Tag: Citizenship amendment bill

  • ಪೌರತ್ವ ತಿದ್ದುಪಡಿ ಮಸೂದೆಗೆ ಇಮ್ರಾನ್ ಖಾನ್ ಆಕ್ರೋಶ

    ಪೌರತ್ವ ತಿದ್ದುಪಡಿ ಮಸೂದೆಗೆ ಇಮ್ರಾನ್ ಖಾನ್ ಆಕ್ರೋಶ

    ಇಸ್ಲಾಮಾಬಾದ್: ಪೌರತ್ವ ತಿದ್ದುಪಡಿ ಮಸೂದೆ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದು, ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಭಾರತದ ಪೌರತ್ವ ಮಸೂದೆಯು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನನ್ನು ಉಲ್ಲಂಘಿಸುತ್ತದೆ. ಅಲ್ಲದೆ ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.

    ಬಿಜೆಪಿ ಹಾಗೂ ಆರ್‌ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪೌರತ್ವ  ಮಸೂದೆಯು ಹಿಂದೂ ರಾಷ್ಟ್ರದ ಭಾಗವಾಗಿದೆ. ಅದೇ ರೀತಿಯಾಗಿ ಇದನ್ನು ನಿರ್ಮಿಸಲಾಗಿದೆ ಎಂದು ಹರಿಹಾಯ್ದಿದ್ದಾರೆ.

    ಪೌರತ್ವ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಪಾಸ್ ಆಗಿದ್ದು, ಬುಧವಾರ ರಾಜ್ಯಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತವಿಲ್ಲ. ಆದರೂ ಸಹ ತಟಸ್ಥವಾಗಿರುವ ಪಕ್ಷಗಳನ್ನು ಸೆಳೆಯಲು ಸರ್ಕಾರ ಮುಂದಾಗಿದೆ.

     ಮಸೂದೆಗೆ ಈಶಾನ್ಯ ರಾಜ್ಯಗಳು ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ವಿಪಕ್ಷಗಳು ಸಹ ಈ ಕುರಿತು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿವೆ. ಕಾಂಗ್ರೆಸ್ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಇತರೆ ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಮಸೂದೆ  ಅಸಂವಿಧಾನಿಕವಾಗಿದೆ ಎಂದು ದೂರಿವೆ.

    ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದು, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಲೋಕಸಭೆಯಲ್ಲಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದಾರೆ.

    ಈಶ್ವಾನ್ಯ ರಾಜ್ಯಗಳಲ್ಲಿಯೂ ಸಹ ಈ ಕುರಿತು ಜನಾಕ್ರೋಶ ಹೆಚ್ಚಾಗುತ್ತಿದೆ. ಅಕ್ರಮ ವಲಸಿಗರನ್ನು ಧಾರ್ಮಿಕ ಆಧಾರದ ಮೇಲೆ ಹೊರತಾಗಿಯೂ ಗಡಿಪಾರು ಮಾಡುವ 1985ರ ಅಸ್ಸಾಂ ಒಪ್ಪಂದವನ್ನು ರದ್ದುಗೊಳಿಸಿ, ಮಸೂದೆಯನ್ನು ಅಂಗೀಕಾರ ಮಾಡಲಾಗುತ್ತಿದೆ ಎಂದು ಈಶಾನ್ಯ ರಾಜ್ಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

  • ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ

    ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ

    ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದು, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದಾರೆ.

    ಗೃಹ ಸಚಿವರು ಲೋಕಸಭೆಯಲ್ಲಿ ಮಸೂದೆ ಮಂಡಿಸುತ್ತಿದ್ದಂತೆ ವಿರೋಧ ಪಕ್ಷಗಳು ಕೋಲಾಹಲ ಎಬ್ಬಿಸಿವೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮಸೂದೆಯ ಪ್ರತಿಯನ್ನು ಹರಿದು ಹಾಕಿದ್ದಾರೆ. ಈ ಮಸೂದೆಯ ಮೂಲಕ ಭಾರತವನ್ನು ವಿಭಾಗಿಸಲಾಗುತ್ತಿದೆ. ಹೀಗಾಗಿ ಈ ಮಸೂದೆಯನ್ನು ನಾನು ಹರಿದು ಹಾಕುತ್ತೇನೆ. ಇದು ಎರಡನೇ ವಿಭಜನೆಯಾಗಿದೆ ಎಂದು ಕಿಡಿಕಾರಿದ್ದಾರೆ.

