Tag: Cinema Release

  • ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ವಿರುದ್ಧ ರಿಷಭ್ ಶೆಟ್ಟಿ ‘ಕಾಂತಾರ’ ರಿಲೀಸ್

    ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ವಿರುದ್ಧ ರಿಷಭ್ ಶೆಟ್ಟಿ ‘ಕಾಂತಾರ’ ರಿಲೀಸ್

    ಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾರ್ಟಿನ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 30ಕ್ಕೆ ಸಿನಿಮಾ ರಿಲೀಸ್ ಮಾಡುವುದಾಗಿ ನಿರ್ದೇಶಕ ಎ.ಪಿ. ಅರ್ಜುನ್ ಏಪ್ರಿಲ್ 10 ರಂದೇ ಟೀಸರ್ ಮೂಲಕ ಹೇಳಿದ್ದರು. ಇದೀಗ ಅದೇ ದಿನದಂದೇ ಕನ್ನಡದ ಮತ್ತೊಂದು ಸಿನಿಮಾ ರಿಲೀಸ್ ಆಗುತ್ತಿದೆ. ಅದು ಕೂಡ ನಿರೀಕ್ಷಿತ ಸಿನಿಮಾವಾಗಿರುವುದರಿಂದ ಒಂದು ರೀತಿ ಪೈಪೋಟಿ ನಡೆಯಲಿದೆ.  ಇದನ್ನೂ ಓದಿ : ಹಾಸ್ಯನಟ ನರಸಿಂಹರಾಜು ಹಿರಿಯ ಪುತ್ರಿ, ನಿರ್ದೇಶಕ ಅರವಿಂದ್ ತಾಯಿ ಧರ್ಮವತಿ ನಿಧನ

    ಹೊಂಬಾಳೆ ಫಿಲ್ಮಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ, ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಸಿನಿಮಾದ ದಿನಾಂಕವನ್ನು ನಿನ್ನೆ ಘೋಷಣೆ ಮಾಡಿದ್ದಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಈ ಸಿನಿಮಾ ಕೂಡ ಸೆಪ್ಟಂಬರ್ 30 ರಂದೇ ದೇಶದಾದ್ಯಂತ ತೆರೆ ಕಾಣುತ್ತಿದೆ. ಹೀಗಾಗಿ ಸಹಜವಾಗಿಯೇ ಕುತೂಹಲ ಮೂಡಿಸಿದೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಮಾರ್ಟಿನ್ ಎ.ಪಿ ಅರ್ಜುನ್ ಮತ್ತು ಧ್ರುವ ಕಾಂಬಿನೇಷನ್ ನ ಎರಡನೇ ಸಿನಿಮಾ. ಈಗಾಗಲೇ ಈ ಜೋಡಿ ಗೆದ್ದಿದೆ. ಅಲ್ಲದೇ, ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದೇ ಕಡಿಮೆ. ಹಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಈ ಸಿನಿಮಾದಲ್ಲಿ ಅದ್ಭುತ ಆಕ್ಷನ್ ಸನ್ನಿವೇಶಗಳು ಇವೆಯಂತೆ. ಈ ಚಿತ್ರಕ್ಕಾಗಿ ಧ್ರುವ ಭರ್ಜರಿ ತಯಾರಿಯನ್ನೂ ಮಾಡಿಕೊಂಡಿದ್ದಾರಂತೆ. ಹೀಗಾಗಿ ಚಿತ್ರ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

    ಕನ್ನಡ ಸಿನಿಮಾ ರಂಗದ ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ರಿಷಭ್ ಶೆಟ್ಟಿ ಅವರದ್ದು. ವಿಭಿನ್ನ ಸಿನಿಮಾಗಳನ್ನು ಮಾಡುವುದರಿಂದ, ಇವರದ್ದೇ ಆದ ನೋಡುಗ ಬಳಗವಿದೆ. ಅಲ್ಲದೇ, ಕಾಂತಾರ ಸಿನಿಮಾದ ಟ್ರೈಲರ್ ಕೆಜಿಎಫ್ 2 ಸಿನಿಮಾ ರಿಲೀಸ್ ವೇಳೆ ಬಿಡುಗಡೆ ಆಗುತ್ತು. ಅದಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ಕೂಡ ಚೆನ್ನಾಗಿಯೇ ಮೂಡಿ ಬಂದಿದೆ ಎನ್ನಲಾಗುತ್ತಿದೆ. ಎರಡೂ ಸಿನಿಮಾಗಳಲ್ಲಿ ಪ್ರೇಕ್ಷಕ ಅತೀ ಹೆಚ್ಚು ಯಾವ ಚಿತ್ರಕ್ಕೆ ಕೈ ಹಿಡಿಯಲಿದ್ದಾನೆ ನೋಡಬೇಕು.

  • ಈ ವಾರ 11 ಚಿತ್ರಗಳು ರಿಲೀಸ್, ನಿಲ್ಲದ ಮಳೆ : ಪ್ರೇಕ್ಷಕರ ಕೊರತೆ ಎದುರಿಸುತ್ತಿರುವ ಥಿಯೇಟರ್

    ಈ ವಾರ 11 ಚಿತ್ರಗಳು ರಿಲೀಸ್, ನಿಲ್ಲದ ಮಳೆ : ಪ್ರೇಕ್ಷಕರ ಕೊರತೆ ಎದುರಿಸುತ್ತಿರುವ ಥಿಯೇಟರ್

    ಕೆಜಿಎಫ್ 2 ರಿಲೀಸ್ ನಂತರ ಥಿಯೇಟರ್‌ಗೆ ರಾಶಿ ರಾಶಿ ಚಿತ್ರಗಳು ಬರುತ್ತಿವೆ. ಪ್ರತಿ ವಾರ ಮೂರ್ನಾಲ್ಕು ಚಿತ್ರಗಳು ಬಿಡುಗಡೆ ಆಗುತ್ತಿದ್ದು, ಅದನ್ನು ಹೇಗೋ ನಿಭಾಯಿಸಿಕೊಂಡು ಹೋಗುತ್ತಿದ್ದರು ವಿತರಕರು. ಈ ವಾರ ಬರೋಬ್ಬರಿ 11 ಚಿತ್ರಗಳು ರಿಲೀಸ್ ಆಗಿವೆ. ಹನ್ನೊಂದು ಚಿತ್ರಗಳು ಕನ್ನಡದ್ದೇ ಆಗಿರುವುದು ಮತ್ತೊಂದು ಅಚ್ಚರಿಯ ವಿಷಯ. ಇದನ್ನೂ ಓದಿ : ಓಟಿಟಿಯಲ್ಲೂ ದಾಖಲೆ ಬರೆದ ‘ದಿ ಕಾಶ್ಮೀರ್ ಫೈಲ್ಸ್’

    ಕೆಜಿಎಫ್ 2 ಸಿನಿಮಾದ ನಂತರ ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳು ಬಂದರೂ, ಗಲ್ಲಾ ಪೆಟ್ಟಿಗೆಯಲ್ಲಿ ಅಷ್ಟೇನೂ ಅವುಗಳು ಸದ್ದು ಮಾಡಲಿಲ್ಲ. ಹೀಗಾಗಿಯೇ ಅಜಯ್ ರಾವ್, ಸಾಧು ಕೋಕಿಲಾ ಸೇರಿದಂತೆ ಹಲವು ನಟರು ‘ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಬನ್ನಿ’ ಎಂದು ಕೈ ಮುಗಿದು ಕರೆದರು. ಆದರೂ, ಪ್ರೇಕ್ಷಕರು ಮಾತ್ರ ಕೆಜಿಎಫ್ 2 ಸಿನಿಮಾವನ್ನೇ ತಲೆಯೊಳಗೆ ಹಾಕಿಕೊಂಡು ಕೂತುಬಿಟ್ಟರು. ಇದನ್ನೂ ಓದಿ : ಯಶ್ ಆಸೆ ಈಡೇರಿಸುತ್ತಾರಾ ತಮಿಳಿನ ಖ್ಯಾತ ನಿರ್ದೇಶಕ ಶಂಕರ್

    ಈ ವಾರ ಕಂಡು ಕೇಳರಿಯದಷ್ಟು ಚಿತ್ರಗಳು ರಿಲೀಸ್ ಆಗುತ್ತಿವೆ. ಸಣ್ಣ ಬಜೆಟ್ ಸಿನಿಮಾಗಳಿಂದ ಹಿಡಿದು, ಮಧ್ಯಮ ಬಜೆಟ್ ವರೆಗಿನ ಚಿತ್ರಗಳು ರಿಲೀಸ್ ಆಗಿವೆ. ಹೊಸಬರ ಚಿತ್ರಗಳಿಂದ ಸ್ಟಾರ್ ನಟರ ಚಿತ್ರಗಳು ಈ ವಾರ ತೆರೆ ಕಂಡಿವೆ. ಆದರೂ, ಜನರು ಥಿಯೇಟರ್ ನತ್ತ ಸುಳಿದದ್ದು ಕಡಿಮೆ ಎನ್ನುವ ವರದಿಯಿದೆ. ಈ ನಡುವೆ ಮೂರ್ನಾಲ್ಕು ದಿನಗಳಿಂದ ಮಳೆಯೂ ಆಗುತ್ತಿದೆ. ಹಾಗಾಗಿ ಮಳೆ ಕಾಟವೂ ಜನರು ಬರದೇ ಇರುವುದಕ್ಕೆ ಕಾರಣವೂ ಆಗಿದೆ. ಇದನ್ನೂ ಓದಿ : ಪ್ರಾದೇಶಿಕ ಭಾಷಾ ಮಹತ್ವ ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತ ಪಡಿಸಿದ ಕಿಚ್ಚ ಸುದೀಪ್

    ಕೆಜಿಎಫ್ 2 ಚಿತ್ರಕ್ಕಾಗಿ ಸಣ್ಣ ಬಜೆಟ್ ಸಿನಿಮಾಗಳ ನಿರ್ಮಾಪಕರು ಕಾದರು. ಮುಂದೆ ಚಾರ್ಲಿ, ವಿಕ್ರಾಂತ್ ರೋಣ ರೀತಿಯ ಭಾರೀ ಬಜೆಟ್ ಮತ್ತು ಸ್ಟಾರ್ ಇರುವ ಸಿನಿಮಾಗಳು ತೆರೆ ಕಾಣಲಿವೆ. ಈ ನಡುವೆ ಸಣ್ಣ ಬಜೆಟ್ ಚಿತ್ರಗಳನ್ನು ರಿಲೀಸ್ ಮಾಡಿಕೊಳ್ಳೋಣ ಎಂದು ಹಲವು ನಿರ್ಮಾಪಕರು ಈ ಪ್ರಮಾಣದಲ್ಲಿ ಥಿಯೇಟರ್‌ಗೆ ನುಗ್ಗುತ್ತಿದ್ದಾರೆ. ಹಾಗಾಗಿ ವಾರಕ್ಕೆ ಹತ್ತತ್ತು ಸಿನಿಮಾಗಳನ್ನು ನೋಡುವಂತಹ ಅವಕಾಶ ಪ್ರೇಕ್ಷಕರಿಗೆ ಸಿಕ್ಕಿದೆ. ಆದರೆ, ಪ್ರೇಕ್ಷಕ ಮಾತ್ರ ಚಿತ್ರಮಂದಿರದಿಂದ ವಿಮುಖನಾಗಿದ್ದಾನೆ.

    ಒಳ್ಳೆಯ ಕಂಟೆಂಟ್ ಮತ್ತು ಹೊಸ ಬಗೆಯ ಚಿತ್ರಗಳು ಬಂದರೂ, ವಾರಪೂರ್ತಿ ಮಳೆಯಲ್ಲಿಯೇ ಬೆಂಗಳೂರು ಮುಳುಗಿ ಹೋಗಿದೆ. ರಸ್ತೆಗೆ ಕಾಲಿಡಲು ಜನರು ಭಯ ಪಡುವಂತಾಗಿದೆ. ಹಾಗಾಗಿ ಚಿತ್ರಮಂದಿರಗಳು ಖಾಲಿ ಹೊಡೆಯುತ್ತಿವೆ. ಹೆಚ್ಚಿನ ಸಂಖ್ಯೆಯಲ್ಲಿ ರಿಲೀಸ್ ಆದ ಚಿತ್ರಗಳು ಪ್ರೇಕ್ಷಕರ ಕೊರತೆಯನ್ನು ಎದುರಿಸುತ್ತಿವೆ.

  • ಮೇ 21ಕ್ಕೆ ಯುವರತ್ನ ಬಿಡುಗಡೆ- ನಿರ್ದೇಶಕ ಆನಂದರಾಮ್ ಸ್ಪಷ್ಟನೆ

    ಮೇ 21ಕ್ಕೆ ಯುವರತ್ನ ಬಿಡುಗಡೆ- ನಿರ್ದೇಶಕ ಆನಂದರಾಮ್ ಸ್ಪಷ್ಟನೆ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಯುವರತ್ನ ಸಿನಿಮಾ ಬಿಡುಗಡೆ ಕುರಿತು ಭಾರೀ ಕುತೂಹಲ ಮೂಡಿದ್ದು, ಅಭಿಮಾನಿಗಳು ಬಿಡುಗಡೆ ದಿನಾಂಕದ ಘೋಷಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಆದರೆ ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಸ್ಪಷ್ಟನೆ ನೀಡಿದ್ದಾರೆ.

    ಹಲವು ದಿನಗಳಿಂದ ಯುವರತ್ನ ಸಿನಿಮಾದ ಬಿಡುಗಡೆ ದಿನಾಂಕದ ಕುರಿತು ಹೆಚ್ಚು ಚರ್ಚೆ ನಡೆಯುತ್ತಿದೆ. ಇದರ ಮಧ್ಯೆಯೇ ಸಿನಿಮಾದ ನಿರ್ದೇಶಕ ಸಂತೋಶ್ ಆನಂದರಾಮ್ ಟ್ವೀಟ್ ಮೂಲಕ ಮಾಹಿತಿ ನೀಡಿ ಬಿಡುಗಡೆ ದಿನಾಂಕದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ ಎಂಬುದು ನಂತರ ತಿಳಿದಿದೆ. ನಂತರ ಸಂತೋಷ್ ಅವರು ಇದಕ್ಕೆ ಸ್ಪಷ್ಟನೆಯನ್ನು ಸಹ ನೀಡಿದ್ದಾರೆ. ಹೀಗಾಗಿ ಯುವರತ್ನ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ.

    ಸಿನಿಮಾ ಬಿಡುಗಡೆ ಕುರಿತು ಸಂತೋಷ್ ಆನಂದರಾಮ್ ಹೆಸರಿನಲ್ಲಿ ಟ್ವೀಟ್ ಮಾಡಲಾಗಿತ್ತು. ಯುವರತ್ನನಿಗಾಗಿ ಕಾಯುತ್ತಿರುವ ಎಲ್ಲ ಪವರ್ ಸ್ಟಾರ್ ಅಭಿಮಾನಿಗಳಿಗೆ ಬಿಗ್ ಸರ್‍ಪ್ರೈಸ್. ಬಹುನಿರೀಕ್ಷಿತ ಯುವರತ್ನ ಸಿನಿಮಾ ಮೇ 21ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಪವರ್ ಸ್ಟಾರ್ ಸ್ವಾಗತಿಸಲು ಸಜ್ಜಾಗಿ ಎಂದು ಟ್ವೀಟ್ ಮಾಡಿದ್ದರು. ಇದರಿಂದಾಗಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದರು. ಆದರೆ ಈ ಸುದ್ದಿ ಸುಳ್ಳು ಎಂಬುದು ನಂತರ ತಿಳಿದಿದೆ. ಸ್ವತಃ ಸಂತೋಷ್ ಆನಂದರಾಮ್ ಅವರೇ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

    ಇದು ತಪ್ಪು ಮಾಹಿತಿ ಇನ್ನೂ 2 ಹಾಡುಗಳ ಚಿತ್ರೀಕರಣವಿದೆ. ಅಲ್ಲದೆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಪಕ್ಕಾ ಮುಗಿದ ಮೇಲೆ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲಂಸ್ ತಿಳಿಸುತ್ತದೆ. ಯುವರತ್ನ ಬಿಗ್ಗೆಸ್ಟ್ ರಿಲೀಸ್ ಆಗಿದ್ದು, ಪಬ್ಲಿಸಿಟಿ, ಆಡಿಯೋ-ಟ್ರೈಲರ್ ರಿಲೀಸ್ ಎಲ್ಲದಕ್ಕೂ ಪ್ಲಾನ್ ಇದೆ. ಹೀಗಾಗಿ ದಿನಾಂಕ ನಿಗದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಮತ್ತೆ ಟ್ವೀಟ್ ಮಾಡಿದ್ದು, ಯುವರತ್ನ ಬಳಸಿಕೊಂಡು ಕೆಲವರು ಫೂಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾನು ಪ್ರತಿಕ್ರಿಯಿಸಿದೆ. ಯುವರತ್ನ ನಮ್ಮೆಲ್ಲರಿಗೂ ದೊಡ್ಡಮಟ್ಟದ್ದಾಗಿದೆ ಎಂದು ಮೂರನೇ ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಈ ಕುರಿತು ಹೊಂಬಾಳೆ ಫಿಲಂಸ್ ಆಗಲಿ ಅಥವಾ ಪುನೀತ್ ರಾಜ್‍ಕುಮಾರ್ ಆಗಲಿ ಮಾಹಿತಿ ಖಚಿತಪಡಿಸಿಲ್ಲ. ಕೊರೊನಾ ವಿರುದ್ಧದ ಹೋರಾಟದ ಭಾಗವಾಗಿ ಪುನೀತ್ ರಾಜ್‍ಕುಮಾರ್ ಸಹಾಯ ಹಸ್ತ ಚಾಚಿದ್ದು, ಇತ್ತೀಚೆಗಷ್ಟೇ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ.ಗಳ ಚೆಕ್ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನೀಡಿದ್ದರು.

    ಇತ್ತೀಚೆಗೆ ಪುನೀತ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಚಿತ್ರ ತಂಡ ಡೈಲಾಗ್ ಟೀಸರ್‍ನ್ನು ಉಡುಗೊರೆಯಾಗಿ ನೀಡಿತ್ತು. ಯುವರತ್ನ ಚಿತ್ರತಂಡ ಡೈಲಾಗ್ ಟೀಸರ್ ಬಿಡುಗಡೆ ಮಾಡಿದರೆ, ಜೇಮ್ಸ್ ಚಿತ್ರತಂಡ ಸಹ ಮೋಷನ್ ಪೋಸ್ಟರ್ ರಿಲೀಸ್ ಮಾಡಿತ್ತು. ಯುವರತ್ನದ ಡೈಲಾಗ್ ಟೀಸರ್ ಯುವ ಸಮೂಹವನ್ನು ಸೆಳೆದಿತ್ತು. ಹೀಗಾಗಿ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಕೊಂಡಿದೆ.