Tag: CITU

  • ಇಂದು ʻಭಾರತ್‌ ಬಂದ್‌ʼ – ದೇಶಾದ್ಯಂತ 25 ಕೋಟಿ ಕಾರ್ಮಿಕರಿಂದ ಮುಷ್ಕರ, ಬೆಂಗ್ಳೂರಲ್ಲೂ ಪ್ರತಿಭಟನೆ

    ಇಂದು ʻಭಾರತ್‌ ಬಂದ್‌ʼ – ದೇಶಾದ್ಯಂತ 25 ಕೋಟಿ ಕಾರ್ಮಿಕರಿಂದ ಮುಷ್ಕರ, ಬೆಂಗ್ಳೂರಲ್ಲೂ ಪ್ರತಿಭಟನೆ

    ನವದೆಹಲಿ: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ಇಂದು (ಬುಧವಾರ) ಭಾರತ್ ಬಂದ್‌ಗೆ (Bharat Bandh) 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.

    ಬ್ಯಾಂಕಿಂಗ್, ಇನ್ಶುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್‌ನಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯಕ್ಕೆ ಭಾರತ್ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಇದೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳು, ಮೆಟ್ರೋ, ಬಸ್ ಸಂಚಾರ, ಖಾಸಗಿ ಕಂಪನಿಗಳು ಇರಲಿವೆ. ಆದರೆ, ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್‌ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್‌ ಏವಿಯೇಷನ್‌ ಸ್ಪಷ್ಟನೆ

    ಕಳೆದ ವರ್ಷ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿವರವಾದ 17 ಅಂಶಗಳ ಬೇಡಿಕೆ ಪಟ್ಟಿಯನ್ನು ಸಲ್ಲಿಸಿದ್ದರೂ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಕಂಡುಬಂದಿಲ್ಲ ಎಂದು ಒಕ್ಕೂಟಗಳು ಹೇಳಿವೆ. ಸರ್ಕಾರ ದೇಶದ ಕಲ್ಯಾಣ ರಾಜ್ಯ ಸ್ಥಾನಮಾನವನ್ನು ಕೈಬಿಟ್ಟಿದೆ. ಅದು ವಿದೇಶಿ ಮತ್ತು ಭಾರತೀಯ ಕಾರ್ಪೊರೇಟ್‌ಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಇದು ತೀವ್ರವಾಗಿ ಅನುಸರಿಸುತ್ತಿರುವ ನೀತಿಗಳಿಂದ ಸ್ಪಷ್ಟವಾಗಿದೆ ಎಂದು ಯೂನಿಯನ್ ಫೋರಂ ಹೇಳಿಕೆಯಲ್ಲಿ ತಿಳಿಸಿದೆ.

    ಕರ್ನಾಟಕದಲ್ಲಿ ಭಾರತ ಬಂದ್ ಎಫೆಕ್ಟ್ ಇಲ್ಲದಿದ್ದರೂ ಉತ್ತರ ಭಾರತದ ಹಲವೆಡೆ ಬಂದ್ ಆಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಳೆ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಗೆ ಅಡ್ಡಿ ಎದುರಾಗುತ್ತಾ? – ಕೇಂದ್ರ ನಾಯಕರ ಸಹಕಾರ ಕೇಳಿದ ಡಿಕೆಶಿ

    ಬೆಂಗಳೂರಿನಲ್ಲಿ ಪ್ರತಿಭಟನೆಗೆ ಕೆರೆ
    ಇನ್ನೂ ದೇಶವ್ಯಾಪಿ ಪ್ರತಿಭಟನೆ ಹಿನ್ನೆಲೆ ಬೆಂಗಳೂರಿನಲ್ಲೂ AITUC, CITU, HMS, INTUC, SEWA ಸೇರಿ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಅದರಂತೆ ಫ್ರೀಡಂ ಪಾರ್ಕ್ ನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಲಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗದ ಕಾರ್ಮಿಕರೂ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

