ಬೆಂಗಳೂರು: ಸಿಎಂ ಡಿನ್ನರ್ ಮೀಟಿಂಗ್ (CM Dinner Meeting) ಕರೆದಿರೋದಕ್ಕೂ ಎರಡೂವರೆ ವರ್ಷ ಅಧಿಕಾರ ಹಸ್ತಾಂತರಕ್ಕೂ ಯಾವುದೇ ಸಂಬಂಧವಿಲ್ಲ ಅಂತ ಗೃಹ ಸಚಿವ ಪರಮೇಶ್ವರ್ (G Parameshwar) ಸ್ಪಷ್ಟಪಡಿಸಿದ್ದಾರೆ.
ಸಿಎಂ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳು ಊಟಕ್ಕೆ ಕರೆಯುತ್ತಾರೆ. ಸೆಷನ್ ಇದ್ದಾಗಲೂ ಅವರು ಕರೆಯುತ್ತಾರೆ. ಕೆಲವರು ಮಂತ್ರಿಗಳು ಕರೆಯುತ್ತಾರೆ. ಅದೇ ರೀತಿ ಈಗ ಸಿಎಂ ಕರೆದಿದ್ದಾರೆ. ನಾನು ಹೇಳೋದು ಇದೇನು ದೊಡ್ಡದಲ್ಲ. ಊಟಕ್ಕೂ, ಎರಡೂವರೆ ವರ್ಷ ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ ಎಂದರು. ಇದನ್ನೂ ಓದಿ: ಶಾಸಕರ ಅಭಿಪ್ರಾಯ ಪಡೆದೇ ಹೈಕಮಾಂಡ್ ಸಿಎಂ ಆಯ್ಕೆ ಮಾಡೋದು: ಡಿಕೆಶಿಗೆ ಪರಮೇಶ್ವರ್ ತಿರುಗೇಟು
ಬಿಹಾರ ಎಲೆಕ್ಷನ್ (Bihar Election) ವಿಚಾರವಾಗಿ ಸಿಎಂ ಕರೆದಿದ್ದಾರೆಂಬ ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ಬಿಜೆಪಿಯವರು ಹೇಗೆ ಬೇಕಾದ್ರೂ ಮಾತನಾಡಬಹುದು. ಹಾಗೆ ಮಾತನಾಡಬೇಕು ಹೀಗೆ ಮಾತಾಡಬೇಕು ಅಂತ ಏನಿಲ್ಲ. ಅವರು ಏನು ಬೇಕಾದ್ರೂ ಮಾತನಾಡಬಹುದು ಅಂತ ತಿರುಗೇಟು ಕೊಟ್ರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ RSS ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ: ಪರಮೇಶ್ವರ್
– ಸಂಪುಟ ವಿಸ್ತರಣೆ ಬಗ್ಗೆ ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತೆ
ಬೆಂಗಳೂರು: ಪವರ್ ಶೇರಿಂಗ್ ವಿಚಾರ ಮತ್ತು ಸಂಪುಟ ಪುನರಾಚನೆ ವಿಚಾರ ಯಾವುದೇ ಶಾಸಕರು, ಸಚಿವರು ಬಹಿರಂಗವಾಗಿ ಮಾತಾಡೋದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ (Santosh Lad) ಪಕ್ಷದ ಶಾಸಕ, ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ (Congress) ಒಳಗೆ ಪವರ್ ಶೇರಿಂಗ್ (Power Sharing) ಮತ್ತು ಸಚಿವ ಸಂಪುಟ ಪುನರಾಚನೆ ಬಗ್ಗೆ ಚರ್ಚೆ ಆಗ್ತಿರೋ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದೇ ಶಾಸಕರು ಇದರ ಬಗ್ಗೆ ಮಾತಾಡಬಾರದು. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾವು ಯಾರು ಇದರ ಬಗ್ಗೆ ಮಾತಾಡಬಾರದು ಎಂದು ತಿಳಿಸಿದ್ದಾರೆ.
