Tag: cinema shooting

  • ವಿದೇಶಕ್ಕೆ ಹಾರಲು ರೆಡಿಯಾದ ದರ್ಶನ್

    ವಿದೇಶಕ್ಕೆ ಹಾರಲು ರೆಡಿಯಾದ ದರ್ಶನ್

    ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಜೈಲಿನಿಂದ ರಿಲೀಸ್‌ ಆದ ಬಳಿಕವೂ ವಿದೇಶಕ್ಕೆ ತೆರಳದಂತೆ ಕೋರ್ಟ್ ನಟ ದರ್ಶನ್‌ಗೆ (Darshan) ಷರತ್ತು ವಿಧಿಸಿತ್ತು. ಪಾಸ್ ಪೋರ್ಟ್ ಕೂಡ ಮುಟ್ಟುಗೋಲು ಹಾಕಿಕೊಂಡಿತ್ತು. ಜಾಮೀನು ಸಿಕ್ಕು ಜೈಲಿನಿಂದ ಬಂದ ನಂತರ, ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳು ಅನುಮತಿ ಕೇಳಿದ್ದರು ನಟ ದರ್ಶನ್. ಅವರಿಗೆ ಈಗ ಅನುಮತಿ ಸಿಕ್ಕಿದೆ. ಹಾಗಾಗಿ ಸದ್ಯದಲ್ಲೇ ವಿದೇಶ ವಿಮಾನ ಏರಲು ಸಜ್ಜಾಗಿದ್ದಾರೆ ದರ್ಶನ್.

    ದರ್ಶನ್ ನಟನೆಯ ಡೆವಿಲ್ (The Devil) ಸಿನಿಮಾದ ಚಿತ್ರೀಕರಣ ಸದ್ಯ ಬೆಂಗಳೂರಿನಲ್ಲಿ (Bengaluru) ನಡೆಯುತ್ತಿದೆ. ಸಾಹಸ ಸನ್ನಿವೇಶಗಳನ್ನು ನಿರ್ದೇಶಕರು ಸೆರೆ ಹಿಡಿಯುತ್ತಿದ್ದಾರೆ. ಈ ವಾರದಲ್ಲಿ ಬಹುತೇಕ ಸಾಹಸ ಸನ್ನಿವೇಶಗಳ ಶೂಟಿಂಗ್ ಮುಗಿಯಲಿದೆಯಂತೆ. ಚಿತ್ರೀಕರಣ ಮುಗಿಯುತ್ತಿದ್ದಂತೆಯೇ ಇಡೀ ಟೀಮ್ ವಿದೇಶಕ್ಕೆ ಹಾರಲಿದೆ. ವಿದೇಶದಲ್ಲಿ ಹಾಡಿನ ಶೂಟಿಂಗ್ ಗೆ ಪ್ಲ್ಯಾನ್ ಮಾಡಿದ್ದಾರಂತೆ ನಿರ್ದೇಶಕ ಪ್ರಕಾಶ್.

    ಜುಲೈ 1 ರಿಂದ ಜುಲೈ 28ರ ವರೆಗೂ ದರ್ಶನ್ ಅವರಿಗೆ ಕೋರ್ಟ್ ನಿಂದ ವಿದೇಶಕ್ಕೆ ಹೋಗಲು ಅನುಮತಿ ಸಿಕ್ಕಿದೆ. ಹಾಗಾಗಿ ಜುಲೈ ಮೊದಲ ವಾರದಲ್ಲೇ ಅವರು ವಿದೇಶಕ್ಕೆ ಹಾರಲಿದ್ದಾರೆ ಎನ್ನುವ ಮಾಹಿತಿ ಇದೆ. ಹಾಡಿನ ಚಿತ್ರೀಕರಣಕ್ಕೆ ಪ್ಲ್ಯಾನ್ ಆಗಿದ್ದು, ಟಿಕೆಟ್ ಕೂಡ ಬುಕ್ ಆಗಿದೆ ಅಂತಾರೆ ಸಿನಿಮಾ ಟೀಮ್‌ನ ಸದಸ್ಯರು.

  • ಬೆಂಗಳೂರಿಗೆ ಬಂದಿಳಿದ ಸಂಜಯ್‌ ದತ್

    ಬೆಂಗಳೂರಿಗೆ ಬಂದಿಳಿದ ಸಂಜಯ್‌ ದತ್

     

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಂದೊಂದು, ಹಿಂದೊಂದು ನಂಬರ್ – ನಕಲಿ ಪೊಲೀಸ್ ವ್ಯಾನ್ ಕಂಡು ತಬ್ಬಿಬ್ಬಾದ ಜನ

    ಮುಂದೊಂದು, ಹಿಂದೊಂದು ನಂಬರ್ – ನಕಲಿ ಪೊಲೀಸ್ ವ್ಯಾನ್ ಕಂಡು ತಬ್ಬಿಬ್ಬಾದ ಜನ

    ಗದಗ: ನಗರದಲ್ಲಿ ನಕಲಿ ಪೊಲೀಸ್ ವಾಹನ ಓಡಾಟ ಕಂಡು ಗದಗ-ಬೆಟಗೇರಿ ಅವಳಿ ನಗರದ ಜನರು ಗೊಂದಲಕ್ಕೀಡಾದ ಘಟನೆ ನಡೆದಿದೆ. ನಗರದ ಪಂಡಿತ್ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣ ರಸ್ತೆಯಲ್ಲಿ ನಕಲಿ ಪೊಲೀಸ್ ವಾಹನ ನಿಂತಿದೆ.

    ಈ ಬೊಲೆರೊ ವಾಹನಕ್ಕೆ ಮುಂದೊಂದು ನಂಬರ್, ಹಿಂದೊಂದು ಎರಡೆರಡು ನಂಬರ್ ಪ್ಲೇಟ್ ಇರುವುದನ್ನು ಅನೇಕರು ಗಮನಿಸಿದ್ದಾರೆ. ನೋಡಿದ ಜನರಿಗೆ ಕೆಲಕಾಲ ಗೊಂದಲ ಸೃಷ್ಟಿಯಾಗಿದೆ. ವಾಹನಕ್ಕೆ ಎರಡು ನಂಬರ್ ಇರಲ್ವಲ್ಲಾ, ಏನಿದು ಅಂತ ತಲೆಕೆಡಿಸಿಕೊಂಡಿದ್ದಾರೆ. ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ:ಬೆಕ್ಕಿಗಾಗಿಯೇ ಎಸಿ ರೂಮ್, ಮಿನಿ ಥಿಯೇಟರ್ ನಿರ್ಮಾಣ – ಗುಜರಾತಿನಲ್ಲೊಬ್ಬ ಕ್ಯಾಟ್ ಪ್ರಿಯ

    ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದರು. ಆಗ ಪೊಲೀಸ್ ಸಿಬ್ಬಂದಿ ಒಂದು ಕ್ಷಣ ಕಂಗಾಲಾಗಿದ್ದರು. ಪರಿಶೀಲಿಸಿದಾಗ ವಾಸ್ತವಿಕತೆ ಬಯಲಾಗಿದೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ “ಕ್ಷೇತ್ರಪತಿ” ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಈ ಬೊಲೆರೋ ವಾಹನ ಬಳಸಲಾಗಿತ್ತು ಎಂದು ತಿಳಿದು ಬಂದಿದೆ. ಪರವಾನಿಗೆ ಪತ್ರ ನೋಡಿ ನಂತರ ಶೂಟಿಂಗ್ ಸ್ಥಳ ಬಿಟ್ಟು ಎಲ್ಲಂದರಲ್ಲಿ ಓಡಾಡದಂತೆ ವಾಹನ ಚಾಲಕನಿಗೆ ವಾರ್ನ್ ಮಾಡಿ ಬಿಟ್ಟು ಕಳುಹಿಸಿದ್ದಾರೆ. ಇದನ್ನೂ ಓದಿ:ವಿಕೇಂಡ್ ಕರ್ಫ್ಯೂ – ಕೊಡಗಿನಲ್ಲಿ ಉತ್ತಮ ಸ್ಪಂದನೆ, ಬೀದರ್ ನಲ್ಲಿ ಡೋಂಟ್ ಕೇರ್

  • ನಿಜವಾದ ದರೋಡೆಕೋರ ಅಂದ್ಕೊಂಡು ಶೂಟಿಂಗ್ ಮಾಡ್ತಿದ್ದ ನಟನ ಮೇಲೆ ಫೈರಿಂಗ್ ಮಾಡಿದ ಪೊಲೀಸ್

    ನಿಜವಾದ ದರೋಡೆಕೋರ ಅಂದ್ಕೊಂಡು ಶೂಟಿಂಗ್ ಮಾಡ್ತಿದ್ದ ನಟನ ಮೇಲೆ ಫೈರಿಂಗ್ ಮಾಡಿದ ಪೊಲೀಸ್

    ವಾಷಿಂಗ್ಟನ್: ಸಿನಿಮಾಗಾಗಿ ದರೋಡೆಕೋರನಂತೆ ನಟಿಸುತ್ತಿದ್ದ ನಟನನ್ನು ನಿಜವಾದ ದರೋಡೆಕೋರ ಎಂದು ತಿಳಿದು ಪೊಲೀಸರು ಅವರ ಮೇಲೆ ಫೈರಿಂಗ್ ಮಾಡಿರೋ ಘಟನೆ ಅಮೆರಿಕದಲ್ಲಿ ನಡೆದಿದೆ.

    ಇಂಡಿಯಾನಾದ ಕ್ರಾವ್‍ಫರ್ಡ್ಸ್ ವಿಲ್ಲೆ ಪೊಲೀಸರು ಬಾಡಿಕ್ಯಾಮ್ ವಿಡಿಯೋವನ್ನ ಬಿಡುಗಡೆ ಮಾಡಿದ್ದು, ಪೊಲೀಸ್ ಅಧಿಕಾರಿಯೊಬ್ಬರು ನಟನ ಮೇಲೆ ಗುಂಡು ಹಾರಿಸೋ ದೃಶ್ಯ ಸೆರೆಯಾಗಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಮುಸುಕುಧಾರಿ ವ್ಯಕ್ತಿ ಗನ್ ಹಿಡಿದು ಉಪಹಾರ ಗೃಹದೊಳಗೆ ಹೋಗುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದಿದ್ರು ಎಂದು ಇಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.

    ಪೊಲೀಸರು ಸ್ಥಳಕ್ಕೆ ಬಂದ ವೇಳೆ ಶೂಟಿಂಗನ್ನು ನಿಜವಾದ ದರೋಡೆ ಎಂದು ತಿಳಿದು ಗನ್ ಕಳೆಗಿಡುವಂತೆ ಹೇಳಿದ್ದಾರೆ. ಬಳಿಕ ಅದೊಂದು ಶೂಟಿಂಗ್ ಪ್ರಾಪರ್ಟಿ ಅಷ್ಟೇ ಎಂಬುದು ಗೊತ್ತಾಗಿದೆ.

    ಡ್ರಾಪ್ ದಿ ಗನ್ ಎಂದು ಹೇಳುತ್ತಾ ಪೊಲೀಸ್ ಅಧಿಕಾರಿ ಫೈರ್ ಮಾಡೋದನ್ನ ವಿಡಿಯೋದಲ್ಲಿ ಕಾಣಬಹುದು. ಆಗ ನಟ ಜೆಫ್ ಡಫ್ ನಾವು ಸಿನಿಮಾ ಶೂಟಿಂಗ್ ಮಾಡ್ತಿದ್ದೀವಿ ಎಂದು ಕಿರುಚುತ್ತಾ ಗನ್ ಕೆಳಗಿಟ್ಟು ಮುಸುಕು ತೆಗೆದಿದ್ದಾರೆ. ಅದೃಷ್ಟವಶಾತ್ ಪೊಲೀಸರು ಹಾರಿಸಿದ ಗುಂಡು ಡಫ್‍ಗೆ ತಗುಲಲಿಲ್ಲ. ಬದಲಿಗೆ ಹತ್ತಿರದ ಕಟ್ಟಡಕ್ಕೆ ಬಿದ್ದಿದೆ. ಪೊಲೀಸ್ ಇಲಾಖೆ ಈ ವಿಡಿಯೋವನ್ನ ತನ್ನ ವೆಬ್‍ಸೈಟ್‍ನಲ್ಲಿ ಬಿಡುಗಡೆ ಮಾಡಿದೆ.

    ಈ ಬಗ್ಗೆ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರೋ ಮತ್ತೊಬ್ಬ ನಟ ಫಿಲಿಪ್ ಡೆಮೊರೆಟ್, ಬುಲೆಟ್ ಆತನ ತಲೆಯ ಪಕ್ಕದಲ್ಲೇ ಹೋಯ್ತು. ಅದರ ಬಗ್ಗೆ ನಾನು ಯೋಚಿಸಲಾರೆ. ಒಂದು ವೇಳೆ ಗುಂಡು ತಾಗಿದ್ದರೆ ದೊಡ್ಡ ಅನಾಹುತವಾಗ್ತಿತ್ತು. ದೇವರ ದಯದಿಂದ ಹಾಗಾಗಲಿಲ್ಲ ಎಂದಿದ್ದಾರೆ.

    ಮಾಂಟ್ಗೊಮೆರಿ ಕೌಂಟಿ ಪ್ರೊಡಕ್ಷನ್‍ನವರು ಸಿನಿಮಾ ಶೂಟಿಂಗ್ ಮಾಡುತ್ತಿದ್ದರೆಂದು ಬಳಿಕ ಇಂಡಿಯಾನಾ ಪೊಲೀಸರಿಗೆ ಗೊತ್ತಾಗಿದೆ. ಆದ್ರೆ ಉಪಹಾರ ಗೃಹದವರಾಗಲಿ, ಪ್ರೊಡಕ್ಷನ್ ಕಂಪನಿಯವರಗಲೀ ಪೊಲೀಸರಿಗೆ ಹಾಗೂ ಅಕ್ಕಪಕ್ಕದವರಿಗೆ ಶೂಟಿಂಗ್ ನಡೆಯುವ ಬಗ್ಗೆ ತಿಳಿಸಿರಲಿಲ್ಲ ಎಂದು ವರದಿಯಾಗಿದೆ.

  • ಮಕ್ಕಳಿಗೆ ಪಾಠ ಮಾಡೋದು ಬಿಟ್ಟು ಶೂಟಿಂಗ್ ನೋಡಲು ಹೋದ ಶಿಕ್ಷಕರು

    ಮಕ್ಕಳಿಗೆ ಪಾಠ ಮಾಡೋದು ಬಿಟ್ಟು ಶೂಟಿಂಗ್ ನೋಡಲು ಹೋದ ಶಿಕ್ಷಕರು

    ವಿಜಯಪುರ: ಮಕ್ಕಳಿಗೆ ಪಾಠ ಮಾಡದೆ ಸಿನಿಮಾ ಶೂಟಿಂಗ್ ನೋಡಲು ತೆರಳಿದ ಬೇಜವಬ್ದಾರಿ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಕ್ಲಾಸಿನಲ್ಲಿ ಕುಳ್ಳಿರಿಸಿ, ಶಿಕ್ಷಕರು ತೆಲುಗಿನ `ರಾಮಾ ರಾಮಾ ರೇ’ ಚಿತ್ರದ ಶೂಟಿಂಗ್ ವೀಕ್ಷಿಸಲು ತೆರಳಿದ್ದಾರೆ.

    6 ಜನ ಶಿಕ್ಷಕರ ಪೈಕಿ, 5 ಜನ ಶಿಕ್ಷಕರು ಸಿನಿಮಾ ಶೂಟಿಂಗ್ ನೋಡಲು ತೆರಳಿದ್ದಾರೆ. ಇದರಿಂದ ಕೋಪಗೊಂಡ ಪೋಷಕರು ಕೊಟ್ನಾಳ ಗ್ರಾಮದ ಸರ್ಕಾರಿ ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐದು ಜನ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುಬೇಕು ಹಾಗೂ ಡಿಡಿಪಿಐ ಸ್ಥಳಕ್ಕೆ ಆಗಮಿಸಬೇಕು ಎಂದು ಪೋಷಕರು ಒತ್ತಾಯ ಮಾಡಿದ್ದಾರೆ.