Tag: Cloudy Weather

  • ದುರ್ಬಲಗೊಂಡ ಚಂಡಮಾರುತ – 2 ದಿನ ಮೋಡ ಕವಿದ ವಾತಾವರಣ

    ದುರ್ಬಲಗೊಂಡ ಚಂಡಮಾರುತ – 2 ದಿನ ಮೋಡ ಕವಿದ ವಾತಾವರಣ

    ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ದೊಡ್ಡ ಮಟ್ಟದ ಮಳೆ ನೀರಿಕ್ಷೆ ಇಲ್ಲ ಎಂದು ಹವಾಮಾನ ಇಲಾಖೆಯ ನಿರ್ದೇಶಕ ರಮೇಶ್ ಬಾಬು ಹೇಳಿದ್ದಾರೆ.

    ಈಗಾಗಲೇ ಚಂಡಮಾರುತ ದುರ್ಬಲಗೊಂಡಿದೆ. ಇವತ್ತು ಅತೀ ಹೆಚ್ಚು ಎಂದರೆ ಮೂರು ಸೆಂಟಿಮೀಟರ್ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸ್ವಲ್ಪ ಮಳೆ ನಿರೀಕ್ಷಿಸಬಹುದು. ಹಾಗಂತ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದಿದ್ದಾರೆ.

    ಚಿಂತಾಮಣಿ, ಕೋಲಾರ, ಶಿಡ್ಲಘಟ್ಟದಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಿದೆ. ಬೆಂಗಳೂರಲ್ಲಿ ಕೇವಲ 2.5 ಮಿಲಿ ಮೀಟರ್ ಮಳೆಯಾಗಿದೆ. ಇವತ್ತು ಮತ್ತು ನಾಳೆ ಇದೇ ರೀತಿ ಮೋಡ ಕವಿದ ವಾತಾವರಣವೇ ಇರುತ್ತದೆ ಎಂದು ತಿಳಿಸಿದ್ದಾರೆ.

    ದಕ್ಷಿಣ ಕರ್ನಾಟಕದಲ್ಲಿ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಹೆಚ್ಚು ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

  • ಸೂರ್ಯಗ್ರಹಣ: ಮೈಸೂರಿಗರಿಗೆ ತೀವ್ರ ನಿರಾಸೆ

    ಸೂರ್ಯಗ್ರಹಣ: ಮೈಸೂರಿಗರಿಗೆ ತೀವ್ರ ನಿರಾಸೆ

    ಮೈಸೂರು: ಅಪರೂಪದ ಕಂಕಣ ಸೂರ್ಯಗ್ರಹಣ ವೀಕ್ಷಿಸಲು ಬಹಳ ಉತ್ಸಾಹಕರಾಗಿದ್ದ ಮೈಸೂರಿನ ಜನರಿಗೆ ನಿರಾಸೆ ಉಂಟಾಗಿದೆ.

    ಮೈಸೂರಿನ ಓವೆಲ್ ಮೈದಾನದಲ್ಲಿ ಮೈಸೂರು ಜಿಲ್ಲಾಡಳಿತ ಸಾರ್ವಜನಿಕರು ಸೂರ್ಯ ಗ್ರಹಣ ವೀಕ್ಷಣೆಗಾಗಿ ವ್ಯವಸ್ಥೆ ಮಾಡಿತ್ತು. ಹಲವು ಶಾಲಾ ಕಾಲೇಜಿನ ಸಾವಿರಾರು ಮಕ್ಕಳು ಬಹಳ ಕೂತುಹಲದಿಂದ ಮೈದಾನಕ್ಕೆ ಆಗಮಿಸಿದ್ದರು. ಆದರೆ, ಬಂದವರಿಗೆಲ್ಲಾ ತೀವ್ರ ನಿರಾಸೆ ಉಂಟಾಯಿತು. ಗ್ರಹಣ ಆರಂಭದ ಐದತ್ತು ನಿಮಿಷ ಮಾತ್ರ ಗ್ರಹಣ ಗೋಚರವಾಯಿತು. ನಂತರ ಸಂಪೂರ್ಣವಾಗಿ ಮೋಡ ಕವಿದ ಕಾರಣ ಗ್ರಹಣವನ್ನು ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಗ್ರಹಣ ಮುಕ್ತಾಯದವರೆಗೂ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ, ಮೈಸೂರಿನ ಜನರಿಗೆ ತೀವ್ರ ನಿರಾಸೆ ಉಂಟಾಯಿತು.

    ಮೈಸೂರಿನ ಚಾಮುಂಡಿ ಬೆಟ್ಟದ ದೇಗುಲ ಗ್ರಹಣದ ಹಿನ್ನೆಲೆಯಲ್ಲಿ ಬಂದ್ ಆಗಿತ್ತು. ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ದೇವಸ್ಥಾನದ ಬಾಗಿಲು ಬಂದ್ ಆಗಿತ್ತು. ಗ್ರಹಣದ ವೇಳೆ ಭಕ್ತರಿಗೆ ದೇಗುಲ ಪ್ರವೇಶ ನಿರ್ಬಂಧಿಸಲಾಗಿತ್ತು. ಅಲ್ಲದೆ ಪ್ರಸಾದ ವ್ಯವಸ್ಥೆಯನ್ನ ಕಡಿತಗೊಳಿಸಲಾಗಿತ್ತು. ಸೂರ್ಯಗ್ರಹಣ ಮುಕ್ತಾಯದ ಬಳಿಕ ಶುದ್ಧಿ ಕಾರ್ಯ ನಡೆಸಿ ಭಕ್ತರಿಗೆ ಚಾಮುಂಡಿ ದೇವಿಯ ದರ್ಶನ ಭಾಗ್ಯ ಕಲ್ಪಿಸಲಾಯಿತು.