ಸಿಎಂ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಪ್ರತಿ ವರ್ಷ ಊಟಕ್ಕೆ ಕರೆಯುತ್ತಾರೆ. ಬೇರೆ ವಿಷಯ ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಅಂತ ಸ್ಪಷ್ಟಪಡಿಸಿದ್ದಾರೆ.
ಡಿಸೆಂಬರ್ ಒಳಗೆ ಕೇಂದ್ರದಲ್ಲಿ ಕ್ರಾಂತಿ ಆಗುತ್ತೆ
ನವೆಂಬರ್ನಲ್ಲಿ ಕಾಂಗ್ರೆಸ್ನಲ್ಲಿ ಕ್ರಾಂತಿ ಆಗುತ್ತೆ. ಸಿಎಂ ಬದಲಾವಣೆ ಆಗುತ್ತೆ ಎಂಬ ಬಿಜೆಪಿ ಭವಿಷ್ಯಕ್ಕೆ ತಿರುಗೇಟು ನೀಡಿದ ಅವರು, ನಾನು ಹೇಳ್ತೀನಿ ಡಿಸೆಂಬರ್ ಒಳಗೆ ಕೇಂದ್ರದಲ್ಲಿ ಕ್ರಾಂತಿ ಆಗುತ್ತೆ. ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ. ಮೋದಿ ಬಗ್ಗೆ ಮಾತಾಡೋಕೆ ಮಾಧ್ಯಮಗಳಿಗೂ ಆಗ್ತಿಲ್ಲ. ಮೋದಿ ವಿರುದ್ಧ ಯಾರಿಗೂ ಮಾತಾಡೋ ಧೈರ್ಯ ಇಲ್ಲ. ಬಿಜೆಪಿ ಅವರು ಹುಲಿ ಸವಾರಿಯಲ್ಲಿ ಇದ್ದಾರೆ. ಮೋದಿ ಕೆಲಸವನ್ನು ಒತ್ತಾಯಪೂರ್ವಕವಾಗಿ ಒಪ್ಪುತ್ತಿದ್ದಾರೆ. ಮೋದಿ ಬಿಹಾರದಲ್ಲಿ 10,000 ರೂ. ಹಣ ಕೊಟ್ಟರು. ಇದನ್ನ ಬಿಜೆಪಿಯ ಯುವ ನಾಯಕರು ಒಪ್ಪುತ್ತಾರಾ ಎಂದು ಪ್ರಶ್ನಿಸಿದ್ದಾರೆ.
10 ವರ್ಷದ ಹಿಂದೆ ಮೋದಿ ಅವರು ಟೆಂಡರ್ ಕೂಗಿದ್ರು. ಈಗ ಬಿಹಾರದಲ್ಲಿ 10,000 ಕೊಡ್ತೀನಿ ಅಂತ ಕೂಗುತ್ತಿದ್ದಾರೆ. ಇವರಿಗೆ ನಾಚಿಕೆ, ಮಾನ ಮರ್ಯಾದೆ ಇದ್ಯಾ? ಇವರು ಅಭಿವೃದ್ಧಿ ಮಾಡಿದ್ರೆ ಯಾಕೆ ಹಣ ಕೊಡಬೇಕಿತ್ತು. ಇದನ್ನ ಬಿಜೆಪಿ ನಾಯಕರಿಗೆ ಕೇಳ್ತಾರಾ? ಮಾಧ್ಯಮಗಳು ಕೇಳ್ತಾರಾ? ಕೇರಳ, ಬಿಹಾರಕ್ಕೆ ಹೋದ್ರೆ ಒಂದೊAದು ಸ್ಲೋಗನ್ ಕೊಡ್ತಾರೆ. ಇಂತಹ ಪ್ರಧಾನಿ ಯಾವತ್ತು ನಾವು ನೋಡಿಲ್ಲ ಎಂದು ಕಿಡಿಕಾರಿದರು.
– ಸಿಎಂ ಡಿನ್ನರ್ ಪಾರ್ಟಿ ಅಜೆಂಡಾ ಊಟ ಅಷ್ಟೆ, ನವೆಂಬರ್ ಕ್ರಾಂತಿ ಯಾವುದು ಇಲ್ಲ
ಬೆಂಗಳೂರು: ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಪರಮೇಶ್ವರ್ (Parameshwar) ಸ್ಪಷ್ಟಪಡಿಸಿದ್ದಾರೆ.
