Tag: CM Mamata Banerjee

  • ಶೇ.40.5 ರಷ್ಟು ಟಿಕೆಟ್ ಮಹಿಳೆಯರಿಗೆ ಮೀಸಲು: ಮಮತಾ ಬ್ಯಾನರ್ಜಿ

    ಶೇ.40.5 ರಷ್ಟು ಟಿಕೆಟ್ ಮಹಿಳೆಯರಿಗೆ ಮೀಸಲು: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಬಿಜು ಜನತಾದಳ (ಬಿಜೆಡಿ) ನಾಯಕ, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುವ ಕುರಿತು ಪ್ರಸ್ತಾಪ ಮಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಶೇ.40.5 ರಷ್ಟು ಮಹಿಳಾ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂದು ಘೋಷಿಸಿದ್ದಾರೆ. ಇದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

    ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹೊಸ ಅಲೆಯನ್ನೇ ಎಬ್ಬಿಸಿದೆ. ಅಷ್ಟೇ ಅಲ್ಲದೆ ಟಿಎಂಸಿ ಈ ಬಾರಿ ಒಡಿಶಾ, ಅಸ್ಸಾಂ, ಜಾರ್ಖಂಡ್, ಬಿಹಾರ್ ಹಾಗೂ ಅಂಡಮಾನ್‍ನ ಲೋಕಸಭಾ ಕ್ಷೇತ್ರಗಳ ಪೈಕಿ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

    ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಈ ಬಾರಿ ಹಂಚಿಕೆಯಾಗಲಿರುವ ಲೋಕಸಭಾ ಟಿಕೆಟ್ ಗಳಲ್ಲಿ ಶೇ.33 ಸ್ಥಾನಗಳನ್ನು ಮಹಿಳೆಯರಿಗೆ ನೀಡಲಾಗುವುದು ಎಂದು ಪ್ರಕಟಿಸಿದ್ದರು. ಕಳೆದ ವರ್ಷ ಒಡಿಶಾ ವಿಧಾನಸಭೆಯಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಶೇ.33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಾತಿ ಸಂಬಂಧ ಮಂಡನೆಯಾಗಿದ್ದ ಮಸೂದೆ ಅವಿರೋಧವಾಗಿ ಪಾಸ್ ಆಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 12 ನಿಮಿಷದಲ್ಲಿ ಯುದ್ಧ ಆಗಿದೆ ಅಂತಾರೆ, ಡೆಡ್‍ಬಾಡಿ ಎಲ್ಲಿವೆ: ಶಾಸಕ ರಾಘವೇಂದ್ರ ಹಿಟ್ನಾಳ್

    12 ನಿಮಿಷದಲ್ಲಿ ಯುದ್ಧ ಆಗಿದೆ ಅಂತಾರೆ, ಡೆಡ್‍ಬಾಡಿ ಎಲ್ಲಿವೆ: ಶಾಸಕ ರಾಘವೇಂದ್ರ ಹಿಟ್ನಾಳ್

    ಕೊಪ್ಪಳ: ಬಾಲಕೋಟ್ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಶವಗಳ ಸಾಕ್ಷಿ ಕೇಳಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ದೇಶ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಇದೇ ಪ್ರಶ್ನೆ ಕೇಳಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

    ನಗರದಲ್ಲಿ ಮಾತನಾಡಿದ ಶಾಸಕರು, ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಯ ಮೇಲೆ 12 ನಿಮಿಷ ದಾಳಿ ಮಾಡಿವೆ. ಈ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಳುತ್ತಿದೆ. ಹಾಗಾದರೆ ಶವಗಳು ಎಲ್ಲಿವೆ? ಉಗ್ರ ಮೃತ ದೇಹವನ್ನು ಯಾರೂ ತೋರಿಸಿಲ್ಲ ಎಂದು ವೈಮಾನಿಕ ಯುದ್ಧಕ್ಕೆ ಸಾಕ್ಷಿ ಕೇಳಿದರು.

    ಸೈನಿಕರ ಸಾವಿನ ಹೆಸರಲ್ಲಿ ರಾಜಕೀಯ ಮಾಡಬಾರದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಏರ್ ಸ್ಟ್ರೈಕ್ ನಿಂದಾಗಿ ರಾಜ್ಯದಲ್ಲಿ 22 ಸೀಟ್ ಗೆಲ್ಲುತ್ತೇವೆ ಎಂದು ಹೇಳಿದ್ದ ದುರಂತ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಸೈನಿಕ ಕುಟುಂಬ ಸಂಕಷ್ಟದಲ್ಲಿವೆ. ಆದರೆ ನಮ್ಮ ರಕ್ಷಿಸುವ ಯೋಧರ ಮೇಲೆ ರಾಜಕೀಯ ಮಾಡುವುದು ನಾಚಿಕೆಗೇಡಿತನ. ಕೋಮುಗಲಭೆ, ಗಲಾಟೆ ಮಾಡಸೋದು ಬಿಜೆಪಿಯ ಕೆಲಸ ಎಂದು ಕಿಡಿಕಾರಿದರು.

    ದೀದಿ ಹೇಳಿದ್ದೇನು?:
    ಏರ್ ಸ್ಟ್ರೈಕ್ ನಡೆದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆಯನ್ನು ಕರೆದಿಲ್ಲ. ಯಾವ ಪಕ್ಷಕ್ಕೂ ಮಾಹಿತಿ ನೀಡಿಲ್ಲ. ನಮಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.

    ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್ ಸ್ಟ್ರೈಕ್ ಬಗ್ಗೆ ನಾವು ಮಾಧ್ಯಮಗಳನ್ನು ನೋಡಿ ಮಾಹಿತಿ ಪಡೆದಿದ್ದೇವೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ. ಎಷ್ಟು ಬಾಂಬ್‍ಗಳನ್ನು ಉಗ್ರರ ಮೇಲೆ ಹಾಕಲಾಗಿದೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಒತ್ತಾಯಿಸಿದ್ದರು.

    ವಿದೇಶಿ ಮಾಧ್ಯಮಗಳಲ್ಲಿ ಏರ್‍ಸ್ಟ್ರೈಕ್ ನಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿ ಬರುತ್ತಿದೆ. ಇನ್ನೊಂದೆಡೆ ಕೆಲವು ಮಾಧ್ಯಮಗಳಲ್ಲಿ ಒಬ್ಬ ಮೃತ ಪಟ್ಟಿದ್ದಾನೆ ಎಂದು ಉಲ್ಲೇಖಿಸಲಾಗುತ್ತಿದೆ. ಇದರಲ್ಲಿ ಯಾವುದು ಸತ್ಯವೆಂದು ಕೇಂದ್ರ ಸರ್ಕಾರವೇ ತಿಳಿಸಬೇಕು. ನಮಗೆ ಈಗ ಏರ್ ಸ್ಟ್ರೈಕ್ ಬಗ್ಗೆ ಮಾಹಿತಿ ಕೊಡಿ ಎಂದು ಮಮತಾ ಬ್ಯಾನರ್ಜಿ ಕೇಳಿಕೊಂಡಿದ್ದರು.

    https://www.youtube.com/watch?v=oseIZ5XYm4o

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಎಎಫ್ ಅಂದ್ರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್: ಮಮತಾ ಬ್ಯಾನರ್ಜಿ

    ಐಎಎಫ್ ಅಂದ್ರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್: ಮಮತಾ ಬ್ಯಾನರ್ಜಿ

    – ವಾಯುಪಡೆಗೆ ದೇಶವ್ಯಾಪಿ ವಂದನೆ

    ನವದೆಹಲಿ: ಪುಲ್ವಾಮಾ ದಾಳಿಯ ಪ್ರತಿಕಾರವಾಗಿ ಭಾರತ ವಾಯುಪಡೆ ಇಂದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂರು ನೆಲೆಗಳ ದಾಳಿ ಮಾಡಿದ್ದಕ್ಕೆ ದೇಶವ್ಯಾಪಿ ಮೆಚ್ಚುಗೆ ವ್ಯಕ್ತವಾಗಿದ್ದು, ರಾಜಕೀಯ ನಾಯಕರು ಟ್ವೀಟ್ ಮಾಡಿ ಯೋಧರಿಗೆ ಧನ್ಯವಾದ ಸಲ್ಲಿಸಿದ್ದಾರೆ.

    ಐಎಎಫ್‍ನ ಮತ್ತೊಂದು ಅರ್ಥ ಎಂದರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್. ಜೈ ಹಿಂದ್ ಎನ್ನುವ ಮೂಲಕ ಉಗ್ರರ ಮೇಲೆ ದಾಳಿ ಮಾಡಿದ ವಾಯು ಪಡೆಯ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

    ಇಂಡಿಯನ್ ಏರ್‍ಫೋರ್ಸ್ (ಐಎಎಫ್) ಪೈಲಟ್‍ಗಳಿಗೆ ನನ್ನ ವಂದನೆಗಳು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ಪೈಲಟ್‍ಗಳ ಮತ್ತು ಏರ್‍ಫೋರ್ಸ್ ಶೌರ್ಯಕ್ಕೆ ನಮ್ಮಿಂದ ವಂದನೆಗಳು. ನಮ್ಮ ಸೈನ್ಯದ ಬಗ್ಗೆ ಹೆಮ್ಮೆಯಿದೆ ಹಾಗೂ ನಾವು ಅವರನ್ನು ಪ್ರೋತ್ಸಾಹಿಸುತ್ತೇವೆ. ಜೈ ಹಿಂದ್ ಎಂದು ರಾಷ್ಟ್ರೀಯ ಜನತಾದಳದ ಮುಖಂಡ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

    ಉಗ್ರರ ಮೂರು ನೆಲೆಗಳ ಮೇಲೆ ದಾಳಿ ಮಾಡಿರುವುದು ನಿಜವೇ ಆಗಿದ್ದರೆ, ಇದು ದೊಡ್ಡ ಪ್ರಮಾಣದ ದಾಳಿಯೇ ಸರಿ. ಆದರೆ ಈ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಬೇಕಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

    ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ ಏರ್‍ಫೋರ್ಸ್ ಪೈಲಟ್ ಹಾಗೂ ಏರ್‍ಫೋರ್ಸ್ ಪಡೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಅನೇಕ ನಾಯಕರು ಟ್ವೀಟ್ ಮೂಲಕ ವಂದನೆ ಸಲ್ಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಧರಣಿ ನಡೆಸಿ ಪ್ರಜಾಪ್ರಭುತ್ವಕ್ಕೆ ಅವಮಾನ- ದೀದಿಗೆ ಯೋಗಿ ಟಾಂಗ್

