Tag: CM ibrahim

  • ಮೋದಿಯನ್ನು ರಾವಣ, ದುರ್ಯೋಧನನಿಗೆ ಹೋಲಿಸಿದ ಸಿಎಂ ಇಬ್ರಾಹಿಂ

    ಮೋದಿಯನ್ನು ರಾವಣ, ದುರ್ಯೋಧನನಿಗೆ ಹೋಲಿಸಿದ ಸಿಎಂ ಇಬ್ರಾಹಿಂ

    ಬಾಗಲಕೋಟೆ: ಈ ಪುಣ್ಯ ಭೂಮಿ ಮೇಲೆ ಪಾಪಿಗಳು ನಿಲ್ಲೋದಿಲ್ಲ. ರಾವಣನೂ ನಿಂತಿಲ್ಲ, ದುರ್ಯೋಧನನೂ ನಿಂತಿಲ್ಲ ಎನ್ನುವ ಮೂಲಕ ಮೋದಿಯನ್ನು ರಾವಣ ಹಾಗೂ ದುರ್ಯೋಧನನಿಗೆ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಹೋಲಿಸಿ ಟೀಕಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೇನೆಯನ್ನು ಮೋದಿ ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಈಗ ಏನೇ ಇದ್ದರೂ ಕಾಲಾಯ ತಸ್ಮೈ ನಮಃ. ಈ ಪುಣ್ಯ ಭೂಮಿ ಮೇಲೆ ಪಾಪಿಗಳು ನಿಲ್ಲೋದಿಲ್ಲ. ರಾವಣನೂ ನಿಂತಿಲ್ಲ ದುರ್ಯೋಧನನೂ ನಿಂತಿಲ್ಲ ಎನ್ನುವ ಮೂಲಕ ಮೋದಿಯನ್ನು ರಾವಣ ಹಾಗೂ ದುರ್ಯೋಧನನಿಗೆ ಹೋಲಿಸಿ ಟೀಕಿಸಿದರು.

    ಮತ್ತೊಮ್ಮೆ ಮೋದಿ ಪ್ರಧಾನಿಯಾದರೆ ಪಾಕ್ ಸಮಸ್ಯೆ ಬಗೆಹರಿಯುತ್ತದೆ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ, ಪಾಕಿಸ್ತಾನಕ್ಕೂ ಮೋದಿಗೂ ಬಹಳ ಗಾಢವಾದ ಸಂಬಂಧವಿದೆ. ಅದಕ್ಕೆ ಕರೆಯದಿದ್ದರೂ ಮೋದಿ ನವಾಜ್ ಷರೀಫ್ ಮನೆಗೆ ಹೋಗಿದ್ದರು. ಕರೆಯದಿದ್ದರೂ ಯಾಕೆ ಹೋಗಿದ್ದರು ಎಂದು ಅವರು ಪ್ರಶ್ನಿಸಿ ಪ್ರತಿಕ್ರಿಯಿಸಿದರು.

    ಇಮ್ರಾನ್ ಖಾನ್ ಇದೇ ಮಾತನ್ನು ರಾಹುಲ್ ಗಾಂಧಿ ಪ್ರಧಾನಿಯಾಗಲಿ ಅಂದಿದ್ದರೆ ಬೇರೆಯಾಗಿರುತ್ತಿತ್ತು. ಅಮಿತ್ ಶಾ ಥಕ ಥೈ, ಥಕ ಥೈ ಎಂದು ಕುಣಿಯೋಕೆ ಶುರು ಮಾಡುತ್ತಿದ್ದರು ಎಂದು ವ್ಯಂಗ್ಯವಾಡಿದರು. ಹಾಗೆಯೇ ಒಳ್ಳೆಯವರು ಹುಟ್ಕೊತಾರೆ, ಸಮಯವೇ ಇದಕ್ಕೆ ಉತ್ತರ ಕೊಡುತ್ತೆ. ಈಶ್ವರಪ್ಪ ಮುಸಲ್ಮಾನರಿಗೆ ಟಿಕೆಟ್ ಕೊಡಲ್ಲ ಅಂದಿದ್ದಾರೆ. ಆದ್ರೆ ಅವರಿಗೆ ಕುರುಬರಿಗೆ ಟಿಕೆಟ್ ಕೊಡಿಸಲು ಆಗಿಲ್ಲ ಎಂದು ಹೇಳಿ ಟಾಂಗ್ ಕೊಟ್ಟರು.

  • ಹುಡ್ಗನ ನೋಡ್ದೇ ಅವರಪ್ಪನ ನೋಡಿ ಹೆಣ್ಣು ಕೊಡ್ತಾರಾ? ಸಿಎಂ ಇಬ್ರಾಹಿಂ ವ್ಯಂಗ್ಯ

    ಹುಡ್ಗನ ನೋಡ್ದೇ ಅವರಪ್ಪನ ನೋಡಿ ಹೆಣ್ಣು ಕೊಡ್ತಾರಾ? ಸಿಎಂ ಇಬ್ರಾಹಿಂ ವ್ಯಂಗ್ಯ

    -ಬಿಜೆಪಿ ಕಂಡೋರ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡುತ್ತೆ

    ಬಾಗಲಕೋಟೆ: ಭಾಷಣದ ಭರದಲ್ಲಿ ಅವಾಚ್ಯ ಪದ ಬಳಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಸವಿರುದ್ಧ ಮಾಜಿ ಸಚಿವ ಸಿಎಂ ಇಬ್ರಾಹಿಂ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

    ಬಾದಾಮಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬಹಿರಂಗ ಭಾಷಣ ಮಾಡಿದ ಅವರು, ಬಿಜೆಪಿಯವರು ಹೇಳ್ತಾರೆ ಗದ್ದಿಗೌಡರನ್ನ ನೋಡಬೇಡಿ, ಮೋದಿ ನೋಡಿ ವೋಟ್ ಹಾಕಿ ಅಂತಾ. ಹೆಣ್ಣು ಕೊಡಬೇಕಾದರೇ ಹುಡುಗನ್ನ ನೋಡ್ತಾರ, ಇಲ್ಲ ಅವರ ಅಪ್ಪನ ನೋಡ್ತಾರ? ಮದುವೆ ಹುಡುಗಿಯ ಅಮ್ಮನನ್ನು ನೋಡಿದರೆ ಸಾಕು ಮದುವೆ ಆಗ್ಬಿಡುತ್ತೆ ಅಂತ ಹೇಳಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಈಗ ಶಾಸಕ ಶ್ರೀರಾಮುಲು ಹಾಗೂ ಸಿದ್ದರಾಮಯ್ಯರಿಗೆ ಮಧ್ಯೆ ಜನಳ ಮಾಡಿಸಿದ್ದಾರೆ. ಗಂಡಸ್ತನ ಇದ್ದರೇ ಮಾಜಿ ಸಿಎಂ ಯಡಿಯೂರಪ್ಪ ಅವರೇ ನಿಲ್ಲಬೇಕಿತ್ತು. ಬಿಜೆಪಿ ಅವರು ಕಂಡೋರ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡ್ತಾರೆ. ಬಳಿಕ ಈಶ್ವರಪ್ಪ ಹುಚ್ಚ, ಗಿಡ್ಡ ಅವನಿಗೆ ಒಂದು ಸೀಟು ಹಿಂದುಳಿದ ವರ್ಗಕ್ಕೆ ತೆಗೆದುಕೊಳ್ಳಲು ಆಗಿಲ್ಲ. ಮುಸ್ಲಿಂರನ್ನ ಅವನು ಮರೆತ್ತಿದ್ದಾನೆ ಎಂದು ಬಿಎಸ್‍ವೈ ಹಾಗೂ ಈಶ್ವರಪ್ಪ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

    ಪ್ರಧಾನಿ ಮೋದಿ ಬಗ್ಗೆ ಮಾತನಾಡುತ್ತ ವಚನವೊಂದನ್ನು ಉಲ್ಳೇಖಿಸಿದರು. ನಂತರ ಮೋದಿ ಅವರು ವಾರ್ಷಿಕ 6 ಸಾವಿರ ರೂ. ನೀಡುತ್ತೆನೆ ಅಂದ್ರು. ನಮ್ಮನೇನು ಅವರು ಬಿಕಾರಿ ಎಂದುಕೊಂಡಿದ್ದೀರ ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಈ ಹಣವನ್ನು ಲೆಕ್ಕ ಹಾಕಿದರೆ ಒಬ್ಬರಿಗೆ ದಿನಕ್ಕೆ 17ರೂ. ಬರುತ್ತೆ. ಅದರಲ್ಲಿ ಜಿಎಸ್‍ಟಿ ಕೂಡ ಇರತ್ತೆ. ಈಗಿನ ಕಾಲದಲ್ಲಿ ಅಷ್ಟು ಹಣದಲ್ಲಿ ಏನು ಸಿಗತ್ತೆ? ಹೋಟೆಲ್ ಹೋಗಿ 17ರೂ. ತಿಂಡಿ ತಿಂದರೆ 18ರೂ. ಈ ಗಬ್ಬರ್‍ಸಿಂಗ್ ಟ್ಯಾಕ್ಸ್ ಕಟ್ಟಬೇಕು. ಜನರನ್ನೇ ಕೇಳಿ ಸಿದ್ದರಾಮಯ್ಯ ಅವಧಿಯಲ್ಲಿ ತೆರಿಗೆ ಹೇಗಿತ್ತು? ಮೋದಿ ಕಾಲದಲ್ಲಿ ಹೇಗಿದೆ ಅಂತ. ಈ ತೆರಿಗೆ ನೀತಿಯಿಂದ ಜನರು ಬೇಸತ್ತಿದ್ದಾರೆ ಎಂದು ಹರಿಹಾಯ್ದರು.

    ಮೋದಿ ಅವರ ಅವಧಿಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡಿ ವಿದೇಶ ಪ್ರವಾಸ ಹೋದರು. ಇಂತಹ ಪಿಎಂ ಕಳೆದ 70 ವರ್ಷದಲ್ಲಿ ನೋಡಿರಲಿಲ್ಲ. ಮೂರು ತಿಂಗಳೂ ಭಾರತದಲ್ಲಿದ್ದರೇ, 9 ತಿಂಗಳು ಅಮೆರಿಕಾದಲ್ಲಿರುತ್ತಾರೆ. ಅಲ್ಲಿ ಹೋಗಿ ಬಾಯಿ ಬೆಹನೋ ಅಂದರೆ ಏನು ಪ್ರಯೋಜನ. 10 ಲಕ್ಷದ ವಸ್ತ್ರ ಹಾಕುವ ಮೋದಿಗೆ ಬೇರೆ ಯೋಚನೆ ಮಾಡ್ತಾರಾ ಅಂತ ಟೀಕಿಸಿದ್ದಾರೆ.

  • ಬೇರಯವ್ರ ತಾಳಿ ಕಿತ್ತು ಬಿಜೆಪಿಯವ್ರು ಕಟ್ಕೊಂಡಿದ್ದಾರೆ: ಸಿಎಂ ಇಬ್ರಾಹಿಂ ಟೀಕೆ

    ಬೇರಯವ್ರ ತಾಳಿ ಕಿತ್ತು ಬಿಜೆಪಿಯವ್ರು ಕಟ್ಕೊಂಡಿದ್ದಾರೆ: ಸಿಎಂ ಇಬ್ರಾಹಿಂ ಟೀಕೆ

    ಹುಬ್ಬಳ್ಳಿ: ಬಿಜೆಪಿ ಅವರು ಕಾಂಗ್ರೆಸ್ ಮಕ್ಕಳನ್ನು ಕರೆದೊಯ್ದು ಸಾಕುತ್ತಿದ್ದಾರೆ. ಬೇರೆಯವರ ತಾಳಿ ಕಿತ್ತುಕೊಂಡು ತಾವು ಕಟ್ಟಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಿಂದ ಕಲಬುರಗಿಯಲ್ಲಿ ಸ್ಪರ್ಧಿಸಲು ಅಭ್ಯರ್ಥಿ ಇಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಅಲ್ಲಿ ಕಣಕ್ಕಿಳಿಸಿದ್ದಾರೆ. ಬಿಜೆಪಿಯವರು ಕಾಂಗ್ರೆಸ್ಸಿಗರ ಮಕ್ಕಳನ್ನು ತಾವು ಸಾಕುತ್ತಿದ್ದಾರೆ. ಈ ಮೂಲಕ ಬೆರೆಯವರ ತಾಳಿ ಕಿತ್ತುಕೊಂಡು ತಾವು ಕಟ್ಟಿಕೊಂಡಿದ್ದಾರೆ. ಪಕ್ಕದ ಮನೆಯವರ ಸೊಸೆಯನ್ನು ತಮ್ಮ ಮನೆಗೆ ಸೇರಿಸಿಕೊಂಡಿರುವ ಹಾಗೆ ಬಿಜೆಪಿ ಸ್ಥಿತಿ ಇದೆ. ಆದ್ರೆ ನಮ್ಮಲ್ಲಿ ಹಾಗಿಲ್ಲ, ನಮ್ಮ ಅಭ್ಯರ್ಥಿಯನ್ನೇ ನಾವು ಚುನಾವಣೆಯಲ್ಲಿ ನಿಲ್ಲಿಸಿದ್ದೇವೆ ಎಂದು ಟಾಂಗ್ ಕೊಟ್ಟಿದ್ದಾರೆ.

    ಬಳಿಕ ದೇಶ ಅಪಾಯದಲ್ಲಿದೆ, ಸಂವಿಧಾನ ಉಳಿಸಬೇಕಿದೆ. ಮೋದಿ ವರ್ತನೆ ಅಹಂ ಬ್ರಹ್ಮಾಸ್ಮಿ ಎಂಬಂತಿದೆ. ದೇಶಕ್ಕೆ ವಾಜಪೇಯಿ ಕೊಡುಗೆಯನ್ನು ಮೋದಿ ಸ್ಮರಿಸುತ್ತಿಲ್ಲ. ವಾಜಪೇಯಿ ದೇಶಕ್ಕೆ ಹೆದ್ದಾರಿಗಳನ್ನು ಕೊಟ್ಟಿರುವ ಮಹಾನುಭಾವ. ಅದಕ್ಕೆ ನಾವು ವಾಜಪೇಯಿ ಅವರನ್ನು ಪಕ್ಷಾತೀತವಾಗಿ ಸ್ಮರಿಸುತ್ತೇವೆ. ಆದ್ರೆ ಮೋದಿ ಈ ದೇಶಕ್ಕೆ ಏನ್ ಮಾಡಿದ್ದಾರೆ? ಚೌಕಿದಾರ್ ಗೆ ತನ್ನ ಕಚೇರಿಯಲ್ಲಿರುವ ಕಡತ ಕಾಪಾಡಲು ಸಾಧ್ಯವಾಗಿಲ್ಲ. ಇನ್ನು ದೇಶವನ್ನು ಹೇಗೆ ಕಾಪಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೇಶಕ್ಕಾಗಿ ರಾಹುಲ್ ಗಾಂಧಿ ಸತ್ತಿದ್ದಾರೆ- ಹೊಗಳುವ ಭರದಲ್ಲಿ ಸಿಎಂ ಇಬ್ರಾಹಿಂ ಎಡವಟ್ಟು

    ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ಅನಾಹುತಗಳ ಸಂಖ್ಯೆ ಹೆಚ್ಚಾಗಿದೆ. ಅಂದಾನಿ, ಅಂಬಾನಿ ಬಿಟ್ಟರೆ ಮೋದಿಗೆ ಬೇರೆ ಯಾರೂ ಕಾಣುದಿಲ್ಲ. ಹಲವು ಯೋಜನೆಗಳನ್ನು ಈ ಉದ್ಯಮಿಗಳಿಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಬಹಳ ಕೆಲಸವನ್ನು ಮಾಡಿದ್ದೇವೆ. ಆದ್ರೆ ಅದನ್ನು ನಾವು ಹೇಳಿಕೊಳ್ಳಲ್ಲ ಎಂದು ಮೋದಿ ವಿರುದ್ಧ ಕಿಡಿಕಾರಿದರು.

    ಯಡಿಯೂರಪ್ಪ ಹವಾ ಬಿಜೆಪಿಯಲ್ಲಿ ಕಡಿಮೆಯಾಗಿದೆ. ಯಡಿಯೂರಪ್ಪ ಮಾತು ರಾಜ್ಯದಲ್ಲಿ ಹಾಗೂ ಪಕ್ಷದಲ್ಲಿ ನಡೆಯುತ್ತಿಲ್ಲ. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮುಂದೆ ಯಡಿಯೂರಪ್ಪ ಹಿಂದೆ ಎಂಬಂತಾಗಿದೆ. ಯಡಿಯೂರಪ್ಪನಿಗೆ ಸ್ವಾಭಿಮಾನ ಇದ್ರೆ ಬಿಜೆಪಿ ತೊರೆಯಬೇಕಿತ್ತು ಎಂದು ಟೀಕಿಸಿದರು.

  • ಮಂತ್ರಾಲಯ, ಬೃಂದಾವನಕ್ಕೆ ಜಾಗ ಕೊಟ್ಟಿದ್ದು ನವಾಬರು: ಸಿಎಂ ಇಬ್ರಾಹಿಂ

    ಮಂತ್ರಾಲಯ, ಬೃಂದಾವನಕ್ಕೆ ಜಾಗ ಕೊಟ್ಟಿದ್ದು ನವಾಬರು: ಸಿಎಂ ಇಬ್ರಾಹಿಂ

    – ಪಾಕಿಸ್ತಾನವನ್ನ ಮೆಟ್ಟಿ ನಿಲ್ಲೋ ಶಕ್ತಿ ಭಾರತಕ್ಕಿದೆ
    – ನವಾಜ್ ಶರೀಫ್ ಮನಿಗೆ ಯಾಕ್ರಿ ಹೋಗಿದ್ರಿ?: ಮೋದಿ ವಿರುದ್ಧ ಕಿಡಿ

    ರಾಯಚೂರು: ರಾಘವೇಂದ್ರ ಶ್ರೀಗಳು ನಮ್ಮ ಅತಿಥಿಗಳೆಂದು ತಿಳಿದಿದ್ದ ಹೈದರಾಬಾದ್ ನವಾಬ್‍ರು, ಶ್ರೀಗಳಿಗೆ ಮಂತ್ರಾಲಯ, ಬೃಂದಾವನಕ್ಕೆ ಜಾಗ ಕೊಟ್ಟಿದ್ದರು ಎಂದು ಕೇಂದ್ರ ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ.

    ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕವು ಬಸವಣ್ಣ, ಕನಕದಾಸ, ಪುರಂದರದಾಸರ ನಾಡು. ಕೆಲವರು ಇಂದು ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾವೆಲ್ಲ ಒಂದೇ ಎನ್ನುವ ದೇಶಾಭಿಮಾನ ಎಲ್ಲರಲ್ಲಿಯೂ ಬೆಳೆಯಬೇಕು ಎಂದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹುತಾತ್ಮ ವೀರ ಸಂಗೊಳ್ಳಿ ರಾಯಣ್ಣನ ವಂಶದವರು ಎಂದು ಹೇಳಿದರು.

    ನಮ್ಮ ಚರ್ಮ ತೆಗೆದು ನಿಮ್ಮ ಪಾದಕ್ಕೆ ಚಪ್ಪಲಿ ಮಾಡಿಕೊಟ್ಟರೂ ನಿಮ್ಮ ಋಣ ತೀರಿಸಲು ಆಗಲ್ಲ. ಈ ಬಾರಿ ಕಾಂಗ್ರೆಸ್‍ಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿಕೊಂಡ ಅವರು, ಭಾಷಣದ ಉದ್ದಕ್ಕೂ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.

    ಬಿಜೆಪಿ ದೇಶಕ್ಕೆ ಏನು ಕೊಟ್ಟಿದೆ ಗೊತ್ತೆ? ನರೇಂದ್ರ ಮೋದಿ, ನೀರವ್ ಮೋದಿ, ವಿಜಯ್ ಮಲ್ಯ ಅಂತ ವ್ಯಕ್ತಿಗಳನ್ನು ಕೊಟ್ಟಿದೆ. ಆದರೆ ಕಾಂಗ್ರೆಸ್ ಮೋತಿಲಾಲ್ ನೆಹರು, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೊಡುಗೆ ನೀಡಿದೆ. ಪತಿಯನ್ನು ಕಳೆದುಕೊಂಡ ಸೋನಿಯಾ ಗಾಂಧಿ ಅವರು ಎದೆಗುಂದಲಿಲ್ಲ. ದೇಶಕ್ಕಾಗಿ ನಾನು ಕೂಡ ಪ್ರಾಣ ಅರ್ಪಿಸುತ್ತೇನೆಂದು ಎರಡು ಮುಗ್ಧ ಮಕ್ಕಳನ್ನು ಬೆಳೆಸಿದರು ಎಂದು ಕುಟುಂಬ ರಾಜಕಾರಣವನ್ನು ಸಮರ್ಥಿಸಿಕೊಂಡರು.

    ಪಾಕಿಸ್ತಾನಕ್ಕೆ ಹೋಗಿ, ಆಗಿನ ಪ್ರಧಾನಿ ನವಾಜ್ ಶರೀಫ್ ಅವರ ಮನೆಯಲ್ಲಿ ನರೇಂದ್ರ ಮೋದಿ ಬಿರಿಯಾನಿ ತಿಂದು ಬಂದರು. ಸಾಂಪ್ರದಾಯಿಕ ಶತ್ರುಗಳನ್ನು ಅಪ್ಪಿಕೊಂಡು ಬಾಯಿ-ಬಾಯಿ ಅಂತ ಹೇಳಿದರು. ಆಗ ಇದನ್ನು ವಿರೋಧಿಸಿದ ಕಾಂಗ್ರೆಸ್‍ಗೆ ದೇಶದ್ರೋಹಿಗಳೆಂದು ಬಿಜೆಪಿಯವರು ಕರೆದರು. ಈಗ ಹೇಳಲಿ ಯಾರು ದೇಶದ್ರೋಹಿಗಳಂತ ಎಂದು ಪುಲ್ವಾಮಾ ದಾಳಿಯನ್ನು ಖಂಡಿಸಿ ಕಿಡಿಕಾರಿದರು.

    ಭಾರತದಲ್ಲಿ 130 ಕೋಟಿ ಜನರಿದ್ದಾರೆ. ಪಾಕಿಸ್ತಾನವನ್ನು ಮೆಟ್ಟಿನಿಲ್ಲುವ ಶಕ್ತಿ ನಮ್ಮ ದೇಶಕ್ಕಿದೆ. ಆದರೆ ಪುಲ್ವಾಮಾ ದಾಳಿಯಿಂದ ನಮ್ಮ ಗೌರವಕ್ಕೆ ದಕ್ಕೆಯಾಗಿದೆ ಎಂದು ಹರಿಹಾಯ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈತ್ರಿ ಸರ್ಕಾರದ ತಾಳಿ ಹರಿದು ಕರೆದುಕೊಂಡು ಬರೋದು ಸರಿಯಲ್ಲ: ಸಿಎಂ ಇಬ್ರಾಹಿಂ

    ಮೈತ್ರಿ ಸರ್ಕಾರದ ತಾಳಿ ಹರಿದು ಕರೆದುಕೊಂಡು ಬರೋದು ಸರಿಯಲ್ಲ: ಸಿಎಂ ಇಬ್ರಾಹಿಂ

    – ಮೋದಿ ಬಿಟ್ರೆ ಬಿಜೆಪಿ ಖಲಾಸ್, ನಮ್ಮಲ್ಲಿ ಪ್ರಧಾನಿಯಾಗೋಕೆ ಸರದಿಯಿದೆ
    – ಭಾರತ ಮಾತೆ ಬಂಜೆಯಲ್ಲ ನಾಯಕರನ್ನು ಭೂಮಿಗೆ ನೀಡ್ತಾಳೆ

    ರಾಯಚೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮದುವೆಯಾಗಿದೆ. ಆದರೆ ಮದುವೆಯಾದವರ ತಾಳಿ ಹರಿದು ಕರೆದುಕೊಂಡು ಬರುವುದು ಸರಿಯಲ್ಲ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ದೇಶದ ಪರಿಸ್ಥಿತಿ ಸವಾಲಾಗಿ ನಿಂತಿದೆ. ಇದನ್ನು ಎದುರಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ (ಚೌಕಿದಾರ್) ವಿಫಲರಾಗಿದ್ದಾರೆ. ದೇಶದ ಏಕತೆಗಾಗಿ ನಾವು ಕಂಕಣಬದ್ಧರಾಗಿದ್ದೇವೆ ಎಂದು ಹೇಳಿದರು.

    ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ವಾಹನದ ಮೇಲೆ ದಾಳಿ ಮಾಡಲು ಉಗ್ರರು ಹೇಗೆ ನುಸುಳಿದರು? ಅವರ ಕೈಯಲ್ಲಿ ಆರ್ ಡಿಎಕ್ಸ್ ಹೇಗೆ ಬಂತು? ಈ ಎಲ್ಲ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಉತ್ತರಿಸಬೇಕು ಎಂದ ಅವರು, ಕೆಲ ಸರ್ವೇಗಳ ಪ್ರಕಾರ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತದೆ. ಆದರೆ ಅದು ಸತ್ಯವಾಗುವುದಿಲ್ಲ. ಸರ್ವೇಗಳಿಗೆ ನಾವು ವಿಚಲಿತರಾಗುವುದಿಲ್ಲ ಎಂದು ತಿಳಿಸಿದರು.

    ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಅಯ್ಯೋ ಅನಿಸುತ್ತದೆ. ಆಪರೇಷನ್ ಕಮಲದಲ್ಲಿ ವಿಫಲವಾಗಿದ್ದಾರೆ. ಆಸೆ ಇರಬೇಕು, ದುರಾಸೆ ಸರಿಯಲ್ಲ. ಆಪರೇಷನ್ ಕಮಲಕ್ಕೆ ಹಣ ಯಾಕೆ ಖರ್ಚು ಮಾಡುತ್ತೀರಿ. ಆ ಹಣವನ್ನು ಬರಗಾಲ ಪರಿಹಾರಕ್ಕೆ ಉಪಯೋಗಿಸಿ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕಾರಕ್ಕಿಂತ ಜನರ ಸೇವೆ ಮುಖ್ಯ ಎನ್ನುವ ಭಾವನೆ ಇರಬೇಕು. ದಿನಕ್ಕೆ ಒಬ್ಬ ಪ್ರಧಾನಿಯಾಗಲು ಮಹಾಘಟಬಂಧನ್‍ನಲ್ಲಿ 10 ಜನರಿದ್ದಾರೆ. ಆದರೆ ಬಿಜೆಪಿಯಲ್ಲಿ ನರೇಂದ್ರ ಮೋದಿ ಅವರು ಮಾತ್ರ ಪ್ರಧಾನಿ ಅಭ್ಯರ್ಥಿ. ಅವರಿಲ್ಲ ಅಂದ್ರೆ ಬಿಜೆಪಿ ಖಲಾಸ್. ನಮ್ಮಲ್ಲಿ ಒಬ್ಬರ ಹಿಂದೆ ಒಬ್ಬರು ಪ್ರಧಾನಿಯಾಗಲು ಸಿದ್ಧರಾಗಿರುತ್ತಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

    ಬಿಜೆಪಿ ನಿರ್ಧಿಷ್ಟವಾಗಿ ತತ್ವ, ಸಿದ್ಧಾಂತವಿಲ್ಲ. ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಯಶವಂತ್ ಸಿನ್ಹಾ ಎಲ್ಲಿ ಹೋದರು. ಅವರನ್ನು ನೀವೇ ಹುಡುಕಬೇಕಿದೆ. ಭಾರತ ಮಾತೆ ಬಂಜೆಯಲ್ಲ. ಆಕೆ ಅನೇಕ ನಾಯಕರನ್ನು ಕೊಡುತ್ತಾಳೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕ ಮಹಾಮೈತ್ರಿಯಲ್ಲಿ ಯಾರು ಪ್ರಧಾನಿಯಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಬಿಜೆಪಿಯಿಂದ ಅಧಿಕಾರ ತಪ್ಪಿಸುವುದೇ ನಮ್ಮ ಉದ್ದೇಶ ಎಂದು ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಡಿಯೂರಪ್ಪನವರದ್ದು ಬಸ್‍ಸ್ಟಾಂಡ್ ಲವ್ ಸ್ಟೋರಿ: ಇಬ್ರಾಹಿಂ ಲೇವಡಿ

    ಯಡಿಯೂರಪ್ಪನವರದ್ದು ಬಸ್‍ಸ್ಟಾಂಡ್ ಲವ್ ಸ್ಟೋರಿ: ಇಬ್ರಾಹಿಂ ಲೇವಡಿ

    ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳುವ ಭಯ ನಮಗೇ ಇಲ್ಲ. ಏಕೆಂದರೆ ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಶಾಸಕರನ್ನು ಸೃಷ್ಟಿ ಮಾಡುವ ಪಕ್ಷವಾಗಿದೆ. ಆದರೆ ಬಿಎಸ್ ಯಡಿಯೂರಪ್ಪ ಅವರದ್ದು ಬಸ್ ಸ್ಟಾಂಡ್ ಲವ್ ಆಗಿದ್ದು, ಮದುವೆಯಾದವರನ್ನು ಸೆಳೆಯಲು ಪ್ರಯತ್ನಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದೊಂದಿಗೆ ಜನರು ಇದ್ದಾರೆ. ನಮ್ಮ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ರಾಜ್ಯ ಉಸ್ತುವಾರಿ ವೇಣುಗೋಪಾಲ್ ರಾವ್ ಸೇರಿದಂತೆ ಹಲವು ನಾಯಕರು ಈ ಬಗ್ಗೆ ಸ್ಪಷ್ಟವಾದ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷ ಶಿಸ್ತಿನ ಪಕ್ಷವಾಗಿದ್ದು, ಸರ್ಕಾರವನ್ನು ಹಾಗೆಯೇ ನಡೆಸಿಕೊಂಡು ಹೋಗುತ್ತಿದ್ದೇವೆ. ಆದರೆ ಮದುವೆ ಮನೆಯಲ್ಲಿ ನಿದ್ದೆ ಕಣ್ಣಲ್ಲಿ ಕೈ ಹಾಕಿದರು ಎನ್ನುವಂತೆ ಬಿಜೆಪಿ ಒದ್ದಾಡುತ್ತಿದೆ ಎಂದು ವ್ಯಂಗ್ಯವಾಡಿದರು.

    ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದ್ದು, ಮದುವೆಯಾದ ಪತಿವ್ರತೆಯರನ್ನು ಕರೆದುಕೊಂಡು ಹೋಗಲು ಯಡಿಯೂರಪ್ಪ ಪ್ರಯತ್ನ ಮಾಡುತ್ತಿದ್ದಾರೆ. ಆಮಿಷಗಳನ್ನು ನೀಡುವ ಮೂಲಕ ಬಸ್‍ಸ್ಟಾಂಡ್ ಲವ್ ಮಾಡಲು ಮುಂದಾಗಿದ್ದಾರೆ. ಆದರೆ ಬಸ್‍ಸ್ಟಾಂಡ್ ಬಸವಿಯರು ಮಾತ್ರ ಅವರೊಂದಿಗೆ ಹೋಗುತ್ತಾರೆ. ಸಮ್ಮಿಶ್ರ ಸರ್ಕಾರ ಬಂದು 5 ತಿಂಗಳೂ ಆಗಿಲ್ಲ, ಇಂತ ಸಂದರ್ಭದಲ್ಲಿ ಅವರಿಗೆ ನೋವಾಗುವ ಸಂದರ್ಭ ಬಂದಿದೆ. ಏಕೆಂದರೆ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷ ಸೋಲುಂಡಿದೆ. ಬಿಜೆಪಿಯವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆಯಿಲ್ಲ ಎಂದು ಆರೋಪಿಸಿದರು.

    ಇದೇ ವೇಳೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಇಬ್ರಾಹಿಂ ಅವರು, ಶ್ರಮಿಕ ವರ್ಗದ ಬಾಯಿಗೆ ಮೋದಿ ಮಣ್ಣು ಹಾಕಿದ್ದಾರೆ. ಎಚ್‍ಎಎಲ್ ಸಂಸ್ಥೆ ಮುಚ್ಚುವ ಹಂತ ತಲುಪಿದೆ. ಆದರೆ ಉದ್ಯಮಿಗಳ ಪರ ಇರುವ ಕೇಂದ್ರ ಡೀಲ್ ಮಾಡಲು ಮುಂದಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದು, ನಮ್ಮ ಮೇಲೆ ರಾಜ್ಯದ ಜನರ ಅನುಕಂಪ ಮೂಡಿದೆ. ಎಲ್ಲೋ ಕಳೆದುಕೊಂಡು ಇಲ್ಲಿ ಬಂದು ಹುಡುಕುವ ಪ್ರಯತ್ನವನ್ನು ಮೋದಿ ಅವರು ಮಾಡುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ

    ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ

    ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು ಸಿದ್ಧ ಅಂತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ಮುಖಾಂತರ ಎಲ್ಲಾ ಸಮಾಜದವರು ಸೇರಿ ಬಗೆಹರಿಸಲಿ. ಇಲ್ಲವಾದಲ್ಲಿ ಸುಪ್ರೀಂಕೊರ್ಟ್ ತೀರ್ಪಿನಂತೆ ನಡೆದುಕೊಳ್ಳಲು ನಾವು ಸಿದ್ಧ ಅಂತ ಹೇಳಿದ್ದಾರೆ.

    ಈ ಬಾರಿ ಟಿಪ್ಪು ಜಯಂತಿ ಆಚರಣೆ ನಿರಾಸೆ ತಂದಿದೆ. ಫೋಟೋ ಇಡುವುದು, ಮೆರವಣಿಗೆ ಮಾಡೋದು ನಮ್ಮ ಸಂಪ್ರದಾಯವಲ್ಲ. ಮುಂದಿನ ಬಾರಿ ಬೇರೆ ರೀತಿ ಆಚರಣೆ ಮಾಡಲು ಯೋಚಿಸಿದ್ದೇವೆ. ಇದರ ಬಗ್ಗೆ ಡಿಸೆಂಬರ್ ನಲ್ಲಿ ಎಲ್ಲ ಸಾಧು, ಸಂತರು ಪ್ರಮುಖವಾಗಿ ಶೃಂಗೇರಿ ಶ್ರೀಗಳು, ಸುತ್ತೂರು ಶ್ರೀಗಳು ಸೇರಿದಂತೆ ಪಕ್ಷಾತೀತವಾಗಿ ಸಭೆ ನಡೆಸುತ್ತೇವೆ. ಅಲ್ಲಿ ಯಾವ ರೀತಿ, ಯಾರ ನೇತೃತ್ವದಲ್ಲಿ ಟಿಪ್ಪು ಜಯಂತಿ ಮಾಡಬೇಕೆಂದು ತಿರ್ಮಾನ ಮಾಡುತ್ತೇವೆ ಅಂತ ಅವರು ತಿಳಿಸಿದ್ರು.

    ಈ ಬಾರಿ ಶಿವಾಜಿ ಜಯಂತಿಯನ್ನ ಸಾಬರೆಲ್ಲ ಸೇರಿ ಆಚರಿಸುತ್ತೇವೆ. ಶಿವಾಜಿ ಒಬ್ಬ ಭಾರತದ ಅಪ್ರತಿಮ ರಾಜರಾಗಿದ್ದಾರೆ. ಅದೇ ರೀತಿ ಮರಾಠರು ಟಿಪ್ಪು ಜಯಂತಿ ಆಚರಿಸಬೇಕು. ಶಿವಾಜಿ ಜಯಂತಿ ಆಚರಣೆ ಬಗ್ಗೆ ರಾಜ್ಯದ ಎಲ್ಲ ಅಂಜುಮನ್ ಕಮೀಟಿಗಳಿಗೆ ಪತ್ರ ಬರೆಯುತ್ತೇವೆ. ಯಾವ ರೀತಿ ಆಚರಣೆ ಮಾಡಬೇಕು ಅನ್ನೋದು ಸಭೆಯಲ್ಲಿ ತೀರ್ಮಾನಿಸುತ್ತೇವೆ ಅಂತ ಭರವಸೆ ನೀಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮೋದಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರೋ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ : ಸಿಎಂ ಇಬ್ರಾಹಿಂ

    ಮೋದಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರೋ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ : ಸಿಎಂ ಇಬ್ರಾಹಿಂ

    ಹುಬ್ಬಳ್ಳಿ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಇರುವ ಚಿಂತೆ ರಾಮ ಮಂದಿರದ ಬಗ್ಗೆ ಇಲ್ಲ ಎಂದು ಮಾಜಿ ಕಾಂಗ್ರೆಸ್ ಮುಖಂಡ, ಎಂಎಲ್‍ಸಿ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಇಬ್ರಾಹಿಂ, ರಾಮ ಮಂದಿರ ಸಮಸ್ಯೆಯನ್ನು ಬಗೆ ಹರಿಸುವ ಇಚ್ಛೆ ಬಿಜೆಪಿಗೆ ಇಲ್ಲ. ಇದಕ್ಕೆ 2019ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಸೂಕ್ತ ಉತ್ತರ ನೀಡುತ್ತಾರೆ. ಅಲ್ಲದೇ ಸದ್ಯ ನಡೆಯುತ್ತಿರುವ ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ ಎಂದು ಭವಿಷ್ಯ ನುಡಿದರು.

    ಇದೇ ವೇಳೆ ರಾಮ ಮಂದಿರ ಕಟ್ಟುವುದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ತಿಳಿಸಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನಮ್ಮದೇ ಹವಾ ಸೃಷ್ಟಿಸುತ್ತೇವೆ. ಆದರೆ ನಾನು ಬಿಜೆಪಿ ಪಕ್ಷ ಕೋಮುವಾದಿ ಎಂದು ವಿರೋಧ ಮಾಡುತ್ತಿಲ್ಲ. ಆದರೆ ಕಳೆದ ನಾಲ್ಕುವರೆ ವರ್ಷಗಳ ಆಡಳಿತದಲ್ಲಿ ಅವರು ದೇಶದ ಆರ್ಥಿಕ ನೀತಿಯನ್ನು ಹಾಳು ಮಾಡಿದ್ದಾರೆ. 70 ವರ್ಷಗಳ ಇತಿಹಾಸಲ್ಲಿಯೇ ಕೆಟ್ಟ ಆಡಳಿತ ನೀಡಿದ್ದಾರೆ. ಮೋದಿ ಅವರಿಗೆ ಮುಸ್ಲಿಂ ಹೆಂಡತಿಯರ ಬಗ್ಗೆ ಚಿಂತೆ ಇದೆ ಹೊರತು, ರಾಮ ಮಂದಿರದ ಬಗ್ಗೆ ಕಾಳಜಿ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ಬೇಡವಾಗಿದೆ. ರಾಮ ಮಂದಿರ ಸಮಸ್ಯೆಯನ್ನ ಜೀವಂತವಾಗಿಡಲು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

    ಅಯೋಧ್ಯೆ ವಿವಾದವನ್ನು ಬಗೆಹರಿಸಬೇಕೆಂಬ ಇಚ್ಛಾಶಕ್ತಿ ಬಿಜೆಪಿಗೆ ಇಲ್ಲ. ಈ ಹಿಂದೆ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನವನ್ನ ಇಟ್ಟುಕೊಂಡು ಬಿಜೆಪಿಯವರು ಮತಗಳನ್ನ ಕೇಳುತ್ತಿದ್ದರು. ಈಗ ಅಯೋಧ್ಯೆ ವಿವಾದವನ್ನು ಮುಂದಿಟ್ಟು ಬಿಜೆಪಿ ಮತ ಕೇಳುತ್ತಿದೆ. ಈಗಿನ ರಾಜಕೀಯ ಬಹಳ ಕೀಳು ಮಟ್ಟವನ್ನ ತಲುಪಿದೆ. ಬಿಜೆಪಿಯವರು ಹಿಂದೂ ಹಿಂದೂ ಎಂದು ಹೇಳುತ್ತಾರೆ. ಆದರೆ ಗುಡಿ ಮತ್ತು ಮಸೀದಿ ಕಟ್ಟುವುದು ಧರ್ಮ ಅಲ್ಲ. ಧರ್ಮ ಎಂದರೇ ಊಟ ಇಲ್ಲದವರಿಗೆ ಊಟ, ಮನೆ ಇಲ್ಲದವರಿಗೆ ಮನೆ ಕೊಡುವುದು ಎಂದರ್ಥ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

    ಗೋ ಸಂರಕ್ಷಣೆ ಎಂದು ಹೇಳುವ ಬಿಜೆಪಿ ಮುಖಂಡರು ಉತ್ತರ ಪ್ರದೇಶದಲ್ಲಿ ಗೋ ಪೂಜೆ ಮಾಡಿ ಗೋವಾದಲ್ಲಿ ಏನೂ ಮಾಡುತ್ತಿದ್ದಾರೆ? ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದಿಂದ ಗೋ ಮಾಂಸ ರಪ್ತು ಹೆಚ್ಚಾಗಿದೆ. ಈ ಉದ್ಯಮದಲ್ಲಿ ಬಿಜೆಪಿ ನಾಯಕರ ಹೆಸರಿನಲ್ಲಿ ಹಲವಾರು ಕಂಪನಿಗಳು ಇವೆ ಎಂದು ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರ್ಬೇಕು, ಅಲ್ಲಿ ಮೋದಿ ಸೊಂಯ್ ಅನ್ನಬೇಕು- ಬಿಜೆಪಿ ವಿರುದ್ಧ ಇಬ್ರಾಹಿಂ ವ್ಯಂಗ್ಯ

    ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರ್ಬೇಕು, ಅಲ್ಲಿ ಮೋದಿ ಸೊಂಯ್ ಅನ್ನಬೇಕು- ಬಿಜೆಪಿ ವಿರುದ್ಧ ಇಬ್ರಾಹಿಂ ವ್ಯಂಗ್ಯ

    ಬಳ್ಳಾರಿ: ಮೊಳಕಾಲ್ಮೂರು ಶಾಸಕ ಶ್ರೀರಾಮುಲುಗೆ ಮೋದಿ ಬಿಟ್ಟರೆ ಬೇರೆ ಯಾರು ಗೊತ್ತಿಲ್ಲ. ಮೋದಿ ಜಪ ಬಿಟ್ರೆ ಅವರಿಗೆ ಬೇರೇನೂ ಗೊತ್ತಿಲ್ಲ. ಶ್ರೀರಾಮುಲು ಅವರು 10 ಜನ ಸಂಸದರು ಹೆಸರು ಹೇಳಲಿ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಚಾಲೆಂಜ್ ಹಾಕಿದ್ದಾರೆ.

    ಉಪಚುನಾವಣೆಯ ನಿಮಿತ್ತ ಬಳ್ಳಾರಿಗೆ ಆಗಮಿಸಿ ಕುರುಗೋಡ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರಬೇಕು. ಆಗ ಅಲ್ಲಿ ಮೋದಿ ಸೊಂಯ್ ಅನ್ನಬೇಕು ಎಂದು ವ್ಯಂಗ್ಯವಾಡಿದ್ದಾರೆ.

    ಬಳ್ಳಾರಿಯಲ್ಲಿ ಸುಗುಲಮ್ಮ ದೇವಸ್ಥಾನ ಹೊಡೆದಾಗ ಸಿದ್ದರಾಮಯ್ಯ ಅವರನ್ನ ಆ ದೇವಿ ಕರೆದಿದ್ದಳು ಅಂತ ತೆಲುಗಿನಲ್ಲಿ ಹೇಳುವ ಮೂಲಕ ಸಿ.ಎಂ ಇಬ್ರಾಹಿಂ ಅವರು ರೆಡ್ಡಿಗಳ ವಿರುದ್ಧ ವ್ಯಂಗ್ಯವಾಡಿದ್ರು. ಇದೇ ವೇಳೆ ಕಾಯಿಪಲ್ಯ ಮಾರುವ ತರಕಾರಿಯರು ಕಾರ್ಡ್ ಎಲ್ಲಿ ಇಡ್ಬೇಕು. ಲಕ್ಷ್ಮೀ ಪೂಜೆಯಲ್ಲಿ ವ್ಯಾಪಾರಸ್ಥರಿಗೆ ದುಡ್ಡು ಇಲ್ಲ. ಕಾರ್ಡ್ ಇಟ್ಟು ಪೂಜೆ ಮಾಡ್ತಿದ್ದಾರೆ ಅಂತ ಕ್ಯಾಶ್ ಲೆಸ್ ಮಾಡಿದ ಬಿಜೆಪಿಯವರ ವಿರುದ್ಧವೂ ವ್ಯಂಗ್ಯವಾಡಿದ್ರು.

    ಇದೇ ವೇಳೆ ಸಿದ್ದರಾಮಯ್ಯ ಅವರೂ ಕೂಡ ಸಭೆಯಲ್ಲಿ ಭಾಗವಹಿಸಿದ್ದು, ಅವರಿಗೆ ಅಭಿಮಾನಿಗಳು ಹೆಗಲ ಮೇಲೆ ಕಂಬಳಿ ಹಾಕಿ ಕೈಗೆ ಕುರಿಮರಿ ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಆ ಕುರಿಮರಿ ಕೈಯಲ್ಲಿ ಇಡ್ಕೊಂಡು ಪೋಸ್ ಕೊಟ್ಟರು.