    ಇತ್ತ ಈಶ್ವಾನ್ಯ ರಾಜ್ಯಗಳಲ್ಲಿಯೂ ಸಹ ಈ ಕುರಿತು ಜನಾಕ್ರೋಶ ಹೆಚ್ಚಾಗುತ್ತಿದೆ. ಅಕ್ರಮ ವಲಸಿಗರನ್ನು ಧಾರ್ಮಿಕ ಆಧಾರದ ಮೇಲೆ ಹೊರತಾಗಿಯೂ ಗಡಿಪಾರು ಮಾಡುವ 1985ರ ಅಸ್ಸಾಂ ಒಪ್ಪಂದವನ್ನು ರದ್ದುಗೊಳಿಸಿ, ಮಸೂದೆಯನ್ನು ಅಂಗೀಕಾರ ಮಾಡಲಾಗುತ್ತಿದೆ ಎಂದು ಈಶಾನ್ಯ ರಾಜ್ಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

    ಮಸೂದೆ ಕುರಿತು ಈಶಾನ್ಯ ರಾಜ್ಯಗಳಲ್ಲಿನ ಬಹುತೇಕ ಜನ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಆರು ದಶಕಗಳ ಹಳೆಯ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವುದು ತಿದ್ದುಪಡಿಯ ಉದ್ದೇಶವಾಗಿದೆ.

    ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆಯು 293 ಮತಗಳಿಂದ ಲೋಕಸಭೆಯಲ್ಲಿ ಪಾಸ್ ಆಗಿದೆ. ಲೋಕಸಭೆಯಲ್ಲಿ ಸೋಮವಾರ ನಡೆದ ಪೌರತ್ವ ತಿದ್ದುಪಡಿ ಮಸೂದೆ ಚರ್ಚೆ ನಡೆಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಸೂದೆಯನ್ನು ಸದನದಲ್ಲಿ ಮಂಡಿಸಿ ಮತಕ್ಕೆ ಹಾಕಿದರು. ಆದರೆ ಇದಕ್ಕೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿ, ಇದು ಅಲ್ಪಸಂಖ್ಯಾತ ವಿರೋಧಿ ಎಂದು ಕರೆದರು. ಆರೋಪವನ್ನು ತಳ್ಳಿ ಹಾಕಿದ ಅಮಿತ್ ಶಾ, ಪೌರತ್ವ ತಿದ್ದುಪಡಿ ಮಸೂದೆಯು ಶೇ.0.001 ರಷ್ಟು ಕೂಡ ದೇಶದ ಅಲ್ಪಸಂಖ್ಯಾತ ಸಮುದಾಯದ ವಿರುದ್ಧವಿಲ್ಲ ಎಂದು ಸ್ಪಷ್ಟಪಡಿಸಿದರು.

    ಮಸೂದೆ ಮಂಡನೆಗೂ ಮುನ್ನ ಮಾತನಾಡಿದ ಅಮಿತ್ ಶಾ, ನಿಮ್ಮ ಪ್ರತಿ ಪ್ರಶ್ನೆಗೂ ನಾವು ಉತ್ತರಿಸುತ್ತೇವೆ. ಆದರೆ ಸದನವನ್ನು ಬಹಿಷ್ಕರಿಸಿ ಹೊರ ನಡೆಯಬೇಡಿ. ಈ ಮಸೂದೆಯಲ್ಲಿ ಒಮ್ಮೆಯೂ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಲಾಗಿಲ್ಲ ಎಂದು ಮನವಿ ಮಾಡಿಕೊಂಡರು. ಇದನ್ನು ಲೆಕ್ಕಿಸಿದ ವಿಪಕ್ಷಗಳ ಸಂಸದರು, ಮಸೂದೆ ಮಂಡಿಸುವುದನ್ನು ವಿರೋಧಿಸುತ್ತಲೇ ಇದ್ದರು. ಇದರಿಂದಾಗಿ ಸುಮಾರು ಒಂದು ಗಂಟೆ ಸುದೀರ್ಘ ಚರ್ಚೆಯಾಯಿತು.

    ಕಾಂಗ್ರೆಸ್‍ನ ಸಂಸದ, ಮುಖಂಡ ಅಧೀರ್ ರಂಜನ್ ಚೌಧರಿ, ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಅನೇಕ ಸಂಸದರು ಸದನದಲ್ಲಿ ಅಸಮಾಧಾನ ಹೊರಹಾಕಿದರು. ಈ ಎಲ್ಲ ಬೆಳವಣಿಗೆಯಿಂದಾಗಿ ಸ್ಪೀಕರ್ ಓಂ ಬಿರ್ಲಾ ಮಸೂದೆಯನ್ನು ಮಂಡಿಸಿ, ಮತದಾನಕ್ಕೆ ಹಾಕುವಂತೆ ನಿರ್ದೇಶನ ನೀಡಿದರು. ಮಸೂದೆಯನ್ನು ಮತಕ್ಕೆ ಹಾಕಿದಾಗ 375 ಸಂಸದರು ಮತದಾನದಲ್ಲಿ ಭಾಗವಹಿಸಿದ್ದರು. ಈ ಪೈಕಿ 293 ಸಂಸದರು ಮಸೂದೆ ಪರವಾಗಿ ಮತ ಹಾಕಿದರೆ, ಪ್ರತಿಪಕ್ಷದ 82 ಸಂಸದರು ವಿರೋಧವಾಗಿ ಮತ ಹಾಕಿದರು. ಪೌರತ್ವ ತಿದ್ದುಪಡಿ ಮಸೂದೆಯೂ ಬಹುಮತ ಪಡೆದು ಲೋಕಸಭೆಯಲ್ಲಿ ಪಾಸ್ ಆಯಿತು.

  • ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಪಾಸ್ – ಪರ 311, ವಿರುದ್ಧ 80 ಮತ

    ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಪಾಸ್ – ಪರ 311, ವಿರುದ್ಧ 80 ಮತ

    ನವದೆಹಲಿ: ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆಯು 311 ಮತಗಳಿಂದ ಲೋಕಸಭೆಯಲ್ಲಿ ಪಾಸ್ ಆಗಿದೆ.

    ಲೋಕಸಭೆಯಲ್ಲಿ ಸೋಮವಾರ ನಡೆದ ಪೌರತ್ವ ತಿದ್ದುಪಡಿ ಮಸೂದೆ ಚರ್ಚೆಯು ಕೋಲಾಹಲ ಉಂಟು ಮಾಡಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಸೂದೆಯನ್ನು ಸದನದಲ್ಲಿ ಮಂಡಿಸಿ ಮತಕ್ಕೆ ಹಾಕಿದರು. ಆದರೆ ಇದಕ್ಕೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿ, ಇದು ಅಲ್ಪಸಂಖ್ಯಾತ ವಿರೋಧಿ ಎಂದು ಕರೆದರು. ಆರೋಪವನ್ನು ತಳ್ಳಿ ಹಾಕಿದ ಅಮಿತ್ ಶಾ, ಪೌರತ್ವ ತಿದ್ದುಪಡಿ ಮಸೂದೆಯು ಶೇ.0.001 ರಷ್ಟು ಕೂಡ ದೇಶದ ಅಲ್ಪಸಂಖ್ಯಾತ ಸಮೂದಾಯದ ವಿರುದ್ಧವಿಲ್ಲ ಎಂದು ಸ್ಪಷ್ಟಪಡಿಸಿದರು.

    ಮಸೂದೆ ಮಂಡನೆಗೂ ಮುನ್ನ ಮಾತನಾಡಿದ ಅಮಿತ್ ಶಾ, ನಿಮ್ಮ ಪ್ರತಿ ಪ್ರಶ್ನೆಗೂ ನಾವು ಉತ್ತರಿಸುತ್ತೇವೆ. ಆದರೆ ಸದನವನ್ನು ಬಹಿಷ್ಕರಿಸಿ ಹೊರನಡೆಯಬೇಡಿ. ಈ ಮಸೂದೆಯಲ್ಲಿ ಒಮ್ಮೆಯೂ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಲಾಗಿಲ್ಲ ಎಂದು ಮನವಿ ಮಾಡಿಕೊಂಡರು. ಇದನ್ನು ಲೆಕ್ಕಿಸಿದ ವಿಪಕ್ಷಗಳ ಸಂಸದರು, ಮಸೂದೆ ಮಂಡಿಸುವುದನ್ನು ವಿರೋಧಿಸುತ್ತಲೇ ಇದ್ದರು. ಇದರಿಂದಾಗಿ ಸುಮಾರು ಒಂದು ಗಂಟೆ ಸುದೀರ್ಘ ಚರ್ಚೆಯಾಯಿತು.

