರ ಚಾಪ್ಟರ್ 18 ದಿನಕ್ಕೆ 765 ಕೋಟಿ ಕಲೆಕ್ಷನ್

    ಕಾಂತಾರ ಚಾಪ್ಟರ್-1 (Kantara: Chapter 1) ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಕೇವಲ ಪ್ರಾದೇಶಿಕವಾಗಿ ಅಲ್ಲದೇ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದೆ ಅಭಿಮಾನಿ ವರ್ಗ. ಬಹುಭಾಷೆಯಲ್ಲಿ ಏಕಕಾಲಕ್ಕೆ ತೆರೆಕಂಡ ಕಾಂತಾರ ಚಾಪ್ಟರ್-1 ಸಿನಿಮಾಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ.

    ಮೂರನೇ ವಾರದಲ್ಲೂ ಕಾಂತಾರ ಸಿನಿಮಾದ ಗಳಿಕೆ ಕುಗ್ಗಿಲ್ಲ. ಸಾಲು ಸಾಲು ರಜಾ ದಿನಗಳ ಜೊತೆ ಹಬ್ಬ ಇರುವ ಕಾರಣ ಚಿತ್ರ ನೋಡಲು ಥಿಯೇಟರ್‌ಗೆ ಜನ ಬರುತ್ತಿದ್ದಾರೆ. 800 ಕೋಟಿ ರೂ. ಸನಿಹದಲ್ಲಿರುವ ಕಾಂತಾರ 18 ದಿನಗಳಲ್ಲಿ ವಿಶ್ವದಾದ್ಯಂತ 765 ಕೋಟಿ ರೂ. ಗಳಿಕೆ ಮಾಡಿದೆ.

    ಕಾಂತಾರ ಚಾಪ್ಟರ್-1 ಸಿನಿಮಾಗೆ ಪೇಕ್ಷಕರು ನೀಡಿದ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಚಿತ್ರತಂಡ ತೀರ್ಥಯಾತ್ರೆ ಕೈಗೊಂಡಿದೆ. ರಿಷಬ್ ಶೆಟ್ಟಿ (Rishab Shetty) ಉತ್ತರ ಧ್ರುವದಿಂದ ದಕ್ಷಿಣ ಧ್ರುವಕ್ಕೂ ಎಲ್ಲಾ ದೇವಾಲಯಗಳಿಗೆ ಭೇಟಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ. ಯಶಸ್ಸಿಗೆ ಕಾರಣವಾದ ದೇವರ ಹರಕೆ ತೀರಿಸುತ್ತಿದ್ದಾರೆ. ಜೊತೆಗೆ ಜನರಿಗೆ ಈ ಮೂಲಕ ಧನ್ಯವಾದಗಳನ್ನ ತಿಳಿಸಿದೆ ಚಿತ್ರತಂಡ.

  • ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ: ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ

    ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ: ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ

    ಮಂಗಳೂರು: ಕಾಂತಾರ ಚಿತ್ರದ (Kantara Chapter 1) ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಪೆರಾರ ಶ್ರೀ ಬ್ರಹ್ಮ ದೇವರು ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಹೇಳಿದೆ.

    ತುಳುನಾಡಿನಲ್ಲಿ ಕಾಂತಾರ v/s ದೈವರಾಧಕರು ಫೈಟ್ ವಿಚಾರ ಜೋರಾಗುತ್ತಿದ್ದಂತೆ ಈಗ ದೈವದ ನುಡಿ ಕುರಿತು ದೈವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

    “ಹುಚ್ಚು ಕಟ್ಟಿದವರನ್ನ ಹುಚ್ಚು ಕಟ್ಟಿಸುತ್ತೇನೆ.. ಹಣವನ್ನ ಆಸ್ಪತ್ರೆಗೆ ಸುರಿಸುತ್ತೇನೆ” ಎಂದು ದೈವ ನುಡಿದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ನುಡಿ ಜೋರಾಗುತ್ತಿದ್ದಂತೆ ವಾದ ವಿವಾದ ಆರಂಭವಾಗಿತ್ತು. ಕಾಂತಾರ ಸಿನಿಮಾ ಹಾಗೂ ದೈವದ ಅನುಕರಣೆ ಮಾಡಿದವರಿಗೆ ಎಚ್ಚರಿಕೆ ಎಂದು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ದೈವಸ್ಥಾನದ ಆಡಳಿತ ಮಂಡಳಿಯಿಂದಲೇ ಸ್ಪಷ್ಟನೆ ನೀಡಿ ವಿಷಯಕ್ಕೆ ಇತೀಶ್ರೀ ಹಾಡಲು ಮುಂದಾಗಿದೆ.

    ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
    ಮಂಗಳೂರು ತಾಲೂಕು ಶ್ರೀ ಬ್ರಹ್ಮ ದೇವರು -ಇಷ್ಟ ದೇವತಾ ಬಲವಾಂಡಿ ಪಿಲಿಚಾಂಡಿ ದೈವಸ್ಥಾನ -ಪಡುಪೆರಾರ ಕ್ಷೇತ್ರದಲ್ಲಿ ನಡೆದ ಬಲವಾಂಡಿ-ಪಿಲಿಚಾಂಡಿ ದೈವಗಳ ಪುದರ್ -ಮೆಚ್ಚಿ ಜಾತ್ರೆ ಸಮಯದ ದೈವಪಾತ್ರಿ ದರ್ಶನ -ದೈವದ ನಡೆ-ನುಡಿಗಳ ಬಗ್ಗೆ ಉಂಟಾದ ಗೊಂದಲ-ಭಿನ್ನಾಭಿಪ್ರಾಯ ವಿಚಾರದಲ್ಲಿ ಆಡಳಿತ ಮಂಡಳಿಯ ಸ್ಪಷ್ಟಿಕರಣ ನೀಡುತ್ತಿದೆ. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಬ್ಲಾಕ್‌ಬಸ್ಟರ್‌ ಹಿಟ್; 2 ವಾರದಲ್ಲಿ 717 ಕೋಟಿ ಕಲೆಕ್ಷನ್‌

     

    ಶ್ರೀ ಬ್ರಹ್ಮ ದೇವರು -ಇಷ್ಟ ದೇವತಾ ಬಲವಾಂಡಿ -ಪಿಲಿಚಾಂಡಿ ದೈವಸ್ಥಾನ, ಪಡುಪೆರಾರ-ಕ್ಷೇತ್ರದಲ್ಲಿ ಶತಮಾನದ ಕಾಲದ ಕಟ್ಟು ಕಟ್ಟುಳೆಯಂತೆ, ಗುತ್ತು ಬರ್ಕೆ ಮಹನೀಯರು ಹಾಗೂ ಗ್ರಾಮಸ್ಥರು, ಸಾರ್ವಜನಿಕರ ಕೂಡವಿಕೆಯಿಂದ ನಡೆಸಲ್ಪಡುವ ಪುರ್-ಮೆಚ್ಚಿ ಜಾತ್ರೆಯು ಇತ್ತೀಚಿಗೆ ಕ್ಷೇತ್ರದಲ್ಲಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ದೈವದ ಪಾತ್ರಿ-ದೈವವು ನೀಡಿದ ಅಭಯ -ನಡೆ-ನುಡಿಗಳ ವಿಚಾರದಲ್ಲಿ ಗೊಂದಲ ಭಿನ್ನಾಭಿಪ್ರಾಯ ಏರ್ಪಟ್ಟಿರುವುದು ಕ್ಷೇತ್ರದ ಆಡಳಿತ ಮಂಡಳಿಯ ಗಮನಕ್ಕೆ ಬಂದಿರುತ್ತದೆ.  ಇದನ್ನೂ ಓದಿ:  100 ಕೋಟಿ ನಾಯಿ ಲಾಂಚ್ ಮಾಡ್ತೀನಿ- ಸವಾಲೆಸೆದ ಬಿಗ್‌ಬಾಸ್ ಸ್ಪರ್ಧಿ ಸತೀಶ್

    ಕ್ಷೇತ್ರದ ಬಲವಾಂಡಿ -ಪಿಲಿಚಾಂಡಿ ದೈವದ ನರ್ತನದ ಬಳಿಕ ನಡೆಯುವ ನಡೆ-ನುಡಗಳ ಸಂದರ್ಭದಲ್ಲಿ ಕೆಲವೊಂದು ಯುವಕರುಗಳು ದೈವ-ದೇವರ, ಆಚಾರ-ವಿಚಾರದಲ್ಲಿ ಆಗುತ್ತಿರುವ ಅಪಪ್ರಚಾರ ವಿಚಾರದಲ್ಲಿ ದೈವದ ಸಮಕ್ಷಮ ನಿವೇದನೆ ಮಾಡಿ ಕೊಂಡಿರುತ್ತಾರೆ. ಈ ಬಗ್ಗೆ ದೈವವು ಸೂಕ್ತ ಅಭಯವನ್ನು ನೀಡಿರುತ್ತದೆ ವಿನಾ: ಯಾವುದೇ ಚಲನಚಿತ್ರ, ಅದರಲೂ ಮುಖ್ಯವಾಗಿ ಪ್ರಕೃತ ಪ್ರಚಾರದಲ್ಲಿರುವ ಕಾಂತರ-1 ಬಗ್ಗೆ ಯಾವುದೇ ಅಭಯ ನುಡಿಯನ್ನು ದೈವವು ನೀಡಿರುವುದಿಲ್ಲ. ಆದರೆ ದೈವವು ನಿವೇದನೆಗೆ ಸಂಬಂಧಿಸಿ ನೀಡಿದ ಅಭಯ-ನುಡಿಯನ್ನು ನಿವೇದಿಸಿಕೊಂಡ ಯುವಕರು ಮಾಧ್ಯಮಗಳಿಗೆ ಬಿಡುಗಡೆ ಮಾಡಿ, ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ಮಾಡಿರುವುದಕ್ಕೆ ಶ್ರೀಕ್ಷೇತ್ರದ ಭಕ್ತರು ಗ್ರಾಮಸ್ಥರು, ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿರುವುದರಿಂದ ಈ ಸ್ಪಷ್ಟಿಕರಣವನ್ನು ಆಡಳಿತ ಮಂಡಳಿ ನೀಡುತ್ತಿದೆ.

    ಮೇಲಿನಂತೆ ಶ್ರೀ ಕ್ಷೇತ್ರ ಪೆರಾರದದಲ್ಲಿ ನಡೆದ ಜಾತ್ರ ಸಂದರ್ಭದಲ್ಲಿನ ದೈವ ನಡೆ-ನುಡಿಯಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಗಳು /ಚಲನಚಿತ್ರದ ಬಗ್ಗೆ ಯಾವುದೇ ಅಭಯ-ನುಡಿ ನೀಡುವ ಸಂದರ್ಭ ಬಂದಿರುವ ಕಾರಣ, ಪ್ರಕೃತ ಈ ವಿಚಾರದಲ್ಲಿನ ಗೊಂದಲ-ಭಿನ್ನಾಭಿಪ್ರಾಯಗಳಿಗೆ ಅಲ್ಲದೇ ಈ ಗೊಂದಲ ಶ್ರೀ ಕ್ಷೇತ್ರದ ದೈವ-ದೇವರು-ಆಡಳಿತ ಮಂಡಳಿಯು ಹೊಣೆಗಾರರಲ್ಲವೆಂದು ಈ ಮೂಲಕ ಸ್ಪಷ್ಟಪಡಿಸಲಾಗುತ್ತಿದೆ.

  • ಆಸ್ಪತ್ರೆಗೆ ದಾಖಲಾಗಿ ಮಹಿಳೆಯರಿಗೆ ಆರೋಗ್ಯ ಸಂದೇಶ ನೀಡಿದ ಸಂಗೀತಾ ಭಟ್

    ಆಸ್ಪತ್ರೆಗೆ ದಾಖಲಾಗಿ ಮಹಿಳೆಯರಿಗೆ ಆರೋಗ್ಯ ಸಂದೇಶ ನೀಡಿದ ಸಂಗೀತಾ ಭಟ್

    ಸ್ಯಾಂಡಲ್‌ವುಡ್ ನಟಿ ಸಂಗೀತಾ ಭಟ್ (Sangeetha Bhat) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಅವರು ಮಕ್ಕಳು ಬೇಡ ಎಂದು ಹೇಳಿದ ಮಾತು ಸಾಕಷ್ಟು ವೈರಲ್ ಆಗಿತ್ತು. ಒಂದು ರೀತಿಯಲ್ಲಿ ವಿವಾದವನ್ನೇ ಸೃಷ್ಟಿ ಮಾಡಿತ್ತು. ಆದರೆ ಅದಕ್ಕೆ ಅಸಲಿ ಕಾರಣ ಈಗ ಆಸ್ಪತ್ರೆಗೆ ದಾಖಲಾಗಿರೋದು ಇರಬಹುದಾ ಎನ್ನುವಂತಿದೆ. ಆಸ್ಪತ್ರೆಗೆ ದಾಖಲಾದ ಸಂಗೀತಾ ಭಟ್ ಮಹಿಳೆಯರಿಗೆ ಆರೋಗ್ಯ ಸಂದೇಶ ಕೊಟ್ಟಿದ್ದಾರೆ.

    ಸಂಗೀತಾ ಭಟ್ ‘ಹೈಸ್ಟರೊಸ್ಕೋಪಿಕ್ ಪೊಲಿಫೆಕ್ಟಮಿ’ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಗರ್ಭಾಶಯದೊಳಗೆ 1.75ಸೆಂ.ಮೀ.ಗಳಷ್ಟು ಬೆಳವಣಿಗೆಯಾದ ಗರ್ಭಾಶಯದ ಪಾಲಿಪ್ ಇರುವುದು ಪತ್ತೆಯಾಗಿದೆ. ಇದನ್ನ ಗರ್ಭಾಶಯದ ಗೆಡ್ಡೆ ಎಂದು ಎಂದು ಸಂಗೀತಾ ಸಾಮಾಜಿಕ ಜಾಳತಾಣದಲ್ಲಿ ಬರೆದುಕೊಂಡಿದ್ದಾರೆ.

    ಈ ಕಾಯಿಲೆಯಿಂದ ರಕ್ತಸ್ರಾವ, ಮಾರಣಾಂತಿಕ ನೋವು, ಅನಿಯಮಿತ ಚಕ್ರಗಳು, ಹಾರ್ಮೋನುಗಳ ಅಡಚಣೆಗಳು, ಮೊಡವೆಗಳು, ತೂಕ ಹೆಚ್ಚಾಗುವುದು, ಕೂದಲು ಉದುರುವಿಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ವಧುವಾದ ಗಾಯಕಿ ಸುಹಾನಾ ಸಯ್ಯದ್ – ʻಭಲೇ ಜೋಡಿʼ ಎಂದ ಫ್ಯಾನ್ಸ್‌

    ಈ ರೀತಿ ಗೆಡ್ಡೆ ಕಾಣಿಸಿಕೊಂಡ ಬಳಿಕ ಶಸ್ತ್ರ ಚಿಕಿತ್ಸೆಯ ಬಗ್ಗೆ ಅಂತಿಮವಾಗಿ ನಿರ್ಧರಿಸಲು ನನಗೆ ಒಂದು ತಿಂಗಳು ಬೇಕಾಯಿತು ಎಂದಿದ್ದಾರೆ ಸಂಗೀತಾ. ಕೆಲಸದ ಕಮಿಟ್ಮೆಂಟ್ ನಡುವೆ, ಅದನ್ನು ವಿಳಂಬ ಮಾಡುತ್ತಲೇ ಬಂದಿದ್ದ ಸಂಗೀತಾ ಭಟ್, ಪ್ರತಿ ಮಹಿಳೆಯರು ಅನಿಯಮಿತ ರಕ್ತಸ್ರಾವ, ಮುಟ್ಟಿನ ಸಮಯ, ಹಾರ್ಮೋನ್‌ಗಳಲ್ಲಿ ವ್ಯತ್ಯಾಸವಿದ್ದರೆ ನಿರ್ಲಕ್ಷಿಸಬೇಡಿ ಎಂದು ಬರೆದುಕೊಂಡಿದ್ದಾರೆ.

    ಮಕ್ಕಳು ಬೇಡ ಅಂತಾ ಈ ಹಿಂದೆ ಸಂಗೀತಾ ಭಟ್ ಹಾಗೂ ಪತಿ ಸುದರ್ಶನ್ ಆಡಿದ ಮಾತುಗಳಿಗೆ ಸಾಕಷ್ಟು ಪರ ವಿರೋಧ ಮಾತುಗಳು ಕೇಳಿ ಬಂದಿದ್ದವು. ಇದೀಗ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣ ಇದೂ ಕೂಡಾ ಇರಬಹುದಾ ಎನ್ನುವ ಮಾತಿಗಳು ಕೇಳಿಬರುತ್ತಿದೆ.