Tag: city police commissioner

  • ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಆರೋಪಿಯೆಂದು ಉಲ್ಲೇಖವಾಗಿಲ್ಲ: ಮಂಗಳೂರು ಪೊಲೀಸ್ ಆಯುಕ್ತರ ಸ್ಪಷ್ಟನೆ

    ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಆರೋಪಿಯೆಂದು ಉಲ್ಲೇಖವಾಗಿಲ್ಲ: ಮಂಗಳೂರು ಪೊಲೀಸ್ ಆಯುಕ್ತರ ಸ್ಪಷ್ಟನೆ

    ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಲ್ಲಿಕೆಯಾಗಿರುವ ಚಾರ್ಜ್ ಶೀಟ್ ನಲ್ಲಿ ನಿರೂಪಕಿ ಅನುಶ್ರೀ ಆರೋಪಿ ಅಂತ ಉಲ್ಲೇಖ ಆಗಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಕಿಶೋರ್ ಅಮನ್ ಡ್ರಗ್ ಕೇಸ್ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ಸಂಬಂಧ ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಚಾರ್ಜ್ ಶೀಟ್ ಬಗ್ಗೆ ಆರೋಪಗಳಿದ್ರೆ ವಕೀಲರ ಮೂಲಕ ಕೋರ್ಟ್ ಗೆ ಹೇಳಬಹುದು. ಜಾರ್ಜ್ ಶೀಟ್ ನಲ್ಲಿ ಅನುಶ್ರೀ ಆರೋಪಿ ಎಂದು ಉಲ್ಲೇಖ ಆಗಿಲ್ಲ. ಕಿಶೋರ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದರು.

    ಕಿಶೋರ್ ಅಮನ್ ಮತ್ತೆ ಕರೆದು ವಿಚಾರಣೆ ನಡೆಸುವ ಅಗತ್ಯವಿಲ್ಲ. ಪ್ರಕರಣದ ಸಂಪೂರ್ಣ ತನಿಖೆ ಪೂರ್ತಿ ಮಾಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದೇವೆ. ಒಂಬತ್ತು ತಿಂಗಳ ಹಿಂದೆಯೇ ಅಂತಿಮ ವರದಿ ಸಲ್ಲಿಸಿದ್ದೇವೆ. ಈಗ ಯಾಕೆ ಈ ವಿಚಾರ ಸುದ್ದಿಯಾಯಿತು ಗೊತ್ತಿಲ್ಲ. ಅನುಶ್ರೀ ಮೇಲೆ ಬಂದ ಆರೋಪಕ್ಕೆ ಪೂರಕ ಸಾಕ್ಷಿಗಳು ಲಭ್ಯವಾಗಿಲ್ಲ. ಆರು ಜನ ಆರೋಪಿಗಳ ಮೇಲೆ ಅಂತಿಮ ವರದಿ ಸಲ್ಲಿಸಿದ್ದೇವೆ. ಐದು ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಒಬ್ಬ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. 2020 ಸೆಪ್ಟೆಂಬರ್ 19 ಪ್ರಕರಣ ದಾಖಲು ಆಗಿತ್ತು. 2020ರ ಡಿಸೆಂಬರ್ 11ರಂದು ಅಂತಿಮ ವರದಿ ಸಲ್ಲಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಡ್ರಗ್ಸ್ ಪ್ರಕರಣ ಸಂಬಂಧ ಯಾರ ಒತ್ತಡಕ್ಕೂ ಪೊಲೀಸರು ಹಿಂಜರಿಯುವುದಿಲ್ಲ: ಅರಗ ಜ್ಞಾನೇಂದ್ರ