    ಧರಣಿ ನಡೆಸಿ ಪ್ರಜಾಪ್ರಭುತ್ವಕ್ಕೆ ಅವಮಾನ- ದೀದಿಗೆ ಯೋಗಿ ಟಾಂಗ್

    – ಟಿಎಂಸಿಯಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ

    ಕೋಲ್ಕತ್ತಾ: ಸಿಎಂ ಸ್ಥಾನದಲ್ಲಿದ್ದು ಧರಣಿ ನಡೆಸುವುದಕ್ಕಿಂತ ಮತ್ತೊಂದು ಅವಮಾನ ಪ್ರಜಾಪ್ರಭುತ್ವದಲ್ಲಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

    ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಇಂದು ರಸ್ತೆ ಮಾರ್ಗವಾಗಿ ರ‍್ಯಾಲಿ ನಡೆಯುತ್ತಿದ್ದ ಪುರುಲಿಯಾ ತಲುಪಿದರು. ಅಲ್ಲಿಂದ ಬಂಕುರಾ ಬೃಹತ್ ಸಮಾವೇಶಕ್ಕೂ ರಸ್ತೆ ಮಾರ್ಗವಾಗಿಯೇ ತೆರಳಿದರು. ಈ ಎರಡು ಸಮಾವೇಶದಲ್ಲಿಯೂ ಯೋಗಿ ಆದಿತ್ಯನಾಥ್, ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು.

    ಮಮತಾ ಬ್ಯಾನರ್ಜಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟ ಅಧಿಕಾರಿಯನ್ನು ರಕ್ಷಿಸುತ್ತಿದ್ದಾರೆ. ಧರಣಿ ನಡೆಸಿ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಪಾರು ಮಾಡಲು ಮಮತಾ ಬ್ಯಾನರ್ಜಿ ಯತ್ನಿಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದೆ. ಭ್ರಷ್ಟಾಚಾರಕ್ಕೆ ಬೆಂಬಲ ನೀಡುವ ಸರ್ಕಾರವನ್ನು ಹೊಡೆದು ಹಾಕಲು ಬಿಜೆಪಿಗೆ ಬೆಂಬಲ ನೀಡಿ ಎಂದು ಸಮಾವೇಶದಲ್ಲಿ ಸೇರಿದ್ದ ಜನರಿಗೆ ಯೋಗಿ ಆದಿತ್ಯನಾಥ್ ಕೇಳಿಕೊಂಡರು.

    ಸಿಬಿಐ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಈ ಹಿಂದಿನ ಕಾಂಗ್ರೆಸ್ ಸರ್ಕಾರವೇ ಹೊರತು, ಬಿಜೆಪಿಯಲ್ಲ. ಸಿಬಿಐ ವಿಚಾರಣೆಗೆ ಸಹಕರಿಸಬೇಕು ಅಂತ ಸುಪ್ರೀಂಕೋರ್ಟ್ ರಾಜೀವ್ ಕುಮಾರ್ ಅವರಿಗೆ ಆದೇಶ ನೀಡಿದೆ. ಹೀಗಾಗಿ ಪಶ್ಚಿಮ ಬಂಗಾಳ ಬಿಟ್ಟು ಅಸ್ಸಾಂನಲ್ಲಿ ವಿಚಾರಣೆಗೆ ರಾಜೀವ್ ಕುಮಾರ್ ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

    ಉತ್ತರ ಬಂಗಾಳದ ಬಲೂರ್ಘಾಟ್‍ನಲ್ಲಿ ಫೆಬ್ರವರಿ 3ರಂದು ನಡೆಯುತ್ತಿದ್ದ ರ‍್ಯಾಲಿಯಲ್ಲಿ ಭಾಗವಹಿಸಲು ಯೋಗಿ ಆದಿತ್ಯನಾಥ್ ಅವರು ಹೆಲಿಕಾಪ್ಟರ್ ನಲ್ಲಿ ತೆರಳಲು ಮುಂದಾಗಿದ್ದರು. ಆದರೆ ಯಾವುದೇ ನಿರ್ದಿಷ್ಟ ಕಾರಣ ತಿಳಿಸದೇ ಹೆಲಿಕಾಪ್ಟರ್ ಲ್ಯಾಂಡಿಂಗ್ ಅನುಮತಿಯನ್ನು ಪಶ್ಚಿಮ ಬಂಗಾಳದ ಸರ್ಕಾರ ನಿರಾಕರಿಸಿತ್ತು. ಇದರಿಂದಾಗಿ ಇಂದು ನಡೆದ ಬೃಹತ್ ಸಮಾವೇಶಕ್ಕೆ ಯೋಗಿ ಆದಿತ್ಯನಾಥ್ ಅವರು ರಸ್ತೆ ಮಾರ್ಗವಾಗಿಯೇ ತಲುಪಬೇಕಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ಮತ್ತೆ ಪ್ರಧಾನಿಯಾಗಲ್ಲ, ಸುಪ್ರೀಂನಿಂದ ನೈತಿಕ ಗೆಲುವು – ಮಮತಾ ಬ್ಯಾನರ್ಜಿ

    ಮೋದಿ ಮತ್ತೆ ಪ್ರಧಾನಿಯಾಗಲ್ಲ, ಸುಪ್ರೀಂನಿಂದ ನೈತಿಕ ಗೆಲುವು – ಮಮತಾ ಬ್ಯಾನರ್ಜಿ

    ಕೊಲ್ಕತ್ತಾ: ಕೋಲ್ಕತ್ತಾ ಪೊಲೀಸ್ ಆಯುಕ್ತರನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡುವ ಮೂಲಕ ನಮಗೆ ನೈತಿಕ ಗೆಲುವು ಸಿಕ್ಕಿದೆ. ಹಾಗೂ ಈ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    ಕೋಲ್ಕತ್ತಾದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಜೆಗಳಿಗಿಂತ ಯಾರೂ ದೊಡ್ಡವರಲ್ಲ. ಪ್ರಜಾಪ್ರಭುತ್ವವೇ ದೇಶದ ಒಡೆಯ. ನಾವು ಸಾಕ್ಷಿ ನಾಶ ಮಾಡುತ್ತಿದ್ದೇವೆ ಅಂತ ಆರೋಪಿಸಿದ್ದರು. ಅದು ಸುಳ್ಳಾಗಿದೆ. ರಾಜೀವ್ ಕುಮಾರ್ ಪ್ರಕರಣ ಗೆಲುವು ಕೇವಲ ನನ್ನದಲ್ಲ. ಬಂಗಾಳ ಜನತೆ, ಸೇವ್ ಇಂಡಿಯಾ ಕ್ಯಾಂಪೇನ್ ಹಾಗೂ ಸಂವಿಧಾನದ ಗೆಲುವು ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ಮಮತಾ ಬ್ಯಾನರ್ಜಿ ಗುಡುಗಿದರು.  ಇದನ್ನು ಓದಿ: ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಕೋರ್ಟ್ ಕಲಾಪ ಹೀಗಿತ್ತು

    ಪ್ರಕರಣದ ಕುರಿತು ವಿಚಾರಣೆ ನಡೆಯದೇ ಏಕಾಏಕಿ ಸಿಬಿಐ ಅಧಿಕಾರಿಗಳು ರಾಜೀವ್ ಕುಮಾರ್ ಅವರನ್ನು ಭಾನುವಾರ ಬಂಧಿಸಲು ಮುಂದಾಗಿದ್ದರು. ಆದರೆ ಈಗ ಕೋರ್ಟ್ ಆದೇಶದಿಂದ ರಾಜೀವ್ ಕುಮಾರ್ ಅವರನ್ನು ಬಂಧಿಸುವಂತಿಲ್ಲ. ಇಬ್ಬರಿಗೂ ಒಪ್ಪಿಗೆಯಾದ ಸ್ಥಳದಲ್ಲಿ ವಿಚಾರಣೆ ನಡೆಸಬೇಕು ಎನ್ನುವ ಆದೇಶ ನೀಡಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಜನರಿಗೆ, ರೈತರು, ಕಲಾವಿದರು ಸೇರಿದಂತೆ ಅನೇಕರಿಗೆ ತೊಂದರೆ ಕೊಟ್ಟಿದ್ದಾರೆ. ಹೀಗಾಗಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದಿಲ್ಲ ಎಂದು ಕುಟುಕಿದರು. ಇದನ್ನು ಓದಿ:  ಮಮತಾ ಪರ ಬ್ಯಾಟಿಂಗ್ ಮಾಡಿದ ರಾಹುಲ್ ನಿಲುವಿಗೆ ಬಂಗಾಳ ಕಾಂಗ್ರೆಸ್ ವಿರೋಧ

    ಕೇಂದ್ರ ಸರ್ಕಾರವು ಎಲ್ಲರನ್ನೂ ಬಂಧಿಸಿ, ರೈಲಿಗೆ ಕಳುಹಿಸಲು ಮುಂದಾಗಿದೆ. ಈ ನೀತಿಯ ವಿರುದ್ಧ ನಾನು ಈ ಧರಣಿ ಮುಂದುವರಿಸಬೇಕಾದರೆ ಇತರ ನಾಯಕರನ್ನು ಭೇಟಿ ಮಾಡುವೆ. ನಾನು ಒಬ್ಬಳೇ ಹೋರಾಡುವುದಿಲ್ಲ. ಈ ನಿಟ್ಟಿನಲ್ಲಿ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಒಡಿಶಾ ಸಿಎಂ ನವೀನ್ ಪಾಟ್ನಾಯಕ್ ಸೇರಿದಂತೆ ಅನೇಕರ ಬೆಂಬಲ ಪಡೆಯುತ್ತೇನೆ ಎಂದು ಹೇಳಿದರು.

    ರಾಜೀವ್ ಕುಮಾರ್ ವಿರುದ್ಧ ಅವರು ಹಲವಾರು ಆರೋಪಗಳನ್ನು ಮಾಡಲಾಗಿತ್ತು. ಜೊತೆಗೆ ನಾವು ನ್ಯಾಯಾಂಗ ನಿಂದನೆ ಮಾಡಿದ್ದೇವೆ ಎಂದು ಅವರು ದೂರಿದ್ದರು. ಇದು ತಿರಸ್ಕೃತವಾಗಿದೆ ಎಂದು ಹೇಳಿದರು.

    ಚಿಟ್ ಫಂಡ್ ಬಹುಕೋಟಿ ಹಗರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ. ಅಸ್ಸಾಂ ಉಪ ಮುಖ್ಯಮಂತ್ರಿಗಳು 3 ಕೋಟಿ ರೂ. ಪಡೆದಿದ್ದರು. ಅವರನ್ನು ಬಂಧಿಸಲಾಗಿದೆಯೇ? ರೋಸ್ ವ್ಯಾಲಿ ಗ್ರೂಪ್‍ನ ರೋಸ್ ಅಂತ ಕರೆದುಕೊಂಡಿದ್ದ ಬಾಬುಲ್ ಸುಪ್ರಿಯೋ ಅವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಅಮಿತ್ ಶಾ ಬೆನ್ನಲ್ಲೇ ಯುಪಿ ಸಿಎಂ ಯೋಗಿ ಹೆಲಿಕಾಪ್ಟರ್‌ಗೆ ಮಮತಾ ಬ್ರೇಕ್

    ಅಮಿತ್ ಶಾ ಬೆನ್ನಲ್ಲೇ ಯುಪಿ ಸಿಎಂ ಯೋಗಿ ಹೆಲಿಕಾಪ್ಟರ್‌ಗೆ ಮಮತಾ ಬ್ರೇಕ್

    ಕೋಲ್ಕತ್ತಾ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಲ್ಯಾಂಡಿಗ್‍ಗೆ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮತಿ ನಿರಾಕರಿಸಿದೆ.

    ಉತ್ತರ ಬಂಗಾಳದ ಬಲೂರ್ಘಾಟ್‍ನಲ್ಲಿ ಇಂದು ನಡೆಯುತ್ತಿದ್ದ ರ‍್ಯಾಲಿಯಲ್ಲಿ ಭಾಗವಹಿಸಲು ಯೋಗಿ ಆದಿತ್ಯನಾಥ್ ಅವರು ಹೆಲಿಕಾಪ್ಟರ್ ನಲ್ಲಿ ತೆರಳಿದ್ದರು. ಆದರೆ ಯಾವುದೇ ನಿರ್ದಿಷ್ಟ ಕಾರಣ ತಿಳಿಸದೇ ಹೆಲಿಕಾಪ್ಟರ್ ಲ್ಯಾಂಡಿಗ್ ಅನುಮತಿಯನ್ನು ನಿರಾಕರಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್ ಅವರ ಅಧಿಕಾರಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನು ಓದಿ: ಬಿಜೆಪಿಯಿಂದ ಸಿಬಿಐ ದುರ್ಬಳಕೆ, ಪೊಲೀಸ್ ಅಧಿಕಾರಿ ಪರ ಮಮತಾ ಬ್ಯಾನರ್ಜಿ ಬ್ಯಾಟಿಂಗ್

    ಪಶ್ಚಿಮ ಬಂಗಾಳ ಸರ್ಕಾರದ ಈ ನೀತಿಯು ಯೋಗಿ ಆದಿತ್ಯನಾಥ್ ಅವರಿಗೆ ಇರುವ ಜನಪ್ರಿಯತೆಯನ್ನು ತೋರಿಸುತ್ತದೆ ಎಂದು ಸಿಎಂ ಆತಿತ್ಯನಾಥ್ ಅವರ ಮಾಹಿತಿ ಸಲಹೆಗಾರ ಮೃತುಂಜಯ್ ಕುಮಾರ್ ಹೇಳಿದ್ದಾರೆ.

    ಈ ಮೂಲಕ ಪಶ್ಚಿಮ ಬಂಗಾಳದ ಸರ್ಕಾರವು ಬಿಜೆಪಿಯ ಇಬ್ಬರು ನಾಯಕರ ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ನಿರಾಕರಿಸಿದೆ. ಈ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೂ ಅನುಮತಿ ನೀಡಿರಲಿಲ್ಲ.

    ನಾವು ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಅನುಮತಿ ಪಡೆದಿದ್ದರೂ ತಡೆ ಹಿಡಿಯಲಾಗಿದೆ. ಪಶ್ಚಿಮ ಬಂಗಾಳ ಸರ್ಕಾರದ ನೀತಿಯನ್ನು ವಿರೋಧಿಸಿ ನಮ್ಮ ಕಾರ್ಯಕರ್ತರು ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ ಎಂದು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲಿಪ್ ಘೋಷ್ ತಿಳಿಸಿದ್ದಾರೆ.

    ಈ ಎಲ್ಲ ಬೆಳವಣಿಗೆಯಿಂದ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ರಾಯ್‍ಗಂಜ್ ಬಿಎಸ್‍ಎಫ್ ಕ್ಯಾಂಪ್‍ನಲ್ಲಿ ಲ್ಯಾಂಡ್ ಆಗಲಿದೆ. ಅಲ್ಲಿಂದ ರ‍್ಯಾಲಿ ನಡೆಯಲಿರುವ ಬಲೂರ್ಘಾಟ್‍ಗೆ ರಸ್ತೆ ಮಾರ್ಗವಾಗಿ ಯೋಗಿ ಆದಿತ್ಯನಾಥ್ ತೆರಳಲಿದ್ದಾರೆ ಎನ್ನಲಾಗಿದೆ. ಮತ್ತೊಂದು ಮೂಲದ ಪ್ರಕಾರ ಯೋಗಿ ಆದಿತ್ಯನಾಥ್ ಅವರು, ಮೊಬೈಲ್ ಕರೆ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಬಿಜೆಪಿಯಿಂದ ಸಿಬಿಐ ದುರ್ಬಳಕೆ, ಪೊಲೀಸ್ ಅಧಿಕಾರಿ ಪರ ಮಮತಾ ಬ್ಯಾನರ್ಜಿ ಬ್ಯಾಟಿಂಗ್

    ಬಿಜೆಪಿಯಿಂದ ಸಿಬಿಐ ದುರ್ಬಳಕೆ, ಪೊಲೀಸ್ ಅಧಿಕಾರಿ ಪರ ಮಮತಾ ಬ್ಯಾನರ್ಜಿ ಬ್ಯಾಟಿಂಗ್

    – ಕೋಲ್ಕತ್ತಾ ಪೊಲೀಸ್ ಆಯುಕ್ತ ವಿಶ್ವದಲ್ಲಿಯೇ ನಂಬರ್ ಒನ್ ಅಧಿಕಾರಿ

    ಕೋಲತ್ತಾ: ಬಿಜೆಪಿಯವರು ರಾಜಕೀಯ ಪ್ರಭಾವನ್ನು ಬಳಸಿ ನಿಷ್ಠಾವಂತ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.

    ಸಿಬಿಐ ಬಂಧನ ಭೀತಿಯಿಂದ ನಾಪತ್ತೆಯಾಗಿರುವ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ಪರವಾಗಿ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಬಿಜೆಪಿಯವರು ಕೇವಲ ರಾಜಕೀಯ ಪಕ್ಷಗಳ ಮೇಲೆ ಅಷ್ಟೇ ಅಲ್ಲದೆ, ಪೊಲೀಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ. ಈ ಮೂಲಕ ದೇಶದ ಎಲ್ಲಾ ಇಲಾಖೆಗಳನ್ನು ನಾಶ ಮಾಡಲು ಮುಂದಾಗುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

    ಕೋಲ್ಕತ್ತಾ ಪೊಲೀಸ್ ಆಯುಕ್ತರು ವಿಶ್ವದಲ್ಲಿಯೇ ಅತ್ಯುತ್ತಮ ಪೊಲೀಸ್ ಅಧಿಕಾರಿ. ಅವರ ಸಮಗ್ರತೆ, ಧೈರ್ಯ ಹಾಗೂ ಪ್ರಾಮಾಣಿಕತೆ ಪ್ರಶ್ನಾತೀತವಾಗಿದೆ. ರಾಜೀವ್ ಕುಮಾರ್ 24*7 ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಒಂದೇ ಒಂದು ದಿನ ರಜೆ ಪಡೆದಿದ್ದಾರೆ. ನೀವು ಸುಳ್ಳು ಹರಿಬಿಡುತ್ತಿರುವಿರಿ. ಅದು ಮತ್ತಷ್ಟು ಸುಳ್ಳುಗಳನ್ನು ಹುಟ್ಟುಹಾಕುತ್ತಿದೆ ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

    ಆಯುಕ್ತರಿಗೆ ಬಂಧನ ಭೀತಿ ಯಾಕೆ?:
    ರಾಜೀವ್ ಕುಮಾರ್ ಅವರು ಪಶ್ಚಿಮ ಬಂಗಾಳದ 1989ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದು ಸದ್ಯ ಕೋಲ್ಕತ್ತಾ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರೋಸ್ ವ್ಯಾಲಿ ಹಾಗೂ ಶಾರದಾ ಚಿಟ್ ಫಂಡ್ ಹಗರಣದ ತನಿಖೆಗೆ ಕೋಲ್ಕತ್ತಾ ಪೊಲೀಸ್ ವಿಶೇಷ ತಂಡ ರಚಿಸಿದೆ. ಆದರೆ ತನಿಖೆಯಲ್ಲಿ ರಾಜೀವ್ ಕುಮಾರ್ ಅವರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಸಿಬಿಐ ನೋಟಿಸ್ ಜಾರಿ ಮಾಡಿತ್ತು.

    ರಾಜೀವ್ ಕುಮಾರ್ ಅವರು ಚುನಾವಣಾ ಆಯೋಗದ ಸಭೆಗೂ ಹಾಜರಾಗದೇ ತಪ್ಪಿಸಿಕೊಂಡಿದ್ದರು. ಈ ಸಂಬಂಧ ವರದಿ ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಳಿತ್ತು. ಆದರೆ ರಾಜೀವ್ ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ರಾಜೀವ್ ಕುಮಾರ್ ಅವರಿಗೆ ಸಿಬಿಐ ಸಮನ್ಸ್ ಮಾಡಿತ್ತು. ವಿಚಾರಣೆಗೆ ಹಾಜರಾಗದೇ ಇದ್ದರೆ ರಾಜೀವ್ ಕುಮಾರ್ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಸಿಬಿಐ ಮೂಲಗಳು ಆಧಾರಿಸಿ ಮಾಧ್ಯಮಗಳು ವರದಿ ಮಾಡಿದ್ದವು.

    ಬಂಧನ ಭೀತಿಯಿಂದ ರಾಜೀವ್ ಕುಮಾರ್ ಅವರು ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿದ್ದಾರೆ. ಹೀಗಾಗಿ ಮಮತಾ ಬ್ಯಾನರ್ಜಿ ಅವರು ರಾಜೀವ್ ಕುಮಾರ್ ಅವರ ಬೆಂಬಲಕ್ಕೆ ನಿಂತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ನಮ್ಮ ನಿಮ್ಮ ಪ್ರೀತಿಯಿಂದ ದೀದಿ ಭಯ- ಮಮತಾ ಬ್ಯಾನರ್ಜಿಗೆ ಮೋದಿ ಟಾಂಗ್

    ನಮ್ಮ ನಿಮ್ಮ ಪ್ರೀತಿಯಿಂದ ದೀದಿ ಭಯ- ಮಮತಾ ಬ್ಯಾನರ್ಜಿಗೆ ಮೋದಿ ಟಾಂಗ್

    ಕೋಲ್ಕತ್ತಾ: ನಮ್ಮ ಹಾಗೂ ನಿಮ್ಮ ನಡುವಿನ ಪ್ರೀತಿಯಿಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬಾನರ್ಜಿ ಅವರಿಗೆ ಭಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

    ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಮಮತಾ ಬ್ಯಾನರ್ಜಿ ಹಾಗೂ ಅವರ ಪಕ್ಷದ ನಾಯಕರು ಯಾಕೆ ಮುಗ್ದ ಜನರನ್ನು ಕೊಲೆ ಮಾಡುತ್ತಿದ್ದಾರೆ ಎನ್ನುವುದು ನನಗೆ ಈಗ ಅರ್ಥವಾಗುತ್ತಿದೆ. ನಿಮ್ಮ ಹಾಗೂ ನಮ್ಮ ಪ್ರೀತಿಯ ಭಯ ಅವರಿಗೆ ಕಾಡುತ್ತಿದೆ ಎಂದು ಕುಟುಕಿದರು.

    ಈ ಬಾರಿಯ ಬಜೆಟ್ ಮೂಲಕ ಐತಿಹಾಸಿಕ ಯೋಜನೆಗಳಿಗೆ ಜಾಲನೆ ನೀಡಲಾಗುತ್ತಿದೆ. ರೈತರ ಪೂರಕ ಬಜೆಟ್ ಇದಾಗಿದೆ. ಅಷ್ಟೇ ಅಲ್ಲದೆ 12 ಕೋಟಿ ಸಣ್ಣ ಹಿಡುವಳಿದಾರರು, 30ರಿಂದ 40 ಕೋಟಿ ಕಾರ್ಮಿಕರು ಹಾಗೂ 3 ಕೋಟಿ ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತಿಳಿಸಿದರು.

    ಬಹಿರಂಗ ಸಭೆಯಲ್ಲಿ ಗದ್ದಲ ಉಂಟಾಗಿದ್ದರಿಂದ ನರೇಂದ್ರ ಮೋದಿ ಅವರು ಚಿಕ್ಕದಾಗಿ ಭಾಷಣ ಮುಗಿಸಿದರು. ಸಭೆಯಲ್ಲಿ ಸಾವಿರಾರು ಜನರು ಸೇರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಮತಾ ಬ್ಯಾನರ್ಜಿ ‘ಯುನೈಟ್ ಇಂಡಿಯಾ’ ರ‍್ಯಾಲಿ- ಕೇಂದ್ರದ ವಿರುದ್ಧ ಸಿಎಂ ಎಚ್‍ಡಿಕೆ ವಾಗ್ದಾಳಿ

    ಮಮತಾ ಬ್ಯಾನರ್ಜಿ ‘ಯುನೈಟ್ ಇಂಡಿಯಾ’ ರ‍್ಯಾಲಿ- ಕೇಂದ್ರದ ವಿರುದ್ಧ ಸಿಎಂ ಎಚ್‍ಡಿಕೆ ವಾಗ್ದಾಳಿ

    ಕೋಲ್ಕತ್ತಾ: ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

    ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಅವರು ಏರ್ಪಡಿಸಿರುವ ‘ಯುನೈಟ್ ಇಂಡಿಯಾ’ ಬೃಹತ್ ರ‍್ಯಾಲಿಯಲ್ಲಿ ಇಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಭಾಗವಹಿಸಿ ಮಾತನಾಡಿದರು. ಜನರ ವಿಶ್ವಾಸವನ್ನು ಗಳಿಸಲು ಹಾಗೂ ರಾಜ್ಯದ ಹಿತ ಕಾಯಲು ಪ್ರದೇಶಿಕ ಪಕ್ಷಗಳು ಸಮರ್ಥವಾಗಿದೆ ಎಂದು ತಿಳಿಸಿದರು.

    ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಎಚ್‍ಡಿಕೆ, ಕಳೆದ ಕೆಲ ಸಮಯದಿಂದ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿದೆ. ಅಲ್ಲದೇ ಕರ್ನಾಟಕ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಪ್ರಯತ್ನಿಸುತ್ತಿದ್ದರೆ, ಕೇಂದ್ರ ಸರ್ಕಾರ ರೈತರಿಗೆ ನೋಟಿಸ್ ಜಾರಿ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ರಾಷ್ಟ್ರದಲ್ಲಿ ಅಸಂವಿಧಾನಿಕ ಆಡಳಿತ ವ್ಯವಸ್ಥೆಯನ್ನು ಇಂದು ನಾವು ನೋಡುತ್ತಿದ್ದೇವೆ ಎಂದು ಕೇಂದ್ರದ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್, ಎನ್ ಚಂದ್ರಬಾಬು ನಾಯ್ಡು, ಮಾಜಿ ಸಿಎಂ ಗಳಾದ ಫಾರೂಖ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಎಂಡಿಕೆ ಪಕ್ಷದ ಎಂಕೆ ಸ್ಟಾಲಿನ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ, ಬಿಎಸ್‍ಪಿ ನಾಯಕ ಸತೀಶ್ ಮಿಶ್ರಾ, ಶರದ್ ಪವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

    ಮಮತಾ ಬ್ಯಾನರ್ಜಿ ಮಾತನಾಡಿ, ಎಲ್ಲಾ ಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕು. ಕೇಂದ್ರದಲ್ಲಿ ಬಿಜೆಪಿ ಆಡಳಿತನ್ನು ಕಿತ್ತೊಗೆಯಬೇಕು ಎಂದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ನಾಯಕರು ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಾಗ್ದಾಳಿ ನಡೆಸಿದರು. ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭಾಗವಹಿಸಿರಲಿಲ್ಲ. ಆದರೆ ರಾಹುಲ್ ನಿನ್ನೆಯೇ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು.

    ಮುಂದಿನ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಬಹುದಾದ ಲೋಕಸಭಾ ಚುನಾವಣೆಗೆ ಎನ್‍ಡಿಎ ವಿರುದ್ಧ ಒಕ್ಕೂಟವನ್ನು ನಿರ್ಮಿಸಲು ಮಮತಾ ಬ್ಯಾನರ್ಜಿ ಅವರು ಸಮಾವೇಶವನ್ನು ಏರ್ಪಡಿಸಿದ್ದಾರೆ. ಈ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಬಿಜೆಪಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `ಬಾಂಗ್ಲಾ’ ಆಗಲಿದೆ `ಪಶ್ಚಿಮ ಬಂಗಾಳ’ – ಹೆಸರು ಬದಲಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಶಿಫಾರಸ್ಸು

    `ಬಾಂಗ್ಲಾ’ ಆಗಲಿದೆ `ಪಶ್ಚಿಮ ಬಂಗಾಳ’ – ಹೆಸರು ಬದಲಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಶಿಫಾರಸ್ಸು

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಹೆಸರು ಬದಲಾವಣೆಗೆ ರಾಜ್ಯದ ವಿಧಾನಸಭೆಯಲ್ಲಿ ಇಂದು ಒಪ್ಪಿಗೆ ಸಿಕ್ಕಿದ್ದು, ಕೇಂದ್ರದ ಅಂತಿಮ ಸಮ್ಮತಿಗೆ ಶಿಫಾರಸ್ಸು ಮಾಡಲಾಗಿದೆ.

    ಪಶ್ಚಿಮ ಬಂಗಾಳ ಹೆಸರು ಎಲ್ಲಾ ಭಾಷೆಗಳಲ್ಲಿ ಬಾಂಗ್ಲಾ ಎಂದು ರೂಢಿಗೆ ಬರಲಿದೆ. ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಹೆಸರು ಬದಲಿಸಲು ಮುಂದಾಗಿದ್ದು, ಈ ನಡೆಗೆ ಎಲ್ಲ ಪಕ್ಷಗಳು ಬೆಂಬಲ ನೀಡಿದೆ. 1999 ರಲ್ಲೇ ಹೆಸರು ಪಶ್ಚಿಮ ಬಂಗಾಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದನ್ನು ನೆನಪು ಮಾಡಬಹುದಾಗಿದೆ.

    ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಕಳೆದ 2 ವರ್ಷಗಳ ಹಿಂದೆ ರಾಜ್ಯದ ಹೆಸರು ಬದಲಿಸುವ ಪ್ರಸ್ತಾವನೆ ಸಲ್ಲಿಸಿತ್ತು. ಈ ವೇಳೆ ಪಶ್ಚಿಮ ಬಂಗಾಳ ಹೆಸರನ್ನು ಆಂಗ್ಲ ಭಾಷೆಯಲ್ಲಿ ಬೆಂಗಾಲ್, ಹಿಂದಿಯಲ್ಲಿ ಬಂಗಾಳ ಹಾಗೂ ಬಾಂಗ್ಲಾ ಭಾಷೆಯಲ್ಲಿ ಬೆಂಗಾಳ ಎಂದು ಬದಲಿಸಲು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು. ಈ ವೇಳೆ ಕೇಂದ್ರ ಸರ್ಕಾರ, ಎಲ್ಲಾ ಭಾಷೆಗಳಲ್ಲಿ ಒಂದು ಹೆಸರು ಮಾತ್ರ ಬರುವಂತೆ ಸೂಚಿಸಿ ಎಂದು ಸಲಹೆ ನೀಡಿತ್ತು.

    ರಾಜ್ಯದ ಹೆಸರು ಬದಲಾವಣೆಗೆ ಮಮತಾ ಬ್ಯಾನರ್ಜಿ ಸರ್ಕಾರ ನಿರಂತರವಾಗಿ ಪ್ರಯತ್ನ ನಡೆಸಿತ್ತು. ಆಂಗ್ಲ ಭಾಷೆಯಲ್ಲಿ ಎಲ್ಲ ರಾಜ್ಯಗಳ ಕ್ರಮಾಂಕ ಬಂದಾಗ ವೆಸ್ಟ್ ಬೆಂಗಾಲ್ ಹೆಸರು ಕೊನೆಯಲ್ಲಿ ಪ್ರಕಟಗೊಳ್ಳುತ್ತದೆ. ಈ ಕಾರಣಕ್ಕೆ ಹೆಸರು ಬದಲಾವಣೆ ಮಾಡಲು ಮುಂದಾಗಿತ್ತು.

    ಸ್ಥಳೀಯವಾಗಿ ಸಿಗುವ ಮದ್ಯಕ್ಕೆ ಪಶ್ಚಿಮ ಬಂಗಾಳದಲ್ಲಿ ‘ಬಾಂಗ್ಲಾ’ ಎಂದು ಕರೆಯಲಾಗುತ್ತದೆ. ಹೀಗಾಗಿ ಸರ್ಕಾರ ಸೂಚಿಸಿರುವ ಹೊಸ ಹೆಸರು ಸಹ ಬೆಂಗಾಲಿ ಭಾಷಿಕರಿಗೆ ಕಷ್ಟವಾಗಲಿದೆ ಎನ್ನಲಾಗಿದೆ.