    ಬಿಹಾರದಲ್ಲಿ ಆರ್‌ಜೆಡಿ ಕಾರ್ಯಕರ್ತರಿಂದ ರೈಲು ತಡೆ
    ಬಿಹಾರ ಮತ್ತು ಬಂಗಾಳದಲ್ಲಿ ಭಾರತ್‌ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿವೆ. ಆರ್‌ಜೆಡಿ ವಿದ್ಯಾರ್ಥಿ ಸಂಘಟನೆಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಬಂಗಾಳದಲ್ಲಿ ರಸ್ತೆ ತಡೆ, ಅಂಗಡಿ ಮುಂಗಟ್ಟುಗಳನ್ನ ಹಲವೆಡೆ ಬಂದ್‌ ಮಾಡಲಾಗಿದ್ದು, ಸಾರ್ವಜನಿಕ ಸೇವೆಗಳಲ್ಲಿ ಭಾರೀ ವ್ಯತ್ಯಯ ಕಂಡುಬಂದಿದೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ

    ಬೇಡಿಕೆಗಳೇನು?
    * ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು
    * ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ತಿರಸ್ಕರಿಸಬೇಕು
    * ಕನಿಷ್ಠ ವೇತನ ಜಾರಿಗೊಳಿಸಬೇಕು
    * ಕೇಂದ್ರ ತಂದಿರುವ ನಿಯಮದಲ್ಲಿ ಸಂಘ ರಚಿಸುವ ಹಕ್ಕು ಕಸಿದುಕೊಳ್ಳಲಾಗಿದೆ
    * ಇದನ್ನು ರಾಜ್ಯ ಸರ್ಕಾರ ವಾಪಾಸ್ ಪಡೆಯಬೇಕು
    * ಹೊಸ ಸಂಘ ರಚಿಸಲು ಅನುಮತಿ ನೀಡಬೇಕು
    * ಕೆಲಸದ ಅವಧಿಯನ್ನು 12 ಗಂಟೆಯಿಂದ 8ಗಂಟೆಗೆ ಕಡಿತಗೊಳಿಸಬೇಕು
    * ಗುತ್ತಿಗೆ ನೌಕರಿ ರದ್ದುಗೊಳಿಸಿ ಖಾಯಂ ನೌಕರಿ ಜಾರಿಯಾಗಬೇಕು

    ಏನಿರುತ್ತೆ? ಏನಿರಲ್ಲ?
    – ಕೈಗಾರಿಕೆಗಳು ಬಹುತೇಕ ಬಂದ್ .
    – ಕೆಲ ಬ್ಯಾಂಕ್ ಗಳಲ್ಲಿ ಸೇವೆ ವ್ಯತ್ಯಯ
    – ಎಲ್ಲಾ ಬ್ಯಾಂಕ್ ಗಳು ಕ್ಲೋಸ್ ಇರಲ್ಲ.
    – ಬ್ಯಾಂಕ್ ಒಟ್ಟು 8 ಯೂನಿಯನ್ ಇದೆ, ಅದ್ರಲ್ಲಿ 3 ಟ್ರೇಡ್ ಯೂನಿಯನ್ ಬೆಂಬಲ ಇದೆ.
    – ವಿಮೆ ಕಚೇರಿ ಬಂದ್ ಸಾಧ್ಯತೆ.
    – ಬಾಷ್, ಟೊಯೋಟಾ ಸೇರಿದಂತೆ ಪ್ರಮುಖ ಕೈಗಾರಿಕೆಗಳು ಬಂದ್.
    – ಪೋಸ್ಟ್ ಆಫೀಸ್ ಇರಲಿದೆ.

