Tag: cloths

  • ಅರವಿಂದ್ ವಸ್ತು ಕದಿಯಲು ಕಷ್ಟಪಟ್ಟೆ – ಟಾಸ್ಕ್ ಗೆದ್ದ ವೈಷ್ಣವಿಗೆ ಸಿಕ್ತು ಐಸ್‍ಕ್ರೀಂ

    ಅರವಿಂದ್ ವಸ್ತು ಕದಿಯಲು ಕಷ್ಟಪಟ್ಟೆ – ಟಾಸ್ಕ್ ಗೆದ್ದ ವೈಷ್ಣವಿಗೆ ಸಿಕ್ತು ಐಸ್‍ಕ್ರೀಂ

    ಬಿಗ್‍ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫಿಸಿಕಲಿ ಸ್ಟ್ರಾಂಗ್ ಆಗಿದ್ದರೆ, ಇನ್ನೂ ಕೆಲವರು ಮೆಂಟಲಿ ಸ್ಟ್ರಾಂಗ್ ಆಗಿದ್ದಾರೆ. ಅದರಲ್ಲಿ ವೈಷ್ಣವಿ ಗೌಡ ಕೂಡ ಒಬ್ಬರು. ಯಾವುದೇ ಟಾಸ್ಕ್ ನೀಡಿದರೂ ನಾನು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಎಲ್ಲ ಸ್ಪರ್ಧಿಗಳಿಗೂ ಪ್ರತಿಸ್ಪರ್ಧಿಯಾಗಿ ಟಫ್ ಕಾಂಪಿಟೇಷನ್ ಕೊಡುವ ವೈಷ್ಣವಿ ಗೌಡ ಬಿಗ್‍ಬಾಸ್ ನೀಡಿದ್ದ ಸೀಕ್ರೆಟ್ ಟಾಸ್ಕ್‌ನನ್ನು ಸುಲಭವಾಗಿ ನಿಭಾಯಿಸಿ ಗೆದ್ದಿದ್ದಾರೆ.

    ಬಿಗ್‍ಬಾಸ್ ಕರೆ ಮಾಡಿ ವೈಷ್ಣವಿಗೆ ನೀವು ಮನೆಯಲ್ಲಿರುವ 7 ಸದಸ್ಯರ ಒಂದೊಂದು ವಸ್ತುವನ್ನು ಯಾರಿಗೂ ಗೊತ್ತಾಗದಂತೆ ಸ್ಟೋರ್ ರೂಮ್‍ಗೆ ತಂದು ಇಡಬೇಕು. ಇವತ್ತು ರಾತ್ರಿ ಲೈಟ್ಸ್ ಆಫ್ ಆಗುವ ಮುನ್ನ ಈ ಕೆಲಸವನ್ನು ಪೂರ್ಣಗೊಳಿಸಿದರೆ, ನಿಮಗೆ ಐಸ್ ಕ್ರೀಮ್ ಕಳುಹಿಸಿಕೊಡುತ್ತೇನೆ ಎನ್ನುತ್ತಾರೆ. ಒಂದು ವೇಳೆ ಈ ಟಾಸ್ಕ್ ಪೂರ್ಣಗೊಳಿಸದೇ ಇದ್ದರೆ ನಿಮ್ಮ ವಸ್ತುವನ್ನು ಬಿಗ್ ಬಾಸ್‍ಗೆ ನೀಡಬೇಕು ಎಂದು ಹೇಳುತ್ತಾರೆ.

    ಟಾಸ್ಕ್ ಸಿಕ್ಕಿದ ಹಿನ್ನೆಲೆಯಲ್ಲಿ ವೈಷ್ಣವಿ, ಮೇಕಪ್ ರೂಮ್‍ನಲ್ಲಿದ್ದ ಮನೆಯ ಸ್ಪರ್ಧಿಗಳ ಒಂದೊಂದು ವಸ್ತುವನ್ನು ಹುಡುಕಾಡಿ-ತಡಕಾಡಿ ಬಹಳ ಚಲಾಕಿತನದಿಂದ ಪ್ಲಾಸ್ಟಿಕ್ ಕವರ್‌ನಲ್ಲಿ ಬಟ್ಟೆಗಳನ್ನು ತುಂಬಿಕೊಂಡು, ಯಾರಿಗೂ ತಿಳಿಯದಂತೆ ಸ್ಟೋರ್ ರೂಮ್‍ಗೆ ತೆಗೆದುಕೊಂಡು ಹೋಗಿ ಇಡುತ್ತಾರೆ.

    ಅದರಂತೆ ಟಾಸ್ಕ್‌ನನ್ನು ವಿನ್ ಆದ ವೈಷ್ಣವಿಗೆ ಬಿಗ್‍ಬಾಸ್ ಅಭಿನಂದನೆ ಕೋರುತ್ತಾ ಐಸ್ ಕ್ರೀಮ್ ಕಳುಹಿಸಿಕೊಡುತ್ತಾರೆ. ಆಗ ವೈಷ್ಣವಿ ನನ್ನನ್ನು ಎಲ್ಲರೂ ಕ್ಷಮಿಸಿ, ಬಿಗ್‍ಬಾಸ್ ಸೀಕ್ರೆಟ್ ಟಾಸ್ಕ್‌ವೊಂದನ್ನು ನೀಡಿದ್ದರು. ಹಾಗಾಗಿ ನಿಮ್ಮೆಲ್ಲರಿಂದಲೂ ಒಂದೊಂದು ವಸ್ತುಗಳನ್ನು ಕದ್ದಿದ್ದೀನಿ ಎಂದಾಗ ಎಲ್ಲರೂ ಶಾಕ್ ಆಗುತ್ತಾ, ಏನು ಕದ್ದಿದ್ದೀರಾ ಎಂದು ಕೇಳುತ್ತಾರೆ.

    ಆಗ ವೈಷ್ಣವಿ, ಬ್ರೋ ಗೌಡರವರ ಗ್ರೀನ್ ಕಲರ್ ಟಿ ಶರ್ಟ್, ಅರವಿಂದ್‍ರವರ ಬ್ರಶ್, ಪ್ರಶಾಂತ್‍ರವರದ್ದು ಗ್ರೇ ಮತ್ತು ಯೆಲ್ಲೋ ಟಿ ಶರ್ಟ್, ದಿವ್ಯಾ ಉರುಡುಗ ಅವರ ಒಂದು ಟ್ರ್ಯಾಕ್ ಪ್ಯಾಂಟ್, ಮಂಜುರವರ ಬಿಳಿ ಬಣ್ಣದ ಟಿ ಶರ್ಟ್, ಶುಭಾರವರ ಕ್ಯಾಪ್, ಡಿಎಸ್‍ದು ಏರ್ ಬ್ಯಾಂಡ್ ಕದ್ದಿದ್ದೇನೆ. ಆದರೆ ಅರವಿಂದ್ ಡ್ರಸ್‍ಗಳನ್ನು ಬಹಳ ನೀಟಾಗಿ ಇಟ್ಟಿದ್ದಾರೆ. ಒಂದು ಬಟ್ಟೆ ಎತ್ತಿಕೊಂಡರೂ ಅದು ಬಹಳ ಬೇಗ ಗೊತ್ತಾಗಿ ಬಿಡುತ್ತದೆ. ಬಾತ್‍ರೂನಲ್ಲಿ ಒಂದು ಟಿ ಶರ್ಟ್ ಮತ್ತು ಶಾಟ್ಸ್ ಇತ್ತು. ಅದನ್ನೂ ಎತ್ತಿದರೆ ಬೇಗ ಗೊತ್ತಾಗಿ ಬಿಡುತ್ತದೆ. ಹಾಗಾಗಿ ಅರವಿಂದ್ ಬಟ್ಟೆಯನ್ನು ಮಾತ್ರ ಕದಿಯಲು ಆಗಲಿಲ್ಲ ಬದಲಿಗೆ ಅವರ ಬ್ರಶ್ ಮಾತ್ರ ಕದ್ದೆ ಎನ್ನುತ್ತಾರೆ. ಇದನ್ನೂ ಓದಿ:ದಿವ್ಯಾ ಉರುಡುಗ ಅರವಿಂದ್ ಫುಲ್ ಕಿಲ ಕಿಲ

  • ಪುರುಷರು ರೋಬೋಟ್‍ಗಳಲ್ಲ, ಮಹಿಳೆಯರು ತುಂಡುಡುಗೆ ಧರಿಸುವುದರಿಂದಲೇ ರೇಪ್ – ಇಮ್ರಾನ್ ಖಾನ್

    ಪುರುಷರು ರೋಬೋಟ್‍ಗಳಲ್ಲ, ಮಹಿಳೆಯರು ತುಂಡುಡುಗೆ ಧರಿಸುವುದರಿಂದಲೇ ರೇಪ್ – ಇಮ್ರಾನ್ ಖಾನ್

    ಇಸ್ಲಾಮಾಬಾದ್: ಮಹಿಳೆಯರು ಕಡಿಮೆ ಬಟ್ಟೆ ಧರಿಸುವುದರಿಂದ ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತದೆ ಎಂಬ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ಮಹಿಳಾ ಪರ ನಾಯಕಿಯರ ಕೆಂಗಣ್ಣಿಗೆ ಗುರಿಯಾಗಿದೆ.