    ಚಾರ್ಜ್ ಶೀಟ್‍ನಲ್ಲಿ ಏನಿದೆ?:
    2007-0ರಲ್ಲಿ ನಾನು ಮತ್ತು ತರುಣ್ ಇಬ್ಬರೂ ಕೂಡಿ ಅನುಶ್ರೀಯವರಿಗೆ ಡ್ಯಾನ್ಸ್ ಕೋರಿಯಾಗ್ರಾಫಿ ಮಾಡಿರುತ್ತೇವೆ. ಅನುಶ್ರೀಯವರು ಡ್ಯಾನ್ಸ್ ಕಾಂಪಿಟೇಶನ್‍ಗೆ ಪ್ರ್ಯಾಕ್ಟೀಸ್ ಮಾಡುವ ಸಮಯದಲ್ಲಿ ತರುಣ್ ಬಾಡಿಗೆ ಮನೆಯಲ್ಲಿ ತಡರಾತ್ರಿ ತನಕ ಪ್ರ್ಯಾಕ್ಟೀಸ್ ಮಾಡುತ್ತಾ ಕೆಲವು ದಿನ ಇದ್ದರು. ಕೆಲವೊಂದು ದಿನಗಳಲ್ಲಿ ನಾನು ಕೂಡ ತರುಣ್ ಜೊತೆಗೆ ಹೋಗಿದ್ದೆ. ಆ ದಿನಗಳಲ್ಲಿ ನಾವು ಮೂರು ಜನ ತರುಣ್‍ನ ಮನೆಯಲ್ಲೇ ಅಡುಗೆ ಮಾಡಿ ಊಟ ಮಾಡುವ ಸಮಯ ಮಾದಕ ವಸ್ತುಗಳಾದ ಎಕ್ಟಸಿ ಮಾತ್ರೆಗಳನ್ನು ಸೇವನೆ ಮಾಡಿರುತ್ತೇವೆ. ಕೆಲವು ದಿನಗಳಲ್ಲಿ ಅನುಶ್ರೀ ಮತ್ತು ತರುಣ್ ಇಬ್ಬರೇ ರೂಂನಲ್ಲಿ ಉಳಿದುಕೊಳ್ಳುತ್ತಿದ್ದರು.  ಇದನ್ನೂ ಓದಿ: Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    ಅನುಶ್ರೀಯವರು ಡ್ಯಾನ್ಸ್ ಕಾಂಪಿಟೇಶನ್‍ನಲ್ಲಿ ವಿನ್ ಆಗಿದ್ದಕ್ಕೆ ನಾನು, ತರುಣ್ ಮತ್ತು ಅನುಶ್ರೀ ಬೆಂಗಳೂರಿನಲ್ಲಿ ಮಾದಕ ವಸ್ತು ಎಕ್ಟಸಿ ಮಾತ್ರೆಗಳನ್ನು ಸೇವಿಸಿ ಡ್ರಗ್ಸ್, ಡ್ರಿಂಕ್ಸ್ ಪಾರ್ಟಿ ಮಾಡಿರುತ್ತೇವೆ. ಮಾದಕ ಸೇವನೆ, ಖರೀದಿಯಲ್ಲಿ ಅನುಶ್ರೀಯವರು ಭಾಗಿಯಾಗಿರುತ್ತಾರೆ. ನಾವು ಡ್ಯಾನ್ಸ್ ಪ್ರ್ಯಾಕ್ಟೀಸ್ ಮಾಡುವ ಸಮಯ ಮತ್ತು ಅನುಶ್ರೀಯವರಿಗೆ ಕೋರಿಯಾಗ್ರಾಫಿಂಗ್ ಪ್ರ್ಯಾಕ್ಟೀಸ್ ಮಾಡುವ ಸಮಯದಲ್ಲಿ ಹಲವಾರು ಬಾರಿ ಮಾದಕ ವಸ್ತು ಎಕ್ಟಸಿ ಮಾತ್ರೆಗಳನ್ನು ಸೇವಿಸಿರುತ್ತೇವೆ. ಅನುಶ್ರೀಯವರು ಪ್ರ್ಯಾಕ್ಟೀಸ್ ಮಾಡಲು ನಮ್ಮ ರೂಂಗೆ ಬರುವಾಗ ಎಕ್ಟಸಿ ಮಾತ್ರೆಗಳನ್ನು ಖರೀದಿಸಿ ತಂದು ನಮಗೆ ನೀಡಿ ನಮ್ಮ ಜೊತೆ ಸೇವೆನೆಯನ್ನೂ ಮಾಡಿರುತ್ತಾರೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣದ ಬಗ್ಗೆ ಅಂದು ಕಣ್ಣೀರಿಟ್ಟು ಅನುಶ್ರೀ ಹೇಳಿದ್ದೇನು?

    ಡ್ಯಾನ್ಸ್ ಮಾಡಲು ಇದು ಹೆಚ್ಚು ತಾಕತ್ತು ಕೊಡುತ್ತದೆ, ಡ್ಯಾನ್ಸ್ ಮಾಡಲು ಖುಷಿ ಸಿಗುತ್ತದೆ, ಪ್ರ್ಯಾಕ್ಟೀಸ್ ಮಾಡಲು ಸುಲಭವಾಗುತ್ತದೆ ಎಂದು ನಾವೆಲ್ಲರೂ ಮಾತಾಡಿಕೊಳ್ಳುತ್ತಿದ್ದೆವು. ಡ್ರಗ್ಸ್ ಯಾರು ನೀಡುತ್ತಾರೆ ಎಂದು ಅನುಶ್ರೀಯವರಿಗೆ ನಮಗಿಂತ ಹೆಚ್ಚು ತಿಳಿದಿದೆ. ಅವರಿಗೆ ಡ್ರಗ್ಸ್ ಪೆಡ್ಲರ್‍ಗಳ ಪರಿಚಯ ಇರುತ್ತದೆ. ಅವರು ಸುಲಭವಾಗಿ ಮಾದಕ ವಸ್ತುಗಳನ್ನು ತರಿಸುತ್ತಾರೆ. ಅವರು ಹೇಗೆ ತರಿಸುತ್ತಾರೆ ಎಂದು ನನಗೆ ತಿಳಿದಿಲ್ಲ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದ್ದು, ಇದಕ್ಕೆ ಕಿಶೋರ್ ಅಮನ್ ಶೆಟ್ಟಿ ಸಹಿ ಕೂಡ ಹಾಕಿರುವ ಪ್ರತಿ ಲಭ್ಯವಾಗಿದೆ.

  • ಲುಂಗಿ ಡ್ಯಾನ್ಸ್‌ಗೆ ಸ್ಟೆಪ್ ಹಾಕಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್

    ಲುಂಗಿ ಡ್ಯಾನ್ಸ್‌ಗೆ ಸ್ಟೆಪ್ ಹಾಕಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್

    ಮಂಗಳೂರು: ನಗರ ಪೊಲೀಸ್ ಅಂದ್ರೆ ಯಾವಾಗಲೂ ಏನಾದರೂ ಒಂದು ಕಿರಿ ಕಿರಿ ಇದ್ದೇ ಇರುತ್ತೆ. ಯಾಕಂದ್ರೆ ಹೇಳಿ ಕೇಳಿ ಮಂಗಳೂರು ಮೋಸ್ಟ್ ಹ್ಯಾಪನಿಂಗ್ ಸಿಟಿ. ಸದ್ಯ ಈ ಪೊಲೀಸರಿಗೆ ಒಂದು ಸವಾಲು ಮತ್ತೆ ಮಸ್ತಿ ಮಾಡಲು ಒಂದು ಕಾರ್ಯಕ್ರಮ ಮಾಡಲಾಗಿತ್ತು. ಇದ್ರಲ್ಲಿ ಪೊಲೀಸ್ ಸಖತ್ ಎಂಜಾಯ್ ಮಾಡಿದ್ರು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಲುಂಗಿ ಡ್ಯಾನ್ಸ್ ಗೆ ಸಖತದ ಸ್ಟೆಪ್ ಹಾಕಿದ್ದು, ಅವರಿಗೆ ಡಿಸಿಪಿ ಹರಿರಾಂ ಶಂಕರ್ ಸಾಥ್ ನೀಡಿದ್ರು. ಇವರಿಗೆ ಕೋಸ್ಟಲ್‍ವುಡ್ ಮತ್ತು ಸ್ಯಾಂಡಲ್‍ವುಡ್ ನಟ ಪೃಥ್ವಿ ಅಂಬರ್ ಸ್ಟೆಪ್ ಹಾಕಿಸಿದ್ರು.

    ಕಳೆದ ಎರಡು ತಿಂಗಳಿನಿಂದ ಮಂಗಳೂರು ನಗರ ಪೊಲೀಸರಿಗೆ ದೈಹಿಕ ಸದೃಢತೆಯ ಕಾರ್ಯಗಾರ ನಡೆಯುತ್ತಿತ್ತು. ಅದರ ಸಮಾರೋಪ ಕಾರ್ಯಕ್ರಮದಲ್ಲಿ ಈ ರೀತಿ ಪೊಲೀಸರು ಸಖತ್ ಎಂಜಾಯ್ ಮಾಡಿದ್ರು. 70 ಕೆಜಿಗಿಂತ ಹೆಚ್ಚು ತೂಕ ಇದ್ದ ಪೊಲೀಸರಿಗೆ ಕಳೆದ ಎರಡು ತಿಂಗಳಿನಿಂದ ಯಾವುದೇ ಕೆಲಸ ಕೊಡದೇ ಕೇವಲ ವರ್ಕೌಟ್, ಯೋಗ ಮತ್ತು ವ್ಯಾಯಾಮಗಳನ್ನು ಮಾಡಿಸಲಾಗುತ್ತಿತ್ತು. ಪುರುಷ ಹಾಗೂ ಮಹಿಳಾ ಪೊಲೀಸರು ಎರಡು ತಿಂಗಳಲ್ಲಿ ಅಧಿಕ 8 ಕೆ.ಜಿ, ಕನಿಷ್ಠ ಮೂರು ಕೆ.ಜಿ ತೂಕ ಇಳಿಸಿದ್ದಾರೆ. ತೂಕ ಇಳಿಸಿದವರಿಗೆ ಸನ್ಮಾನಿಸಲಾಯ್ತು.

    ಕಾರ್ಯಕ್ರಮದಲ್ಲಿ ಪೊಲೀಸರಿಂದ ಕಸರತ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದಲ್ಲದೇ ವೃತ್ತಿಪರ ಕಲಾವಿದರು ಹಾಡು ನೃತ್ಯದ ಮೂಲಕ ನೆರೆದಿದ್ದವರನ್ನು ರಂಜಿಸಿದ್ರು. ಪೊಲೀಸರು ಮತ್ತು ಪೊಲೀಸ್ ಕುಟುಂಬ ಈ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿದ್ರು. ಇದೇ ವೇಳೆ ಪೊಲೀಸ್ ಇಲಾಖೆಯಿಂದ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಮ್.ಲಕ್ಷ್ಮಿಪ್ರಸಾದ್ ಮಾಡಿದ್ರು. ನಟ ಪೃಥ್ವಿ ಅಂಬರ್ ಜೊತೆ ಪೊಲೀಸ್ ಕಮಿಷನರ್ ಶಶಿಕುಮಾರ್ ಹಾಡನ್ನು ಕೂಡ ಹಾಡಿದ್ರು.

    ಯಾವಾಗಲು ಕ್ರೈಮು, ಕೇಸು, ಕಾನೂನು ಸುವ್ಯವಸ್ಥೆ ಅಂತ ಜಂಜಾಟದಲ್ಲಿದ್ದ ಪೊಲೀಸರಿಗೆ ಇಂಹತ ಕಾರ್ಯಕ್ರಮದಿಂದ ಮತ್ತಷ್ಟು ಎನರ್ಜಿ ಬಂದಿದೆ. ಹೀಗಾಗಿ ಇಂತಹ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲಾ ಕಡೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ನಡೆಸುವ ಬಗ್ಗೆ ರಾಜ್ಯ ಗೃಹ ಇಲಾಖೆ ಚಿಂತನೆಯನ್ನು ಮಾಡಿದೆ. ಇಂತಹ ಸ್ಟ್ರೆಸ್ ಬರ್ನ್ ಕಾರ್ಯಕ್ರಮಗಳನ್ನು ಆಗಾಗ ಆಗ್ತಾ ಇದ್ದರೆ ಸಮಾಜದ ಸ್ವಾಸ್ಥ ಕಾಪಾಡಲು ಪೊಲೀಸರಿಗೆ ಇನ್ನಷ್ಟು ಎನರ್ಜಿ ಕೂಡ ಬರುತ್ತೆ.