Tag: Citizenship

  • 2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

    2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

    – ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳಿಗೆ ಅನುಕೂಲ

    ನವದೆಹಲಿ: ಧಾರ್ಮಿಕ ಕಿರುಕುಳದಿಂದ (Religious Persecution) ತಪ್ಪಿಸಿಕೊಳ್ಳಲು 2024ರ ಡಿಸೆಂಬರ್‌ 31ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ (ಮುಸ್ಲಿಮೇತರ ಸಮುದಾಯಗಳಿಗೆ) ಭಾರತದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ ತಿಳಿಸಿದೆ.

    ಪಾಸ್‌ಪೋರ್ಟ್‌ (Passport) ಅಥವಾ ಇತರ ಪ್ರಯಾಣ ದಾಖಲೆಗಳಿಲ್ಲದೇ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಕ್ರೈಸ್ತರು ಹಾಗೂ ಪಾರ್ಸಿಗಳಿಗೆ ಭಾರತದಲ್ಲಿ ಉಳಿಯಲು ಅವಕಾಶ ನೀಡುವುದಾಗಿ ಹೇಳಿದೆ. ಜೊತೆಗೆ ದೇಶ ಪ್ರವೇಶಿಸಿದ್ದು ದಾಖಲೆಗಳು ಸಿಂಧುತ್ವದ ಅವಧಿ ಮೀರಿದ್ದರೆ ಅಂತಹವರಿಗೂ ಈ ನಿಯಮ ಅನ್ವಯಿಸಲಿದೆ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

    Narendra Modi Amit Shah 2

    ಕಳೆದ ವರ್ಷ ಮಾರ್ಚ್‌ 11ರಂದು ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ (Citizenship (Amendment) Act) ಪ್ರಕಾರ, 2014 ಡಿಸೆಂಬರ್‌ 31ರ ನಂತರ ಅಥವಾ ಅದಕ್ಕೂ ಮುನ್ನ ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ ಬಂದ ಅಲ್ಪಸಂಖ್ಯಾತ ಸದಸ್ಯರಿಗೆ ಭಾರತದ ಪೌರತ್ವ ನೀಡಲಾಗುವುದು. 2025ರ ವಲಸೆ ಮತ್ತು ವಿದೇಶಿಗರ ಕಾಯ್ದೆ ಅಡಿಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇದರಿಂದ 2014ರ ನಂತರ ಭಾರತಕ್ಕೆ ವಲಸೆ ಬಂದು ತಮ್ಮ ಬಗ್ಗೆ ಚಿಂತಿತರಾಗಿದ್ದ ಪಾಕಿಸ್ತಾನದ ಹಿಂದೂಗಳಿಗೆ ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಜನರಿಗೆ ಅನುಕೂಲ ಆಗಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್‌ ಕೊಟ್ಟ ರಷ್ಯಾ

    CAA protest

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸ್ಮಾರ್ಟ್ ಇಂಟೆಲಿಜೆಂಟ್ ವಿಲೇಜ್ – ಏನಿದು ಹೊಸ ಯೋಜನೆ?

  • 43 ಕೋಟಿ ಕೊಟ್ರೆ ಅಮೆರಿಕದ ʻಗೋಲ್ಡ್‌ ಕಾರ್ಡ್‌ʼ – ಪೌರತ್ವ ಪಡೆಯಲು ಶ್ರೀಮಂತ ವಲಸಿಗರಿಗೆ ಟ್ರಂಪ್‌ ಆಫರ್‌

    43 ಕೋಟಿ ಕೊಟ್ರೆ ಅಮೆರಿಕದ ʻಗೋಲ್ಡ್‌ ಕಾರ್ಡ್‌ʼ – ಪೌರತ್ವ ಪಡೆಯಲು ಶ್ರೀಮಂತ ವಲಸಿಗರಿಗೆ ಟ್ರಂಪ್‌ ಆಫರ್‌

    ವಾಷಿಂಗ್ಟನ್:‌ ಈಗಾಗಲೇ ಕಠಿಣ ವಲಸೆ ನೀತಿಯಿಂದ ಅಕ್ರಮ ವಲಸಿಗರನ್ನು ದೇಶದಿಂದಲೇ ಹೊರಹಾಕುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump), ಇದೀಗ ಶ್ರೀಮಂತ ವಲಸಿಗರ ಮನವೋಲಿಕೆಗೆ ಹೊಸ ಯೋಜನೆಯೊಂದನ್ನ ಜಾರಿಗೆ ತರಲು ಮುಂದಾಗಿದ್ದಾರೆ. ಶ್ರೀಮಂತ ವಲಸಿಗರಿಗೆ ʻಗೋಲ್ಡ್ ಕಾರ್ಡ್‌ʼಗಳ (Gold Card) ಮೂಲಕ, ಅಮೆರಿಕನ್ ಪೌರತ್ವ ಪಡೆಯುವುದನ್ನು ಸುಲಭಗೊಳಿಸಲು ಟ್ರಂಪ್‌ ಪ್ಲ್ಯಾನ್‌ ಮಾಡುತ್ತಿದ್ದಾರೆ.‌

    ಈ ʻಗೋಲ್ಡ್‌ ಕಾರ್ಡ್‌ʼಗಳನ್ನು ಶ್ರೀಮಂತ ವಲಸಿಗರು 5 ಮಿಲಿಯನ್‌ ಡಾಲರ್‌ (43.54 ಕೋಟಿ) ರೂ. ಪಾವತಿಸಿ ಖರೀದಿಸಬಹುದಾಗಿದೆ.

    ಅಮೆರಿಕದಲ್ಲಿ (USA) ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ದೊಡ್ಡ ಮೊತ್ತದ ಹಣವನ್ನು ಹೂಡಿಕೆ ಮಅಡುವ ವಿದೇಶಿ ಹೂಡಿಕೆದಾರರಿಗೆ ಮಾತ್ರ ಅಮೆರಿಕದ ಶಾಶ್ವತ ನಿವಾಸಿಗಳಾಗಲು ಅನುವು ಮಾಡಿಕೊಡುವ EB-5 ವೀಸಾ ಯೋಜನೆಯನ್ನು ಗೋಲ್ಡ್‌ ಕಾರ್ಡ್‌ನೊಂದಿಗೆ ಬದಲಾಯಿಸಲಾಗುವುದು ಎಂದು ಟ್ರಂಪ್‌ ಹೇಳಿದ್ದಾರೆ.  ಇದನ್ನೂ ಓದಿ: ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ

    ಈ ಗೋಲ್ಡ್ ಕಾರ್ಡ್‌ಗಳು ಈಗಾಗಲೇ ಅಸ್ತಿತ್ವದಲ್ಲಿರುವ ಗ್ರೀನ್ ಕಾರ್ಡ್ ನಿವಾಸಿಗಳು ಮತ್ತು ಹೊಸ ವಿದೇಶಿಯರಿಗೆ ಅಮೆರಿಕನ್ ಪೌರತ್ವದ ಮಾರ್ಗವನ್ನು ಮತ್ತಷ್ಟು ಸುಲಭಗೊಳಿಸಲಿದೆ. ಸುಮಾರು 1 ಮಿಲಿಯನ್ ಗೋಲ್ಡ್ ಕಾರ್ಡ್‌ಗಳನ್ನು ಮಾರಾಟ ಮಾಡುವ ಉದ್ದೇಶವಿದ್ದು, ಈ ಉಪಕ್ರಮವು ರಾಷ್ಟ್ರೀಯ ಸಾಲವನ್ನು ತ್ವರಿತವಾಗಿ ತೀರಿಸಲು ಸಹಾಯ ಮಾಡಲಿದೆ ಎಂದು ಟ್ರಂಪ್‌ ವಿವರಿಸಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ

    EB-5 ಯೋಜನೆಯು ಅಮೆರಿಕದ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಭರವಸೆ ನೀಡುವ ವಿದೇಶಿಯರಿಗೆ, ಗ್ರೀನ್ ಕಾರ್ಡ್‌ಗಳನ್ನು ನೀಡುತ್ತದೆ. ನಾವು ಈಗ ಸುಮಾರು 5 ಮಿಲಿಯನ್‌ ಅಮೆರಿಕನ್‌ ಡಾಲರ್‌ ಮೊತ್ತದ ಗೋಲ್ಡ್ ಕಾರ್ಡ್‌ಗಳನ್ನು ಮಾರಾಟ ಮಾಡಲಿದ್ದೇವೆ. ಇದು ನಿಮಗೆ ಗ್ರೀನ್ ಕಾರ್ಡ್ ಸವಲತ್ತುಗಳನ್ನು ನೀಡುವುದರ ಜೊತೆಗೆ, ಅಮೆರಿಕನ್ ಪೌರತ್ವ ಪಡೆಯುವ ಮಾರ್ಗವನ್ನು ಸುಲಭಗೊಳಿಸಲಿದೆ ಯುಎಸ್‌ ಅಧ್ಯಕ್ಷರು ಆಶ್ವಾಸನೆ ನೀಡಿದ್ದಾರೆ.  ಇದನ್ನೂ ಓದಿ: ಡ್ರೈವಿಂಗ್ ಬಗ್ಗೆ ಚಾಲಕರಿಗೆ ಸರಿಯಾಗಿ ತರಬೇತಿ ಕೊಡಿ – ಸಾರ್ವಜನಿಕರಿಂದ ಬಿಎಂಟಿಸಿಗೆ ದೂರು

  • ರಾಹುಲ್‌ ದ್ವಿ ಪೌರತ್ವ ಕೇಸ್‌ – ಪರಿಶೀಲನೆ ನಡೆಸುತ್ತಿದ್ದೇವೆ ಎಂದ ಕೇಂದ್ರ ಸರ್ಕಾರ

    ರಾಹುಲ್‌ ದ್ವಿ ಪೌರತ್ವ ಕೇಸ್‌ – ಪರಿಶೀಲನೆ ನಡೆಸುತ್ತಿದ್ದೇವೆ ಎಂದ ಕೇಂದ್ರ ಸರ್ಕಾರ

    ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ದ್ವಿಪೌರತ್ವ (Dual Citizenship) ಅಂಶವನ್ನು ಪರಿಶೀಲನೆ ಮಾಡುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

    ರಾಹುಲ್ ಬ್ರಿಟನ್ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ (Karnataka) ಶಿಶಿರ್ ವಿಘ್ನೇಷ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಬಗ್ಗೆ ಪ್ರತಿಕ್ರಿಸಲು ಕೇಂದ್ರ ಗೃಹ ಸಚಿವಾಲಯಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚಿಸಿತ್ತು.

    ಕಾಂಗ್ರೆಸ್‌ನ (Congress) ರಾಹುಲ್ ಗಾಂಧಿ ಅವರ ದ್ವಿಪೌರತ್ವದ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಸರ್ಕಾರವು ಹೈಕೋರ್ಟ್‌ಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ತಿಳಿಸಿದೆ.

    court order law

    ಕೇಂದ್ರ ಗೃಹ ಸಚಿವಾಲಯವು, ಅರ್ಜಿದಾರರು ಮಾಡಿದ ಪ್ರಾತಿನಿಧ್ಯವನ್ನು ಸಚಿವಾಲಯದಲ್ಲಿ ಸ್ವೀಕರಿಸಲಾಗಿದೆ. ಡಿಸೆಂಬರ್ 19 ರಂದು ಈ ವಿಚಾರವನ್ನು ಪಟ್ಟಿ ಮಾಡಿ. ಪರಿಶೀಲನೆಯ ವಿವರಗಳನ್ನು ಅಂದು ತಿಳಿಸಲಾಗುವುದು ಎಂದು ಹೇಳಿದೆ.  ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಘ್ನೇಶ್ ಅವರು, ಸರ್ಕಾರವು ತಕ್ಷಣವೇ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ಹಿಂತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ರಾಹುಲ್‌ ಅವರ ಹೆಸರು ಪೌರತ್ವ ದಾಖಲೆಗಳಲ್ಲಿದೆ ಎನ್ನುವುದನ್ನು ನಾವು ಯುಕೆ ಸರ್ಕಾರದ ಜೊತೆ ಸಂವಹನ ಮಾಡಿ ದಾಖಲೆಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದರು.

    ನಾವು ಎಲ್ಲಾ ದಾಖಲೆಗಳನ್ನು ಅಲಹಾಬಾದ್ ಹೈಕೋರ್ಟ್‌ಗೆ (Allahabad High Court) ಸಲ್ಲಿಸಿದ್ದೇವೆ. ಭಾರತೀಯ ಕಾನೂನುಗಳ ಅಡಿಯಲ್ಲಿ ದ್ವಿಪೌರತ್ವವನ್ನು ಅನುಮತಿಸಲಾಗುವುದಿಲ್ಲ. ಯಾರಾದರೂ ಮತ್ತೊಂದು ರಾಷ್ಟ್ರದ ಪೌರತ್ವವನ್ನು ತೆಗೆದುಕೊಂಡ ನಂತರ ಭಾರತೀಯ ಪೌರತ್ವವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಎಂದರು.

    ರಾಹುಲ್‌ ಪೌರತ್ವಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ಮನವಿಯನ್ನು ದೆಹಲಿ ಹೈಕೋರ್ಟ್‌ನಲ್ಲಿ ಮತ್ತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy) ಅವರು ಸಲ್ಲಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿಯ ಸ್ಥಿತಿಯನ್ನು ಖಚಿತಪಡಿಸಿದ ನಂತರವೇ ಈ ವಿಷಯವನ್ನು ಆಲಿಸುವುದಾಗಿ ದೆಹಲಿ ಹೈಕೋರ್ಟ್ ಸೂಚಿಸಿದೆ.

     

  • ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ- ಸೆಕ್ಷನ್ 6ಎ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್

    ನವದೆಹಲಿ: ಜ.1, 1966 ಮತ್ತು ಮಾ.25, 1971ರ ನಡುವೆ ಅಸ್ಸಾಂಗೆ (Assam) ಪ್ರವೇಶಿಸಿದ ವಲಸಿಗರಿಗೆ ಪೌರತ್ವವನ್ನು ನೀಡುವ ಪೌರತ್ವ ಕಾಯಿದೆ ಮತ್ತು 1955ರ ಸೆಕ್ಷನ್ 6ಎ ನ ಸಾಂವಿಧಾನಿಕ ಸಿಂಧುತ್ವವನ್ನು 4:1 ಬಹುಮತದಿಂದ ಸುಪ್ರೀಂ ಕೋರ್ಟ್ (Supreme Court) ಎತ್ತಿಹಿಡಿದಿದೆ. ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ಮತ್ತು ಇತರ ಮೂವರು ನ್ಯಾಯಾಧೀಶರು ಈ ನಿಬಂಧನೆಯ ಸಿಂಧುತ್ವವನ್ನು ಎತ್ತಿಹಿಡಿದರು. ನ್ಯಾ. ಪಾರ್ದಿವಾಲಾ ಅವರು ಅಸಮ್ಮತಿ ವ್ಯಕ್ತಪಡಿಸಿದರು.

    ಬಾಂಗ್ಲಾದೇಶದ ರಚನೆಯ ನಂತರ ಅಕ್ರಮ ವಲಸೆ ಸಮಸ್ಯೆಗೆ ಅಸ್ಸಾಂ ಒಪ್ಪಂದವು ರಾಜಕೀಯ ಪರಿಹಾರವಾಗಿದೆ ಮತ್ತು ಸೆಕ್ಷನ್ 6ಎ ಶಾಸಕಾಂಗ ಪರಿಹಾರವಾಗಿದೆ. ಬಹುಮತದ ತೀರ್ಪು ಮಾ.25, 1971ರ ಕಟ್-ಆಫ್ ದಿನಾಂಕವು ತರ್ಕಬದ್ಧವಾಗಿದೆ. ಬಾಂಗ್ಲಾದೇಶ ವಿಮೋಚನಾ ಯುದ್ಧವು ಕೊನೆಗೊಂಡ ದಿನಾಂಕವಾಗಿದ್ದರಿಂದ ಇದು ಮಾನ್ಯವಾಗಿದೆ ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದರು. ಇದನ್ನೂ ಓದಿ: ದಾವಣಗೆರೆಯಲ್ಲಿ ಮಳೆಯ ಅಬ್ಬರ – ಹತ್ತಕ್ಕೂ ಹೆಚ್ಚು ಮನೆಗಳು ಜಲಾವೃತ

    ಅಸ್ಸಾಂ ಒಪ್ಪಂದವು ಅಕ್ರಮ ವಲಸೆ ಸಮಸ್ಯೆಗೆ ರಾಜಕೀಯ ಪರಿಹಾರವಾಗಿದೆ ಮತ್ತು ಸೆಕ್ಷನ್ 6ಎ ಶಾಸಕಾಂಗ ಪರಿಹಾರವಾಗಿದೆ. ಸೆಕ್ಷನ್ 6ಎ ಜಾರಿಗೊಳಿಸಲು ಸಂಸತ್ತಿಗೆ ಶಾಸಕಾಂಗದ ಅಧಿಕಾರವಿದೆ ಎಂದು ನಾಲ್ವರು ನ್ಯಾಯಾಧೀಶರು ಬಹುಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಜನಸಂಖ್ಯೆಯನ್ನು ರಕ್ಷಿಸುವ ಅಗತ್ಯತೆಯೊಂದಿಗೆ ಮಾನವೀಯ ಕಾಳಜಿಯಿಂದ 6ಎ ಅನ್ನು ಜಾರಿಗೊಳಿಸಲಾಗಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.ಇದನ್ನೂ ಓದಿ: ರಾಣಿ ಚೆನ್ನಮ್ಮ ವಿಜಯೋತ್ಸವಕ್ಕೆ 200 ವರ್ಷ – ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಮನವಿ

    ಜ.1, 1966ರ ದಿನಾಂಕದ ಮೊದಲು ಅಸ್ಸಾಂಗೆ ಪ್ರವೇಶಿಸಿದ ವಲಸಿಗರನ್ನು ಭಾರತೀಯ ಪ್ರಜೆಗಳೆಂದು ಪರಿಗಣಿಸಲಾಗುತ್ತದೆ. ಜ.1, 1966 ಮತ್ತು ಮಾ. 25, 1971ರ ನಡುವೆ ಅಸ್ಸಾಂಗೆ ಪ್ರವೇಶಿಸಿದ ವಲಸಿಗರು ಭಾರತೀಯ ಪೌರತ್ವವನ್ನು ಪಡೆಯಲು ಅರ್ಹರಾಗಿರುತ್ತಾರೆ. ಮಾ.25, 1971 ನಂತರ ಅಸ್ಸಾಂಗೆ ಪ್ರವೇಶಿಸಿದ ವಲಸಿಗರನ್ನು ಪತ್ತೆಹಚ್ಚಲು, ಬಂಧಿಸಲು ಮತ್ತು ಗಡಿಪಾರು ಮಾಡಲು ಅರ್ಹವಾಗಿದೆ ಎಂದು ನ್ಯಾ. ಸೂರ್ಯಕಾಂತ್ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಹರಿಯಾಣ ಮೂಲದ ಆರೋಪಿ ಬಂಧನ

    ನ್ಯಾಯಮೂರ್ತಿ ಪರ್ದಿವಾಲಾ ಅವರು ತಮ್ಮ ಭಿನ್ನಾಭಿಪ್ರಾಯದ ತೀರ್ಪಿನಲ್ಲಿ ಸೆಕ್ಷನ್ 6ಎ ಅಸಂವಿಧಾನಿಕ ಎಂದು ಹೇಳಿದರು. ಸೆಕ್ಷನ್ 6ಎ ಸಮಯದೊಂದಿಗೆ ಅಸಂವಿಧಾನಿಕತೆಯಿಂದ ಕೂಡಿದೆ ಎಂದು ಅವರು ಹೇಳಿದರು. 1966 ರಿಂದ 1971 ರವರೆಗೆ ಒಂದು ಶಾಸನಬದ್ಧ ವರ್ಗವನ್ನು ರಚಿಸಲಾಗಿದೆ ಎಂಬ ಅಂಶವು ಕಠಿಣ ಷರತ್ತಿಗೆ ಒಳಪಟ್ಟಿರುತ್ತದೆ. (10 ವರ್ಷಗಳವರೆಗೆ ಯಾವುದೇ ಮತದಾನದ ಹಕ್ಕುಗಳಿಲ್ಲ) ಪೌರತ್ವವನ್ನು ನೀಡುವುದು ವಾಸ್ತವವಾಗಿ ಅಸ್ಸಾಂ ಜನರನ್ನು ಸಮಾಧಾನಪಡಿಸಲು. ಅಂತಹ ಸೇರ್ಪಡೆಯು ಆದಾಗ ಮುಂಬರುವ ದಿನಗಳಲ್ಲಿ ಪರಿಣಾಮ ಬೀರುವುದಿಲ್ಲ ಎಂದರು. ಇದನ್ನೂ ಓದಿ: ಹಾಸನ | ಆಹಾರ ಅರಸಿ ಬಂದಿದ್ದ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವು

    ಮಾ.26, 1971ರಂದು ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಬೇರ್ಪಡಿಸಿದ ನಂತರ ಕಠಿಣ ವಲಸೆ ನಿಯಂತ್ರಣಗಳ ಬೇಡಿಕೆಯು ತೀವ್ರಗೊಂಡಿತು. ವಿದ್ಯಾರ್ಥಿ ಸಂಘಟನೆಗಳು, ಮುಖ್ಯವಾಗಿ ಆಲ್ ಅಸ್ಸಾಂ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಅಸ್ಸಾಂ ಗನ್ ಸಂಗ್ರಾಮ್ ಪರಿಷತ್, ಬಾಂಗ್ಲಾದೇಶಿಗಳ ಹೆಚ್ಚುತ್ತಿರುವ ವಲಸೆ ವಿರುದ್ಧ ಪ್ರತಿಭಟಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ರಾಜೀವ್ ಗಾಂಧಿ ಸರ್ಕಾರದ ಅಡಿಯಲ್ಲಿ ಆ.15, 1985 ರಂದು ಸಹಿ ಹಾಕಲಾದ ‘ಅಸ್ಸಾಂ ಒಪ್ಪಂದ’ದ ಭಾಗವಾಗಿ ಸೆಕ್ಷನ್ 6ಎ ಅನ್ನು ಪೌರತ್ವ ಕಾಯಿದೆಗೆ ಸೇರಿಸಲಾಯಿತು. ಈ ನಿಬಂಧನೆಯು ಮಾ.25, 1971 ರ ನಂತರ ಅಸ್ಸಾಂಗೆ ಪ್ರವೇಶಿಸಿದ ವಿದೇಶಿ ವಲಸಿಗರನ್ನು ಗುರುತಿಸುವ ಮತ್ತು ಹೊರಹಾಕುವ ಮೂಲಕ ಈ ಗುಂಪುಗಳ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ – ಮುರುಗೇಶ್ ನಿರಾಣಿ

    ಸೆಕ್ಷನ್ 6ಎ ಅಡಿಯಲ್ಲಿ, ಜ. 1, 1966 ರ ಮೊದಲು ಅಸ್ಸಾಂ ಅನ್ನು ಪ್ರವೇಶಿಸಿದ ವ್ಯಕ್ತಿಗಳಿಗೆ ಪೂರ್ಣ ಪೌರತ್ವ ಹಕ್ಕುಗಳನ್ನು ನೀಡಲಾಗುತ್ತದೆ. ಆದರೆ, 1966 ಮತ್ತು 1971 ರ ನಡುವೆ ಆಗಮಿಸಿದವರು ಹತ್ತು ವರ್ಷಗಳ ಮತದಾನದ ನಿರ್ಬಂಧದೊಂದಿಗೆ ಇದೇ ರೀತಿಯ ಹಕ್ಕುಗಳನ್ನು ಅನುಭವಿಸುತ್ತಾರೆ. ಬಾಂಗ್ಲಾದೇಶಕ್ಕಿಲ್ಲದೇ ಅಸ್ಸಾಂ ಮಾತ್ರ ಏಕೆ ಈ ನಿಬಂಧನೆಗೆ ಒಳಪಟ್ಟಿದೆ ಎಂಬುದರ ಕುರಿತು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

  • ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ

    ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ

    – 40 ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ರಾಜ್ಯದಲ್ಲಿ ವಾಸಿಸುತ್ತಿರುವ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ (Indian Citizenship) ಸಿಕ್ಕಿದೆ.

    ರಾಯಚೂರು (Raichur) ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಎಚ್‌ ಕ್ಯಾಂಪ್‌ಗಳಲ್ಲಿ ವಾಸವಿರುವ ಐವರಿಗೆ ಭಾರತೀಯ ಪೌರತ್ವ ಸಿಕ್ಕಿದೆ. ಆರ್.ಎಚ್‌ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್‌ ಅಭಿಕರಿ, ಸುಕುಮಾರ ಮೊಂಡಲ್, ಬಿ. ಪ್ರದಾಸ ಗೋಲ್ದರ್, ಜಯಂತ ಮೊಂಡಲ್, ಅದ್ವಿತ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ಪಡೆದ ಬಾಂಗ್ಲಾ ವಲಸಿಗರಾಗಿದ್ದಾರೆ. ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಅಧಿಕೃತವಾಗಿ ಪೌರತ್ವ ಪತ್ರ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    ಬಾಂಗ್ಲಾ ವಲಸಿಗರು ಇಲ್ಲಿ ಆಶ್ರಯ ಪಡೆದಿದ್ದೇಗೆ?
    1971ರ ಬಾಂಗ್ಲಾದೇಶ ವಿಮೋಚನಾ ವೇಳೆ ಬಾಂಗ್ಲಾ ಹಾಗೂ ಬರ್ಮಾ ವಲಸಿಗರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿತ್ತು. ಈ ವೇಳೆ ಸಿಂಧನೂರು ತಾಲೂಕಿನಲ್ಲಿ ಸುಮಾರು 932 ಕುಟುಂಬಗಳಿಗೆ 5 ಸಾವಿರ ಎಕರೆ ಜಮೀನು ನೀಡಲಾಗಿತ್ತು. 1971ರ ಬಳಿಕ ಬಂದ ಕುಟುಂಬಗಳಿಗೆ ಪೌರತ್ವ ಹಾಗೂ ಯಾವುದೇ ಸೌಲಭ್ಯ ನೀಡಿರಲಿಲ್ಲ. ಪೌರತ್ವಕ್ಕಾಗಿ ನಿರಾಶ್ರಿತರು ಕಳೆದ 40 ವರ್ಷಗಳಿಂದ ಅರ್ಜಿ ಹಾಕುತ್ತಲೇ ಇದ್ದರು. ಅದರಂತೆ ಐವರಿಗೆ ಪೌರತ್ವ ಸಿಕ್ಕಿದೆ. ಪೌರತ್ವ ಕೋರಿ ಒಟ್ಟು 146 ಅರ್ಜಿಗಳು ಸಲ್ಲಿಕೆಯಾಗಿತ್ತು. ಈ ಪೈಕಿ ಆರ್.ಎಚ್ ಕ್ಯಾಂಪ್‌ನಲ್ಲಿ ವಾಸಿಸುತ್ತಿರುವ ಐವರಿಗೆ ಪೌರತ್ವ ದೊರೆತಿದೆ. ಇದನ್ನೂ ಓದಿ: Koppala | ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ನ ಚೈನ್ ಲಿಂಕ್ ಕಟ್ – ಜನರಲ್ಲಿ ಆತಂಕ!

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: TB ಡ್ಯಾಮ್‌ ಪರಿಶೀಲನೆಗೆ ಬೆಂಗಳೂರು, ಹೈದರಾಬಾದ್‌, ಚೆನ್ನೈನಿಂದ ತಜ್ಞರ ತಂಡ ಆಗಮನ: ತಂಗಡಗಿ 

  • Citizenship Law: ಸಿಎಎ ಜಾರಿಗೆ ದಳಪತಿ ವಿಜಯ್‌ ವಿರೋಧ

    ಚೆನ್ನೈ: ಇತ್ತೀಚೆಗಷ್ಟೇ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ಥಾಪಿಸಿ ರಾಜಕೀಯ ಪ್ರವೇಶಿಸಿರುವ ನಟ ವಿಜಯ್‌ ದಳಪತಿ (Vijay Thalapathy) ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ವಿರೋಧ ವ್ತಕ್ಯಪಡಿಸಿದ್ದಾರೆ.

    ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಸೋಮವಾರವಷ್ಟೇ (ಮಾ.11) ಅಧಿಸೂಚನೆ ಹೊರಡಿಸಿತ್ತು. ಸಿಎಎ ಕಾಯ್ದೆಗೆ ಕೆಲವರು ಮೆಚ್ಚುಗೆ ಸೂಚಿಸಿದ್ರೆ, ಇನ್ನೂ ಕೆಲವರು ವಿರೋಧಿಸಿ ಸೋಶಿಯಲ್‌ ಮೀಡಿಯಾಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಬೆನ್ನಲ್ಲೇ ದಳಪತಿ ವಿಜಯ್‌ ಸಹ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಭಾರತದ ಪ್ರತಿಯೊಬ್ಬ ಮುಸ್ಲಿಮರೂ ಸಿಎಎಯನ್ನು ಸ್ವಾಗತಿಸಬೇಕು: ಮುಸ್ಲಿಂ ಜಮಾತ್‌ ಅಧ್ಯಕ್ಷ ಕರೆ

    ದಳಪತಿ ಹೇಳಿದ್ದೇನು?
    ಸಿಎಎ ಜಾರಿಗೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಜಯ್‌, ಸಿಎಎ ಜಾರಿಗೆ ಜಾರಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯಿದೆ-2019 (ಸಿಎಎ) ನಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ಅಲ್ಲದೇ ತಮಿಳುನಾಡಿನಲ್ಲಿ ಈ ಕಾಯ್ದೆ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ (Tamil Nadu government) ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಿಷನ್‌ ದಿವ್ಯಾಸ್ತ್ರ ಪ್ರಯೋಗ ಯಶಸ್ವಿ – ಏನಿದು MIRV ತಂತ್ರಜ್ಞಾನ? ಯುದ್ಧದ ವೇಳೆ ಹೇಗೆ ಸಹಾಯವಾಗುತ್ತೆ? ಯಾರ ಬಳಿಯಿದೆ?

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂಬುದನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

  • ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    ನವದೆಹಲಿ: ಲೋಕಸಭೆ ಚುನಾಚಣೆಗೆ (Lok Sabha Election) ಮುನ್ನ ಮೋದಿ ಸರ್ಕಾರ (Narendra Modi Government) ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act ) ಜಾರಿ ಮಾಡಿ ಅಧಿಸೂಚನೆ ಹೊರಡಿಸಿದೆ.

    2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ (Protest) ನಡೆದ ಕಾರಣ ಇಲ್ಲಿಯವರೆಗೆ ಸಿಎಎ ಜಾರಿಯಾಗಿರಲಿಲ್ಲ. ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈಗ ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವ ಮೂಲಕ ತನ್ನಲ್ಲಿದ್ದ ದೊಡ್ಡ ಅಸ್ತ್ರವನ್ನು ಬಿಜೆಪಿ ಪ್ರಯೋಗಿಸಿದೆ.

    ವೆಬ್‌ಸೈಟ್‌ ಕ್ರ್ಯಾಶ್‌:
    ಸಿಎಎ ನಿಯಮ ಪ್ರಕಟಗೊಂಡ ಬೆನ್ನಲ್ಲೇ ಸರ್ಕಾರದ ಇ-ಗೆಜೆಟ್‌ ವೆಬ್‌ಸೈಟ್‌ ಕ್ರ್ಯಾಶ್‌ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನರು ವೆಬ್‌ಸೈಟಿಗೆ ಭೇಟಿ ನೀಡಿದ ಪರಿಣಾಮ ವೆಬ್‌ಸೈಟ್‌ ಪುಟ ಓಪನ್‌ ಆಗುತ್ತಿಲ್ಲ.

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ.

    ಜಾರಿ ಆಗುತ್ತೆ ಎಂದಿದ್ದ ಶಾ:
    ಈ ಹಿಂದೆ ಖಾಸಗಿ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗೃಹ ಸಚಿವ ಅಮಿತ್‌ ಶಾ (Amit Shah) ಲೋಕಸಭಾ ಚುನಾವಣೆಗೆ (Lok Sabha Election) ಮುನ್ನ ಜಾರಿಗೆ ತರುವುದಾಗಿ ಹೇಳಿದ್ದರು.

    ಸಿಎಎ ದೇಶದ ಕಾಯ್ದೆಯಾಗಿದೆ. ಅದನ್ನು ಖಂಡಿತವಾಗಿಯೂ ಲೋಕಸಭಾ ಚುನಾವಣೆಗೆ ಮುನ್ನವೇ ನೋಟಿಫೈ ಮಾಡಲಾಗುವುದು ಅದರಲ್ಲಿ ಯಾವುದೇ ಗೊಂದಲ ಇಲ್ಲ. ಸಿಎಎ ಕಾಂಗ್ರೆಸ್ ಸರ್ಕಾರದ (Congress Government) ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಕಾಂಗ್ರೆಸ್‌ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಶಾ ದೂರಿದ್ದರು.

    ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯ್ದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ ಎಂದು ವಿವರಿಸಿದ್ದರು.

     

  • ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಅಧಿಕೃತ ಜಾರಿ – ಇಂದು ರಾತ್ರಿಯೇ ಅಧಿಸೂಚನೆ ಸಾಧ್ಯತೆ

    ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಅಧಿಕೃತ ಜಾರಿ – ಇಂದು ರಾತ್ರಿಯೇ ಅಧಿಸೂಚನೆ ಸಾಧ್ಯತೆ

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಕೇಂದ್ರ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲು ಮುಂದಾಗಿದೆ. ಇಂದು ರಾತ್ರಿಯೇ ಕೇಂದ್ರ ಗೃಹ ಸಚಿವಾಲಯ ಸಿಎಎ ಜಾರಿ ಸಂಬಂಧ ನಿಯಮಗಳನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ.

    ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ. ಈಗ ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವ ಮೂಲಕ ತನ್ನಲ್ಲಿದ್ದ ದೊಡ್ಡ ಅಸ್ತ್ರವನ್ನು ಬಿಜೆಪಿ ಪ್ರಯೋಗಿಸಿದೆ. ಇದನ್ನೂ ಓದಿ: ಬಸ್ ಮೇಲೆ ಬಿದ್ದ 11,000 ವೋಲ್ಟ್ ಕರೆಂಟ್ ವೈರ್ – 10ಕ್ಕೂ ಹೆಚ್ಚು ಮಂದಿ ಸಜೀವ ದಹನ

    ಈ ಹಿಂದೆ ಖಾಸಗಿ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗೃಹ ಸಚಿವ ಅಮಿತ್‌ ಶಾ (Amit Shah) ಲೋಕಸಭಾ ಚುನಾವಣೆಗೆ (Lok Sabha Election) ಮುನ್ನ ಜಾರಿಗೆ ತರುವುದಾಗಿ ಹೇಳಿದ್ದರು.

    ಸಿಎಎ ದೇಶದ ಕಾಯ್ದೆಯಾಗಿದೆ. ಅದನ್ನು ಖಂಡಿತವಾಗಿಯೂ ಲೋಕಸಭಾ ಚುನಾವಣೆಗೆ ಮುನ್ನವೇ ನೋಟಿಫೈ ಮಾಡಲಾಗುವುದು ಅದರಲ್ಲಿ ಯಾವುದೇ ಗೊಂದಲ ಇಲ್ಲ. ಸಿಎಎ ಕಾಂಗ್ರೆಸ್ ಸರ್ಕಾರದ (Congress Government) ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಕಾಂಗ್ರೆಸ್‌ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಶಾ ದೂರಿದ್ದರು. ಇದನ್ನೂ ಓದಿ: ಡಿಕೆಸು Vs ಡಾ.ಮಂಜುನಾಥ್‌ ಸ್ಪರ್ಧೆ ಫಿಕ್ಸ್‌, ಅಧಿಕೃತ ಘೋಷಣೆ ಮಾತ್ರ ಬಾಕಿ – ಜೆಡಿಎಸ್‌ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

     

    ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯ್ದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ ಎಂದು ವಿವರಿಸಿದ್ದರು.

    2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇನ್ನೂ ಸಿಎಎ ಜಾರಿಯಾಗಿಲ್ಲ. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.

  • ಇನ್ನೊಂದೇ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ -‌ ಬಿಜೆಪಿ ಸಚಿವರ ಗ್ಯಾರಂಟಿ

    ಇನ್ನೊಂದೇ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ -‌ ಬಿಜೆಪಿ ಸಚಿವರ ಗ್ಯಾರಂಟಿ

    ಕೋಲ್ಕತ್ತಾ: ಮುಂದಿನ ಏಳು ದಿನಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್‌ (Shantanu Thakur) ತಿಳಿಸಿದ್ದಾರೆ.

    ಪಶ್ಚಿಮ ಬಂಗಾಳದ (West Bengal) 24 ಪರಗಣ ಜಿಲ್ಲೆಯ ಕಾಕ್‌ದ್ವಿಪ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಮುಂದಿನ ಏಳು ದಿನಗಳಲ್ಲಿ ಸಿಎಎ ಕಾಯ್ದೆ ದೇಶಾದ್ಯಂತ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರ ಹೇಳಿಕೆಯನ್ನ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಟೆಕ್ಕಿ ಯುವತಿಯನ್ನ ಗುಂಡಿಕ್ಕಿ ಹತ್ಯೆಗೈದ ಪ್ರಿಯತಮ – ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?

    ಕಳೆದ ವರ್ಷ ಡಿಸೆಂಬರ್‌ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಕಾಯ್ದೆಯನ್ನು ಅನುಷ್ಟಾನಕ್ಕೆ ತರಲಿದೆ. ಅದನ್ನ ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅಮಿತ್‌ ಶಾ ಹೇಳಿದ್ದರು. ಇದಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಇಂದು ಸಂಜೆ 5 ಕ್ಕೆ ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ – BJPಯ ಇಬ್ಬರು ಡಿಸಿಎಂ

    2019ರಲ್ಲಿ ‘ಸಿಎಎ’ ವಿಧೇಯಕವನ್ನು ಸಂಸತ್ತು ಅನುಮೋದಿಸಿತ್ತು. ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಪ್ರತಿಪಕ್ಷಗಳ ನೇತೃತ್ವದಲ್ಲಿ ದೇಶಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿದ್ದವು. ಈ ಕಾಯಿದೆಯು ತಾರತಮ್ಯ ನೀತಿಯಿಂದ ಕೂಡಿದ್ದು, ಇದನ್ನು ವಾಪಾಸ್‌ ಪಡೆಯಬೇಕು ಮುಸ್ಲಿಂ ಸಮುದಾಯ ಹಾಗೂ ಪ್ರತಿಪಕ್ಷಗಳಿಂದ ದೊಡ್ಡ ಪ್ರಮಾಣದ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಗಲಭೆಗಳಲ್ಲಿ ದೇಶದ ವಿವಿಧೆಡೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಇದನ್ನೂ ಓದಿ: ಕಸ ಮತ್ತೆ ಡಸ್ಟ್‌ಬಿನ್‌ಗೆ ಹೋಗಿದೆ – ಪಕ್ಷ ತೊರೆದ ನಿತೀಶ್ ಕುಮಾರ್‌ಗೆ ಲಾಲೂ ಪುತ್ರಿ ಟಾಂಗ್

  • ಆಸ್ಟ್ರೇಲಿಯಾ ಪೌರತ್ವ ಪಡೆದ ಕನ್ನಡ ನಟಿ ದೀಪಿಕಾ

    ಆಸ್ಟ್ರೇಲಿಯಾ ಪೌರತ್ವ ಪಡೆದ ಕನ್ನಡ ನಟಿ ದೀಪಿಕಾ

    ಚಿಂಗಾರಿ (Chingari) ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡ ನಟಿ ದೀಪಿಕಾ ಕಾಮಯ್ಯ (Deepika Kamaiah), ಇದೀಗ ಆಸ್ಟ್ರೇಲಿಯಾ (Australia)  ಪೌರತ್ವ  ಪಡೆದಿದ್ದಾರೆ. ಹಲವು ವರ್ಷಗಳಿಂದ ಆಸ್ಟ್ರೇಲಿಯಾದಲ್ಲೇ ನೆಲೆಸಿರುವ ಅವರು, ತಾವು ಆ ದೇಶದ ಪೌರತ್ವವನ್ನು ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.

    ಸಿಟಿಜನ್ ಶಿಪ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಫೋಟೋವನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಪೌರತ್ವ (Citizenship) ಪಡೆದುಕೊಂಡ ಪ್ರಮಾಣಪತ್ರವನ್ನೂ ಅವರು ತೋರಿಸಿದ್ದಾರೆ. ಗೋಪಿ ಎನ್ನುವವರ ಜೊತೆ ಮದುವೆಯಾಗಿರುವ ದೀಪಿಕಾ, ಅವರೊಂದಿಗೆ ಆಸ್ಟ್ರೇಲಿಯಾದಲ್ಲೇ ವಾಸವಿದ್ದಾರೆ. ಈ ಕಾರಣಕ್ಕಾಗಿ ಅವರು ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಮಾನ್ಯವಾಗಿದೆ.

    ಚಿಂಗಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ದೀಪಿಕಾ, ನಂತರ ಬಿಗ್ ಬಾಸ್ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಂಡ ನಂತರ ಅವರಿಗೆ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಗಿತ್ತು. ಇದೆಲ್ಲವನ್ನೂ ಮುಗಿಸಿಕೊಂಡು ಅವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು.