ಹುಬ್ಬಳ್ಳಿ: ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರವಾಗಿದ್ದರೆ ಏನ್ಮಾಡ್ತೀಯಾ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ.
ಕುಂದಗೋಳದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗಿತ್ತು. ಈ ಘಟನೆಯಿಂದ ನನಗೆ ತುಂಬಾ ದುಃಖ ತಂದಿತ್ತು. ನನ್ನ ಮೊಮ್ಮಗಳ ಮೇಲೆ ಅತ್ಯಾಚಾರವಾದಷ್ಟು ನೋವಾಗಿತ್ತು. ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದೆ. ಆದರೆ ಸಿದ್ದರಾಮಯ್ಯ ಏನ್ ಮಾಡಬೇಕು ಈವಾಗ ಅಂದಿದ್ದ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಯಾರು ನಿನ್ನನ್ನು ಮಣ್ಣಿನ ಮಗ ಎಂದು ಕರೆದರು? ನಾವೇನು ಕಲ್ಲಿನ ಮಕ್ಕಳಾ? ಸಾಲಮನ್ನಾ ಹೆಸರಲ್ಲಿ ದ್ರೋಹ ಮಾಡಿದವರು ಮಣ್ಣಿನ ಮಕ್ಕಳಲ್ಲ. ನಿಜವಾದ ಮಣ್ಣಿನ ಮಗ ಬಿ.ಎಸ್. ಯಡಿಯೂರಪ್ಪ ಅವರು. ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುವ ಇವರ ನಾಲಿಗೆ ಬೀಳಬೇಕು ಎಂದು ಸಿದ್ದರಾಮಯ್ಯ ಹಾಗೂ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಗುಡುಗಿದರು.
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಿಂಗಾಯತರು. ಅವನ ಗ್ರಹಚಾರಕ್ಕೆ ಈಗ ಏನು ಹೇಳುತ್ತಾರೆ. ಕುರುಬ, ಲಿಂಗಾಯತ, ಒಕ್ಕಲಿಗರ ಹೆಸರಿನಲ್ಲಿ ಮತ ಕೇಳುವ ಇವರು ಜಾತಿವಾದಿಗಳಲ್ವಾ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಟಾಂಗ್ ಕೊಟ್ಟರು.

ಪ್ರಧಾನಿ ಮೋದಿ ಬಗ್ಗೆ ಮಾತನಾಡುವವರಿಗೆ ಮಗನೆ ಬಾ ನಿಂಗೆ ಒದೆಯುತ್ತೇವೆ ಅಂತ ಹೇಳಿ. ಕ್ಷೇತ್ರ ಅಭಿವೃದ್ಧಿ ಮಾಡುವುದಾಗಿ ಪ್ರಮಾಣ ಮಾಡಿ, ಸಿ.ಎಸ್.ಶಿವಳ್ಳಿ ಅವರ ಆತ್ಮಕ್ಕೆ ನಾವು ಶಾಂತಿ ನೀಡುತ್ತೇವೆ. ಪುಲ್ವಾಮಾ ದಾಳಿಯಾದ ಹನ್ನೊಂದನೇ ದಿನಕ್ಕೆ ಉಗ್ರರನ್ನು ಬಲಿ ತೆಗೆದುಕೊಂಡ ದೇಶಭಕ್ತರು ನಾವು. ಸಿದ್ದರಾಮಯ್ಯ ನಮಗೆ ಯಾವ ಲೆಕ್ಕಾರಿ ಎಂದು ಪ್ರಶ್ನಿಸಿದರು.
ಮಣ್ಣಿನ ಮಗನ ಹೋಮದಿಂದ ಬಿ.ಎಸ್.ಯಡಿಯೂರಪ್ಪ ಸಿಎಂ ಆಗುತ್ತಾರೆ. ರಾವಣ ಹೋಮ ಮಾಡಿದಾಗಲೂ ದೇಶಕ್ಕೆ ಒಳ್ಳೇದಾಯಿತು ಎಂದು ರೇವಣ್ಣ ಅಲ್ಲ ರಾವಣ ಎಂದು ವ್ಯಂಗ್ಯವಾಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವುದು ಆಗಲ್ಲ ಅಂತ ಹೇಳುತ್ತಾರೋ ಅದೇ ಆಗುತ್ತದೆ. ನರೇಂದ್ರ ಮೋದಿ ಪ್ರಧಾನಿ ಆಗಲ್ಲ, ಕುಮಾರಸ್ವಾಮಿ ಅವರಪ್ಪನಾಣೆಗೂ ಸಿಎಂ ಆಗಲ್ಲ ಎಂದಿದ್ದರು. ಆದರೆ ಅವರ ಮಾತು ಸುಳ್ಳಾಯಿತು ಎಂದು ಹೇಳಿದರು.




ಬಳ್ಳಾರಿಯ ವಿಜಯನಗರ ಮೆಡಿಕಲ್ ಸಂಸ್ಥೆಯಲ್ಲಿ ಹಾಸ್ಟೆಲ್ ಮತ್ತು ಸಲಕರಣೆಗೆ 65 ಕೋಟಿ ರೂ. ನೀಡಲು ಸಂಪುಟ ಒಪ್ಪಿಗೆ ನೀಡಿದೆ. ವಿಕಲಚೇತನ ಹಕ್ಕುಗಳ ಕರಡು ಅಧಿನಿಯಮ 2019ರ ಅಡಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಶೇ 5 ವಸತಿ ವ್ಯವಸ್ಥೆ, ಶೇ 5 ರಷ್ಟು ಸರ್ಕಾರಿ ಸವಲತ್ತು. ಶೇ 4ರಷ್ಟು ಸರ್ಕಾರಿ ನೇಮಕಾತಿ ಅವಕಾಶ ನೀಡುವ ನಿಯಮಗಳಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಚಾಮರಾಜನಗರದಲ್ಲಿ ಸರ್ಕಾರಿ ಕಾನೂನು ವಿದ್ಯಾಲಯ ಸ್ಥಾಪನೆಗೆ ಅನುಮತಿ ದೊರಕಿದೆ ಎಂದು ಮಾಹಿತಿ ನೀಡಿದರು.








