Tag: CM Basavaraja Bommai

  • ಕುರ್ಚಿಗಾಗಿ ಹಗಲುಗನಸು ಕಾಣ್ತಿದ್ದಾರೆ ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ: ಶ್ರೀರಾಮುಲು

    ಕುರ್ಚಿಗಾಗಿ ಹಗಲುಗನಸು ಕಾಣ್ತಿದ್ದಾರೆ ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ: ಶ್ರೀರಾಮುಲು

    – ಕಾಂಗ್ರೆಸ್ ಅವರೇ ನಿಜವಾದ ತಾಲಿಬಾನ್‍ಗಳು

    ಬಳ್ಳಾರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುರ್ಚಿಗಾಗಿ ಹಗಲುಗನಸು ಕಾಣುತ್ತಿದ್ದಾರೆ. ಅದಕ್ಕೆ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಾರಿಗೆ, ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಟಾಂಗ್ ಕೊಟ್ಟಿದ್ದಾರೆ.

    ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಯಿ ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಅವರು ಲಘುವಾಗಿ ಮಾತನಾಡ್ತಿದ್ದಾರೆ. ಸಿದ್ದರಾಮಯ್ಯ ಎಂದರೆ ಸಮಾಜವಾದಿ ಎನ್ನುವ ಮಾತಿತ್ತು. ಆದರೆ ಕುರ್ಚಿಗಾಗಿ ಸಿದ್ದರಾಮಯ್ಯ ಎನ್ನುವ ಹಾಗೆ ಆಗಿದೆ. ಕುರ್ಚಿಗಾಗಿ ಹಗಲುಗಸು ಕಾಣ್ತಿದ್ದಾರೆ ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಅಧಿಕಾರದ ಹಗಲುಗನಸಿನಿಂದ ಕಲಾಪ ವ್ಯರ್ಥ ಮಾಡಿದ್ರು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಚಾಲನೆ – ಕಬ್ಬು ನಾಟಿ ಮಾಡಿದ ಕೌರವ

    ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಬ್ಬರ ಮುಖ ಮತ್ತೊಬ್ಬರು ನೋಡ್ತಿಲ್ಲ. ಖರ್ಗೆ ಪರಮೇಶ್ವರ್ ಯಾರು ಕೂಡ ಸಿದ್ದರಾಮಯ್ಯ ಕಣ್ಣಿಗೆ ಕಾಣ್ತಿಲ್ಲ. ಸ್ವಯಂ ಘೋಷಿತ ಸಿಎಂ ರೀತಿ ಸಿದ್ದರಾಮಯ್ಯ ಮಾತನಾಡ್ತಿದ್ದಾರೆ. ಮೂರು ಪಾಲಿಕೆಯಲ್ಲಿ ಕಾಂಗ್ರೆಸ್ ತಿರಸ್ಕಾರವಾಗಿದೆ. ಚಾಮುಂಡೇಶ್ವರಿ ಜನ ಸೋಲಿಸಿದ್ದಾರೆ.
    ಬಾದಾಮಿ ಜನರು ಜೀವದಾನ ನೀಡಿ ಪುನರ್ಜನ್ಮ ನೀಡಿದ್ದಾರೆ. ಆದರೆ ಬಾದಾಮಿ ಜನರನ್ನು ಇದೀಗ ಮೂಲೆಗುಂಪು ಮಾಡಿದ್ದಾರೆ. ಬಾದಾಮಿಯ ಜನರು ಇವರನ್ನು ಯಾಕಾದರೂ ಗೆಲ್ಲಿಸಿದ್ದೇವೆ ಎನ್ನುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ತಾಲಿಬಾನ್ ಕೃತ್ಯ ಆರ್ ಎಸ್ ಎಸ್ ಗೆ ಹೋಲಿಸ್ತಾರೆ. ಆದ್ರೇ ಸಿದ್ದರಾಮಯ್ಯ ಅವರ ಮನಸ್ಥಿತಿಯೇ ತಾಲಿಬಾನಂತಿದೆ. ಕಾಂಗ್ರೆಸ್ ಅವರೇ ನಿಜವಾದ ತಾಲಿಬಾನ್ ನವರು. ತಾಲಿಬಾನಿಗರಿಗೂ ಕಾಂಗ್ರೆಸ್ ನವರಿಗೂ ಹೊಂದಾಣಿಕೆ ಆಗಲಿದೆ. ಕಾಂಗ್ರೆಸ್ ತಾಲಿಬಾನ್ ಸಂಸ್ಕೃತಿ ಹೊಂದಿದೆ. ಕಾಂಗ್ರೆಸ್ ದಿವಾಳಿತನದ ಪರಮಾವಧಿ ತಲುಪಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ:  ಕೆಜಿಎಫ್ ಎಸ್‍ಪಿ ಅಂಗರಕ್ಷಕನ ಮೇಲೆ ಹಲ್ಲೆ – ಐವರ ಬಂಧನ

    ಕೇಂದ್ರ ಸರ್ಕಾರದ ಅಕ್ಕಿ ನೀಡೋ ಯೋಜನೆ ತಮ್ಮದು ಎನ್ನುತ್ತಾರೆ. ಅಕ್ಕಿಯನ್ನು ಸಿದ್ದರಾಮಯ್ಯ ಅವರ ಮನೆಯಿಂದ ತಂದುಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು. ಬೊಮ್ಮಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎಂದ ಶ್ರೀರಾಮುಲು, ಉಪಚುನಾವಣೆ ಬಗ್ಗೆ ಕೋರ್ ಕಮೀಟಿ ಬಗ್ಗೆ ಚರ್ಚೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡ್ತೇವೆ ಎಂದಿದ್ದಾರೆ.

  • ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

    ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

    ಹಾವೇರಿ: ತುಂಗಭದ್ರಾ ನದಿ ತೀರದಲ್ಲಿ ಮರಳು ಸಾಗಾಣಿಕೆಗೆ ಮಕ್ಕಳನ್ನು ಪೋಷಕರು ಬಳಕೆ ಮಾಡಿಕೊಳ್ಳುತ್ತಿರೋ ಶಾಕಿಂಗ್ ವಿಚಾರ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಬಳಿ ನಡೆಯುತ್ತಿದೆ.

    ರಾಣೆಬೆನ್ನೂರಿನ ಚಿಕ್ಕಕುರುವತ್ತಿ ಗ್ರಾಮದ ಬಳಿ ಮರಳಿನ ಗಾಡಿ ಓಡಿಸ್ತಿದ್ದ ಬಾಲಕನ ವೀಡಿಯೋ ಈಗ ವೈರಲ್ ಆಗಿದೆ. ಗ್ರಾಮದ ಬಳಿ ಇರೋ ತುಂಗಭದ್ರಾ ನದಿಯಿಂದ ಎತ್ತಿನ ಗಾಡಿಯಲ್ಲಿ ಮರಳು ತುಂಬಿಕೊಂಡು ಪೋಷಕರ ಜೊತೆಗೆ ಬಾಲಕ ಎತ್ತಿನಬಂಡಿಯನ್ನು ಓಡಿಸುತ್ತಿದ್ದನು. ಇದನ್ನೂ ಓದಿ:  ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್

    ಈ ವೇಳೆ ಸ್ಥಳೀಯರು ಇದನ್ನು ಗಮನಿಸಿ ಮರಳಿನ ಗಾಡಿ ತಡೆದು ನಿಲ್ಲಿಸಿ, ಬಾಲಕನನ್ನು ಶಾಲೆಗೆ ಕಳಿಸೋ ಬದಲು ಮರಳು ತುಂಬಿಕೊಂಡು ಬರಲು ಕಳುಸಿದ್ದಕ್ಕೆ ಪೋಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೀವು ಹಾಳು ಆಗಿದ್ದೀರಿ ಮಕ್ಕಳನ್ನು ಹಾಳು ಮಾಡಬೇಡಿ. ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಸ್ಥಳೀಯನ ಆಕ್ರೋಶಕ್ಕೆ ಕಂಗಾಲಾಗಿ ಬಾಲಕನ ಪೋಷಕ ಇಲ್ಲದ ಸಬೂಬು ನೀಡಿದ್ದಾನೆ. ವಿಷಯ ಗೊತ್ತಿದ್ದರೂ ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ವಂಚನೆ – ಐವರು ಅರೆಸ್ಟ್

  • ನಮ್ಮ ಅವಧಿಯಲ್ಲೇ ಮಹದಾಯಿ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುತ್ತೆ: ಬೊಮ್ಮಾಯಿ

    ನಮ್ಮ ಅವಧಿಯಲ್ಲೇ ಮಹದಾಯಿ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುತ್ತೆ: ಬೊಮ್ಮಾಯಿ

    ಗದಗ: ನಮ್ಮ ಅವಧಿಯಲ್ಲಿ ಮಹದಾಯಿ ವಿವಾದಕ್ಕೆ ಖಂಡಿತ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

    ನಗರದ ಜಿಮ್ಸ್ ಆಸ್ಪತ್ರೆ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ಮಹದಾಯಿ ವಿಚಾರದ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥವಾಗಿ ವಾದ ಮಂಡಿಸಲಾಗಿದೆ. ಕೆಲವೇ ದಿನಗಳಲ್ಲಿ ಪರಿಷ್ಕೃತ ಪ್ರಾಜೆಕ್ಟ್ ರಿಪೋರ್ಟ್ ಅನ್ನು ಕೇಂದ್ರಕ್ಕೆ ಸಲ್ಲಿಸಲಾಗುತ್ತೆ. ಅಗತ್ಯ ಕ್ರಮ ತೆಗೆದುಕೊಂಡು, ಕಾಮಗಾರಿ ಆರಂಭಕ್ಕೆ ಪ್ರಯತ್ನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಐತಿಹಾಸಿಕ ಮಂಟಪಗಳು, ಶಾಸನಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ: ಕೊಪ್ಪಳ ಜಿಲ್ಲಾಧಿಕಾರಿ

    ಪಂಚಮಸಾಲಿ ಮೀಸಲಾತಿಗೆ ಹೋರಾಟದ ಕುರಿತು ಮಾತನಾಡಿದ ಅವರು, ಮೀಸಲಾತಿಗಾಗಿ ಹೋರಾಟ ಮಾಡೋದು ತಪ್ಪೇನಲ್ಲ. ಸರ್ಕಾರವಾಗಿ ನಾವು ಕಾನೂನು ಚೌಕಟ್ಟು ಹಾಗೂ ಸುಪ್ರೀಂ ಕೋರ್ಟ್ ಆದೇಶದಂತೆ ಕೆಲಸ ಮಾಡುತ್ತೇವೆ. ಹಿಂದುಳಿದ ವರ್ಗಗಳ ಆಯೋಗದಿಂದ ಎಲ್ಲ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆಯಲಾಗುತ್ತಿದೆ. ಆಯೋಗದ ರಿಪೋರ್ಟ್ ಬಂದ ಮೇಲೆ ಸರ್ಕಾರ ಮುಂದಿನ ಕೆಲಸ ಮಾಡುತ್ತೆ ಎಂದರು.

    ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಜೊತೆ ಸಂಪರ್ಕದಲ್ಲಿದ್ದೇನೆ. ವಿಶ್ವಾಸ ಮೂಡಿಸುವಲ್ಲಿ ಯಶಸ್ವಿಯಾಗಲಿದ್ದೇನೆ. ಈ ವೇಳೆ ಸಚಿವ ಸಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ಕಳಕಪ್ಪ ಬಂಡಿ, ಎಸ್.ವಿ.ಸಂಕನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

  • ಯತ್ನಾಳ್, ಬೆಲ್ಲದ್‍ಗೆ ಅಭಿನಂದನೆ ಸಲ್ಲಿಸಿದ ಜಯಮೃತ್ಯುಂಜಯ ಸ್ವಾಮೀಜಿ

    ಯತ್ನಾಳ್, ಬೆಲ್ಲದ್‍ಗೆ ಅಭಿನಂದನೆ ಸಲ್ಲಿಸಿದ ಜಯಮೃತ್ಯುಂಜಯ ಸ್ವಾಮೀಜಿ

    ಬೆಳಗಾವಿ: ಇಂದು 29ನೇ ದಿವಸಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ಕಾಲಿಟ್ಟಿದೆ ಎಂದು ಬೆಳಗಾವಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

    ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಧ್ವನಿ ಎತ್ತಿದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರ ಶಾಸಕರಿಗೆ ಈ ಮೂಲಕ ಅಭಿನಂದನೆಯನ್ನು ತಿಳಿಸಿದರು.

    ಮೀಸಲಾತಿ ನೀಡುವ ಬಗ್ಗೆ ಮಾರ್ಚ್ 15ರಂದು ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರ ಮಾತು ಕೊಟ್ಟಿತ್ತು. ಸರ್ಕಾರ ಕೊಟ್ಟ ಮಾತು ಸೆಪ್ಟೆಂಬರ್ 15ಕ್ಕೆ ಮುಕ್ತಾಯಗೊಂಡಿದೆ. ಮಲೆಮಹದೇಶ್ವರ ಬೆಟ್ಟದಿಂದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ಪ್ರಾರಂಭವಾಗಿದ್ದು, ಇಂದು 29ನೇ ದಿವಸಕ್ಕೆ ನಮ್ಮ ಬೃಹತ್ ಅಭಿಯಾನ ಕಾಲಿಟ್ಟಿದೆ. ಕರ್ನಾಟಕದ ಸೆ.7 ರಷ್ಟು ಭಾಗ ಪೂರೈಸಿ ಬೆಳಗಾವಿಗೆ ಬಂದಿದ್ದೇವೆ ಎಂದರು.  ಇದನ್ನೂ ಓದಿ:  ಕೊರೊನಾ ಇಳಿಮುಖ – ಉಡುಪಿ ಕೃಷ್ಣಮಠದಲ್ಲಿ ಸಾರ್ವಜನಿಕ ಅನ್ನಪ್ರಸಾದ ಸೇವೆ ಆರಂಭ

    ಅಧಿವೇಶನದಲ್ಲಿ ಕೊಟ್ಟ ಮಾತು ನೆನಪಿಸಲು ಭಾರತದ ಬಾಹುಬಲಿ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರಾದ ಅರವಿಂದ್ ಬೆಲ್ಲದ, ಸಿದ್ದು ಸವದಿ, ಶಿವಾನಂದ ಪಾಟೀಲ್ ಅವರು ಸಹ ಇದಕ್ಕೆ ಸಾಥ್ ಕೊಟ್ಟಿದ್ದಾರೆ. ಯತ್ನಾಳ್ ಅವರ ಜೊತೆ ದನಿಗೂಡಿಸಿ ಧರಣಿ ಮಾಡ್ತಿದ್ದಾರೆ. ಇದನ್ನು ನೋಡಿದ್ರೆ ಪಂಚಮಸಾಲಿ ಮೀಸಲಾತಿ ಕೆಲವೇ ದಿನಗಳಲ್ಲಿ ನ್ಯಾಯ ಪಡೆದುಕೊಳ್ಳುವ ನಿರೀಕ್ಷೆ ಹೆಚ್ಚಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನಾವು ಸಹ ಅಧಿವೇಶನ ಮುಕ್ತಾಯದೊಳಗೆ ಯಾರಾದರೂ ಈ ಕುರಿತು ಧ್ವನಿ ಎತ್ತುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ವಿ. ಆಡಳಿತಾರೂಢ ಪಕ್ಷದ ಶಾಸಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಧ್ವನಿ ಎತ್ತಿದ್ದಾರೆ. ನಮ್ಮ ಜೊತೆ ಮೀಸಲಾತಿ ಬಯಸುವ ಎಲ್ಲ ಸಮುದಾಯದ ಪರ ಎಲ್ಲರೂ ಸಹ ಧ್ವನಿ ಎತ್ತಿದ್ದಾರೆ. ಪಂಚಮಸಾಲಿಗಳು ಎಲ್ಲರ ಜೊತೆ ಕೂಡಿ ಬಾಳೋರು ಎಂಬುದನ್ನು ಅಧಿವೇಶನದಲ್ಲಿ ತೋರಿಸುವ ಕೆಲಸ ಯತ್ನಾಳ್ ಗೌಡರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ 

    ಧ್ವನಿ ಎತ್ತಿದ ನಾಲ್ಕು ನಾಯಕರಿಗೆ ಪಂಚಮಸಾಲಿ ಸಮುದಾಯದ ಪರ ಅನಂತ ಅನಂತ ಧನ್ಯವಾದ. ಕೂಡಲೇ ಯತ್ನಾಳ್, ಬೆಲ್ಲದ್‍ರವರ ಹಕ್ಕೊತ್ತಾಯ ಮಂಡನೆಗೆ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ಕೊಡಬೇಕು. ನಾಳೆ ಬೆಳಗಾವಿಗೆ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಬರ್ತಿದ್ದಾರೆ. ನಮ್ಮ ಸಮಾಜದ ಎಲ್ಲ ನಾಯಕರು ಬೆಳಗಾವಿಗೆ ಬರ್ತಿದ್ದಾರೆ. ನಾಳೆ ಜಿಲ್ಲಾ ಮಟ್ಟದ ಪ್ರತಿಜ್ಞಾ ಪಂಚಾಯತ್ ಅಭಿಯಾನ ಗಾಂಧಿ ಭವನದಲ್ಲಿ ನಡೆಯುತ್ತಿದೆ. ಇದಾದ ಬಳಿಕ ರಾಜ್ಯ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ. ಮುಂದಿನ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:  ಮೃತನ ಕುಟುಂಬಕ್ಕೆ ಬಹುಮಾನದ ಹಣ ನೀಡಿದ ಮೈಸೂರು ಪೊಲೀಸರು

    ಬೊಮ್ಮಾಯಿ ಅವರು ಸಹ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಸಚಿವರಾದ ಸಿ.ಸಿ.ಪಾಟೀಲ್ ಹಾಗೂ ಯತ್ನಾಳ್ ಜೊತೆ ಸಿಎಂ ಚರ್ಚಿಸಿದ್ದಾರೆ. ಅಕ್ಟೋಬರ್ ಒಂದನೇ ತಾರೀಖಿನೊಳಗೆ ನಾವು ಗಡುವು ಕೊಟ್ಟಿದ್ದೇವೆ. ಒಂದನೇ ತಾರೀಖಿನೊಳಗೆ ನಮಗೆ ಸರ್ಕಾರ ನ್ಯಾಯ ದೊರಕಿಸಿಕೊಡುತ್ತೆಂಬ ವಿಶ್ವಾಸ ಇದೆ. ನಮ್ಮ ಅಭಿಯಾನ ಮುಕ್ತಾಯ ಆಗೋದ್ರೊಳಗಾಗಿ ನ್ಯಾಯ ಸಿಗದಿದ್ರೆ ಮತ್ತೆ ಧರಣಿ ಸತ್ಯಾಗ್ರಹ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದರು.

  • ಮಲೆಮಹದೇಶ್ವರ ಬೆಟ್ಟ 5 ವರ್ಷಗಳಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಲಿದೆ: ಬೊಮ್ಮಾಯಿ

    ಮಲೆಮಹದೇಶ್ವರ ಬೆಟ್ಟ 5 ವರ್ಷಗಳಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಲಿದೆ: ಬೊಮ್ಮಾಯಿ

    ಬೆಂಗಳೂರು: ಐದು ವರ್ಷದೊಳಗೆ ಮಲೆಮಹದೇಶ್ವರ ದೇವಸ್ಥಾನ ದಕ್ಷಿಣ ಭಾರತದಲ್ಲಿ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

    ವಿಧಾನಸೌಧ ಸಭಾಂಗಣದಲ್ಲಿ ಇಂದು ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕದ ಧಾರ್ಮಿಕ ಕ್ಷೇತ್ರವಾದ ಮಲೆಮಹದೇಶ್ವರ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುವ ಭಕ್ತರೇ ಹೆಚ್ಚು. ಬೆಂಗಳೂರು, ಮೈಸೂರು ಭಾಗದವರು ಮಾತ್ರವಲ್ಲ ರಾಜ್ಯದ ನಾನಾ ಭಾಗಗಳಿಂದ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಇದರ ಜೊತೆಗೆ ದೇವಸ್ಥಾನದ ಅಭಿವೃದ್ಧಿ ಕೂಡ ವೇಗ ಪಡೆದುಕೊಂಡಿದೆ. ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸಮಯ ನಿಗದಿ ಮಾಡಿಕೊಂಡು ಕ್ಷೇತ್ರಕ್ಕೆ ಆಗಮಿಸಲಾಗುವುದು ಎಂದು ಭರವಸೆ ನೀಡಿದರು.

    ಪ್ರಾಧಿಕಾರದ ಅಭಿವೃದ್ಧಿ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಸಹಕಾರ ಸಚಿವರು ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ನಿತ್ಯ ಸಾವಿರಾರು ಭಕ್ತರು ಆಗಮಿಸುವ ಮಲೆಮಹದೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವರು, ದೇವಸ್ಥಾನದಲ್ಲಿ ಎಲ್ಲಾ ಸೌಲಭ್ಯಗಳ ಜೊತೆಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ:  ರೋಡಿಗೆ ಬಂದ ನಾಗರಹಾವು- ಅರ್ಧ ಗಂಟೆ ಸಂಚಾರ ಬಂದ್ 

    ದೇವಸ್ಥಾನದ ಹಿಂಭಾಗದ ದೀಪದಗಿರಿ ಒಡ್ಡಿನಲ್ಲಿ ಮಹದೇಶ್ವರ ಸ್ವಾಮಿ ಪ್ರತಿಮೆ ನಿರ್ಮಾಣದ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ನಂತರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.

    ಇದೇ ವೇಳೆ ಪ್ರಾಧಿಕಾರದ ಕ್ರಿಯಾ ಯೋಜನೆ ಹಾಗೂ ಮುಂದುವರಿದ ಕಾಮಗಾರಿಗಳಿಗೆ 141.20 ಕೋಟಿ ರೂ. ಗಳ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಕಾರ್ ಪಾರ್ಕಿಂಗ್ ಗೆ 40 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲು, ಹೊಸದಾಗಿ ಸ್ನಾನಘಟ್ಟ ನಿರ್ಮಾಣಕ್ಕೆ 4.95 ಕೋಟಿ ರೂ.ಗೆ ಅನುಮೋದನೆ ಸೇರಿದಂತೆ 49 ವಿವಿಧ ವಿಷಯಗಳಿಗೆ ಅನುಮೋದನೆ ನೀಡಲಾಯಿತು. ಇದನ್ನೂ ಓದಿ: ಮೈಸೂರು ಅರಮನೆಗೆ ಸೇರಿದ 4 ಆನೆಗಳು ಗುಜರಾತಿಗೆ ಶಿಫ್ಟ್

    ಕ್ಷೇತ್ರದಲ್ಲಿ ಮಹದೇಶ್ವರ ಸ್ವಾಮಿ ಪ್ರತಿಮೆ ನಿರ್ಮಿಸಲು ಪ್ರಾಧಿಕಾರಕ್ಕೆ 450 ಕೆಜಿ ಬೆಳ್ಳಿಯ ಅವಶ್ಯಕತೆಯಿತ್ತು. ಆದರೆ ಭಕ್ತರು 500 ಕೆಜಿಯಷ್ಟು ಬೆಳ್ಳಿ ನೀಡಿದ್ದಾರೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಸಭೆಯ ಗಮನಕ್ಕೆ ತಂದರು.

    ಸಭೆಯಲ್ಲಿ ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ, ಶಾಸಕರಾದ ನಿರಂಜನ್ ಕುಮಾರ್, ಎನ್.ಮಹೇಶ್, ಪುಟ್ಟರಂಗಶೆಟ್ಟಿ, ನರೇಂದ್ರ, ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್, ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

  • ನಗರಸಭೆಗೆ ಚುನಾವಣೆ ನಡೆದು ನಾಲ್ಕು ತಿಂಗಳಾದರೂ ಅಧಿಕಾರವಿಲ್ಲ..!

    ನಗರಸಭೆಗೆ ಚುನಾವಣೆ ನಡೆದು ನಾಲ್ಕು ತಿಂಗಳಾದರೂ ಅಧಿಕಾರವಿಲ್ಲ..!

    ಮಡಿಕೇರಿ: ನಗರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ನಾಲ್ಕು ತಿಂಗಳುಗಳೇ ಕಳೆದರೂ ಅಧ್ಯಕ್ಷ ಹಾಗೂ ಉಪಧ್ಯಾಕ್ಷರ ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿಲ್ಲ. ಇದರ ಪರಿಣಾಮ ಗೆದ್ದು ನಾಲ್ಕು ತಿಂಗಳಾದರೂ ಜನಪ್ರತಿನಿಧಿಗಳು ಅಧಿಕಾರವಿಲ್ಲದೆ ಪರಾದಾಡುವಂತಾಗಿದೆ.

    ಮಡಿಕೇರಿಯ ನಗರಸಭೆ ಚುನಾವಣೆ, ಏಪ್ರಿಲ್ 3ನೇ ವಾರದಲ್ಲಿ ನಡೆದು ಫಲಿತಾಂಶವೂ ಹೊರಬಿದ್ದಿತ್ತು. ಚುನಾವಣೆ ನಡೆಯುತ್ತಿದ್ದಂತೆ ಕೋವಿಡ್ ಜಾಸ್ತಿಯಾಗಿದ್ದರಿಂದ ಲಾಕ್ ಡೌನ್ ಜಾರಿಯಾಗಿತ್ತು. ಆದರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆ ಆದರೂ ಕೊಡಗಿನಲ್ಲಿ ಮಾತ್ರ ಕಡಿಮೆ ಆಗಿರಲಿಲ್ಲ. ಬಳಿಕ ಕೋವಿಡ್ ಪಾಸಿಟಿವಿಟಿ ರೇಟ್ ಶೇ.2 ಪಸೆರ್ಂಟ್ ಗಿಂತಲೂ ಕಡಿಮೆಯಾಗಿ ಈಗ 15 ದಿನಗಳು ಕಳೆದಿವೆ.

    ಕೊಡಗಿನಲ್ಲಿ ಹೇರಿದ್ದ ವೀಕೆಂಡ್ ಲಾಕ್ ಡೌನ್ ಕೂಡ ತೆರವು ಮಾಡಲಾಗಿದೆ. ಆದರೂ ಮಡಿಕೇರಿ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ದಿನಾಂಕ ಮಾತ್ರ ನಿಗದಿಯಾಗಿಲ್ಲ. ಚುನಾವಣೆ ನಡೆದು ಮೂರು ತಿಂಗಳು ಪೂರ್ಣಗೊಂಡಿದ್ದರೂ ಇಂದಿಗೂ ಆಡಳಿತದ ಚುಕ್ಕಾಣಿ ಹಿಡಿಯಲು ಸಾಧ್ಯವಾಗದೆ ನಗರದ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕಡೆಗಣಿಸಲ್ಪಟ್ಟಿವೆ. ಮಳೆಗಾಲದಲ್ಲಿ ಸುರಿದ ಮಳೆಗೆ ಗುಂಡಿಬಿದ್ದಿರುವ ನಗರದ ರಸ್ತೆಗಳನ್ನು ಮುಚ್ಚೋದಕ್ಕೂ ಸಹ ಸಾಧ್ಯವಾಗಿಲ್ಲ. ಇದನ್ನೂ ಓದಿ: ಕುಮಾರಸ್ವಾಮಿ ಎಲ್ಲಾ ಕ್ಷೇತ್ರದಲ್ಲೂ ಇಬ್ಬಿಬ್ಬರನ್ನು ಇಟ್ಟಿರ್ತಾರೆ: ಎಸ್.ಆರ್ ಶ್ರೀನಿವಾಸ್

    ಹೀಗಾಗಿ ವಾಹನ ಸವಾರರು ನರಕಯಾತನೆ ಅನುಭವಿಸಬೇಕಾಗಿದೆ. ನಗರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಮೈಸೂರು ಬಿಟ್ಟರೆ ಮಡಿಕೇರಿಯಲ್ಲಿ ನಡೆಯುತ್ತಿದ್ದ ದಸರಾ ಜನೋತ್ಸವಕ್ಕೆ ಇನ್ನು ಕೆಲವು ದಿನಗಳು ಮಾತ್ರವೇ ಬಾಕಿ ಇವೆ. ನಗರಸಭೆ ಆಡಳಿತ ಮಂಡಳಿ ರಚನೆಯಾಗದೆ ಹಿನ್ನೆಲೆ ಎಲ್ಲವೂ ಕಾರ್ಯಕ್ರಮಗಳು ನೆನೆಗುದಿಗೆ ಬಿದ್ದಿವೆ.

    ಚುನಾವಣೆ ನಡೆದು ಮೂರು ತಿಂಗಳು ಕಳೆದರೂ, ಆಡಳಿತದ ಚುಕ್ಕಾಣಿ ಹಿಡಿಯದಿರುವುದರಿಂದ ಆಯಾ ವಾರ್ಡ್ ಗಳ ಕೌನ್ಸಿಲರ್ ಗಳು ತಮ್ಮ ವಾರ್ಡ್ ಗಳ ಮತದಾರರಿಗೆ ಮೂಖತೋರಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದರೆ. ಹೀಗಾಗಿ ಆದಷ್ಟು ಬೇಗ ಅಧ್ಯಕ್ಷರು ಮತ್ತು ಉಪಾಧ್ಯರ ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಕೌನ್ಸಿಲರ್ ಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ನಾವು ಕೂಡ ಆದಷ್ಟು ಬೇಗ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೇವೆ. ಸಿಎಂ ಕೂಡ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸದ್ಯದಲ್ಲೇ ಚುನಾವಣೆ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

     

  • ಭಕ್ತರಿಗೆ ಘಾಸಿಯಾಗಿದೆ, ಸರಿದೂಗಿಸುವ ಪ್ರಯತ್ನ ಮಾಡುತ್ತೇನೆ: ಬೊಮ್ಮಾಯಿ

    ಭಕ್ತರಿಗೆ ಘಾಸಿಯಾಗಿದೆ, ಸರಿದೂಗಿಸುವ ಪ್ರಯತ್ನ ಮಾಡುತ್ತೇನೆ: ಬೊಮ್ಮಾಯಿ

    ಹಾವೇರಿ: ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ನಂಜನಗೂಡು ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಂಜನಗೂಡು ಘಟನೆ ನಡೆದ ಬಳಿಕ ಅನೇಕರ ಬಳಿ ಈ ಕುರಿತು ಚರ್ಚೆ ಮಾಡಿದ್ದೇನೆ. ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ. ಅಲ್ಲಿನ ಭಕ್ತರಿಗೆ ಘಾಸಿಯಾಗಿದೆ. ಅದನ್ನು ಸರಿದೂಗಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ:  ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ ನೀಡಬಹುದು – ಜಿಲ್ಲಾಡಳಿತದಿಂದ ನಿರ್ಬಂಧ ತೆರವು 

    ಪಕ್ಷದ ಮಾರ್ಗದರ್ಶನ ಪಡೆದು ಆ ಭಾಗದ ಜನರ ಭಾವನೆಗೆ ಸ್ಪಂದನೆ ಮಾಡುವ ಕೆಲಸ ಮಾಡುತ್ತೇನೆ. ಎಲ್ಲರಿಗೂ ಒಪ್ಪಿಗೆ ಆಗುವಂತಹ ನಿರ್ಣಯ ತೆಗೆದುಕೊಳ್ತೇವೆ. ಈ ಸರ್ಕಾರ ನಮ್ಮ ಕಾರ್ಯಕರ್ತರದ್ದು, ಕಾರ್ಯಕರ್ತರ ಭಾವನೆ ನಮಗೆ ಅರ್ಥವಾಗುತ್ತೆ. ಅವರ ಭಾವನೆಗೆ ಬೆಲೆ ಕೊಡುವಂತಹ ನಿರ್ಣಯಗಳನ್ನು ತೆಗೆದುಕೊಳ್ತೇವೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

    ಮಂದಿರದ ತೆರವು ಬಗ್ಗೆ ಪರಿಣಾಮಗಳನ್ನು ಯೋಚನೆ ಮಾಡದೆ ಶಾಂತಿ ಕದಡುವ ಪ್ರಯತ್ನಗಳು ನಡೆದಿವೆ. ಗುಜರಾತ್ ಸೇರಿದಂತೆ ಬೇರೆ ಬೇರೆ ರಾಜ್ಯದಲ್ಲಿಯೂ ಇದು ನಡೆದಿದೆ. ದೇಶವನ್ನು ಅಭದ್ರ ಮಾಡುವ ಕೆಲ ಸಂಗತಿಗಳು ನಡೆಯುತ್ತಿವೆ. ಇದಕ್ಕೆ ಕೆಲ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂದು ಅನುಮಾನವನ್ನು ವ್ಯಕ್ತಪಡಿಸಿದರು. ಮಂದಿರದ ವಿಚಾರದಲ್ಲಿ ಹಲವಾರು ನಾಯಕರು ಸಂಘಟನೆ, ಕಾನೂನು ಪಂಡಿತರೊಡನೆ ಚರ್ಚೆ ಮಾಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ   

    ಕಾನೂನು ಮತ್ತು ಆಡಳಿತಾತ್ಮಕ ಸಮಸ್ಯೆಗೆ ಪರಿಹಾರ ಕ್ರಮ ಕೈಗೊಳ್ಳುತ್ತೇನೆ. ಮಂದಿರದ ವಿಚಾರದಲ್ಲಿ ಕೆಲ ಭಕ್ತರಿಗೆ ನೋವಾಗಿದೆ. ಅಲ್ಲಿನ ಭಕ್ತರ ಮನಸ್ಸಿಗೆ ನೋವಾಗದಂತೆ ಸರಿಪಡಿಸುವ ಕೆಲಸ ಮಾಡುತ್ತೇವೆ. ನಮ್ಮ ಮಿತ್ರರಿಗೆ ಕರೆ ಕೊಡುತ್ತೇನೆ. ನಿಮ್ಮ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲ ಸರಿದೂಗಿಸುವ ಕೆಲಸ ಮಾಡುತ್ತೇವೆ. ನಿಮ್ಮದೇ ಹಿತಚಿಂತನೆಯ ಸರ್ಕಾರ ಎಂದರು. ಇದನ್ನೂ ಓದಿ:    ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?

  • ಕೊಟ್ಟ ಮಾತು ಉಳಿಸಿಕೊಂಡ ಸಿಎಂ – ಶಿಗ್ಗಾಂವಿ ಅಜ್ಜಿ ಮನೆಗೆ ಡಿಸಿ ಭೇಟಿ, 3 ತಿಂಗಳಲ್ಲಿ ಮನೆ ಭರವಸೆ

    ಕೊಟ್ಟ ಮಾತು ಉಳಿಸಿಕೊಂಡ ಸಿಎಂ – ಶಿಗ್ಗಾಂವಿ ಅಜ್ಜಿ ಮನೆಗೆ ಡಿಸಿ ಭೇಟಿ, 3 ತಿಂಗಳಲ್ಲಿ ಮನೆ ಭರವಸೆ

    ಹಾವೇರಿ: ಪಬ್ಲಿಕ್ ಟಿವಿ ಸಂದರ್ಶನದ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದಂತೆ ಇಂದು ಶಿಗ್ಗಾಂವಿಯ ಅಜ್ಜಿ ಮನೆಗೆ ಜಿಲ್ಲಾಧಿಕಾರಿ ಸಂಜಯ್ ಶೇಟ್ಟೆಣ್ಣವರ್ ಭೇಟಿ ನೀಡಿ 3 ತಿಂಗಳಲ್ಲಿ ಅಜ್ಜಿಗೆ ಮನೆ ಕಟ್ಟಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.

    ಶುಕ್ರವಾರ ನಡೆದ ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾಂವಿಯ 70 ವರ್ಷದ ಅಜ್ಜಿ ಕಮಲಮ್ಮ ತಿಮ್ಮನಗೌಡರ ಅವರಿಗೆ ಮನೆ ಕಟ್ಟಿಸಿಕೊಡುವ ಭರವಸೆ ನೀಡಿದ್ದರು. ಅಲ್ಲದೆ ಕಾರ್ಯಕ್ರಮದಲ್ಲೇ ಜಿಲ್ಲಾಧಿಕಾರಿ ಸಂಜಯ್ ಶೆಟ್ಟಣ್ಣವರ್ ಅವರನ್ನು ಸಂಪರ್ಕಿಸಿ ಸಿಎಸ್‍ಆರ್ ಫಂಡ್ ಅಡಿಯಲ್ಲಿ ಕಮಲಮ್ಮನವರಿಗೆ ಮನೆ ಕಟ್ಟಿಸಿಕೊಡುವ ವ್ಯವಸ್ಥೆ ಮಾಡಿ ಎಂದು ಸೂಚಿಸಿದ್ದರು. ಅದರಂತೆ ಇಂದು ಜಿಲ್ಲಾಧಿಕಾರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಮಂಚಿನಕೊಪ್ಪ ಗ್ರಾಮದ ಕಮಲಮ್ಮನವರ ಮನೆಗೆ ಭೇಟಿ ನೀಡಿ 3 ತಿಂಗಳಲ್ಲಿ ಮನೆ ಕಟ್ಟಿಸಿಕೊಡುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

    ಈ ಹಿಂದೆ ಸಿಎಂ ಭೇಟಿಯಾಗಲು ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಮಂಚಿನಕೊಪ್ಪ ಗ್ರಾಮದ ವಯೋವೃದ್ಧೆ ಕಮಲಮ್ಮನವರು ಹೂಗುಚ್ಚ ಹಿಡಿದು ಪರದಾಡಿದ್ದರು. ಆದರೆ ಶುಕ್ರವಾರ ಮುಖ್ಯಮಂತ್ರಿಯವರು ಪಬ್ಲಿಕ್ ಟಿವಿ ಕಾರ್ಯಕ್ರಮದಲ್ಲಿ ಅಜ್ಜಿಗೆ ಮನೆ ಕಟ್ಟಿಸಿಕೊಡುವ ಭರವಸೆ ನೀಡಿದ್ದರು. ಇಂದು ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್, ಸಿಇಓ ಮಹಮ್ಮದ್ ರೋಷನ್ ಹಾಗೂ ಎಸಿ ಅನ್ನಪೂರ್ಣ ಮುದಕಮ್ಮನವರ ಭೇಟಿ ನೀಡಿ ಕಮಲಮ್ಮನವರ ಸಮಸ್ಯೆ ಆಲಿಸಿ, ಮನೆ ಕಟ್ಟಿಸಿಕೊಡುವ ಭರವಸೆ ನೀಡಿದರು. ಹ್ಯಾಬಿಟೈಟ್ ಕಂಪನಿಯ ಮೂಲಕ ಅಜ್ಜಿಗೆ ಹೊಸ ಮನೆ ನಿರ್ಮಾಣ ಮಾಡಲು ಸೂಚನೆ ನೀಡಲಾಗಿದೆ. ಎರಡ್ಮೂರು ತಿಂಗಳಲ್ಲಿನಲ್ಲಿ ಮನೆ ನಿರ್ಮಾಣ ಭರವಸೆಯನ್ನು ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ನೀಡಿದ್ದಾರೆ.

    ಮಕ್ಕಳು ತೀರಿಕೊಂಡರೂ ನಿಮ್ಮ ಇನ್ನೊಬ್ಬ ಮಗ ನಾನಿದ್ದೇನೆ. ನಾನು ನಿಮಗೆ ಮನೆ ಕಟ್ಟಿಸಿಕೊಡುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದರು. ಅದರಂತೆ ಇಂದು ಜಿಲ್ಲಾಧಿಕಾರಿಗಳು ಆಗಮಿಸಿ, ಮನೆ ಕಟ್ಟಿಸಿಕೊಡುತ್ತೇನೆಂದು ಭರವಸೆ ನೀಡಿದ್ದಾರೆ. ನನಗೆ ನಾಲ್ಕು ಮೊಮ್ಮಕ್ಕಳು ಇದ್ದಾರೆ. ಅವರ ಜವಾಬ್ದಾರಿ ನನ್ನ ಮೇಲಿದೆ. ಮನೆ ಕಟ್ಟಿಸಿಕೊಡುತ್ತಿರುವುದಕ್ಕೆ ಸಿಎಂಗೆ ಒಳ್ಳೆಯದಾಗಲಿ. ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಕಮಲಮ್ಮ ಭಾವುಕರಾದರು.

    ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣನವರ್, ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಸಿಎಂ ಅವರು ಕಮಲಮ್ಮ ಅವರ ಸಮಸ್ಯೆ ಬಗ್ಗೆ ಪರಿಶೀಲನೆ ಮಾಡಲು ಸೂಚಿಸಿದ್ದರು. ಇಂದು ಎಲ್ಲವೂ ಪರಿಶೀಲನೆ ನಡೆಸಿದ್ದೇವೆ. ಒಂದು ತಿಂಗಳಿನಲ್ಲಿ ಹೊಸ ಮನೆ ನಿರ್ಮಾಣ ಮಾಡಿ ಕೊಡುತ್ತೇವೆ. ಈಗಿನ ಮನೆ ಸಂಪೂರ್ಣ ದುರಸ್ಥಿಯಲ್ಲಿದೆ. ಹೀಗಾಗಿ, ಮನೆ ಬೀಳಿಸಿ, ಹೊಸ ಮನೆ ನಿರ್ಮಿಸುತ್ತೇವೆ. ಒಂದು ತಿಂಗಳ ಮಟ್ಟಿಗೆ ಬೇರೆ ವ್ಯವಸ್ಥೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

  • ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

    ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

    ಹುಬ್ಬಳ್ಳಿ: ಗೃಹ ಸಚಿವ ಅಮಿತ್ ಶಾ ಇಂದು ಹುಬ್ಬಳ್ಳಿಗೆ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

    ಲೋಕಸಭಾ ಅಧ್ಯಕ್ಷ ಓಂ ಪ್ರಕಾಶ್ ಬಿರ್ಲಾ ಹಾಗೂ ಕೇಂದ್ರ ಸರ್ಕಾರದ ಸಚಿವರುಗಳೊಂದಿಗೆ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದರು. ಈ ವೇಳೆ ಬೊಮ್ಮಾಯಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರನ್ನೆಲ್ಲ ಆತ್ಮೀಯವಾಗಿ ಬರಮಾಡಿಕೊಂಡರು. ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ

    ಅಮಿತ್ ಶಾ ಅವರಿಗೆ ಶಾಲುಹೊದಿಸಿ, ಹಾರ ತೊಡಿಸಿದ ಸಿಎಂ ಲೇಖಕ ದೀಪಕ್ ಚೋಪ್ರಾ ಬರೆದಿರುವ ‘ಬುದ್ಧ- ದ ಸ್ಟೋರಿ ಆಫ್ ಎನಲೈಟ್‍ಮೆಂಟ್’ ಪುಸ್ತಕವನ್ನು ನೀಡಿದರು. ನಂತರ ಗೃಹ ಸಚಿವರೊಂದಿಗೆ ವಿಶೇಷ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.

    ಲೋಕಸಭಾಧ್ಯಕ್ಷರು, ಅಮಿತ್ ಶಾ ಹಾಗೂ ಇತರೆ ಸಚಿವರು ಸಂಜೆ ಹುಬ್ಬಳ್ಳಿ ಡೆನ್ನಿಸನ್ ಹೋಟೆಲ್‍ನಲ್ಲಿ ಆಯೋಜಿಸಲಾಗಿರುವ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಪುತ್ರಿ ಅರ್ಪಿತಾ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ:ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುವೆ: ಸಿಎಂ

    ಈ ಸಂದರ್ಭದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪಿಯೂಷ್ ಗೊಯೆಲ್, ಕೇಂದ್ರ ಶಿಕ್ಷಣ ಸಚಿವ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಧಮೇರ್ಂದ್ರ ಪ್ರಧಾನ್, ಕೇಂದ್ರ ರಾಜ್ಯ ರೈಲ್ವೇ ಖಾತೆ ಸಚಿವ ರಾವ್ ಸಾಹೇಬ್ ಪಾಟೀಲ್ ದವನೆ, ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವ ಶಂಕರಪಾಟೀಲ್ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ:ವಿಜಯಪುರ ವಿಮಾನ ನಿಲ್ದಾಣಕ್ಕೆ 125 ಕೋಟಿ: ಗೋವಿಂದ ಕಾರಜೋಳ

  • ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುವೆ: ಸಿಎಂ

    ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುವೆ: ಸಿಎಂ

    ಧಾರವಾಡ/ಹುಬ್ಬಳ್ಳಿ: ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಬೆಲೆ ಏರಿಕೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಲೆಂಡರ್ ಗ್ಯಾಸ್ ಹಾಗೂ ತೈಲ ಬೆಲೆ ಏರಿಕೆಯೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿರ್ಧಾರವಾಗುತ್ತೆ. ಇದರ ಬಗ್ಗೆ ಕಾಂಗ್ರೆಸ್ ಅವರಿಗೆ ಗೊತ್ತಿದೆ. ಹಿಂದೆ ಅವರು ಏನನ್ನು ಮಾಡಿದ್ದಾರೆ ಎಂದು ಅವರಿಗೆ ಗೊತ್ತಿದೆ. ಆಯಿಲ್ ಬಾಂಡ್ ವಿಚಾರ ಏನಾಗಿತ್ತು ಎಂದು ಕಾಂಗ್ರೆಸ್ ನಾಯಕರಿಗೂ ತಿಳಿದಿದೆ ಎಂದು ಬೆಲೆ ಎರಿಕೆ ವಿರುದ್ಧ ಆರೋಪ ಮಾಡುವವರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

    ಅದೇನೇ ಇರಲಿ ಬೆಲೆ ಏರಿಕೆ ಬಗ್ಗೆ ಸೆಪ್ಟೆಂಬರ್ 5 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಜೊತೆ ಚರ್ಚೆ ಮಾಡುವೆ. ನಂತರ ಈ ಕುರಿತು ಪರಿಹಾರದ ಬಗ್ಗೆ ಮಾತನಾಡಬಹುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ

    ಕೊರೊನಾ ನಕಲಿ ರಿಪೋರ್ಟ್ ಬಗ್ಗೆ ಮಾತನಾಡಿದ ಅವರು, ಕೇರಳ ಗಡಿಯಿಂದ ರಾಜ್ಯಕ್ಕೆ ನಕಲಿ ರಿಪೋರ್ಟ್ ತೆಗೆದುಕೊಂಡು ಬರುವರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರಾಥಮಿಕ ಶಾಲೆ ಅರಂಭ ಆಗಿರುವ ಬಗ್ಗೆ ಪರಿಶೀಲನೆ ಮಾಡಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ವಿಜಯಪುರ ವಿಮಾನ ನಿಲ್ದಾಣಕ್ಕೆ 125 ಕೋಟಿ: ಗೋವಿಂದ ಕಾರಜೋಳ

    ಬೊಮ್ಮಾಯಿ ಅವರು ಹುಬ್ಬಳ್ಳಿಯ ನಿವಾಸದಲ್ಲೇ ತಂಗಿದ್ದರು. ಇಂದು ದಾವಣಗೆರೆ ಕಾರ್ಯಕ್ರಮಕ್ಕೂ ತೆರಳುವ ಮುನ್ನ ಸಾರ್ವಜನಿಕರಿಂದ ಅಹವಾಲು ಆಲಿಸಿದ್ರು. ಅಲ್ಲದೇ ಹುಬ್ಬಳ್ಳಿಯ ಪ್ರಸಿದ್ಧ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದೀಪಾರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರು ಸಾವಿರ ಮಠಕ್ಕೂ ಭೇಟಿ ಮಾಡಿ ಗದ್ದುಗೆ ದರ್ಶನ ಪಡೆದಿದ್ದಾರೆ.