    ಪುರುಷರೇನು ರೋಬೋಟ್ ಗಳಲ್ಲ, ಪಾಕಿಸ್ತಾನದಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಲು ಮಹಿಳೆಯರು ತೊಡುವ ಉಡುಗೆಗಳೇ ಕಾರಣ ಎಂದು ಇಮ್ರಾನ್ ಖಾನ್ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಉಗ್ರ ಒಸಾಮಾ ಬಿನ್ ಲಾಡೆನ್‍ನನ್ನು ಹುತಾತ್ಮ ಎಂದ ಇಮ್ರಾನ್ ಖಾನ್

    ಸಂದರ್ಶನವೊಂದರಲ್ಲಿ ಪಾಕಿಸ್ತಾನದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಕಡಿಮೆ ಮಾಡಲು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ಪ್ರಶ್ನೆಗೆ ಮಹಿಳೆಯರು ಮೈಮೇಲೆ ಕಡಿಮೆ ಬಟ್ಟೆ ಧರಿಸಿದರೆ ಅದು ಪುರುಷನ ಮೇಲೆ ಪ್ರಭಾವ ಬೀರುತ್ತದೆ. ಯಾಕೆಂದರೆ ಪುರುಷರೇನೂ ರೋಬೋಟ್ ಗಳಲ್ಲ. ಮಹಿಳೆಯರು ತುಂಡು ಬಟ್ಟೆ ತೊಟ್ಟರೆ ಪುರುಷರಿಗೆ ಸಹಜವಾಗಿಯೇ ಪ್ರಚೋದನೆ ಆಗುತ್ತದೆ. ಇದು ಕಾಮನ್ ಸೆನ್ಸ್. ಪ್ರಚೋದನೆಯನ್ನು ನಿಯಂತ್ರಣ ಮಾಡಲು ಸಾಧ್ಯವಾಗದವರು ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್‍ನಲ್ಲಿ ಹಿಂದೂ, ಕ್ರಿಶ್ಚಿಯನ್ನರ ಮೇಲೆ ದಾಳಿ- ಇಮ್ರಾನ್ ಖಾನ್‍ಗೆ ವಿಶ್ವಸಂಸ್ಥೆ ಎಚ್ಚರಿಕೆ

    ಸಂದರ್ಶನದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆ ವ್ಯಕ್ತವಾಗುತ್ತಿದೆ. ಇಮ್ರಾನ್ ಖಾನ್ ಹೇಳಿಕೆಯನ್ನು ಅಂತಾರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗದ ದಕ್ಷಿಣ ಏಷ್ಯಾದ ಕಾನೂನು ಸಲಹೆಗಾರ್ತಿ ರೀಮಾ ಓಮರ್ ಟ್ವೀಟ್ ಮಾಡಿ ಇಮ್ರಾನ್ ಖಾನ್‍ಗೆ ಅನಾರೋಗ್ಯವಿದೆ ಎಂದು ಹೇಳಿ ಆಕ್ರೋಶ ಹೊರಹಾಕಿದ್ದಾರೆ.

    https://twitter.com/SyedNasirHShah/status/1407008379244056579

    ಪಾಕಿಸ್ತಾನ ಪ್ರಧಾನಮಂತ್ರಿ ಕಚೇರಿಯ ಡಿಜಿಟಲ್ ಮೀಡಿಯಾ ವಿಭಾಗದ ಡಾ. ಅರ್ಸಲ್ ಖಲೀದ್ ಪ್ರತಿಕ್ರಿಯಿಸಿ, ಸಂದರ್ಶನದ ಆಯ್ದ ವಿಡಿಯೋವನ್ನು ಮಾತ್ರ ವೈರಲ್ ಮಾಡಿ ಟೀಕಿಸಲಾಗುತ್ತಿದೆ ಎಂದು ಹೇಳಿ ಇಮ್ರಾನ್ ವಿರುದ್ಧ ಕೇಳಿ ಬಂದ ಆರೋಪವನ್ನು ತಿರಸ್ಕರಿಸಿದ್ದಾರೆ.

  • ಸಂತ್ರಸ್ತರಿಗೆ ಗೋಡಾನಿನಲ್ಲಿದ್ದ ಬಟ್ಟೆಗಳನ್ನು ಕಳುಹಿಸಿದ ವ್ಯಾಪಾರಿ

    ಸಂತ್ರಸ್ತರಿಗೆ ಗೋಡಾನಿನಲ್ಲಿದ್ದ ಬಟ್ಟೆಗಳನ್ನು ಕಳುಹಿಸಿದ ವ್ಯಾಪಾರಿ

    ತಿರುವನಂತಪುರಂ: ಮಹಾಮಳೆಗೆ ದೇವರನಾಡು ಕೇರಳ ತತ್ತರಿಸಿ ಹೋಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಎಡಬಿಡದೆ ಭೂಕುಸಿತ ಸಂಭವಿಸುತ್ತಿದ್ದು. ಜನರು ಕಂಗಾಲಾಗಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರವಾಹ ಸಂತ್ರಸ್ತರಿಗೆ ಗಾರ್ಮೆಂಟ್ಸ್ ವ್ಯಾಪಾರಿಯೊಬ್ಬರು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

    ಪ್ರವಾಹದಿಂದ ಉಂಟಾಗಿರುವ ಅನಾಹುತಗಳಿಂದ ಸಾಕಷ್ಟು ಮಂದಿ ಮನೆಮಠ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಸಂತ್ರಸ್ತರ ನೆರವಿಗಾಗಿ ಮತ್ತು ಅವರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನ ನಡೆಸುತ್ತಿದೆ. ಇದರ ಜೊತೆಗೆ ಸಾವಿರಾರು ಜನರು ಸ್ವಯಂಪ್ರೇರಿತರಾಗಿ ಪರಿಹಾರ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ಅವರಲ್ಲಿ ಎರ್ನಾಕುಲಂನಲ್ಲಿ ಗಾರ್ಮೆಂಟ್ ವ್ಯಾಪಾರಿಯಾಗಿರುವ ನೌಶಾದ್ ಕೂಡ ಒಬ್ಬರಾಗಿದ್ದಾರೆ. ಇವರು ತಮ್ಮ ಅಂಗಡಿಗೆ ಬಂದ ಮಹಿಳೆಯರು ಮತ್ತು ಮಕ್ಕಳ ಸಿದ್ಧ ಉಡುಪುಗಳನ್ನು ನೇರವಾಗಿ ಕೇರಳ ಪ್ರವಾಹ ಸಂತ್ರಸ್ತರಿಗೆ ಕಳುಹಿಸಿಕೊಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.

    ನೌಶಾದ್ ಅವರು ತಮ್ಮ ಗಾರ್ಮೆಂಟ್ ಗೋಡಾನಿನಲ್ಲಿದ್ದ ಬಟ್ಟೆಗಳನ್ನು ಸಂತ್ರಸ್ತರಿಗೆ ಕಳುಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಎಲ್ಲರ ಮನ ಗೆದ್ದಿದೆ. ನಾವು ಸತ್ತಾಗ ಈ ಜಗತ್ತಿನಿಂದ ಏನನ್ನೂ ಕೊಂಡೊಯ್ಯುವುದಿಲ್ಲ. ನನ್ನ ವ್ಯಾಪಾರದಲ್ಲಿ ಬಂದ ಲಾಭವನ್ನು ಅಗತ್ಯ ಇರುವವರಿಗೆ ನೀಡುತ್ತಿದ್ದೇನೆ. ಇದರಿಂದ ನನಗೆ ನಷ್ಟವಿಲ್ಲ. ಅಗತ್ಯ ಇರುವವರಿಗೆ ಬಟ್ಟೆಗಳನ್ನು ನೀಡುವ ಮೂಲಕ ಬಕ್ರಿದ್ ಹಬ್ಬವನ್ನು ಆಚರಣೆ ಮಾಡುತ್ತಿದ್ದೇನೆ ಎಂದು ನೌಶಾದ್ ವಿಡಿಯೋದಲ್ಲಿ ತಿಳಿಸಿದ್ದಾರೆ.

