Tag: CM Manohar Lal Khattar

  • ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾಗೆ ಹರಿಯಾಣ ಸರ್ಕಾರ 6 ಕೋಟಿ ರೂ. ಹಾಗೂ ಮಹೀಂದ್ರ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಬ್ರ್ಯಾಂಡ್ ನ್ಯೂ ಎಕ್ಸ್ ಯುವಿ 700 ಕಾರ್ ನ್ನು ಉಡುಗೊರೆಯಾಗಿ ನೀಡುವುದಾಗಿ ಘೊಷಿಸಿದ್ದಾರೆ.

    ನೀರಜ್ ಚೋಪ್ರಾ ಶನಿವಾರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಅಥ್ಲೆಟಿಕ್ ಲೋಕ ನಿಬ್ಬೆರಗಾಗುವಂತೆ ಮಾಡಿದ್ದಾರೆ. ಅಲ್ಲದೆ ಹೊಸ ದಾಖಲೆಯನ್ನು ಬರೆದಿದ್ದಾರೆ. ಹೀಗಾಗಿ ಸರ್ಕಾರಗಳು ಸೇರಿದಂತೆ ಹಲವರು ಅವರಿಗೆ ಉಡುಗೊರೆಗಳನ್ನು ಘೊಷಿಸುತ್ತಿದ್ದಾರೆ. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

    ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೊಷಿಸಿದ್ದಾರೆ. ಇದರ ಬೆನ್ನಲ್ಲೇ ಆನಂದ್ ಮಹೀದ್ರಾ ಸಹ ಟ್ವೀಟ್ ಮಾಡುವ ಮೂಲಕ ನೀರಜ್‍ಗೆ ಹೊಸ ಎಸ್‍ಯುವಿ ಕಾರ್ ಗಿಫ್ಟ್ ಕೊಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶತಕೋಟಿ ಭಾರತೀಯರ ಕನಸು ನನಸು – ಚಿನ್ನ ಗೆದ್ದ ನೀರಜ್

    ಬರೋಬ್ಬರಿ 6 ಕೋಟಿ ನಗದು ಬಹುಮಾನದ ಜೊತೆಗೆ ನಿಯಮದಂತೆ ಸರ್ಕಾರದಲ್ಲಿ ಉನ್ನತ ಮಟ್ಟದ ಕೆಲಸ ನೀಡುವುದಾಗಿ ಹರಿಯಾಣ ಸಿಎಂ ಘೊಷಿಸಿದ್ದಾರೆ. ಅಲ್ಲದೆ ಅಥ್ಲೆಟ್ಸ್‍ಗಳಿಗಾಗಿ ಪಂಚಕುಲದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ನೀರಜ್‍ಗೆ ಗೌರವ ಸಲ್ಲಿಸಿದ್ದಾರೆ.

  • ಈಗ ನಮ್ಮ ಯುವಕರಿಗೆ ಕಾಶ್ಮೀರದ ಕನ್ಯೆ ತರಬಹುದು – ಹರಿಯಾಣ ಸಿಎಂ ವಿವಾದಾತ್ಮಕ ಹೇಳಿಕೆ

    ಈಗ ನಮ್ಮ ಯುವಕರಿಗೆ ಕಾಶ್ಮೀರದ ಕನ್ಯೆ ತರಬಹುದು – ಹರಿಯಾಣ ಸಿಎಂ ವಿವಾದಾತ್ಮಕ ಹೇಳಿಕೆ

    ನವದೆಹಲಿ: ಆರ್ಟಿಕಲ್ 370 ರದ್ದು, ಜಮ್ಮು ಕಾಶ್ಮೀರ ವಿಭಜನೆಯ ಹಿನ್ನೆಲೆಯಲ್ಲಿ ದೇಶದಲ್ಲಿ ಭಾರೀ ಚರ್ಚೆ ನಡೆದಿದೆ. ದೇಶದ ವಿವಿಧ ನಾಯಕರು ಈ ಕುರಿತು ತಮ್ಮದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಹರಿಯಾಣ ಸಿಎಂ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.

    ಫತೇಹಾಬಾದ್‍ನಲ್ಲಿ ನಡೆದ ಮಹರ್ಷಿ ಭಾಗೀರಥ್ ಜಯಂತಿಯಲ್ಲಿ ಭಾಗಿಯಾಗಿದ್ದ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ನಮ್ಮ ಸರ್ಕಾರದ ಕೆಲ ಸಚಿವರು ಹೆಣ್ಣು ಮಕ್ಕಳ ಲಿಂಗಾನುಪಾತದ ಕುರಿತು ಮಾತನಾಡುತ್ತಾ ಬಿಹಾರದಿಂದ ಸೊಸೆಯರನ್ನ ತರಬೇಕಾದ ಸ್ಥಿತಿ ಇದೆ ಎಂದಿದ್ದರು. ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ. ಕಾಶ್ಮೀರಿ ಯುವತಿರನ್ನು ಮದುವೆಯಾಗುವ ಹಾದಿ ಸುಗಮವಾಗಿದೆ. ಆರ್ಟಿಕಲ್ 370 ರದ್ದಾಗಿರುವುದರಿಂದ ಇದು ಸಾಧ್ಯವಾಗಿದೆ. ಕಾಶ್ಮೀರಿ ಯುವತಿಯರನ್ನು ಸೊಸೆಯರಾಗಿ, ಪತ್ನಿಯರಾಗಿ ಮಾಡಿಕೊಳ್ಳಲು ಪ್ರಯತ್ನಿಸಬಹುದು ಎಂದು ಹೇಳಿದ್ದಾರೆ.

    ಇದೇ ಸಂದರ್ಭದಲ್ಲಿ ಬೇಟಿ ಬಚಾವೋ, ಬೇಟಿ ಪಠಾವೋ ಯೋಜನೆಯ ಯಶಸ್ವಿಯಾಗಿದ್ದು, ಈ ಕಾರ್ಯಕ್ರಮದಿಂದ ಹರಿಯಾಣದಲ್ಲಿ ಲಿಂಗಾನುಪಾತ ವ್ಯತ್ಯಾಸ ಕಡಿಮೆ ಆಗಿದೆ. ಈ ಕಾರ್ಯಕ್ರಮ ಜಾರಿಯಾಗುವ ಮುನ್ನ ರಾಜ್ಯದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಲಿಂಗಾನುಪಾತದಲ್ಲಿ ಕಠಿಣ ಪರಿಸ್ಥಿತಿ ಇತ್ತು ಎಂದಿದ್ದಾರೆ.

    ಆಗಸ್ಟ್ 07 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370 ರದ್ದು ಮಾಡಿದ್ದರಿಂದ ಆಗುವ ಪ್ರಯೋಜನವೇನು ಎಂಬುವುದರ ಬಗ್ಗೆ ಮಾತನಾಡಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕ ವಿಕ್ರಮ್ ಸೈನಿ, ಇನ್ನುಮುಂದೆ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನ ಮದುವೆ ಆಗಬಹುದು ಎಂದು ಹೇಳಿದ್ದರು. ಶಾಸಕರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದೇಶದ ವ್ಯಾಪಿ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು.