Tag: Citizenship

  • ಕೆನಡಾ ಪೌರತ್ವ ಬದಲಾಯಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ತೀರ್ಮಾನ

    ಕೆನಡಾ ಪೌರತ್ವ ಬದಲಾಯಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ತೀರ್ಮಾನ

    ಲವು ವರ್ಷಗಳಿಂದ ಭಾರತದಲ್ಲಿ ನೆಲೆಯೂರಿರುವ ಮತ್ತು ಭಾರತದವರೇ ಆಗಿರುವ  ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar), ಈವರೆಗೂ ಭಾರತದ (India) ಪೌರತ್ವ (Citizenship) ಹೊಂದಿರಲಿಲ್ಲ. ಹಾಗಾಗಿ ಪೌರತ್ವದ ವಿಷಯದಲ್ಲಿ ಪದೇ ಪದೇ ಟೀಕೆಗೆ ಒಳಗಾಗುತ್ತಿದ್ದರು. ದೇಶದ ಪರವಾಗಿ ಅಕ್ಷಯ್ ಕುಮಾರ್ ಮಾತನಾಡಿದಾಗೆಲ್ಲ ಪೌರತ್ವವನ್ನು ಪ್ರಶ್ನೆ ಮಾಡಲಾಗುತ್ತಿತ್ತು. ಇದರಿಂದ ಪಾರಾಗುವುದಕ್ಕಾಗಿಯೇ ಅವರು ಕೆನಡಾಗೆ ಅರ್ಜಿ ಸಲ್ಲಿಸಿದ್ದಾರಂತೆ.

    ಭಾರತದ ಪೌರತ್ವ ಪಡೆಯುವುದಕ್ಕಾಗಿ ಅವರು ಕೆನಡಾದ  (Canada)ಪಾಸ್ ಪೋರ್ಟ್ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಅಕ್ಷಯ್, ‘ನನಗೆ ಭಾರತವೇ ಎಲ್ಲ. ಅದು ಎಲ್ಲವನ್ನೂ ನನಗೆ ಕೊಟ್ಟಿದೆ. ನಾನು ಇಲ್ಲಿಯವನು ಎಂದು ಹೇಳಿಕೊಳ್ಳಲು ಹೆಮ್ಮೆ ಅನಿಸುತ್ತದೆ. ಹಾಗಾಗಿ ನಾನು ಕೆನಡಾ ಪಾಸ್ ಪೋರ್ಟ್ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.

    ಪೌರತ್ವದ ವಿಷಯದಲ್ಲಿ ಬೇಸರವನ್ನು ವ್ಯಕ್ತ ಪಡಿಸಿರುವ ಅವರು, ‘ನಾನು ಭಾರತದಿಂದ ಎಲ್ಲವನ್ನೂ ಪಡೆದುಕೊಂಡಿದ್ದೇನೆ. ಪಡೆದದ್ದೆಲ್ಲವನ್ನೂ ಭಾರತಕ್ಕೆ ಕೊಡಲಿದ್ದೇನೆ. ಆದರೆ, ಜನರನ್ನು ಕೆಲವರು ಹಾದಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಅವರು ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಇದರಿಂದ ನಿಜಕ್ಕೂ ನನಗೆ ಬೇಸರವಾಗಿದೆ’ ಎಂದು ಅವರು ಮಾತನಾಡಿದ್ದಾರೆ. ಇದನ್ನೂ ಓದಿ:ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ತಾವು ಕೆನಡಾ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರ ಕುರಿತು ಮಾತನಾಡಿರುವ ಅವರು, 1990ರ ದಶಕದಲ್ಲಿ ಇವರ ಬಹುತೇಕ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದವಂತೆ. ರಿಲೀಸ್ ಆದ ಅಷ್ಟೂ ಸಿನಿಮಾಗಳು ಸೋತವು. ಈ ಕಾರಣದಿಂದಾಗಿ ಅವರು ಕೆನಡಾ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರಂತೆ. ದೇಶಭಕ್ತಿ ಸಾರುವಂತಹ ಸಾಕಷ್ಟು ಸಿನಿಮಾಗಳಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಇಂತಹ ಸಿನಿಮಾಗಳು ಬಂದಾಗೆಲ್ಲ ಇವರ ಪೌರತ್ವದ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಹಾಗಾಗಿ ಅವರಿಗೆ ಸಹಜವಾಗಿಯೇ ಬೇಸರವಾಗಿದೆಯಂತೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜೀವ್‌ಗಾಂಧಿ ಹತ್ಯೆ ಕೇಸ್ – ರೀಲಿಸ್ ಆದ 6 ಮಂದಿಯಲ್ಲಿ ನಾಲ್ವರು ಗಡಿಪಾರು

    ರಾಜೀವ್‌ಗಾಂಧಿ ಹತ್ಯೆ ಕೇಸ್ – ರೀಲಿಸ್ ಆದ 6 ಮಂದಿಯಲ್ಲಿ ನಾಲ್ವರು ಗಡಿಪಾರು

    ನವದೆಹಲಿ/ಚೆನ್ನೈ: ರಾಜೀವ್‌ಗಾಂಧಿ ಗಾಂಧಿ ಹತ್ಯೆ (Rajiv Gandhi Murder Case) ಪ್ರಕರಣದಲ್ಲಿ ದೋಷಿಗಳಾಗಿದ್ದ 6 ಮಂದಿ 31 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾರೆ. ಆದರೆ ಬಿಡುಗಡೆಯಾದ 6 ಮಂದಿ ಪೈಕಿ ನಾಲ್ವರು ಗಡಿಪಾರು ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಮುಂದಿನ 10 ದಿನಗಳಲ್ಲಿ ಆದೇಶ ಪಡೆದು ಗಡಿಪಾರು ಆಗಲಿದ್ದಾರೆ.

    ಸುಪ್ರೀಂ ಕೋರ್ಟ್ (Supreme Court) ಆರೋಪಿಗಳ ಶಿಕ್ಷೆಯನ್ನು ಕಡಿತಗೊಳಿಸಿದ್ದರಿಂದಾಗಿ ನವೆಂಬರ್ 12ರಂದು ದೋಷಿಗಳನ್ನೂ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಆ ಬಳಿಕ ತಿರುಚ್ಚಿ ವಿಶೇಷ ಶಿಬಿರದಲ್ಲಿ (Trichy Special Camp) ಗಡಿಪಾರು ಮಾಡಲು ನಿರ್ಧರಿಸಿದ್ದು, ಅವರು ಹೋಗಲು ಬಯಸುವ ದೇಶಗಳಿಗೆ ಕಳುಹಿಸಿಕೊಡಲು ನಿರ್ಣಯ ಕೈಗೊಳ್ಳಲಾಗಿದೆ. ವಿಶೇಷ ಶಿಬಿರ ಅಂದರೆ, ದೇಶದ ನೆಲದಲ್ಲಿ ಇದ್ದುಕೊಂಡೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಪ್ರಜೆಗಳನ್ನು ಗಡಿಪಾರು ಮಾಡುವವರೆಗೆ ಇರಿಸುವ ಸ್ಥಳ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆ – ಜೀವಾವಧಿ ಶಿಕ್ಷೆಗೊಳಗಾದ 6 ಮಂದಿಯ ಬಿಡುಗಡೆಗೆ ಸುಪ್ರೀಂ ಆದೇಶ

    ರಾಬರ್ಟ್ ಪಾಯಸ್ ಉಪವಾಸ ಸತ್ಯಾಗ್ರಹ ನಡೆಸಲು ಯೋಜನೆ ರೂಪಿಸಿದ್ದರು. ಈ ವೇಳೆ ವಿಶೇಷ ಶಿಬಿರಕ್ಕೇ ಭೇಟಿ ನೀಡಿದ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಸಮಸ್ಯೆ ಬಗೆಹರಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ವಿದೇಶಗಳಲ್ಲಿ ಪೌರತ್ವ ದೃಢೀಕರಿಸಿದ ನಂತರ ಗಡಿಪಾರು ಮಾಡಲಾಗುತ್ತದೆ. ಅವರನ್ನು ಭೇಟಿ ಮಾಡಲು ರಕ್ತಸಂಬಂಧಿಗಳಿಗೆ ಮಾತ್ರ ಅವಕಾಶವಿರಲಿದೆ. ಆದರೆ ದೋಷಿಗಳಾಗಿದ್ದವರು ಗಡಿಪಾರು ವೇಳೆ ಮೊಬೈಲ್‌ಫೋನ್‌ಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

    ಸಂತನ್ ಶ್ರೀಲಂಕಾಗೆ (SriLanka) ಹೋಗುವುದಾಗಿ ಹೇಳಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಿದೇಶಿ ಪ್ರಾದೇಶಿಕ ನೋಂದಣಾಧಿಕಾರಿಗಳು ಶ್ರೀಲಂಕಾ ರಾಯಭಾರ ಕಚೇರಿಗೆ (Sri Lankan Embassy) ಮಾಹಿತಿ ನೀಡಿದ್ದಾರೆ. ಅವರು ತಮ್ಮ ಪೌರತ್ವ (Citizenship) ದೃಢೀಕರಿಸಿದ ನಂತರ, ನಾವು ಸಂತನ್‌ನನ್ನು ಗಡೀಪಾರು ಮಾಡುತ್ತೇವೆ. 10 ದಿನಗಳಲ್ಲಿ ಗಡಿಪಾರು ಆದೇಶ ಸಿಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಗಡಿಪಾರಾಗುತ್ತಿರುವ ನಳಿನಿ ಮುರುಗನ್ ತಮ್ಮ ಮಗಳು ಹರಿತಾ ವಾಸಿಸುವ ದೇಶಕ್ಕೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಸಂತನ್ ಶ್ರೀಲಂಕಾಗೆ ಹೋಗಲು ನಿರ್ಧರಿಸಿದ್ದಾರೆ. ಉಳಿದ ಇಬ್ಬರು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಕೇಸ್‌ – 30 ವರ್ಷಗಳ ನಂತರ ನಳಿನಿ ಶ್ರೀಹರನ್‌ ಸೇರಿ 3 ಅಪರಾಧಿಗಳು ರಿಲೀಸ್‌

    ಏನಿದು ಪ್ರಕರಣ?
    1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಆರ್ಪಿ ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು. `ಅಪರಾಧಿಗಳು ತೃಪ್ತಿದಾಯಕ ನಡವಳಿಕೆ ತೋರಿದ್ದಾರೆ. ಪದವಿಗಳನ್ನು ಪಡೆದಿದ್ದು, ಪುಸ್ತಕಗಳನ್ನು ಬರೆದಿದ್ದಾರೆ. ಸಮಾಜ ಸೇವೆಯಲ್ಲಿ ಭಾಗವಹಿಸಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹತ್ಯೆ ಪ್ರಕರಣದಲ್ಲಿ ದೋಷಿಗಳಾಗಿದ್ದ 6 ಮಂದಿಯನ್ನು ಬಿಡುಗಡೆಗೊಳಿಸಿದೆ.

    ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕ್ಯಾಬಿನೆಟ್ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ರಾಜ್ಯಪಾಲರು ಬದ್ಧರಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು. ಪ್ರಸಕ್ತ ವರ್ಷದ ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್‌ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಶೀಘ್ರದಲ್ಲೇ ಭಾರತದ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸುವೆ ಎಂದು ಅಕ್ಷಯ್ ಕುಮಾರ್

    ಶೀಘ್ರದಲ್ಲೇ ಭಾರತದ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸುವೆ ಎಂದು ಅಕ್ಷಯ್ ಕುಮಾರ್

    ಬಾಲಿವುಡ್ ನಟ ಅಕ್ಷಯ್ ಕುಮಾರ್ ಈವರೆಗೂ ಕೆನಡಾ ಪಾಸ್ ಪೋರ್ಟ್ ನಲ್ಲಿ ಫಾರೀನ್ ಟೂರ್ ಮಾಡುತ್ತಿದ್ದಾರೆ. ಕೆನಡಾ ಪೌರತ್ವ ಹೊಂದಿರುವ ಕಾರಣದಿಂದಾಗಿ ಅವರಿಗೆ ಭಾರತದಲ್ಲಿ ಪಾಸ್ ಪೋರ್ಟ್ ಗಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಈ ಕಾರಣದಿಂದಾಗಿಯೇ ಹಲವಾರು ಬಾರಿ ಟೀಕೆಗೂ ಗುರಿಯಾಗಿದ್ದಾರೆ ಅಕ್ಷಯ್. ಹಾಗಾಗಿಯೇ ಸದ್ಯದಲ್ಲೇ ಅವರು ಭಾರತದ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ಅವರು ಹೇಳಿಕೊಂಡಿದ್ದಾರೆ.

    ಈ ರೀತಿ ಹೇಳಿಕೆ ಕೊಡುವುದು, ಸಂದರ್ಶನದಲ್ಲಿ ಉತ್ತರಿಸುವುದು ಅಕ್ಷಯ್ ಕುಮಾರ್ ಅವರಿಗೆ ಹೊಸದೇನೂ ಅಲ್ಲ. 2019ರಲ್ಲೇ ಅವರು ಇಂಥದ್ದೊಂದು ಹೇಳಿಕೆಯನ್ನು ನೀಡಿದ್ದರು.ಆದರೆ, ಈವರೆಗೂ ಅವರು ಪಾಸ್ ಪೋರ್ಟ್ ಬದಲಾಯಿಸಿಕೊಂಡಿಲ್ಲ. ಇದೀಗ ಮತ್ತೆ ಸಂದರ್ಶನವೊಂದರಲ್ಲಿ ಭಾರತದ ಪಾಸ್ ಪೋರ್ಟ್ ಗಾಗಿ ಅರ್ಜಿ ಸಲ್ಲಿಸುವುದಾಗಿ ಹೇಳಿಕೊಂಡಿದ್ದಾರೆ. ಅವರ ಮಾತು ಇದೀಗ ಮತ್ತೆ ಟ್ರೋಲ್ ಆಗಿದೆ. ಸುಳ್ಳು ಹೇಳದೆ, ಭರವಸೆ ಕೊಡದೇ ಆದಷ್ಟು ಬೇಗ ಭಾರತದ ಪೌರತ್ವ ಪಡೆಯಿರಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ:ಗುರೂಜಿಗೆ ಬಿಗ್ ಬಾಸ್ ಡಬಲ್ ಶಾಕ್: ಸೂಟ್ ಕೇಸ್ ರೆಡಿ ಮಾಡಿ ಎಂದ ನಟ ಸುದೀಪ್

    ದೇಶಭಕ್ತಿಯ ವಿಚಾರದಲ್ಲಿ ಹಲವಾರು ಭಾಷಣಗಳನ್ನು ಅಕ್ಷಯ್ ಕುಮಾರ್ ಮಾಡಿದ್ದಾರೆ. ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ. ಆದರೆ, ಅಕ್ಷಯ್ ಕುಮಾರ್ ಮಾತ್ರ ಕೆನಡಾ ಪೌರತ್ವ ಹೊಂದಿದ್ದಾರೆ. ಭಾರತದಲ್ಲಿ ಅವರು ಹಲವು ವರ್ಷಗಳಿಂದ ಇದ್ದರೂ, ಇನ್ನೂ ಕೆನಡಾ ಪಾಸ್ ಪೋರ್ಟ್ ಹೊಂದಿದ್ದಾರೆ. ಹೀಗಾಗಿ ಪದೇ ಪದೇ ಈ ಪ್ರಶ್ನೆಯು ಅವರಿಗೆ ಎದುರಾಗುತ್ತಿದ.ಇದರಿಂದ ತಪ್ಪಿಸಿಕೊಳ್ಳಲು ಭಾರತದ ಪಾಸ್ ಪೋರ್ಟ್ ಗೆ ಅತೀ ಶೀಘ್ರದಲ್ಲೇ ಅರ್ಜಿ ಹಾಕುವುದಾಗಿ ಅಕ್ಷಯ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೈಲಾಗದವರು, ಗೆಲ್ಲಲಾರದವರು ನನ್ನ ಪೌರತ್ವ ಕೇಳ್ತಾರೆ : ನಟ ಚೇತನ್

    ಕೈಲಾಗದವರು, ಗೆಲ್ಲಲಾರದವರು ನನ್ನ ಪೌರತ್ವ ಕೇಳ್ತಾರೆ : ನಟ ಚೇತನ್

    ಭೂತಕೋಲ ಹಿಂದೂ ಸಂಸ್ಕೃತಿ ಎನ್ನುವ ವಿಚಾರವಾಗಿ ನಟ ಚೇತನ್ ಆಡಿದ ವಿರೋಧಿ ಮಾತುಗಳು ಭಾರೀ ಚರ್ಚೆಯನ್ನು ಹುಟ್ಟು ಹಾಕಿವೆ. ಭೂತಕೋಲ ಹಿಂದೂ ಸಂಸ್ಕೃತಿಯ ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹೇಳಿದ್ದರು. ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ, ಅದೊಂದು ಬುಡಕಟ್ಟು ಸಂಪ್ರದಾಯ ಎಂದು ಹೇಳುವ ಮೂಲಕ ಚೇತನ್ ಹಲವರ ಕಂಗೆಣ್ಣಿಗೆ ಗುರಿಯಾಗಿದ್ದರು.

    ಚೇತನ್ (Chetan) ಈ ರೀತಿ ಹೇಳುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ನಾನಾ ರೀತಿಯ ಕಾಮೆಂಟ್ ಗಳು ಬಂದವು. ಅದರಲ್ಲೂ ಚೇತನ್ ಪೌರತ್ವದ (Citizenship) ಬಗ್ಗೆಯೂ ಪ್ರಶ್ನೆ ಮಾಡಲಾಯಿತು. ಚೇತನ್ ಭಾರತದ ಪೌರತ್ವ ಪಡೆದಿಲ್ಲ. ಹಾಗಾಗಿ ಭಾರತದ ಬಗ್ಗೆ ಮಾತನಾಡುವಂತಹ ನೈತಿಕ ಹಕ್ಕು ಅವರಿಗಿಲ್ಲ ಎಂದು ಹಲವರು ಪ್ರಶ್ನೆ ಮಾಡಿದ್ದರು. ಈ ಪ್ರಶ್ನೆಗೂ ಚೇತನ್ ಇದೀಗ  ಉತ್ತರಿಸಿದ್ದಾರೆ. ಇದನ್ನೂ ಓದಿ: ರಿಷಬ್ ಹೇಳಿದ ಹಿಂದೂ ಪದ ಒಪ್ಪಲ್ಲ, ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ: ಸಮರ್ಥಿಸಿದ ಚೇತನ್

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಚೇತನ್, ‘ನಾನು ಚರ್ಚೆಯ ಮೂಲಕ ಗೆಲ್ಲಬೇಕು. ಸಂವಾದದ ಮೂಲಕ ಅರ್ಥ ಮಾಡಿಕೊಳ್ಳಬೇಕು. ನಾನು ಆಡಿದ ಮಾತುಗಳಲ್ಲಿ ಏನು ಸುಳ್ಳು ಇದೆ ಹೇಳಲಿ. ಯಾರಿಗೆ ನನ್ನನ್ನು ಸೋಲಿಸಲು ಆಗುವುದಿಲ್ಲವೋ, ಅವರು ಪೌರತ್ವದ ಬಗ್ಗೆ ಮಾತನಾಡುತ್ತಾರೆ. ನನ್ನ ಹುಟ್ಟು ನನ್ನ ಕೈಯಲ್ಲಿ ಇಲ್ಲ. ಯಾರ ಕೈಯಲ್ಲೂ ಇಲ್ಲ. ನಾನು ಯಾವಾಗಲೂ ಸತ್ಯದ ಪರವಾಗಿ ಇರುತ್ತೇನೆ. ಹಾಗಾಗಿ ಈ ರೀತಿಯ ಮಾತುಗಳನ್ನು ಕೇಳಿಸಿಕೊಳ್ಳುವುದು ಅನಿವಾರ್ಯ’ ಅಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್-19 ಲಸಿಕಾಕರಣದ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ: ಅಮಿತ್ ಶಾ

    ಕೋವಿಡ್-19 ಲಸಿಕಾಕರಣದ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ: ಅಮಿತ್ ಶಾ

    ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು ಅನುಕೂಲವಾಗುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು(ಸಿಎಎ) ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದ್ದಾರೆ.

    ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಅಮಿತ್ ಶಾ ಸಿಎಎ ಜಾರಿಗೆ ತರುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

    ಸರ್ಕಾರ ಏಪ್ರಿಲ್ ತಿಂಗಳಿನಲ್ಲಿ ಜನರಿಗೆ ಬೂಸ್ಟರ್ ಡೋಸ್ ನೀಡಲು ಪ್ರಾರಂಭಿಸಿದೆ. ಇದು 9 ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಕಾರ್ಯ ಮುಗಿದ ಬಳಿಕ ಸಿಎಎ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಕೇಂದ್ರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸುವೆಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂತೋಷವಾಗಿದೆ. ನಾವು ಸಂಸತ್ತಿನ ಕಚೇರಿಯಲ್ಲಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿ, ಶಿಕ್ಷಕರ ನೇಮಕಾತಿ ಹಗರಣದಂತಹ ಭ್ರಷ್ಟ ಚಟುವಟಿಕೆಗಳಲ್ಲಿ ಬಂಗಾಳ ಸರ್ಕಾರ ಹೇಗೆ ಸಂಪೂರ್ಣವಾಗಿ ಮುಳುಗಿದೆ ಎಂಬುದನ್ನು ನಾನು ಅವರಿಗೆ ವಿವರಿಸಿದ್ದೇನೆ. ಇದೇ ವೇಳೆ ಅವರು ಆದಷ್ಟು ಬೇಗ ಸಿಎಎ ಯನ್ನು ಜಾರಿಗೆ ತರುವಂತೆ ಮನವಿ ಮಾಡಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಸಿಕ್ಕಿದ ಹಣ ನನಗೆ ಸೇರಿದ್ದಲ್ಲ, ಯಾರೋ ಅಲ್ಲಿ ಇಟ್ಟಿದ್ದಾರೆ: ಅರ್ಪಿತಾ ಮುಖರ್ಜಿ

    ಏನಿದು ಸಿಎಎ?
    ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಹಾಗೂ ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವುದು ಸಿಎಎ ಯ ಉದ್ದೇಶವಾಗಿದೆ. ಇದರ ಪ್ರಕಾರ ಧಾರ್ಮಿಕ ಕಿರುಕುಳವನ್ನು ಅನುಭವಿಸಿ 2014ರ ಡಿಸೆಂಬರ್ 31ರ ವರೆಗೆ ಭಾರತಕ್ಕೆ ಬಂದಿರುವ ಈ ಸಮುದಾಯದ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸದೇ, ಬದಲಿಗೆ ಅವರಿಗೆ ಭಾರತದ ಪೌರತ್ವವನ್ನು ನೀಡಲಾಗುತ್ತದೆ.

    2019ರ ಡಿಸೆಂಬರ್‌ನಲ್ಲಿ ಸಂಸತ್ತು ಸಿಎಎ ಯನ್ನು ಅಂಗೀಕರಿಸಿತ್ತು. ಆದರೆ ಈ ಕಾಯ್ದೆಯ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿತ್ತು. ಮುಸ್ಲಿಂ ಸಮುದಾಯದವರ ತಾರತಮ್ಯ ಮಾಡುವ ಉದ್ದೇಶ ಈ ಯೋಜನೆಯಲ್ಲಿದೆ ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಮಾಜಿ ಸಚಿವ ಪಾರ್ಥ ಚಟರ್ಜಿ ಮೇಲೆ ಚಪ್ಪಲಿ ಎಸೆದ ಮಹಿಳೆ

    ಈ ಪ್ರತಿಭಟನೆಗಳ ನಡುವೆಯೂ ಗೃಹ ಸಚಿವ ಅಮಿತ್ ಶಾ ಈ ಆರೋಪಗಳನ್ನು ತಳ್ಳಿ ಹಾಕಿ, ಸಿಎಎ ವಿರುದ್ಧದ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಬಣ್ಣಿಸಿದ್ದರು. ಈ ಕಾಯ್ದೆಯಿಂದ ಯಾವುದೇ ಭಾರತೀಯರು ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನೇಪಾಳದಲ್ಲಿ ಮೊದಲ ಪೌರತ್ವ ತಿದ್ದುಪಡಿ ಅಂಗೀಕಾರ

    ನೇಪಾಳದಲ್ಲಿ ಮೊದಲ ಪೌರತ್ವ ತಿದ್ದುಪಡಿ ಅಂಗೀಕಾರ

    ಕಠ್ಮಂಡು: ರಾಜಕೀಯ ಒಮ್ಮತಗಳನ್ನು ರೂಪಿಸಲು ವಿಫಲವಾಗಿದ್ದ ಹಾಗೂ 2 ವರ್ಷಗಳಿಗೂ ಅಧಿಕ ಕಾಲ ಚರ್ಚೆಯಲ್ಲಿದ್ದ ದೇಶದ ಮೊದಲ ಪೌರತ್ವ ತಿದ್ದುಪಡಿ ಮಸೂದೆಯನ್ನು ನೇಪಾಳದ ಸಂಸತ್ತು ಅಂಗೀಕರಿಸಿದೆ.

    ನೇಪಾಳಿ ಪುರುಷರನ್ನು ವಿವಾಹವಾಗುವ ವಿದೇಶಿ ಮಹಿಳೆಯರು ಪೌರತ್ವವನ್ನು ಪಡೆಯಲು 7 ವರ್ಷಗಳು ಬೇಕಿತ್ತು. ಇದರಿಂದಾಗಿ ಅವರು ಶಿಕ್ಷಣ ಸೇರಿದಂತೆ ಎಲ್ಲಾ ಮೂಲಭೂತ ಸೇವೆಗಳಿಂದ ವಂಚಿತರಾಗುತ್ತಿದ್ದರು. ಈ ಎಲ್ಲದರ ಹಿನ್ನೆಲೆಯಲ್ಲಿ ಮಸೂದೆಯನ್ನು ತಿದ್ದುಪಡಿಗೊಳಿಸಬೇಕು ಎಂದು ಯೋಚಿಸಿದಾಗ ರಾಜಕೀಯ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಅದನ್ನು ಅಲ್ಲೇ ಕೈಬಿಡಲಾಗಿತ್ತು. ಇದನ್ನೂ ಓದಿ: ಭಾರೀ ಮಳೆಯಿಂದ ರೈಲು ರದ್ದು- ವಿದ್ಯಾರ್ಥಿಗೆ ಕಾರಿನ ಸೇವೆ ಒದಗಿಸಿದ ಭಾರತೀಯ ರೈಲ್ವೆ ಇಲಾಖೆ

    ಆದರೆ ಇದೀಗ ಗೃಹ ಸಚಿವ ಬಾಲಕೃಷ್ಣ ಖಂಡ್ ಅವರು ನೇಪಾಳದ ಮೊದಲ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು, 2006ರಲ್ಲಿ ತಿದ್ದುಪಡಿ ಮಾಡಲು ಸಂಸತ್ತಿನಲ್ಲಿ ಮಸೂದೆಯನ್ನು ಮಂಡಲಾಗಿತ್ತು. ಅದರಂತೆ ಸಂವಿಧಾನದ ನಿರ್ದೇಶನದಂತೆ ಪೌರತ್ವವನ್ನು ಒದಗಿಸಲು ಸಹಕಾರ ನೀಡಿ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಈ ಮಸೂದೆ ಜಾರಿ ಆಯಿತು. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಎಲ್ಲ ಉಕ್ರೇನ್ ಪ್ರಜೆಗಳಿಗೆ ವೇಗವಾಗಿ ರಷ್ಯಾದ ಪೌರತ್ವ ಕೊಡಲು ಮುಂದಾದ ಪುಟಿನ್

    ಎಲ್ಲ ಉಕ್ರೇನ್ ಪ್ರಜೆಗಳಿಗೆ ವೇಗವಾಗಿ ರಷ್ಯಾದ ಪೌರತ್ವ ಕೊಡಲು ಮುಂದಾದ ಪುಟಿನ್

    ಮಾಸ್ಕೋ: ರಷ್ಯಾದ ಸೇನೆ ಪ್ರಮುಖ ಉಕ್ರೇನಿಯನ್ ನಗರವನ್ನು ಆಕ್ರಮಿಸಿಕೊಳ್ಳುತ್ತಿದ್ದಂತೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ಎಲ್ಲ ಉಕ್ರೇನಿಯನ್ನರಿಗೆ ರಷ್ಯಾದ ಪೌರತ್ವವನ್ನು ಪಡೆಯುವ ವೇಗದ ವಿಧಾನವನ್ನು ವಿಸ್ತರಿಸಿದರು.

    ಈ ಯೋಜನೆಯೂ ಯುದ್ಧದಿಂದ ಹಾನಿಗೊಳಗಾದ ಉಕ್ರೇನ್ ಮೇಲೆ ಮಾಸ್ಕೋದ ಪ್ರಭಾವವನ್ನು ಬಲಪಡಿಸುವ ಮತ್ತೊಂದು ಪ್ರಯತ್ನವಾಗಿದೆ. ಇಲ್ಲಿವರೆಗೂ ಉಕ್ರೇನ್‍ನ ಪ್ರತ್ಯೇಕತಾವಾದಿ ಪೂರ್ವ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಪ್ರದೇಶದ ನಿವಾಸಿಗಳು, ಹಾಗೆಯೇ ದಕ್ಷಿಣದ ಝಪೊರಿಝಿಯಾ ಮತ್ತು ಖೆರ್ಸನ್ ಪ್ರದೇಶದ ನಿವಾಸಿಗಳು ಮತ್ತು ಈಗ ರಷ್ಯಾದ ನಿಯಂತ್ರಣದಲ್ಲಿರುವ ಹೆಚ್ಚಿನ ಭಾಗದ ಜನರು ಪಾಸ್‍ಪೋರ್ಟ್‍ಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈ ಹಿನ್ನೆಲೆ ಪುಟಿನ್ ಅವರು ಇದರ ವಿಧಾನವನ್ನು ವೇಗವಾಗಿ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ – ಮಳೆ ದೇವನಿಗೆ ಸ್ಥಳೀಯರಿಂದ ವಿಶೇಷ ಪೂಜೆ 

    ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕ್ಲುಬಾ ಅವರು ಪಾಸ್‍ಪೋರ್ಟ್ ಆದೇಶಕ್ಕೆ ಸಹಿ ಹಾಕಿದ್ದಾರೆ. ಇದು ಉಕ್ರೇನ್‍ನಲ್ಲಿರುವ ನಿವಾಸಿಗಳಿಗೂ ಅನ್ವಯಿಸುತ್ತದೆ.

    ನಮ್ಮ ರಾಜ್ಯದ ಆಕ್ರಮಿತ ಪ್ರದೇಶಗಳ ನಿವಾಸಿಗಳ ಕುತ್ತಿಗೆಗೆ ಕುಣಿಕೆಯನ್ನು ಬಿಗಿಗೊಳಿಸಲು ಪಾಸ್‍ಪೋರ್ಟ್‍ಗಳನ್ನು ನೀಡಲು ರಷ್ಯಾ ಸರಳೀಕೃತ ವಿಧಾನವನ್ನು ಬಳಸುತ್ತಿದೆ. ಆಕ್ರಮಿತ ಆಡಳಿತಗಳು ಮತ್ತು ರಷ್ಯಾದ ಆಕ್ರಮಣಕಾರಿ ಸೈನ್ಯದ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಈ ಮೂಲಕ ಒತ್ತಾಯಿಸುತ್ತಿದೆ ಎಂದು ಉಕ್ರೇನ್‍ನ ವಿದೇಶಿ ಸಚಿವಾಲಯ ಹೇಳಿಕೆಯಲ್ಲಿ ಸೇರಿಸಿದೆ.

    2019 ರ ನಡುವೆ, ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ದ 7,20,000 ಜನರಲ್ಲಿ ಸುಮಾರು 18% ಜನರು ರಷ್ಯಾದ ಪಾಸ್‍ಪೋರ್ಟ್‍ಗಳನ್ನು ಸ್ವೀಕರಿಸಿದ್ದಾರೆ. ಇದನ್ನೂ ಓದಿ:  ʼಬೆಲ್ಲದ ದೋಸೆʼ ಮಾಡುವ ಸೂಪರ್‌ ವಿಧಾನ 

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ

    ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ

    ನವದೆಹಲಿ: ಕಳೆದ 5 ವರ್ಷಗಳಲ್ಲಿ ಭಾರತೀಯ ಪೌರತ್ವವನ್ನು ಪಡೆದಿರುವ ಶೇ.87 ರಷ್ಟು ಅರ್ಜಿದಾರರು ಪಾಕಿಸ್ತಾನದಿಂದ ಬಂದವರು ಎಂಬ ಮಾಹಿತಿಯನ್ನು ಗೃಹ ಸಚಿವಾಲಯವು ಬಹಿರಂಗಪಡಿಸಿದೆ.

    ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿ, ಕಳೆದ 5 ವರ್ಷಗಳಲ್ಲಿ 5,220 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಅವರಲ್ಲಿ 4,552 (ಶೇ.87) ಹೊಸ ನಾಗರಿಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್ – ಬೆಚ್ಚಿಬಿದ್ದ ಪೊಲೀಸರು

    REPORT

    ಕಳೆದ ವರ್ಷ ನವಂಬರ್‌ನಲ್ಲಿ ಲೋಕಸಭೆಗೆ ಮಾಹಿತಿ ನೀಡಿದ್ದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪ್ರಕಾರ, 5 ವರ್ಷಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವ ತ್ಯಜಿಸಿದ್ದಾರೆ. 2021 ರಿಂದ 2021ರ ವರೆಗೆ 6,08,162 ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಅವರು ಲೋಕಸಭೆಗೆ ತಿಳಿಸಿದ್ದರು.

    ಗೃಹ ಸಚಿವಾಲಯವು 2017 ಮತ್ತು 2022ರ ನಡುವೆ 5,220 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಪ್ರತಿವರ್ಷ ಸರಾಸರಿ 1,21,632 ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದರು ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಬೆಂಗ್ಳೂರು ಡ್ರೋನ್ ಹಾರಿಸಿ ಉತ್ಸವಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

    Passport

    ಕಳೆದ 5 ವರ್ಷಗಳಲ್ಲಿ ಕೇವಲ 71 ಅಮೆರಿಕನ್ನರು ಭಾರತೀಯ ಪೌರತ್ವ ಪಡೆದಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಪಾಕಿಸ್ತಾನ (ಶೇ.87), ಅಫ್ಘಾನಿಸ್ತಾನ (ಶೇ.8) ಮತ್ತು ಬಾಂಗ್ಲಾದೇಶ (ಶೇ.2) ಭಾರತದ ಪೌರತ್ವ ಪಡೆದುಕೊಂಡಿವೆ.

    ಯಾವ ವರ್ಷ ಎಷ್ಟು ಮಂದಿಗೆ ಪೌರತ್ವ?

    • 2017- 1,33,049
    • 2018- 1,34,561
    • 2019- 1,44,017
    • 2020- 85,248
    • 2021- 1,11,287

  • ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರನ್ನು ಭಾರತದಿಂದ ಗಡಿಪಾರು ಮಾಡುವಂತಹ ವರದಿ ಸಿದ್ಧವಾಗಿದೆ ಎಂದು ಈ ಹಿಂದೆ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಈಗ ಆ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ಚೇತನ್ ಸಮುದಾಯಗಳ ನಡುವೆ ಸಾಮರಸ್ಯ ಕದಡುತ್ತಿದ್ದಾರೆ ಎಂದು ಪೊಲೀಸ್ ಇಲಾಖೆಯು ಸರಕಾರಕ್ಕೆ ವರದಿ ನೀಡಿದೆ. ಕರ್ನಾಟಕ ಸರಕಾರವು ಸಿದ್ಧಪಡಿಸಿದ ವರದಿಯನ್ನು, ಕೇಂದ್ರಕ್ಕೆ ಕಳುಹಿಸಲಿ ಹೊರಟಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್

    ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಚೇತನ್ ಉಲ್ಲಂಘನೆ ಮಾಡಿದ್ದಾರೆ ಎಂದು ಪೊಲೀಸ್ ಇಲಾಖೆಯು ಸರಕಾರಕ್ಕೆ ವರದಿ ಸಲ್ಲಿಸಿತ್ತು. ಈಗದು ಕೇಂದ್ರ ಸರಕಾರದ ವಿದೇಶಾಂಗ  ಇಲಾಖೆಗೆ ರವಾನೆ ಆಗಲಿದೆಯಂತೆ.  ಇದನ್ನೂ ಓದಿ: ಎಂಟು ವರ್ಷಗಳ ನಂತರ ಒಂದಾದ ನೀನಾಸಂ ಸತೀಶ್ ಮತ್ತು ಸಿಂಧು

    ಓಸಿಎ ನಿಯಮದ ಪ್ರಕಾರ ಸಾಗರೋತ್ತರ ನಾಗರಿಕರು ಸಾರ್ವಜನಿಕ ಪ್ರತಿಭಟನೆ, ಸರಕಾರದ ವಿರುದ್ಧ ಚಟುವಟಿಕೆ ಮ್ತು ರಾಜಕೀಯ ಚಟುವಟಿಕೆಗಳಲ್ಲೂ ಭಾಗಿಯಾಗುವಂತಿಲ್ಲ. ಚೇತನ್ ಭಾರತಿಯ ಪ್ರಜೆಯಲ್ಲ. ಅಮೆರಿಕದ ಪೌರತ್ವ ಹೊಂದಿದ್ದಾರೆ. ಹೀಗಾಗಿ ಓಸಿಎ ನಿಯಮವನ್ನು ಚೇತನ್ ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎನ್ನುತ್ತಿದೆಯಂತೆ ಪೊಲೀಸ್ ಇಲಾಖೆ ಕೊಟ್ಟ ವರದಿ. ಇದನ್ನೂ ಓದಿ: ಉಪೇಂದ್ರ ಹೊಸ ಸಿನಿಮಾ ಮಾಡಲು ಸ್ಟಾರ್ ನಟಿ ನಯನತಾರಾ ಕಾರಣ : ಏನಿದು ಅಸಲಿ ಗುಟ್ಟು?

    ಈ ಹಿಂದೆ ಚೇತನ್ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೇ, ಚೇತನ್ ಸರಕಾರದ ವಿರುದ್ಧ ಸಾಕಷ್ಟು ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲವನ್ನೂ ದಾಖಲೆ ಸಮೇತ ವರದಿ ಸಿದ್ಧವಾಗಿದೆಯಂತೆ. ಇದನ್ನೂ ಓದಿ: ಸಮಂತಾ ಯಾಕಿಂಗ್ ಆದೆ? ಗರಂ ಆದ ಅಭಿಮಾನಿಗಳು

    ಈ ಕುರಿತು ಮೊನ್ನೆಯೇ ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿರುವ ಚೇತನ್, “ಈ ವರದಿ, ಗಡಿಪಾರಿನ ವಿಷಯವೇ ಅವರಿಗೆ ಗೊತ್ತಿಲ್ಲವಂತೆ.

  • ಪೌರತ್ವ ಸಾಬೀತುಪಡಿಸಿ ಎಂದಿದ್ದಕ್ಕೆ ಮಗ ಆತ್ಮಹತ್ಯೆ- 10 ವರ್ಷದ ಬಳಿಕ ವೃದ್ಧೆಗೆ ಮತ್ತೆ ನೋಟಿಸ್‌

    ಪೌರತ್ವ ಸಾಬೀತುಪಡಿಸಿ ಎಂದಿದ್ದಕ್ಕೆ ಮಗ ಆತ್ಮಹತ್ಯೆ- 10 ವರ್ಷದ ಬಳಿಕ ವೃದ್ಧೆಗೆ ಮತ್ತೆ ನೋಟಿಸ್‌

    ದಿಸ್ಪುರ: ಪೌರತ್ವ ಸಾಬೀತುಪಡಿಸಿ ಎಂದು ನೋಟಿಸ್‌ ನೀಡಿದ ಪರಿಣಾಮವಾಗಿ ಮಗನನ್ನು ಕಳೆದುಕೊಂಡಿದ್ದ ವೃದ್ಧೆಗೆ ಈಗ ಮತ್ತೆ ನೋಟಿಸ್‌ ನೀಡಲಾಗಿದೆ.

    ಪೌರತ್ವ ಸಾಬೀತುಪಡಿಸಿ ಎಂದು ಅಸ್ಸಾಂನ ಕ್ಯಾಚಾರ್ ಜಿಲ್ಲೆಯ 80 ವರ್ಷದ ವೃದ್ಧೆಗೆ ನೋಟಿಸ್‌ ನೀಡಲಾಗಿದೆ. 2012ರಲ್ಲಿ ಇದೇ ರೀತಿ ನೋಟಿಸ್‌ ನೀಡಲಾಗಿತ್ತು. ಆಗ ಈ ವೃದ್ಧೆಯ ಮಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಮತ್ತೆ ನೋಟಿಸ್‌ ಕೊಡಲಾಗಿದೆ. ಇದನ್ನೂ ಓದಿ: ಕೆಂಪು ಟೋಪಿ ವಿರುದ್ಧ ಅಪಪ್ರಚಾರ, ಬೇರೆ ಬಣ್ಣದ ಟೋಪಿ ಧರಿಸಲು ಜನರಿಗೆ ಒತ್ತಾಯ: ಅಖಿಲೇಶ್

    ಅಕೊಲ್‌ ರಾಣಿ ನಾಮಸೂದ್ರ ಎಂಬ ವೃದ್ಧೆ ಇಂಡೋ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿ ಸಮೀಪವಿರುವ ಕಟೋಗೋರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರಿಟಿಕರ್‌ ಭಾಗ-1ರ ನಿವಾಸಿ. ಕಳೆದ ತಿಂಗಳು, ಸಿಲ್ಚಾರ್‌ನಲ್ಲಿರುವ ವಿದೇಶಿಯರ ನ್ಯಾಯಮಂಡಳಿಯು ಮಾ.5ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ತಿಳಿಸಿದೆ.