    ವಿಡಿಯೋದಲ್ಲಿ, ನೌಶಾದ್ ಅವರು ಗಾರ್ಮೆಂಟ್ ಗೋಡಾನಿನಲ್ಲಿದ್ದ ಹೊಸ ಬಟ್ಟೆಗಳನ್ನು ದೊಡ್ಡ ದೊಡ್ಡ ಚೀಲಗಳಲ್ಲಿ ತುಂಬಿ ಪ್ರವಾಹ ಸಂತ್ರಸ್ತರಿಗೆ ಕಳುಹಿಸುವ ತಯಾರಿ ಮಾಡುತ್ತಿರುವ ದೃಶ್ಯಗಳು ಸೆರೆಯಾಗಿದೆ.

    ವ್ಯಾಪಾರಿಯ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮಲಯಾಳಂ ನಟ ಮಮ್ಮುಟ್ಟಿ, ಜಯಸೂರ್ಯ ನೌಶಾದ್ ಸೇವೆಗೆ ಶ್ಲಾಘಿಸಿದ್ದಾರೆ. ಮತ್ತೊಂದೆಡೆ ಕಲಾವಿದ ಡಾವಿನ್ಸೀ ಸುರೇಶ್ ಅವರು ಕೇವಲ ಬಟ್ಟೆಗಳಿಂದಲೇ ನೌಶಾದ್ ಅವರ ಪೋಟ್ರೇಟ್ ಚಿತ್ರವನ್ನು ರಚಿಸಿ ಗೌರವ ಸಲ್ಲಿಸಿದ್ದಾರೆ.

    https://www.facebook.com/rajesh.sharma.3720/videos/2467443179987522/

  • ಹೆಣ್ಣು ಮಕ್ಕಳು ಅಶ್ಲೀಲ ಬಟ್ಟೆ ಹಾಕೋದ್ರಿಂದ ರೇಪ್ ಆಗ್ತಿದೆ: ಬಸವಪ್ರಕಾಶ ಸ್ವಾಮೀಜಿ

    ಹೆಣ್ಣು ಮಕ್ಕಳು ಅಶ್ಲೀಲ ಬಟ್ಟೆ ಹಾಕೋದ್ರಿಂದ ರೇಪ್ ಆಗ್ತಿದೆ: ಬಸವಪ್ರಕಾಶ ಸ್ವಾಮೀಜಿ

    ಧಾರವಾಡ: ಹೆಣ್ಣು ಮಕ್ಕಳು ಅಶ್ಲೀಲ ಬಟ್ಟೆ ಧರಿಸಿದರೆ ಮನಸ್ಸು ಪ್ರಚೋದನೆಗೆ ಒಳಗಾಗಿ ಅತ್ಯಾಚಾರ ನಡೆಯುತ್ತಿವೆ ಎಂದು ಅಕ್ಕಮಹಾದೇವಿ ಅನುಭವ ಪೀಠದ ಬಸವಪ್ರಕಾಶ ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಯುವತಿಯರು ಅಶ್ಲೀಲ ಬಟ್ಟೆಗಳನ್ನ ಹಾಕಿಕೊಂಡು ಓಡಾಡಬಾರದು. ಹೆಣ್ಣು ಮಕ್ಕಳು ಅಶ್ಲೀಲ ಬಟ್ಟೆ ಧರಿಸಿದರೆ ಮನಸ್ಸು ಪ್ರಚೋದನೆಗೆ ಒಳಗಾಗಿ ಅತ್ಯಾಚಾರ ನಡೆಯುತ್ತವೆ ಎಂದು ಹೇಳಿದರು. ಅಲ್ಲದೇ ಹೆಣ್ಣು ಮಕ್ಕಳು ನಮ್ಮ ಸಂಸ್ಕೃತಿ ಪಾಲನೆ ಮಾಡಬೇಕು ಎಂದು ಹೇಳಿದ ಅವರು, ಈ ಹಿಂದೆ ಮಾತೇ ಮಹಾದೇವಿಯವರ ಹೇಳಿಕೆಯನ್ನ ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ ಎಂದರು.

    ರಾತ್ರಿ 12 ಗಂಟೆಯ ನಂತರ ಮಹಿಳೆಯರು ಓಡಾಡಬಾರದು. ಇದರಿಂದ ಅವರ ಪ್ರಾಣಕ್ಕೆ ಕುತ್ತು ಬರುತ್ತದೆ. ಮೈತುಂಬ ಬಟ್ಟೆ ಧರಿಸಿ ಭಾರತೀಯ ಸಂಸ್ಕೃತಿಯ ತಳಹದಿಯ ಮೇಲೆ ಹೊರಟರೆ ಸಮಾಜ ಒಳ್ಳೆಯ ದಾರಿಯಲ್ಲಿ ನಡೆಯುತ್ತದೆ ಎನ್ನುವ ಉದ್ದೇಶದಿಂದ ಈ ಮಾತನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು.

    ಇದೇ ವೇಳೆ ರಾಯಚೂರಿನ ವಿದ್ಯಾರ್ಥಿನಿ ಸಾವಿಗೆ ವಿಷಾದ ವ್ಯಕ್ತ ಪಡಿಸಿದ ಅವರು, ಈ ಸಾವಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತ್ತಸ್ಥರನ್ನ ಸಾರ್ವಜನಿಕವಾಗಿ ಗಲ್ಲಿಗೆ ಏರಿಸಬೇಕು ಎಂದು ಹೇಳಿದರು. ಸರ್ಕಾರ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬೆಳಗಾವಿ ಸುವರ್ಣಸೌಧದ ಬಳಿ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದರು.

    https://www.youtube.com/watch?v=lrTiKsfdWK0

  • ನಡು ರಸ್ತೆಯಲ್ಲೇ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಕಾಮುಕ

    ನಡು ರಸ್ತೆಯಲ್ಲೇ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಕಾಮುಕ

    ಬೆಂಗಳೂರು: ಗಾಂಜಾ ಗುಂಗಿನಲ್ಲಿದ್ದ ಕಾಮುಕನೊಬ್ಬ ಹಾಡಹಗಲೇ ನಡು ರಸ್ತೆಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಘಟನೆ ಬೆಂಗಳೂರಿನ ಕಲ್ಯಾಣನಗರ ಸಮೀಪ ಚಲ್ಲಕೆರೆ ಬಳಿ ನಡೆದಿದೆ.

    ಇದೇ ತಿಂಗಳ 8 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬದಿಯಿಂದ ಬಂದು ಕೈ ಹಿಡಿದ ಕಾಮುಕ ಆಕೆಯ ಬಟ್ಟೆ ಬಿಚ್ಚಲು ಯತ್ನಿಸಿದ್ದಾನೆ. ಈ ವೇಳೆ ಬೀದಿ ಕಾಮುಕನಿಂದ ಬಿಡಿಸಿಕೊಳ್ಳಲು ರಸ್ತೆಯಲ್ಲಿ ಮಹಿಳೆ ಕಿರುಚಾಡಿದ್ದಾಳೆ. ಆಗ ಮಹಿಳೆಯ ಕಿರುಚಾಟ ಕೇಳಿ ಸ್ಥಳಕ್ಕೆ ಆಗಮಿಸಿದ ಸುತ್ತಮುತ್ತಲ ನಿವಾಸಿಗಳು ಕಾಮುಕನನ್ನು ಹಿಡಿದು ಸರಿಯಾಗಿ ಥಳಿಸಿದ್ದಾರೆ.

    ಡ್ರಗ್ಸ್ ಹಾಗೂ ಗಾಂಜಾ ಸೇವಿಸಿ ಬೀದಿಯಲ್ಲಿ ಓಡಾಡ್ತಿದ್ದ ಅಸಾಮಿ ಅಮಲಿನಲ್ಲಿ ಮಹಿಳೆಯನ್ನು ಎಳೆದಾಡಿದ್ದಾನೆ. ಘಟನೆ ಬಳಿಕ ಕಾಮುಕನನ್ನು ಹೆಣ್ಣೂರು ಪೊಲೀಸರಿಗೆ ಸಾರ್ವಜನಿಕರು ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ಮಾಡುವ ವೇಳೆ ಆರೋಪಿಯು ಯಲಹಂಕ ಮೂಲದ ಅಲುಮೀನ್ ಎಂಬುದು ಪತ್ತೆಯಾಗಿದೆ. ಗಾಂಜಾ ಸೇವನೆಗಾಗಿ ಹೆಣ್ಣೂರು ಕಡೆ ಬಂದಿದ್ದ ಆರೋಪಿ ಹೆಣ್ಣೂರು ಬಳಿಯ ವಿದೇಶಿ ಪ್ರಜೆಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಘಟನೆ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv