Tag: Cinema Crime

  • ಫ್ರೆಂಡ್ಸ್ ಗ್ಯಾಂಗ್ ಜೊತೆ ರಾಯನ್ ರಾಜ್‌ ಸರ್ಜಾ

    ಫ್ರೆಂಡ್ಸ್ ಗ್ಯಾಂಗ್ ಜೊತೆ ರಾಯನ್ ರಾಜ್‌ ಸರ್ಜಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೆಘನಾ ರಾಜ್ ಅವರು ತಮ್ಮ ಮಗ ರಾಯನ್ ರಾಜ್ ಸರ್ಜಾ ಫೋಟೋವನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಈ ಬಾರಿ ಅವರು ರಾಯನ್ ತನ್ನ ಗೆಳೆಯರ ಜೊತೆಗೆ ಕುಳಿತು ಆಟವಾಡುತ್ತಿರುವ ವಿಶೇಷವಾದ ಫೋಟೋವನ್ನು ಶೇರ್ ಮಾಡಿದ್ದಾರೆ.

    ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬಾ ಕಷ್ಟ ಆದರೆ ಇದು ತಾಯಂದಿರಿಗೆ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ..? ಹುಟ್ಟುಹಬ್ಬದ ಶುಭಾಶಯಗಳು ಧಕ್ಷ್ ಎಂದು ಈ ಮುದ್ದಾದ ಫೋಟೋಗಳಿಗೆ ಮೇಘನಾ ರಾಜ್ ಕ್ಯಾಪ್ಷನ್ ನೀಡಿ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಶೇರ್ ಮಾಡಿದ್ದಾರೆ. ರಾಯನ್ ಸಖತ್ ಕ್ಯೂಟ್ ಆಗಿ ಕಾಣುತ್ತಿದ್ದಾನೆ. ರಾಯನ್ ಗೆಳೆಯರ ಬಳಗ ಎಷ್ಟು ದೊಡ್ಡದಾಗಿದೆ ಎನ್ನುವುದನ್ನು ನಾವು ಈ ಫೋಟೋದಲ್ಲಿ ನೋಡ ಬಹುದಾಗಿದೆ. ಇದನ್ನೂ ಓದಿ: ಕ್ಯೂಟ್ ಡ್ರೆಸ್ ಧರಿಸಿ ಬೊಂಬೆಯಂತೆ ರಾಯನ್ ಪೋಸ್

     

    View this post on Instagram

     

    A post shared by Meghana Raj Sarja (@megsraj)

    ರಾಯನ್ ಆಗಮನದ ಬಳಿಕ ಮೇಘನಾ ರಾಜ್ ಬದುಕಿನಲ್ಲಿ ಹೊಸ ಬೆಳಕು ಮೂಡಿದೆ. ಪುತ್ರನ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಸಿನಿಮಾಗಳಲ್ಲಿ ನಟಿಸುವುದಾಗಿಯೂ ಒಪ್ಪಿಕೊಂಡಿದ್ದಾರೆ. ಗೆಳೆಯನ ಬರ್ತ್ ಡೇ ಪಾರ್ಟಿಯಲ್ಲಿ ರಾಯನ್ ಭಾಗವಹಿಸಿದ್ದಾನೆ. ಫ್ರೆಂಡ್ಸ್ ಜೊತೆಗೆ ಸೇರಿ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ. ಅಭಿಮಾನಿಗಳು ಈ ಫೋಟೋವನ್ನು ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: 21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್

  • ಶಕ್ತಿಧಾಮಕ್ಕೆ ಭೇಟಿಕೊಟ್ಟ ಶಿವರಾಜ್‍ಕುಮಾರ್ ದಂಪತಿ

    ಶಕ್ತಿಧಾಮಕ್ಕೆ ಭೇಟಿಕೊಟ್ಟ ಶಿವರಾಜ್‍ಕುಮಾರ್ ದಂಪತಿ

    ಮೈಸೂರು: ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಅವರು ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರ ಜೊತೆಗೆ ಮೈಸೂರಿಲ್ಲಿರುವ ಶಕ್ತಿಧಾಮಕ್ಕೆ ಭೆಟಿಕೊಟ್ಟು ಅಲ್ಲಿಯ ನಿರ್ವಹಣೆಯ ಕುರಿತಾಗಿ ವಿಚಾರಿಸಿದ್ದಾರೆ.

    ಶಕ್ತಿಧಾಮ ನಿರ್ವಹಣೆ ಕುರಿತಂತೆ ಧರ್ಮದರ್ಶಿಗಳ ಸಭೆ ಮಾಡಿದ್ದಾರೆ. ಟ್ರಸ್ಟ್ ಅಧ್ಯಕ್ಷೆ ಗೀತಾ ಶಿವರಾಜ್‍ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದೆ. ಸಭೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ಮ್ಯಾನೇಂಜಿಂಗ್ ಟ್ರಸ್ಟಿ ಜಯದೇವ್, ಖಜಾಂಚಿ ಸುಮನ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. 150 ಮಕ್ಕಳ ಹಾರೈಕೆ, ಶಿಕ್ಷಣ ಕುರಿತಂತೆ ಚರ್ಚೆ ನಡೆಸಲಾಗಿದೆ. ಶಕ್ತಿಧಾಮಕ್ಕೆ ದೊಡ್ಡ ಮಟ್ಟದಲ್ಲಿ ಸಾಥ್ ನೀಡಿದ್ದ ಅಪ್ಪು ನಿಧನದ ಬಳಿಕ ಮೊದಲ ಬಾರಿಗೆ ಭೇಟಿ ನೀಡಿ ಮಕ್ಕಳೊಂದಿಗೂ ಚರ್ಚೆ ಮಾಡಿದ್ದಾರೆ. ಇದನ್ನೂ ಓದಿ: ಮದುವೆಗೆ 1 ಲಕ್ಷ ರೂ. ವೆಚ್ಚದ ಮಹಂದಿ ಬಳಸ್ತಿದ್ದಾರಂತೆ ಕತ್ರಿನಾ!

    ಮೈಸೂರು ನಗರದ ಉಡ್ ಲ್ಯಾಂಡ್ ಸಿನುಮಾ ಮಂದಿರಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಈ ವೇಳೆ ಪುನೀತ್ ರಾಜ್‍ಕುಮಾರ್ ಭಾವ ಚಿತ್ರಕ್ಕೆ ಪುಷ್ಪಾನಮನ ಸಲ್ಲಿಸಿದ್ದಾರೆ. ಪುಷ್ಪಾರ್ಚನೆ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಟ ಶಿವಣ್ಣನಿಗೆ ಜೈಕಾರ ಕೂಗಿದ ಅಭಿಮಾನಿಗಳು. ಮೈಸೂರು ನಗರದಲ್ಲಿರೋ ಚಿತ್ರಮಂದಿರದಲ್ಲಿ ಈ ವೇಳೆ ಅಭಿಮಾನಿಗಳಿಂದ ನೂಕುನುಗ್ಗಲು ಆಗಿದೆ. ಇದನ್ನೂ ಓದಿ: ಯಶ್‌, ಪ್ರಶಾಂತ್‌ ನೀಲ್‌ ಬಳಿ ಕ್ಷಮೆ ಕೇಳಿದ ಅಮೀರ್‌ ಖಾನ್‌