Tag: Clear India

  • ನನ್ ಮಾತು ಕೇಳದಿದ್ರೆ, ನೀನೇನೂ ಕೀಳೋಕೆ ಇಲ್ಲಿ ಇರ್ತಿಯಾ: ಅಧಿಕಾರಿಗೆ ದುರ್ಯೋಧನ ಐಹೊಳೆ ಅವಾಜ್

    ನನ್ ಮಾತು ಕೇಳದಿದ್ರೆ, ನೀನೇನೂ ಕೀಳೋಕೆ ಇಲ್ಲಿ ಇರ್ತಿಯಾ: ಅಧಿಕಾರಿಗೆ ದುರ್ಯೋಧನ ಐಹೊಳೆ ಅವಾಜ್

    ಚಿಕ್ಕೋಡಿ: ಗಾಂಧಿ ಜಯಂತಿ ದಿನದಂದೇ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅಧಿಕಾರಿ ಮೇಲೆ ಗುಂಡಾಗಿರಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

    ನನ್ನ ಮಾತು ಕೇಳದಿದ್ದರೆ ನೀನೇನೂ ಕೀಳೋಕೆ ಇಲ್ಲಿ ಇರ್ತಿಯಾ ಎಂದು ದುರ್ಯೋಧನ ಐಹೊಳೆ ರಾಯಭಾಗ ಕೆಎಸ್ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ನೇರವಾಗಿ ಧಮ್ಕಿ ಹಾಕಿದ್ದಾರೆ.

    ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದಕ್ಕೆ ಅಧಿಕಾರಿ ಮೇಲೆ ಶಾಸಕರು ದರ್ಪ ತೋರುವುದರ ಜೊತೆಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ನೀವು ಹಣ ತಿನ್ನಲಿ ಬಿಡಲಿ, ನೀವು ಹಣ ತಿಂದಿದ್ದೀರಿ ಎಂದು ನಾನು ಜಿಲ್ಲಾಧಿಕಾರಿಗೆ ನಾನು ದೂರು ನೀಡುತ್ತೇನೆ ಎಂದು ಹೇಳಿದ್ದಲ್ಲೇ ಜನರ ನಡುವೆ ಡಿಪೋ ಮ್ಯಾನೇಜರ್ ಎಆರ್ ಚಬ್ಬಿ ಅವರಿಗೆ ಶಾಸಕ ದುರ್ಯೋಧನ ಹೊಡೆಯಲು ಯತ್ನಿಸಿದ್ದಾರೆ.

    ಶಾಸಕರ ಅವತಾರ ಕಂಡು ಸಾರಿಗೆ ಇಲಾಖೆ ಅಧಿಕಾರಿಗಳು ತಬ್ಬಿಬ್ಬು ಆಗಿದ್ದಾರೆ. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತೆರವುಗೊಳಿಸದೇ ಇದ್ದಿದ್ದಕ್ಕೆ ನಾವು ಕಸ ಹೊಡೆಯಲು ಬಂದರೆ ನೀವು ಆರಾಮಾಗಿ ಬನ್ನಿ ಎಂದು ಹೇಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

    `ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

    ನವದೆಹಲಿ: ಅಕ್ಟೋಬರ್ 2ಕ್ಕೆ ಸ್ವಚ್ಛ ಭಾರತ ಅಭಿಯಾನಕ್ಕೆ 4 ವರ್ಷವಾಗುವ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ದೇಶಾದ್ಯಂತ ಸ್ವಚ್ಛತಾ ಅಭಿಯಾನ ನಡೆಸಲು ಮೋದಿ ಕರೆಕೊಟ್ಟಿದ್ದು, ಸ್ವಚ್ಛತೆಯೇ ಸೇವೆ ಎಂಬ ಕಾರ್ಯಕ್ರಮಕ್ಕೆ ದೆಹಲಿಯಲ್ಲಿ ಚಾಲನೆ ನೀಡಿದರು.

    ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮೋದಿ, 4 ವರ್ಷದಲ್ಲಿ ದೇಶದ್ಯಾಂತ ಸುಮಾರು 9 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಸ್ವಚ್ಛತೆಯಿಂದ ಆರೋಗ್ಯಯುತ ಭಾರತ ನಿರ್ಮಾಣ ಸಾಧ್ಯ. ಸ್ವಚ್ಛತಾ ಅಭಿಯಾನದಲ್ಲಿ ದೇಶದ ಹೆಣ್ಣುಮಕ್ಕಳ ಕೊಡುಗೆ ಅಪಾರ ಎಂದು ಹೇಳಿದರು.

    ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಾಲಿವುಡ್ ಬಿಗ್‍ಬಿ ಅಮಿತಾಬ್ ಬಚ್ಚನ್, ಉದ್ಯಮಿ ರತನ್ ಟಾಟಾ ಸೇರಿದಂತೆ ಹಲವರು ಗಣ್ಯರು, ವಿದ್ಯಾರ್ಥಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಸಂವಾದ ನಡೆಸಿದರು.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮೋದಿ, ಗಾಂಧೀಜಿ ಅವರ 152ನೇ ಜನ್ಮ ದಿನಾಚರಣೆಯನ್ನು ಅಕ್ಟೋಬರ್ 2ರಂದು ಆಚರಿಸಲಿದ್ದೇವೆ. ಅಂದೇ ಸ್ವಚ್ಛ ಭಾರತ ಅಭಿಯಾನಕ್ಕೆ 4 ವರ್ಷ ತುಂಬಲಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದ. ಸ್ವಚ್ಛತಾ ಅಭಿಯಾನದ ಜೊತೆಗೆ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸುಧಾರಿಸಬೇಕು ಎಂದು ಮೋದಿ ತಿಳಿಸಿದ್ದಾರೆ.

    ಕೇಂದ್ರ ಸರ್ಕಾರದ ರೈಲ್ವೇ ಇಲಾಖೆಯ ಬಗ್ಗೆಯೂ ಟ್ವೀಟ್ ಮಾಡಿರುವ ಮೋದಿ, ಸ್ವಚ್ಛ ಭಾರತ ಅಭಿಯಾನದಲ್ಲಿ ರೈಲ್ವೇ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ತಿಳಿಸಿದ್ದು, ಹರ್ಯಾಣದ ರೇವಾರಿ ರೈಲ್ವೆ ನಿಲಾಣದ ಜನರೊಂದಿಗೆ ಮೋದಿ ಸಂವಾದ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv