Tag: cinema

  • ಸಿನಿಮಾ ನಿರ್ಮಾಣದತ್ತ ಹೆಜ್ಜೆ ಇಟ್ಟ ಪ್ರಜ್ವಲ್ ದೇವರಾಜ್

    ಸಿನಿಮಾ ನಿರ್ಮಾಣದತ್ತ ಹೆಜ್ಜೆ ಇಟ್ಟ ಪ್ರಜ್ವಲ್ ದೇವರಾಜ್

    ನ್ನಡ ಪ್ರೇಕ್ಷಕರಿಗೆ ಸದಭಿರುಚಿಯ ಸಿನಿಮಾಗಳ ಮೂಲಕ ಉತ್ತಮ ಮನರಂಜನೆ ನೀಡುವ ಉದ್ದೇಶದಿಂದ ಪ್ರಾರಂಭವಾದ ಸಂಸ್ಥೆ ಪುರಾತನ ಫಿಲಂಸ್. ಈಗಾಗಲೇ ಸನ್ ಆಫ್ ಮುತ್ತಣ್ಣ (Son of Muthanna) ಎಂಬ ಭಾವನಾತ್ಮಕ ಕಥೆಯ ಚಿತ್ರ ನಿರ್ಮಿಸಿ ತೆರೆಗೆ ತರುತ್ತಿರುವ ಪುರಾತನ ಫಿಲಂಸ್ ಮುಂದಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ (Prajwal Devraj) ಅವರ ಜೊತೆಗೂಡಿ ಅತ್ಯುತ್ತಮ ತಾಂತ್ರಿಕತೆಯ ಹಾಗೂ ಸದಭಿರುಚಿಯ ಸಿನಿಮಾಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

    ಪುರಾತನ ಫಿಲಂಸ್ ಹಾಗೂ ಪ್ರಜ್ವಲ್ ದೇವರಾಜ್ ಸೇರಿ “P2 ಪ್ರೊಡಕ್ಷನ್ಸ್” ಎಂಬ ನೂತನ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಇದರ ಮೂಲಕ ಪ್ರತಿಭಾವಂತ ಕಲಾವಿದರು, ತಂತ್ರಜ್ಞರು ಮತ್ತು ಒಳ್ಳೆಯ ಕಥೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಲಿದೆ. ಈಗಾಗಲೇ ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ನಿಟ್ಟಿನಲ್ಲಿ ಕೆಲವು ಕೆಲಸಗಳನ್ನು ಮಾಡುತ್ತಿದೆ. ಇದನ್ನೂ ಓದಿ: ಮಲ್ಲಿಗೆ ಮುಡಿದ ನಟಿ ನವ್ಯಾಗೆ ಆಸ್ಟ್ರೇಲಿಯಾದಲ್ಲಿ 1 ಲಕ್ಷ ದಂಡ

    ಇದುವರೆಗೆ ಲವರ್ ಬಾಯ್, ಆಕ್ಷನ್ ಹೀರೋ ಹೀಗೆ ಎಲ್ಲಾ ತರಹದ ಪಾತ್ರಗಳನ್ನ ನಿರ್ವಹಿಸುವ ಮೂಲಕ ಗುರುತಿಸಿಕೊಂಡ ನಟ ಪ್ರಜ್ವಲ್ ದೇವರಾಜ್ ಇದೀಗ ಚಲನಚಿತ್ರ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದು, ದೊಡ್ಡ ಸಂಸ್ಥೆಯ ಜತೆ ಕೈಜೋಡಿಸಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಮಾಡುವ ಪ್ಲ್ಯಾನ್ ಮಾಡಿದ್ದಾರೆ.

  • ಭುವನ್ ಪೊನ್ನಣ್ಣ ರೀ ಎಂಟ್ರಿಗೆ ಯೋಗರಾಜ್ ಭಟ್ ಸಾಥ್

    ಭುವನ್ ಪೊನ್ನಣ್ಣ ರೀ ಎಂಟ್ರಿಗೆ ಯೋಗರಾಜ್ ಭಟ್ ಸಾಥ್

    ರಾಂಧವ ಸಿನಿಮಾ ಮೂಲಕ ಉದ್ಯಮದಲ್ಲಿ ದೊಡ್ಡದಾಗಿ ನಿಲ್ಲೋ ಭರವಸೆ ಹುಟ್ಟಿಸಿದ್ದ ನಟ ಭುವನ್ ಪೊನ್ನಣ್ಣ (Bhuvan Ponnanna) ಈ ಸಲ ಗೆದ್ದೇ ಗೆಲ್ಲೋ ಭರವಸೆಯೊಂದಿಗೆ, ಸ್ಟಾರ್ ಡೈರೆಕ್ಟರ್ ಯೋಗರಾಜ್ ಭಟ್ (Yogaraj Bhat) ರೊಂದಿಗೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

    ಹಲೋ 123 (Hello 123) ಅನ್ನೋ ವಿಶೇಷ ಕಥೆಯ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ ಭುವನ್. ಯೋಗರಾಜ್ ಭಟ್ ಸಾಥ್ ಕೊಟ್ಟಿದ್ದಾರೆ. ಹೀಗಾಗಿ ಹೊಸ ಭುವನ್ ಕಾಣಿಸ್ಕೊಳ್ಳೋದ್ರಲ್ಲಿ ಅನುಮಾನವಿಲ್ಲ. ಹರಿಕೃಷ್ಣ ಈ ಮ್ಯೂಸಿಕ್ ಜೊತೆ ವಿನೂತನ ಕಥೆಯೊಂದನ್ನ ಭುವನ್ ಮೂಲಕ ಹೇಳಲು ಯೋಗರಾಜ್ ಭಟ್ ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ `ಹಲೋ 123′ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದ ಅಧಿಕೃತ ಸ್ಕ್ರಿಪ್ಟ್ ಪೂಜೆ ಹಾಗೂ ಶೀರ್ಷಿಕೆ ಅನಾವರಣಗೊಂಡಿದ್ದು ಭುವನ್ ಹಾಗೂ ಹರ್ಷಿಕಾ ಪೂಣಚ್ಚ ಪುತ್ರಿ ತ್ರಿದೇವಿಯ ಅಮೃತ ಹಸ್ತದಿಂದ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ: ಸೈಮಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ: ದುನಿಯಾ ವಿಜಯ್ ಕೆಂಡಾಮಂಡಲ

    ತಮ್ಮ ನಿವಾಸದ ದೇವರ ಮನೆಯಲ್ಲಿ ಚಿತ್ರದ ನಿರ್ಮಾಪಕ ವಿಜಯ್ ತಾತಾ ಚಿತ್ರತಂಡಕ್ಕೆ ಅಡ್ವಾನ್ಸ್ ಹಣ ನೀಡಿದ್ದಾರೆ. ಚಿತ್ರೀಕರಣ ಪ್ರಾರಂಭವಾಗಲಿದ್ದು ಎಲ್ಲಾ ಅಂದುಕೊಂಡಂತೆ ಆದ್ರೆ `ಹಲೋ 123′ ಮುಂದಿನ ವರ್ಷ ಮಾರ್ಚ್ ವೇಳೆಗೆ ರಿಲೀಸ್ ಆಗಲಿದೆ. ಇದನ್ನೂ ಓದಿ: ಶ್ರೀಧರ್ ಸಂಭ್ರಮ್ ಸಂಗೀತದ `ಲೈಫ್ ಟು ಡೇ’ ಹಾಡಿಗೆ ಜೋಗಿ ಪ್ರೇಮ್ ಕಂಠದಾನ

  • ಸೈಮಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ: ದುನಿಯಾ ವಿಜಯ್ ಕೆಂಡಾಮಂಡಲ

    ಸೈಮಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ: ದುನಿಯಾ ವಿಜಯ್ ಕೆಂಡಾಮಂಡಲ

    ದುಬೈನಲ್ಲಿ (Dubai) ನಡೆದ 2024ರ ಸಾಲಿನ ಸೈಮಾ ಪ್ರಶಸ್ತಿ (SIIMA 2025 Award) ವಿತರಣಾ ಸಮಾರಂಭದ ವೇದಿಕೆಯಲ್ಲೇ ಕನ್ನಡಿಗರಿಗೆ (Kannadigas) ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ (Duniya Vijay) ಸಿಟ್ಟು ಹೊರಹಾಕಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಸೌತ್‌ ಇಂಡಸ್ಟ್ರಿಯ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಆದರೆ ಈ ಕಾರ್ಯಕ್ರಮದಲ್ಲಿಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ಭೀಮಾ ಸಿನಿಮಾಗೆ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ. ಇದನ್ನೂ ಓದಿ:  60 ಕೋಟಿ ವಂಚನೆ ಕೇಸ್; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

    ಮುಂದುವರೆದು ಇದೇ ರೀತಿ ಪುನರಾವರ್ತನೆ ಮಾಡಿದರೆ ನಾವ್ಯಾರು ಈ ಕಾರ್ಯಕ್ರಮಕ್ಕೆ ಬರುವುದಿಲ್ಲ ಎನ್ನುವ ಖಡಕ್ ಸಂದೇಶವನ್ನ ರವಾನಿಸಿದ್ದಾರೆ. ಇದನ್ನೂ ಓದಿ:  ಹಿಂದೆ ಜಾಗ ಮಾರಾಟ ಮಾಡಿದಾಗ ಉಲ್ಲಂಘನೆಯಾಗಿರಲಿಲ್ಲ, ಈಗ ಹೇಗೆ ನಿಯಮ ಉಲ್ಲಂಘನೆಯಾಗುತ್ತೆ – ಬಾಲಣ್ಣನ ಪುತ್ರಿ ಸವಾಲು

    ಪ್ರತಿ ಬಾರಿ ಕನ್ನಡವನ್ನ ಕೆಳಗಿಳಿಸಲಾಗುತ್ತದೆ. ಬೇರೆ ಭಾಷೆಯ ಯಾವ ಸ್ಟಾರ್‌ ಇಲ್ಲದಿದ್ದಾಗ ನಮ್ಮನ್ನ ವೇದಿಕೆಗೆ ಕರೆಯುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ದುನಿಯಾ ವಿಜಯ್ ಕನ್ನಡಪರ ಗಟ್ಟಿಧ್ವನಿಗೆ ದುಬೈ ಕನ್ನಡಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ದುನಿಯಾ ವಿಜಯ್ ನಂತರ ಕಿಚ್ಚ ಸುದೀಪ್‌ಗೆ (Sudeep) ಪ್ರಶಸ್ತಿ ನೀಡಿದ ಸಂದರ್ಭದಲ್ಲಿ ಅಲ್ಲಿ ದೊಡ್ಡ ಸ್ಟಾರ್‌ಗಳು ಇರಲಿಲ್ಲ. ಸುದೀಪ್ ಪರವಾಗಿ ವಿ.ನಾಗೇಂದ್ರ ಪ್ರಸಾದ್ ಪ್ರಶಸ್ತಿ ಸ್ವೀಕರಿಸಿದಾಗಲೂ ಕಡಿಮೆ ಸಂಖ್ಯೆಯ ಪ್ರೇಕ್ಷಕರಿದ್ದರು.

  • ನಮ್ಮನೆ ಅವ್ರ ಮನೆ ಒಂದೇ, ನಾವೆಲ್ಲ ಒಂದೇ ಕುಟುಂಬದವರು: ಯಶ್‌ ತಾಯಿ ಪುಷ್ಪ ಅರುಣ್‌ಕುಮಾರ್

    ನಮ್ಮನೆ ಅವ್ರ ಮನೆ ಒಂದೇ, ನಾವೆಲ್ಲ ಒಂದೇ ಕುಟುಂಬದವರು: ಯಶ್‌ ತಾಯಿ ಪುಷ್ಪ ಅರುಣ್‌ಕುಮಾರ್

    ದೀಪಿಕಾ ದಾಸ್ (Deepika Das) ಬಗ್ಗೆ ನಾನು ಮಾತಾಡಿದ್ದು ನಿಜ. ಆದ್ರೆ ಆ ಬಗ್ಗೆ ಈಗ ನಾನು ಈಗ ಪ್ರತಿಕ್ರಿಯೆ ನೀಡಲ್ಲ. ಅದೆಲ್ಲದಕ್ಕೂ ನಾನು ಕೊಡುವ ಉತ್ತರ ಇಷ್ಟೇ ಎಂದು ಯಶ್‌ (Yash) ತಾಯಿ ಪುಷ್ಪ ಅರುಣ್‌ ಕುಮಾರ್‌ (Pushpa Arunkumar) ಹೇಳಿದ್ದಾರೆ.

    ಯಶ್ ತಾಯಿ ಪುಷ್ಪ ಅರುಣ್‌ಕುಮಾರ್ ನಿರ್ಮಾಪಕಿಯಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇದೀಗ ತೆಲುಗು ಸಿನಿಮಾವನ್ನು ಕನ್ನಡಕ್ಕೆ ವಿತರಣೆ ಮಾಡುವ ಮೂಲಕ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ. ಈ ವೇಳೆ ಪುಷ್ಪಮ್ಮ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ದೀಪಿಕಾ ದಾಸ್ ಬಗ್ಗೆ ವೈರಲ್ ಆದ ವಿಡಿಯೋ ಬಗ್ಗೆ ಹಾಗೂ ಅದಕ್ಕೆ ದೀಪಿಕಾ ದಾಸ್ ಪ್ರತಿಕ್ರಿಯೆ ಕೊಟ್ಟ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ನಾನು ಯಾವುದೇ ಪ್ರತಕ್ರಿಯೆ ನೀಡುವುದಿಲ್ಲ. ನಾವು ಅವರು ಬೇರೆ ಬೇರೆ ಅಲ್ಲ ಒಂದೇ ಕುಟುಂಬದವರು. ನಾವೆಲ್ಲ ಒಂದೇ ಕಡೆ ಇರ್ತಿವಿ. ಈ ವಿಷಯ ಜಾಲತಾಣದಲ್ಲಿ ವೈರಲ್ ಆದ ಮೇಲೆ ನನ್ನ ಮಗ ಯಶ್ ಈ ವಿಚಾರವಾಗಿ ನಮ್ಮ ಬಳಿ ಏನೂ ಮಾತಾಡಿಲ್ಲ. ಯಶ್ ಆಗಲಿ ಮತ್ತೊಬ್ಬರಾಗಲಿ ನನ್ನ ಕೇಳುವಷ್ಟು ಇಲ್ಲ. ನಾನು ಯಾವ ಕಾರಣಕ್ಕೆ ಮಾತ್ನಾಡಿದ್ದೇನೆ ಅನ್ನೋದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜೂ.ಎನ್‌ಟಿಆರ್‌ಗಾಗಿ ಸಿದ್ಧಸೂತ್ರ ಮುರಿಯಲು ಸಜ್ಜಾದ ಪ್ರಶಾಂತ್ ನೀಲ್

     

    ಸದ್ಯ ತಮ್ಮ ಕೊತ್ತಲವಾಡಿ ಸಿನಿಮಾದ ವೇಳೆ ಎದುರಾದ ಸಮಸ್ಯೆಗಳನ್ನುಅರಿತುಕೊಂಡು ಸಿನಿಮಾ ತರಣೆಗೂ ಧುಮುಕಿದ್ದಾರೆ. ಮುಂದಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳನ್ನ ವಿತರಣೆ ಮಾಡುವ ಪ್ಲ್ಯಾನ್‌ ಹೊಂದಿರುವ ಪುಷ್ಪ ಅರುಣ್‌ಕುಮಾರ್ ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಯ ಸಿನಿಮಾಗಳನ್ನು ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ.

    PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪಾ ಕಂಬೈನ್ಸ್ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ (Anushka Shetty) ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಘಾಟಿ (Ghaati) ಚಿತ್ರವನ್ನು ಪುಷ್ಪ ಅರುಣ್ ಕುಮಾರ್ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 5 ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.

  • Kanchana 4 | ದೆವ್ವವಾಗಿ ಕಾಡಲಿದ್ದಾರೆ ರಶ್ಮಿಕಾ!

    Kanchana 4 | ದೆವ್ವವಾಗಿ ಕಾಡಲಿದ್ದಾರೆ ರಶ್ಮಿಕಾ!

    ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಬಿಡುವಿಲ್ಲದ ನಟಿಯಾಗಿ ಹೊರಹೊಮ್ಮಿದ್ದಾರೆ. ಸ್ಟಾರ್ ಸಿನಿಮಾಗಳ ನಾಯಕಿಯಾಗುವುದರ ಜೊತೆ ಜೊತೆಗೆ ನಾಯಕಿ ಪ್ರಧಾನ ಸಿನಿಮಾಗಳಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಗರ್ಲ್‍ಫ್ರೆಂಡ್, ಮೈಸಾ, ಥಮಾ ಸಿನಿಮಾಗಳ ಚಿತ್ರೀಕರಣದಲ್ಲಿ ರಶ್ಮಿಕಾ ಬ್ಯುಸಿ ಇರುವ ಹೊತ್ತಿಗೇ ಮತ್ತೊಂದು ಬಿಗ್ ಪ್ರಾಜೆಕ್ಟ್ ಬಾಚಿಕೊಂಡ ಸುದ್ದಿ ಬಂದಿದೆ. ಅದುವೇ  (Kanchana 4) `ಕಾಂಚನ 4′.

    ದಕ್ಷಿಣ ಭಾರತದಲ್ಲಿ ಕಾಂಚನ ಸಿರೀಸ್ ಒಂದು ದಾಖಲೆ ಬರೆದ ಚಿತ್ರ ಸರಣಿ. ಪ್ರತಿ ಸರಣಿಯಲ್ಲೂ ರಾಘವ ಲಾರೆನ್ಸ್ ಕುತೂಹಲದ ಕಥೆ ಕಟ್ಟಿಕೊಡುವಲ್ಲಿ ಗೆದ್ದಿದ್ದಾರೆ. ಈ ಸಲದ ಕಾಂಚನ ಸಿರೀಸ್‍ನ ನಾಯಕಿಯ ಆಫರ್ ರಶ್ಮಿಕಾಗೆ ಹೋಗಿದೆ ಎನ್ನಲಾಗುತ್ತಿದೆ. ರಶ್ಮಿಕಾ ಇಲ್ಲಿ ದೆವ್ವದ ಪಾತ್ರ ಮಾಡಲಿದ್ದಾರಂತೆ. ಇದನ್ನೂ ಓದಿ: ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್

    ಗ್ಲ್ಯಾಮರ್, ಪರ್ಫಾಮೆನ್ಸ್ ಎಲ್ಲದಕ್ಕೂ ಸೈ ಎನ್ನುವ ರಶ್ಮಿಕಾ ದಕ್ಷಿಣ ಭಾರತದ ಚಿತ್ರಕರ್ಮಿಗಳ ಆಯ್ಕೆಯ ಲಿಸ್ಟ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಘೋಷಣೆಯಾಗಿರುವ ಚಿತ್ರಗಳು ಮೂರೇ ಆಗಿದ್ದರೂ ರಶ್ಮಿಕಾ ಕೈಯಲ್ಲಿ ಹತ್ತಾರು ಪ್ರಾಜೆಕ್ಟ್‌ಗಳಿವೆ. ಅದೆಲ್ಲವೂ ಕಾಲ ಬಂದಾಗ ಘೋಷಣೆಯಾಗುತ್ತೆ.

    ಶೀಘ್ರದಲ್ಲೇ ಕಾಂಚನ 4 ಚಿತ್ರದ ಘೋಷಣೆ ಆಗಲಿದ್ದು ಇಲ್ಲಿ ರಶ್ಮಿಕಾ ಪ್ರಧಾನ ನಾಯಕಿಯಾಗಿ ಅಭಿನಯಿಸಲಿದ್ದಾರಂತೆ. ಹಾರರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗ್ಲೇ ರಿಲೀಸ್ ಆಗಿರುವ ರಶ್ಮಿಕಾ ಅಭಿನಯಿಸಿರುವ ಥಮಾ ಸಿನಿಮಾದ ಪೋಸ್ಟರ್ ಪ್ರಕಾರ ನೋಡೋದಾದ್ರೆ ಹಾರರ್ ಶೈಲಿಯಲ್ಲೇ ಕಾಣಿಸುತ್ತದೆ. ಮೈಸಾದಲ್ಲೂ ಅಗ್ರೆಸ್ಸಿವ್ ಪಾತ್ರ ಪೋಷಿಸಿದ್ದು ಮತ್ತೊಮ್ಮೆ ರಶ್ಮಿಕಾ ಅಂಥದ್ದೇ ಪರ್ಫಾಮೆನ್ಸ್ ಓರಿಯೆಂಟೆಡ್ ಪಾತ್ರ ಮಾಡುತ್ತಿರುವುದು ವಿಶೇಷ. ಇದನ್ನೂ ಓದಿ: ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಕಿಡ್ನ್ಯಾಪ್ – ನಿರ್ದೇಶಕ ನಂದಕಿಶೋರ್‌ಗೆ ಹಣ ಕೊಡಿಸಿದ್ದ ರೌಡಿಶೀಟರ್‌

  • ಡಿಸೆಂಬರ್‌ಗೆ ಕಿಚ್ಚನ ಡಿಚ್ಚಿ: ಕೆ-47 ರಿಲೀಸ್ ಡೇಟ್ ಫಿಕ್ಸ್

    ಡಿಸೆಂಬರ್‌ಗೆ ಕಿಚ್ಚನ ಡಿಚ್ಚಿ: ಕೆ-47 ರಿಲೀಸ್ ಡೇಟ್ ಫಿಕ್ಸ್

    ಡಿಸೆಂಬರ್‌ನಲ್ಲಿ ಬಿಡುಗಡೆಗೆ ಸಿದ್ಧವಾಗಿರೋ ಸ್ಟಾರ್ ಸಿನಿಮಾಗಳಿಗೆ ಕಿಚ್ಚ ಸುದೀಪ್ ಠಕ್ಕರ್ ಕೊಡುತ್ತಾರೆ ಅಂತ ಹೇಳಲಾಗಿತ್ತು. ಅದೀಗ ನಿಜವಾಗಿದೆ. ಕಿಚ್ಚ ಸುದೀಪ್ ಈ ವರ್ಷ ತಾವು ಅಂದುಕೊಂಡಂತೆ ಒಂದು ಸಿನಿಮಾವನ್ನ ತಮ್ಮ ಅಭಿಮಾನಿಗಳಿಗೆ ದರ್ಶನ ಮಾಡಿಸಲು ಶಪಥ ಮಾಡಿದ್ದಾರೆ. ಕಳೆದ ವರ್ಷ ಡಿಸೆಂಬರ್ 25ರಂದು ತೆರೆಕಂಡ ಮ್ಯಾಕ್ಸ್ ಸಿನಿಮಾ ಅದ್ಭುತ ರೆಸ್ಪಾನ್ಸ್ ಪಡೆದುಕೊಂಡಿತ್ತು. ಹೀಗಾಗಿ ಸುದೀಪ್ ಈ ವರ್ಷವೂ ಡಿಸೆಂಬರ್‌ಗೆ ಅದ್ರಲ್ಲೂ ಕ್ರಿಸ್‌ಮಸ್‌ಗೆ ತಮ್ಮ ಕೆ-47 ಸಿನಿಮಾವನ್ನ ತೆರೆಗೆ ತರುವ ಪ್ಲ್ಯಾನ್‌ನಲ್ಲಿದ್ದಾರೆ. ಈ ಬಗ್ಗೆ ಕಿಚ್ಚ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕಿಚ್ಚ ಸುದೀಪ್ ಬಿಗ್ ಅಪ್‌ಡೇಟ್ ಕೊಟ್ಟಿದ್ದಾರೆ.

    ಕಿಚ್ಚ ಸುದೀಪ್ ಬಿಗ್ ಅಪ್‌ಡೇಟ್‌ಗೆ ಫ್ಯಾನ್ಸ್ ಖುಷಿಯಿಂದ ಕುಣಿದಾಡುತ್ತಿದ್ದಾರೆ. ಒಂದು ಕಡೆ ಸುದೀಪ್ ಬರ್ತ್ಡೇ ಸಂಭ್ರಮ ಮತ್ತೊಂದೆಡೆ ಕೆ-47 ಸಿನಿಮಾದ ಟೀಸರ್ ಹಾಗೂ ಟೈಟಲ್ ರಿವೀಲ್ ಜೊತೆಗೆ ಸಿನಿಮಾ ಡಿಸೆಂಬರ್‌ಗೆ ಬರೋದು ಪಕ್ಕಾ ಆಗಿದೆ. ಕಿಚ್ಚ ತಮ್ಮ ಫ್ಯಾನ್ಸ್‌ಗೆ ಒಂದರ ಮೇಲೆ ಒಂದು ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಆದ್ರೆ ಕಿಚ್ಚ ಸುದೀಪ್ ಸಿನಿಮಾ ರಿಲೀಸ್ ಡಿಸೆಂಬರ್ ಅನ್ನೇ ಗುರಿಯಾಗಿಸಿರೋದು ಮಾತ್ರ ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್‌ಗೆ ಕಾರಣವಾಗುತ್ತಾ ಅನ್ನೋ ಅಭಿಪ್ರಾಯಗಳು ಶುರುವಾಗಿವೆ.

    ಅಂದಹಾಗೆ ಡಿಸೆಂಬರ್ 12ಕ್ಕೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ರಿಲೀಸ್ ಆಗಲಿದ್ದು, ಈಗಾಗ್ಲೇ ಚಿತ್ರತಂಡ ಸಾಂಗ್ ಜೊತೆಗೆ ಸಿನಿಮಾದ ಡೇಟ್ ಅನೌನ್ಸ್ ಮಾಡಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಸಾಂಗ್ ರಿಲೀಸ್ ಆಗಿದೆ. ಸಿನಿಮಾ ಕೂಡಾ ತೆರೆಗೆ ಬರಲಿದೆ. ಒಂದು ಕಡೆ ದರ್ಶನ್ ಫ್ಯಾನ್ಸ್ ಈಗಿನಿಂದಲೇ ಸಿನಿಮಾವನ್ನ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ದರ್ಶನ್ ನಟನೆಯ ಡೆವಿಲ್ ಸಿನಿಮಾ ತೆರೆಕಂಡು ಎರಡು ವಾರಗಳ ನಂತರ ಕೆ-47 ಸಿನಿಮಾ ತೆರೆಗೆ ಬರಲಿದೆ. ಜೊತೆಗೆ ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿರುವ 45 ಸಿನಿಮಾ ಕೂಡಾ ಕ್ರಿಸ್‌ಮಸ್‌ಗೆ ರಿಲೀಸ್ ಆಗಲಿವೆ.

    ಇದಷ್ಟೇ ಅಲ್ಲದೇ ಕ್ರಿಸ್‌ಮಸ್ ಹಬ್ಬಕ್ಕೆ ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್ ಸಿನಿಮಾಗಳು ಸಾಲುಗಟ್ಟಿ ನಿಂತಿವೆ. ಹೀಗಿರುವಾಗ ಕಿಚ್ಚನ ಕೆ-47 ಸಿನಿಮಾ ಕೂಡಾ ಕ್ರಿಸ್‌ಮಸ್‌ಗೆ ಬರೋದಾಗಿ ಅನೌನ್ಸ್ ಮಾಡಿದೆ. ಇದು ಸ್ಟಾರ್ಸ್ ಸಿನಿಮಾಗಳ ಡೇಟ್‌ಕ್ಲ್ಯಾಶ್ ಆಗೋದಂತೂ ಪಕ್ಕಾ. ಒಂದೇ ತಿಂಗಳಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ಸ್ ಸಿನಿಮಾಗಳು ಥಿಯೇಟರ್‌ಗೆ ಲಗ್ಗೆ ಇಡೋಕೆ ಮುಹೂರ್ತ ಇಟ್ಟುಕೊಂಡು ಕಾಯುತ್ತಿವೆ.

    52ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ತಮ್ಮ ಹುಟ್ಟುಹಬ್ಬದ ದಿನ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್ ಕೊಟ್ಟಿದ್ದಾರೆ. ಡಿಸೆಂಬರ್ ತಿಂಗಳು ಕನ್ನಡ ಸಿನಿಮಾಗಳ ಕ್ರಾಂತಿಯಾಗಲು ಸಜ್ಜಾಗಿದೆ. ಸ್ಟಾರ್ಸ್ ಸಿನಿಮಾಗಳಿಲ್ಲದೇ ಮಂಕಾಗಿದ್ದ ಥಿಯೇಟರ್‌ಗಳು ಮದುವಣಗಿತ್ತಿಯಂತೆ ತಯಾರಾಗಲು ಡಿಸೆಂಬರ್ ತಿಂಗಳನ್ನ ಎದುರು ನೋಡುತ್ತಿವೆ. ಡಿಸೆಂಬರ್‌ನಲ್ಲಿ ಬರುವ ಸಾಲು ಸಾಲು ಸಿನಿಮಾಗಳನ್ನ ಗ್ರ್ಯಾಂಡ್ ಆಗಿ ವೆಲ್‌ಕಮ್ ಮಾಡಲು ಸಿನಿಮಾ ಪ್ರೇಮಿಗಳು ಸಹ ಅಷ್ಟೇ ಕಾತುರದಿಂದ ಕಾಯುತ್ತಿದ್ದಾರೆ. ಸ್ಟಾರ್‌ವಾರ್ ಅಲ್ಲಿಗೆ ಪಕ್ಕಾ ಆದಂತಾಗಿದೆ.

  • ಪರಮ ಸುಂದರಿಯಾದ ರಮ್ಯಾ!

    ಪರಮ ಸುಂದರಿಯಾದ ರಮ್ಯಾ!

    ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾರನ್ನು (Ramya) ಸಾರ್ವಕಾಲಿಕ ಸುಂದರಿ ಎಂದು ಹೊಗಳುವುದುಂಟು. ನಾಯಕಿಯಾಗಿ ಸ್ಟಾರ್‌ಡಂ ಹುಟ್ಟುಹಾಕಿರುವ ಅನಭಿಶಕ್ತ ನಟಿ. ಇದೀಗ ಚಿಕ್ಕದೊಂದು ರೀಲ್ಸ್ ಮಾಡುವ ಮೂಲಕ ಇನ್‌ಸ್ಟಾಗ್ರಾಮ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ಪರಮ ಸುಂದರಿ (Param Sundari) ಚಿತ್ರದ ಟ್ರೆಂಡಿಂಗ್ ಮ್ಯೂಸಿಕ್‌ಗೆ ರಮ್ಯಾ ಜಸ್ಟ್ ಒಂದು ಲುಕ್ ಕೊಟ್ಟಿದ್ದಾರೆ.

    ಅನೇಕ ವರ್ಷಗಳಿಂದ ರಮ್ಯಾ ಸಿನಿಮಾದಿಂದ ದೂರವಿದ್ದರೂ ಸಿನಿಮಾ ಅವರನ್ನು ಬಿಡುತ್ತಿಲ್ಲ. ಮೊದಲೆಲ್ಲಾ ಸುದ್ದಿಯನ್ನಷ್ಟೇ ಹಂಚಿಕೊಳ್ಳಲು ರಮ್ಯಾ ಸೋಶಿಯಲ್ ಮೀಡಿಯಾ ಬಳಸುತ್ತಿದ್ದರು. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ರೀಲ್ಸ್‌ಗಳನ್ನು ಪೋಸ್ಟ್ ಮಾಡಲಾರಂಭಿಸಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ

     

    View this post on Instagram

     

    A post shared by Ramya|Divya Spandana (@divyaspandana)

    ರಮ್ಯಾ ಅಭಿಮಾನಿಗಳಿಗೆ ಈ ಬದಲಾವಣೆ ಇಷ್ಟವಾಗಿದೆ. ಮತ್ತೆ ಹದಿನೈದು ವರ್ಷದ ಹಿಂದಿನ ಚಾರ್ಮ್‌ಗೆ ಮರಳಿದ್ದಾರೆ ರಮ್ಯಾ. ಇದೀಗ ಟ್ರೆಂಡ್‌ನಲ್ಲಿರುವ ಪರಮ ಸುಂದರಿ ಮ್ಯೂಸಿಕ್‌ಗೆ ರಮ್ಯಾ ಸೀರೆಯುಟ್ಟು ಸಣ್ಣದೊಂದು ಝಲಕ್ ಕೊಟ್ಟಿದ್ದಾರೆ. ಅಷ್ಟಕ್ಕೇ ಲಕ್ಷಾಂತರ ವೀವ್ಸ್, ಲೈಕ್ಸ್, ಬಂದಿದೆ. ಅಭಿಮಾನಿಗಳು ನೀವೇ ನಿಜವಾದ ಪರಮ ಸುಂದರಿ ಎಂದು ಕಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ನಿರ್ದೇಶಕ ಚಂದ್ರಶೇಖರ್ ಸಾರಥ್ಯದ ಚೌಕಿದಾರ್ (Chowkidar) ಸಿನಿಮಾ ಈಗಾಗಲೇ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಹಾಡುಗಳು ಈಗಾಗಲೇ ಹಿಟ್ ಲೀಸ್ಟ್ ಸೇರಿವೆ. ಇತ್ತೀಚಿಗೆ ಬಿಡುಗಡೆಯಾಗಿದ್ದ `ಓ ಮೈ ಬ್ರೋ’ ಸಾಂಗ್‌ಗೆ (OH My Bro Song) ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

    ಎಂಆರ್‌ಟಿ ಮ್ಯೂಸಿಕ್ ಯೂಟ್ಯೂಬ್‌ನಲ್ಲಿ ರಿಲೀಸ್ ಆಗಿದ್ದ ಈ ಹಾಡು ಈಗ ಒಂದು ಮಿಲಿಯನ್ ಜನರನ್ನು ತಲುಪಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಿಡುಗಡೆಯಾಗಿದ್ದ `ಓ ಮೈ ಬ್ರೋ’ ಸಾಂಗ್ ಸಂಗೀತ ಪ್ರಿಯರ ಮೆಚ್ಚುಗೆ ಪಡೆದುಕೊಂಡಿದೆ. ಇದನ್ನೂ ಓದಿ: ಕನ್ನಡದಲ್ಲಿ ಹೊಸ ಮೆಗಾ ಸೀರಿಯಲ್ – ಮಂಗಳವಾರ ʻಮಾಂಗಲ್ಯʼವಾರ

    ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ `ಓ ಮೈ ಬ್ರೋ’ ಗೀತೆಗೆ ಖ್ಯಾತ ಗಾಯಕ ಕೈಲಾಸ್ ಖೇರ್ ಧ್ವನಿಯಾಗಿದ್ದಾರೆ. ಸಚಿನ್ ಬಸ್ರೂರ್ ಮ್ಯೂಸಿಕ್ ಒಳಗೊಂಡಿರುವ ಈ ಹಾಡಿಗೆ ನಾಯಕ ಪೃಥ್ವಿ ಅಂಬರ್ (Pruthvi Ambar) ಹಾಗೂ ಹಿರಿಯ ನಟ ಸಾಯಿಕುಮಾರ್ ಬಿಂದಾಸ್ ಆಗಿ ಕುಣಿದಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ

    ಕಲ್ಲಹಳ್ಳಿ ಚಂದ್ರಶೇಖರ್ `ಚೌಕಿದಾರ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ವಿದ್ಯಾದೇವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಧನ್ಯಾ ರಾಮ್‌ಕುಮಾರ್ (Dhanya Ramkumar) ನಾಯಕ ನಟಿಯಾಗಿ ನಟಿಸಿದ್ದಾರೆ. ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ಚೌಕಿದಾರ್ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

    ಸಚಿನ್ ಬಸ್ರೂರು ಸಂಗೀತ, ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದು, ಮುರುಳಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ, ಜೈ ಸುಬ್ರಹ್ಮಣ್ಯ ಸಾಹಸ ದೃಶ್ಯಗಳು ಚಿತ್ರಕ್ಕಿದೆ. `ಚೌಕಿದಾರ್’ ಬಹು ಭಾಷೆಗಳಲ್ಲಿ ಮೂಡಿ ಬರುತ್ತಿದೆ. ಇದುವರೆಗೆ ಲವರ್ ಬಾಯ್ ಆಗಿದ್ದ ಪೃಥ್ವಿ, ಈ ಚಿತ್ರದಲ್ಲಿ ಬೇರೆಯದ್ದೇ ಅವತಾರ ತಾಳಿದ್ದಾರೆ.

  • ತೇಜ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ತೇಜ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ನುಮಾನ್’ ಮೂಲಕ ಸಾಕಷ್ಟು ಜನಪ್ರಿಯರಾಗಿರುವ ಟಾಲಿವುಡ್ ನಟ ತೇಜ ಸಜ್ಜಾ (Teja Sajja) ನಟನೆಯ ಬಹು ನಿರೀಕ್ಷಿತ ಸಿನಿಮಾ ಮಿರಾಯ್. ಹನುಮಾನ್ ಚಿತ್ರದ ಬಳಿಕ ತೇಜ ಒಪ್ಪಿಕೊಂಡಿರುವ ಮತ್ತೊಂದು ಸೂಪರ್ ಹೀರೋ ಚಿತ್ರ ಇದಾಗಿದೆ. ಸ್ಯಾಂಪಲ್ಸ್ ಮೂಲಕ ನಿರೀಕ್ಷೆ ಹೆಚ್ಚಿರುವ ಮಿರಾಯ್ (Mirai) ಸಿನಿಮಾ ಸೆಪ್ಟೆಂಬರ್ 12ರಂದು ತೆರೆಗೆ ಬರ್ತಿದೆ.

    ಮಿರಾಯ್ ಸಿನಿಮಾದ ಥಿಯೇಟರಿಕಲ್ ಟ್ರೇಲರ್ ನ್ನು ಚಿತ್ರತಂಡ ನಾಳೆ ರಿಲೀಸ್ ಮಾಡಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡಿದೆ. ರಾಕಿಂಗ್ ಸ್ಟಾರ್ ಮನೋಜ್ ಮಂಚು ಖಳನಾಯಕನಾಗಿ ಮತ್ತು ರಿತಿಕಾ ನಾಯಕ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಸೂಪರ್ ಯೋಧಾ ಪಾತ್ರದಲ್ಲಿ ತೇಜ ಸಜ್ಜಾ ಅಭಿನಯಿಸಿದ್ದಾರೆ. ಇದನ್ನೂ ಓದಿ: ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ ಭುಗಿಲೆದ್ದ ಆಕ್ರೋಶ

    ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಮಿರಾಯ್ಗೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ ಚಿತ್ರಕ್ಕಿದ್ದು, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರು. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

    ವಿಶೇಷವಾಗಿ ಈ ಚಿತ್ರ 2D ಮತ್ತು 3D ಫಾರ್ಮಾಟ್ನಲ್ಲಿ ರಿಲೀಸ್ ಆಗಲಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಸಿನಿಮಾ ಹೇಳುತ್ತದೆ.

  • ಪ್ರೇಯಸಿ ಜೊತೆ ಜಯಂ ರವಿ ಮ್ಯಾಚಿಂಗ್ ಮ್ಯಾಚಿಂಗ್!

    ಪ್ರೇಯಸಿ ಜೊತೆ ಜಯಂ ರವಿ ಮ್ಯಾಚಿಂಗ್ ಮ್ಯಾಚಿಂಗ್!

    ಕಾಲಿವುಡ್ ನಟ ಜಯಂ ರವಿ (Jayam Ravi) ಸೀಕ್ರೆಟ್ ರಿಲೇಶನ್‌ಶಿಪ್ ಈಗಂತೂ ಸೀಕ್ರೆಟಾಗಿ ಉಳಿದಿಲ್ಲ. ಜಯಂ ರವಿ ಹಾಗೂ ಸಿಂಗರ್ ಕೆನೀಶಾ ಕಾರ್ಯಕ್ರಮವೊಂದರಲ್ಲಿ ಟ್ವಿನ್ನಿಂಗ್ ಡ್ರೆಸ್‌ಕೋಡ್ ಕಾಣಿಸಿಕೊಂಡಿದ್ದು, ಇವರಿಬ್ಬರ ಲವ್ ರಿಲೇಶನ್‌ಶಿಪ್‌ಗೆ ಬಗೆಗಿನ ಚರ್ಚೆಗೆ ಮತ್ತಷ್ಟು ಬಲಬಂದಂತಿದೆ.

    ಕೆನೀಶಾ (Kenisha) ಜೊತೆ ಪ್ರೀತಿಯಲ್ಲಿ ಬಿದ್ದಿದ್ದಕ್ಕೆ ಜಯಂ ರವಿ ವಿಚ್ಛೇದನ ಘೋಷಿಸಿದ್ದಾರೆ ಅನ್ನೋದಾಗಿ ಪತ್ನಿ ಆರತಿ ಹೇಳಿಕೊಂಡಿದ್ದರು. ಇತ್ತೀಚೆಗೆ ಕೆನೀಶಾ ಜೊತೆ ಜಯಂ ರವಿ ಊರೂರು ಸುತ್ತುವುದು ಜಗಜ್ಜಾಹೀರಾದ ಮೇಲಂತೂ ಪ್ರೀತಿ ವಿಚಾರ ಬಟಾ ಬಯಲಾಗಿದೆ. ಇಷ್ಟು ಸಾಲದು ಎಂದು ಇದೀಗ ಆಫೀಷಿಯಲ್ ಆಗಿಯೇ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

    ಹೌದು, ನಟ ಜಯಂ ರವಿ ಚಿತ್ರ ನಿರ್ಮಾಣ ಪ್ರಾರಂಭಿಸಿದ್ದು, ನಿರ್ಮಾಣ ಸಂಸ್ಥೆ ಉದ್ಘಾಟನೆ ಸಮಾರಂಭವನ್ನ ಚೆನ್ನೈನಲ್ಲಿ ಅದ್ಧೂರಿಯಾಗಿ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಹಲವು ರಂಗ ಗಣ್ಯರು ಆಗಮಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಹೈಲೈಟ್ ಆಗಿದ್ದು ಕೆನೀಶಾ. ಕಾರಣ ಜಯಂ ರವಿ ಜೊತೆ ಒಂದೇ ಕಾರ್‌ನಲ್ಲಿ ಬಂದಿಳಿದ ಕೆನೀಶಾ, ರವಿಗೆ ಜೋಡಿಯಂತೆ ಕಂಡುಬಂದರು.

    ಜೊತೆಗೆ ಟ್ವಿನ್ನಿಂಗ್ ಡ್ರೆಸ್‌ನಲ್ಲಿ ಮಿಂಚಿದ್ದು ವಿಶೇಷವಾಗಿತ್ತು. ಮನೆಯ ಕಾರ್ಯವೆಂಬಂತೆ ಕೆನೀಶಾ ಕಾರ್ಯಕ್ರಮಕ್ಕೆ ಬಂದಿರುವ ಅತಿಥಿಗಳನ್ನ ವಿಚಾರಿಸಿಕೊಂಡರು. ಇಷ್ಟೆಲ್ಲಾ ಆದ್ಮೇಲೂ ಕೆನೀಶಾ ಜೊತೆ ಜಯಂ ರವಿ ಪ್ರೀತಿಯ ವಿಚಾರ ಸುಳ್ಳೆಂದು ವಾದಿಸಲು ಸಾಧ್ಯವೇ?

    ಅಂದಹಾಗೆ ಸ್ಟುಡಿಯೋ ಉದ್ಘಾಟನಾ ಸಮಾರಂಭ ನಡೆಯೋದಕ್ಕೂ ಮುನ್ನ ದಿನ ಈ ಜೋಡಿ ತಿರುಪತಿಗೆ ತೆರಳಿ ತಿಮ್ಮಪ್ಪನ ಆಶೀರ್ವಾದ ಪಡೆದಿದ್ದರು. ಮೂಲಗಳ ಪ್ರಕಾರ ಕೆನೀಶಾ ಈ ನಿರ್ಮಾಣ ಸಂಸ್ಥೆಯ ಮುಖ್ಯ ಉಸ್ತುವಾರಿಯಾಗಿರುತ್ತಾರೆ ಎಂಬ ವದಂತಿ ಇದೆ.

    ಆರತಿಯೊಂದಿಗೆ ವಿಚ್ಛೇದನ ಮಂಜೂರಾದ ಬಳಿಕ ಜಯಂ ರವಿ ಹಾಗೂ ಕೆನೀಶಾ ಮದುವೆಯಾಗುತ್ತಾರೆ ಎನ್ನಲಾಗ್ತಿದೆ. ಒಟ್ಟಿನಲ್ಲಿ ಇದುವರೆಗೆ ಕದ್ದು ಮುಚ್ಚಿ ನಡೆಯುತ್ತಿದ್ದ ಪ್ರೇಮಕಥೆ ಈಗ ಜಗಜ್ಜಾಹೀರಾಗಿದ್ದಂತೂ ಸತ್ಯ.