Tag: Classmate

  • ಓದುವುದರಲ್ಲಿ ಕಾಂಪಿಟೇಷನ್ ನೀಡ್ತಿದ್ದಕ್ಕೆ ಮಗನ ಸಹಪಾಠಿಗೆ ವಿಷ ಕೊಟ್ಟು ಸಾಯಿಸಿದ್ಲು

    ಓದುವುದರಲ್ಲಿ ಕಾಂಪಿಟೇಷನ್ ನೀಡ್ತಿದ್ದಕ್ಕೆ ಮಗನ ಸಹಪಾಠಿಗೆ ವಿಷ ಕೊಟ್ಟು ಸಾಯಿಸಿದ್ಲು

    ಪುದುಚೇರಿ: ಓದುವುದರಲ್ಲಿ ತನ್ನ ಮಗನಿಗೆ ಸ್ಪರ್ಧೆ ನೀಡುತ್ತಿದ್ದ ಸಹಪಾಠಿಗೆ ಮಹಿಳೆಯೊಬ್ಬಳು ವಿಷ ನೀಡಿ ಹತ್ಯೆಗೈದಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.

    ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಬಾಲಾ ಮಣಿಕಂದನ್ ಶೈಕ್ಷಣಿಕ ಸಾಲಿನ ರಜೆಗೆಂದು ಮನೆಗೆ ಹಿಂದುರುಗಿದಾಗ ತೂಕಡಿಸಲು ಆರಂಭಿಸಿದನು. ಈ ವೇಳೆ ಶಾಲೆಯಲ್ಲಿ ಏನಾದರೂ ಸೇವಿಸಿದ್ದೀಯಾ ಎಂದು ತಾಯಿ ಕೇಳಿದಾಗ, ವಾಚ್‍ಮ್ಯಾನ್ ತನಗೆ ಜ್ಯೂಸ್ ನೀಡಿದ್ದು, ಅದನ್ನು ಕುಡಿದ ನಂತರ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಹನುಮನ ವೇಷ ಧರಿಸಿದ್ದ ವ್ಯಕ್ತಿ ಪ್ರದರ್ಶನ ನೀಡುತ್ತಲೇ ಕುಸಿದು ಸಾವು

    ಕೂಡಲೇ ಮಣಿಕಂದನ್ ಬಾಲನನ್ನು ಕಾರೈಕ್ಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಾಚ್‍ಮ್ಯಾನ್ ಏಕೆ ಜ್ಯೂಸ್ ನೀಡಿರಬಹುದು ಎಂದು ಪೋಷಕರು ಮತ್ತು ಆತನ ಸಂಬಂಧಿಕರು ವಿಚಾರಿಸಿದಾಗ ಮಹಿಳೆಯೊಬ್ಬರು ತನ್ನ ಬಳಿಗೆ ಬಂದು ಎರಡು ಜ್ಯೂಸ್ ಬಾಟಲಿಗಳನ್ನು ನೀಡಿ, ಬಾಲಾ ಅವರ ಮನೆಯವರು ಕಳುಹಿಸಿದ್ದಾರೆ ಎಂದು ತಿಳಿಸಿರುವುದಾಗಿ ಹೇಳಿದ್ದಾನೆ.

    ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ವಾಚ್‍ಮ್ಯಾನ್‍ಗೆ ಜ್ಯೂಸ್ ನೀಡುತ್ತಿರುವುದು ಕಂಡುಬಂದಿದೆ. ನಂತರ ಆಕೆಯನ್ನು ಬಾಲನ ಸಹಪಾಠಿ ಅರುಲ್ ಮೇರಿಯ ತಾಯಿ ಸಗಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ನಾಳೆ ಜಮೀರ್ ನೇತೃತ್ವದಲ್ಲೇ ಗಣೇಶೋತ್ಸವ!

    ಚಿಕಿತ್ಸೆ ಫಲಾಕಾರಿಯಾಗದೇ ಶನಿವಾರ ರಾತ್ರಿ ಬಾಲ ಮೃತಪಟ್ಟಿದ್ದಾನೆ. ಇದರಿಂದ ರೊಚ್ಚಿಗೆದ್ದ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಸಂಬಂಧಿಕರು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹೀಗಾಗಿ ಪೊಲೀಸರು ಸಗಾಯರಾಣಿ ವಿಕ್ಟೋರಿಯಾಳನ್ನು ಕೂಡಲೇ ಬಂಧಿಸಿದರು. ಬಳಿಕ ಈ ಕುರಿತಂತೆ ವಿಚಾರಣೆ ನಡೆಸಿದಾಗ, ತನ್ನ ಮಗ ಅರುಲ್ ಮೇರಿ ಮತ್ತು ಬಾಲಾ ನಡುವೆ ಅಂಕ ಗಳಿಸುವ ವಿಚಾರವಾಗಿ ಮತ್ತು ತರಗತಿಯಲ್ಲಿ ರ‍್ಯಾಂಕ್ ಪಡೆಯಲು ಪೈಪೋಟಿ ಇತ್ತು. ಇದರಿಂದಾಗಿ ಆಗಾಗ ಸಣ್ಣ-ಪುಟ್ಟ ಜಗಳವಾಗುತ್ತಿತ್ತು. ಇದರಿಂದ ಅಸಮಾಧಾನಗೊಂಡು ಈ ಕೃತ್ಯ ವೆಸಗಿರುವುದಾಗಿ ಮಹಿಳೆ ತಿಳಿಸಿದ್ದಾಳೆ.

    Live Tv
    [brid partner=56869869 player=32851 video=960834 autoplay=true]

  • ಕನ್ನಡ ಸ್ಟಾರ್ ನಟಿಯ ಕ್ಲಾಸ್‍ಮೇಟ್ ಆಗಿದ್ದ ಡ್ರಗ್ ಡೀಲರ್ ಅನಿಕಾ

    ಕನ್ನಡ ಸ್ಟಾರ್ ನಟಿಯ ಕ್ಲಾಸ್‍ಮೇಟ್ ಆಗಿದ್ದ ಡ್ರಗ್ ಡೀಲರ್ ಅನಿಕಾ

    – ನಟರ ಜೊತೆಗಿನ ಫೋಟೋ ಡೀಲರ್ ಫೋನಿನಲ್ಲಿ ಪತ್ತೆ

    ಬೆಂಗಳೂರು: ಕನ್ನಡದ ಸ್ಟಾರ್ ನಟಿ ಓದಿದ ಕಾಲೇಜಿನಲ್ಲೇ ಡ್ರಗ್ ಪೆಡ್ಲರ್ ಅನಿಕಾ ಕೂಡ ವ್ಯಾಸಂಗ ಮಾಡಿದ್ದಾಳೆ ಎಂಬ ಮಾಹಿತಿ ಎನ್‍ಸಿಬಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

    ಗುರುವಾರ ಬಂಧಿಸಿದ ಲೇಡಿ ಡ್ರಗ್ ಡೀಲರ್ ಅನಿಕಾ ವಿಚಾರಣೆ ಮಾಡುತ್ತಿರುವ ಎನ್‍ಸಿಬಿ ಅಧಿಕಾರಿಗಳಿಗೆ ಒಂದೊಂದೆ ಸ್ಫೋಟಕ ಮಾಹಿತಿಗಳು ಸಿಕ್ಕುತಿವೆ. ಅನಿಕಾ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಓದಿದ್ದಳು. ಇದೇ ಕಾಲೇಜಿನಲ್ಲಿ ಓದಿದ್ದ ಕನ್ನಡ ಸ್ಟಾರ್ ನಟಿಯೊಬ್ಬರು ಆಕೆಯ ಸಹಪಾಠಿ ಎಂಬ ವಿಚಾರ ಈಗ ಅಧಿಕಾರಿಗಳಿಗೆ ಗೊತ್ತಾಗಿದೆ.

    ಇದರ ಜೊತೆಗೆ ಆ ಸ್ಟಾರ್ ನಟಿ ಕೇವಲ ಡ್ರಗ್ ಡೀಲರ್ ಸಹಪಾಠಿಯಗಿದ್ಲಾ? ಇಲ್ಲ ಆ ಸ್ಟಾರ್ ನಟಿಯೇ ಅನಿಕಾಳನ್ನು ಚಿತ್ರರಂಗದ ಮಂದಿಗೆ ಪರಿಚಯ ಮಾಡಿಕೊಟ್ಟಳಾ ಎಂಬ ಅನುಮಾನ ಮೂಡಿದೆ. ಇದೇ ನಿಟ್ಟಿನಲ್ಲಿ ಎನ್‍ಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಸದ್ಯ ಅನಿಕಾಳನ್ನು ಒಂದು ವಾರದ ತನಕ ತಮ್ಮ ಕಸ್ಟಡಿಗೆ ತೆಗೆದುಕೊಂಡಿರುವ ಎನ್‍ಸಿಬಿ ಅಧಿಕಾರಿಗಳು ಹೆಚ್ಚಿನ ತನಿಖೆ ಮಾಡಲಿದ್ದು, ಸ್ಫೋಟಕ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ.

    ಇದರ ಬೆನ್ನಲ್ಲೇ ಡ್ರಗ್ ಡೀಲರ್ ಅನಿಕಾಳ ಮೊಬೈಲ್ ಫೋನ್ ಅನ್ನು ಎನ್‍ಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಇದರಲ್ಲಿ ಅನಿಕಾ ಕನ್ನಡದ ನಟರಿಬ್ಬರ ಜೊತೆ ಸೆಲ್ಫಿ ತೆಗೆದುಕೊಂಡಿರುವ ಫೋಟೋಗಳು ಅಧಿಕಾರಿಗಳಿಗೆ ಸಿಕ್ಕಿವೆ ಎನ್ನಲಾಗಿದೆ. ಆದರೆ ಅನಿಕಾ ನಟರನ್ನು ಯಾವ ಸಮಯದಲ್ಲಿ ಮತ್ತು ಯಾಕೆ ಭೇಟಿಯಾಗದ್ದಳು ಎಂಬ ಮಾಹಿತಿ ಹೊರಬಂದಿಲ್ಲ.

  • ರ್‍ಯಾಗಿಂಗ್ ಮಾಡ್ಬೇಡಿ ಅಂದ ಸಹಪಾಠಿಗೆ ಚಾಕು ಇರಿತ!

    ರ್‍ಯಾಗಿಂಗ್ ಮಾಡ್ಬೇಡಿ ಅಂದ ಸಹಪಾಠಿಗೆ ಚಾಕು ಇರಿತ!

    ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ರೇಗಿಸಬೇಡಿ ಈ ರೀತಿ ರೇಗಿಸೋದ್ರಿಂದ ನಿಮಗೆ ಕೆಟ್ಟ ಹೆಸರು ಬರುವುದಲ್ಲದೇ ಕಾಲೇಜಿಗೂ ಕೆಟ್ಟ ಹೆಸರು ಬರುತ್ತೆ ಅಂತ ಬುದ್ಧಿವಾದ ಹೇಳಿದಕ್ಕೆ ಸಹಪಾಠಿಯನ್ನೇ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.

    ವಿದ್ಯಾರ್ಥಿಗೆ ಚಾಕು ಇರಿದಿರುವ ಸಹಪಾಠಿಗಳು ನಮಗೆ ಬುದ್ಧಿವಾದ ಹೇಳ್ತಿಯಾ? ನಾವು ನಿನ್ನಂತೆಯೇ ಈ ಕಾಲೇಜಿಗೆ ಸೇರಿಕೊಂಡಿರೋದು, ನಮ್ಮ ಇಷ್ಟ ಬಂದ ಹಾಗೇ ಮಾಡ್ತೀವಿ ಅಂತ ಕ್ಯಾತೆ ತೆಗೆದಿದ್ದಾರೆ. ಆದರೆ ಇದನ್ನು ವಿದ್ಯಾರ್ಥಿ ವಿರೋಧಿಸಿದ್ದಕ್ಕಾಗಿ ಕಾಲೇಜಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.

    ವಿಜಯ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜಗಳ ತಿಳಿದು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ. ಈ ವಿಚಾರಕ್ಕೆ ಬೇಸರವಾಗಿದ್ದರಿಂದ ಸೇಡು ತೀರಿಸಿಕೊಳ್ಳಲಿಕ್ಕಾಗಿ ವಿದ್ಯಾರ್ಥಿಯ ಮೇಲೆ ಚಾಕು ಚುಚ್ಚಿ ಪರಾರಿಯಾಗಿದ್ದಾರೆ. ವಿಚಾರ ತಿಳಿದ ಪೊಲೀಸರು ಬಾಲಾಪರಾಧಿಗಳನ್ನು ಬಂಧಿಸಿದ್ದಾರೆ.

  • ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ -ಎಲ್ಲ ಆರೋಪಿಗಳು ಅಂದರ್

    ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ -ಎಲ್ಲ ಆರೋಪಿಗಳು ಅಂದರ್

    ಮಂಗಳೂರು: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಐದು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗುರುನಂದನ್ (19), ಆರ್ಯಾಪು ಗ್ರಾಮದ ಸುನಿಲ್ (19), ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಪ್ರಜ್ವಲ್ (19), ಬರಿಮಾರು ಗ್ರಾಮದ ಪ್ರಖ್ಯಾತ್ (19) ಹಾಗೂ ಕಿಶನ್ (19) ಬಂಧಿತ ಆರೋಪಿಗಳು. ಈ ಆರೋಪಿಗಳು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು, ಸಂತ್ರಸ್ತೆ ದಲಿತ ಸಮುದಾಯಕ್ಕೆ ಸೇರಿದವಳಾಗಿದ್ದಾಳೆ. ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ. ಫೆಬ್ರವರಿ ತಿಂಗಳಿನಲ್ಲಿ ವಿದ್ಯಾರ್ಥಿನಿ ಕಾಲೇಜು ಮುಗಿಸಿಕೊಂಡು ಮನೆಗೆ ಹೋಗಲು ಬಸ್ ನಿಲ್ದಾಣದಲ್ಲಿ ನಿಂತಿದ್ದಳು. ಈ ವೇಳೆ ಅಲ್ಲಿಗೆ ಬಂದ ಸಹಪಾಠಿಗಳು ನಿನ್ನ ಜೊತೆಗೆ ಮಾತನಾಡಬೇಕು ಎಂದು ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ವಿದ್ಯಾರ್ಥಿಗಳು ತನಗೆ ಪರಿಚಿತರಾಗಿದ್ದರಿಂದ ಏನನ್ನೂ ಪ್ರಶ್ನಿಸದೇ ಸಂತ್ರಸ್ತೆ ಅವರೊಂದಿಗೆ ಹೋಗಿದ್ದಾಳೆ ಎಂದು ತಿಳಿಸಿದರು.

    ಕಾರು ಕಾಡಿನ ಕಡೆಗೆ ಹೊಗುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿನಿ, ಎಲ್ಲಿಗೆ ಹೋಗುತ್ತಿದ್ದೇವೆ ಎಂದು ಪ್ರಶ್ನಿಸಿದ್ದಾಳೆ. ಆಗ ಇಲ್ಲಿಯೇ ಸ್ವಲ್ಪ ದೂರ ಅಂತ ಹೇಳಿ ಯುವಕರು ನಿರ್ಜನ ಪ್ರದೇಶಕ್ಕೆ ಬಂದು ಕಾರು ನಿಲ್ಲಿಸಿದ್ದಾರೆ. ಬಳಿಕ ಆಕೆಗೆ ಮತ್ತು ಬರಿತ ಆಹಾರ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ದೃಶವನ್ನು ಕಾಮುಕರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದರು ಎಂದು ಮಾಹಿತಿ ನೀಡಿದರು.

    ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಆರೋಪಿಗಳು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ವಿದ್ಯಾರ್ಥಿನಿ ಯಾರ ಮುಂದೆಯೂ ಘಟನೆಯ ಬಗ್ಗೆ ಹೇಳಿಕೊಂಡಿರಲಿಲ್ಲ. ಅತ್ಯಾಚಾರ ಎಸಗುತ್ತಿರುವ ವಿಡಿಯೋ ಬೆಳಗ್ಗೆಯಿಂದ ವೈರಲ್ ಆಗಿದ್ದರಿಂದ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ ಎಂದರು.

    ದ್ವೇಷದಿಂದ ಬಯಲಾಯ್ತು ಕೃತ್ಯ:
    ಆರೋಪಿಗಳು ಫೆಬ್ರವರಿ ತಿಂಗಳಿನಲ್ಲಿಯೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ವಿಡಿಯೋ ವೈರಲ್ ಆಗಿದ್ದರಿಂದ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲು ಮುಖ್ಯ ಕಾರಣ ಆರೋಪಿಗಳ ಮಧ್ಯೆ ಮನಸ್ತಾಪ ಉಂಟಾಗಿದ್ದು ಎನ್ನಲಾಗಿದೆ.

    ಕಾಲೇಜಿನ ಚುನಾವಣೆ ವಿಚಾರದಲ್ಲಿ ನಾಲ್ವರು ಆರೋಪಿ ವಿದ್ಯಾರ್ಥಿಗಳ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಈ ದ್ವೇಷ ಸಾಧನೆ ಉದ್ದೇಶದಿಂದ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಅನಾಮಧೇಯ ವ್ಯಕ್ತಿಯ ಹೆಸರಿನಲ್ಲಿ ವಿಡಿಯೋ ಹರಿಬಿಟ್ಟು ಪ್ರಕರಣವನ್ನು ಆರೋಪಿ ವಿದ್ಯಾರ್ಥಿಗಳೇ ಒಪ್ಪಿಕೊಂಡಿದ್ದಾರೆ ಎಂದು ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದರು.