Tag: class room

  • Chitraduraga| 240 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಒಂದೇ ಕೊಠಡಿಯಲ್ಲಿ ಪಾಠ!

    Chitraduraga| 240 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಒಂದೇ ಕೊಠಡಿಯಲ್ಲಿ ಪಾಠ!

    – ಜಿಲ್ಲಾಸ್ಪತ್ರೆಯ ಕಾಲೇಜಿನ ಅವ್ಯವಸ್ಥೆ

    ಚಿತ್ರದುರ್ಗ: ಸರ್ಕಾರಿ ಕಾಲೇಜಲ್ಲಿ ಸೀಟು ಸಿಕ್ಕರೆ ಎಲ್ಲಾ ಉಚಿತ ಅನ್ನೋ ಮಾತಿದೆ. ಆದರೆ ಚಿತ್ರದುರ್ಗದ ಸರ್ಕಾರಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಕೇಳಲು ಕಟ್ಟಡವೇ ಇಲ್ಲ. ಹೀಗಾಗಿ ಇಷ್ಟಪಟ್ಟು ನರ್ಸಿಂಗ್ ಮಾಡಲು ಬಂದ ವಿದ್ಯಾರ್ಥಿಗಳು ಕಿಷ್ಕಿಂದೆಯಂತಹ ಕೊಠಡಿಯಲ್ಲಿ ಹರಸಾಹಸಪಟ್ಟು ಓದೋದೇ ದೊಡ್ಡ ಸವಾಲಾಗಿದೆ.

    ಚಿತ್ರದುರ್ಗ (Chitradurga) ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಬಿಎಸ್ಸಿ ನರ್ಸಿಂಗ್ ಕಾಲೇಜಲ್ಲಿ ಕಳೆದ ಮೂರು ವರ್ಷಗಳಿಂದಲೂ ಸೂಕ್ತ ಮೂಲಭೂತ ಸೌಕರ್ಯಗಳಿಲ್ಲ. ಸುಸಜ್ಜಿತ ಕಟ್ಟಡ, ಕೊಠಡಿ, ಲ್ಯಾಬ್ ವ್ಯವಸ್ಥೆಯೂ ಇಲ್ಲ. ಬಿಎಸ್‌ಸಿ ನರ್ಸಿಂಗ್ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಒಂದೇ ಕಟ್ಟಡದಲ್ಲಿ ನಡೆಯುತ್ತಿದೆ. ಸುಮಾರು 240 ವಿದ್ಯಾರ್ಥಿಗಳು ಒಂದೇ ಕೊಠಡಿಯೊಳಗೆ ಕುಳಿತು ಪಾಠ ಕೇಳುತ್ತಿದ್ದಾರೆ. ಇದನ್ನೂ ಓದಿ: ಒಂದೇ ದಿನ ಮೂವರು ಗರ್ಭಿಣಿಯರು ಸಾವು – ಇನ್ನೂ ಬಳ್ಳಾರಿಗೆ ಮುಖ ಮಾಡದ ಜಮೀರ್‌

    ಈ ಬಗ್ಗೆ ಕ್ಷೇತ್ರದ ಶಾಸಕ ವೀರೇಂದ್ರ, ಡಿಸಿ ವೆಂಕಟೇಶ್ ಹಾಗು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ (Sharan Prakash Patil) ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಲಿಲ್ಲ. ಇದರಿಂದ ಮನನೊಂದ ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆ ಸರ್ಜನ್‌ಗೆ ಕೇಳಿದರೆ ಎಲ್ಲೋ ಒಂದು ಮೂಲೆಯಲ್ಲಿ ಸುಮ್ಮನೆ ಪಾಠ ಕೇಳಿ ಅಂತಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

    ಈ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳನ್ನು ಕೇವಲ ಉಚಿತ ಸೇವೆಗಾಗಿ ಬಳಸಿಕೊಳ್ಳುವ ಆರೋಗ್ಯ ಇಲಾಖೆ, ಇವರ ಸಂಕಷ್ಟ ಬಗೆಹರಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಸರ್ಜನ್ ಡಾ.ರವಿಂದ್ರ ಅವರನ್ನು ಕೇಳಿದರೆ ಹೊಸ ಮೆಡಿಕಲ್ ಕಾಲೇಜು ಕಾಮಗಾರಿ ಭರದಿಂದ ಸಾಗಿದೆ. ಹೀಗಾಗಿ ತಾತ್ಕಾಲಿಕವಾಗಿ ಆಸ್ಪತ್ರೆಯಲ್ಲಿ ಕಾಲೇಜು ನಡೆಸಲಾಗುತ್ತಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಸಹಿಸಿಕೊಂಡು ಓದಲಾಗದೇ ಸಮಸ್ಯೆ ಸೃಷ್ಟಿಸಿದ್ದಾರೆಂದು ಕಾರಣ ಹೇಳುತ್ತಾರೆ. ಇದನ್ನೂ ಓದಿ: ವಿದೇಶಿ ಸ್ವತ್ತು, ಆದಾಯ ಘೋಷಿಸದಿದ್ರೆ 10 ಲಕ್ಷ ರೂ. ದಂಡ – ಕೊನೇ ದಿನ ಯಾವಾಗ?

  • ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

    ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

    ಹೈದರಾಬಾದ್: ಶಾಲೆಯ ಫೀಸ್ ಕಟ್ಟಲು ಪೋಷಕರು ಲೇಟ್ ಮಾಡಿದ ಕಾರಣ ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗಡೆ ಕೂರಿಸಿರುವ ಅಮಾನವೀಯ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಸಿರಿಲಿಂಗಮ್‍ಪಲ್ಲಿಯ ಎಂಎನ್‍ಆರ್ ಎಂಬ ಖಾಸಗಿ ಶಾಲೆಯಲ್ಲಿ ನಡೆದಿದೆ.

    ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರು ಮತ್ತು ಓರ್ವ ವಿದ್ಯಾರ್ಥಿಯನ್ನು ಶಾಲೆಯ ಕಾರಿಡಾರ್ ನಲ್ಲಿ ಯೇ ಕೂರಿಸಿದ್ದಾರೆ. ಮಕ್ಕಳು 7 ಮತ್ತು 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಬರೋಬ್ಬರಿ ಮೂರು ಗಂಟೆಗಳ ಕಾಲ ಹೊರಗಡೆ ಕುಳಿತಿದ್ದಾರೆ. ಈ ಮಕ್ಕಳು ಶಾಲೆಯ ಫೀಸ್ ತಡವಾಗಿ ಕಟ್ಟಿದ್ದು, ಇದಕ್ಕೆ ಫೈನ್ ಹಾಕಲಾಗಿತ್ತು. ಆದ್ರೆ ಫೈನ್ ಹಣ ಕಟ್ಟಿಲ್ಲವೆಂದು ಈ ರೀತಿ ಶೀಕ್ಷೆ ನೀಡಿದ್ದಾರೆ ಎಂದು ವರದಿಯಾಗಿದೆ.

    ಮಕ್ಕಳನ್ನ ಈ ರೀತಿ ತರಗತಿಯಿಂದ ಹೊರಗೆ ಕೂರಿಸಿದ್ದು ಮಾನಸಿಕ ಅವಮಾನ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆ ಎಂದು ಮಕ್ಕಳ ಹಕ್ಕುಗಳ ಸಂಘದವರಾದ ಅಚ್ಯುತ್ ರಾವ್ ತಿಳಿಸಿದ್ದಾರೆ.

    ಈ ಕುರಿತು ರಂಗಾರೆಡ್ಡಿ ಜಿಲ್ಲೆಯ ಶಿಕ್ಷಣಾಧಿಕಾರಿಗಳಿಗೆ ವಿಷಯ ತಿಳಿಸಲಾಗಿದೆ. ಎಂಎನ್‍ಆರ್ ಶಾಲೆ ಮಕ್ಕಳ ಹಕ್ಕುಗಳನ್ನ ಉಲ್ಲಂಘನೆ ಮಾಡಿದೆ. ಈ ಕುರಿತು ಶಿಕ್ಷಣ ಇಲಾಖೆ ಶಾಲಾ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಒತ್ತಾಯಿಸಿದ್ದೇವೆ ಎಂದು ಅಚ್ಯುತ್ ರಾವ್ ಹೇಳಿದ್ದಾರೆ.