Tag: Claim

  • ಮನೆಗಳ ಹಕ್ಕು ಪತ್ರ ಕೊಡಿಸಲು ಒತ್ತಾಯ – ರೈತ ಸಂಘದಿಂದ ಹಾಸನದಲ್ಲಿ ಪ್ರತಿಭಟನೆ

    ಮನೆಗಳ ಹಕ್ಕು ಪತ್ರ ಕೊಡಿಸಲು ಒತ್ತಾಯ – ರೈತ ಸಂಘದಿಂದ ಹಾಸನದಲ್ಲಿ ಪ್ರತಿಭಟನೆ

    ಹಾಸನ: ಕೃಷಿ ಕೂಲಿಗಾರ 25 ಕುಟುಂಬದವರಿಗೆ ಮನೆಗಳ ಹಕ್ಕುಪತ್ರ ಕೊಡಿಸುವಂತೆ ಒತ್ತಾಯಿಸಿ, ಜಿಲ್ಲಾಧಿಕಾರಿ ಕಛೇರಿ ಮುಂದೆ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಮಾಡಲಾಯಿತು.

    ಬೇಲೂರು ತಾಲೂಕು, ಕಸಬಾ ಹೋಬಳಿ, ಹೆಗ್ಗಡಿಹಳ್ಳಿ ಗ್ರಾಮದ ಸರ್ವೆ.ನಂ.46ರಲ್ಲಿ, ಗ್ರಾಮದ ಸುಮಾರು 25 ಕೃಷಿ ಕೂಲಿಗಾರ ಕುಟುಂಬಗಳು ಕಳೆದ 40 ವರ್ಷಗಳಿಂದಲೂ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದಾರೆ. ಆದರೆ ಅಲ್ಲಿರುವ ಬಡ ಕೂಲಿಗಾರ ಕುಟುಂಬದವರಿಗೆ ಇದುವರೆಗೂ ಹಕ್ಕು ಪತ್ರ ನೀಡಿಲ್ಲ. ಕೂಡಲೇ ಈ ಕಡೆ ಗಮನಹರಿಸಿ ಬಡ ಜನರಿಗೆ ಮನೆಗಳ ಹಕ್ಕುಪತ್ರವನ್ನು ಹಾಗೂ ಸರ್ಕಾರದ ಇನ್ನಿತರೆ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ:  ಬೆಂಗಳೂರು ಹೋಟೆಲಿನಲ್ಲಿ ಅಗ್ನಿ ಅವಘಡಕ್ಕೆ ಬೊಲೇರೋ ವಾಹನ ಕಾರಣ?

    ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಳ್ಳೂರು ಸ್ವಾಮೀಗೌಡ, ವಿಕ್ಟರ್, ಬೋಗಳೇಶ್, ಬಸವರಾಜು, ಸಚೀನ್, ಕೃಷ್ಣ, ಅಣ್ಣಪ್ಪ, ಸಂತೋಷ್, ಪ್ರಕಾಶ್ ಇತರರು ಪಾಲ್ಗೊಂಡಿದ್ದರು. ಇದನ್ನೂ ಓದಿ:  ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್- 8 ಜನರು ಅರೆಸ್ಟ್

  • ಹಂಚಿನಾಳ ಗ್ರಾಮದ ಅಲೆಮಾರಿಗಳಿಗೆ ಸೂರು ಸಿಗುವುದು ಯಾವಾಗ?

    ಹಂಚಿನಾಳ ಗ್ರಾಮದ ಅಲೆಮಾರಿಗಳಿಗೆ ಸೂರು ಸಿಗುವುದು ಯಾವಾಗ?

    ಯಾದಗಿರಿ: ನಿರ್ದಿಷ್ಟ ಸೂರಿಲ್ಲದೇ ಊರೂರು ಸುತ್ತಾಡುತ್ತ, ಯಾರಾದ್ದೋ ಜಾಗದಲ್ಲಿ ಶೆಡ್ ಗಳನ್ನು ನಿರ್ಮಿಸಿ, ಚಾಪೆ ಬುಟ್ಟಿಗಳನ್ನು ಹೆಣೆಯುವ ಮೂಲಕ ವಡಗೇರಾ ತಾಲೂಕಿನ ಹಂಚಿನಾಳ ಗ್ರಾಮದ ಕೆಲವು ಕುಟುಂಬಗಳು ಜೀವನ ನಡೆಸುತ್ತಿವೆ.

    ಹಂಚಿನಾಳ ಗ್ರಾಮದಲ್ಲಿ ಸುಮಾರು 66 ಕುಟುಂಬಗಳು ವಾಸ ಮಾಡುತ್ತಿದ್ದು, ಅವರ ಮೂಲ ವೃತ್ತಿ ಈಚಲು ಮರದ ಗರಿಗಳಿಂದ ಬುಟ್ಟಿ ಚಾಪೆಗಳನ್ನು ಹೆಣೆಯುವುದು. ಹೀಗಾಗಿ ಅಲೆಮಾರಿ ಜೀವನ ನಡೆಸುತ್ತಿರುವ ಅವರು ಮಳೆ ಗಾಳಿ ಬಿಸಿಲನ್ನು ಲೆಕ್ಕಿಸದೇ ಬೇರೆ ಬೇರೆ ಗ್ರಾಮಗಳಿಗೆ ಹೋಗುತ್ತಾರೆ. ಅಲ್ಲಿ ಅಭ್ಯವಿರುವ ಖಾಲಿ ಜಾಗದಲ್ಲಿ ಒಂದಷ್ಟು ದಿನ ಶೇಡ್ ಹಾಕಿಕೊಂಡು ಚಾಪೆ, ಬುಟ್ಟಿ ತಯಾರಿಸುತ್ತಾರೆ.

    ಅಲೆಮಾರಿ ಜನಾಂಗದವರು ಸತತ ಮೂರು ವರ್ಷಗಳಿಂದ ಒಂದು ನಿರ್ದಿಷ್ಟ ಸೂರು ಕಂಡುಕೊಳ್ಳಲು ಹೋರಾಟ ನಡೆಸಿದ್ದಾರೆ. ಇದರ ಫಲವಾಗಿ ಯಾದಗಿರಿ ಜಿಲ್ಲಾಧಿಕಾರಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ಹಂಚಿನಾಳ ಗ್ರಾಮದಲ್ಲಿ ಸರ್ವೆ ನಂಬರ್ 59ರಲ್ಲಿ 2 ಎಕರೆ ಭೂಮಿ ಮಂಜೂರು ಮಾಡಿದ್ದರು. ಆದರೆ ಈಗ ಅಧಿಕಾರಿಗಳು ಕಾಯ್ದಿರಿಸಿದ ಜಾಗದಲ್ಲಿ ನಿವೇಶನಗಳನ್ನು ನಿರ್ಮಿಸಿ ಹಕ್ಕು ಪತ್ರ ವಿತರಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.

     

    ಹಂಚಿನಾಳ ಗ್ರಾಮದ ಅಲೆಮಾರಿ ಜನಾಂಗದವರು ನಿರ್ದಿಷ್ಟ ಸೂರಿನಲ್ಲಿ ವಾಸ ಮಾಡಲು ಹಪಪಿಸುತ್ತಿದ್ದಾರೆ. ನಿವೇಶನ ನಿರ್ಮಿಸಿ, ಹಕ್ಕು ಪತ್ರ ಹಂಚಿಕೆ ಮಾಡುವ ನಿಟ್ಟಿನಲ್ಲಿ ಸಹಾಯ ಮಾಡುವಂತೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕ ಸರ್ಕರಕ್ಕೆ ಮನವಿ ಮಾಡಿದರು.

    https://youtu.be/nuAI9tfSQSQ