Tag: CJI

  • ಆರ್ಟಿಕಲ್ 370 ರದ್ದು, ದಸರಾ ರಜೆ ಬಳಿಕ ವಿಚಾರಣೆ – ಸಿಜೆಐ

    ಆರ್ಟಿಕಲ್ 370 ರದ್ದು, ದಸರಾ ರಜೆ ಬಳಿಕ ವಿಚಾರಣೆ – ಸಿಜೆಐ

    ನವದೆಹಲಿ: ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಂಬರುವ ದಸರಾ ರಜೆಯ (Dasara) ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.

    ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (Uday Umesh Lalit) ಅವರ ಮುಂದೆ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ವಿರಾಮದ ನಂತರ ಅದನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಅಕ್ಟೋಬರ್ 3 ರಿಂದ 10ರವರೆಗೂ ಒಂದು ವಾರದ ದಸರಾ ಹಬ್ಬದ ಹಿನ್ನೆಲೆ ಕೋರ್ಟ್ ರಜೆಯಲ್ಲಿರಲಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗಿನ ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ

    court order law

    ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019ರ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಉಳಿದಿವೆ. ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ತರುವಾಯ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು, ಲಡಾಖ್, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿವೆ. ಇದನ್ನೂ ಓದಿ: Bigg Boss 9- ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ದಿಢೀರ್ ಅಂತ ರಾಜೇಶ್ ಸಾವು: ಬಿಗ್ ಬಾಸ್ ಮನೆಗೆ ಬರ್ತಾರಾ ನಟ ಸುನೀಲ್?

    ಮಾರ್ಚ್ 2020ರಲ್ಲಿ ಸುಪ್ರೀಂಕೋರ್ಟ್‍ನ 5 ನ್ಯಾಯಾಧೀಶರ ಸಂವಿಧಾನಿಕ ಪೀಠವು 370ನೇ ವಿಧಿಯನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು 7 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ಹೇಳಿತ್ತು. ಕೆಲವು ಅರ್ಜಿದಾರರು ಸುಪ್ರೀಂಕೋರ್ಟ್‍ನ ಎರಡು ತೀರ್ಪುಗಳ ನಡುವೆ ಸಂಘರ್ಷವಿದೆ ಎಂದು ವಾದಿಸಿ 7 ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠ, ಹಿಂದಿನ ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು.

    Live Tv
    [brid partner=56869869 player=32851 video=960834 autoplay=true]

  • ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

    ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಯು.ಯು ಲಲಿತ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ.

    ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ವಕೀಲ ವರ್ಗದಿಂದ ನೇರವಾಗಿ ಪದೋನ್ನತಿ ಪಡೆದ 2ನೇ ಸಿಜೆಐ ಆಗಿದ್ದಾರೆ. ಪದೋನ್ನತಿ ಪಡೆದ ಮೊದಲ ಸಿಜೆಐ ಆಗಿ ಎಸ್.ಎಂ ಸಿಕ್ರಿ ಅವರು 1971 ರಿಂದ ಏಪ್ರಿಲ್ 1973ರ ವರೆಗೆ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಿಂದ ಉದಯ್‌ ಸೂರ್ಯ ಔಟ್

    ನ್ಯಾಯಮೂರ್ತಿ ಲಲಿತ್ ಅವರು ಹಿರಿಯ ವಕೀಲ ಯು.ಆರ್ ಲಲಿತ್ ಪುತ್ರನಾಗಿ 1957ರ ನವೆಂಬರ್ 9ರಲ್ಲಿ ಜನಿಸಿದರು. 1983ರ ಜೂನ್‌ನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ ಲಲಿತ್ ಅವರು ಡಿಸೆಂಬರ್ 1985ರ ವರೆಗೆ ಬಾಂಬೆ ಹೈಕೋರ್ಟ್ನಲ್ಲಿ ಅಭ್ಯಾಸ ಮಾಡಿದರು. 1986ರಲ್ಲಿ ರಾಷ್ಟ್ರ ರಾಜಧಾನಿಗೆ ತೆರಳಿ ಅಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ ಅವರು 2004ರ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಇದನ್ನೂ ಓದಿ: 2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್‌ – ಪೊಲೀಸರ ಅತಿಥಿ

    ಮುಂದೆ ಅವರು 2014ರ ಆಗಸ್ಟ್ 13ರಂದು ವಕೀಲ ವರ್ಗದಿಂದ ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. ಇದೇ ವರ್ಷ ನವೆಂಬರ್ 8 ರಂದು ಅವರು ಸಿಜೆಐ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸುಪ್ರೀಂ ಕೋರ್ಟ್ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್ ನೇಮಕ

    ಸುಪ್ರೀಂ ಕೋರ್ಟ್ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್ ನೇಮಕ

    ನವದೆಹಲಿ: ನ್ಯಾಯಮೂರ್ತಿ ಯು.ಯು.ಲಲಿತ್ (ಉದಯ್ ಉಮೇಶ್ ಲಲಿತ್) ಅವರನ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

    ಪ್ರಸ್ತುತ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿರುವ ಎನ್.ವಿ.ರಮಣ ಇದೇ ತಿಂಗಳ ಆಗಸ್ಟ್ 26ರಂದು ನಿವೃತ್ತಿ ಹೊಂದಲಿದ್ದು, ನಂತರ ಆಗಸ್ಟ್ 27ರಿಂದ ಲಲಿತ್ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಅಲ್ಲದೇ ಲಲಿತ್ ಈ ವರ್ಷದ ನವಂಬರ್ 8 ವರೆಗೆ ಮಾತ್ರವೇ ಮುಖ್ಯನ್ಯಾಯಮೂರ್ತಿಯಾಗಿ ಇರಲಿದ್ದಾರೆ.

    ಪ್ರಸ್ತುತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಲಲಿತ್ 1957 ನವಂಬರ್ 9 ರಲ್ಲಿ ಜನಿಸಿದರು. 1983ರಲ್ಲಿ ವಕೀಲರಾಗಿ ನೇಮಕವಾದರು. ನಂತರ 1985ರ ವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದರು. 1986ರ ಜನವರಿ ವರೆಗೆ ದೆಹಲಿ ಹೈಕೋರ್ಟ್ನಲ್ಲಿ ಕರ್ತವ್ಯ ನಿರ್ವಹಿಸಿದರು. ಆ ನಂತರ 2004ರಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ನೇಮಕಗೊಂಡರು. 10 ವರ್ಷಗಳ ಬಳಿಕ ಅಂದರೆ 2014 ಆಗಸ್ಟ್ 13ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದರು.

    Live Tv
    [brid partner=56869869 player=32851 video=960834 autoplay=true]

  • ಸುಪ್ರೀಂ ಕೋರ್ಟ್‌ನ ಮುಂದಿನ CJI ಆಗಿ ಯು.ಯು.ಲಲಿತ್‌ ಹೆಸರು ಶಿಫಾರಸು

    ಸುಪ್ರೀಂ ಕೋರ್ಟ್‌ನ ಮುಂದಿನ CJI ಆಗಿ ಯು.ಯು.ಲಲಿತ್‌ ಹೆಸರು ಶಿಫಾರಸು

    ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರ ಹೆಸರನ್ನು ಶಿಫಾರಸು ಮಾಡಿ ಸಿಜೆಐ ಎನ್‌.ವಿ.ರಮಣ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

    ಎನ್.ವಿ.ರಮಣ ಅವರು 2022ರ ಆಗಸ್ಟ್ 26 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ನ್ಯಾ.ಯು.ಯು.ಲಲಿತ್‌ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ರಮಣ ಅವರು ಭಾರತದ 48ನೇ ಮತ್ತು ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಲಲಿತ್ ಅವರು 49ನೇ ಸಿಜೆಐ ಆಗಲಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ಭಾರತದ ಮೇಲೆ ಉಗ್ರರ ದಾಳಿ ಭೀತಿ: ಗುಪ್ತಚರ ಇಲಾಖೆ ಎಚ್ಚರಿಕೆ

    ಉದಯ್ ಉಮೇಶ್ ಲಲಿತ್ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು. ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿದ್ದರು. ನ್ಯಾಯಮೂರ್ತಿ ಲಲಿತ್ ಅವರು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಏರಿದ 6ನೇ ಹಿರಿಯ ವಕೀಲರಾಗಿದ್ದಾರೆ.

    ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ (CJI) ಆಗುವ ಹಾದಿಯಲ್ಲಿರುವ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ‘ತ್ರಿವಳಿ ತಲಾಖ್’ ರದ್ದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ. ಇದನ್ನೂ ಓದಿ: ಕಾಮನ್‌ವೆಲ್ತ್‌ನಲ್ಲಿ ಭಾರತದ ಕಮಾಲ್- ಸ್ಕ್ವಾಷ್‌ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ

    ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ

    ನವದೆಹಲಿ: ಶಾಲಾ ಕಾಲೇಜು ತರಗತಿಗಳಲ್ಲಿ ಹಿಜಬ್ ಬ್ಯಾನ್ ಮಾಡಿದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವಿಳಂಬವಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್.ವಿ.ರಮಣ ಹೇಳಿದ್ದಾರೆ.

    ಪ್ರಕರಣದ ವಿಚಾರಣೆ ಬಗ್ಗೆ ಇಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಪ್ರಸ್ತಾಪಿಸಿದ ವೇಳೆ ನ್ಯಾಯಮೂರ್ತಿಗಳು ಹೀಗೆ ಅಭಿಪ್ರಾಯಪಟ್ಟಿದ್ದಾರೆ. ಈ ಅರ್ಜಿಯ ವಿಚಾರಣೆ ಆರಂಭಿಸಬೇಕಿತ್ತು, ಆದರೆ ವಿಚಾರಣೆ ನಡೆಸಬೇಕಿದ್ದ ನ್ಯಾಯಾಧೀಶರ ಪೈಕಿ ಓರ್ವರು ಅನಾರೋಗ್ಯಕ್ಕಿಡಾಗಿದ್ದಾರೆ. ಹೀಗಾಗಿ ವಿಚಾರಣೆ ವಿಳಂಬವಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಬಳಿಕ ವಿಶೇಷ ಪೀಠ ರಚನೆ ಮಾಡಲಾಗುವುದು ಎಂದು ಸಿಜೆಐ ಹೇಳಿದರು. ಇದನ್ನೂ ಓದಿ: ರಾಜ್ಯ ಹಾಳು ಮಾಡಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ: ಅರಗ 

    Karnataka hijab controversy reaches SC, CJI NV Ramana says 'let HC decide'

    ಕನಿಷ್ಠ ವಿಚಾರಣೆಗೆ ದಿನಾಂಕ ನಿಗಧಿಯಾದರೂ ಮಾಡಿ ಎಂದು ಮೀನಾಕ್ಷಿ ಅರೋರಾ ಮನವಿ ಮಾಡಿದರು. ಆದರೆ ಅದಕ್ಕೂ ಸಿಜೆಐ ನಿರಾಕರಿಸಿದರು. ಕಳೆದ ವಿಚಾರಣೆಯಲ್ಲಿ ಜುಲೈನಲ್ಲಿ ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.

    ಶಾಲಾ ಕಾಲೇಜುಗಳ ತರಗತಿಯಲ್ಲಿ ಹಿಜಬ್ ಧರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶ ನೀಡಿತ್ತು. ಈ ಆದೇಶ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಹಿಜಾಬ್ ಇಸ್ಲಾಂದ ಮೂಲಭೂತ ಅವಶ್ಯಕತೆ ಅಲ್ಲ ಎಂದು ಹೇಳಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಇದನ್ನೂ ಓದಿ: ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದ ಉಲ್ಲಂಘಿಸಿದೆ: ಆಂಟನಿ ಬ್ಲಿಂಕೆನ್

    Live Tv
    [brid partner=56869869 player=32851 video=960834 autoplay=true]

  • ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI

    ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI

    ನವದೆಹಲಿ: ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ನ್ಯಾಯಾಧೀಶರು ಚರ್ಚಿಸಿ ಪರಿಹರಿಸದಿದ್ದರೆ, ನ್ಯಾಯಾಂಗ ವ್ಯವಸ್ಥೆ ದುರ್ಬಲಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಎಚ್ಚರಿಸಿದ್ದಾರೆ.

    ನವದೆಹಲಿಯ ವಿಜ್ಞಾನ ಭವನದಲ್ಲಿಂದು ಅಖಿಲ ಭಾರತ ಜಿಲ್ಲಾ ಕಾನೂನು ಸೇವೆಗಳ ಅಧಿಕಾರಿಗಳ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್: 4 ಚಿನ್ನದ ಪದಕ ಗೆದ್ದ ಅಜಿತ್ ಕುಮಾರ್

    ನ್ಯಾಯಾಂಗ ತನ್ನ ಕಾರ್ಯಚಟುವಟಿಕೆಗೆ ಅಡ್ಡಿಯಾಗುವ ಸಮಸ್ಯೆಗಳನ್ನು ಮರೆಮಾಚದೆ, ಮುಚ್ಚಿಡದೇ ಚರ್ಚಿಸಬೇಕು. ಇದರಿಂದ ಜನರಿಗೆ ಉತ್ತಮ ಸೇವೆ ಒದಗಿಸಬಹುದು ಎಂದು ಸಿಜೆಐ ರಮಣ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಲಂಕಾ ಅಧ್ಯಕ್ಷರ ನಿವಾಸದಲ್ಲಿ ದೊರೆತ ಹಣ ನ್ಯಾಯಾಲಯಕ್ಕೆ ಸಲ್ಲಿಕೆ

    ಜನರಿಗೆ ಉತ್ತಮ ಸೇವೆ ಸಲ್ಲಿಸುವ ಉದ್ದೇಶ ನಮಗಿದ್ದರೆ, ನಮ್ಮ ಕಾರ್ಯಚಟುವಟಿಕೆಗೆ ಅಡ್ಡಿಯಾಗುವ ಸಮಸ್ಯೆಗಳನ್ನೂ ನಾವು ಎತ್ತಿ ತೋರಿಸಬೇಕು. ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಅಥವಾ ಬಚ್ಚಿಡುವುದರಲ್ಲಿ ಯಾವುದೇ ಅರ್ಥವಿಲ್ಲ. ನಾವು ಈ ಸಮಸ್ಯೆ ಚರ್ಚಿಸದಿದ್ದರೆ, ಬಿಕ್ಕಟ್ಟುಗಳನ್ನು ಪರಿಹರಿಸದಿದ್ದರೆ, ಆಗ ನ್ಯಾಯಾಂಗ ವ್ಯವಸ್ಥೆ ದುರ್ಬಲಗೊಳ್ಳುತ್ತದೆ. ನಮ್ಮ ಸಾಂವಿಧಾನಿಕ ಆಶಯವಾದ ಸಾಮಾಜಿಕ ನ್ಯಾಯವನ್ನು ಪೂರೈಸಲು ಸಾಧ್ಯವಾಗದಿರಬಹುದು ಎಂದು ನನಗೆ ಭಯವಾಗುತ್ತಿದೆ. ಹಾಗಾಗಿ ನಾನು ಚರ್ಚಿಸಿ(ಡಿಸ್ಕಸ್), ಸಂವಾದಿಸಿ (ಡಿಬೇಟ್) ನಂತರ ನಿರ್ಧರಿಸಿ (ಡಿಸೈಡ್) ಎಂದು ಹೇಳುತ್ತೇನೆ. ನಾನೂ ಇದೇ ತತ್ವವನ್ನು ಅನುಸರಿಸುತ್ತಿದ್ದೇನೆ ಎಂದು ಅವರು ವಿವರಿಸಿದ್ದಾರೆ.

    ಜಿಲ್ಲಾ ನ್ಯಾಯಾಧೀಶರು ಬಹುಮುಖಿ ಪಾತ್ರ ನಿರ್ವಹಿಸಬೇಕು. ಜನರ ಮತ್ತು ಸಾಮಾಜಿಕ ಸಮಸ್ಯೆ ಅರ್ಥ ಮಾಡಿಕೊಳ್ಳುವ ಉತ್ತಮ ಹುದ್ದೆಯಲ್ಲಿ ನೀವು (ಜಿಲ್ಲಾ ನ್ಯಾಯಾಧೀಶರು) ಇದ್ದೀರಿ. ಭಾರತದಲ್ಲಿ ಕಾನೂನು ನೆರವು ಆಂದೋಲನಕ್ಕೆ ಜಿಲ್ಲಾ ನ್ಯಾಯಾಂಗವೇ ಪ್ರೇರಕ ಶಕ್ತಿ. ಜಿಲ್ಲಾ ನ್ಯಾಯಾಂಗವನ್ನು ಬಲಪಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಡಿ.ವೈ.ಚಂದ್ರಚೂಡ್ ಹಾಗೂ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಮಾಡಿದ್ದ ಆರೋಪಗಳಿಗೆ ಇಂದು ಸುಪ್ರೀಂಕೋರ್ಟ್ ತಡೆ ನೀಡಿದೆ.

    karnataka highcourt

    ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಜೆ.ಮಂಜುನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ವಿಶೇಷ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠವು ನಡೆಸಿತು. ಇದನ್ನೂ ಓದಿ: L- ಬೋರ್ಡ್‌ ಕಾರಿಗೆ ಲಾರಿ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

    ವಿಚಾರಣೆ ವೇಳೆ ನ್ಯಾಯಾಧೀಶರ ಅಭಿಪ್ರಾಯಕ್ಕೂ ಹಾಗೂ ಅವರು ವಿಚಾರಣೆ ಮಾಡುತ್ತಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಇಲ್ಲಿ ಅಪ್ರಸ್ತುತ ಅವಲೋಕನಗಳನ್ನು ಮಾಡಿದ್ದಾರೆ ಹಾಗೂ ಜಾಮೀನು ಅರ್ಜಿಯ ವ್ಯಾಪ್ತಿಯನ್ನೂ ಮೀರಿದ್ದಾರೆ ಎಂದು ಹೇಳಿದೆ.

    supreme court 12

    ಜಾಮೀನು ಅರ್ಜಿ ಪ್ರಕರಣವೊಂದರ ವಿಚಾರಣೆ ಮಾಡುತ್ತಿದ್ದ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಎಸಿಬಿ ವಿರುದ್ಧ ಖಂಡತುಂಡ ಟೀಕೆ ಮಾಡಿದ್ದರು. ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸೀಮಂತ್ ಕುಮಾರ್ ಸಿಂಗ್ ಬಳಿ ತಮ್ಮ ಸರ್ಕಾರಿ ಸೇವೆಗಳ ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು. ಸುಪ್ರೀಂ ಕೋರ್ಟ್ ಇದಕ್ಕೂ ತಡೆ ನೀಡಿದೆ. ಇದನ್ನೂ ಓದಿ: ಯಾವುದೇ ಧರ್ಮ, ಜಾತಿಯವರಿಗೆ ಸಿಎಂ ಸ್ಥಾನ ಮೀಸಲು ಅಲ್ಲ: ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    court order law

    ಜೆ.ಮಂಜುನಾಥ್ ಐಎಎಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ನಾಗಮುತ್ತು ಅವರು, ಈ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಬದಲು ಬೇರೊಂದು ನ್ಯಾಯಪೀಠಕ್ಕೆ ವರ್ಗಾವಣೆ ಮಾಡುವಂತೆ ಕೋರಿದ್ದರು. ಇದಕ್ಕೆ ಅಸಮ್ಮತಿಸಿದ (ಸಮ್ಮತಿಯಿಲ್ಲದ) ನ್ಯಾಯಪೀಠ ವಿಚಾರಣೆಯನ್ನು ನ್ಯಾಯಾಧೀಶರೇ ಮುಂದುವರಿಸುತ್ತಾರೆ. ಆದರೆ ಪ್ರಕರಣಕ್ಕೆ ಸಂಬಂಧಪಡದ ವಿಚಾರಗಳಿಗೆ ನಾವು ತಡೆ ನೀಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿತು.

    ಕಳೆದ ವಿಚಾರಣೆಯಲ್ಲೂ ಜಾಮೀನು ಮನವಿಯ ವಿಚಾರಣೆಯನ್ನು ಮೂರು ದಿನಗಳ ಕಾಲ ಮುಂದೂಡುವಂತೆ ಸುಪ್ರೀಂ ಕೋರ್ಟ್ಗೆ ಹೈಕೋರ್ಟ್ ಹೇಳಿತ್ತು.

    ಏನಿದು ಪ್ರಕರಣ?
    ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಜಾಮೀನು ಕೋರಿ ಉಪ ತಹಸೀಲ್ದಾರ್ ಪಿ.ಎಸ್.ಮಹೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಪ್ರಕರಣದಲ್ಲಿ ಸಮರ್ಪಕ ತನಿಖೆ ನಡೆದಿಲ್ಲ ಎಂದು ಎಸಿಬಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣಕ್ಕೆ ತಮಗೆ ವರ್ಗಾವಣೆಯ ಬೆದರಿಕೆ ಒಡ್ಡಲಾಗಿದೆ ಎಂಬ ಸ್ಫೋಟಕ ವಿಚಾರವನ್ನು ನ್ಯಾಯಮೂರ್ತಿಗಳು ಮುಕ್ತ ನ್ಯಾಯಾಲಯದಲ್ಲಿ ಬಹಿರಂಗಪಡಿಸಿದ್ದರು. ಅಲ್ಲದೆ, ಬೆದರಿಕೆಯ ವಿಚಾರವನ್ನು ಜು.11ರಂದು ಲಿಖಿತ ಆದೇಶದಲ್ಲಿ ದಾಖಲಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬೆಳಿಗ್ಗೆ 7 ಗಂಟೆಗೆ ಮಕ್ಕಳು ಶಾಲೆಗೆ ಹೋಗ್ಬೋದಾದ್ರೆ, ನ್ಯಾಯಾಧೀಶರೇಕೆ 9 ಗಂಟೆಗೆ ಬರಬಾರದು – ಯು.ಯು.ಲಲಿತ್ ಪ್ರಶ್ನೆ

    ಬೆಳಿಗ್ಗೆ 7 ಗಂಟೆಗೆ ಮಕ್ಕಳು ಶಾಲೆಗೆ ಹೋಗ್ಬೋದಾದ್ರೆ, ನ್ಯಾಯಾಧೀಶರೇಕೆ 9 ಗಂಟೆಗೆ ಬರಬಾರದು – ಯು.ಯು.ಲಲಿತ್ ಪ್ರಶ್ನೆ

    ನವದೆಹಲಿ: ಮಕ್ಕಳು ಬೆಳಿಗ್ಗೆ 7 ಗಂಟೆಗೆ ಶಾಲೆಗೆ ಹೋಗಬಹುದು ಅನ್ನೋದಾದ್ರೆ ನ್ಯಾಯಾಧೀಶರು, ವಕೀಲರೇಕೆ ತಮ್ಮ ದಿನವನ್ನು 9 ಗಂಟೆಗೆ ಪ್ರಾರಂಭಿಸಬಾರದು ಎಂದು ನ್ಯಾಯಮೂರ್ತಿ ಯು.ಯು.ಲಲಿತ್ ಹೇಳಿದ್ದಾರೆ.

    ಮುಂದಿನ ಆಗಸ್ಟ್ ತಿಂಗಳಿನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಲಿರುವ ಲಲಿತ್ ಅವರಿದ್ದ ತ್ರಿಸದಸ್ಯ ಪೀಠವು ಇಂದು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿಯೇ ಕುಳಿತು ವಿಚಾರಣೆ ಆರಂಭಿಸಿತು. ಸಾಮಾನ್ಯವಾಗಿ ನ್ಯಾಯಾಲಯವು ಬೆಳಿಗ್ಗೆ 10:30ಕ್ಕೆ ತನ್ನ ವಿಚಾರಣೆ ಪ್ರಾರಂಭಿಸುತ್ತದೆ. ಆದರೆ ನ್ಯಾ. ಯು.ಯು.ಲಲಿತ್ ಇಂದು ಬೆಳಿಗ್ಗೆ 9:30ಕ್ಕೆ ಪ್ರಕರಣದ ವಿಚಾರಣೆ ಪ್ರಾರಂಭಿಸಿದರು. ಇದನ್ನೂ ಓದಿ: ಲಿಪ್‍ಸ್ಟಿಕ್, ಕಾಸ್ಟ್ಲಿ ಮೊಬೈಲ್ ತಗೋತಿರಾ, ಫೀಸ್ ಕಟ್ಟೋಕೆ ಆಗಲ್ವಾ?- ವಿವಿ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿನಿಯರು

    SUPREME COURT

    ವಿಚಾರಣೆ ಆರಂಭಿಸಿದ ಬಗ್ಗೆ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಯು.ಯು.ಲಲಿತ್ `ಮಕ್ಕಳು ಬೆಳಿಗ್ಗೆ 7 ಗಂಟೆಯಿಂದಲೇ ಶಾಲೆಗೆ ಹೋಗಬಹುದಾದರೆ ನ್ಯಾಯಾಧೀಶರು ಹಾಗೂ ವಕೀಲರು ತಮ್ಮ ದಿನವನ್ನು ಏಕೆ 9 ಗಂಟೆಗೆ ಪ್ರಾರಂಭಿಸಬಾರದು? ಎಂದು ಪ್ರಶ್ನಿಸಿದರು.

    ನ್ಯಾಯಮೂರ್ತಿ ಲಲಿತ್, ನ್ಯಾ. ಎಸ್.ರವೀಂದ್ರ ಭಟ್, ನ್ಯಾ. ಸುಧಾಂಶು ಧುಲಿಯಾ ಅವರಿದ್ದ ತ್ರಿಸದಸ್ಯ ಪೀಠದಲ್ಲಿ 2ನೇ ದರ್ಜೆಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ರೋಹಟಗಿ, 9.30 ಈ ಸಮಯ ನ್ಯಾಯಾಲಯದ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಕ್ತ ಸಮಯ ಎಂದು ಹೇಳಿದರು. ಇದನ್ನೂ ಓದಿ: ಅಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು

    ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಲಲಿತ್ ಅವರು ನಾವು 9 ಗಂಟೆಗೆ ಕೋರ್ಟ್ನಲ್ಲಿ ಕುಳಿತುಕೊಳ್ಳಬೇಕು ಎಂದು ಶಾಲಾ ಮಕ್ಕಳನ್ನು ಉದಾಹರಣೆ ನೀಡಿದರು. ಇದನ್ನೂ ಓದಿ: ಟೀ ಶರ್ಟ್ ವಿಚಾರಕ್ಕೆ ಲವರ್ಸ್‌ ಕಿತ್ತಾಟ – ಮೆಟ್ರೋದಲ್ಲೇ ಬಾಯ್ ಫ್ರೆಂಡ್ ಕೆನ್ನೆಗೆ ಬಾರಿಸಿದ್ಲು

    ಹೇಗಿರಬೇಕು ವಿಚಾರಣೆ?: ವಾರದಲ್ಲಿ 5 ದಿನಗಳವರೆಗೆ, ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ಬೆಳಿಗ್ಗೆ 10.30ಕ್ಕೆ ಪ್ರಕರಣಗಳ ವಿಚಾರಣೆಯನ್ನು ಪ್ರಾರಂಭಿಸುತ್ತಾರೆ. ಸಂಜೆ 4ರ ವರೆಗೆ ಕುಳಿತುಕೊಳ್ಳುತ್ತಾರೆ. ಮಧ್ಯಾಹ್ನ 1 ರಿಂದ 2ರ ವರೆಗೆ ಒಂದು ಗಂಟೆಯ ಊಟದ ವಿರಾಮ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಇನ್ನು ಮುಂದೆ ಸುದೀರ್ಘ ವಿಚಾರಣೆ ಅಗತ್ಯವಿಲ್ಲದಿದ್ದಾಗ ಸುಪ್ರೀಂ ಕೋರ್ಟ್ ಬೆಳಿಗ್ಗೆ 9 ಗಂಟೆಗೇ ಪ್ರಾರಂಭವಾಗಬೇಕು. 11.30ಕ್ಕೆ ಅರ್ಧಗಂಟೆ ವಿರಾಮಕ್ಕಾಗಿ ಎದ್ದೇಳಬೇಕು. ತೀರ್ಪುಗಾರರು ಮತ್ತೆ ವಿಚಾರಣೆ ಪ್ರಾರಂಭಿಸಿ ಮಧ್ಯಾಹ್ನ 2 ಗಂಟೆಗೆ ಮುಕ್ತಾಗೊಳಿಸಬೇಕು. ಇದರಿಂದ ಸಂಜೆ ವೇಳೆ ಹೆಚ್ಚಿನ ಕೆಲಸ ಮಾಡಲು ಸಮಯ ಸಿಗುತ್ತದೆ ಎಂದು ಲಲಿತ್ ಸಲಹೆ ನೀಡಿದರು.

    ಯು.ಯು.ಲಲಿತ್ ಮುಂದಿನ ಆಗಸ್ಟ್ 27ರಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಆಗಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ನವೆಂಬರ್ 8ರ ಮಾತ್ರವೇ ಅಧಿಕಾರದಲ್ಲಿ ಇರುಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನ್ಯಾಯಾಂಗ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗಲ್ಲ: ಎನ್.ವಿ.ರಮಣ

    ನ್ಯಾಯಾಂಗ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗಲ್ಲ: ಎನ್.ವಿ.ರಮಣ

    ವಾಷಿಂಗ್ಟನ್: ನ್ಯಾಯಾಂಗ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗೆ ಅಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ.

    ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ಅಮೆರಿಕನ್ನರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ನ್ಯಾಯಾಂಗ ವ್ಯವಸ್ಥೆ ಕುರಿತಾಗಿ ರಾಜಕೀಯ ಪಕ್ಷಗಳು ನೀಡುತ್ತಿರುವ ಪರ-ವಿರೋಧದ ಹೇಳಿಕೆಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಆಸ್ಟ್ರೇಲಿಯಾಕ್ಕೆ ಅಕ್ರಮ ವಲಸೆಗೆ ಯತ್ನ – 51 ಮಂದಿ ಬಂಧನ

    ಅಧಿಕಾರದಲ್ಲಿರುವ ಸರ್ಕಾರದ ಪ್ರತಿ ಕ್ರಿಯೆಯೂ ನ್ಯಾಯಾಂಗದ ಅನುಮೋದನೆಗೆ ಅರ್ಹ ಎಂದು ಭಾವಿಸುತ್ತವೆ. ವಿರೋಧ ಪಕ್ಷಗಳೂ ತಮ್ಮ ರಾಜಕೀಯ ಸ್ಥಾನ ಮತ್ತು ಅನುಕೂಲತೆಗಳಿಗೆ ಪೂರಕವಾಗಿ ನ್ಯಾಯಾಂಗ ಇರಬೇಕೆಂದು ನಿರೀಕ್ಷಿಸುತ್ತವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಬಗ್ಗೆ ಜನರಲ್ಲಿ ಸೂಕ್ತ ತಿಳಿವಳಿಕೆ ಕೊರತೆಗಳು ಇಂತಹ ಎಲ್ಲ ದುರ್ಬಲ ಆಲೋಚನೆಗಳಿಗೆ ಕಾರಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ಯಾರಿಸ್‌ಗೆ ಹೋಗ್ತಿದ್ದ ಪುಲಿಟ್ಜರ್ ವಿಜೇತೆಗೆ ದೆಹಲಿ ಏರ್‌ಪೋರ್ಟ್‌ನಲ್ಲಿ ತಡೆ

    ಸಾಮಾನ್ಯ ಜನರ ನಡುವೆ ವ್ಯಾಪಕವಾಗಿ ತುಂಬಿರುವ ತಿಳಿವಳಿಕೆಯ ಕೊರತೆಯು ನ್ಯಾಯಾಂಗದ ಮೇಲೆ ಪ್ರಭಾವ ಬೀರುತ್ತಿವೆ. ಜೊತೆಗೆ ತಪ್ಪು ತಿಳಿವಳಿಕೆಯನ್ನೂ ಮೂಡಿಸುತ್ತಿವೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಾವು ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಜನರು ದೇಶವನ್ನು ಒಂದುಗೂಡಿಸುವ ವಿಚಾರಗಳ ಕಡೆ ಗಮನ ಹರಿಸಬೇಕೇ ವಿನಾ ವಿಭಜನೆಯ ಸಂಗತಿಗಳ ಮೇಲೆ ಅಲ್ಲ. ಏಕೆಂದರೆ ಸಾಮಾಜಿಕ ಒಳಗೊಳ್ಳುವಿಕೆಯು ಸಮಾಜದ ಒಗ್ಗಟ್ಟನ್ನು ಬಲಪಡಿಸುತ್ತದೆ. ಇದು ಶಾಂತಿ ಮತ್ತು ಪ್ರಗತಿಯ ಮುಖ್ಯ ಶಕ್ತಿ. ನಮ್ಮನ್ನು ಒಂದುಗೂಡಿಸುವ ವಿಷಯಗಳ ಮೇಲೆ ನಾವು ಗಮನ ಹರಿಸಬೇಕಿದೆಯೇ ಹೊರತು ನಮ್ಮನ್ನು ವಿಭಜನೆ ಮಾಡುವ ಸಂಗತಿಗಳ ಮೇಲಲ್ಲ ಎಂದು ಎಚ್ಚರಿಸಿದ್ದಾರೆ.

    Live Tv

  • ಅತ್ಯಾಚಾರ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಮಿತಿ ರಚಿಸಿದ ಸಿಜೆಐ

    ಅತ್ಯಾಚಾರ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಮಿತಿ ರಚಿಸಿದ ಸಿಜೆಐ

    ನವದೆಹಲಿ: ಅತ್ಯಾಚಾರ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವ ಸಲುವಾಗಿ ಸುಪ್ರೀಂಕೋರ್ಟ್ ಸಮಿತಿಯೊಂದನ್ನು ರಚಿಸಿದೆ. ಸುಪ್ರೀಂಕೋರ್ಟ್ ನ್ಯಾಯಧೀಶರಾದ ಆರ್. ಸುಭಾಷ್ ರೆಡ್ಡಿ ಮತ್ತು ನ್ಯಾ. ಎಂ.ಆರ್ ಶಾ ಅವರನ್ನು ಸಮಿತಿ ಒಳಗೊಂಡಿದೆ.

    ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ತಮ್ಮ ಆಡಳಿತ್ಮಾಕ ಅಧಿಕಾರವನ್ನು ಬಳಸಿಕೊಂಡು ಈ ಸಮಿತಿಯನ್ನು ರಚಿಸಿದ್ದು, ದೇಶದ್ಯಾಂತ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ವಿಚಾರಣೆಯ ಮೇಲ್ವಿಚಾರಣೆ ಮಾಡಲಿದೆ.

    ಹೈ ಕೋರ್ಟ್ ಮೂಲಕ ಸಮಿತಿ ಮೇಲ್ವಿಚಾರಣೆ ಮಾಡಲಿದ್ದು, ನಿಗಧಿತ ಸಮಯದಲ್ಲಿ ಪ್ರಕರಣ ಇತ್ಯರ್ಥ ಮಾಡುವ ನಿಟ್ಟಿನಲ್ಲಿ ನಿಗಾವಹಿಸಲಿದೆ.

    ತೆಲಂಗಾಣದಲ್ಲಿ ದಿಶಾ ಅತ್ಯಾಚಾರ ಪ್ರಕರಣ ಬಳಿಕ ಅತ್ಯಾಚಾರ ಪ್ರಕರಣಗಳು ಶೀಘ್ರ ವಿಚಾರಣೆ ನಡೆಯಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎನ್ನುವ ಒತ್ತಡ ಕೇಳಿ ಬಂದಿತು. ಒತ್ತಡಗಳ ಬಳಿಕ ಮುಖ್ಯ ನ್ಯಾ ಎಸ್.ಎ ಬೊಬ್ಡೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ.