Tag: CM Kejriwal

  • ಕೊರೊನಾದಿಂದ ಮೃತಪಟ್ಟ ಡಾಕ್ಟರ್ ಕುಟುಂಬಕ್ಕೆ 1 ಕೋಟಿ ರೂ. ಚೆಕ್ ನೀಡಿದ ಕೇಜ್ರಿವಾಲ್

    ಕೊರೊನಾದಿಂದ ಮೃತಪಟ್ಟ ಡಾಕ್ಟರ್ ಕುಟುಂಬಕ್ಕೆ 1 ಕೋಟಿ ರೂ. ಚೆಕ್ ನೀಡಿದ ಕೇಜ್ರಿವಾಲ್

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೊರೊನಾದಿಂದ ಮೃತಪಟ್ಟ ಡಾಕ್ಟರ್ ಜೋಗಿಂದರ್ ಚೌಧರಿ ಅವರ ಕುಟುಂಬಕ್ಕೆ ಒಂದು ಕೋಟಿ ರೂ. ಮೊತ್ತದ ಚೆಕ್ ನೀಡಿದ್ದಾರೆ.

    ಬಾಬಾ ಸಾಹೇಬ್ ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವ ವೈದ್ಯ ಜೋಗಿಂದರ್ ಚೌಧರಿ ಕೊರೊನಾದಿಂದ ಕಳೆದ ವಾರ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಡಾಕ್ಟರ್ ಚೌಧರಿ ಕುಟುಂಬದವರನ್ನು ಭೇಟಿಯಾಗಿದ್ದಾರೆ. ಅಲ್ಲದೇ ಆರ್ಥಿಕ ಸಹಾಯವಾಗಿ ಒಂದು ಕೋಟಿ ರೂ. ಮೊತ್ತದ ಚೆಕ್ ಅನ್ನು ಸೋಮವಾರ ಹಸ್ತಾಂತರಿಸಿದ್ದಾರೆ.

    “ನಮ್ಮ ಕೊರೊನಾ ವಾರಿಯರ್ ಡಾ.ಜೋಗಿಂದರ್ ಚೌಧರಿ ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ತನ್ನ ಪ್ರಾಣವನ್ನು ಪಣಕ್ಕಿಟ್ಟು ಕೊರೊನಾ ರೋಗಿಗಳಿಗೆ ಸೇವೆ ಸಲ್ಲಿಸಿದ್ದರು. ಆದರೆ ಕೊರೊನಾ ಸೋಂಕಿನಿಂದಾಗಿ ಡಾ. ಚೌಧರಿ ಇತ್ತೀಚೆಗೆ ನಿಧನರಾಗಿದ್ದಾರೆ. ನಾನು ಅವರ ಕುಟುಂಬದವರನ್ನು ಭೇಟಿಯಾಗಿ 1 ಕೋಟಿ ರೂ. ಆರ್ಥಿಕ ನೆರವು ನೀಡಿದ್ದೇನೆ. ಇದು ಡಾಕ್ಟರ್ ಕುಟುಂಬಕ್ಕೆ ಎಲ್ಲ ರೀತಿಯಲ್ಲಿ ಸಹಾಯ ಮಾಡುತ್ತದೆ” ಎಂದು ಕೇಜ್ರಿವಾಲ್ ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

    ಜೊತೆಗೆ ಚೆಕ್ ನೀಡುತ್ತಿರುವ ಫೋಟೋವನ್ನು ಕೂಡ ಪೋಸ್ಟ್ ಮಾಡಿದ್ದಾರೆ. ಡಾಕ್ಟರ್ ಚೌಧರಿ ಮಧ್ಯಪ್ರದೇಶದ ಸಿಂಗರೌಲಿಯ ಮೂಲದವರಾಗಿದ್ದು, 2019 ನವೆಂಬರ್‌ನಲ್ಲಿ ಅಂಬೇಡ್ಕರ್ ಆಸ್ಪತ್ರೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. ಜೂನ್ 27ರಂದು ಚೌಧರಿ ಅವರಿಗೆ ಸೋಂಕು ತಗುಲಿದ್ದು ದೃಢವಾಗಿತ್ತು. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

    ಮೊದಲಿಗೆ ದೆಹಲಿಯ ಲೋಕ್ ನಾಯಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಂಗಾರಾಮ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚೌಧರಿ ಕುಟುಂಬಸ್ಥರು ಚಿಕಿತ್ಸೆಗಾಗಿ 3.4 ಲಕ್ಷ ರೂಪಾಯಿ ಖರ್ಚು ಮಾಡಿದ್ದರು.

    ಇತ್ತ ಬಾಬಾ ಸಾಹೇಬ್ ಅಂಬೇಡ್ಕರ್ ವೈದ್ಯರು ತಮ್ಮ ಅಸೋಸಿಯೇಷನ್ ನಿಂದ ಚಿಕಿತ್ಸೆಗೆ 2.4 ಲಕ್ಷ ರೂ. ಧನ ಸಹಾಯ ಮಾಡಿದ್ದರು. ಚೌಧರಿ ಅವರ ತಂದೆ ರೈತರಾಗಿದ್ದು, ಮಗನ ಚಿಕಿತ್ಸೆಗೆ ನೆರವಾಗುವಂತೆ ಆಸ್ಪತ್ರೆ ಮಂಡಳಿಗೆ ಪತ್ರ ಬರೆದಿದ್ದರು. ಅಂಬೇಡ್ಕರ್ ಆಸ್ಪತ್ರೆ ಸಹ ಚೌಧರಿ ಚಿಕಿತ್ಸಾ ವೆಚ್ಚಕ್ಕೆ ವಿನಾಯ್ತಿ ನೀಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

  • ರೋಡ್ ಶೋ ವೇಳೆ ಮತ್ತೆ ಕೇಜ್ರಿವಾಲ್‍ಗೆ ಕಪಾಳಮೋಕ್ಷ

    ರೋಡ್ ಶೋ ವೇಳೆ ಮತ್ತೆ ಕೇಜ್ರಿವಾಲ್‍ಗೆ ಕಪಾಳಮೋಕ್ಷ

    ನವದೆಹಲಿ: ದೆಹಲಿಯ ಮೋತಿ ನಗರದಲ್ಲಿ ರೋಡ್ ಶೋ ನಡೆಸುತ್ತಿದ್ದ ಎಎಪಿ ಪಕ್ಷದ ಮುಖ್ಯಸ್ಥ, ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ವ್ಯಕ್ತಿಯೊರ್ವ ಕಪಾಳಮೋಕ್ಷ ಮಾಡಿದ್ದಾನೆ.

    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿ ಕೇಜ್ರಿವಾಲ್ ರೋಡ್ ಶೋ ನಡೆಸಿದ್ದರು. ಈ ಸಂದರ್ಭದಲ್ಲಿ ತೆರೆದ ಕಾರಿನಲ್ಲಿ ತೆರಳುತ್ತಿದ್ದ ಕೇಜ್ರಿವಾಲ್ ಜನರತ್ತ ಕೈ ಬೀಸುತ್ತಾ ಸಾಗಿದ್ದರು. ಇತ್ತ ಏಕಾಏಕಿ ಕೇಜ್ರಿವಾಲ್ ಅವರತ್ತ ನುಗ್ಗಿದ ವ್ಯಕ್ತಿ ಕಾರು ಹತ್ತಿ ಕೇಜ್ರಿವಾಲ್ ಮುಖಕ್ಕೆ ಬಾರಿಸಿದ್ದು, ಈ ಘಟನೆಯಿಂದ ಕೇಜ್ರಿವಾಲ್ ಶಾಕ್‍ಗೆ ಒಳಗಾಗಿದ್ದರು.

    ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜಿಸಿದ್ದ ಸಂದರ್ಭದಲ್ಲೂ ಘಟನೆ ನಡೆದಿದೆ. ಕೇಜ್ರಿವಾಲ್ ಮುಖಕ್ಕೆ ಬಾರಿಸಿದ ವ್ಯಕ್ತಿ ತಕ್ಷಣ ಕಾರು ಇಳಿದು ಪರಾರಿಯಾಗಲು ಯತ್ನಿಸಿದ್ದ, ಈ ಹಂತದಲ್ಲಿ ಎಚ್ಚೆತ್ತ ಕಾರ್ಯಕರ್ತರು ಹಾಗೂ ವ್ಯಕ್ತಿಯನ್ನು ಹಿಡಿದುಕೊಂಡಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ಎಎಪಿ ಮುಖಂಡರು ಬಿಜೆಪಿ ಪಕ್ಷದ ವಿರುದ್ಧ ಆರೋಪ ಮಾಡಿದ್ದಾರೆ. ಈ ದಾಳಿ ವಿರೋಧಿಗಳ ಪ್ರಾಯೋಜಿತದಿಂದ ನಡೆದ ಘಟನೆ ಎಂದು ಎಎಪಿ ಪಕ್ಷದ ವಕ್ತಾರ ಸೌರಭ್ ಭರದ್ವಾಜ್ ದೂರಿದ್ದಾರೆ. ಅಲ್ಲದೇ ತೃಣಮೂಲ ಕಾಂಗ್ರೆಸ್ ಪಕ್ಷ ಕೂಡ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದೆ.

    ಇದೇ ಮೊದಲಲ್ಲ: 2014ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆಯೂ ಕೂಡ ಕೇಜ್ರಿವಾಲ್ ರನ್ನು ದೆಹಲಿಯ ದಕ್ಷಿಣಪೂರಿ ಪ್ರದೇಶದಲ್ಲಿ ವ್ಯಕ್ತಿಯೊರ್ವ ಕಪಾಳ ಮೋಕ್ಷ ಮಾಡಿದ್ದ. ಈ ಘಟನೆ ನಡೆದ ನಾಲ್ಕು ದಿನಗಳ ಬಳಿಕ ಇಂತಹದ್ದೇ ಘಟನೆ ನಡೆದಿತ್ತು. ಈ ವೇಳೆ ಅವರ ಮುಖಕ್ಕೆ ಗಾಯವಾಗಿತ್ತು. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿದೆ ಎಂದು ಎಎಪಿ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.

    ಕಳೆದ ವರ್ಷ ಕೇಜ್ರಿವಾಲ್ ಕಚೇರಿ ಬಳಿ ಆಗಮಿಸಿದ್ದ ವ್ಯಕ್ತಿಯೊಬ್ಬರು ಮನವಿ ಪತ್ರ ಸಲ್ಲಿಸಿ ಕಾಲಿಗೆ ನಮಸ್ಕಾರ ಮುಂದಾಗಿದ್ದರು. ಆ ಬಳಿಕ ಏಕಾಏಕಿ ಕೈಯಿಂದ ಖಾರದ ಪುಡಿ ತೆಗೆದು ಅವರ ಮುಖಕ್ಕೆ ಎರಚಲು ಯತ್ನಿಸಿದ್ದರು. ಈ ಘಟನೆ ದೆಹಲಿಯ ಸಚಿವಾಲಯದಲ್ಲೇ ನಡೆದಿತ್ತು. ಉಳಿದಂತೆ ಲೋಕಸಭಾ ಚುನಾವಣೆ ಮತದಾನ ದೆಹಲಿಯಲ್ಲಿ ಮೇ 12 ರಂದು ನಡೆಯಲಿದೆ.

  • ಲೆಫ್ಟಿನೆಂಟ್ ಗವರ್ನರ್ ಜೊತೆ ಮೋದಿ ಮುನಿಸು: ಕೇಜ್ರಿವಾಲ್ ಆರೋಪ

    ಲೆಫ್ಟಿನೆಂಟ್ ಗವರ್ನರ್ ಜೊತೆ ಮೋದಿ ಮುನಿಸು: ಕೇಜ್ರಿವಾಲ್ ಆರೋಪ

    ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಪ್ರಧಾನಿಯ ಕೋಪವನ್ನು ಎದುರಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

    ಪ್ರಧಾನಿ ಮೋದಿ ಅವರು ಹಾಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರೊಂದಿಗೆ ಕೋಪಗೊಂಡಿದ್ದಾರೆ. ಮೋದಿ ಜೊತೆಗಿನ ಕೋಪದಿಂದಾಗಿ ಈ ಹಿಂದೆ ನೇಮಕಗೊಂಡಿದ್ದ ನಜೀಬ್ ಗಂಜ್ 18 ತಿಂಗಳು ಅಧಿಕಾರವಾಧಿ ಹೊಂದಿದ್ದರೂ ಮೊದಲೇ ರಾಜಿನಾಮೆಯನ್ನು ನೀಡಬೇಕಾಯಿತು ಎಂದು ಕೇಜ್ರಿವಾಲ್ ದೂರಿದರು.

    ಲೆಫ್ಟೆನೆಂಟ್ ಗವರ್ನರ್ ಮೂಲಕ ಮೋದಿ ದೆಹಲಿ ಸರಕಾರವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಈಗಾಗಲೇ ಹೇಳಿದಂತೆ ದೆಹಲಿ ಸರ್ಕಾರಕ್ಕೆ ಸಾಕಷ್ಟು ಕಿರುಕುಳ ನೀಡುತ್ತಿಲ್ಲವೆಂದು ಪ್ರಧಾನಿ ಲೆಫ್ಟಿನಂಟ್ ಗವರ್ನರ್ ಮೇಲೆ ಕೋಪಗೊಂಡಿದ್ದಾರೆ. ಈ ಎಲ್ಲದರ ನಡುವೆಯೂ ದೆಹಲಿ ಸರ್ಕಾರ ಜನರಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

    ನನ್ನ ಬಳಿಯಿರುವ ದಾಖಲೆಗಳ ಪ್ರಕಾರ ಮೋದಿ ಆಮ್ ಆದ್ಮಿ ಸರಕಾರ ಶಿಕ್ಷಣ, ಆರೋಗ್ಯ, ನೀರು ಸರಬರಾಜು, ವಿದ್ಯುತ್ ವಿತರಣೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಾಗುವ ಅಭಿವೃದ್ಧಿ ಕೆಲಸಗಳನ್ನು ತಡೆಯುವಂತೆ ಸಾಕಷ್ಟು ಒತ್ತಡವನ್ನು ಗವರ್ನರ್ ಮೇಲೆ ಮೋದಿ ಹಾಕುತ್ತಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದರು.

    ನಜೀಬ್ ಜಂಗ್ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ವೇಳೆ ದೆಹಲಿ ಸರ್ಕಾರದ ಹಲವು ನೀತಿಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದರಿಂದಾಗಿ ದೆಹಲಿ ಸರ್ಕಾರ ಮತ್ತು ನಜೀಬ್ ಜಂಗ್ ಅವರ ನಡುವಿನ ತಿಕ್ಕಾಟ ರಾಷ್ಟ್ರದೆಲ್ಲೆಡೆ ಸುದ್ದಿಯಾಗಿ ಚರ್ಚೆಯಾಗುತಿತ್ತು. 2016ರ ಡಿಸೆಂಬರ್ ನಲ್ಲಿ ನಜೀಬ್ ಜಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

    ಕೆಲಸಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ವೇಳೆ ಕೋರ್ಟ್ ದೆಹಲಿಯಲ್ಲಿ ಆಯ್ಕೆಯಾದ ಸರ್ಕಾರಕ್ಕೆ ಕೆಲ ಅಧಿಕಾರವಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿತ್ತು.