    ನೀವು ನಿಗದಿತ ಅವಧಿಯೊಳಗೆ ನಿಮ್ಮ ಪೌರತ್ವದ ಬಗ್ಗೆ ಯಾವುದೇ ಮಾನ್ಯ ದಾಖಲೆಗಳನ್ನು ಪೊಲೀಸರ ಮುಂದೆ ಸಲ್ಲಿಸಲು ಸಾಧ್ಯವಾಗಿಲ್ಲ. ಈ ಆಧಾರದ ಮೇಲೆ ನೀವು ಅಕ್ರಮ ವಲಸಿಗರು ಎಂದು ಶಂಕಿಸಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಸುರಕ್ಷಿತವಾಗಿ ಮಗಳು ಭಾರತಕ್ಕೆ – ಪ್ರಯಾಣದ ಖರ್ಚನ್ನು ಪಿಎಂ ಕೇರ್ಸ್ ಫಂಡ್‍ಗೆ ನೀಡಿದ ತಂದೆ

    ಈ ಕುರಿತು ಮಾತನಾಡಿರುವ ವಕೀಲ ಅನಿಲ್‌ ಡೇ ಅವರು, 2012ರಲ್ಲಿ ಇದೇ ರೀತಿಯ ಸೂಚನೆಯಿಂದಾಗಿ ಅವರ ಮಗ ನಿಧನರಾದರು. ಆದರೆ ಅವರ ಮರಣದ ನಂತರ ಅವರನ್ನು ಭಾರತೀಯ ಎಂದು ಘೋಷಿಸಲಾಯಿತು. ಆ ವ್ಯಕ್ತಿಯ ತಾಯಿಗೆ ಮತ್ತೆ ಅದೇ ನ್ಯಾಯಾಲಯದಿಂದ ಹೇಗೆ ನೋಟಿಸ್‌ ಬಂದಿದೆ ಎಂಬುದು ಅರ್ಥವಾಗುತ್ತಿಲ್ಲ. ಏ.4ರಂದು ಮತ್ತೆ ಹಾಜರಾಗುವಂತೆ ಕೋರ್ಟ್‌ ಹೇಳಿದ್ದು, ಅಂದು ಸಮರ್ಪಕ ದಾಖಲೆಗಳನ್ನು ಸಲ್ಲಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    ತಂದೆಯ ಹೆಸರಿನಲ್ಲಿ ಭಾರತ ಸರ್ಕಾರವು 1956ರ ಪೌರತ್ವ ಕಾರ್ಡ್ ಅನ್ನು ಹೊಂದಿದ್ದರೂ, 2012 ರಲ್ಲಿ ಅರ್ಜುನ್ ನಾಮಸೂದ್ರ ಅವರ ಪೌರತ್ವವನ್ನು ಪ್ರಶ್ನಿಸಲಾಗಿತ್ತು. ತನ್ನನ್ನು ಬಂಧಿಸಿ ಬಾಂಗ್ಲಾದೇಶಕ್ಕೆ ತಳ್ಳುತ್ತಾರೆಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಅವರ ಕುಟುಂಬದವರು ಹೇಳಿದ್ದಾರೆ.

    2014ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಚಾರ್‌ಗೆ ಭೇಟಿ ನೀಡಿದ್ದರು. ಈ ವೇಳೆ ತಮ್ಮ ಭಾಷಣದಲ್ಲಿ ಅರ್ಜುನ್ ನಾಮಸೂದ್ರ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಅರ್ಜುನ್ ನಾಮಸೂದ್ರ ನನ್ನ ಸಹೋದರನಾಗಿದ್ದು, ಅವರ ಸಾವಿನಿಂದ ನನಗೆ ನೋವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಅರ್ಜುನ್‌ನಂಥವರಿಗೆ ಸಮಸ್ಯೆ ಆಗುವುದಿಲ್ಲ. ಯಾರೂ ಭಯಭೀತರಾಗಬೇಡಿ, ಆತ್ಮಹತ್ಯೆ ಮಾಡಿಕೊಳ್ಳಬೇಕಾಗಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಭಾರತದ ಮೇಲೆ ಯುದ್ಧದ ಎಫೆಕ್ಟ್: ಖಾದ್ಯತೈಲ, ಗೋಧಿ, ಸಿಮೆಂಟ್, ಕಬ್ಬಿಣ ದುಬಾರಿ

    ನಾವು ಗಡಿ ಪ್ರದೇಶದಲ್ಲಿ ವಾಸಿಸುತ್ತಿದ್ದೇವೆ. ಅಲ್ಲಿ ಭಾರತದಿಂದ ಹೊರದೂಡುತ್ತಾರೆಂಬ ಭಯವಿದೆ. ಆ ಭಯದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡ. 10 ವರ್ಷಗಳ ಹಿಂದೆ ನನ್ನ ಮಗನನ್ನು ಕಳೆದುಕೊಂಡೆ. ಇಂದು ಕಳೆದುಕೊಳ್ಳಲು ಏನೂ ಇಲ್ಲ. ನನ್ನ ಗುರುತನ್ನು ಮತ್ತೊಮ್ಮೆ ಸಾಬೀತುಪಡಿಸಲು ಕೇಳಿದ್ದಾರೆ. ನ್ಯಾಯಾಂಗವನ್ನು ಗೌರವಿಸಿ, ನಾನು ಪೌರತ್ವ ಸಾಬೀತುಪಡಿಸುತ್ತೇನೆ ಎಂದು ವೃದ್ಧೆ ಅಕೊಲ್‌ ರಾಣಿ ನಾಮಸೂದ್ರ ತಿಳಿಸಿದ್ದಾರೆ.