  • ಸಿಐಟಿಯು ಬೆಂಗಳೂರು ಉತ್ತರ-ದಕ್ಷಿಣ-ರಾಮನಗರ ಜಿಲ್ಲಾ ಸಮಿತಿಗಳಿಂದ ಸ್ವಾತಂತ್ರ್ಯೋತ್ಸವದ ಅಹೋರಾತ್ರಿ ಕಾರ್ಯಕ್ರಮ

    ಸಿಐಟಿಯು ಬೆಂಗಳೂರು ಉತ್ತರ-ದಕ್ಷಿಣ-ರಾಮನಗರ ಜಿಲ್ಲಾ ಸಮಿತಿಗಳಿಂದ ಸ್ವಾತಂತ್ರ್ಯೋತ್ಸವದ ಅಹೋರಾತ್ರಿ ಕಾರ್ಯಕ್ರಮ

    ಬೆಂಗಳೂರು: ಸಿಐಟಿಯು ಬೆಂಗಳೂರು ಹಾಗೂ ಉತ್ತರ-ದಕ್ಷಿಣ-ರಾಮನಗರ ಜಿಲ್ಲಾ ಸಮಿತಿಗಳಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಹೋರಾತ್ರಿ ಕಾರ್ಯಕ್ರಮ ನಡೆಯಿತು. ನಗರದ ಟೌನ್ ಹಾಲ್‌ನ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಭೂಮಿ ತಾಯಿ ಬಳಗದಿಂದ ದೇಶಪ್ರೇಮಿ ಹಾಡುಗಳನ್ನು ಹಾಡಲಾಯಿತು.

    ಹಿರಿಯ ಸಾಹಿತಿ ಎಸ್.ಜಿ ಸಿದ್ದರಾಮಯ್ಯ ಅವರಿಂದ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಕಾರ್ಮಿಕ ಮುಖಂಡ ಹೆಚ್.ಎನ್ ಗೋಪಾಲಗೌಡ ಅವರಿಂದ ಧ್ವಜಾರೋಹಣ ನೆರವೇರಿಸಲಾಯಿತು.

    ಪ್ರಗತಿಪರ ಚಿಂತಕ, ಗಾಂಧಿವಾದಿ ವಿ.ಪಿ ಮೇನನ್, ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಸಿಐಟಿಯು ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡ ಕೆ.ಎನ್ ಉಮೇಶ್, ಸಿಐಟಿಯು ರಾಜ್ಯ ಉಪಾಧ್ಯಕ್ಷ ಡಾ. ಪ್ರಕಾಶ್ ಕೆ, ಡಿಹೆಚ್‌ಎಸ್‌ನ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಅರಹಳ್ಳಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಅವರು ಕಾರ್ಯಕ್ರಮದಲ್ಲಿ ಸೇರಿದ್ದ ನೂರಾರು ಜನರನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಯೋಧರಿಂದ್ಲೇ ಧ್ವಜಾರೋಹಣ ಮಾಡಿಸಿ ಸಂಭ್ರಮಿಸಿದ ಇಡೀ ಗ್ರಾಮ

     

    ಕಾರ್ಯಕ್ರಮದ ಸ್ವಾಗತವನ್ನು ಸಿಐಟಿಯು ಬೆಂ.ದಕ್ಷಿಣ ಜಿಲ್ಲಾ ಅಧ್ಯಕ್ಷ ಬಿ.ಎನ್ ಮಂಜುನಾಥ್, ನಿರೂಪಣೆಯನ್ನು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಪ್ರತಾಪ್ ಸಿಂಹ, ದಕ್ಷಿಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜು, ಉತ್ತರ ಜಿಲ್ಲಾ ಕಾರ್ಯದರ್ಶಿ ಪಿ. ಮುನಿರಾಜು ಹಾಗೂ ವಂದನಾರ್ಪಣೆಯನ್ನು ರಾಮನಗರ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಅವರು ಮಾಡಿದರು.

    ಕಾರ್ಯಕ್ರಮದಲ್ಲಿ ಸಿಐಟಿಯು ರಾಜ್ಯ ಮುಖಂಡರಾದ ಕೆ. ಮಹಂತೇಶ್, ಟಿ. ಲೀಲಾವತಿ, ಮಾಲಿನಿ ಮೇಸ್ತಾ, ವಿವಿಧ ಸಂಘಟನೆಗಳ ರಾಜ್ಯ ಮುಖಂಡರಾದ ಜಿ.ಎನ್ ನಾಗರಾಜ್, ನಿತ್ಯಾನಂದಸ್ವಾಮಿ, ಚಂದ್ರಪ್ಪ ಹೋಸ್ಕೆರಾ, ಗೌರಮ್ಮ, ಕೆ.ಎಸ್ ವಿಮಲ, ಟಿ. ಸುರೇಂದ್ರ ರಾವ್ ಹಾಗೂ ಸಿಐಟಿಯು ಜಿಲ್ಲಾ, ವಿವಿಧ ಸಂಘಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ: ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ಮೋದಿಯವರ ಕೊಡುಗೆ ಅನನ್ಯ: ಬಾಲಚಂದ್ರ ಜಾರಕಿಹೊಳಿ

    Live Tv

    [brid partner=56869869 player=32851 video=960834 autoplay=true]

  • ಕೋವಿಡ್ ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ಹಣ: ಸಿಐಟಿಯು ತೀವ್ರ ಖಂಡನೆ

    ಕೋವಿಡ್ ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ಹಣ: ಸಿಐಟಿಯು ತೀವ್ರ ಖಂಡನೆ

    – ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ದುರ್ಬಳಕೆ ತೀವ್ರ ಖಂಡನೆ

    ಬೆಂಗಳೂರು: ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ 40 ಲಕ್ಷ ಕೋವಿಡ್ ಲಸಿಕೆಗಳನ್ನು ನೀಡುವ ನೆಪದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ರೂಪಾಯಿಗಳನ್ನು ಧಾರೆ ಎರೆಯಲು ಹೊರಟಿದ್ದಾರೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕೈಗೊಂಡಿರುವ ಈ ಕ್ರಮವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಿಐಟಿಯು ತೀವ್ರವಾಗಿ ಖಂಡಿಸಿದೆ. ಕೂಡಲೇ ಈ ತೀರ್ಮಾನವನ್ನು ಹಿಪಡೆಯಬೇಕೆಂದು ಆಗ್ರಹಿಸಿದೆ.

    ಕಾರ್ಮಿಕ ಸಚಿವರು ಖಾಸಗಿ ಆಸ್ಪತ್ರೆಗಳ ಮಾಲಿಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದು ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಕಾರ್ಮಿಕ ಸಚಿವರು ಹಾಗೂ ಮಂಡಳಿ ಅಧಿಕಾರಿಗಳ ಕೂಟವು ದುರ್ಬಳಕೆ ಮಾಡಿಕೊಳ್ಳಲು ಇಂತಹ ಪ್ರಯತ್ನ ನಡೆಸಿದೆ ಎಂಬ ಆರೋಪ ಕೇಳಿ ಬಂದಿವೆ.

    ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯು ದೇಶಾದ್ಯಾಂತ ಎಲ್ಲ ನಾಗರಿಕರಿಗೂ ಉಚಿತವಾಗಿ ಕೋವಿಡ್ ಲಸಿಕೆಗಳನ್ನು ವಿತರಿಸುತ್ತಿದೆ. ಕರ್ನಾಟಕದಲ್ಲೂ ನಿರ್ಮಾಣ ವಲಯದ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ಹಾಗೂ ವಲಸೆ ಕಾರ್ಮಿಕರು ಮೊದಲನೆ ಹಾಗೂ ಎರಡನೇ ಡೋಸ್‍ಗಳನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಹೀಗಿದ್ದೂ ಖಾಸಗಿ ಆಸ್ಪತ್ರೆಗಳಿಂದ ಲಸಿಕೆ ಖರೀದಿಸುವ ಅಗತ್ಯವಾದರೂ ಏನಿದೆ ಎಂದು ಸಿಐಟಿಯು ಪ್ರಶ್ನಿಸಿದೆ. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಬೂಸ್ಟಪ್ ಕಿಟ್ ಹಾಗೂ ಸುರಕ್ಷಾ ಕಿಟ್, ಹೊಸ ತಂತ್ರಾಂಶ ಅಳವಡಿಕೆ ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ. ಅಲ್ಲದೆ 2021-22 ಸಾಲಿನಲ್ಲಿ 2688.90 ಕೋಟಿ ಮಂಡಳಿ ಹಣವನ್ನು ವಿವಿಧ ಬಾಬ್ತುಗಳಿಗೆ ಖರ್ಚು ಮಾಡಲು ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ಕೆಪಿಟಿಟಿ ಕಾಯ್ದೆ 1999 ನ್ನು ಕಾರ್ಮಿಕ ಸಚಿವರು ಮತ್ತು ಮಂಡಳಿ ಹಿರಿಯ ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಮನಬಂದಂತೆ ದುರುಪಯೋಗ ಮಾಡುತ್ತಿದ್ದಾರೆ. ಇದನ್ನೂ ಓದಿ: ಟೋಕಿಯೊ ಪ್ಯಾರಾಲಿಂಪಿಕ್ಸ್- ಹೈಜಂಪ್‍ನಲ್ಲಿ ಬೆಳ್ಳಿ ಗೆದ್ದ ತಂಗವೇಲು, ಕಂಚು ಶರದ್ ಕುಮಾರ್‌ಗೆ

    ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ರಾಜ್ಯ ಸರ್ಕಾರ ಇದಕ್ಕಾಗಿ ಖಜಾನೆಯಿಂದ ಖರ್ಚು ಮಾಡುವ ಬದಲು, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡು ಕಾರ್ಮಿಕ ಸಚಿವರು ಹಾಗೂ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕೋಟ್ಯಾಂತರ ಹಣ ಲೂಟಿ ಹೊಡೆಯುತ್ತಿದ್ದಾರೆ. ಇದು ಬಡ ಕಾರ್ಮಿಕರ ಹೆಸರಲ್ಲಿ ನಡೆಸುತ್ತಿರುವ ಹಗಲು ದರೋಡೆಯಾಗಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಿಐಟಿಯು ಆಗ್ರಹಿಸಿದೆ.

  • ನಾಳೆ ಚಿಕ್ಕಬಳ್ಳಾಪುರ ಬಂದ್‍ಗೆ ಸಿಐಟಿಯು ಸಂಘಟನೆ ಕರೆ

    ನಾಳೆ ಚಿಕ್ಕಬಳ್ಳಾಪುರ ಬಂದ್‍ಗೆ ಸಿಐಟಿಯು ಸಂಘಟನೆ ಕರೆ

    ಚಿಕ್ಕಬಳ್ಳಾಪುರ: ದೇಶವ್ಯಾಪಿ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ ಕರೆ ಹಿನ್ನಲೆಯಲ್ಲಿ ನಾಳೆ(ಬುಧವಾರ) ಚಿಕ್ಕಬಳ್ಳಾಪುರ ಜಿಲ್ಲಾ ಬಂದ್ ಗೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಸಂಘಟನೆ ಕರೆ ನೀಡಿದೆ.

    ಕನಿಷ್ಠ ವೇತನ, ಖಾತ್ರಿ ಮಾಸಿಕ ಪಿಂಚಣಿ, ಸಮಾನ ಕೆಲಸಕ್ಕೆ ಸಮಾನವೇತನ ಜಾರಿ ಮಾಡಿ ಗುತ್ತಿಗೆ ಪದ್ಧತಿ ರದ್ದತಿ, ಕಾರ್ಮಿಕರ ವಿವಿಧ ಬೇಡಿಕೆಗಳನ್ನ ಈಡೇರಿಕೆಗಾಗಿ ನಾಳೆ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಸಿಪಿಐಎಂ ಪಕ್ಷದ ಮುಖಂಡ ಮುನಿವೆಂಕಟಪ್ಪ ಮನವಿ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಎಲ್ಲಾ ಆರು ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಬಂದ್ ಗೆ ಕರ್ನಾಟಕ ಪ್ರಾಂತ ರೈತ ಸಂಘ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಭಾರತ ಕಮ್ಯೂನಿಸ್ಟ್ ಪಕ್ಷವಷ್ಟೇ ಬೆಂಬಲ ನೀಡಿರುವುದರಿಂದ ಬಂದ್ ಯಶಸ್ವಿಯಾಗುತ್ತಾ ಇಲ್ವಾ ಎಂಬುದನ್ನು ಕಾದು ನೋಡಬೇಕಿದೆ.