ಗುರುವಾರ ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ (Satish Jarkiholi) ಅಪಾರ್ಟ್ಮೆಂಟ್ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆ ಸಭೆಯಲ್ಲಿ ಯಾವುದೇ ವಿಶೇಷ ಇಲ್ಲ. ಮಾಧ್ಯಮಗಳಿಗೆ ಯಾವ ರೀತಿ ಕಣ್ಣಿಗೆ ಕಾಣಿಸುತ್ತೆ ಅಂತ ಗೊತ್ತಿಲ್ಲ. ಹಾಗೆ ಸಭೆ ಮಾಡಿರೋದು ಮೊದಲ ಬಾರಿ ಅಲ್ಲ. ಅನೇಕ ಬಾರಿ ನಾನು ಜಾರಕಿಹೊಳಿ, ಮಹದೇವಪ್ಪ ಸಭೆ ಮಾಡಿದ್ದೇವೆ. ನಾವೆಲ್ಲ ಸ್ನೇಹಿತರು, ಕೆಲವು ವಿಷಯಗಳು ಚರ್ಚೆ ಮಾಡಬೇಕು ಅಂದಾಗ ಭೇಟಿ ಮಾಡುತ್ತೇವೆ. ಅದು ಪೊಲಿಟಿಕಲ್ ಮೀಟಿಂಗ್ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಂಪುಟ ಪುನರ್ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್ಫಾಸ್ಟ್ ಮೀಟಿಂಗ್
ರಾಜಣ್ಣ ಮಂತ್ರಿ ಅಲ್ಲ ಅದಕ್ಕೆ ಬಂದಿರಲಿಲ್ಲ. ನಿನ್ನೆ ಕ್ಯಾಬಿನೆಟ್ ಸಭೆ ಇತ್ತು. ಕೆಲವು ವಿಷಯ ಸೂಕ್ಷ್ಮ ಇತ್ತು ಹಾಗೇ ಮಾತಾಡಿಕೊಂಡು, ತಿಂಡಿ ತಿಂದು ಹೋಗೋಣ ಅಂತ ಸಭೆ ಮಾಡಿದ್ವಿ. ಅದೊಂದು ಸಾಮಾನ್ಯ ಮೀಟಿಂಗ್ ಅಷ್ಟೇ. ಈ ಹಿಂದೆ ಬೇಕಾದಷ್ಟು ಬಾರಿ ನಾವು ಸಭೆ ಮಾಡಿದ್ದೇವೆ. ಇದೇನು ಮೊದಲ ಸಭೆ ಅಲ್ಲ. ಸತೀಶ್ ಜಾರಕಿಹೊಳಿ, ಮಹದೇವಪ್ಪ ಮನೆಯಲ್ಲಿ ಅನೇಕ ಬಾರಿ ಮೀಟ್ ಮಾಡಿದ್ದೇವೆ. ಹೊಸದೇನು ಅಲ್ಲ ಎಂದಿದ್ದಾರೆ.
ದಲಿತ ನಾಯಕರ ಬೇಡಿಕೆ ಕಾಂಗ್ರೆಸ್ನಲ್ಲಿ ಈಡೇರುತ್ತಿಲ್ಲ ಅಂತ ಯಾರು ಹೇಳಿದ್ರು? ಹೆಚ್ಚುವರಿ ಡಿಸಿಎಂ ಬೇಕು ಅಂತ ನಾನು ಹೇಳಿರಲಿಲ್ಲ. ಯಾರು ಹೇಳಿದ್ರು, ಯಾರು ಒತ್ತಾಯ ಮಾಡಿದ್ರು? ಸತೀಶ್ ಜಾರಕಿಹೊಳಿ, ರಾಜಣ್ಣ ಒತ್ತಾಯ ಮಾಡಿರೋದು ನನಗೆ ಗೊತ್ತಿಲ್ಲ. ಸತೀಶ್ ಜಾರಕಿಹೊಳಿ, ನಾವು ಜನರಲ್ ಆಗಿ ಮಾತಾಡಿದ್ದೇವೆ. ಇದೇ ರೀತಿ ಆಗಬೇಕು ಅಂತ ನಾವ್ಯಾರು ಮಾತಾಡಿಲ್ಲ ಎಂದು ತಿಳಿಸಿದ್ದಾರೆ.
ಸಿಎಂ ಡಿನ್ನರ್ ಸಭೆ ಅಜೆಂಡಾ ಊಟ ಅಷ್ಟೇ
ಸಿಎಂ ಡಿನ್ನರ್ ಮೀಟಿಂಗ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಹಿಂದೆಯೂ ಅನೇಕ ಬಾರಿ ಊಟಕ್ಕೆ ಕರೆದಿದ್ದಾರೆ. ತುಂಬಾ ದಿನ ಆಗಿತ್ತು. ಹೀಗಾಗಿ ಊಟಕ್ಕೆ ಕರೆದಿದ್ದಾರೆ. ಡಿನ್ನರ್ ಕರೆಯೋದಕ್ಕೆ ಏನು ವಿಶೇಷತೆ ಇಲ್ಲ. ಊಟ ಹಾಕ್ತಾರೆ, ಊಟ ಮಾಡಿಕೊಂಡು ಬರುತ್ತೇವೆ. ಸಿಎಂ ಡಿನ್ನರ್ ಸಭೆ ಅಜೆಂಡಾ ಊಟ ಅಷ್ಟೇ. ಸಿಎಂ ಊಟಕ್ಕೆ ಕರೆದಿರೋದು ಒಂದು ಸಾಮಾನ್ಯ ಮೀಟಿಂಗ್ ಅಷ್ಟೆ. ಜಾಸ್ತಿ ದಿನ ಆಗಿದೆ ಅಂತ ಊಟಕ್ಕೆ ಕರೆದಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ವಿಚಾರವಾಗಿ ಮಾತನಾಡಿದ ಅವರು, ಎಲ್ಲಿದೆ ನವೆಂಬರ್ ಕ್ರಾಂತಿ? ಯಾರು ಹೇಳಿದ್ರು ನವೆಂಬರ್ ಕ್ರಾಂತಿ ಅಂತ? ಯಾವ ಕ್ರಾಂತಿಯೂ ಇಲ್ಲ. ಸಂಪುಟ ಪುನಾರಚನೆ ಆಗೋದು ಎಲ್ಲಾ ಸಿಎಂ ಅವರನ್ನ ಕೇಳಬೇಕು. ಸಂಪುಟ ಪುನರಾಚನೆ ಇದ್ಯಾ, ಯಾರನ್ನಾದ್ರು ಹೊಸಬರನ್ನ ಮಂತ್ರಿಯಾಗಿ ತಗೋತೀರಾ ಅಂತ ಸಿಎಂ ಅವರನ್ನ ಕೇಳಿ ಎಂದಿದ್ದಾರೆ.
ಹೈಕಮಾಂಡ್ ಸಚಿವರ ಮೌಲ್ಯಮಾಪನ ಏನು ಮಾಡಿಲ್ಲ. ಸಚಿವರ ಬಗ್ಗೆ ಬೇರೆ ಬೇರೆ ಸಮಯದಲ್ಲಿ ಮಾಹಿತಿ ತಗೊಂಡಿದ್ರು. ಇದೆಲ್ಲ ಸಾಮಾನ್ಯವಾಗಿ ಹಾಗೂ ನಿರಂತರವಾಗಿ ನಡೆಯುತ್ತದೆ. ಅದಕ್ಕೂ ಇದಕ್ಕೂ ಹೋಲಿಕೆ ಮಾಡೋದು ಸರಿಯಲ್ಲ. ಕಾಂಗ್ರೆಸ್ನಲ್ಲಿ ಯಾವುದೇ ಕ್ರಾಂತಿ ಇಲ್ಲ ಎಂದು ತಿಳಿಸಿದ್ದಾರೆ.