    ಕಾಂಗ್ರೆಸ್‍ನ ಸಂಸದ, ಮುಖಂಡ ಅಧೀರ್ ರಂಜನ್ ಚೌಧರಿ, ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಅನೇಕ ಸಂಸದರು ಸದನದಲ್ಲಿ ಅಸಮಾಧಾನ ಹೊರಹಾಕಿದರು. ಈ ಎಲ್ಲ ಬೆಳವಣಿಗೆಯಿಂದಾಗಿ ಸ್ಪೀಕರ್ ಓಂ ಬಿರ್ಲಾ ಮಸೂದೆಯನ್ನು ಮಂಡಿಸಿ, ಮತದಾನಕ್ಕೆ ಹಾಕುವಂತೆ ನಿರ್ದೇಶನ ನೀಡಿದರು. ಮಸೂದೆಯನ್ನು ಮತಕ್ಕೆ ಹಾಕಿದ್ದಾಗ 391 ಸಂಸದರು ಮತದಾನದಲ್ಲಿ ಭಾಗವಹಿಸಿದ್ದರು. ಈ ಪೈಕಿ 311 ಸಂಸದರು ಮಸೂದೆ ಪರವಾಗಿ ಮತ ಹಾಕಿದರೆ, ಪ್ರತಿಪಕ್ಷದ 80 ಸಂಸದರು ವಿರೋಧವಾಗಿ ಮತ ಹಾಕಿದರು. ಪೌರತ್ವ ತಿದ್ದುಪಡಿ ಮಸೂದೆಯೂ ಬಹುಮತ ಪಡೆದು ಲೋಕಸಭೆಯಲ್ಲಿ ಪಾಸ್ ಆಗಿದೆ.

    ಧಾರ್ಮಿಕ ಆಧಾರದ ಮೇಲೆ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳು ಸದನದಲ್ಲಿ ಗದ್ದಲ ಶುರು ಮಾಡಿದರುವು. ಮಸೂದೆಯನ್ನು ಮಂಡಿಸಿದರೆ ಅಮಿತ್ ಶಾ ಅವರ ಹೆಸರನ್ನು ಹಿಟ್ಲರ್ ಹಾಗೂ ಇಸ್ರೇಲ್‍ನ ಮೊದಲ ಪ್ರಧಾನಿ ಡೇವಿಡ್ ಬೆನ್ ಗುರಿಯನ್ ಅವರೊಂದಿಗೆ ಸೇರಿಸಲಾಗುವುದು ಎಂದು ಅಸಾದುದ್ದೀನ್ ಓವೈಸಿ ಗುಡುಗಿದರು. ಅವರ ಈ ಹೇಳಿಕೆಗೆ ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು.

    ಈ ವೇಳೆ ಮಧ್ಯೆ ಪ್ರವೇಶಿಸಿದ ಸ್ಪೀಕರ್ ಓಂ ಬಿರ್ಲಾ ಅವರು, ಸದನದಲ್ಲಿ ಅಸಂಸದೀಯ ಪದಗಳನ್ನು ಬಳಸಬೇಡಿ. ನಿಮ್ಮ ಹೇಳಿಕೆಯನ್ನು ದಾಖಲೆಯಿಂದ ತೆಗೆದು ಹಾಕಲಾಗುತ್ತದೆ ಎಂದು ಸೂಚಿಸಿದರು.