    ಬಿಎಸ್‍ವೈ ವಿರುದ್ಧ ಡಿಕೆಶಿ ಕಿಡಿ:
    ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೈಕಲ್ ಕೊಟ್ಟಿದ್ದು ಬಿಟ್ರೆ ಏನ್ ಅಭಿವೃದ್ಧಿ ಮಾಡಿದ್ದಾರೆ. ಬಡವರ ಪರ ಸರ್ಕಾರ ಅಂದ್ರೆ ಅದು ಕಾಂಗ್ರೆಸ್ ಸರ್ಕಾರವಾಗಿದೆ. ಬಿಜೆಪಿಯವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಬಡವರ ಪಾಲಿಗೆ ಸಂಕಷ್ಟ ತಂದಿದ್ದಾರೆ. ಇದು ಡಿಕೆಶಿ-ರಾಮುಲು ಎಲೆಕ್ಷನ್ ಅಲ್ಲ. ಜೆ. ಶಾಂತಾ ಉಗ್ರಪ್ಪ ನಡುವಿನ ಚುನಾವಣೆಯಾಗಿದೆ. ಬಿಎಸ್‍ಸಸಆರ್ ಪಾರ್ಟಿ ಮಾಡಿದ್ದ ಶ್ರೀರಾಮುಲು ಅವರು ಅದರಲ್ಲಿ ಸೋತು ಸುಣ್ಣವಾದ ಮೇಲೆ ಮತ್ತೆ ಬಿಜೆಪಿಗೆ ಬಂದಿದ್ದಾರೆ. ಆಯ್ತು ಜನರು ನಿಮ್ಮನ್ನು ಕೈ ಬಿಟ್ಟಿದ್ದಾರೆ ಒಂದು ಸಲ ಅವಕಾಶ ಕೊಡ್ತಾರೆ ಅದನ್ನು ಶ್ರೀರಾಮುಲು ಕಳೆದುಕೊಂಡಿದ್ದಾರೆ. ನಾವು ನೀತಿ ರಾಜಕಾರಣ ಮಾಡುತ್ತೇವೆ. ನಿಮ್ಮಂತ ಹೊಲಸು ರಾಜಕಾರಣ ಮಾಡೋಲ್ಲ ಅಂತ ವಾಗ್ದಾಳಿ ನಡೆಸಿದ್ರು.

    ನೂರಾರು ಜನ ಶಾಸಕರನ್ನ ತಯಾರು ಮಾಡಬಹುದು. ಆದರೆ ಒಬ್ಬ ಉಗ್ರಪ್ಪನನ್ನು ತಯಾರು ಮಾಡಲು ಆಗಲ್ಲ. ಈ ಚುನಾವಣೆಯಲ್ಲಿ ನೀವು ಉಗ್ರಪ್ಪನನ್ನು ಗೆಲ್ಲಿಸ್ತಿರಿ ಎಂಬ ನಂಬಿಕೆ ನಮಗೆ ಇದೆ ಅಂತ ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ- ಬಜೆಟ್ ಮಂಡಿಸಿದ್ರೆ ಮಂಡಿಸಲಿ: ಸಿಎಂ ಇಬ್ರಾಹಿಂ

    ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ- ಬಜೆಟ್ ಮಂಡಿಸಿದ್ರೆ ಮಂಡಿಸಲಿ: ಸಿಎಂ ಇಬ್ರಾಹಿಂ

    ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರದಲ್ಲಿ ಉಂಟಾದ ಗೊಂದಲಕ್ಕೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂರವರು ಹೊಸ ಸಿಎಂ ಹುಮ್ಮಸ್ಸಿನಲ್ಲಿದ್ದಾರೆ ಬಜೆಟ್ ಮಂಡಿಸಿದರೆ ಮಂಡಿಸಲಿ ಎಂದು ಹೇಳಿಕೆ ನೀಡಿದ್ದಾರೆ.

    ಇಂದು ಹೊಸ ಬಜೆಟ್ ಮಂಡನೆ ಕುರಿತು ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ. ಮುಖ್ಯಮಂತ್ರಿಯವರು ಕೂಡ ಹೊಸ ಹುರುಪಿನಲ್ಲಿದ್ದಾರೆ. ಹೀಗಾಗಿ ಬಜೆಟ್ ಮಂಡನೆ ವಿಚಾರದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹೊಸ ಬಜೆಟ್ ಮಂಡಿಸಿದರೆ ಮಂಡಿಸಲಿ ಬಿಡಿ ಎಂದು ಉತ್ತರಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ ಸಚಿವ ಸಂಪುಟದ ಗೊಂದಲದ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೋಡಿಕೊಳ್ಳುತ್ತಾರೆ ಎಂದರು.

    ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್‍ರವರ ಹೇಳಿಕೆಗೆ ಪ್ರತಿಕ್ರಿಯಿಸಿದ ಇಬ್ರಾಹಿಂರವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ನಾನು ಹೇಳಿದ್ದು ಅಮಾಯಕ ಯುವಕರ ತಲೆ ಕೆಡಿಸಿದವರು ಯಾರು ಎಂದು? ಆರೋಪಿಗಳು ಈಗಾಗಲೇ ನಾಲ್ಕು ತಂಡಗಳಾಗಿ ಹತ್ಯೆ ಮಾಡಿರುವುದಾಗಿ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ. ಹತ್ಯೆಗೆ ಆರೋಪಿಗಳಿಗೆ ಪ್ರೇರೆಪಿಸಿದ್ದು ಯಾರು ಎಂದು ಪ್ರಮೋದ್ ಮುತಾಲಿಕ್ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರಿಗೆ ಪ್ರಶ್ನಿಸಿದ್ದಾರೆ.

    ಮನುಷ್ಯನ ಜೀವನ ಶಾಶ್ವತ ಅಲ್ಲ, ನಾವು 60-70 ವರ್ಷ ಬದುಕುತ್ತೇವೆ. ಈ ವೇಳೆ ಒಳ್ಳೆಯ ಕೆಲಸಗಳನ್ನು ಮಾಡಬೇಕು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು, ನಮ್ಮಲ್ಲಿ ವಿಷ ಬೀಜ ಬಿತ್ತುತ್ತಿರುವುದು ಯಾರು? ಯಾವುದೇ ಧರ್ಮದವರಾದರೂ ಇಂತಹ ಘಟನೆಗಳನ್ನು ಖಂಡಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ದೇಶಕ್ಕೆ ಭಾರೀ ಗಂಡಾಂತರ ಎದುರಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

    ನಮಗೆ ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಡ್ವಾಣಿಯವರ ಮೇಲೆಯೂ ಗೌರವವಿದೆ. ಮುತಾಲಿಕ್ ರವರು ಆಚಾರವಿಲ್ಲದ ನಾಲಿಗೆ ಎಂಬಂತೆ ಮಾತನಾಡಬಾರದು ಎಂದು ಹೇಳಿದರು.