    ವಿಪಕ್ಷಗಳಿಗೆ ಶಾ ಸುದೀರ್ಘ ಉತ್ತರ:
    ವಿಪಕ್ಷಗಳ ಆರೋಪಗಳಿಗೆ ಅಮಿತ್ ಶಾ ಉತ್ತರಿಸಲು ಆರಂಭಿಸಿ, ಈ ಮಸೂದೆ ಯಾವುದೇ ರೀತಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧವಲ್ಲ. ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸದಿದ್ದರೆ, ಪೌರತ್ವ ಮಸೂದೆಯನ್ನು ತರುವ ಅಗತ್ಯವೇ ಇರಲಿಲ್ಲ. ಸಮಾನತೆಯ ಕಾನೂನು ಇದ್ದರೆ ಅಲ್ಪಸಂಖ್ಯಾತರಿಗೆ ಹೇಗೆ ಸವಲತ್ತುಗಳು ಸಿಗುತ್ತವೆ? ಸಂವಿಧಾನದ 14ನೇ ವಿಧಿ ಶಿಕ್ಷಣ ಮತ್ತು ಇತರ ವಿಷಯಗಳಲ್ಲಿ ಉಲ್ಲಂಘನೆಯಾಗಿಲ್ಲವೇ? ಎಲ್ಲ ಉಲ್ಲಂಘನೆಗಳನ್ನು ಗಣನೆಗೆ ತೆಗೆದುಕೊಂಡ ನಂತರವೇ ಮಸೂದೆಯನ್ನು ರಚಿಸಲಾಗಿದೆ ಎಂದು ತಿಳಿಸಿದರು.

    ಅಫ್ಘಾನಿಸ್ತಾನದ ಸಂವಿಧಾನದ 2ನೇ ವಿಧಿ ಪ್ರಕಾರ, ಆ ದೇಶ ಇಸ್ಲಾಮಿಕ್ ಆಗಿದೆ. ಪಾಕಿಸ್ತಾನ ಕೂಡ ಇಸ್ಲಾಮಿಕ್ ಆಗಿದೆ. ಬಾಂಗ್ಲಾದೇಶದ ಸಂವಿಧಾನದಲ್ಲಿ ಇಸ್ಲಾಂ ಧರ್ಮ ಎಂದು ತಿಳಿಸಲಾಗಿದೆ. ನಾನು ಇದನ್ನು ಉಲ್ಲೇಖಿಸುತ್ತಿದ್ದೇನೆ. ಏಕೆಂದರೆ ಈ ಮೂರು ದೇಶಗಳ ಸಂವಿಧಾನವು ಧರ್ಮವನ್ನು ಉಲ್ಲೇಖಿಸುತ್ತದೆ. ಆದರೂ ಈ ಮೂರು ದೇಶಗಳಿಂದ ನಿರಾಶ್ರಿತರು ಇಲ್ಲಿಗೆ ಬರುತ್ತಿದ್ದಾರೆ ಎಂದು ಹೇಳಿದರು.

    ತುಳಿತಕ್ಕೊಳಗಾದ ಮುಸ್ಲಿಮರಿಗೆ ಆಶ್ರಯ ನೀಡುವ ಕುರಿತು ಪ್ರತಿಕ್ರಿಯಿಸಿದ ಅಮಿತ್ ಶಾ, ಮೂರು ನೆರೆಹೊರೆಯ ದೇಶಗಳ ಯಾವುದೇ ಮುಸ್ಲಿಂ ಧಾರ್ಮಿಕ ಕಿರುಕುಳದ ಆಧಾರದ ಮೇಲೆ ಪೌರತ್ವವನ್ನು ಕೋರಿದರೆ, ನಾವು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತೇವೆ. ಪ್ರಧಾನಿ ಮೋದಿ ಸರ್ಕಾರದ ಹಿಂದಿನ ಅವಧಿಯಲ್ಲಿ ಪೌರತ್ವ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದರೂ ರಾಜ್ಯಸಭೆಯಲ್ಲಿ ಸಿಲುಕಿಕೊಂಡಿತ್ತು. ಈ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಡಿಸೆಂಬರ್ 4ರಂದು ಅಂಗೀಕರಿಸಿತ್ತು. ಈ ಮಸೂದೆಯು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಮುಸ್ಲಿಮೇತರರಿಗೆ (ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು) ಭಾರತೀಯ ಪೌರತ್ವ ನೀಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.

  • ಸಂಸತ್ತು ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿದ್ರೆ ಭಾರತ ಇಸ್ರೇಲ್ ಆಗುತ್ತೆ: ಓವೈಸಿ

    ಸಂಸತ್ತು ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿದ್ರೆ ಭಾರತ ಇಸ್ರೇಲ್ ಆಗುತ್ತೆ: ಓವೈಸಿ

    ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ಎಐಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಅವರು, ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿದರೆ ಭಾರತವು ಇಸ್ರೇಲ್ ಆಗಲಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

    ಈ ಮಸೂದೆಯ ಮೂಲಕ ಭಾರತವನ್ನು ಧಾರ್ಮಿಕ ದೇಶವನ್ನಾಗಿ ಮಾಡಲು ಸರ್ಕಾರ ಬಯಸಿದೆ. ಈ ಮೂಲಕ ಭಾರತವು ತಾರತಮ್ಯಕ್ಕೆ ಹೆಸರುವಾಸಿಯಾದ ಇಸ್ರೇಲ್‍ನಂತಹ ದೇಶಗಳ ಸಾಲಿಗೆ ಸೇರಲಿದೆ. ಈಶಾನ್ಯ ರಾಜ್ಯಗಳಿಗೆ ವಿನಾಯಿತಿ ನೀಡುವ ವರದಿಗಳು ನಿಜವಾಗಿದ್ದರೆ, ಅದು ಸಂವಿಧಾನದಲ್ಲಿನ ಮೂಲಭೂತ ಹಕ್ಕುಗಳ 14ನೇ ಪರಿಚ್ಛೇದದ ಉಲ್ಲಂಘನೆಯಾಗಿದೆ. ಏಕೆಂದರೆ ಒಂದು ದೇಶದಲ್ಲಿ ಪೌರತ್ವಕ್ಕೆ ಸಂಬಂಧಿಸಿದ ಎರಡು ಕಾನೂನುಗಳು ಇರಲಾರವು ಎಂದು ಓವೈಸಿ ತಿಳಿಸಿದ್ದಾರೆ.

    ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪುತ್ರಿ ಸನಾ ಇಲ್ತಿಜಾ ಜಾವೇದ್ ಕೂಡ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಸ್ಥಾನವಿಲ್ಲ. ಮುಸ್ಲಿಂ ಸಮುದಾಯವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರ ಬಯಸಿದೆ ಎಂದು ಆರೋಪಿಸಿದ್ದಾರೆ.

    ಪೌರತ್ವ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಜೊತೆಗೆ ಸರ್ಕಾರವು ಮಸೂದೆಯನ್ನು ಗುರುವಾರ ಅಥವಾ ಶುಕ್ರವಾರ ಮಾತ್ರ ಸಂಸತ್ತಿನಲ್ಲಿ ಮಂಡಿಸಲು ಯೋಚನೆ ನಡೆಸಿದೆ. ಈ ಮಸೂದೆಯು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಮುಸ್ಲಿಮೇತರರಿಗೆ (ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ) ಭಾರತೀಯ ಪೌರತ್ವ ನೀಡಲು ಅನುಕೂಲವಾಗಲಿದೆ.

    ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ಸನಾ ಇಲ್ತಿಜಾ ಜಾವೇದ್, ಸರ್ಕಾರದ ಉದ್ದೇಶ ಸ್ಪಷ್ಟವಾಗಿದೆ. ಭಾರತದಲ್ಲಿ ಹರಡಿರುವ ಮುಸ್ಲಿಂ ಜನಸಂಖ್ಯೆಯ ಸ್ಥಿತಿಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಬಯಸುತ್ತಿದೆ. ಮುಸ್ಲಿಮರು ಸಮುದಾಯವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಇದರಿಂದ ಮುಸ್ಲಿಮರು ದೇಶದಲ್ಲಿ ಕೆಳವರ್ಗದ ನಾಗರಿಕರಾಗಿ ಉಳಿಯುತ್ತಾರೆ ಎಂದು ದೂರಿದ್ದಾರೆ.

    ಕಾಂಗ್ರೆಸ್, ಶಿವಸೇನೆ, ತೃಣಮೂಲ ಕಾಂಗ್ರೆಸ್, ಡಿಎಂಕೆ, ಎಸ್‍ಪಿ, ಬಿಎಸ್‍ಪಿ, ಆರ್‌ಜೆಡಿ, ಸಿಪಿಐ (ಎಂ), ಎಐಎಂಐಎಂ, ಬಿಜೆಡಿ ಮತ್ತು ಅಸ್ಸಾಂನ ಬಿಜೆಪಿಯ ಮಿತ್ರ ರಾಷ್ಟ್ರಗಳು ಎಜಿಪಿ ಮಸೂದೆಯನ್ನು ವಿರೋಧಿಸುತ್ತಿವೆ. ಆದರೆ, ಅಕಾಲಿ ದಳ, ಜೆಡಿಯು ಎಐಎಡಿಎಂಕೆ ಸರ್ಕಾರದೊಂದಿಗೆ ಇವೆ. ಅಸ್ಸಾಂ ಹಾಗೂ ಇತರ ಈಶಾನ್ಯ ರಾಜ್ಯಗಳಲ್ಲಿಯೂ ಈ ಮಸೂದೆಯನ್ನು ವಿರೋಧಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

    ಪೌರತ್ವ ಕಾನೂನು 1955ರಲ್ಲಿ ಬಂದಿದೆ. ಇದರ ಅಡಿ ಭಾರತ ಸರ್ಕಾರವು 11 ವರ್ಷಗಳ ಕಾಲ ದೇಶದಲ್ಲಿ ಉಳಿದುಕೊಂಡ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಮುಸ್ಲಿಮೇತರರಿಗೆ (ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು) ಪೌರತ್ವವನ್ನು ನೀಡುತ್ತದೆ.

    ಸರ್ಕಾರ ಯಾವ ತಿದ್ದುಪಡಿ ಮಾಡಲಿದೆ?
    ತಿದ್ದುಪಡಿ ಮಾಡಿದ ಮಸೂದೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತ ನಿರಾಶ್ರಿತರಿಗೆ ಪೌರತ್ವ ನೀಡುವ ಸಮಯವನ್ನು 1 ರಿಂದ 6 ವರ್ಷಕ್ಕೆ ಇಳಿಸಿದೆ. ಅಲ್ಲದೆ 2014ರ ಡಿಸೆಂಬರ್ 31ರಂದು ಅಥವಾ ಅದಕ್ಕೂ ಮೊದಲು ಬಂದ ಮುಸ್ಲಿಮೇತರರು ಪೌರತ್ವಕ್ಕೆ ಅರ್ಹರಾಗಿರುತ್ತಾರೆ. ಮಾನ್ಯ ದಾಖಲೆಗಳಿಲ್ಲದೆ ಕಂಡುಬಂದರೂ ಅವರನ್ನು ಜೈಲಿಗೆ ಹಾಕಲಾಗುವುದಿಲ್ಲ.

    ಪ್ರತಿಭಟನೆ ಯಾಕೆ?
    ಸಂಸತ್ತಿನಲ್ಲಿ ಪೌರತ್ವ ಮಸೂದೆಯನ್ನು ಅಂಗೀಕರಿಸಿದರೆ, ಬಾಂಗ್ಲಾದೇಶದ ಹೆಚ್ಚಿನ ಸಂಖ್ಯೆಯ ಹಿಂದೂಗಳಿಗೆ ಪೌರತ್ವ ನೀಡುವುದರಿಂದ ಮೂಲ ನಿವಾಸಿಗಳ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ. ಇದು ರಾಜ್ಯಗಳ ಸಾಂಸ್ಕೃತಿಕ, ಭಾಷಾ ಮತ್ತು ಸಾಂಪ್ರದಾಯಿಕ ಪರಂಪರೆಯ ಮೇಲೆ ಬಿಕ್ಕಟ್ಟನ್ನುಂಟು ಮಾಡುತ್ತದೆ ಎನ್ನುವುದು ಈಶಾನ್ಯ ರಾಜ್ಯಗಳ ದೂರಾಗಿದೆ.

    ಅಸ್ಸಾಂ ಒಪ್ಪಂದ:
    1971ಕ್ಕಿಂತ ಮೊದಲು ಬಂದ ಜನರಿಗೆ ಪೌರತ್ವ ನೀಡುವ ಅವಕಾಶವಿತ್ತು. ಈ ಮಸೂದೆ ಅಸ್ಸಾಂಗೆ ಸೀಮಿತವಾಗಿಲ್ಲ. ಆದರೆ ಇದು ಇಡೀ ದೇಶದಲ್ಲಿ ಪರಿಣಾಮಕಾರಿಯಾಗಲಿದೆ ಎಂದು ಸರ್ಕಾರ ಹೇಳುತ್ತದೆ.